ದಿನದ ಸುದ್ದಿ
ಅಮರನಾಥ ಯಾತ್ರಿಗಳ ಮೇಲೆ ದಾಳಿ ಮಾಡಲು ಸ್ಕೆಚ್ ಹಾಕಿದ್ದ ಐಸಿಸ್ ಉಗ್ರರು
ಸುದ್ದಿದಿನ ಡೆಸ್ಕ್ : ಕಾಶ್ಮೀರದಲ್ಲಿ ಶುಕ್ರವಾರ ಭಾರತೀಯ ಸೇನಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತರಾದ ಕಾಶ್ಮೀರ ಐಸಿಸ್ ಮುಖ್ಯಸ್ಥ ದಾವೂದ್ ಅಹ್ಮದ್ ಸೋಫಿ ಸೇರಿದಂತೆ ಮೂವರು ಉಗ್ರರು ಅಮರನಾಥ ಯಾತ್ರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸ್ಕೆಚ್ ಹಾಕಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ.
ಕಾಶ್ಮೀರದ ಯುವಕರನ್ನು ಸೆಳೆಯುವ ನಿಟ್ಟಿನಲ್ಲಿ ತೆಹ್ರಿಕ್ ಉಲ್ ಮಜಾಹಿದ್ದೀನ್ ಸಂಘಟನೆಯು ತನ್ನ ಹೆಸರನ್ನು ಐಎಸ್ಕೆಜೆ ಎಂದು ಬದಲಾಯಿಸಿಕೊಂಡು ಕಾರ್ಯ ನಿರ್ವಹಿಸುತ್ತಿತ್ತು 1990ರಿಂದಲೂ ಕಣಿವೆ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಈ ಉಗ್ರರು ಕಣಿವೆ ರಾಜ್ಯದಲ್ಲಿ ನಡೆದ ಹಲವು ಹಿಂಸಾತ್ಮಕ ಕೃತ್ಯಗಳನ್ನು ಎಸಗಿವೆ ಎಂದು ತಿಳಿದುಬಂದಿದೆ.
21 ಉಗ್ರರು ಕಣಿವೆಯಲ್ಲಿ
ಭಾರತೀಯ ಭದ್ರತಾಪಡೆಯ ಹಿಟ್ಲಿಸ್ಟ್ನಲ್ಲಿರುವ 21 ಉಗ್ರರು ಕಾಶ್ಮೀರದಲ್ಲಿ ಅವಿತುಕೊಂಡಿದ್ದಾರೆ. ಅವರನ್ನೆಲ್ಲ ಒಂದೇ ಕಾರ್ಯಾಚರಣೆಯಲ್ಲಿ ಮುಗಿಸಬೇಕೆಂಬುದು ಸೇನೆ ಮುಂದಿರುವ ಸವಾಲು.
ತೆಹ್ರಿಕ್ ಉಲ್ ಮುಜಾಹಿದೀನ್ ಸಂಘಟನೆಯ ಅನೇಕ ಉಗ್ರರು ಸೇನಾಪಡೆಯಿಂದ ಶಸ್ತ್ರಾಸ್ತ್ರಗಳನ್ನುಕಸಿದ ಹಾಗೂ ವಿವಿಧ ಉಗ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅಂದಹಾಗೆ ಈ ಪೈಕಿ ಆರು ಮಂದಿ ಎ+++ ವರ್ಗಕ್ಕೆ ಸೇರಿದವರಾಗಿದ್ದಾರೆ. ಎ+++ ವರ್ಗಕ್ಕೆ ಸೇರಿದ ಉಗ್ರರು ಸಂಘಟನೆಯ ಉನ್ನತ ಸ್ಥಾನದಲ್ಲಿರುತ್ತಾರೆ. ಅವರ ಬಗ್ಗೆ ಮಾಹಿತಿ ನೀಡಿದವರಿಗೆ 12 ಲಕ್ಷ ರೂ. ಇನಾಮು ನೀಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಬಿಗ್ ಬಾಸ್ ಖ್ಯಾತಿಯ ಜಯಶ್ರೀ ಆತ್ಮಹತ್ಯೆ ; ಕಾರಣ ಏನು ಗೊತ್ತಾ..!?

ಸುದ್ದಿದಿನ,ಬೆಂಗಳೂರು : ಸೀಸನ್ ಮೂರರ ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಯಶ್ರೀ ಹಿಂದೆಯೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇತ್ತೀಚಿಗೆ ಕೆಲದಿನಗಳಿಂದ ಅತೀವ ಖಿನ್ನತೆಯಿಂದ ಬಳಲುತ್ತಿದ್ದರು.
ಮಾದನಾಯಕನಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಗತಿ ಬಡಾವಣೆಯ ಅಪಾರ್ಟ್ಮೆಂಟ್ ನಲ್ಲಿ ಜಯಶ್ರೀ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಅಂದಹಾಗೇ ಈ ಹಿಂದೆಯೂ ನಟಿ ಜಯಶ್ರೀ ಆತ್ಮಹತ್ಯೆಗೆ ಯತ್ನಿಸಿದ್ದರು. ಆನಂತ್ರ ಅವರು ಸಾವಿನಿಂದ ಬಚಾವ್ ಆಗಿದ್ದರು. ಆದ್ರೇ ಇದೀಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನನ್ನ ಜೀವನದಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಅದರಿಂದ ಹೊರಬರಲು ಆಗುತ್ತಿಲ್ಲ ನನಗೆ ದಯಾಮರಣ ಕೊಡಿ ಎಂದು ತಮ್ಮ ಫೇಸ್ ಬುಕ್ ನಲ್ಲಿ ಲೈವ್ ಬಂದು ಕೆಲವು ದಿನಗಳ ಹಿಂದೆ ಕೇಳಿಕೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಎಂ.ಜಿ.ಶಶಿಕಲಾ ಮೂರ್ತಿ ನಲ್ಕುದುರೆ ಅವರಿಗೆ ‘ಜನಸೇವಾರತ್ನ’ ರಾಜ್ಯ ಪ್ರಶಸ್ತಿ

ಸುದ್ದಿದಿನ,ದಾವಣಗೆರೆ : ಭಾರತರತ್ನ ಡಾ| ಬಾಬಾಸಾಹೇಬ ಅಂಬೇಡ್ಕರ ಹಾಗೂ ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ಪ್ರತಿ ವರ್ಷದಂತೆ ಕೊಡಮಾಡುವ ಮಾನವ ಧರ್ಮ 4ನೇ ಕನ್ನಡ ಮಾಧ್ಯಮ ಸಮಾವೇಶ ಹಾಗೂ ಜನಸೇವಾರತ್ನ ರಾಜ್ಯ ಪ್ರಶಸ್ತಿಪ್ರಧಾನ ಸಮಾರಂಭದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪತ್ರವನ್ನು ಎಂ.ಜಿ.ಶಶಿಕಲಾ ಮೂರ್ತಿ ನಲ್ಕುದುರೆ ಅವರಿಗೆ ನೀಡಿ ಗಣ್ಯಮಾನ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.
ಮಾನವ ಇತಿಹಾಸದಲ್ಲಿ ಮನುಕುಲವನ್ನೆ ತತ್ತರಿಸುವಂತೆ ಮಾಡಿದ ಕೋವಿಡ್-19ಹೋರಾಟದಲ್ಲಿ ಜನಕಲ್ಯಾಣಕ್ಕಾಗಿ ಸಂಜೀವಿನಿ ಲಸಿಕೆ ತಯಾರಿಸಿದ ಭಾರತೀಯರು ತಮ್ಮ ತನು-ಮನ ಧನವನ್ನು ಸಮರ್ಪಿಸಿ ಜನಸೇವೆ ರಕ್ಷಣೆಗೆ ಕಂಕಣ ಬದ್ಧರಾಗಿ ನಿಂತು ಹೋರಾಟ ಮಾಡಿದ್ದರ ಫಲವಾಗಿ ಟ್ರಸ್ಟ್ ಹಾಗೂ ಪತ್ರಿಕಾಬಳಗದ ವತಿಯಿಂದ ನಾಡು-ನುಡಿ ನೆಲ-ಜಲ ಭಾಷೆಗಾಗಿ ಅಕ್ಷರ ಸೇವೆಗಾಗಿ ಮತ್ತು ಮಾನವ ಧರ್ಮ ಪರಿಪಾಲನೆಗಾಗಿ ಹಾಗೂ ಸಮಾಜಸೇವೆಗಾಗಿ ಶ್ರಮಿಸಿದ ಸಾಧಕರಾದ ಶ್ರೀಮತಿ ಎಂ.ಜಿ.ಶಶಿಕಲಾ ಮೂರ್ತಿ ನಲ್ಕುದುರೆ ಅವರ ಅನುಪಮ ಸೇವೆಯನ್ನು ಸ್ಮರಿಸಿ ಇವರಿಗೆ ಅತ್ಯಂತ ಗೌರವಪೂರ್ವಕಾಗಿ ಸನ್ಮಾನಿಸಿ ಈ ರಾಜ್ಯ ಪ್ರಶಸ್ತಿಯನ್ನು
ಪ್ರಧಾನ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ : ಅಂತಿಮ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ

ಸುದ್ದಿದಿನ,ದಾವಣಗೆರೆ : ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ ಒದಗಿಸಲು ಫಲಾನುಭವಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
2012-13 ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಬಾಕಿ ಇರುವ ಪರಿಶಿಷ್ಟ ಜಾತಿ 9, ಪರಿಶಿಷ್ಟ ಪಂಗಡ 4 ಮತ್ತು 2013-14 ರಿಂದ 2016-17 ನೇ ಸಾಲಿನವರೆಗೆ ಬಾಕಿ ಇರುವ ಹಿಂದುಳಿದ ವರ್ಗದ 10 ಹಾಗೂ ಅಲ್ಪಸಂಖ್ಯಾತರ ವರ್ಗದ 03 ಸೇರಿದಂತೆ ಒಟ್ಟು 26 ಅರ್ಹ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ತಲಾ ರೂ.2 ಲಕ್ಷಗಳಲ್ಲಿ ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ ಒದಗಿಸಲು ಅರ್ಹ ಫಲಾನುಭವಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಥವಾ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಆಕ್ಷೇಪಣೆಗಳೇನಾದರೂ ಇದಲ್ಲಿ ಸೂಕ್ತ ದಾಖಲೆಗೊಂದಿಗೆ ಫೆ.5 ರೊಳಗೆ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ, ದಾವಣಗೆರೆ ಅಥವಾ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಉಪವಿಭಾಗಾಧಿಕಾರಿಗಳ ಕಚೇರಿ ಆವರಣ, ರೈಲ್ವೆ ನಿಲ್ದಾಣದ ಪಕ್ಕ, ಪಿ.ಬಿ.ರಸ್ತೆ ದಾವಣಗೆರೆ ಇಲ್ಲಿಗೆ ಆಕ್ಷೇಪಣೆ ಸಲ್ಲಿಸಬಹುದೆಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ದಾವಣಗೆರೆ | 120 ಕೋಟಿ ವೆಚ್ಚದಲ್ಲಿ ನೂತನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ನಿರ್ಮಾಣ : ಸಂಸದ ಜಿ.ಎಂ.ಸಿದ್ದೇಶ್ವರ
-
ದಿನದ ಸುದ್ದಿ6 days ago
ಕೆಎಸ್ಆರ್ಟಿಸಿ ನೌಕರರು ಆತಂಕಕ್ಕೆ ಒಳಗಾಗುವುದು ಬೇಡ : ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ
-
ದಿನದ ಸುದ್ದಿ5 days ago
ಲಜ್ಜೆಗೆಟ್ಟ ರಾಜಕಾರಣಕ್ಕೆ ಕರ್ನಾಟಕವೇ ತವರು..!
-
ದಿನದ ಸುದ್ದಿ7 days ago
ಚನ್ನಗಿರಿ | ಕುಟುಂಬಸ್ಥರ ಜಮೀನು ವ್ಯಾಜ್ಯ ; ‘ನ್ಯಾಯ ಕೊಡಿ ಇಲ್ಲಾ ವಿಷ ಕೊಡಿ’ : ತೇಜಸ್ವಿ ಪಟೀಲ್ ನೇತೃತ್ವದಲ್ಲಿ ಪ್ರತಿಭಟನೆ
-
ದಿನದ ಸುದ್ದಿ6 days ago
ಜಿಎಸ್ ಟಿ ಪರಿಹಾರದಲ್ಲಿ ರಾಜ್ಯಕ್ಕೆ ಅಂದಾಜು 27 ಸಾವಿರ ಕೋಟಿ ಖೋತಾ ಆಗಬಹುದು : ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ದಾವಣಗೆರೆ | ಕೆಎಸ್ಆರ್ಟಿಸಿ ತಾತ್ಕಾಲಿಕ ಬಸ್ ನಿಲ್ದಾಣ ಉದ್ಘಾಟನೆ
-
ದಿನದ ಸುದ್ದಿ5 days ago
ರಾಷ್ಟ್ರೀಯ ತನಿಖಾ ದಳದಿಂದ ಸಮನ್ಸ್ ಪಡೆದಿದ್ದ ಖಾಲ್ಸಾ ಏಡ್ ನೊಬೆಲ್ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ..!
-
ದಿನದ ಸುದ್ದಿ7 days ago
ಈ ಶೈಕ್ಷಣಿಕ ವರ್ಷದಿಂದ ಹೊಸ ಕೇಂದ್ರೀಯ ವಿದ್ಯಾಲಯ ಆರಂಭಕ್ಕೆ ಕ್ರಮ : ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ