ದಿನದ ಸುದ್ದಿ
ಜಗಳೂರು | ಗೃಹಲಕ್ಷ್ಮಿ ಹಣ ಕೊಡದಿದ್ದಕ್ಕೆ ಪತ್ನಿ ಕೊಂದ ಪತಿ

ಸುದ್ದಿದಿನ,ದಾವಣಗೆರೆ : ಗೃಹಲಕ್ಷ್ಮಿ ಹಣ ಕೊಡದಿದ್ದಕ್ಕೆ ಪತ್ನಿಯನ್ನ ಪತಿ ಕೊಲೆ ಮಾಡಿರುವ ಘಟನೆ ಜಗಳೂರು ತಾಲೂಕಿನ ಹೊಸಬುಳ್ಳಾಪುರ ಗ್ರಾಮದಲ್ಲಿ ನಡೆದಿದೆ.
ಸತ್ಯಮ್ಮ ಎಂಬಾಕೆ ಪತಿಯಿಂದ ಕೊಲೆಯಾಗಿದ್ದು, ತಾಲೂಕಿನ ಹೊಸಬುಳ್ಳಾಪುರ ಗ್ರಾಮದ ಆಕೆಯನ್ನ ಕಳೆದ 12 ವರ್ಷಗಳ ಹಿಂದೆ ಜಗಳೂರು ತಾಲೂಕಿನ ಉಜ್ಜಪ್ಪವಡೆಯರಹಳ್ಳಿಯ ಅಣ್ಣಪ್ಪ ಎಂಬಾಂತ ಪ್ರೇಮಿಸಿ ಮದುವೆಯಾಗಿದ್ದ. ಇವರಿಬ್ಬರ ಸುಖ ಸಂಸಾರಕ್ಕೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗು ಕೂಡ ಇತ್ತು. ಗಾರೆ ಕೆಲಸಕ್ಕೆ ಹೋಗುತ್ತಿದ್ದ ಅಣ್ಣಪ್ಪ ಕುಡಿತದ ಚಟಕ್ಕೆ ದಾಸನಾಗಿದ್ದ.
ಕುಡಿದು ಬಂದು ಹಣಕ್ಕಾಗಿ ಪೀಡಿಸುತ್ತಿದ್ದ ಅಣ್ಣಪ್ಪ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಈ ಬಗ್ಗೆ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಎರಡು ಬಾರಿ ರಾಜಿ ಸಂದಾನ ಕೂಡ ನಡೆದಿದ್ದು ಪೊಲೀಸರು ಹೊಂದಿ ಕೊಂಡು ಹೋಗುವಂತೆ ಬುದ್ದಿ ಹೇಳಿದ್ದರು. ಆದರೂ ಕುಡಿದು ಬಂದು ಹೆಂಡತಿಗೆ ಮಾನಸಿಕ ಹಿಂಸೆ ನೀಡುತ್ತಿದ್ದ ಅಣ್ಣಪ್ಪ ನಿತ್ಯ ದುಡ್ಡಿಗಾಗಿ ಹೆಂಡತಿಯನ್ನ ಪೀಡಿಸುತ್ತಿದ್ದ. ಅದೇ ರೀತಿ ಗೃಹಲಕ್ಷ್ಮಿ ಹಣ ಕಳೆದ ವಾರವಷ್ಟೇ ಸತ್ಯಮ್ಮನ ಅಕೌಂಟ್ ಗೆ ಬಂದಿದೆ. ಅತಿಯಾದ ಮಳೆಯಿಂದ ಕೂಲಿ ಕೆಲಸ ಇಲ್ಲದೇ ಪರದಾಡುತ್ತಿದ್ದ ಅಣ್ಣಪ್ಪ ಪತ್ನಿ ಸತ್ಯಮ್ಮಳಿಗೆ ಗೃಹ ಲಕ್ಷ್ಮಿ ಹಣ ಬಿಡಿಸಿಕೊಡುವಂತೆ ಪೀಡಿಸುತ್ತಿದ್ದನಂತೆ.
ಅಣ್ಣಪ್ಪನ ಕಾಟ ತಾಳಲಾರದೆ ಸತ್ಯಮ್ಮ ಮಗನೊಂದಿಗೆ ಅಸಗೋಡು ಗ್ರಾಮದ ಕೆನರಾ ಬ್ಯಾಂಕ್ ಶಾಖೆಗೆ ಹಣ ಬಿಡಿಸಿಕೊಳ್ಳಲು ಬಂದಾಗ ಹಿಂಬಾಲಿಸಿದ ಅಣ್ಣಪ್ಪ ಬ್ಯಾಂಕ್ ನಲ್ಲೆ ಹಣ ಕೊಡು ಎಂದು ಹೆಂಡತಿಯೊಂದಿಗೆ ಜಗಳ ತೆಗೆದು ಹಲ್ಲೆ ಮಾಡಿದ್ದಾನೆ. ಕೊನೆಗೆ ಸ್ಥಳೀಯರು ಜಗಳ ಬಿಡಿಸಿ ಕಳುಹಿಸಿದ್ದಾರೆ. ಬಳಿಕ ಉಜ್ಜಪ್ಪರವಡೇರಹಳ್ಳಿ ಸಮೀಪದ ಜಮೀನಿಗೆ ಕರೆದೊಯ್ದು ಕೊಲೆ ಮಾಡಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದು, ಕೊಲೆ ಮಾಡಿ ಮೈನ್ಸ್ ವಯರ್ ಕೆಳಗೆ ಬಿಸಾಕಿ ಹೋಗಿದ್ದಾನೆ. ಅಲ್ಲದೆ ಕರೆಂಟ್ ಹೊಡೆದು ಸತ್ತೋಗಿದ್ದಾಳೆ ಎಂದು ಕಥೆ ಕಟ್ಟಿದ್ದನಂತೆ.
ಇನ್ನು ಸತ್ಯಮ್ಮ ಸತ್ತಾಗಿನಿಂದ ಅಣ್ಣಪ್ಪ ಹಾಗೂ ಆತನ ಕುಟುಂಭಸ್ಥರು ತಲೆಮರೆಸಿಕೊಂಡಿದ್ದು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ರವಾನೆ ಮಾಡಿದ್ದು, ಕೊಲೆ ಆರೋಪಿ ಅಣ್ಣಪ್ಪ ವಿರುದ್ದ ಸತ್ಯಮ್ಮ ಸಂಬಂಧಿಕರು ಅಕ್ರೋಶ ಹೊರ ಹಾಕಿದ್ದು, ಆತನಿಗೆ ತಕ್ಕ ಶಿಕ್ಷೇಯಾಗಲಿ ಎಂದು ಹಿಡಿ ಶಾಪ ಹಾಕಿದರು.
ಇದೀಗ ಅಣ್ಣಪ್ಪ ತಲೆ ಮರೆಸಿಕೊಂಡಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್ಆರ್ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ2 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ2 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ5 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ2 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ