Connect with us

ದಿನದ ಸುದ್ದಿ

ಜಗದ ಗುರು ಡಾ.ಬಿ.ಆರ್. ಅಂಬೇಡ್ಕರ್..!

Published

on

  • ಸನಾವುಲ್ಲಾ ನವಿಲೇಹಾಳು

ಶಿಕ್ಷಣವು ತನ್ನೆದುರಿಗೆ ತೆರದ ಅವಕಾಶಗಳ ಸ್ವರ್ಣಚಿತ್ರ ಎಂದು ಮನಗಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ131 ನೆ ಜನ್ಮದಿನದ ಈ ಸಂದರ್ಭದಲ್ಲಿ, ನಮ್ಮ ದೇಶ ಎತ್ತಸಾಗುತ್ತಿದೆ? ಸಂವಿಧಾನ ನಮಗೆ ಎಷ್ಟರ ಮಟ್ಟಿಗೆ ತಿಳಿದಿದೆ ಎಂದು ನಮ್ಮನ್ನು ನಾವೆ ಪ್ರಶ್ನೆ ಮಾಡಿಕೊಳ್ಳಬೇಕಾಗಿದೆ.

ಈಗ ನನ್ನ ಕಣ್ಣೆದರಿಗೆ ಇರುವ ಬಹುಪಾಲು ಜನರು ಸ್ವತಂತ್ರ ನಂತರ ಅಥವಾ ಸಂವಿಧಾನ ಹುಟ್ಟಿದ ನಂತರ ಹುಟ್ಟಿದವರಿರಬಹುದು ಎಂದು ಭಾವಿಸಿದ್ದೇನೆ, ಹಾಗಾಗಿ ನಮ್ಮ ದೇಶಕ್ಕೆ ಈ ತೆರೆನಾದ ಸಂವಿಧಾನ ಬೇಕು ಎಂಬ ಅಂಬೇಡ್ಕರ್ ಅವರ ದನಿಯ ಹಿಂದಿನ ಅನುಭವ ಮತ್ತು ಸಂಕಟ ನಮಗ್ಯಾರಿಗೂ ಇರಲಾರದು, ಇದನ್ನು ಅರ್ಥಮಾಡಿಕೊಳ್ಳ ಬೇಕಾದರೆ ನಾವು ಅಂಬೇಡ್ಕರ್ ಅವರ ಬದುಕನ್ನ ಅಧ್ಯಾಯನ ಮಾಡಬೇಕಾಗಿದೆ,ನಂತರ ಸಂವಿಧಾನ ನಮಗೆ ಅರ್ಥವಾಗ ಬಹುದು.

ದೇಶ ಎಷ್ಟೇ ವೈಜ್ಞಾನಿಕವಾಗಿ ಮುಂದುವರಿದರೂ ಜನರು ಹಿಂದಿಗಿಂತಲೂ ಇಂದು ಮೌಡ್ಯರಾಗುತ್ತಿರುವುದು ಆಧುನಿಕ ಜಗತ್ತು ನಾಚಿಕೆ ಪಟ್ಟುಕೊಳ್ಳಬೇಕಾದ ಸಂಗತಿ. ಆದರೆ ಎಲ್ಲಾ ಧರ್ಮೀಯರು ಮತ್ತೆ ಧರ್ಮಾಂದತೆಗೆ ಒಳಗಾಗುತ್ತಿದ್ದಾರೆ, ಜಾತಿವಿನಾಶ, ಅಂತರ್ಜಾತಿ ವಿವಾಹದ ಮಾತಿರಲಿ ಒಂದು ಧರ್ಮದವನು ಮತ್ತೊಂದು ಧರ್ಮದವನೊಂದಿಗೆ ಮಾತನಾಡುವುದು, ಸಾಮಾಜಿಕವಾಗಿ ಬೆರೆಯುವುದು ಧರ್ಮವಿರೋಧಿನೆಲೆ ಎಂದು ಬಿಂಬಿಸುವ ಮೂಲಭೂತವಾದಿಗಳ ಸಂಖ್ಯೆ ಹೆಚ್ಚುತ್ತಿದೆ.

ಕಾಲೇಜು ವಿದ್ಯಾರ್ಥಿಗಳಲ್ಲಿಯೂ ಸ್ನೇಹತ್ವ ಧರ್ಮವನ್ನು ದಾಟುತ್ತಿಲ್ಲ, ಧರ್ಮವನ್ನು ದಾಟಿದ ಗಂಡು-ಹೆಣ್ಣು ಒಟ್ಟಿಗೆ ಸ್ನೇಹದಿಂದ ನಡೆದುಕೊಳ್ಳುವಂತಿಲ್ಲ, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಆಧುನಿಕ ಭಾರತವಿದೆ. ಧರ್ಮ ಪ್ರಜ್ಞೆಯನ್ನು ಬೋಧಿಸಬೇಕು, ಮೂಢನಂಬಿಕೆಯನ್ನಾಗಲಿ ಅಥವಾ ಅತೀಂದ್ರಿಯ ಶಕ್ತಿಗಳನ್ನಾಗಲಿ ನಂಬಿಸಬಾರದು, ಧರ್ಮ ಕರುಣೆಯನ್ನು ಬೋಧಿಸಬೇಕು, ಸಮಾನತೆಯನ್ನು ಕಲಿಸಬೇಕು, ಮನುಷ್ಯನಿಗೆ ಭೂಮಿಯ ಮೇಲೆ ಸುಖ ಸಂತೋಷದಿಂದ ಬದುಕುವುದಕ್ಕೆ ಬೇಕಾಗಿರುವುದು ಅದೇನೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರೆ ಅಭಿಪ್ರಾಯ ಪಟ್ಟಿದ್ದಾರೆ. ದೇವರಾಗಲಿ, ಆತ್ಮವಾಗಲಿ ಸಮಾಜವನ್ನು ಬದುಕಿಸುವುದಕ್ಕೆ ಆಗುವುದಿಲ್ಲ ಎಂಬುದು ಇದರ ಅರ್ಥ.

ಒಂದು ಧರ್ಮದ ತತ್ವಮೀಮಾಂಸೆ ಏನೇ ಇರಬಹುದು ಆದರೆ ಆ ಧರ್ಮವು ಯಾವ ರೀತಿಯ ಆಚರಣೆಗಳನ್ನು ನಂಬಿಕೊಂಡಿದೆ ಹಾಗೂ ಆ ಧರ್ಮದ ಅನುಯಾಯಿಗಳು ಯಾವ ರೀತಿ ನಡೆದುಕೊಳ್ಳುತ್ತಾರೆ ಎಂಬುದು ಆ ಧರ್ಮದ ನೆಲೆಗಟ್ಟನ್ನು ತಿಳಿಸುತ್ತದೆ. ಆದರೆ ಈ ಕಾಲದಲ್ಲೂ ಕೂಡ ಜಾತಿಪದ್ದತಿಯನ್ನು ಸಮರ್ಥಿಸುವವರು ಇರುವುದು ಬೇಸರದ ಸಂಗತಿ, ಅವರು ಕೊಡುವ ಸಮರ್ಥನೆಗಳು ಹಲವಾರು.

ಆದರೆ ಅಂಬೇಡ್ಕರ್ ಅವರು ಹೇಳುವಂತೆ: ಜಾತಿಪದ್ದತಿ ಕೇವಲ ಶ್ರಮ ವಿಭಜನೆಯಾಗಿರದೆ ಶ್ರಮಜೀವಿಗಳ ವಿಭಾಗವೂ ಆಗಿದೆ. ಸುಧಾರಿತ ಸಮಾಜಕ್ಕೆ ಶ್ರಮ ವಿಭಜನೆ ಅವಶ್ಯಕವೆಂಬುದು ನಿರ್ವಿವಾದ. ಆದರೆ ಶ್ರಮ ವಿಭಜನೆಯಲ್ಲಿ ವಿವಿಧ ಶ್ರಮಿಕ ವರ್ಗಗಳು ಒಂದನ್ನೊಂದು ಸೇರದಂತೆ ಪ್ರತ್ಯೇಕವಾಗಿ ವಿಭಜನೆಗೊಂಡಿರುವುದು ಯಾವ ಸುಧಾರಿತ ಸಮಾಜದಲ್ಲಿಯೂ ಕಾಣದು. (ಅಂ.ಬರಹಗಳು ಮತ್ತು ಭಾಷಣಗಳು ಸಂ.೧.ಪು ೫೮).

ಜಾತಿಪದ್ದತಿ ಶ್ರಮಿಕರ ವಿಭಾಗ ಮಾತ್ರವಲ್ಲ ಅದರಲ್ಲಿ ವಿಭಾಗಗೊಂಡ ವರ್ಗಗಳು, ಕೆಳವರ್ಗ, ಅದಕ್ಕೂ ಕೆಳವರ್ಗ, ಹೀಗೆ ಬಂದು ನಿಚ್ಚೋಚ್ಚಶ್ರೇಣಿಯನ್ನು ಹೊಂದಿವೆ, ಇಂತಹ ಉಚ್ಚ, ನೀಚ ವರ್ಗಿಕರಣ ಬೇರೆಯಾವ ದೇಶದಲ್ಲಿಯೂ ಶ್ರಮವಿಭಾಗದ ಅಂಗವಾಗಿಲ್ಲ. ವ್ಯೆಕ್ತಿಯ ಅಭಿರುಚಿ ಸಾಮರ್ಥ್ಯಗಳನ್ನು ಗಮನಿಸುವ ಬದಲಾಗಿ ಆತನ ತಂದೆ ತಾಯಿಗಳ ಸಾಮಾಜಿಕ ಸ್ಥಾನಮಾನಕ್ಕೆ ಅನುಸಾರವಾಗಿ ಅವನಿಗೆ ಇಂತಹ ಕೆಲಸ ಎಂದು ನಿಗದಿಪಡಿಸಲಾಗುತ್ತದೆ.ಜಾತಿ ಪದ್ದತಿಯಿಂದ ಈ ವೃತ್ತಿವಿಭಜನೆ ಅಥವಾ ಕೆಲಸಗಳ ನೇಮಕವು ಖಂಡಿತವಾಗಿ ವಿನಾಶಕಾರಿಯಾಗಿದೆ.

ಡಾ. ಬಿ.ಆರ್. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ನಮಗೆ ಜಾತ್ಯಾತೀತವಾಗಿ , ಸಮಾನತೆಯಿಂದ, ಸಮತೆಯಿಂದ, ಸಹೋಧರತೆಯಿಂದ ಬದುಕುವುದನ್ನು ಕಲಿಸುತ್ತದೆ, ಇಂದು ಅಂಬೇಡ್ಕರ್ ನಮಗೆ ಸಂವಿಧಾನರೂಪದಲ್ಲಿ ಎಲ್ಲಾ ಧರ್ಮಗಳ ಆಚೆಯಿರುವ ‘ಮಾನವಧರ್ಮ’ವನ್ನು ಕೊಟ್ಟಿರುವಂತದ್ದು, ಮನುಷ್ಯರನ್ನು ಮನುಷ್ಯರಂತೆ ಕಾಣುವುದನ್ನು ಕಲಿಸಿರುವಂತದ್ದನ್ನು ನಾವು ಅರ್ಥೈಸಿಕೊಂಡು ನಡೆಯಬೇಕಾಗಿದೆ.

ಅಂಬೇಡ್ಕರ್ ಅವರಿಗೆ ಈ ತರಹದ ಆಲೋಚನೆ ಕೇವಲ ಶಿಕ್ಷಣದಿಂದ ಬಂದದ್ದಲ್ಲ ಸ್ವತ: ಅವರು ಇದನ್ನೆಲ್ಲಾ ತಮ್ಮ ಜೀವನದಲ್ಲಿ ಅನುಭವಿಸಿದ್ದರಿಂದ ಬಂದಿರುವಂತದ್ದು, ಮನುಧರ್ಮ ದಲ್ಲಿದ್ದಂತಹ ಸಾಮಾಜಿಕ, ಧಾರ್ಮಿಕ, ಆಚರಣೆಗಳಿಂದ ನೋವುಂಡವರು ಅಂಬೇಡ್ಕರ್.

ಹಾಗಾಗಿ ಇಂತಹ ಒಂದು ವ್ಯವಸ್ಥೆಯ ವಿರುದ್ದ ತಿರುಗಿಬಿದ್ದು ತಾನು ಅನುಭವಿಸಿದ ಸಂಕಟ, ನೋವು,ಅವಮಾನಗಳು ನನ್ನ ಮುಂದಿನ ತಲೆಮಾರು ಅನುಭವಿಸ ಬಾರದು ಎಂಬುದು ಅಂಬೇಡ್ಕರ್ ಅವರ ಕನಸ್ಸಾಗಿತ್ತು. ಆದರೆ ಇವತ್ತು ನಾವು ಯಾವ ಮಾರ್ಗದಲ್ಲಿ ಮುನ್ನಡೆಯುತ್ತಿದ್ದೇವೆಂದು ಆಲೋಚಿಸಿದರೆ ಅಂದಿನ ಆಚರಣೆ,ಸಂಪ್ರದಾಯ, ಧಾರ್ಮಿಕ ನಂಬಿಕೆಗಳ ವಿರುದ್ದ ತಿರುಗಿಬೀಳಲು ಅಂಬೇಡ್ಕರ್ ಅವರ ಹೋರಾಟ ಎಷ್ಟು ಮುಖ್ಯವಾಗಿತ್ತೊ, ಇಂದು ಅವರ ಜಾತಿ ಮತ್ತು ಧರ್ಮದ ಬಗೆಗಿನ ಧೋರಣೆಯನ್ನ ಅಷ್ಟೆ ಮುಖ್ಯವಾಗಿ ಪ್ರಸ್ತುತ ಪಡಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.

ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.

ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending