Connect with us

ದಿನದ ಸುದ್ದಿ

ಚಿತ್ರದುರ್ಗ ಜಿಲ್ಲೆಗೆ ಜಗಳೂರು ಸೇರ್ಪಡೆ; ಕಾವೇರಿದ ಹೋರಾಟ

Published

on

ಸುದ್ದಿದಿನ ದಾವಣಗೆರೆ: ಶತಮಾನದಲ್ಲಿ ಏಳು ದಶಕ ಬರ ಕಂಡಿರುವ ಜಗಳೂರು ತಾಲೂಕಿನಲ್ಲಿ ಈಗ ಚಿತ್ರದುರ್ಗ ಜಿಲ್ಲೆಗೆ ಸೇರಬೇಕೆಂಬ ಹೋರಾಟದ ಕಾವು ತೀವ್ರವಾಗುತ್ತಿದೆ. ಸಾಮಾಜಿಕ, ಆರ್ಥಿಕ ಸೌಲಭ್ಯಗಳಿಂದ ಜಗಳೂರು ದಾವಣಗೆರೆ ಜಿಲ್ಲೆಯಾಗುವ ಮೊದಲು ಚಿತ್ರದುರ್ಗ ಜಿಲ್ಲೆಯಲ್ಲಿತ್ತು. ದಾವಣಗೆರೆ ಜಿಲ್ಲೆಯಲ್ಲೇ ಅತಿ ಹಿಂದುಳಿದ, ಬರಪೀಡಿತ ಪ್ರದೇಶವಾದ ಜಗಳೂರು ತಾಲ್ಲೂಕನ್ನು ಸರ್ಕಾರಗಳು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿಲ್ಲ. ಇದು ಜಗಳೂರು ತಾಲೂಕಿನ ಜನರಲ್ಲಿ ಹೋರಾಟಕ್ಕೆ ಸಜ್ಜಾಗಲು ಕಾರಣವಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ ಚನ್ನಗಿರಿ, ಹೊನ್ನಾಳಿ, ಹರಿಹರ, ದಾವಣಗೆರೆ, ಹರಪನಹಳ್ಳಿ, ಜಗಳೂರು ಸೇರಿ ಆರು ತಾಲೂಕುಗಳಿವೆ. ಜಗಳೂರು ಹೊರತು ಪಡಿಸಿ ಉಳಿದ ತಾಲೂಕುಗಳಿಗೆ ಅಭಿವೃದ್ಧಿಯಲ್ಲಿ ಮುಂದಿವೆ. ಆದರೆ, ಜಗಳೂರು ಎಲ್ಲದ್ದಕ್ಕೂ ದಾವಣಗೆರೆ, ಚಿತ್ರದುರ್ಗ ಅಲಂಬಿಸಬೇಕಿದೆ. ದಾವಣಗೆರೆ ೫೦ ಕಿಮೀ, ಚಿತ್ರದುರ್ಗ ೪೦ ಕಿಮೀ ಅಂತರದಲ್ಲಿವೆ. ಆದರೆ, ಅಂತರಕ್ಕಿಂತ ಹೆಚ್ಚಾಗಿ ಜಗಳೂರು ತಾಲೂಕಿನ ಜನತೆ ಚಿತ್ರದುರ್ಗ ಜಿಲ್ಲೆಯೊಂದಿಗೆ ಭಾವನಾತ್ಮಕ, ವೈವಾಹಿಕ ಸಂಬಂಧ ಬೆಸೆದುಕೊಂಡಿದೆ.

ಜಗಳೂರಿಗಿಲ್ಲ ಜಲಮೂಲ

ಜಗಳೂರು ತಾಲೂಕಿನಲ್ಲಿ ಯಾವುದೇ ಜಲಮೂಲಗಳಿಲ್ಲ. ಬರಪೀಡಿತ ತಾಲೂಕು ಆಗಿರುವುದರಿಂದ ಅಂತರ್ಜಲವೂ ಅಷ್ಟಕಷ್ಟೇ‌, ಒಂದು ಕೊಳವೆಬಾವಿ ಹಾಕಿಸಿದರೆ 800ರಿಂದ 1000 ಅಡಿಯಲ್ಲಿ ನೀರು ಸಿಗುತ್ತದೆ. ಇದಕ್ಕೆ ಲಕ್ಷಾಂತರ ರೂಪಾಯಿ ಸುರಿಯಬೇಕು. ಆರ್ಥಿಕ ಹಿಂದುಳಿದ ಜನರು ಇರುವುದರಿಂದ ಕೊಳವೆಬಾವಿಗೆ ಲಕ್ಷಾಂತರ ಸುರಿದರೆ ಅವರ ಜೀವನ ಪಾತಾಳಕ್ಕಿಳಿಯುತ್ತಿದೆ. ಸೌಲಭ್ಯ ವಂಚಿತ, ಬರಪೀಡಿತ ಜಗಳೂರು ತಾಲ್ಲೂಕನ್ನು ಪುನಃ ಚಿತ್ರದುರ್ಗ ಜಿಲ್ಲೆಗೆ ಸೇರಿಸಲು ಹೋರಾಟ ಚುರುಕು ಪಡೆದುಕೊಳ್ಳುತ್ತಿದೆ.

ಮಳೆ ಬಾರದೇ ಬಿತ್ತಿದ ಬೆಳೆಗಳು ಒಣಗಿ ಹೋಗಿದ್ದರೂ ಸಹ ದಾವಣಗೆರೆ ಜಿಲ್ಲೆಯಲ್ಲೇ ಅತಿ ಹಿಂದುಳಿದ, ಬರಪೀಡಿತ ಪ್ರದೇಶವಾದ ಜಗಳೂರು ತಾಲ್ಲೂಕನ್ನು ಸರ್ಕಾರಗಳು ಬರಪೀಡಿತ ದೇಶವೆಂದು ಘೋಷಣೆ ಮಾಡಿಲ್ಲ. ನೀರಾವರಿ ಪ್ರದೇಶ ಹೊಂದಿರುವ ಹರಿಹರ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡುವ ಮೂಲಕ ತಾಲ್ಲೂಕಿಗೆ ಮಲತಾಯಿ ಧೋರಣೆ ಮಾಡಿದೆ.

ಬಳ್ಳಾರಿಗೆ ಸೇರಿದ ಹರಪನಹಳ್ಳಿ; ಜಗಳೂರು ಕ್ಯಾತೆ

ಭಾಗಶಃ ನೀರಾವರಿ ಭೂಮಿ ಹೊಂದಿರುವ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೊಂಡಿದೆ. ಹರಪನಹಳ್ಳಿ ತಾಲೂಕಿನ ಜನತೆಗೆ ಹೈದರಾಬಾದ್ ಕರ್ನಾಟಕ ಸೌಲಭ್ಯ ಸಿಗಲಿದೆ. ಇದನ್ನೇ ಮುಂದಿಟ್ಟುಕೊಂಡಿರುವ ಜಗಳೂರು ತಾಲೂಕಿನ ಮುಖಂಡರು ನಮ್ಮನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಬಿಡಿ ಎಂಬ ಪಟ್ಟಹಿಡಿದಿದ್ದಾರೆ. ಜಗಳೂರು ತಾಲೂಕು ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳು, ವಿದರ್ಭ ಪ್ಯಾಕೇಜ್, ನಂಜುಂಡುಪ್ಪ ವರದಿಯ ಸೌಲಭ್ಯಗಳಿಂದ ವಂಚಿತವಾಗಿದೆ. ಚಿತ್ರದುರ್ಗ ಜಿಲ್ಲೆಗೆ ಸೇರಿಸಿದರೆ ನಮಗೆ ಈ ಸೌಲಭ್ಯ ಸಿಗಲಿದೆ ಎಂಬ ಆಶಯ ಹೊಂದಿದ್ದಾರೆ.

ಹೋರಾಟಕ್ಕೆ ಮಾಜಿ ಬೆಂಬಲ, ಹಾಲಿ ಶಾಸಕರಿಂದ ಕಾದು ನೋಡುವ ತಂತ್ರ

ಚಿತ್ರದುರ್ಗ ಜಿಲ್ಲೆಗೆ ಜಗಳೂರು ತಾಲೂಕು ಸೇರಿಸಲು ರೂಪಿಸುತ್ತಿರುವ ಹೋರಾಟಕ್ಕೆ ಮಾಜಿ ಶಾಸಕ ಎಚ್.ಪಿ. ರಾಜೇಶ್ ಬೆಂಬಲ ಸೂಚಿಸಿದ್ದಾರೆ. ಆದರೆ, ಹಾಲಿ ಶಾಸಕ ಎಸ್.ವಿ. ರಾಮಚಂದ್ರ ಕಾದು ನೋಡುವ ತಂತ್ರ ಬಳಸಿದ್ದು, ಇತ್ತ ಬೆಂಬಲವೂ ಇಲ್ಲ, ಅತ್ತ ವಿರೋಧವೂ ಇಲ್ಲ ಎಂಬಂತೆ ತಟಸ್ಥರಾಗಿದ್ದಾರೆ. ಆದರೆ, ಮಾಜಿ ಶಾಸಕ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜಗಳೂರು ತಾಲೂಕನ್ನು ದಾವಣಗೆರೆ ಜಿಲ್ಲೆಗೆ ಸೇರಿಸಿ ಇಪ್ಪತ್ತು ವರ್ಷಗಳಾದರೂ ಅಭಿವೃದ್ಧಿ ಕಂಡಿಲ್ಲ. ಹಾಗಾಗಿ ಜಗಳೂರು ತಾಲೂಕನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸುವುದು ಅನಿವಾರ್ಯ ಎಂಬ ಅಭಿಪ್ರಾಯ ಹೊಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ

Published

on

ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು ತಿಳಿಸಿದ್ದಾರೆ.

ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಮುಂತಾದ 12 ಕೋರ್ಸುಗಳ ಪ್ರವೇಶಕ್ಕೆ ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಇರುತ್ತದೆ,ಈ ಮೀಸಲಾತಿಯನ್ನು ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆಸುವ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಈ ಉಚಿತ ಕಾರ್ಯಗಾರದಲ್ಲಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆಯ ಕುರಿತು ಸಂಪೂರ್ಣ ತರಬೇತಿಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ದ್ಬಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಈ ಸದುಪಯೋಗ ಪಡಿಸಿಕೊಳ್ಳಬೇಕು. ಅಕ್ಕ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡಿಸಿಕೊಳ್ಳಬಹುದು,ಮತ್ತು ಕಾಲೇಜುಗಳ ಆಡಳಿತ ಮಂಡಳಿಯವರು ತಮ್ಮ ವಿದ್ಯಾರ್ಥಿಗಳನ್ನು ಈ ಉಚಿತ ಕಾರ್ಯಗಾರದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ.

ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮೊಬೈಲ್ ನಂ: 8217413646 ಗೆ ಕರೆಮಾಡಲು ಸೂಚಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

Published

on

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್‌ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.

ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.

ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ13 minutes ago

ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ

ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು...

ದಿನದ ಸುದ್ದಿ6 hours ago

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. 625ಕ್ಕೆ 625 ಅಂಕಗಳನ್ನು...

ದಿನದ ಸುದ್ದಿ1 day ago

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app...

ದಿನದ ಸುದ್ದಿ1 day ago

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ,...

ದಿನದ ಸುದ್ದಿ2 days ago

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ...

ದಿನದ ಸುದ್ದಿ5 days ago

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ...

ದಿನದ ಸುದ್ದಿ5 days ago

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ...

ದಿನದ ಸುದ್ದಿ1 week ago

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ...

ದಿನದ ಸುದ್ದಿ1 week ago

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್...

ದಿನದ ಸುದ್ದಿ1 week ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

Trending