ದಿನದ ಸುದ್ದಿ
ಚಿತ್ರದುರ್ಗ ಜಿಲ್ಲೆಗೆ ಜಗಳೂರು ಸೇರ್ಪಡೆ; ಕಾವೇರಿದ ಹೋರಾಟ
![](https://suddidina.com/wp-content/uploads/2018/09/chitradurga-fort.jpg)
ಸುದ್ದಿದಿನ ದಾವಣಗೆರೆ: ಶತಮಾನದಲ್ಲಿ ಏಳು ದಶಕ ಬರ ಕಂಡಿರುವ ಜಗಳೂರು ತಾಲೂಕಿನಲ್ಲಿ ಈಗ ಚಿತ್ರದುರ್ಗ ಜಿಲ್ಲೆಗೆ ಸೇರಬೇಕೆಂಬ ಹೋರಾಟದ ಕಾವು ತೀವ್ರವಾಗುತ್ತಿದೆ. ಸಾಮಾಜಿಕ, ಆರ್ಥಿಕ ಸೌಲಭ್ಯಗಳಿಂದ ಜಗಳೂರು ದಾವಣಗೆರೆ ಜಿಲ್ಲೆಯಾಗುವ ಮೊದಲು ಚಿತ್ರದುರ್ಗ ಜಿಲ್ಲೆಯಲ್ಲಿತ್ತು. ದಾವಣಗೆರೆ ಜಿಲ್ಲೆಯಲ್ಲೇ ಅತಿ ಹಿಂದುಳಿದ, ಬರಪೀಡಿತ ಪ್ರದೇಶವಾದ ಜಗಳೂರು ತಾಲ್ಲೂಕನ್ನು ಸರ್ಕಾರಗಳು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿಲ್ಲ. ಇದು ಜಗಳೂರು ತಾಲೂಕಿನ ಜನರಲ್ಲಿ ಹೋರಾಟಕ್ಕೆ ಸಜ್ಜಾಗಲು ಕಾರಣವಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಚನ್ನಗಿರಿ, ಹೊನ್ನಾಳಿ, ಹರಿಹರ, ದಾವಣಗೆರೆ, ಹರಪನಹಳ್ಳಿ, ಜಗಳೂರು ಸೇರಿ ಆರು ತಾಲೂಕುಗಳಿವೆ. ಜಗಳೂರು ಹೊರತು ಪಡಿಸಿ ಉಳಿದ ತಾಲೂಕುಗಳಿಗೆ ಅಭಿವೃದ್ಧಿಯಲ್ಲಿ ಮುಂದಿವೆ. ಆದರೆ, ಜಗಳೂರು ಎಲ್ಲದ್ದಕ್ಕೂ ದಾವಣಗೆರೆ, ಚಿತ್ರದುರ್ಗ ಅಲಂಬಿಸಬೇಕಿದೆ. ದಾವಣಗೆರೆ ೫೦ ಕಿಮೀ, ಚಿತ್ರದುರ್ಗ ೪೦ ಕಿಮೀ ಅಂತರದಲ್ಲಿವೆ. ಆದರೆ, ಅಂತರಕ್ಕಿಂತ ಹೆಚ್ಚಾಗಿ ಜಗಳೂರು ತಾಲೂಕಿನ ಜನತೆ ಚಿತ್ರದುರ್ಗ ಜಿಲ್ಲೆಯೊಂದಿಗೆ ಭಾವನಾತ್ಮಕ, ವೈವಾಹಿಕ ಸಂಬಂಧ ಬೆಸೆದುಕೊಂಡಿದೆ.
ಜಗಳೂರಿಗಿಲ್ಲ ಜಲಮೂಲ
ಜಗಳೂರು ತಾಲೂಕಿನಲ್ಲಿ ಯಾವುದೇ ಜಲಮೂಲಗಳಿಲ್ಲ. ಬರಪೀಡಿತ ತಾಲೂಕು ಆಗಿರುವುದರಿಂದ ಅಂತರ್ಜಲವೂ ಅಷ್ಟಕಷ್ಟೇ, ಒಂದು ಕೊಳವೆಬಾವಿ ಹಾಕಿಸಿದರೆ 800ರಿಂದ 1000 ಅಡಿಯಲ್ಲಿ ನೀರು ಸಿಗುತ್ತದೆ. ಇದಕ್ಕೆ ಲಕ್ಷಾಂತರ ರೂಪಾಯಿ ಸುರಿಯಬೇಕು. ಆರ್ಥಿಕ ಹಿಂದುಳಿದ ಜನರು ಇರುವುದರಿಂದ ಕೊಳವೆಬಾವಿಗೆ ಲಕ್ಷಾಂತರ ಸುರಿದರೆ ಅವರ ಜೀವನ ಪಾತಾಳಕ್ಕಿಳಿಯುತ್ತಿದೆ. ಸೌಲಭ್ಯ ವಂಚಿತ, ಬರಪೀಡಿತ ಜಗಳೂರು ತಾಲ್ಲೂಕನ್ನು ಪುನಃ ಚಿತ್ರದುರ್ಗ ಜಿಲ್ಲೆಗೆ ಸೇರಿಸಲು ಹೋರಾಟ ಚುರುಕು ಪಡೆದುಕೊಳ್ಳುತ್ತಿದೆ.
ಮಳೆ ಬಾರದೇ ಬಿತ್ತಿದ ಬೆಳೆಗಳು ಒಣಗಿ ಹೋಗಿದ್ದರೂ ಸಹ ದಾವಣಗೆರೆ ಜಿಲ್ಲೆಯಲ್ಲೇ ಅತಿ ಹಿಂದುಳಿದ, ಬರಪೀಡಿತ ಪ್ರದೇಶವಾದ ಜಗಳೂರು ತಾಲ್ಲೂಕನ್ನು ಸರ್ಕಾರಗಳು ಬರಪೀಡಿತ ದೇಶವೆಂದು ಘೋಷಣೆ ಮಾಡಿಲ್ಲ. ನೀರಾವರಿ ಪ್ರದೇಶ ಹೊಂದಿರುವ ಹರಿಹರ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡುವ ಮೂಲಕ ತಾಲ್ಲೂಕಿಗೆ ಮಲತಾಯಿ ಧೋರಣೆ ಮಾಡಿದೆ.
ಬಳ್ಳಾರಿಗೆ ಸೇರಿದ ಹರಪನಹಳ್ಳಿ; ಜಗಳೂರು ಕ್ಯಾತೆ
ಭಾಗಶಃ ನೀರಾವರಿ ಭೂಮಿ ಹೊಂದಿರುವ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೊಂಡಿದೆ. ಹರಪನಹಳ್ಳಿ ತಾಲೂಕಿನ ಜನತೆಗೆ ಹೈದರಾಬಾದ್ ಕರ್ನಾಟಕ ಸೌಲಭ್ಯ ಸಿಗಲಿದೆ. ಇದನ್ನೇ ಮುಂದಿಟ್ಟುಕೊಂಡಿರುವ ಜಗಳೂರು ತಾಲೂಕಿನ ಮುಖಂಡರು ನಮ್ಮನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಬಿಡಿ ಎಂಬ ಪಟ್ಟಹಿಡಿದಿದ್ದಾರೆ. ಜಗಳೂರು ತಾಲೂಕು ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳು, ವಿದರ್ಭ ಪ್ಯಾಕೇಜ್, ನಂಜುಂಡುಪ್ಪ ವರದಿಯ ಸೌಲಭ್ಯಗಳಿಂದ ವಂಚಿತವಾಗಿದೆ. ಚಿತ್ರದುರ್ಗ ಜಿಲ್ಲೆಗೆ ಸೇರಿಸಿದರೆ ನಮಗೆ ಈ ಸೌಲಭ್ಯ ಸಿಗಲಿದೆ ಎಂಬ ಆಶಯ ಹೊಂದಿದ್ದಾರೆ.
ಹೋರಾಟಕ್ಕೆ ಮಾಜಿ ಬೆಂಬಲ, ಹಾಲಿ ಶಾಸಕರಿಂದ ಕಾದು ನೋಡುವ ತಂತ್ರ
ಚಿತ್ರದುರ್ಗ ಜಿಲ್ಲೆಗೆ ಜಗಳೂರು ತಾಲೂಕು ಸೇರಿಸಲು ರೂಪಿಸುತ್ತಿರುವ ಹೋರಾಟಕ್ಕೆ ಮಾಜಿ ಶಾಸಕ ಎಚ್.ಪಿ. ರಾಜೇಶ್ ಬೆಂಬಲ ಸೂಚಿಸಿದ್ದಾರೆ. ಆದರೆ, ಹಾಲಿ ಶಾಸಕ ಎಸ್.ವಿ. ರಾಮಚಂದ್ರ ಕಾದು ನೋಡುವ ತಂತ್ರ ಬಳಸಿದ್ದು, ಇತ್ತ ಬೆಂಬಲವೂ ಇಲ್ಲ, ಅತ್ತ ವಿರೋಧವೂ ಇಲ್ಲ ಎಂಬಂತೆ ತಟಸ್ಥರಾಗಿದ್ದಾರೆ. ಆದರೆ, ಮಾಜಿ ಶಾಸಕ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜಗಳೂರು ತಾಲೂಕನ್ನು ದಾವಣಗೆರೆ ಜಿಲ್ಲೆಗೆ ಸೇರಿಸಿ ಇಪ್ಪತ್ತು ವರ್ಷಗಳಾದರೂ ಅಭಿವೃದ್ಧಿ ಕಂಡಿಲ್ಲ. ಹಾಗಾಗಿ ಜಗಳೂರು ತಾಲೂಕನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸುವುದು ಅನಿವಾರ್ಯ ಎಂಬ ಅಭಿಪ್ರಾಯ ಹೊಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!