Connect with us

ಭಾವ ಭೈರಾಗಿ

ಮನುಷ್ಯ ಏಕಾಂಗಿಯಾಗುತ್ತಿದ್ದಾನೆಯೇ?

Published

on

ನುಷ್ಯನು ಸಹ ಜೀವಿ ಹಾಗೂ ಸಂಘ ಜೀವಿಯೂ ಎಂದು, ಮೊದಲಿನಿಂದಲೂ ಸಹ ಜೀವನ ನಡೆಸಲು ಇಷ್ಟಪಡುತ್ತಾನೆ ಒಬ್ಬಂಟಿಯಾಗಿರಲು ಅವನ ಮನಸ್ಸು ಒಪ್ಪುವುದಿಲ್ಲ. ಎಂದು ಹಿಂದಿನ ಕಾಲದಲ್ಲಿ ಹೇಳಬಹುದಿತ್ತು. ಆದರೆ ಇಂದಿನ ದಿನಗಳಲ್ಲಿ ಎಲ್ಲವೂ ತಲೆಕೆಳಗಾಗಿ ಸಂಘಜೀವಿಯಾದ ಮನುಷ್ಯನು ಏಕಾಂಗಿಯಾಗಿ ತನ್ನ ಪಾಡಿಗೆ ತಾನು ಜೀವನ ನಡೆಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ತನ್ನ ಕೆಲಸಗಳಿಗೆ ಅಥವಾ ಅನಿವಾರ್ಯ ಸನ್ನಿವೇಶ ಬಂದೊದಗಿದ್ದಲ್ಲಿ ಮಾತ್ರ ಎಲ್ಲರನ್ನು ಆಮಂತ್ರಿಸಿ, ಬೆರೆತು ನಂತರ ಮರೆತು ಪುನಃ ಏಕಾಂಗಿಯಾಗಿ ಜೀವಿಸುತ್ತಿರುವುದು ಸಾಮಾನ್ಯವಾಗಿದೆ.

ಹಿಂದಿನ ಕಾಲದಲ್ಲಿ ಎಳೆಯರಾಗಿದ್ದಾಗ ಮಕ್ಕಳು ತಮ್ಮ ಅಕ್ಕಪಕ್ಕದ ಮನೆಯಲ್ಲಿರುವ ಮಕ್ಕಳನ್ನು ಸ್ನೇಹ ಮಾಡಿಕೊಂಡು ಗೋಲಿ, ಲಗೋರಿ, ಚಿನ್ನಿ ದಾಂಡ್ಲು, ಕಬ್ಬಡಿ, ಹೀಗೆ ನಾನಾ ತರಹದ ಆಟವನ್ನು ಆಡುತ್ತಾ ಗೆಳೆಯರೊಂದಿಗೆ ಕಾಲ ಕಳೆದು ಅಕಸ್ಮಾತ್ ಯಾರೂ ಇಲ್ಲದಿದ್ದ ಪಕ್ಷದಲ್ಲಿ ಅಪ್ಪ ಅಮ್ಮನ ಜೊತೆಯಲ್ಲಿ, ಅಣ್ಣ, ತಮ್ಮ ಮತ್ತು ತಂಗಿ, ಇವರೊಂದಿಗೆ ಆಟವಾಡಿ ನಲಿಯುತ್ತಾ ಆಟದ ಜೊತೆಗೆ ಪಾಠವನ್ನು ಕಲಿಯುತ್ತಾ ತನ್ನ ಬಾಲ್ಯದ ದಿನಗಳನ್ನು ಕಳೆಯುತ್ತಿದ್ದುದ್ದನ್ನು ನೋಡಿದ್ದೇವೆ. ದೊಡ್ಡವರಾದಂತೆ ಶಾಲೆ ಕಾಲೇಜಿಗೆ ಸೇರಿ ಅಲ್ಲಿಯ ಸಹಪಾಠಿಗಳ ಜೊತೆಗೆ ಆಟವಾಡಿ ಸಿನಿಮಾ ನಾಟಕದಂತಹ ಮನೋರಂಜನೆ ಪಡೆದು, ಓದು ಮುಗಿದ ನಂತರ ಕಾಲೇಜಿನ ಸಹಪಾಠಿಗಳು ಬೇರೆ ಬೇರೆ ಕೆಲಸಕ್ಕೆ ಸೇರಿದಾಗ ಯಾವ ಸ್ನೇಹಿತರೂ ಇಲ್ಲದೆ ಸ್ವಲ್ಪ ಸಮಯ ಬೇಸರವಾಗುವುದೆಂದು, ಹಳೆಯ ಸಹಪಾಠಿಗಳ ಒಡನಾಟವನ್ನು ಮರೆಯಲಾಗದೆ ತನ್ನ ಹಳೆಯ ಸ್ನೇಹಿತರಿಗೆ ದೂರವಾಣಿ ಮೂಲಕ ಸಂಪರ್ಕವನ್ನು ಇಟ್ಟುಕೊಳ್ಳಬಯಸುವವರು ಇರುವುದರಿಂದ ಕಾಲೇಜಿನ ಶಿಕ್ಷಣ ಮುಗಿಯುವವರೆಗೂ ಏಕಾಂಗಿಯಾಗಿರುವ ಅನುಭವವೇ ಇಲ್ಲದಂತೆ ಆಗಿರುತ್ತದೆ. ಆದರೆ ಈಗ ಕಾಲವು ಸಂಪೂರ್ಣ ಬದಲಾಗಿದೆ. ಶಾಲೆಯಲ್ಲಿರುವ ತನಕ ಆಟ ಪಾಠಗಳು, ಮನೆಗೆ ಬಂದ ತಕ್ಷಣ ಇದೆಲ್ಲವೂ ಮಾಯವಾಗುತ್ತದೆ. ತಂದೆ ತಾಯಿ ಕೆಲಸಕ್ಕೆ ಹೋದಲ್ಲಿ ಮಕ್ಕಳು ಪಕ್ಕದ ಮನೆಯಲ್ಲಿ ಇರುವ ಸನ್ನಿವೇಶ ಸೃಷ್ಠಿಯಾಗಿದೆ. ಆದರೆ ಇತ್ತೀಚೆಗೆ ಎಲ್ಲವೂ ತಲೆಕೆಳಗಾಗಿ, ಅನೇಕ ಕಡೆ ಕೆಲವು ಹುಡುಗರು ಮೂರು ಕಡ್ಡಿಗಳನ್ನು ಅಥವಾ ಕಲ್ಲುಗಳನ್ನು ತಮ್ಮ ಮನೆಯ ಮುಂದೆ ಇಟ್ಟುಕೊಂಡು ಕ್ರಿಕೆಟ್ ಆಟವನ್ನು ಮಾತ್ರ ಆಡುತ್ತಿದ್ದು, ಬೇಸರವಾದರೆ ಅದನ್ನು ಬಿಟ್ಟು ಮೊಬೈಲ್‍ಗಳಲ್ಲಿ ಆಟವಾಡುವುದು ಇತ್ತೀಚಿನ ಹವ್ಯಾಸವಾಗಿದೆ.

ಬೆಂಗಳೂರು ಮತ್ತು ಇತರೆ ನಗರಗಳಲ್ಲಿ ಅನೇಕ ಬಡಾವಣೆಗಳು ತಲೆ ಎತ್ತಿದ್ದು, ಎಲ್ಲಿಂದಲೋ ಜನಗಳು ಬಂದು ವಾಸಮಾಡುತ್ತಿರುವುದರಿಂದ ಇವರಿಗೆ ಪಕ್ಕದ ಮನೆಯ ಸಂಪರ್ಕ ಕೂಡ ಇರುವುದಿಲ್ಲ. ಹೊಸ ಜನಗಳು ಹೊಸ ಪ್ರದೇಶ ಯಾರು? ಹೇಗೋ? ಎಂಬ ಆತಂಕವು ಮನೆ ಮಾಡಿ ಯಾರ ಸಂಪರ್ಕವನ್ನು ಬೆಳೆಸಿಕೊಳ್ಳಲು ಹೋಗುವುದಿಲ್ಲ. ತಾವಾಯಿತು ತಮ್ಮ ಉದ್ಯೋಗವಾಯಿತು ಎಂಬಂತೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಒಬ್ಬರ ಸಂಪರ್ಕ ಇನ್ನೊಬ್ಬರಿಗೆ ಇಲ್ಲದಂತಾಗಿ ಎಲ್ಲರೂ ಏಕಾಂಗಿ ಬದುಕನ್ನು ಸಾಗಿಸುವಂತಹ ಸನ್ನಿವೇಶ ಬಲವಂತವಾಗಿ ಮನುಷ್ಯನ ಮೇಲೆ ಹೇರಿದಂತಾಗಿರುವುದು ಕಟು ಸತ್ಯ. ಹೊಸ ಬಡಾವಣೆಗಳಲ್ಲಿ ಪಕ್ಕದ ಮನೆಗಳಲ್ಲಿ ಏನಾದರೂ ಸಾವು ಸಂಭವಿಸಿದರೂ ಹೋಗಿ ನೋಡವುದೇ ಇಲ್ಲದಂತಾಗಿದ್ದು, ತಮ್ಮ ಮನೆಯ ಮಹಡಿ ಮೇಲೆ ನಿಂತು ಕಾರ್ಯಗಳನ್ನು ನೋಡುತ್ತಿರುವುದು ಕಂಡು ಬಂದಿರುವ ದೃಶ್ಯಗಳು. ದೂರದ ಊರಿನಿಂದ ಬಂದಿರುವ ನೆಂಟರು ಅಥವಾ ಸ್ನೇಹಿತರು ಬಂದು ಎಲ್ಲಾ ಕಾರ್ಯಕ್ರಮಗಳನ್ನು ಮುಗಿಸುವಂತ ಪರಿಸ್ಥಿತಿ ಬಂದೊದಗಿರುವುದು ಮನುಷ್ಯನು ಏಕಾಂಗಿಯಾಗುತ್ತಿರುವುದಕ್ಕೆ ನಿದರ್ಶನವಾಗಿದೆ.

ಹಳೆಯ ಪಟ್ಟಣ ಹಳ್ಳಿಗಳಲ್ಲಿ ವಾಸಿಸುವವರು ಮಾತ್ರ ಇನ್ನೂ ಸ್ವಲ್ಪ ಭಿನ್ನವಾದ ರೀತಿಯ ಜೀವನ ಸಾಗಿಸುತ್ತಿರುವುದು ಕಂಡು ಬಂದಿದ್ದು, ಆದರೂ ಹಳ್ಳಿ ಹಾಗೂ ಸಣ್ಣ ಸಣ್ಣ ಪಟ್ಟಣದಲ್ಲಿರುವ ಯುವಕರು ಯುವತಿಯರು ಜೀವನೋಪಾಯಕ್ಕೆ ದೊಡ್ಡ ನಗರಗಳಲ್ಲಿ ಕೆಲಸಕ್ಕೆ ಸೇರಿಕೊಂಡು ಬೆಳಿಗ್ಗೆ ಪಟ್ಟಣಕ್ಕೆ ಬಂದರೆ ಮನೆಗೆ ವಾಪಸಾಗುವುದು ಸೂರ್ಯ ಮುಳುಗಿ ದೀಪ ಬೆಳಗಿದ ನಂತರವಷ್ಟೇ. ಹೀಗಿದ್ದಾಗ ಯಾರನ್ನೂ ಮಾತನಾಡಿಸದ ಸನ್ನಿವೇಶ ಬಂದಿದೆ. ಹಾಗಾಗಿ ಪರಿಚಯವಿದ್ದರೂ ಕೆಲಸದ ಒತ್ತಡದಿಂದ ಹೆಚ್ಚಿಗೆ ಒಟ್ಟಾಗಿ ಕಾಲ ಕಳೆಯಲು ಆಗುವುದಿಲ್ಲ. ಎಲ್ಲರಿಗೂ ಅವರದೇ ಆದ ಸಂಸಾರ ತಾಪತ್ರಯ, ವೈಯುಕ್ತಿಕ ದ್ವೇಷ ಹೀಗೆ ಹಲವಾರು ಕಾರಣಗಳಿಂದ ಒಬ್ಬರೊನ್ನೊಬ್ಬರು ಬೆರೆತು ಮಾತಾಡಿ ಕಾಲ ಕಳೆಯುವಂತಹ ದಿನಗಳು ನೋಡಲು ಎಲ್ಲೂ ಕಾಣ ಸಿಗುವುದಿಲ್ಲ. ಹಳ್ಳಿಗಳಲ್ಲಿ ಬೇಸಾಯದ ಕೆಲಸ ಮುಗಿದಿದ್ದರೆ ಬಿಡುವಿನ ವೇಳೆಯಲ್ಲಿ ಕೆಲವು ಸ್ನೇಹಿತರುಗಳು ಒಂದುಗೂಡಿ ಮಾತಾಡುತ್ತಾ ಕಾಲ ಕಳೆಯಬಹುದು.

ಕಾಲೇಜು ಓದು ಮುಗಿಸಿ ಕೆಲಸಕ್ಕೆ ಸೇರಿದ ನಂತರ ವಾತಾವರಣವೇ ಸಂಪೂರ್ಣ ಬದಲಾವಣೆಯಾಗಿದ್ದು, ಕೆಲಸ ಮಾಡುವ ಸ್ಥಳಗಳಲ್ಲಿ ದೊರೆಯುವ ಸ್ನೇಹಿತರ ಮನೋಭಾವವೇ ಬೇರೆ ರೀತಿಯದ್ದಾಗಿರುತ್ತದೆ. ಕಾಲೇಜಿನಲ್ಲಿ ಸ್ನೇಹಿತರೊಡನೆ ಆಟವಾಡಿದ್ದಂತೆ ಕೆಲಸದ ಜೊತೆಗಾರರೊಡನೆ ಆಟ ಆಡುವುದಕ್ಕೆ ಆಗುವುದಿಲ್ಲ. ಕಾಲೇಜಿನ ದಿನಗಳಲ್ಲಿ ಯಾವ ರೀತಿಯ ಯೋಚನೆ ಇಲ್ಲದೆ ಬಹಳ ಖುಷಿಯಿಂದ “ವಿದ್ಯಾರ್ಥಿ ಜೀವನವೇ ಚಿನ್ನದ ಜೀವನ ಇದ್ದಂತೆ” ಎಂದು ಎಲ್ಲರೊಡನೆ ಬೆರೆತು ಹಾಡಿ ಕುಣಿದು ಕುಪ್ಪಳಿಸಿ ಆಟವಾಡುವಂತಹ ಸನ್ನಿವೇಶ ಇಲ್ಲಿ ಬರುವುದೇ ಇಲ್ಲ. ಎಲ್ಲರಿಗೂ ಅವರದ್ದೇ ಆದ ಸಂಸಾರದ ಜವಾಬ್ದಾರಿಯು ಹೆಗಲೇರಿರುತ್ತದೆ. ಇದರ ಜೊತೆಗೆ ಕೆಲಸದ ಒತ್ತಡ, ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗುವ ತವಕ, ವಾಹನದ ದಟ್ಟಣೆ ಪ್ರದೇಶಗಳಲ್ಲಿ ಸರಿಯಾದ ಸಮಯಕ್ಕೆ ಕೆಲಸಕ್ಕೆ ಹೋಗುವುದೇ ಒಂದು ದೊಡ್ಡ ಸಾಧನೆಯಾಗಿರುತ್ತದೆ. ಕೆಲಸದ ಸಮಯದಲ್ಲಿ ಸಿಗುವ ಬಿಡುವಿನ ವೇಳೆ ಎಂದರೆ ಊಟದ ಸಮಯ ಕೇವಲ 30 ರಿಂದ 45 ನಿಮಿಷಗಳು ಇರಬಹುದು. ಆದರೆ ಇಷ್ಟು ಕ್ಲುಪ್ತ ಸಮಯದಲ್ಲಿ ಊಟ ಮಾಡಿ ಹೋಗುವುದಕ್ಕೆ ಸಾಲುವುದಿಲ್ಲ. ಮನೆಯಿಂದ ಊಟದ ಡಬ್ಬಿ ತೆಗೆದುಕೊಂಡು ಹೋಗಿದ್ದರೆ ಮಾತ್ರ ಎಲ್ಲರ ಜೊತೆ ಬೆರೆತು ಮಾತಾಡುತ್ತಾ ಊಟ ಮಾಡಿ ಇರುವ ಸ್ವಲ್ಪ ಸಮಯದಲ್ಲಿ ವಿರಮಿಸಬಹುದು. ಊಟ ಮಾಡಲು ಹೋಟೆಲನ್ನು ಅವಲಂಬಿಸಿದ್ದರೆ ಸ್ವಲ್ಪ ವಿರಾಮವೂ ಸಿಗುವುದಿಲ್ಲ. ಬೆಳಿಗ್ಗೆ ಹೋದರೆ ವಾಪಸ್ ಬರುವುದೇ ರಾತ್ರಿಯಾಗಿರುತ್ತದೆ. ಇಂತಹ ಸನ್ನಿವೇಶಗಳಲ್ಲಿ ಆಟ ಹಾಡು ಎಲ್ಲವೂ ಮರೆತಂತೆ ಆಗಿರುತ್ತದೆ. ವಾರಕ್ಕೊಂದು ರಜೆ ಸಿಕ್ಕಿದರೆ ಅದನ್ನು ಮನೆಯಲ್ಲಿರುವ ಬೇರೆ ಕೆಲಸ ನಿರ್ವಹಿಸುವುದಕ್ಕೆ ಸಾಲುವುದಿಲ್ಲ.

ವಿವಾಹವಾಗಿದ್ದರೆ ಮಾತ್ರ ತನ್ನ ಪತ್ನಿಯೇ ಸ್ನೇಹಿತೆ ಅಥವಾ ಸಂಗಾತಿ ಎಂಬುದಾಗಿ ಜೊತೆಯಲ್ಲಿ ಕಾಲ ಕಳೆಯಬಹುದು. ಒಳ್ಳೆಯ ಮಡದಿ ದೊರೆತು ಎಲ್ಲರಲ್ಲೂ ಹೊಂದಿಕೊಂಡು ಹೋಗುವಂತಹ ಮನಸ್ಸುಳ್ಳವಳಾದರೆ ಮಾತ್ರ ತಾನು ಏಕಾಂಗಿ ಎಂಬುದನ್ನು ಮರೆತು ಸಂತೋಷದಿಂದ ಕಾಲ ಕಳೆಯಬಹುದು. ಇಲ್ಲದಿದ್ದರೆ ಮದುವೆಯಾದರೂ ಏಕಾಂಗಿಯಂತೆ ಬದುಕನ್ನು ಸಾಗಿಸಬೇಕಾದ ಅನಿವಾರ್ಯತೆ ಉಂಟಾಗುತ್ತದೆ. ಕಛೇರಿಯಲ್ಲಿ ಒಂದು ರೀತಿಯ ಕೆಲಸದ ಕಿರಿ ಕಿರಿಯಾಗಿ, ಮನೆಯಲ್ಲಿ ಮಡದಿಯ ಕಿರಿಕಿರಿ ಉಂಟಾದರೆ ಎಲ್ಲಿ ಹೋಗಿ ಬದುಕುವುದು ಎಂಬ ಆಲೋಚನೆ ಹಾಗೂ ಜೀವನದಲ್ಲಿಯೇ ಜಿಗುಪ್ಸೆ ಉಂಟಾಗುತ್ತದೆ. ಮಕ್ಕಳಿಗಾಗಿ ಎಲ್ಲವನ್ನೂ ಸಹಿಸಿಕೊಂಡು ಜೀವನವನ್ನು ದೂಡುವಂತ ಸನ್ನಿವೇಶ ನಿರ್ಮಾಣವಾದರೂ ಆಶ್ಚರ್ಯವಿಲ್ಲ. ಇದರ ಜೊತೆಗೆ ಹೆತ್ತವರ ಯೋಗಕ್ಷೇಮ, ಮಡದಿ ಮಕ್ಕಳ ಯೋಗಕ್ಷೇಮ ಇವೆಲ್ಲವನ್ನೂ ನೋಡಿ ಕೊಳ್ಳುವುದೇ ಒಂದು ಸಾಹಸದಂತೆ ಆಗಿರುತ್ತದೆ. ಕಛೇರಿಯಿಂದ ಬಂದೊಡನೇ ಶಾಪಿಂಗ್‍ಗೆ ಮಕ್ಕಳಿಗೆ ಮೈಯಲ್ಲಿ ಹುಷಾರಿಲ್ಲದಿದ್ದರೆ ವೈದ್ಯರನ್ನು ನೋಡಲು ಹೋಗಬೇಕಾದ ಪ್ರಸಂಗ ಬರಬಹುದು. ಇವೆಲ್ಲ ಕಾರ್ಯಗಳು ಮುಗಿಯುವ ಹೊತ್ತಿಗೆ ಸುಸ್ತಾಗಿ ಹಾಸಿಗೆ ಕಂಡರೆ ಸಾಕು ಎಂಬಂತೆ ಆಗಿದ್ದರೆ ಏನೂ ಕೇಳದೆ ಸೇರಿದ್ದನ್ನು ತಿಂದು ಹೋಗಿ ಮಲಗಿಬಿಡಬಹುದು. ಏನೂ ಕೆಲಸವಿಲ್ಲದಿದ್ದರೆ ಮನೋರಂಜನೆಗಾಗಿ ದೂರದರ್ಶನವನ್ನು ವೀಕ್ಷಿಸುತ್ತಾ ಕಾಲ ಕಳೆಯಬಹುದು. ಹೀಗಾಗಿ ಯಾರೊಬ್ಬರ ಒಡನಾಟವೂ ಸಿಗುವುದಿಲ್ಲ. ಸಿಕ್ಕಿದರೂ ಅಪರೂಪವಾಗಿರುತ್ತದೆ. ಸಾಲು ಸಾಲು ರಜೆ ಸಿಕ್ಕಿದರೆ ತನ್ನ ಸಂಸಾರದವರೊಡನೆ ದೂರ ಪ್ರವಾಸ ಕೈಗೊಂಡು, ತನ್ನ ಸಂಸಾರದ ಸದಸ್ಯರ ಜೊತೆ ಮಾತ್ರ ಸುತ್ತಾಡಿ ಬರಬಹುದು. ಆರ್ಥಿಕವಾಗಿ ಸದೃಡನಾಗಿದ್ದರೆ ರಜಾ ದಿನಗಳಲ್ಲಿ ಪ್ರವಾಸ ಕೈಗೊಳ್ಳ ಬಹುದು. ಬರುವ ಸಂಬಳದಲ್ಲಿ ಸಂಸಾರ ನಿರ್ವಹಣೆ ಮಾಡಬೇಕು, ಇದರ ಜೊತೆಗೆ ಮಕ್ಕಳ ವಿದ್ಯಾಭ್ಯಾಸದ ಖರ್ಚು, ಹಬ್ಬಗಳಲ್ಲಿ ಮಕ್ಕಳಿಗೆ ಹೊಸ ಬಟ್ಟೆ ಖರೀದಿಸಲು ಆಗುವ ಖರ್ಚು, ಮನೆಯವರಿಗೆ ಆರೋಗ್ಯ ಎರುಪೇರಾದರೆ ವೈದ್ಯಕೀಯ ವೆಚ್ಚ ಇವೆಲ್ಲವನ್ನೂ ಸರಿದೂಗಿಸಬೇಕಾದ ಪ್ರಸಂಗ ಇರುತ್ತದೆ. ಇವೆಲ್ಲದರ ನಡುವೆ ಪ್ರವಾಸದ ಖರ್ಚುನ್ನು ಹೊಂದಿಸಲು ಬಹಳ ಕಷ್ಟವಾಗಿ ಮನೆಯ ಸಂಸಾರದ ಖರ್ಚು ಸರಿದೂಗಿದರೆ ಸಾಕು ಎಂದು ಯಾವ ಪ್ರವಾಸವೂ ಬೇಡ ಎಂದು ಕೈಚೆಲ್ಲಬಹುದು.

ಈಗಿನ ಕಾಲದಲ್ಲಿ ವಿಜ್ಞಾನ ಮುಂದುವರೆದು ಮನೆ ಮನೆಯಲ್ಲಿಯೂ ಟಿ.ವಿ. ನೂರಾರು ಚಾನಲ್ ಗಳು ವಿಧ ವಿಧವಾದ ಕಾರ್ಯಕ್ರಮಗಳು ಪ್ರಸಾರವಾಗುತ್ತಿರುವುದರಿಂದ ಎಲ್ಲರೂ ಟಿ.ವಿಗೆ ದಾಸರಾಗಿರುವ ಸನ್ನಿವೇಶ ಸೃಷ್ಠಿಯಾಗಿದೆ. ಒಳ್ಳೆಯ ಕಾರ್ಯಕ್ರಮ ಪ್ರಸಾರವಾಗುತ್ತಾ ಇರುವ ಸಮಯದಲ್ಲಿ ಅಪರೂಪಕ್ಕೆ ಯಾರಾದರೂ ಸ್ನೇಹಿತರು ಅಥವಾ ನೆಂಟರೋ ಬಂದರೆ ಈ ಕಡೆ ಕಾರ್ಯಕ್ರಮ ನೋಡಲು ಆಸೆ ಸ್ನೇಹಿತರನ್ನು ಮಾತಾಡಿಸಬೇಕಾಗಿರುವ ಅನಿವಾರ್ಯ ಸನ್ನಿವೇಶ ಬಂದು ಏಕಪ್ಪಾ ಇವರು ಈ ಹೊತ್ತಿನಲ್ಲಿ ಬಂದರೂ ಎಂದು ಪಶ್ಚಾತ್ತಾಪ ಪಟ್ಟರೂ ಆಶ್ಚರ್ಯವಿಲ್ಲ. ಟಿ.ವಿಯ ಮುಂದೆ ಕುಳಿತರೆ ಯಾರೂ ಬೇಡ ಎಂಬ ಮನೋಭಾವ ಬಂದು ಬಿಟ್ಟಿರುತ್ತದೆ. ಪ್ರಪಂಚದ ಆಗುಹೋಗುಗಳು ಜೊತೆಗೆ ಮನರಂಜನೆ ಕಾರ್ಯಕ್ರಮಗಳು ಒಂದೇ ಸಮನೆ ಬಿತ್ತರವಾಗುತ್ತಿರುವಾಗ ಬೇರೆ ಜನಗಳ ಒಡನಾಟವೇಕೆ ಎಂಬ ಮನೋಭಾವ ಬಂದಿದೆ. ಇದೂ ಸಾಲದೆಂಬಂತೆ ಪ್ರತಿಯೊಬ್ಬರ ಬಳಿಯಲ್ಲೂ ಮೊಬೈಲ್ ಬಂದಿರುವುದರಿಂದ ಎಲ್ಲರೂ ತಮ್ಮದೇ ಆದ ಲೋಕದಲ್ಲಿ ಮೈಮರೆತಿರುತ್ತಾರೆ. ಬೆಳಿಗಿನಿಂದ ದಿನಪೂರ್ತಿ ದೂರದರ್ಶನದ ಕಾರ್ಯಕ್ರಮಗಳು, ಫೇಸ್ ಬುಕ್, ವಾಟ್ಸಾಪ್ ಹಾಗೂ ಇನ್ನಿತರೆ ಸಂದೇಶ ರವಾನಿಸುವ ಮಾದ್ಯಮಗಳು ಹಾಡು, ನೃತ್ಯ ಸಿನಿಮಾ ಕ್ರೀಡೆ ಹೀಗೆ ಅನೇಕ ಮನರಂಜನೆ ಕೈಯಲ್ಲೇ ನೋಡಬೇಕಾದರೆ ಬೇರೆಯವರ ಸಹವಾಸ ನಮಗೇಕೆ ಬೇಕು ಎನ್ನುವ ಮನೋಭಾವನೆ ಮನೆ ಮಾಡಿರುತ್ತದೆ. ಏಕಾಂಗಿ ಯಾಗಿ ಕಾರ್ಯಕ್ರಮ ವೀಕ್ಷಿಸುತ್ತಾ ಕುಳಿತು ಹೊತ್ತಿಗೆ ಸರಿಯಾಗಿ ಊಟ ತಿಂಡಿ ಕುಳಿತಲ್ಲಿಗೆ ಬರುವುದರಿಂದ ಬೇರೆ ಯೋಚನೆಯನ್ನು ಕನಸು ಮನಸ್ಸಿನಲ್ಲಿಯೂ ಮಾಡದಂತ ಸನ್ನಿವೇಶ ಬಂದಿದ್ದು, ಮನುಷ್ಯನು ಏಕಾಂಗಿಯಾಗಿ ತನ್ನದೇ ಆದ ಲೋಕದಲ್ಲಿ ವಿಹರಿಸುವಂತೆ ಆಗಿದೆ. ವಿದ್ಯಾರ್ಥಿಯ ರಾದಿಯಾಗಿ ಎಲ್ಲರೂ ಇದಕ್ಕೆ ಮಾರುಹೋಗಿದ್ದು, ಬೇರೆಯವರೊಡನೆ ಕಲೆತು ಆಟ ಆಡುವುದು ಅಪರೂಪವಾಗಿದೆ. ಮೊಬೈಲ್‍ನಲ್ಲಿಯೇ ಅಥವಾ ಕಂಪ್ಯೂಟರ್‍ನಲ್ಲಿ ಯಾವುದಾದರೂ ಗೇಮನ್ನು ಆಡುತ್ತಾ ಕಾಲ ಕಳೆಯುವ ಅದೆಷ್ಟೋ ಮಂದಿಗೆ ಏಕಾಂಗಿ ಬದುಕೇ ಹಿತವಾಗಿರುವಂತೆ ಗೋಚರಿಸುತ್ತಿದೆ.

ಒಟ್ಟಿನಲ್ಲಿ ಹೇಳುವುದಾದರೆ ವಿಜ್ಞಾನದ ಅವಿಷ್ಕಾರದಿಂದ ಪ್ರಪಂಚದ ಆಗುಹೋಗುಗಳನ್ನು ಎಲ್ಲರೂ ತಮ್ಮ ತಮ್ಮ ಅಂಗೈಯಲ್ಲಿರುವ ಮೊಬೈಲ್‍ನಲ್ಲಿ ನೋಡುವಂತಹ ಅವಕಾಶ ಒದಗಿಬಂದಿರುವುದರಿಂದ ಪ್ರಪಂಚವೇ ಕಿರಿದಾಗುತ್ತಾ ಇದೆಯೇನೋ ಎಂಬಂತೆ ಭಾಸವಾಗಿದ್ದು, ಅದಕ್ಕೆ ತಕ್ಕಂತೆ ಸಂಘ ಜೀವಿಯಾಗಿದ್ದ ಮನುಷ್ಯನು ಇತ್ತೀಚಿನ ದಿನಗಳಲ್ಲಿ ಏಕಾಂಗಿಯಾಗುತ್ತಿರುವುದು ನಿಜಕ್ಕೂ ವಿಷಾದನೀಯ ವಾದ ಸಂಗತಿಯಾಗಿದೆ.

ಲೇಖಕರು: ಎನ್.ಮುರಳೀಧರ್
ಕಾವ್ಯನಾಮ: ಮುರಳಿಮಂಗಲಧರೆ
ವಕೀಲರು
ನೆಲಮಂಗಲ

ದಿನದ ಸುದ್ದಿ

ಕವಿತೆ | ನೆನಪು

Published

on

ಕವಿ | ರುದ್ರಪ್ಪ ಹನಗವಾಡಿ
  • ರುದ್ರಪ್ಪ ಹನಗವಾಡಿ

ಅಪ್ಪನನ್ನು ಒಪ್ಪ ಮಾಡಿ
ವರ್ಷಗಳೇ ಕಳೆದವು ಮುವ್ವತ್ತೇಳು
ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ
ಅರಸರ ಮೀಸಲಾತಿ
ಬಸವಲಿಂಗಪ್ಪನವರ ಬೂಸಾ ಖ್ಯಾತಿ
ಮಲ ಹೊತ್ತು
ಮಲಗಿದ್ದ ಕಾಲಕ್ಕೆ
ಚುರುಕು ಮುಟ್ಟಿಸಿದ ಕಾಲ

ಹರೆಯದ ನನಗೆ
ಕಾಲೇಜ ಮೇಷ್ಟರ ಕೆಲಸ
ಸೂಟು ಬೂಟಿನ ವೇಷ
ಆ ಮೇಲೆ ಅಮಲದಾರಿಕೆ
ಎಲ್ಲ ನಡೆದಾಗಲೇ ಅವ್ವನನ್ನು
ಆಸ್ಪತ್ರೆಗೆ ಸೇರಿಸಿದ್ದು
ಕಾಲ ಕಳೆದು ಕೊಂಡು
ಕೋಲ ಹಿಡಿದದ್ದು
ನಿನ್ನೆ ಮೊನ್ನೆಯಂತೆ
ಬಾಲ್ಯವಿನ್ನು ಉಂಟೆಂಬಂತೆ
ಭಾವಿಸುವಾಗಲೇ ಅವ್ವನ ಸಾವು

ಅದರೊಟ್ಟಿಗೆ ಕಾಯದಾಯಾಸ ತೀರಿಸಲು
ಬಂದರೆ ಬೆಂಗಳೂರಿಗೆ
ರೌಡಿಗಳ ಕಾಟ
ಅಂಬೇಡ್ಕರ್ ಪಟದ ಕೆಳಗೆ
ದೌರ್ಜನ್ಯದ ದಂಡು

ಅಮಾಯಕರಿಗೆ ಗುಂಡು
ಕಂಡುಂಡ ಹಾದಿಯ ಗುಡಿಸಲುಗಳಲ್ಲೀಗ
ಮುಗಿಲು ಮುಟ್ಟೋ ಮಹಲುಗಳು
ಅಂತಲ್ಲಿ
ದೇಶ ವಿದೇಶಗಳ
ಅಹವಾಲುಗಳು
ಅವಿವೇಕಗಳು
ನೋಡ ನೋಡುತ್ತಿದ್ದಂತೆ
ಉಸಿರು ಬಿಗಿಹಿಡಿದ ಜನರ ಒಳಗೆ
ಒಳಪದರಗಳೊಳಗೆ ಕನಸ ಬಿತ್ತಿ
ಹಸಿರ ಹೊನ್ನು ಬಾಚಲು ಹವಣಿಸಿದ
ಬಿಳಿ ಜನರ ಆಟ
ಅರ್ಥವಾಗುವುದೇ ಎಲ್ಲ
ಗೋಣ ನೀಡುವರೆ
ಹೂತಿಟ್ಟ ಗೂಟಕ್ಕೆ ?

( ಚಿಂತಕ ರುದ್ರಪ್ಪ ಹನಗವಾಡಿ ಅವರ ‘ಊರು – ಬಳಗ’ ಕವನ ಸಂಕಲನದಿಂದ ‘ ನೆನಪು ‘ ಕವಿತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕೃತಿಯನ್ನು ಫ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ 2013 ರಲ್ಲಿ ಪ್ರಕಿಸಿದೆ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಮಣ್ಣ ಮಕ್ಕಳು

Published

on

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ
  • ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ

ಮಣ್ಣ ಮಕ್ಕಳು ನಾವು
ಹಗಳಿರುಳೆನ್ನದೆ ಬೆವರು ಬಸಿದು
ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು
ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ
ಕಸುಬಿಗೆ ಆಳಾದವರು ಸವಳು ನೀರಲಿ ಮೈತೊಳೆದು
ಚಿಂದಿ ಅಂಗಿಯಲಿ ಶಾಲೆಗೆ ದಾಖಲಾದವರು.

ಬರಿಗಾಲಲಿ ಕಾಡು ದಾರಿಯಲಿ ಮೈಲು ದೂರ ನಡೆದು
ನೆಗ್ಗಿಲ ಮುಳ್ಳು ತುಳಿದವರು ; ನಿಬ್ಬು ನೆಗ್ಗಿದ ಪೆನ್ನಿನಲಿ
ಹೆಸರು ಬರೆಯಲು ಕಲಿತವರು ಹರಿದ ಪಠ್ಯದಲಿ ಅಕ್ಷರ ಹುಡುಕಿ ಒಡೆದ ಪ್ಲೇಟಿನಲಿ ಬರೆದವರು.

ತೂತು ಬಿದ್ದ ಸೂರಿನಲಿ ಇಣುಕಿದ ಚುಕ್ಕಿ ಚಂದ್ರಮರ ನೋಡಿ
ವಿದ್ಯುತ್ ದೀಪದ ಕನಸು ಕಂಡವರು
ಮೋಸ ವಂಚನೆಗೆ ಬಗ್ಗದೆ ಶೋಷಣೆಗೆ ಸಿಡಿದವರು
ಮಣ್ಣ ಮಕ್ಕಳು ನಾವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಬಿ.ಶ್ರೀನಿವಾಸ ಅವರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿಯ ಕುರಿತು

Published

on


ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ.

ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು ಎತ್ತಿಹಿಡಿಯುವ ಗೆಳೆಯ ಶ್ರೀನಿವಾಸ *ಧೂಳನ್ನೇ ಅಕ್ಷರಗಳನ್ನಾಗಿಸಿದ ಲೇಖಕ.

  • ಬಸವರಾಜ ಹೂಗಾರ

ಇಲ್ಲಿನ ಹುಚ್ಚರ ಕತೆಗಳನ್ನು ಓದುವಾಗ ಕುಂ.ವೀ.ಯವರ ಹಾಗೂ ಸಾದತ್ ಹಸನ್ ಮಾಂಟೋ ಅವರ ಹುಚ್ಚರ ಕತೆಗಳು ನೆನಪಾಗುತ್ತವೆ.ಇಲ್ಲಿನ ನತದೃಷ್ಟರ ಬದುಕನ್ನು ಹಿಡಿದಿಡಲು ಲೇಖಕರು ಕಂಡುಕೊಂಡಿರುವ ಅಭಿವ್ಯಕ್ತಿ ವಿನ್ಯಾಸ ವಿಶಿಷ್ಟವಾಗಿದೆ. ಬರಹಗಳು ದೀರ್ಘವಾಗಿಲ್ಲ. ಚುಟುಕಾಗಿವೆ. ಕವನಗಳೊ, ಗದ್ಯಗಳೊ ಎಂದು ಹೇಳಲಾಗದ ರೂಪದಲ್ಲಿವೆ.

ಗಾಢವಾದ ಅರ್ಥವನ್ನು ಕೆಲವೇ ಸಾಲುಗಳಲ್ಲಿ ವ್ಯಂಗ್ಯ ಮತ್ತು ವಿಡಂಬನೆಗಳಲ್ಲಿ ಹಿಡಿಯಲು ಯತ್ನಿಸುತ್ತವೆ.
ಇಲ್ಲಿರುವ ಲೋಕದ ನೋವಿಗೆ ಮಿಡಿವ ಸಂವೇದನೆ,ಓದುವ ಓದುಗರನ್ನೂ ಆವರಿಸಿಕೊಂಡು,ಚಿಂತನೆಗೆ ಹಚ್ಚುತ್ತದೆ.ಓದುತ್ತ,ಓದುತ್ತಾ ನಿಟ್ಟುಸಿರು ಹೊಮ್ಮುತ್ತದೆ.ಮನಸ್ಸು ಮಂಕಾಗುತ್ತದೆ.ಇಂತಹ ಬರಹಗಳನ್ನು ಕೊಟ್ಟಿರುವ ಶ್ರೀನಿವಾಸ ತಮ್ಮ ಅಂತಃಕರಣ ,ಚೂಪಾದ ಗ್ರಹಿಕೆ,ಆಳವಾದ ಸಂವೇದನೆಗಳನ್ನು ಇತರೆ ಪ್ರಕಾರಗಳಲ್ಲಿಯೂ ಪ್ರಕಟಿಸುವ ಜರೂರಿಯಿದೆ.

  • ಡಾ.ರಹಮತ್ ತರೀಕೆರೆ

ಒಬ್ಬ ಮನುಷ್ಯ ಮತ್ತೊಬ್ಬನನ್ನು ಕಿತ್ತು ತಿನ್ನಬಾರದು.ಹೊಟ್ಟೆಪಾಡಿಗಾಗಿ ನಿರ್ವಹಿಸುವ ಪ್ರತಿ ಕೆಲಸವೂ ಸೃಜನಶೀಲವಾಗಿರಬೇಕು-ಎಂಬ ಧಾವಂತದಲ್ಲಿ ಹುಟ್ಟಿದ ಮನದ ಪ್ರಕ್ರಿಯೆಗಳಿಗೆಲ್ಲ ಇಲ್ಲಿ ಹರಡಿಕೊಂಡಿವೆ.

  • ಬಿ.ಶ್ರೀನಿವಾಸ,ಕೃತಿ ಲೇಖಕ

ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು ನೊಂದವರ ಮನದಲ್ಲಿ ಅಲ್ಪಾವಧಿ ಗುರುತು ಮೂಡಿಸಬಹುದು ನಿಮ್ಮ ಈ ಪುಸ್ತಕ ಮತ್ತು ಅದರಲ್ಲಿರುವ ಎಷ್ಟೋ ವಿಚಾರಗಳು ನನ್ನನ್ನು ಡಿಸ್ಟರ್ಬ್ ಮಾಡಿವೆ. ಕೇವಲ ವಾಟ್ಸಾಪ್ ಲೈನ್ ಸಾಕಾಗಲ್ಲ ಎದುರುಗಡೆ ಕುಳಿತು ಇನ್ನು ಹೆಚ್ಚು ತಿಳಿದುಕೊಳ್ಳಬೇಕೇನಿಸುತ್ತದೆ. ಸಂಡೂರಿನ ದಾರುಣ ಚಿತ್ರಗಳನ್ನು,ಕೋರ್ಟಿನ ಚಿತ್ರಗಳನ್ನು,ಬದುಕಿನ ಚಿತ್ರಗಳನ್ನು ಕಣ್ಣಿಗೆ ರಾಚುವಂತೆ ಮೂಡಿಸಿದ್ದೀರಿ.

ಸಾವಿಗಿಂತ ಹಸಿವು ಬಹಳ ಕ್ರೂರಿ ಎನ್ನುವುದು: ನೋವಿನ ಬದಲು ಹಸಿವಿನ ಏಟುಗಳು ಬೀಳಬೇಕಿತ್ತು ಎನ್ನುವ ಸಾಲುಗಳಂತೂ Geographical Hungrey ಪುಸ್ತಕ ನೆನಪಿಸುತ್ತವೆ. ಸೊಂಡೂರಿನ ಚಿತ್ರಗಳ ಮೂಡಿಸಿದೆ ಗಾಢ ವಿಷಾದತೆ, ನನ್ನನ್ನು ಹೊರಬರಲು ಬಿಡುತ್ತಿಲ್ಲ.

“ಉಳ್ಳವರು ಹೊತ್ತ ಮೂಟೆಗಳಲ್ಲಿ ಬಡವರ ಹಸಿವಿನದ್ದೇ ಭಾರ”ಇವೆಲ್ಲ ಹಸಿವನ್ನು ಅನುಭವಿಸಿದವರಿಗೆ ಮಾತ್ರ ಸರಿಯಾಗಿ ಅರ್ಥವಾಗುವ ಸಾಲುಗಳು.

ಇನ್ನು ,ಕೋರ್ಟಿನ ಚಿತ್ರಗಳು, ಎಷ್ಟು ಜನ ಇರ್ತಾರೆ ಇವನ್ನೆಲ್ಲ ಸೂಕ್ಷ್ಮ ವಾಗಿ ತಿಳಿದುಕೊಳ್ಳುವವರು ?
ಶಾಲೆ ಹಿಂದೆ ತಿರುಗಬಾರದು ಕೋರ್ಟ್ ಕಚೇರಿ ಮುಂದೆ ತಿರುಗಬಾರದು ಎಂದು ನಮ್ಮ ಜನಪದರು ಹೇಳ್ವ ಮಾತು ಎಷ್ಟೋ ಸಲ ಸತ್ಯ ಎನಿಸುತ್ತದೆ.

ನೀವು ಹಿಡಿದಿಟ್ಟ ಬದುಕಿನ ಚಿತ್ರಗಳಲ್ಲಿನ “ಶವಪೆಟ್ಟಿಗೆ ಸಣ್ಣದಿದ್ದಷ್ಟು ಹೊರುವುದು ಬಹಳ ಕಷ್ಟ “ಎಂಬ ಮಾತಂತೂ ಚಿಕ್ಕಮಕ್ಕಳ ತಂದೆತಾಯಿಯರ ಕಣ್ಣಲ್ಲಿ ನೀರು ತರಿಸುವುದು.

ತಲೆ ಮ್ಯಾಲೆ ಮಲ ಸುರುವಿಕೊಂಡೆವಲ್ಲ ಸರ್ ಅವತ್ತೇ… ನಾವ್ ಹುಟ್ಟಿದ್ದು ಎನ್ನುವ ಸವಣೂರಿನ ಭಂಗಿಯ ಮಾತನ್ನು ಎಷ್ಟು ಅರ್ಥಗರ್ಭಿತವಾಗಿ ಸೋ ಕಾಲ್ಡ್ ಸೊಸೈಟಿಗೆ ಮುಟ್ಟಿ ನೋಡಿಕೊಳ್ಳುವಂತೆ ಬರೆದಿದ್ದೀರಿ. ಆಕೆ ಏನನ್ನೋ ಆಯ್ಕೆ ಮಾಡಿಕೊಂಡಿದ್ದಾಳೆ ಎಂಬ ವಿಚಾರಗಳು ಕೇವಲ ವಿಚಾರಗಳಲ್ಲ ,ಬದುಕಿನ ಸತ್ಯ ಚಿತ್ರಣಗಳು ದಿನ ನಿತ್ಯ ನಮ್ಮ ನಡುವೆ ನಡೆಯುವಂತವು.ಅವನ್ನು ಕಾಣುವಂತ ದೃಷ್ಟಿ ಇದ್ದವರಿಗೆ ಮಾತ್ರ ಇವು ಕಾಣುತ್ತವೆ ಸರ್ .
ನಿಮ್ಮ ನೈಜ ದೃಷ್ಟಿಗೆ ದನ್ಯವಾದಗಳು ಸರ್, ಉಳಿದದ್ದು ಎದುರು ಬದುರು ಕುಳಿತು ಮಾತಾಡೋಣ

  • ಡಾ.ರಾಮಚಂದ್ರ ಹಂಸನೂರು, ಬೆಟಗೇರಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ8 hours ago

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕಳೆದ...

ದಿನದ ಸುದ್ದಿ9 hours ago

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು...

ದಿನದ ಸುದ್ದಿ9 hours ago

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ. ಅದೇ ರೀತಿ...

ದಿನದ ಸುದ್ದಿ9 hours ago

ದೀನ ದಯಾಳ್ ಅಂತ್ಯೋದಯ ಯೋಜನೆ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಹೊನ್ನಾಳಿ ಪಟ್ಟಣದ ಸಾರ್ವಜನಿಕರಿಗೆ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ವ್ಯಕ್ತಿಗತ ಉದ್ಯಮಶೀಲತೆ...

ದಿನದ ಸುದ್ದಿ10 hours ago

ಐತಿಹಾಸಿಕ, ಪಾರಂಪರಿಕ ದೇವಾಲಯಗಳು ಶಾಸನಗಳು, ವೀರಗಲ್ಲು, ಸ್ಮಾರಕಗಳ ಸಂರಕ್ಷಣೆ ; ಸಾರ್ವಜನಿಕರ ಸಹಕಾರ ಅಗತ್ಯ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಇತಿಹಾಸದ ಶಾಸನಗಳು, ದೇವಾಲಯಗಳು, ಸ್ಮಾರಕಗಳು ಸೇರಿದಂತೆ ಸ್ಥಳಗಳಿದ್ದಲ್ಲಿ ಸಾರ್ವಜನಿಕರು ತಮ್ಮ ತಾಲ್ಲೂಕು, ಊರು, ಗ್ರಾಮಗಳಲ್ಲಿ ವಿನಾಶದ ಸ್ಥಿತಿಯಲ್ಲಿರುವ ದೇವಾಲಯಗಳು, ಶಾಸನಗಳು, ವೀರಗಲ್ಲುಗಳು, ಕೋಟೆಗಳು,...

ದಿನದ ಸುದ್ದಿ10 hours ago

ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ ; ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮದಲ್ಲಿನ ಮೊರಾರ್ಜಿ...

ದಿನದ ಸುದ್ದಿ14 hours ago

ಮುಂದಿನ ವರ್ಷದಿಂದ 10ನೇ ತರಗತಿಗೆ ಕೃಪಾಂಕ ರದ್ದು ; ಸಚಿವ ಮಧುಬಂಗಾರಪ್ಪ

ಸುದ್ದಿದಿನ, ಚಿಕ್ಕಮಗಳೂರು : ಪರೀಕ್ಷೆಯಲ್ಲಿ ಪಾವಿತ್ರತೆ ಮತ್ತು ಶಿಸ್ತು ಕಾಪಾಡುವ ಉದ್ದೇಶದಿಂದ ಈ ವರ್ಷ ಹತ್ತನೆ ತರಗತಿ ವಿಧ್ಯಾರ್ಥಿಗಳಿಗೆ ಶೇಕಡ 20 ರಷ್ಟು ಕೃಪಾಂಕಗಳನ್ನು ನೀಡಲಾಗಿದೆ. ಇದು...

ದಿನದ ಸುದ್ದಿ1 day ago

ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರಂಭ; ಕೃಷಿ ಚಟುವಟಿಕೆ ಆರಂಭ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ,...

ದಿನದ ಸುದ್ದಿ1 day ago

ಮೇಲ್ಮನೆಯ ಆರು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಪ್ರಗತಿಯಲ್ಲಿ ; ಕಣದಲ್ಲಿ 103 ಅಭ್ಯರ್ಥಿಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಆರಂಭಗೊಂಡಿದೆ. ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು...

ದಿನದ ಸುದ್ದಿ1 day ago

ವಸತಿ ಶಾಲೆಯಲ್ಲಿನ 7, 8 ಮತ್ತು 9ನೇ ತರಗತಿಗಳಲ್ಲಿನ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಡೆಸುವ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ...

Trending