Connect with us

ದಿನದ ಸುದ್ದಿ

ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನರಾಮ್

Published

on

ದೇಶಾದ್ಯಂತ “ಬಾಬುಜಿ” ಎಂದೇ ಕರೆಯಲ್ಪಡುವ ಜಗಜೀವನರಾಮ್ ರವರು ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು.

ಬಾಬು ಜಗಜೀವನರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಅಸ್ಪøಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕ ಜಗಜೀವನರಾಮ್‍ರವರ 115ನೇ ಜಯಂತೋತ್ಸವವನ್ನು ಏಪ್ರಿಲ್ 5 ರಂದು ದೇಶದಾದ್ಯಂತ ಆಚರಿಸಲಾಗುತ್ತದೆ.

ಭಾರತದ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ರಾಜಕಾರಣದಲ್ಲಿ ಬಾಬು ಜಗಜೀವನರಾಮ್ ಅವರ ಪಾತ್ರ ಪ್ರಮುಖವಾದದ್ದು. ಭಾರತದಲ್ಲಿ ದೀರ್ಘ ಕಾಲದಿಂದ ಬೆಳೆದುಕೊಂಡು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಸ್ಪøಶ್ಯ- ಅಸ್ಪøಶ್ಯ ಎಂಬ ಮನೋಭಾವಗಳನ್ನು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿದವರು ಅನೇಕರು. ಆದರೆ ಅವರ ಏಳಿಗೆಗೆ ಹೆಚ್ಚಿನ ಚುರುಕು ನೀಡಿ ಒಂದು ಸ್ಪಷ್ಟ ರೂಪ ಕೊಟ್ಟ ಕೆಲವೇ ಕೆಲವು ನಾಯಕರಲ್ಲಿ ಬಾಬು ಜಗಜೀವನರಾಮ್ ಒಬ್ಬರು.

1908 ಏಪ್ರಿಲ್ 5 ರಂದು ಬಿಹಾರದ ‘ಆರಾ’ ಜಿಲ್ಲೆಯ ಚಾಂದ್ವಾ ಗ್ರಾಮದಲ್ಲಿ ಜನಿಸಿದ ಬಾಬು ಜಗಜೀವನರಾಮ್ ಅವರು ವಿದ್ಯಾರ್ಥಿಯಾಗಿದ್ದಾಗಲೇ ಸಾಕಷ್ಟು ನಿಂಧನೆ, ಅಪಮಾನ ಹಾಗೂ ನೋವುಗಳನ್ನು ಅನುಭವಿಸಿದ್ದರು. ತಂದೆ ಶೋಭಿರಾಮ್ ಬ್ರಿಟಿಷರ ಭಾರತೀಯ ಸೈನ್ಯದಲ್ಲಿದ್ದು, ಹಲವು ಕಡೆ ಕೆಲಸ ಮಾಡಿ, ತಮ್ಮ ಹುದ್ದೆಗೆ ರಾಜಿನಾಮೆ ಕೊಟ್ಟು ಆರಾ ಪಟ್ಟಣದ ಸಮೀಪದ ಚಾಂದ್ವಾ ಗ್ರಾಮದಲ್ಲಿ ಭೂಮಿಯನ್ನು ಕೊಂಡು ಕೃಷಿಯನ್ನು ಆರಂಭಿಸಿದರು.

ಸಣ್ಣ ವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡ ಜಗಜೀವನ್ ರಾಮ್ ತಾಯಿ ವಾಸಂತಿ ದೇವಿಯವರ ಆರೈಕೆಯಲ್ಲಿ ಬೆಳೆದರು. ಬಾಲಕ ರಾಮ್ ಆರಾದಲ್ಲಿನ ಮಾಧ್ಯಮಿಕ ಶಾಲೆಯಲ್ಲಿದ್ದಾಗ ಅಲ್ಲಿ ಎರಡು ಪ್ರತ್ಯೇಕ ಕುಡಿಯುವ ನೀರಿನ ಮಡಕೆಗಳನ್ನು ಇಡಲಾಗಿತ್ತು. ಒಂದು ಮಡಕೆ ನೀರು ಹಿಂದು ಮಕ್ಕಳಿಗೆ, ಮತ್ತೊಂದು ಮುಸ್ಲಿಂ ಮಕ್ಕಳಿಗಾಗಿ. ರಾಮ್ ಹಿಂದು ಮಡಕೆಯ ನೀರನ್ನು ಕುಡಿದಾಗ, ಶಾಲಾ ಪ್ರಾಂಶುಪಾಲರವರೆಗೆ ದೂರು ಹೋಯಿತು. ಆಗ ಪ್ರಾಂಶುಪಾಲರು ಮೂರನೆಯ ಮಡಕೆಯನ್ನು ಇರಿಸಿ, ಅದು ಅಸ್ಪøಶ್ಯ ಮಕ್ಕಳಿಗೆ ಎಂದು ಹೇಳಿದರು.

ಮೊದಲ ಬಾರಿಗೆ ಅಸ್ಪøಶ್ಯತೆಯ ಅಪಮಾನ ರಾಮ್ ಅವರನ್ನು ಬಹುವಾಗಿ ಕಾಡಿತು. ಇದರಿಂದ ಸಿಟ್ಟಿಗೆದ್ದ ಬಾಲಕ ರಾಮ್ ಎರಡು ಬಾರಿ ಆ ಮಡಕೆಗಳನ್ನು ಒಡೆದುಹಾಕಿ ತಮ್ಮ ಕೋಪವನ್ನು ಪ್ರದರ್ಶಿಸಿದರು. ಪ್ರಾಂಶುಪಾಲರೇನೋ ಆ ಮೂರನೇ ಮಡಿಕೆ ತೆಗೆಸಿದರು. ಆದರೆ ಈ ಜಾತಿ ಪದ್ಧತಿಯ ಅಪಮಾನದ ಗಾಯ ಬಾಲಕ ರಾಮ್ ಅವರ ಎದೆಯೊಕ್ಕಿತು. ಮುಂದೆ ಜೀವನದ ಉದ್ದಕ್ಕೂ ರಾಮ್ ನಡೆಸಿದ ಎಲ್ಲ ಚಟುವಟಿಕೆಗಳ ಹಿಂದೆ ಈ ನೋವು ಉಳಿದುಕೊಂಡೇ ಇತ್ತು . ಇಂತಹ ಅಪಮಾನದಿಂದ ದಲಿತರನ್ನು ಪಾರು ಮಾಡುವ ಆಶಯವೇ ರಾಮ್ ಅವರ ಎಲ್ಲ ಚಟವಟಿಕೆಗಳ ಪ್ರಧಾನ ಅಂಶವಾಗಿ ಮಾರ್ಪಟ್ಟಿತ್ತು.

ಮುಂದೆ ದಲಿತ ನಾಯಕರಾಗಿ ರೂಪುಗೊಂಡ ಜಗಜೀವನ ರಾಮ್ ಅವರಿಗೆ ಬಿಹಾರ ಕಾರ್ಯಕ್ಷೇತ್ರವಾಯಿತು. ಗಾಂಧೀಜಿಯವರು ಆರಂಭಿಸಿದ್ದ ಅಸ್ಪøಶ್ಯತೆಯ ವಿರುದ್ದದ ಹೋರಾಟದಲ್ಲಿ ರಾಮ್ ಪಾಲ್ಗೊಂಡರು. 1935ರಲ್ಲಿ ದಲಿತರ ಸಮಾನತೆಗಾಗಿ ಹೋರಾಡುವ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದ “ಅಖಿಲ ಭಾರತ ದಮಮನಿತ ವರ್ಗಗಳ ಒಕ್ಕೂಟ”ವನ್ನು ಸ್ಥಾಪಿಸುವಲ್ಲಿ ಜಗಜೀವನ್‍ರಾಮ್ ಅವರು ನಿರ್ವಹಿಸಿದ ಪಾತ್ರ ಮಹತ್ವದಾಗಿತ್ತು.

ಬಾಬು ಜಗಜೀವನರಾಮ್ 1937 ರಲ್ಲಿ ಬಿಹಾರದ ವಿಧಾನ ಸಭೆಗೆ ಆಯ್ಕೆಯಾಗಿ, 1946ರಲ್ಲಿ ಜವಹರಲಾಲ್ ನೆಹರು ಅವರ ನೇತೃತ್ವದಲ್ಲಿ ಪ್ರಥಮ ಹಂಗಾಮಿ ಸರ್ಕಾರ ರಚನೆಯಾದಾಗ ಸಂಪುಟದ ಅತ್ಯಂತ ಕಿರಿಯ ಸಚಿವರಾಗಿ ಕಾರ್ಮಿಕ ಖಾತೆಯನ್ನು ನೀಡಲಾಗಿತ್ತು. ಮುಂದೆ ಬಾಬುಜೀ ಅವರು ತಮ್ಮ ರಾಜಕೀಯ ಪಯಣದಲ್ಲಿ ಹಿಂದುರುಗಿ ನೋಡಿದ್ದೇ ಇಲ್ಲ. ಹಲವಾರು ಖಾತೆಗಳ ಸಚಿವ ಸ್ಥಾನಗಳನ್ನು ನಿರ್ವಹಿಸಿದರು. ಈ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ ಹೊಸ-ಹೊಸ ಕಾಯ್ದೆಗಳನ್ನು ಜಾರಿಗೆ ತಂದು ಕಾರ್ಮಿಕ ಖಾತೆಗಳ ಶಿಲ್ಪಿ ಎಂದು ಕರೆಯಲ್ಪಟ್ಟರು. ಭಾರತದಲ್ಲಿ ಪ್ರಪ್ರಥಮ ಬಾರಿಗೆ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಾನೂನು ರಚಿಸಿದ್ದು ಬಾಬುಜೀ ಅವರ ಹೆಗ್ಗಳಿಕೆ.

1971 ರಲ್ಲಿ ಭಾರತ-ಪಾಕ್ ಮಧ್ಯೆ ಯುದ್ಧ ನಡೆದಾಗ (ಬಾಂಗ್ಲಾ ಪ್ರತ್ಯೇಕ ರಾಷ್ಟ್ರವಾಗಿ ಉದಯವಾದದ್ದು ಈ ಯುದ್ಧದ ಫಲಶೃತಿ) ಜಗಜೀವನ ರಾಮ್ ಕೇಂದ್ರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದರು. ರಾಮ್ ಅವರು ಕೃಷಿ ಸಚಿವರಾಗಿದ್ದಾಗ ಭಾರತೀಯ ಕೃಷಿ ಆಧುನೀಕರಣಗೊಂಡಿತು ಮತ್ತು ಭಾರತದಲ್ಲಿ ಹಸಿರು ಕ್ರಾಂತಿ ನಡೆಯಿತು. 1974ರಲ್ಲಿ ದೇಶ ಬರಗಾಲವನ್ನು ಎದುರಿಸಿದಾಗ ಆಹಾರದ ಬಿಕ್ಕಟ್ಟನ್ನು ನಿಭಾಯಿಸುವ ಹೊಣೆಯನ್ನು ಹೊತ್ತು, ಆಹಾರ ಖಾತೆಯನ್ನು ಹೆಚ್ಚುವರಿಯಾಗಿ ನಿರ್ವಹಿಸಿದರು.

1975ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದಾಗ ಅದನ್ನು ಜಗಜೀವನರಾಮ್ ಅವರು ಬೆಂಬಲಿಸಿದರು. 1977 ರಲ್ಲಿ ಕಾಂಗ್ರೆಸ್ ತೊರೆದು “ಕಾಂಗ್ರೆಸ್ ಫಾರ್ ಡೆಮಾಕ್ರಸಿ” ಎಂಬ ಹೊಸ ಪಕ್ಷವನ್ನು ಸ್ಥಾಪಿಸಿ, ಜನತಾ ಪಕ್ಷದ ಮೈತ್ರಿಯನ್ನು ಸೇರಿದರು. ನಂತರ ಅವರು ಭಾರತದ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು (1977-79).

ಜಗಜೀವನ್‍ರಾಮ್ ಅವರು ‘ದೀರ್ಘಕಾಲ ಸೇವೆ ಸಲ್ಲಿಸಿದ ಕ್ಯಾಬಿನೆಟ್ ಮಂತ್ರಿ’ ಎಂಬ ದಾಖಲೆಯನ್ನು ಹೊಂದಿದ್ದಾರೆ. 1952ರಲ್ಲಿ ನಡೆದ ಮೊದಲ ಚುನಾವಣೆಯಿಂದ ಹಿಡಿದು 34 ವರ್ಷಗಳ ಕಾಲ ನಿರಂತರ ಸಂಸದರಾಗಿ ಸೇವೆ ಸಲ್ಲಿಸಿದರು. 1986ರಲ್ಲಿ ಅವರು ಮರಣ ಹೊಂದುವವರೆಗೂ ಸಂಸತ್ತಿನಲ್ಲಿ ಸದಸ್ಯರಾಗಿದ್ದರು.

ಬಾಬುಜೀ ಅವರು ಅಲಂಕರಿಸಿದ ಪ್ರಮುಖ ಸಚಿವಾಲಯಗಳೆಂದರೆ, ಕೇಂದ್ರ ಕಾರ್ಮಿಕ ಮಂತ್ರಿ(1946-52), ಕೇಂದ್ರ ಸಂಪರ್ಕ ಸಚಿವರು(1952-56), ಕೇಂದ್ರ ಸಾರಿಗೆ ಮತ್ತು ರೈಲ್ವೇ ಸಚಿವರು(1956-62), ಕೇಂದ್ರ ಸಾರಿಗೆ ಮತ್ತು ಸಂಪರ್ಕ ಸಚಿವರು(1962-63), ಕಾರ್ಮಿಕ, ಉದ್ಯೋಗ ಮತ್ತು ಪುನರ್ವಸತಿ ಕೇಂದ್ರ ಸಚಿವರು(1966-67), ಕೇಂದ್ರ ಆಹಾರ ಮತ್ತುಕೃಷಿ ಸಚಿವರು(1967-70), ಕೇಂದ್ರ ರಕ್ಷಣ ಸಚಿವರು (1970-74, 1977-79), ಕೇಂದ್ರ ಕೃಷಿ ಮತ್ತು ನೀರಾವರಿ ಸಚಿವರು (1974-77).

ದಲಿತ ಸಮುದಾಯ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಬಾಬುಜೀ ಅವರು 1986 ಜುಲೈ 6 ರಂದು ಕೊನೆಯುಸಿರೆಳೆದರು. ಅವರ ಸಮಾದಿ ಸ್ಥಳವನ್ನು “ತನ್ಮಯಿ” ಸ್ಮಾರಕವಾಗಿ ಪರಿವರ್ತಿಸಲಾಗಿದೆ. ಮತ್ತು ಬಾಬುಜೀ ಅವರ ಜನ್ಮ ದಿನವನ್ನು ಭಾರತದಲ್ಲಿ ತನ್ಮಯಿ ದಿನ (ಸಮಾನತೆ ದಿನ) ಎಂದು ಆಚರಿಸಲಾಗುತ್ತಿದೆ.

ದಲಿತರ ಕುರಿತು ತೀವ್ರ ಸಹಾನುಭೂತಿ ಹೊಂದಿದ್ದ ಬಾಬುಜಿ ತಮ್ಮ ಜ್ಞಾನ ಮತ್ತು ವ್ಯಾಪಕ ದೃಷ್ಟಿಕೋನದಿಂದ ದೇಶ ಸೇವೆ ಮಾಡಿದರು. ಸರ್ವ ಜನರ ಕಲ್ಯಾಣದ ಕನಸು ಕಂಡಿದ್ದರು.

ವರದಿ : ರಿಥೇಶ ನಾಯ್ಕ್
ಅಪ್ರೆಂಟಿಸ್, ವಾರ್ತಾ ಇಲಾಖೆ, ಶಿವಮೊಗ್ಗ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending