Connect with us

ಸಿನಿ ಸುದ್ದಿ

“ನಾನೀಗ ವೈದ್ಯಲೋಕಕ್ಕೆ ಟ್ರಯಲ್ ಆ್ಯಂಡ್ ಎರರ್ ಆಟದ ವಸ್ತು..!”

Published

on

  • ಇರ್ಫಾನ್ ಖಾನ್, ಬಾಲಿವುಡ್ ನಟ/ ಕನ್ನಡಕ್ಕೆ : ವೇಣುಗೋಪಾಲ ಶೆಟ್ಟಿ

ಇರ್ಫಾನ್ ಖಾನ್ ನೆನಪಲ್ಲಿ, ಅವರದ್ದೇ ಬರಹ ಇಲ್ಲಿದೆ ಓದಿ

‘‘ ನ್ಯೂರೋನ್‌ ಎಂಡೊಕ್ರೈನ್‌ ಕ್ಯಾನ್ಸರ್ ‌” ನನ್ನ ಆವರಿಸಿದೆ. ಈ ಹೆಸರೇ ನನ್ನ ಶಬ್ದಕೋಶಕ್ಕೆ ಹೊಸತು. ಇದು ತೀರಾ ಅಪರೂಪದ ಕ್ಯಾನ್ಸರ್​​ ರೋಗ. ಇದರ ಬಗ್ಗೆ ನಡೆದ ಅಧ್ಯಯನಗಳೂ ಕಡಿಮೆ. ಹೀಗಾಗಿ ನಿಶ್ಚಿತವಾದ ಔಷಧಿ ಇಲ್ಲ. ಹೀಗಾಗಿ, ನಾನೀಗ ವೈದ್ಯಲೋಕಕ್ಕೆ ಟ್ರಯಲ್ ಆ್ಯಂಡ್ ಎರರ್ ಆಟದ ವಸ್ತು.

ಅಸಲಿಗೆ ನಾನೊಂದು ಭಿನ್ನ ಆಟದಲ್ಲಿದ್ದೆ… ವೇಗವಾಗಿ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದೆ. ಕನಸುಗಳು, ಯೋಜನೆಗಳು, ಆಕಾಂಕ್ಷೆಗಳು, ಗುರಿಗಳು ಈ ಎಲ್ಲವೂಗಳಲ್ಲಿ ನಾನು ಎಂಗೇಜ್​ ಆಗಿದ್ದೆ. ಥಟ್ಟನೆ ಯಾರೋ ಭಜ ತಟ್ಟಿದ ಹಾಗಾಯ್ತು. ತಿರುಗಿ ನೋಡಿದರೆ ಟಿಸಿ ನಿಂತಿದ್ದರು. ‘‘ನೀವು ತಲುಪಬೇಕಾದ ಸ್ಥಳ ಬಂದಿದೆ.. ಪ್ಲೀಸ್​ ಇಳಿದು ಬಿಡಿ..’’ ಅಂದಾಗ ನನಗೆ ಗೊಂದಲ: ಇಲ್ಲ.. ಇಲ್ಲ.. ನಾನು ತಲುಪಬೇಕಾದ ಸ್ಥಳ ಇನ್ನೂ ಬಂದಿಲ್ಲ’ ಎಂದೆ. ‘‘ಇಲ್ಲ, ಅದೇ ಇದು.. ಕೆಲಮೊಮ್ಮೆ ಹಾಗೆಯೇ ಆಗುತ್ತೆ. ”

ನನಗೆ ಈಗ ಅರ್ಥವಾಗಿದ್ದು ಇಷ್ಟೇ; ಸಾಗರದಲ್ಲಿ ತೇಲುತ್ತಿರುವ ಮರದ ತೊಗಟೆಯಂತಿರುವ ನಿಮಗೆ ಅಲ್ಲಿನ ಅಲೆಗಳು ಹೇಗಿರಬಹುದೆಂದು ಊಹಿಸಲು ಅಸಾಧ್ಯವಾಗುತ್ತದೆ ಹಾಗೂ ಅವುಗಳನ್ನು ನಿಯಂತ್ರಿಸಲು ನೀವು ಹತಾಶರಾಗಿ ಪ್ರಯತ್ನಿಸುತ್ತೀರಿ. ಇಂಥದೊಂದು ಗಾಬರಿ, ಆತಂಕ, ಭಯ ಪರಿಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ನಾನು, ನನ್ನ ಮಗನ ಬಳಿ ಹೇಳಿಕೊಂಡೆ: ‘‘ನನ್ನಿಂದ ನಾನು ನಿರೀಕ್ಷಿಸುವುದು ಇಷ್ಟೇ. ಈ ಪರಿಸ್ಥಿತಿಯನ್ನು ಮತ್ತೆ ಎಂದಿಗೂ ನಾನು ಎದುರಿಸಬಾರದು. ನನ್ನ ಕಾಲ ಮೇಲೆ ನಾನು ನಿಲ್ಲಬೇಕಿದೆ. ಭೀತಿ ಮತ್ತು ಭಯ ನನ್ನ ಆಕ್ರಮಿಸಿಕೊಳ್ಳಬಾರದು’’.”

ನೋವಿನ ಅರಿವು ನಿಮಗೆ ತಿಳಿದಿದ್ದರೆ, ನನ್ನ ಈಗಿನ ಸ್ವರೂಪ ಮತ್ತು ತೀವ್ರತೆಯ ಅನುಭವ ನಿಮಗೂ ಇರುತ್ತದೆ. ಯಾವುದೇ ಸಮಾಧಾನ, ಪ್ರೇರಣೆ ಕೆಲಸ ಮಾಡುತ್ತಿಲ್ಲ. ಬರೀ ನೋವು, ಮತ್ತು ಈ ನೋವು ದೇವರಿಗಿಂತಲೂ ಅಗಾಧವಾದದ್ದು ಅನಿಸುತ್ತಿದೆ.”

ದುಗುಡ, ದಣಿವಿನಿಂದ ಲಂಡನ್ ಆಸ್ಪತ್ರೆ ಪ್ರವೇಶಿಸಿದಾಗ ಆಸ್ಪತ್ರೆಯ ಮುಂಭಾಗದಲ್ಲಿ ಲಾರ್ಡ್ಸ್ ಸ್ಟೇಡಿಯಂ ಇರೋದು ಅರಿವಾಯ್ತು. ಇದು ನನ್ನ ಬಾಲ್ಯದ ಕನಸಿನ ಮೆಕ್ಕಾ. ನೋವಿನ ಮಧ್ಯೆಯೂ ನಾನು ಅಲ್ಲಿ ನಗುತ್ತಿರುವ ವಿವಿಯನ್‌ ರಿಚರ್ಡ್ಸ್ ಅವರ ಪೋಸ್ಟರ್‌ ಕಂಡೆ. ನಾನು ಈ ಜಗತ್ತಿನಲ್ಲಿ ಇಲ್ಲದಿದ್ದರೂ ಈ ಪ್ರಪಂಚದಲ್ಲಿ ಏನೂ ಸಂಭವಿಸುವುದಿಲ್ಲ. ಎಲ್ಲವೂ ಹಾಗೆಯೇ ಇರುತ್ತದೆ.

ನನ್ನ ಕೊಠಡಿಯ ಬಲಭಾಗದಲ್ಲಿ ಕೋಮಾದಲ್ಲಿ ಇರುವವರ ವಾರ್ಡ್ ಇದೆ. ಒಂದೊಮ್ಮೆ ನಾನು ಆಸ್ಪತ್ರೆಯ ಬಾಲ್ಕನಿಯಲ್ಲಿ ನಿಂತು ದೂರಕ್ಕೆ ದೃಷ್ಟಿ ಹರಿಸಿದೆ. ತಕ್ಷಣ ವಿಲಕ್ಷಣವಾದ ಭಾವವೊಂದು ನನ್ನನ್ನು ಕಾಡಿತು. ಜೀವನ ಆಟ ಮತ್ತು ಸಾವಿನ ಆಟದ ನಡುವೆ ಒಂದು ಕೇವಲ ಒಂದು ರಸ್ತೆ ಮಾತ್ರ ಅಲ್ಲಿತ್ತು. ಒಂದು ಕಡೆ ಕ್ರೀಡಾಂಗಣ… ಮತ್ತೊಂದು ಕಡೆ ಆಸ್ಪತ್ರೆ ಇತ್ತು. ಆದರೆ ನಾವು ಇವೆರಡರಲ್ಲಿ ಒಂದರ ಭಾಗವಾಗಿದ್ದೇವೆ ಎಂದು ನಿಶ್ಚಿತವಾಗಿ ಹೇಳಲು ಸಾಧ್ಯವಿಲ್ಲ. ಕ್ರೀಡಾಂಗಣಕ್ಕೂ ಸೇರಿದವರಲ್ಲ, ಆಸ್ಪತ್ರೆಗೂ ಸೇರಿದವರಲ್ಲ. ಈ ಸತ್ಯ ನನ್ನನ್ನು ಬಹಳವಾಗಿ ಕಾಡಿತು.

ಈ ಬ್ರಹ್ಮಾಂಡಕ್ಕೆ ಅದೆಂಥಾ ಅಭೂತ ಪೂರ್ವ ಶಕ್ತಿ ಇದೆ ಎಂಬುದು ಗೊತ್ತಾಯಿತು. ನನ್ನ ಆಸ್ಪತ್ರೆ ಇರುವ ಸ್ಥಳದ ಈ ಒಂದು ವಿಚಿತ್ರ ಘಟ್ಟ ನನ್ನನ್ನು ಬಹುವಾಗಿ ಕಾಡಿತು. ನನ್ನಲ್ಲೀಗ ಅನಿಶ್ಚಿತತೆ ಮನೆ ಮಾಡಿದೆ. ನಾನೀಗ ಮಾಡಲು ಸಾಧ್ಯವಿರುವುದು ಒಂದನ್ನೇ.. ನನ್ನ ಸಾಮರ್ಥ್ಯವನ್ನು ಅರಿತುಕೊಂಡು, ನನ್ನ ಪಾಲಿನ ಆಟವನ್ನು ಅತ್ಯುತ್ತಮವಾಗಿ ಆಡೋದು.

ಫಲಿತಾಂಶ ಏನಾಗಬಹುದೆಂದು ಯೋಚಿಸಿದೆ, ಇದು ನನ್ನನ್ನು ಎಲ್ಲಿಗೆ ಕರೆದುಕೊಂಡು ಹೋಗಬಹುದೆಂದೂ ಯೋಚಿಸಿದೆ. ಈಗಿನಿಂದ ನಾಲ್ಕು ಎಂಟು ತಿಂಗಳು ಅಥವಾ ಎರಡು ವರ್ಷವಾಗಲಿ, ಫಲಿತಾಂಶ ಏನೇ ಬರಲಿ. ನಾನು ನಂಬಿಕೆ ಕಳೆದುಕೊಳ್ಳಬಾರದು ಎಂದು ನಿರ್ಧರಿಸಿದ್ದೇನೆ.

ಆಸ್ಪತ್ರೆಯ ಚಿಕಿತ್ಸೆ ಪಡೆಯುವಾಗ ಮೊದಲ ಬಾರಿಗೆ ಸ್ವಾತಂತ್ರ್ಯ ಎನ್ನುವ ಪದದ ನಿಜವಾದ ಅರ್ಥ ಮನವರಿಕೆಯಾಗಿದೆ. ಜೀವನದ ಮ್ಯಾಜಿಕನ್ನು ಮೊದಲ ಬಾರಿಗೆ ಪರೀಕ್ಷಿಸುತ್ತಿದ್ದೇನೆ. ಫಲಿತಾಂಶ ಏನಾಗಲಿದೆ ಎಂಬುದನ್ನು ಕಾಯುತ್ತಿದ್ದೇನೆ. ನನ್ನ ಪ್ರತಿಯೊಂದು ಕಣಕಣದಲ್ಲೂ ವಿಶ್ವಾಸವಿದೆ. ಅದು ಉಳಿಯುವುದೇ ಎನ್ನುವುದನ್ನು ಸಮಯವೇ ಹೇಳಲಿದೆ. ”

ನನ್ನ ಜೀವನದ ಪ್ರಯಾಣದುದ್ದಕ್ಕೂ ಜಗತ್ತಿನಾದ್ಯಂತ ಜನ ನನಗಾಗಿ ಪ್ರಾರ್ಥಿಸಿಸುತ್ತಿದ್ದಾರೆ… ಶುಭ ಕೋರಿದ್ದಾರೆ. ನನಗೆ ತಿಳಿದಿರುವ, ತಿಳಿಯದೆ ಇರುವ ಜನರು ವಿಶ್ವದ ವಿವಿಧೆಡೆಯಿಂದ ನನಗಾಗಿ ಪ್ರಾರ್ಥಿಸುತ್ತಿದ್ದಾರೆ. ಬೇರೆ ಬೇರೆ ಜಾಗದಲ್ಲಿ ಬೇರೆ ಬೇರೆ ಕಾಲಮಾನದಲ್ಲಿ ಮಾಡಿದ ಈ ಪ್ರಾರ್ಥನೆ ಒಂದಾಗಿ ನನಗೆ ಸ್ಫೂರ್ತಿ ನೀಡುತ್ತಿದೆ. ನನ್ನ ಶಕ್ತಿಯ ಕಿರೀಟವಾಗಿದೆ.

ಈ ವಿಶ್ವಾಸ ನಿಧಾನವಾಗಿ ಮೊಗ್ಗಾಗಿ, ಎಲೆಯಾಗಿ, ರೆಂಬೆವಾಗಿ ಬೆಳೆಯುತ್ತಿದೆ. ನಾನು ಈ ಪ್ರಾರ್ಥನೆಯನ್ನು ನೋಡುತ್ತ ತೃಪ್ತಿಪಡುತ್ತಿದ್ದೇನೆ. ಪ್ರತಿ ಹೂವು, ಪ್ರತಿ ರೆಂಬೆಯೂ ಸಾಮೂಹಿಕ ಪ್ರಾರ್ಥನೆಯ ಮೂಲಕ ನನ್ನನ್ನು ತಲುಪಿ ಅಚ್ಚರಿ, ಸಂತೋಷ ಮತ್ತು ಕುತೂಹಲ ಮೂಡಿಸಿದೆ. ಒಂದು ಪ್ರವಾಹವನ್ನು ತಡೆಯಲು ಮುಚ್ಚಳದ ಅಗತ್ಯವಿಲ್ಲ ಎನ್ನುವುದು ಮನವರಿಕೆಯಾಗಿದೆ. ಬಹುಶಃ ಪ್ರಕೃತಿ ನನಗೆ ಸಣ್ಣ ಆಘಾತ ನೀಡಿದೆಯಷ್ಟೆ.

ಪೋಸ್ಟ್ ಕೃಪೆ : ಸಾಕಿಯ ಮಧುಶಾಲೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

Published

on

~ಡಾ. ಪುಷ್ಪಲತ ಸಿ ಭದ್ರಾವತಿ

ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು

ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.

ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.

ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.

ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.

ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending