ದಿನದ ಸುದ್ದಿ
ದಾವಣಗೆರೆ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ | ಅರ್ಹರಿಗೆ ಸರ್ಕಾರಿ ಸೌಲಭ್ಯಗಳ ವಿತರಣೆಯಲ್ಲಿ ಮದ್ಯವರ್ತಿಗಳ ಹಾವಳಿ ತಡೆಗಟ್ಟಲು ಕ್ರಮ : ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಜಗಳೂರು ತಾಲ್ಲೂಕು ಗಡಿ ಭಾಗದ ಅಂಚಿನಲ್ಲಿರುವ ಬಸವನಕೋಟೆ ಹಾಗೂ ಅಗಸನಹಳ್ಳಿ ಗ್ರಾಮಗಳು ಜಿಲ್ಲೆಯ ಆಡಳಿತದ ಮುಖ್ಯಸ್ಥರ ಸ್ವಾಗತಕ್ಕೆ ತಳಿರು ತೋರಣಗಳಿಂದ ನವವಧುವಿನಂತೆ ಸಿಂಗಾರಗೊಂಡಿದ್ದವು.
ಉಭಯ ಗ್ರಾಮಗಳಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಕಟೌಟ್ಗಳು ರಾರಾಜಿಸುತ್ತಿದ್ದವು. ಗ್ರಾಮದ ಸಮಸ್ಯೆಗಳ ಪರಿಹಾರದ ನಿರೀಕ್ಷೆಯ ಕಣ್ಣುಗಳು ಜಿಲ್ಲಾಧಿಕಾರಿಗಳ ಬರುವಿಕೆಯ ಹಾದಿಯನ್ನೇ ಎದುರು ನೋಡುತ್ತಿದ್ದವು.
ಕೆಲವು ಜನರ ಕೈಯಲ್ಲಿ ಸರ್ಕಾರಿ ಸವಲತ್ತು ಪಡೆಯಲು ವಯಕ್ತಿಕ ಅರ್ಜಿಗಳಿದ್ದರೆ, ಇನ್ನು ಕೆಲವರ ಕೈಯಲ್ಲಿ ಗ್ರಾಮದ ಜನರ ಹಿತಾಸಕ್ತಿಗಾಗಿ ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳ ಬೇಡಿಕೆಯನ್ನು ಹೊತ್ತ ಅರ್ಜಿಗಳಿದ್ದವು.
ಇದು ‘ಜಿಲ್ಲಾಧಿಕಾರಿಗಳ ನಡಿಗೆ- ಗ್ರಾಮಗಳ ಕಡೆಗೆ’ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಏರ್ಪಡಿಸಲು ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಡಳಿತ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕಾಗಿ ನಿಗದಿಪಡಿಸಲಾಗಿದ್ದ ಬಸವನಕೋಟೆ ಹಾಗೂ ಅಗಸನಹಳ್ಳಿ ಗ್ರಾಮಗಳಲ್ಲಿ ಶನಿವಾರ ಕಂಡುಬಂದ ದೃಶ್ಯಗಳಿವು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ತಮ್ಮ ವಾಹನವನ್ನು ಬಿಟ್ಟು, ಜಿಲ್ಲಾ ಮಟ್ಟದ ಎಲ್ಲ ಇಲಾಖಾ ಅಧಿಕಾರಿಗಳ ಸಮೇತ ಕೆಎಸ್ಆರ್ಟಿಸಿ ಬಸ್ ಮೂಲಕವೇ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕಾಗಿ ಬಸವನಕೋಟೆ ಗ್ರಾಮಕ್ಕೆ ಆಗಮಿಸಿದರು. ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಭವ್ಯ ಸ್ವಾಗತವನ್ನೇ ಏರ್ಪಡಿಸಿದ್ದರು.
ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ ಪ್ರಸಕ್ತ ವರ್ಷದ ಮೊದಲ ಗ್ರಾಮ ವಾಸ್ತವ್ಯ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಜಗಳೂರು ತಾಲ್ಲೂಕು ಬಸವನಕೋಟೆಯ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಉದ್ಘಾಟಿಸಿದರು.
ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ ಹಾಕಿರುವ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಮೊದಲು ಜಗಳೂರಿನ ಬಸವನಕೋಟೆ ಗ್ರಾಮದಲ್ಲಿ ಕಾರ್ಯಕ್ರಮವನ್ನು ಆರಂಭಿಸಿದರು, ನಂತರ ಅಗಸನಹಳ್ಳಿಯಲ್ಲಿ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದರು.
ಪ್ರತಿ ತಿಂಗಳು ಮೂರನೇ ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳು ಗ್ರಾಮದಲ್ಲಿ ವಾಸ್ತವ್ಯ ಮಾಡಬೇಕು ಎಂಬ ಸರ್ಕಾರದ ಮಾರ್ಗಸೂಚಿಯಂತೆ ಈ ಬಾರಿ ಜಗಳೂರು ತಾಲ್ಲೂಕಿನ ಅಗಸನಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದು, ಬಸವನಕೋಟೆ ಗ್ರಾಮದ ಜನರಿಂದ ಅಹವಾಲನ್ನು ಸ್ವೀಕರಿಸಿ ಸಾಧ್ಯವಾದಲ್ಲಿ ಇಲ್ಲಿಯೇ ಪರಿಹಾರ ಸೂಚಿಸುತ್ತೇವೆ ಎಂದು ಭರವಸೆ ಮೂಡಿಸಿದರು.
ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಬೇಕೆಂದರೂ ಮಧ್ಯವರ್ತಿಗಳು ಹಾಗೂ ಏಜೆಂಟರ ಹಾವಳಿ ಹೆಚ್ಚಾಗಿದ್ದು, ಅವರಿಗೆ ಹಣ ನೀಡದಿದ್ದರೆ ಕೆಲಸ ಆಗುವುದಿಲ್ಲ ಎಂಬ ಅಪವಾದವಿದೆ. ಈ ಕಾರಣದಿಂದ ಏಜೆಂಟರು ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಸರ್ಕಾರದ ಎಲ್ಲಾ ಸವಲತ್ತುಗಳನ್ನು ಯಾವುದೇ ಖರ್ಚಿಲ್ಲದೇ ನೇರವಾಗಿ ನಿಮ್ಮ ಬಾಗಿಲಿಗೆ ತಲುಪಿಸುವ ಸದ್ದುದ್ದೇಶದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಗ್ರಾಮದ ಕೇರಿ ಕೇರಿಗೂ ಓಡಾಡಿ ಖುದ್ದಾಗಿ ಸಾರ್ವಜನಿಕರಿಂದ ಅಲ್ಲಿಯ ಸಮಸ್ಯೆಗಳು, ವಾಸ್ತವತೆ ಕುರಿತು ತಿಳಿದುಕೊಂಡಿದ್ದೇನೆ. ಗ್ರಾಮಸ್ಥರು ತಮಗೆ ಸಿಗುವ ಸವಲತ್ತುಗಳ ಕುರಿತು ಪ್ರಾಮಾಣಿಕವಾಗಿ ಹೇಳಿದ್ದು, ಸಮಸ್ಯೆಗಳನ್ನು ತಿಳಿಸಿದ್ದಾರೆ. ಈ ಗ್ರಾಮದಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯಗಳ ಸತ್ಯ ದರ್ಶನವಾಗಿದೆ. ಗ್ರಾಮದಲ್ಲಿ ಸಾಕಷ್ಟು ಕೆಲಸ ಮಾಡಲು ಬಾಕಿ ಉಳಿದಿದ್ದು ಅದನ್ನು ಪೂರೈಸಲು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ, ಸಂಧ್ಯಾ ಸುರಕ್ಷಾ ಯೋಜನೆಯಡಿ ಬಸವನಕೋಟೆಯಲ್ಲಿ 23 ಅರ್ಜಿ, ಅಗಸನಹಳ್ಳಿ ಗ್ರಾಮದಲ್ಲಿ 8 ಅರ್ಜಿ ಸೇರಿದಂತೆ ಒಟ್ಟು 31 ಅರ್ಜಿ ಬಂದಿದ್ದು ಅದರ ಮಂಜೂರಾತಿ ಆದೇಶಗಳನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ. ವೃದ್ಧಾಪ್ಯ ವೇತನ ಯೋಜನೆಯಡಿ ಬಸವನಕೋಟೆಯಲ್ಲಿ 31, ಅಗಸನಹಳ್ಳಿಯಲ್ಲಿ 07 ಸೇರಿದಂತೆ ಒಟ್ಟು 38 ಅರ್ಜಿಗಳು ಬಂದಿದ್ದು, ಅರ್ಹರೆಲ್ಲರಿಗೂ ಮಂಜೂರಾತಿ ಆದೇಶ ನೀಡಲಾಗುವುದು.
ಇನ್ನು ವಿಧವವೇತನ ಯೋಜನೆಯಡಿ ಬಸವನಕೋಟೆಯಲ್ಲಿ 4, ಅಗಸನಹಳ್ಳಿಯಲ್ಲಿ 01, ಒಟ್ಟು 5 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು ಮಂಜೂರು ಆದೇಶಗಳನ್ನು ನೀಡಲಾಗುವುದು ಹಾಗೂ 03 ಅಂಗವಿಕಲರ ಮಾಸಾಶನ ಮಂಜೂರಾತಿ ನೀಡಲಾಗುವುದು ಎಂದರು.
ಜಿಲ್ಲಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿಯ ಗ್ರಾಮಸ್ಥರು ಮಗುವೊಂದನ್ನು ತೋರಿಸಿ ಮಗುವಿನ ಖಾಯಿಲೆ ಗುಣಮುಖ ಮಾಡಲು ಖಾಸಗಿ ಆಸ್ಪತ್ರೆಗೆ ಸೇರಿಸಿ ಇಂಜೆಕ್ಷನ್ ಮಾಡಿಸಿದ್ದರ ಪರಿಣಾಮ ಇಂದು ವಾಸಿಮಾಡಲಾಗದ ಸ್ಥಿತಿಗೆ ತಲುಪಿದೆ. ಚಿಕಿತ್ಸೆ ನೀಡಿ ಗುಣಮುಖರಾಗಲು ಸಾಧ್ಯವೇ ಇಲ್ಲದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದು, ಮಗುವಿನ ಸಂಪೂರ್ಣ ಚಿಕಿತ್ಸೆಗಾಗಿ ಜಿಲ್ಲಾಡಳಿತದ ವತಿಯಿಂದ ದಾವಣಗೆರೆಯ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಮೂಲಕ ಗುಣಮುಖರನ್ನಾಗಿ ಮಾಡಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು.
ಈ ಗ್ರಾಮದಲ್ಲಿ ಬಹಳಷ್ಟು ಜನ ಅಂಗವಿಕಲರ ವೇತನ ತೆಗೆದುಕೊಳ್ಳುತ್ತಿದ್ದಾರೆ. ಅವರ ಪೈಕಿ ಕೆಲವರು ಶೇ.75 ಕ್ಕಿಂತ ಹೆಚ್ಚು ಜನರು ಅಂಗವೈಕಲ್ಯವಿದ್ದರು ಸಹ ಸರಿಯಾದ ಪ್ರಮಾಣಪತ್ರ ಸಿಗದೆ ಸರ್ಕಾರಿ ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ. ರೂ. 1400 ಪಿಂಚಣಿ ಪಡೆಯಲು ಈ ಗ್ರಾಮದಲ್ಲಿ ಸುಮಾರು 6-7 ಜನರು ಅರ್ಹರಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಎಲ್ಲಾ ಸೌಲಭ್ಯಗಳನ್ನು ವಿಳಂಬ ರಹಿತವಾಗಿ ವಿತರಿಸಲಾಗುತ್ತದೆ ಎಂದರು.
ಈ ಊರಿಗೆ ಅನೇಕ ಕೆಲಸ ಮಾಡಲು ಬಾಕಿ ಇದ್ದು ರಸ್ತೆ, ಚರಂಡಿ ಸ್ವಚ್ಚತೆ, ರಾಜಕಾಲುವೆ ನಿರ್ಮಾಣ, ಆಸ್ಪತ್ರೆಯಲ್ಲಿ ವೈದ್ಯರನ್ನು ಒದಗಿಸಲಾಗುವುದು. ಹಾಗೂ ಈ ಗ್ರಾಮದಿಂದ ಹರಪನಹಳ್ಳಿ, ಉಜ್ಜಯಿನಿ, ಕೊಟ್ಟೂರು ಮತ್ತು ದಾವಣಗೆರೆಗೆ ಸರ್ಕಾರಿ ಬಸ್ಸಿನ ಸೌಲಭ್ಯಗಳನ್ನು ನೀಡುವ ವ್ಯವಸ್ಥೆಯನ್ನು ಒದಗಿಸಲು ಜಿಲ್ಲಾಡಳಿತ ಮುಂದಾಗಿದ್ದು, ಇದರಿಂದ ಅನೇಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮಾದರಿಯಾಗಲಿದೆ ಎಂದು ವಿದ್ಯಾರ್ಥಿಗಳಲ್ಲಿ ಹಾಗೂ ಗ್ರಾಮಸ್ಥರಲ್ಲಿ ಭರವಸೆ ಮೂಡಿಸಿದರು.
ಜಿಲ್ಲಾ ಕೇಂದ್ರದಲ್ಲಿ ಅನೇಕ ವಸತಿ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ದಾವಣಗೆರೆಯತ್ತ ಮುಖ ಮಾಡಿ ಹೆಚ್ಚಿನ ಶಿಕ್ಷಣ ಪಡೆದು ಉನ್ನತ ಮಟ್ಟಕ್ಕೆ ಏರಬೇಕು. ಅಲ್ಲದೇ ಈ ಗ್ರಾಮಗಳಲ್ಲಿ ಖಾಸಗಿ ಬಸ್ಸುಗಳ ಹಾವಳಿ ತುಸು ಹೆಚ್ಚಾಗೆ ಇದ್ದು, ಮುಂದಿನ ದಿನಗಳಲ್ಲಿ ಜನರ ಅನುಕೂಲಕ್ಕಾಗಿ ಸರ್ಕಾರಿ ಬಸ್ಸುಗಳ ಸವಲತ್ತುಗಳನ್ನು ಒದಗಿಸಲು ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ9 hours agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ2 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

