Connect with us

ಭಾವ ಭೈರಾಗಿ

ಮನುಷ್ಯ ಏಕಾಂಗಿಯಾಗುತ್ತಿದ್ದಾನೆಯೇ?

Published

on

ನುಷ್ಯನು ಸಹ ಜೀವಿ ಹಾಗೂ ಸಂಘ ಜೀವಿಯೂ ಎಂದು, ಮೊದಲಿನಿಂದಲೂ ಸಹ ಜೀವನ ನಡೆಸಲು ಇಷ್ಟಪಡುತ್ತಾನೆ ಒಬ್ಬಂಟಿಯಾಗಿರಲು ಅವನ ಮನಸ್ಸು ಒಪ್ಪುವುದಿಲ್ಲ. ಎಂದು ಹಿಂದಿನ ಕಾಲದಲ್ಲಿ ಹೇಳಬಹುದಿತ್ತು. ಆದರೆ ಇಂದಿನ ದಿನಗಳಲ್ಲಿ ಎಲ್ಲವೂ ತಲೆಕೆಳಗಾಗಿ ಸಂಘಜೀವಿಯಾದ ಮನುಷ್ಯನು ಏಕಾಂಗಿಯಾಗಿ ತನ್ನ ಪಾಡಿಗೆ ತಾನು ಜೀವನ ನಡೆಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ತನ್ನ ಕೆಲಸಗಳಿಗೆ ಅಥವಾ ಅನಿವಾರ್ಯ ಸನ್ನಿವೇಶ ಬಂದೊದಗಿದ್ದಲ್ಲಿ ಮಾತ್ರ ಎಲ್ಲರನ್ನು ಆಮಂತ್ರಿಸಿ, ಬೆರೆತು ನಂತರ ಮರೆತು ಪುನಃ ಏಕಾಂಗಿಯಾಗಿ ಜೀವಿಸುತ್ತಿರುವುದು ಸಾಮಾನ್ಯವಾಗಿದೆ.

ಹಿಂದಿನ ಕಾಲದಲ್ಲಿ ಎಳೆಯರಾಗಿದ್ದಾಗ ಮಕ್ಕಳು ತಮ್ಮ ಅಕ್ಕಪಕ್ಕದ ಮನೆಯಲ್ಲಿರುವ ಮಕ್ಕಳನ್ನು ಸ್ನೇಹ ಮಾಡಿಕೊಂಡು ಗೋಲಿ, ಲಗೋರಿ, ಚಿನ್ನಿ ದಾಂಡ್ಲು, ಕಬ್ಬಡಿ, ಹೀಗೆ ನಾನಾ ತರಹದ ಆಟವನ್ನು ಆಡುತ್ತಾ ಗೆಳೆಯರೊಂದಿಗೆ ಕಾಲ ಕಳೆದು ಅಕಸ್ಮಾತ್ ಯಾರೂ ಇಲ್ಲದಿದ್ದ ಪಕ್ಷದಲ್ಲಿ ಅಪ್ಪ ಅಮ್ಮನ ಜೊತೆಯಲ್ಲಿ, ಅಣ್ಣ, ತಮ್ಮ ಮತ್ತು ತಂಗಿ, ಇವರೊಂದಿಗೆ ಆಟವಾಡಿ ನಲಿಯುತ್ತಾ ಆಟದ ಜೊತೆಗೆ ಪಾಠವನ್ನು ಕಲಿಯುತ್ತಾ ತನ್ನ ಬಾಲ್ಯದ ದಿನಗಳನ್ನು ಕಳೆಯುತ್ತಿದ್ದುದ್ದನ್ನು ನೋಡಿದ್ದೇವೆ. ದೊಡ್ಡವರಾದಂತೆ ಶಾಲೆ ಕಾಲೇಜಿಗೆ ಸೇರಿ ಅಲ್ಲಿಯ ಸಹಪಾಠಿಗಳ ಜೊತೆಗೆ ಆಟವಾಡಿ ಸಿನಿಮಾ ನಾಟಕದಂತಹ ಮನೋರಂಜನೆ ಪಡೆದು, ಓದು ಮುಗಿದ ನಂತರ ಕಾಲೇಜಿನ ಸಹಪಾಠಿಗಳು ಬೇರೆ ಬೇರೆ ಕೆಲಸಕ್ಕೆ ಸೇರಿದಾಗ ಯಾವ ಸ್ನೇಹಿತರೂ ಇಲ್ಲದೆ ಸ್ವಲ್ಪ ಸಮಯ ಬೇಸರವಾಗುವುದೆಂದು, ಹಳೆಯ ಸಹಪಾಠಿಗಳ ಒಡನಾಟವನ್ನು ಮರೆಯಲಾಗದೆ ತನ್ನ ಹಳೆಯ ಸ್ನೇಹಿತರಿಗೆ ದೂರವಾಣಿ ಮೂಲಕ ಸಂಪರ್ಕವನ್ನು ಇಟ್ಟುಕೊಳ್ಳಬಯಸುವವರು ಇರುವುದರಿಂದ ಕಾಲೇಜಿನ ಶಿಕ್ಷಣ ಮುಗಿಯುವವರೆಗೂ ಏಕಾಂಗಿಯಾಗಿರುವ ಅನುಭವವೇ ಇಲ್ಲದಂತೆ ಆಗಿರುತ್ತದೆ. ಆದರೆ ಈಗ ಕಾಲವು ಸಂಪೂರ್ಣ ಬದಲಾಗಿದೆ. ಶಾಲೆಯಲ್ಲಿರುವ ತನಕ ಆಟ ಪಾಠಗಳು, ಮನೆಗೆ ಬಂದ ತಕ್ಷಣ ಇದೆಲ್ಲವೂ ಮಾಯವಾಗುತ್ತದೆ. ತಂದೆ ತಾಯಿ ಕೆಲಸಕ್ಕೆ ಹೋದಲ್ಲಿ ಮಕ್ಕಳು ಪಕ್ಕದ ಮನೆಯಲ್ಲಿ ಇರುವ ಸನ್ನಿವೇಶ ಸೃಷ್ಠಿಯಾಗಿದೆ. ಆದರೆ ಇತ್ತೀಚೆಗೆ ಎಲ್ಲವೂ ತಲೆಕೆಳಗಾಗಿ, ಅನೇಕ ಕಡೆ ಕೆಲವು ಹುಡುಗರು ಮೂರು ಕಡ್ಡಿಗಳನ್ನು ಅಥವಾ ಕಲ್ಲುಗಳನ್ನು ತಮ್ಮ ಮನೆಯ ಮುಂದೆ ಇಟ್ಟುಕೊಂಡು ಕ್ರಿಕೆಟ್ ಆಟವನ್ನು ಮಾತ್ರ ಆಡುತ್ತಿದ್ದು, ಬೇಸರವಾದರೆ ಅದನ್ನು ಬಿಟ್ಟು ಮೊಬೈಲ್‍ಗಳಲ್ಲಿ ಆಟವಾಡುವುದು ಇತ್ತೀಚಿನ ಹವ್ಯಾಸವಾಗಿದೆ.

ಬೆಂಗಳೂರು ಮತ್ತು ಇತರೆ ನಗರಗಳಲ್ಲಿ ಅನೇಕ ಬಡಾವಣೆಗಳು ತಲೆ ಎತ್ತಿದ್ದು, ಎಲ್ಲಿಂದಲೋ ಜನಗಳು ಬಂದು ವಾಸಮಾಡುತ್ತಿರುವುದರಿಂದ ಇವರಿಗೆ ಪಕ್ಕದ ಮನೆಯ ಸಂಪರ್ಕ ಕೂಡ ಇರುವುದಿಲ್ಲ. ಹೊಸ ಜನಗಳು ಹೊಸ ಪ್ರದೇಶ ಯಾರು? ಹೇಗೋ? ಎಂಬ ಆತಂಕವು ಮನೆ ಮಾಡಿ ಯಾರ ಸಂಪರ್ಕವನ್ನು ಬೆಳೆಸಿಕೊಳ್ಳಲು ಹೋಗುವುದಿಲ್ಲ. ತಾವಾಯಿತು ತಮ್ಮ ಉದ್ಯೋಗವಾಯಿತು ಎಂಬಂತೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಒಬ್ಬರ ಸಂಪರ್ಕ ಇನ್ನೊಬ್ಬರಿಗೆ ಇಲ್ಲದಂತಾಗಿ ಎಲ್ಲರೂ ಏಕಾಂಗಿ ಬದುಕನ್ನು ಸಾಗಿಸುವಂತಹ ಸನ್ನಿವೇಶ ಬಲವಂತವಾಗಿ ಮನುಷ್ಯನ ಮೇಲೆ ಹೇರಿದಂತಾಗಿರುವುದು ಕಟು ಸತ್ಯ. ಹೊಸ ಬಡಾವಣೆಗಳಲ್ಲಿ ಪಕ್ಕದ ಮನೆಗಳಲ್ಲಿ ಏನಾದರೂ ಸಾವು ಸಂಭವಿಸಿದರೂ ಹೋಗಿ ನೋಡವುದೇ ಇಲ್ಲದಂತಾಗಿದ್ದು, ತಮ್ಮ ಮನೆಯ ಮಹಡಿ ಮೇಲೆ ನಿಂತು ಕಾರ್ಯಗಳನ್ನು ನೋಡುತ್ತಿರುವುದು ಕಂಡು ಬಂದಿರುವ ದೃಶ್ಯಗಳು. ದೂರದ ಊರಿನಿಂದ ಬಂದಿರುವ ನೆಂಟರು ಅಥವಾ ಸ್ನೇಹಿತರು ಬಂದು ಎಲ್ಲಾ ಕಾರ್ಯಕ್ರಮಗಳನ್ನು ಮುಗಿಸುವಂತ ಪರಿಸ್ಥಿತಿ ಬಂದೊದಗಿರುವುದು ಮನುಷ್ಯನು ಏಕಾಂಗಿಯಾಗುತ್ತಿರುವುದಕ್ಕೆ ನಿದರ್ಶನವಾಗಿದೆ.

ಹಳೆಯ ಪಟ್ಟಣ ಹಳ್ಳಿಗಳಲ್ಲಿ ವಾಸಿಸುವವರು ಮಾತ್ರ ಇನ್ನೂ ಸ್ವಲ್ಪ ಭಿನ್ನವಾದ ರೀತಿಯ ಜೀವನ ಸಾಗಿಸುತ್ತಿರುವುದು ಕಂಡು ಬಂದಿದ್ದು, ಆದರೂ ಹಳ್ಳಿ ಹಾಗೂ ಸಣ್ಣ ಸಣ್ಣ ಪಟ್ಟಣದಲ್ಲಿರುವ ಯುವಕರು ಯುವತಿಯರು ಜೀವನೋಪಾಯಕ್ಕೆ ದೊಡ್ಡ ನಗರಗಳಲ್ಲಿ ಕೆಲಸಕ್ಕೆ ಸೇರಿಕೊಂಡು ಬೆಳಿಗ್ಗೆ ಪಟ್ಟಣಕ್ಕೆ ಬಂದರೆ ಮನೆಗೆ ವಾಪಸಾಗುವುದು ಸೂರ್ಯ ಮುಳುಗಿ ದೀಪ ಬೆಳಗಿದ ನಂತರವಷ್ಟೇ. ಹೀಗಿದ್ದಾಗ ಯಾರನ್ನೂ ಮಾತನಾಡಿಸದ ಸನ್ನಿವೇಶ ಬಂದಿದೆ. ಹಾಗಾಗಿ ಪರಿಚಯವಿದ್ದರೂ ಕೆಲಸದ ಒತ್ತಡದಿಂದ ಹೆಚ್ಚಿಗೆ ಒಟ್ಟಾಗಿ ಕಾಲ ಕಳೆಯಲು ಆಗುವುದಿಲ್ಲ. ಎಲ್ಲರಿಗೂ ಅವರದೇ ಆದ ಸಂಸಾರ ತಾಪತ್ರಯ, ವೈಯುಕ್ತಿಕ ದ್ವೇಷ ಹೀಗೆ ಹಲವಾರು ಕಾರಣಗಳಿಂದ ಒಬ್ಬರೊನ್ನೊಬ್ಬರು ಬೆರೆತು ಮಾತಾಡಿ ಕಾಲ ಕಳೆಯುವಂತಹ ದಿನಗಳು ನೋಡಲು ಎಲ್ಲೂ ಕಾಣ ಸಿಗುವುದಿಲ್ಲ. ಹಳ್ಳಿಗಳಲ್ಲಿ ಬೇಸಾಯದ ಕೆಲಸ ಮುಗಿದಿದ್ದರೆ ಬಿಡುವಿನ ವೇಳೆಯಲ್ಲಿ ಕೆಲವು ಸ್ನೇಹಿತರುಗಳು ಒಂದುಗೂಡಿ ಮಾತಾಡುತ್ತಾ ಕಾಲ ಕಳೆಯಬಹುದು.

ಕಾಲೇಜು ಓದು ಮುಗಿಸಿ ಕೆಲಸಕ್ಕೆ ಸೇರಿದ ನಂತರ ವಾತಾವರಣವೇ ಸಂಪೂರ್ಣ ಬದಲಾವಣೆಯಾಗಿದ್ದು, ಕೆಲಸ ಮಾಡುವ ಸ್ಥಳಗಳಲ್ಲಿ ದೊರೆಯುವ ಸ್ನೇಹಿತರ ಮನೋಭಾವವೇ ಬೇರೆ ರೀತಿಯದ್ದಾಗಿರುತ್ತದೆ. ಕಾಲೇಜಿನಲ್ಲಿ ಸ್ನೇಹಿತರೊಡನೆ ಆಟವಾಡಿದ್ದಂತೆ ಕೆಲಸದ ಜೊತೆಗಾರರೊಡನೆ ಆಟ ಆಡುವುದಕ್ಕೆ ಆಗುವುದಿಲ್ಲ. ಕಾಲೇಜಿನ ದಿನಗಳಲ್ಲಿ ಯಾವ ರೀತಿಯ ಯೋಚನೆ ಇಲ್ಲದೆ ಬಹಳ ಖುಷಿಯಿಂದ “ವಿದ್ಯಾರ್ಥಿ ಜೀವನವೇ ಚಿನ್ನದ ಜೀವನ ಇದ್ದಂತೆ” ಎಂದು ಎಲ್ಲರೊಡನೆ ಬೆರೆತು ಹಾಡಿ ಕುಣಿದು ಕುಪ್ಪಳಿಸಿ ಆಟವಾಡುವಂತಹ ಸನ್ನಿವೇಶ ಇಲ್ಲಿ ಬರುವುದೇ ಇಲ್ಲ. ಎಲ್ಲರಿಗೂ ಅವರದ್ದೇ ಆದ ಸಂಸಾರದ ಜವಾಬ್ದಾರಿಯು ಹೆಗಲೇರಿರುತ್ತದೆ. ಇದರ ಜೊತೆಗೆ ಕೆಲಸದ ಒತ್ತಡ, ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗುವ ತವಕ, ವಾಹನದ ದಟ್ಟಣೆ ಪ್ರದೇಶಗಳಲ್ಲಿ ಸರಿಯಾದ ಸಮಯಕ್ಕೆ ಕೆಲಸಕ್ಕೆ ಹೋಗುವುದೇ ಒಂದು ದೊಡ್ಡ ಸಾಧನೆಯಾಗಿರುತ್ತದೆ. ಕೆಲಸದ ಸಮಯದಲ್ಲಿ ಸಿಗುವ ಬಿಡುವಿನ ವೇಳೆ ಎಂದರೆ ಊಟದ ಸಮಯ ಕೇವಲ 30 ರಿಂದ 45 ನಿಮಿಷಗಳು ಇರಬಹುದು. ಆದರೆ ಇಷ್ಟು ಕ್ಲುಪ್ತ ಸಮಯದಲ್ಲಿ ಊಟ ಮಾಡಿ ಹೋಗುವುದಕ್ಕೆ ಸಾಲುವುದಿಲ್ಲ. ಮನೆಯಿಂದ ಊಟದ ಡಬ್ಬಿ ತೆಗೆದುಕೊಂಡು ಹೋಗಿದ್ದರೆ ಮಾತ್ರ ಎಲ್ಲರ ಜೊತೆ ಬೆರೆತು ಮಾತಾಡುತ್ತಾ ಊಟ ಮಾಡಿ ಇರುವ ಸ್ವಲ್ಪ ಸಮಯದಲ್ಲಿ ವಿರಮಿಸಬಹುದು. ಊಟ ಮಾಡಲು ಹೋಟೆಲನ್ನು ಅವಲಂಬಿಸಿದ್ದರೆ ಸ್ವಲ್ಪ ವಿರಾಮವೂ ಸಿಗುವುದಿಲ್ಲ. ಬೆಳಿಗ್ಗೆ ಹೋದರೆ ವಾಪಸ್ ಬರುವುದೇ ರಾತ್ರಿಯಾಗಿರುತ್ತದೆ. ಇಂತಹ ಸನ್ನಿವೇಶಗಳಲ್ಲಿ ಆಟ ಹಾಡು ಎಲ್ಲವೂ ಮರೆತಂತೆ ಆಗಿರುತ್ತದೆ. ವಾರಕ್ಕೊಂದು ರಜೆ ಸಿಕ್ಕಿದರೆ ಅದನ್ನು ಮನೆಯಲ್ಲಿರುವ ಬೇರೆ ಕೆಲಸ ನಿರ್ವಹಿಸುವುದಕ್ಕೆ ಸಾಲುವುದಿಲ್ಲ.

ವಿವಾಹವಾಗಿದ್ದರೆ ಮಾತ್ರ ತನ್ನ ಪತ್ನಿಯೇ ಸ್ನೇಹಿತೆ ಅಥವಾ ಸಂಗಾತಿ ಎಂಬುದಾಗಿ ಜೊತೆಯಲ್ಲಿ ಕಾಲ ಕಳೆಯಬಹುದು. ಒಳ್ಳೆಯ ಮಡದಿ ದೊರೆತು ಎಲ್ಲರಲ್ಲೂ ಹೊಂದಿಕೊಂಡು ಹೋಗುವಂತಹ ಮನಸ್ಸುಳ್ಳವಳಾದರೆ ಮಾತ್ರ ತಾನು ಏಕಾಂಗಿ ಎಂಬುದನ್ನು ಮರೆತು ಸಂತೋಷದಿಂದ ಕಾಲ ಕಳೆಯಬಹುದು. ಇಲ್ಲದಿದ್ದರೆ ಮದುವೆಯಾದರೂ ಏಕಾಂಗಿಯಂತೆ ಬದುಕನ್ನು ಸಾಗಿಸಬೇಕಾದ ಅನಿವಾರ್ಯತೆ ಉಂಟಾಗುತ್ತದೆ. ಕಛೇರಿಯಲ್ಲಿ ಒಂದು ರೀತಿಯ ಕೆಲಸದ ಕಿರಿ ಕಿರಿಯಾಗಿ, ಮನೆಯಲ್ಲಿ ಮಡದಿಯ ಕಿರಿಕಿರಿ ಉಂಟಾದರೆ ಎಲ್ಲಿ ಹೋಗಿ ಬದುಕುವುದು ಎಂಬ ಆಲೋಚನೆ ಹಾಗೂ ಜೀವನದಲ್ಲಿಯೇ ಜಿಗುಪ್ಸೆ ಉಂಟಾಗುತ್ತದೆ. ಮಕ್ಕಳಿಗಾಗಿ ಎಲ್ಲವನ್ನೂ ಸಹಿಸಿಕೊಂಡು ಜೀವನವನ್ನು ದೂಡುವಂತ ಸನ್ನಿವೇಶ ನಿರ್ಮಾಣವಾದರೂ ಆಶ್ಚರ್ಯವಿಲ್ಲ. ಇದರ ಜೊತೆಗೆ ಹೆತ್ತವರ ಯೋಗಕ್ಷೇಮ, ಮಡದಿ ಮಕ್ಕಳ ಯೋಗಕ್ಷೇಮ ಇವೆಲ್ಲವನ್ನೂ ನೋಡಿ ಕೊಳ್ಳುವುದೇ ಒಂದು ಸಾಹಸದಂತೆ ಆಗಿರುತ್ತದೆ. ಕಛೇರಿಯಿಂದ ಬಂದೊಡನೇ ಶಾಪಿಂಗ್‍ಗೆ ಮಕ್ಕಳಿಗೆ ಮೈಯಲ್ಲಿ ಹುಷಾರಿಲ್ಲದಿದ್ದರೆ ವೈದ್ಯರನ್ನು ನೋಡಲು ಹೋಗಬೇಕಾದ ಪ್ರಸಂಗ ಬರಬಹುದು. ಇವೆಲ್ಲ ಕಾರ್ಯಗಳು ಮುಗಿಯುವ ಹೊತ್ತಿಗೆ ಸುಸ್ತಾಗಿ ಹಾಸಿಗೆ ಕಂಡರೆ ಸಾಕು ಎಂಬಂತೆ ಆಗಿದ್ದರೆ ಏನೂ ಕೇಳದೆ ಸೇರಿದ್ದನ್ನು ತಿಂದು ಹೋಗಿ ಮಲಗಿಬಿಡಬಹುದು. ಏನೂ ಕೆಲಸವಿಲ್ಲದಿದ್ದರೆ ಮನೋರಂಜನೆಗಾಗಿ ದೂರದರ್ಶನವನ್ನು ವೀಕ್ಷಿಸುತ್ತಾ ಕಾಲ ಕಳೆಯಬಹುದು. ಹೀಗಾಗಿ ಯಾರೊಬ್ಬರ ಒಡನಾಟವೂ ಸಿಗುವುದಿಲ್ಲ. ಸಿಕ್ಕಿದರೂ ಅಪರೂಪವಾಗಿರುತ್ತದೆ. ಸಾಲು ಸಾಲು ರಜೆ ಸಿಕ್ಕಿದರೆ ತನ್ನ ಸಂಸಾರದವರೊಡನೆ ದೂರ ಪ್ರವಾಸ ಕೈಗೊಂಡು, ತನ್ನ ಸಂಸಾರದ ಸದಸ್ಯರ ಜೊತೆ ಮಾತ್ರ ಸುತ್ತಾಡಿ ಬರಬಹುದು. ಆರ್ಥಿಕವಾಗಿ ಸದೃಡನಾಗಿದ್ದರೆ ರಜಾ ದಿನಗಳಲ್ಲಿ ಪ್ರವಾಸ ಕೈಗೊಳ್ಳ ಬಹುದು. ಬರುವ ಸಂಬಳದಲ್ಲಿ ಸಂಸಾರ ನಿರ್ವಹಣೆ ಮಾಡಬೇಕು, ಇದರ ಜೊತೆಗೆ ಮಕ್ಕಳ ವಿದ್ಯಾಭ್ಯಾಸದ ಖರ್ಚು, ಹಬ್ಬಗಳಲ್ಲಿ ಮಕ್ಕಳಿಗೆ ಹೊಸ ಬಟ್ಟೆ ಖರೀದಿಸಲು ಆಗುವ ಖರ್ಚು, ಮನೆಯವರಿಗೆ ಆರೋಗ್ಯ ಎರುಪೇರಾದರೆ ವೈದ್ಯಕೀಯ ವೆಚ್ಚ ಇವೆಲ್ಲವನ್ನೂ ಸರಿದೂಗಿಸಬೇಕಾದ ಪ್ರಸಂಗ ಇರುತ್ತದೆ. ಇವೆಲ್ಲದರ ನಡುವೆ ಪ್ರವಾಸದ ಖರ್ಚುನ್ನು ಹೊಂದಿಸಲು ಬಹಳ ಕಷ್ಟವಾಗಿ ಮನೆಯ ಸಂಸಾರದ ಖರ್ಚು ಸರಿದೂಗಿದರೆ ಸಾಕು ಎಂದು ಯಾವ ಪ್ರವಾಸವೂ ಬೇಡ ಎಂದು ಕೈಚೆಲ್ಲಬಹುದು.

ಈಗಿನ ಕಾಲದಲ್ಲಿ ವಿಜ್ಞಾನ ಮುಂದುವರೆದು ಮನೆ ಮನೆಯಲ್ಲಿಯೂ ಟಿ.ವಿ. ನೂರಾರು ಚಾನಲ್ ಗಳು ವಿಧ ವಿಧವಾದ ಕಾರ್ಯಕ್ರಮಗಳು ಪ್ರಸಾರವಾಗುತ್ತಿರುವುದರಿಂದ ಎಲ್ಲರೂ ಟಿ.ವಿಗೆ ದಾಸರಾಗಿರುವ ಸನ್ನಿವೇಶ ಸೃಷ್ಠಿಯಾಗಿದೆ. ಒಳ್ಳೆಯ ಕಾರ್ಯಕ್ರಮ ಪ್ರಸಾರವಾಗುತ್ತಾ ಇರುವ ಸಮಯದಲ್ಲಿ ಅಪರೂಪಕ್ಕೆ ಯಾರಾದರೂ ಸ್ನೇಹಿತರು ಅಥವಾ ನೆಂಟರೋ ಬಂದರೆ ಈ ಕಡೆ ಕಾರ್ಯಕ್ರಮ ನೋಡಲು ಆಸೆ ಸ್ನೇಹಿತರನ್ನು ಮಾತಾಡಿಸಬೇಕಾಗಿರುವ ಅನಿವಾರ್ಯ ಸನ್ನಿವೇಶ ಬಂದು ಏಕಪ್ಪಾ ಇವರು ಈ ಹೊತ್ತಿನಲ್ಲಿ ಬಂದರೂ ಎಂದು ಪಶ್ಚಾತ್ತಾಪ ಪಟ್ಟರೂ ಆಶ್ಚರ್ಯವಿಲ್ಲ. ಟಿ.ವಿಯ ಮುಂದೆ ಕುಳಿತರೆ ಯಾರೂ ಬೇಡ ಎಂಬ ಮನೋಭಾವ ಬಂದು ಬಿಟ್ಟಿರುತ್ತದೆ. ಪ್ರಪಂಚದ ಆಗುಹೋಗುಗಳು ಜೊತೆಗೆ ಮನರಂಜನೆ ಕಾರ್ಯಕ್ರಮಗಳು ಒಂದೇ ಸಮನೆ ಬಿತ್ತರವಾಗುತ್ತಿರುವಾಗ ಬೇರೆ ಜನಗಳ ಒಡನಾಟವೇಕೆ ಎಂಬ ಮನೋಭಾವ ಬಂದಿದೆ. ಇದೂ ಸಾಲದೆಂಬಂತೆ ಪ್ರತಿಯೊಬ್ಬರ ಬಳಿಯಲ್ಲೂ ಮೊಬೈಲ್ ಬಂದಿರುವುದರಿಂದ ಎಲ್ಲರೂ ತಮ್ಮದೇ ಆದ ಲೋಕದಲ್ಲಿ ಮೈಮರೆತಿರುತ್ತಾರೆ. ಬೆಳಿಗಿನಿಂದ ದಿನಪೂರ್ತಿ ದೂರದರ್ಶನದ ಕಾರ್ಯಕ್ರಮಗಳು, ಫೇಸ್ ಬುಕ್, ವಾಟ್ಸಾಪ್ ಹಾಗೂ ಇನ್ನಿತರೆ ಸಂದೇಶ ರವಾನಿಸುವ ಮಾದ್ಯಮಗಳು ಹಾಡು, ನೃತ್ಯ ಸಿನಿಮಾ ಕ್ರೀಡೆ ಹೀಗೆ ಅನೇಕ ಮನರಂಜನೆ ಕೈಯಲ್ಲೇ ನೋಡಬೇಕಾದರೆ ಬೇರೆಯವರ ಸಹವಾಸ ನಮಗೇಕೆ ಬೇಕು ಎನ್ನುವ ಮನೋಭಾವನೆ ಮನೆ ಮಾಡಿರುತ್ತದೆ. ಏಕಾಂಗಿ ಯಾಗಿ ಕಾರ್ಯಕ್ರಮ ವೀಕ್ಷಿಸುತ್ತಾ ಕುಳಿತು ಹೊತ್ತಿಗೆ ಸರಿಯಾಗಿ ಊಟ ತಿಂಡಿ ಕುಳಿತಲ್ಲಿಗೆ ಬರುವುದರಿಂದ ಬೇರೆ ಯೋಚನೆಯನ್ನು ಕನಸು ಮನಸ್ಸಿನಲ್ಲಿಯೂ ಮಾಡದಂತ ಸನ್ನಿವೇಶ ಬಂದಿದ್ದು, ಮನುಷ್ಯನು ಏಕಾಂಗಿಯಾಗಿ ತನ್ನದೇ ಆದ ಲೋಕದಲ್ಲಿ ವಿಹರಿಸುವಂತೆ ಆಗಿದೆ. ವಿದ್ಯಾರ್ಥಿಯ ರಾದಿಯಾಗಿ ಎಲ್ಲರೂ ಇದಕ್ಕೆ ಮಾರುಹೋಗಿದ್ದು, ಬೇರೆಯವರೊಡನೆ ಕಲೆತು ಆಟ ಆಡುವುದು ಅಪರೂಪವಾಗಿದೆ. ಮೊಬೈಲ್‍ನಲ್ಲಿಯೇ ಅಥವಾ ಕಂಪ್ಯೂಟರ್‍ನಲ್ಲಿ ಯಾವುದಾದರೂ ಗೇಮನ್ನು ಆಡುತ್ತಾ ಕಾಲ ಕಳೆಯುವ ಅದೆಷ್ಟೋ ಮಂದಿಗೆ ಏಕಾಂಗಿ ಬದುಕೇ ಹಿತವಾಗಿರುವಂತೆ ಗೋಚರಿಸುತ್ತಿದೆ.

ಒಟ್ಟಿನಲ್ಲಿ ಹೇಳುವುದಾದರೆ ವಿಜ್ಞಾನದ ಅವಿಷ್ಕಾರದಿಂದ ಪ್ರಪಂಚದ ಆಗುಹೋಗುಗಳನ್ನು ಎಲ್ಲರೂ ತಮ್ಮ ತಮ್ಮ ಅಂಗೈಯಲ್ಲಿರುವ ಮೊಬೈಲ್‍ನಲ್ಲಿ ನೋಡುವಂತಹ ಅವಕಾಶ ಒದಗಿಬಂದಿರುವುದರಿಂದ ಪ್ರಪಂಚವೇ ಕಿರಿದಾಗುತ್ತಾ ಇದೆಯೇನೋ ಎಂಬಂತೆ ಭಾಸವಾಗಿದ್ದು, ಅದಕ್ಕೆ ತಕ್ಕಂತೆ ಸಂಘ ಜೀವಿಯಾಗಿದ್ದ ಮನುಷ್ಯನು ಇತ್ತೀಚಿನ ದಿನಗಳಲ್ಲಿ ಏಕಾಂಗಿಯಾಗುತ್ತಿರುವುದು ನಿಜಕ್ಕೂ ವಿಷಾದನೀಯ ವಾದ ಸಂಗತಿಯಾಗಿದೆ.

ಲೇಖಕರು: ಎನ್.ಮುರಳೀಧರ್
ಕಾವ್ಯನಾಮ: ಮುರಳಿಮಂಗಲಧರೆ
ವಕೀಲರು
ನೆಲಮಂಗಲ

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂಕಣ

ಕವಿತೆ | ಮೌನಾಮೃತ

Published

on

~ ತಾರಾ ಸಂತೋಷ್ ಮೇರವಾಡೆ (ಕಾವ್ಯಾಗ್ನಿ), ಗಂಗಾವತಿ

ದೆಷ್ಟೋ ಬಗೆಹರಿಯದ
ಸಮಸ್ಯೆಗಳಿಗೆ
ಮೌನಾಮೃತವ
ಸಿಂಪಡಿಸಿ ಸುಮ್ಮನಾಗಿಬಿಡು.

ಅರ್ಥವಿರದ
ವ್ಯರ್ಥ ವಾಗ್ವಾದಗಳಿಗೆ
ಮೌನದ ಪೂರ್ಣವಿರಾಮವನಿಟ್ಟು
ಹೊರಟುಬಿಡು.

ಮಾತಾಡಿ
ಕಿರುಚಾಡಿ
ರಮಟರಾಡಿ ಮಾಡುವ ಬದಲು
ಒಂದರೆಗಳಿಗೆ
ಮೌನದ ಮೊರೆಹೋಗಿ ನೋಡು.

ಅದೆಷ್ಟೋ ಮುಗಿಯದ
ಮನದ ತೊಳಲಾಟಗಳಿಗೆ
ಮೌನವೆಂಬ ಉತ್ತರವುಂಟು
ಅದನ್ನಪ್ಪಿ ಮನಕ್ಕೊಂದಿಷ್ಟು
ಶಾಂತಿಯ ನೀಡಿ ನಕ್ಕುಬಿಡು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ಅವ ಸುಡುತ್ತಾನೆ

Published

on

~ ಶೃತಿ ಮಧುಸೂದನ (ರುದ್ರಾಗ್ನಿ)

ಅವ ಸುಡುತ್ತಾನೆ…
ಅವ ಸಂಪ್ರದಾದಯವ
ಸೆರಗ ನನಗುಡಿಸಿ
ನಗುತ್ತಾನೆ…

ಅವ ಅತ್ತಿಂದತ್ತ
ಅಲೆದಾಡುವ
ಮುಂಗುರುಳ
ಮುದ್ದಿಸಿ ಮಡಿ
ಮಡಿಕೆಯ ನಿವಾಳಿಸಿ
ನಿಟ್ಟುಸಿರ ಬಿಟ್ಟ
ಬಸವನಂತೆ…
ನೆತ್ತಿ ಮೇಲಣ
ಮದ್ದೇರಿ ಮೆರೆವ
ಮುದ್ದಣನ
ಕರಿಯಂತೆ…

ಕಣ್ಣು ಕುಕ್ಕುವ
ಕೊರತೆಗಳ
ಬದಿಗಿಟ್ಟು
ಬೈತಲೆಯ
ಬಿಂದಿಯ
ಬೆವರೊಳಗಣ
ಕಾವ್ಯ ಕುಂಕುಮದಂತೆ…

ಅವ… ಅವ ಕವಿ
ಎಂಬುವ ಕಾಡಿಗೆಗೆ
ತನ್ನ ಕಪ್ಪೆಂದುಕೊಂಡು
ನನ್ನಿಂದ ದೂರ ಸರಿದವ…
ಹಾಲ್ಬೆಳಕ
ಹಠವಾದಿ
ಹೆಣ್ಣಿನ ಮುಂದೆ
ಹಮ್ಮು ಬಿಟ್ಟು
ಹಿಂದಿರುಗುವ
ಇರಾದೆ ಇಲ್ಲದೇ
ನಡೆದು ಹೋದವ…

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಅನ್ನಕ್ಕೆ ಯಾವ ಧರ್ಮ..? ಮತ್ತು ಇತರೆ ಕವಿತೆಗಳು

Published

on

~ವಿಜಯ್ ನವಿಲೇಹಾಳು

ನನ್ನ ಮನವ, ಹಸಿದ ತೋಳಗಳಂತೆ ಕಿತ್ತು ತಿಂದು ಅದೆಷ್ಟೋ ದಿನಗಳಿಂದ ಎದೆನಡುಗಿಸುತ್ತ ರಣಕೇಕೆ ಹಾಕುತ್ತಿರುವ ನೋವಿನ ಪದಗಳನು ಜೋಡಿಸುತ್ತಿರುವೆ ಅಷ್ಟೇ

ಮಾರಮ್ಮನ ಜಾತ್ರೆಯ ಪ್ರಸಾದ,
ಮೊಹರಮ್ ನ ಚೋಂಗಿ ಕೂಡಿ ಉಂಡು
ಅಡುಗೆ ರುಚಿಯೂ; ಮಾಯಾ ದೀವಿಗೆಯನು
ತಿಕ್ಕಿದಾಗ ಬರುವ ಜೀನಿಯಂತೆ ಅದ್ಭುತ ವಾಗಿತ್ತು

ಪಂಕ್ತಿಯಲ್ಲಿ ಹಿಂದುವೋ, ಮುಸಲ್ಮಾನನೋ, ಕ್ರಿಶ್ಚಿಯನ್ನನೋ, ಯಾರಾದರೇನು? ಅನ್ನಕ್ಕೆ ಯಾವ ಧರ್ಮ ?

ಈಗ ಅಲ್ಲೆಲ್ಲೊ ಯಾರೋ ಕೆಲವರು ಜಾತಿ ಧರ್ಮದ ವಿಷವನು ಹನಿ ಹನಿ ಉಣಬಡಿಸಿ ಊರಿಗೂರಿಗೆ ದ್ವೇಷದ ನಶೆಯೇರಿಸಿದ್ದಾರೆ

ಈಗೀಗ ಅವರ ಹಸಿವು ನೀಗುತ್ತಿರುವುದು ಕ್ರೌರ್ಯದ ಕತ್ತಿಯಿಂದ ಜಿನಿಗುತ್ತಿರುವ ರಕ್ತದಿಂದ

ನಾನೆಂದು ಕವಿತೆ ಬರೆದವನಲ್ಲ ಎದೆಯೊಳಗಿನ ನೋವಿನ ಪದಗಳನು ಜೋಡಿಸುತ್ತಿರುವೆ ಅಷ್ಟೇ.

ಇತರೆ ಕವಿತೆಗಳು

೧..
ಅವಳ ಮಾತುಗಳು ಅಲ್ಪ ಪ್ರಾಣಗಳಂತೆ
ಕಿವಿಗಳಿಗೆ ನಾಟುತ್ತವೆ
ಅವಳ ಮೌನ ಮಹಾ ಪ್ರಾಣಗಳಂತೆ
ಸೀದ ಹೃದಯಕ್ಕೆ ಅಪ್ಪಳಿಸುತ್ತವೆ
ಅವಳ ಮಾತು ಮತ್ತು ಮೌನದ ಕೊನೆಯಲಿ
ನಾನು ಅನುನಾಸಿಕದಂತೆ.
೨..
ಮಡಿವಂತಿಕೆಯೇ ಶ್ರೇಷ್ಟ ಮೈಲಿಗೆಯು ಅನಿಷ್ಟ ಅಂದುಕೊಂಡಿದ್ದರೆ ಊರಾಚೆಗಿನ ಕಲ್ಲು ಬಂಡೆ ವಿಗ್ರಹವಾಗುತ್ತಿರಲಿಲ್ಲ.
೩..
ಅವಳು ಅಣು ಅಣುವಾಗಿ ಹೃದಯದ
ಆಳವನು ಸೇರಿಕೊಂಡು ಬೇರು ಬಿಟ್ಟಳು
ಅವಳ ಒಲವಿನ ಆಕ್ರಮಣಕೆ
ನಾ ಮರುಮಾತುಗಳಾಡದೆ ಹೆಪ್ಪುಗಟ್ಟಿದೆ. (ಕವಿ:ವಿಜಯ್ ನವಿಲೇಹಾಳು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ17 hours ago

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ...

ದಿನದ ಸುದ್ದಿ17 hours ago

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಿತ್ತೆ ಮಾಧವ್ ವಿಠ್ಠಲ್ ರಾವ್ ರವರಿಗೆ ಕರವೇ(ಪ್ರವೀಣ...

ದಿನದ ಸುದ್ದಿ1 day ago

ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದತ್ತಾಂಶ ನಿರ್ವಾಹಕ ಗ್ರೇಡ್ ‘ಎ’ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ...

ದಿನದ ಸುದ್ದಿ1 day ago

ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಕ್ತ ನಿಧಿ ಅನುದಾನದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗಧಿತ ನಮೂನೆಯ ಅರ್ಜಿಯನ್ನು...

ದಿನದ ಸುದ್ದಿ1 day ago

ಉದ್ಯೋಗ | ಜುಲೈ 15 ರಂದದು ನೇರ ಸಂದರ್ಶನ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ವಾಕ್-ಇನ್-ಇಂಟರ್‍ವೀವ್ ಆಯೋಜಿಸಲಾಗಿದೆ. ವಾಕ್-ಇನ್-ಇಂಟರ್‍ವೀವ್...

ದಿನದ ಸುದ್ದಿ2 days ago

ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೇಲೋಶಿಪ್ ಅಥವಾ ವಿದ್ಯಾರ್ಥಿವೇತನಕ್ಕೆ ಅನ್‍ಲೈನ್ ಮೂಲಕ ಅರ್ಜಿ...

ದಿನದ ಸುದ್ದಿ2 days ago

ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

ಸುದ್ದಿದಿನ,ದಾವಣಗೆರೆ:ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಜುಲೈ 12 ರಂದು ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್...

ದಿನದ ಸುದ್ದಿ2 days ago

ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ

ಸುದ್ದಿದಿನ,ದಾವಣಗೆರೆ:ಇದೇ 12 ರಂದು ಮಧ್ಯಾಹ್ನ 3 ಗಂಟೆಗೆ ನಗರದ ದೊಡ್ಡಬೂದಿಹಾಳ್ ರಸ್ತೆಯಲ್ಲಿರುವ ತಾಜ್ ಪ್ಯಾಲೇಸ್‍ನಲ್ಲಿ ದಾವಣಗೆರೆ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ...

ದಿನದ ಸುದ್ದಿ5 days ago

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ...

ದಿನದ ಸುದ್ದಿ1 week ago

ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್‍ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್...

Trending