ದಿನದ ಸುದ್ದಿ
ಚಿತ್ರದುರ್ಗ ಜಿಲ್ಲೆಗೆ ಜಗಳೂರು ಸೇರ್ಪಡೆ; ಕಾವೇರಿದ ಹೋರಾಟ

ಸುದ್ದಿದಿನ ದಾವಣಗೆರೆ: ಶತಮಾನದಲ್ಲಿ ಏಳು ದಶಕ ಬರ ಕಂಡಿರುವ ಜಗಳೂರು ತಾಲೂಕಿನಲ್ಲಿ ಈಗ ಚಿತ್ರದುರ್ಗ ಜಿಲ್ಲೆಗೆ ಸೇರಬೇಕೆಂಬ ಹೋರಾಟದ ಕಾವು ತೀವ್ರವಾಗುತ್ತಿದೆ. ಸಾಮಾಜಿಕ, ಆರ್ಥಿಕ ಸೌಲಭ್ಯಗಳಿಂದ ಜಗಳೂರು ದಾವಣಗೆರೆ ಜಿಲ್ಲೆಯಾಗುವ ಮೊದಲು ಚಿತ್ರದುರ್ಗ ಜಿಲ್ಲೆಯಲ್ಲಿತ್ತು. ದಾವಣಗೆರೆ ಜಿಲ್ಲೆಯಲ್ಲೇ ಅತಿ ಹಿಂದುಳಿದ, ಬರಪೀಡಿತ ಪ್ರದೇಶವಾದ ಜಗಳೂರು ತಾಲ್ಲೂಕನ್ನು ಸರ್ಕಾರಗಳು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿಲ್ಲ. ಇದು ಜಗಳೂರು ತಾಲೂಕಿನ ಜನರಲ್ಲಿ ಹೋರಾಟಕ್ಕೆ ಸಜ್ಜಾಗಲು ಕಾರಣವಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಚನ್ನಗಿರಿ, ಹೊನ್ನಾಳಿ, ಹರಿಹರ, ದಾವಣಗೆರೆ, ಹರಪನಹಳ್ಳಿ, ಜಗಳೂರು ಸೇರಿ ಆರು ತಾಲೂಕುಗಳಿವೆ. ಜಗಳೂರು ಹೊರತು ಪಡಿಸಿ ಉಳಿದ ತಾಲೂಕುಗಳಿಗೆ ಅಭಿವೃದ್ಧಿಯಲ್ಲಿ ಮುಂದಿವೆ. ಆದರೆ, ಜಗಳೂರು ಎಲ್ಲದ್ದಕ್ಕೂ ದಾವಣಗೆರೆ, ಚಿತ್ರದುರ್ಗ ಅಲಂಬಿಸಬೇಕಿದೆ. ದಾವಣಗೆರೆ ೫೦ ಕಿಮೀ, ಚಿತ್ರದುರ್ಗ ೪೦ ಕಿಮೀ ಅಂತರದಲ್ಲಿವೆ. ಆದರೆ, ಅಂತರಕ್ಕಿಂತ ಹೆಚ್ಚಾಗಿ ಜಗಳೂರು ತಾಲೂಕಿನ ಜನತೆ ಚಿತ್ರದುರ್ಗ ಜಿಲ್ಲೆಯೊಂದಿಗೆ ಭಾವನಾತ್ಮಕ, ವೈವಾಹಿಕ ಸಂಬಂಧ ಬೆಸೆದುಕೊಂಡಿದೆ.
ಜಗಳೂರಿಗಿಲ್ಲ ಜಲಮೂಲ
ಜಗಳೂರು ತಾಲೂಕಿನಲ್ಲಿ ಯಾವುದೇ ಜಲಮೂಲಗಳಿಲ್ಲ. ಬರಪೀಡಿತ ತಾಲೂಕು ಆಗಿರುವುದರಿಂದ ಅಂತರ್ಜಲವೂ ಅಷ್ಟಕಷ್ಟೇ, ಒಂದು ಕೊಳವೆಬಾವಿ ಹಾಕಿಸಿದರೆ 800ರಿಂದ 1000 ಅಡಿಯಲ್ಲಿ ನೀರು ಸಿಗುತ್ತದೆ. ಇದಕ್ಕೆ ಲಕ್ಷಾಂತರ ರೂಪಾಯಿ ಸುರಿಯಬೇಕು. ಆರ್ಥಿಕ ಹಿಂದುಳಿದ ಜನರು ಇರುವುದರಿಂದ ಕೊಳವೆಬಾವಿಗೆ ಲಕ್ಷಾಂತರ ಸುರಿದರೆ ಅವರ ಜೀವನ ಪಾತಾಳಕ್ಕಿಳಿಯುತ್ತಿದೆ. ಸೌಲಭ್ಯ ವಂಚಿತ, ಬರಪೀಡಿತ ಜಗಳೂರು ತಾಲ್ಲೂಕನ್ನು ಪುನಃ ಚಿತ್ರದುರ್ಗ ಜಿಲ್ಲೆಗೆ ಸೇರಿಸಲು ಹೋರಾಟ ಚುರುಕು ಪಡೆದುಕೊಳ್ಳುತ್ತಿದೆ.
ಮಳೆ ಬಾರದೇ ಬಿತ್ತಿದ ಬೆಳೆಗಳು ಒಣಗಿ ಹೋಗಿದ್ದರೂ ಸಹ ದಾವಣಗೆರೆ ಜಿಲ್ಲೆಯಲ್ಲೇ ಅತಿ ಹಿಂದುಳಿದ, ಬರಪೀಡಿತ ಪ್ರದೇಶವಾದ ಜಗಳೂರು ತಾಲ್ಲೂಕನ್ನು ಸರ್ಕಾರಗಳು ಬರಪೀಡಿತ ದೇಶವೆಂದು ಘೋಷಣೆ ಮಾಡಿಲ್ಲ. ನೀರಾವರಿ ಪ್ರದೇಶ ಹೊಂದಿರುವ ಹರಿಹರ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡುವ ಮೂಲಕ ತಾಲ್ಲೂಕಿಗೆ ಮಲತಾಯಿ ಧೋರಣೆ ಮಾಡಿದೆ.
ಬಳ್ಳಾರಿಗೆ ಸೇರಿದ ಹರಪನಹಳ್ಳಿ; ಜಗಳೂರು ಕ್ಯಾತೆ
ಭಾಗಶಃ ನೀರಾವರಿ ಭೂಮಿ ಹೊಂದಿರುವ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೊಂಡಿದೆ. ಹರಪನಹಳ್ಳಿ ತಾಲೂಕಿನ ಜನತೆಗೆ ಹೈದರಾಬಾದ್ ಕರ್ನಾಟಕ ಸೌಲಭ್ಯ ಸಿಗಲಿದೆ. ಇದನ್ನೇ ಮುಂದಿಟ್ಟುಕೊಂಡಿರುವ ಜಗಳೂರು ತಾಲೂಕಿನ ಮುಖಂಡರು ನಮ್ಮನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಬಿಡಿ ಎಂಬ ಪಟ್ಟಹಿಡಿದಿದ್ದಾರೆ. ಜಗಳೂರು ತಾಲೂಕು ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳು, ವಿದರ್ಭ ಪ್ಯಾಕೇಜ್, ನಂಜುಂಡುಪ್ಪ ವರದಿಯ ಸೌಲಭ್ಯಗಳಿಂದ ವಂಚಿತವಾಗಿದೆ. ಚಿತ್ರದುರ್ಗ ಜಿಲ್ಲೆಗೆ ಸೇರಿಸಿದರೆ ನಮಗೆ ಈ ಸೌಲಭ್ಯ ಸಿಗಲಿದೆ ಎಂಬ ಆಶಯ ಹೊಂದಿದ್ದಾರೆ.
ಹೋರಾಟಕ್ಕೆ ಮಾಜಿ ಬೆಂಬಲ, ಹಾಲಿ ಶಾಸಕರಿಂದ ಕಾದು ನೋಡುವ ತಂತ್ರ
ಚಿತ್ರದುರ್ಗ ಜಿಲ್ಲೆಗೆ ಜಗಳೂರು ತಾಲೂಕು ಸೇರಿಸಲು ರೂಪಿಸುತ್ತಿರುವ ಹೋರಾಟಕ್ಕೆ ಮಾಜಿ ಶಾಸಕ ಎಚ್.ಪಿ. ರಾಜೇಶ್ ಬೆಂಬಲ ಸೂಚಿಸಿದ್ದಾರೆ. ಆದರೆ, ಹಾಲಿ ಶಾಸಕ ಎಸ್.ವಿ. ರಾಮಚಂದ್ರ ಕಾದು ನೋಡುವ ತಂತ್ರ ಬಳಸಿದ್ದು, ಇತ್ತ ಬೆಂಬಲವೂ ಇಲ್ಲ, ಅತ್ತ ವಿರೋಧವೂ ಇಲ್ಲ ಎಂಬಂತೆ ತಟಸ್ಥರಾಗಿದ್ದಾರೆ. ಆದರೆ, ಮಾಜಿ ಶಾಸಕ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜಗಳೂರು ತಾಲೂಕನ್ನು ದಾವಣಗೆರೆ ಜಿಲ್ಲೆಗೆ ಸೇರಿಸಿ ಇಪ್ಪತ್ತು ವರ್ಷಗಳಾದರೂ ಅಭಿವೃದ್ಧಿ ಕಂಡಿಲ್ಲ. ಹಾಗಾಗಿ ಜಗಳೂರು ತಾಲೂಕನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸುವುದು ಅನಿವಾರ್ಯ ಎಂಬ ಅಭಿಪ್ರಾಯ ಹೊಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2023-24 ನೇ ಸಾಲಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಪಿ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಗಳೂರು | ಸಿಡಿಲು ಬಡಿದು ಇಬ್ಬರು ರೈತರು ಸಾವು

ಸುದ್ದಿದಿನ, ದಾವಣಗೆರೆ : ಸಿಡಿಲು ಬಡಿದು, ಇಬ್ಬರು ರೈತರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಿನ್ನೆ ಸಂಜೆ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಬಂದ ಕಾರಣ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಈ ದುರಂತ ಸಂಭವಿಸಿದೆ. ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ; ನಾಡಿದ್ದು ವಿಧ್ಯುಕ್ತ ಚಾಲನೆ

ಸುದ್ದಿದಿನ, ಬೆಂಗಳೂರು : ಸರ್ಕಾರದ ಗ್ಯಾರಂಟಿ ಘೋಷಣೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿದ್ದು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.
ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ಇದೇ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ದೊರೆಯಲಿದೆ.
ಈ ಯೋಜನೆಗೆ ರಾಜ್ಯಾದ್ಯಂತ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಜಿಲ್ಲೆಗಳಲ್ಲಿ ಯೋಜನೆಗೆ ಏಕಕಾಲಕ್ಕೆ ಚಾಲನೆ ನೀಡಲಿದ್ದು, ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲಾ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್ಗಳನ್ನು ಹೊರತುಪಡಿಸಿ ಇತರ ಎಲ್ಲಾ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಇದರಿಂದ ಶೇಕಡ 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬಸ್ಗಳಲ್ಲಿ ಶೇ. 50 ರಷ್ಟು ಆಸನಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್7 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ7 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ
-
ದಿನದ ಸುದ್ದಿ5 days ago
ಗೋ ಹತ್ಯೆ ನಿಷೇಧ ಕಾಯ್ದೆ ; ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ
-
ದಿನದ ಸುದ್ದಿ4 days ago
ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ