ದಿನದ ಸುದ್ದಿ
ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನರಾಮ್
ದೇಶಾದ್ಯಂತ “ಬಾಬುಜಿ” ಎಂದೇ ಕರೆಯಲ್ಪಡುವ ಜಗಜೀವನರಾಮ್ ರವರು ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು.
ಬಾಬು ಜಗಜೀವನರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಅಸ್ಪøಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕ ಜಗಜೀವನರಾಮ್ರವರ 115ನೇ ಜಯಂತೋತ್ಸವವನ್ನು ಏಪ್ರಿಲ್ 5 ರಂದು ದೇಶದಾದ್ಯಂತ ಆಚರಿಸಲಾಗುತ್ತದೆ.
ಭಾರತದ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ರಾಜಕಾರಣದಲ್ಲಿ ಬಾಬು ಜಗಜೀವನರಾಮ್ ಅವರ ಪಾತ್ರ ಪ್ರಮುಖವಾದದ್ದು. ಭಾರತದಲ್ಲಿ ದೀರ್ಘ ಕಾಲದಿಂದ ಬೆಳೆದುಕೊಂಡು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಸ್ಪøಶ್ಯ- ಅಸ್ಪøಶ್ಯ ಎಂಬ ಮನೋಭಾವಗಳನ್ನು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿದವರು ಅನೇಕರು. ಆದರೆ ಅವರ ಏಳಿಗೆಗೆ ಹೆಚ್ಚಿನ ಚುರುಕು ನೀಡಿ ಒಂದು ಸ್ಪಷ್ಟ ರೂಪ ಕೊಟ್ಟ ಕೆಲವೇ ಕೆಲವು ನಾಯಕರಲ್ಲಿ ಬಾಬು ಜಗಜೀವನರಾಮ್ ಒಬ್ಬರು.
1908 ಏಪ್ರಿಲ್ 5 ರಂದು ಬಿಹಾರದ ‘ಆರಾ’ ಜಿಲ್ಲೆಯ ಚಾಂದ್ವಾ ಗ್ರಾಮದಲ್ಲಿ ಜನಿಸಿದ ಬಾಬು ಜಗಜೀವನರಾಮ್ ಅವರು ವಿದ್ಯಾರ್ಥಿಯಾಗಿದ್ದಾಗಲೇ ಸಾಕಷ್ಟು ನಿಂಧನೆ, ಅಪಮಾನ ಹಾಗೂ ನೋವುಗಳನ್ನು ಅನುಭವಿಸಿದ್ದರು. ತಂದೆ ಶೋಭಿರಾಮ್ ಬ್ರಿಟಿಷರ ಭಾರತೀಯ ಸೈನ್ಯದಲ್ಲಿದ್ದು, ಹಲವು ಕಡೆ ಕೆಲಸ ಮಾಡಿ, ತಮ್ಮ ಹುದ್ದೆಗೆ ರಾಜಿನಾಮೆ ಕೊಟ್ಟು ಆರಾ ಪಟ್ಟಣದ ಸಮೀಪದ ಚಾಂದ್ವಾ ಗ್ರಾಮದಲ್ಲಿ ಭೂಮಿಯನ್ನು ಕೊಂಡು ಕೃಷಿಯನ್ನು ಆರಂಭಿಸಿದರು.
ಸಣ್ಣ ವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡ ಜಗಜೀವನ್ ರಾಮ್ ತಾಯಿ ವಾಸಂತಿ ದೇವಿಯವರ ಆರೈಕೆಯಲ್ಲಿ ಬೆಳೆದರು. ಬಾಲಕ ರಾಮ್ ಆರಾದಲ್ಲಿನ ಮಾಧ್ಯಮಿಕ ಶಾಲೆಯಲ್ಲಿದ್ದಾಗ ಅಲ್ಲಿ ಎರಡು ಪ್ರತ್ಯೇಕ ಕುಡಿಯುವ ನೀರಿನ ಮಡಕೆಗಳನ್ನು ಇಡಲಾಗಿತ್ತು. ಒಂದು ಮಡಕೆ ನೀರು ಹಿಂದು ಮಕ್ಕಳಿಗೆ, ಮತ್ತೊಂದು ಮುಸ್ಲಿಂ ಮಕ್ಕಳಿಗಾಗಿ. ರಾಮ್ ಹಿಂದು ಮಡಕೆಯ ನೀರನ್ನು ಕುಡಿದಾಗ, ಶಾಲಾ ಪ್ರಾಂಶುಪಾಲರವರೆಗೆ ದೂರು ಹೋಯಿತು. ಆಗ ಪ್ರಾಂಶುಪಾಲರು ಮೂರನೆಯ ಮಡಕೆಯನ್ನು ಇರಿಸಿ, ಅದು ಅಸ್ಪøಶ್ಯ ಮಕ್ಕಳಿಗೆ ಎಂದು ಹೇಳಿದರು.
ಮೊದಲ ಬಾರಿಗೆ ಅಸ್ಪøಶ್ಯತೆಯ ಅಪಮಾನ ರಾಮ್ ಅವರನ್ನು ಬಹುವಾಗಿ ಕಾಡಿತು. ಇದರಿಂದ ಸಿಟ್ಟಿಗೆದ್ದ ಬಾಲಕ ರಾಮ್ ಎರಡು ಬಾರಿ ಆ ಮಡಕೆಗಳನ್ನು ಒಡೆದುಹಾಕಿ ತಮ್ಮ ಕೋಪವನ್ನು ಪ್ರದರ್ಶಿಸಿದರು. ಪ್ರಾಂಶುಪಾಲರೇನೋ ಆ ಮೂರನೇ ಮಡಿಕೆ ತೆಗೆಸಿದರು. ಆದರೆ ಈ ಜಾತಿ ಪದ್ಧತಿಯ ಅಪಮಾನದ ಗಾಯ ಬಾಲಕ ರಾಮ್ ಅವರ ಎದೆಯೊಕ್ಕಿತು. ಮುಂದೆ ಜೀವನದ ಉದ್ದಕ್ಕೂ ರಾಮ್ ನಡೆಸಿದ ಎಲ್ಲ ಚಟುವಟಿಕೆಗಳ ಹಿಂದೆ ಈ ನೋವು ಉಳಿದುಕೊಂಡೇ ಇತ್ತು . ಇಂತಹ ಅಪಮಾನದಿಂದ ದಲಿತರನ್ನು ಪಾರು ಮಾಡುವ ಆಶಯವೇ ರಾಮ್ ಅವರ ಎಲ್ಲ ಚಟವಟಿಕೆಗಳ ಪ್ರಧಾನ ಅಂಶವಾಗಿ ಮಾರ್ಪಟ್ಟಿತ್ತು.
ಮುಂದೆ ದಲಿತ ನಾಯಕರಾಗಿ ರೂಪುಗೊಂಡ ಜಗಜೀವನ ರಾಮ್ ಅವರಿಗೆ ಬಿಹಾರ ಕಾರ್ಯಕ್ಷೇತ್ರವಾಯಿತು. ಗಾಂಧೀಜಿಯವರು ಆರಂಭಿಸಿದ್ದ ಅಸ್ಪøಶ್ಯತೆಯ ವಿರುದ್ದದ ಹೋರಾಟದಲ್ಲಿ ರಾಮ್ ಪಾಲ್ಗೊಂಡರು. 1935ರಲ್ಲಿ ದಲಿತರ ಸಮಾನತೆಗಾಗಿ ಹೋರಾಡುವ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದ “ಅಖಿಲ ಭಾರತ ದಮಮನಿತ ವರ್ಗಗಳ ಒಕ್ಕೂಟ”ವನ್ನು ಸ್ಥಾಪಿಸುವಲ್ಲಿ ಜಗಜೀವನ್ರಾಮ್ ಅವರು ನಿರ್ವಹಿಸಿದ ಪಾತ್ರ ಮಹತ್ವದಾಗಿತ್ತು.
ಬಾಬು ಜಗಜೀವನರಾಮ್ 1937 ರಲ್ಲಿ ಬಿಹಾರದ ವಿಧಾನ ಸಭೆಗೆ ಆಯ್ಕೆಯಾಗಿ, 1946ರಲ್ಲಿ ಜವಹರಲಾಲ್ ನೆಹರು ಅವರ ನೇತೃತ್ವದಲ್ಲಿ ಪ್ರಥಮ ಹಂಗಾಮಿ ಸರ್ಕಾರ ರಚನೆಯಾದಾಗ ಸಂಪುಟದ ಅತ್ಯಂತ ಕಿರಿಯ ಸಚಿವರಾಗಿ ಕಾರ್ಮಿಕ ಖಾತೆಯನ್ನು ನೀಡಲಾಗಿತ್ತು. ಮುಂದೆ ಬಾಬುಜೀ ಅವರು ತಮ್ಮ ರಾಜಕೀಯ ಪಯಣದಲ್ಲಿ ಹಿಂದುರುಗಿ ನೋಡಿದ್ದೇ ಇಲ್ಲ. ಹಲವಾರು ಖಾತೆಗಳ ಸಚಿವ ಸ್ಥಾನಗಳನ್ನು ನಿರ್ವಹಿಸಿದರು. ಈ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ ಹೊಸ-ಹೊಸ ಕಾಯ್ದೆಗಳನ್ನು ಜಾರಿಗೆ ತಂದು ಕಾರ್ಮಿಕ ಖಾತೆಗಳ ಶಿಲ್ಪಿ ಎಂದು ಕರೆಯಲ್ಪಟ್ಟರು. ಭಾರತದಲ್ಲಿ ಪ್ರಪ್ರಥಮ ಬಾರಿಗೆ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಾನೂನು ರಚಿಸಿದ್ದು ಬಾಬುಜೀ ಅವರ ಹೆಗ್ಗಳಿಕೆ.
1971 ರಲ್ಲಿ ಭಾರತ-ಪಾಕ್ ಮಧ್ಯೆ ಯುದ್ಧ ನಡೆದಾಗ (ಬಾಂಗ್ಲಾ ಪ್ರತ್ಯೇಕ ರಾಷ್ಟ್ರವಾಗಿ ಉದಯವಾದದ್ದು ಈ ಯುದ್ಧದ ಫಲಶೃತಿ) ಜಗಜೀವನ ರಾಮ್ ಕೇಂದ್ರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದರು. ರಾಮ್ ಅವರು ಕೃಷಿ ಸಚಿವರಾಗಿದ್ದಾಗ ಭಾರತೀಯ ಕೃಷಿ ಆಧುನೀಕರಣಗೊಂಡಿತು ಮತ್ತು ಭಾರತದಲ್ಲಿ ಹಸಿರು ಕ್ರಾಂತಿ ನಡೆಯಿತು. 1974ರಲ್ಲಿ ದೇಶ ಬರಗಾಲವನ್ನು ಎದುರಿಸಿದಾಗ ಆಹಾರದ ಬಿಕ್ಕಟ್ಟನ್ನು ನಿಭಾಯಿಸುವ ಹೊಣೆಯನ್ನು ಹೊತ್ತು, ಆಹಾರ ಖಾತೆಯನ್ನು ಹೆಚ್ಚುವರಿಯಾಗಿ ನಿರ್ವಹಿಸಿದರು.
1975ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದಾಗ ಅದನ್ನು ಜಗಜೀವನರಾಮ್ ಅವರು ಬೆಂಬಲಿಸಿದರು. 1977 ರಲ್ಲಿ ಕಾಂಗ್ರೆಸ್ ತೊರೆದು “ಕಾಂಗ್ರೆಸ್ ಫಾರ್ ಡೆಮಾಕ್ರಸಿ” ಎಂಬ ಹೊಸ ಪಕ್ಷವನ್ನು ಸ್ಥಾಪಿಸಿ, ಜನತಾ ಪಕ್ಷದ ಮೈತ್ರಿಯನ್ನು ಸೇರಿದರು. ನಂತರ ಅವರು ಭಾರತದ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು (1977-79).
ಜಗಜೀವನ್ರಾಮ್ ಅವರು ‘ದೀರ್ಘಕಾಲ ಸೇವೆ ಸಲ್ಲಿಸಿದ ಕ್ಯಾಬಿನೆಟ್ ಮಂತ್ರಿ’ ಎಂಬ ದಾಖಲೆಯನ್ನು ಹೊಂದಿದ್ದಾರೆ. 1952ರಲ್ಲಿ ನಡೆದ ಮೊದಲ ಚುನಾವಣೆಯಿಂದ ಹಿಡಿದು 34 ವರ್ಷಗಳ ಕಾಲ ನಿರಂತರ ಸಂಸದರಾಗಿ ಸೇವೆ ಸಲ್ಲಿಸಿದರು. 1986ರಲ್ಲಿ ಅವರು ಮರಣ ಹೊಂದುವವರೆಗೂ ಸಂಸತ್ತಿನಲ್ಲಿ ಸದಸ್ಯರಾಗಿದ್ದರು.
ಬಾಬುಜೀ ಅವರು ಅಲಂಕರಿಸಿದ ಪ್ರಮುಖ ಸಚಿವಾಲಯಗಳೆಂದರೆ, ಕೇಂದ್ರ ಕಾರ್ಮಿಕ ಮಂತ್ರಿ(1946-52), ಕೇಂದ್ರ ಸಂಪರ್ಕ ಸಚಿವರು(1952-56), ಕೇಂದ್ರ ಸಾರಿಗೆ ಮತ್ತು ರೈಲ್ವೇ ಸಚಿವರು(1956-62), ಕೇಂದ್ರ ಸಾರಿಗೆ ಮತ್ತು ಸಂಪರ್ಕ ಸಚಿವರು(1962-63), ಕಾರ್ಮಿಕ, ಉದ್ಯೋಗ ಮತ್ತು ಪುನರ್ವಸತಿ ಕೇಂದ್ರ ಸಚಿವರು(1966-67), ಕೇಂದ್ರ ಆಹಾರ ಮತ್ತುಕೃಷಿ ಸಚಿವರು(1967-70), ಕೇಂದ್ರ ರಕ್ಷಣ ಸಚಿವರು (1970-74, 1977-79), ಕೇಂದ್ರ ಕೃಷಿ ಮತ್ತು ನೀರಾವರಿ ಸಚಿವರು (1974-77).
ದಲಿತ ಸಮುದಾಯ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಬಾಬುಜೀ ಅವರು 1986 ಜುಲೈ 6 ರಂದು ಕೊನೆಯುಸಿರೆಳೆದರು. ಅವರ ಸಮಾದಿ ಸ್ಥಳವನ್ನು “ತನ್ಮಯಿ” ಸ್ಮಾರಕವಾಗಿ ಪರಿವರ್ತಿಸಲಾಗಿದೆ. ಮತ್ತು ಬಾಬುಜೀ ಅವರ ಜನ್ಮ ದಿನವನ್ನು ಭಾರತದಲ್ಲಿ ತನ್ಮಯಿ ದಿನ (ಸಮಾನತೆ ದಿನ) ಎಂದು ಆಚರಿಸಲಾಗುತ್ತಿದೆ.
ದಲಿತರ ಕುರಿತು ತೀವ್ರ ಸಹಾನುಭೂತಿ ಹೊಂದಿದ್ದ ಬಾಬುಜಿ ತಮ್ಮ ಜ್ಞಾನ ಮತ್ತು ವ್ಯಾಪಕ ದೃಷ್ಟಿಕೋನದಿಂದ ದೇಶ ಸೇವೆ ಮಾಡಿದರು. ಸರ್ವ ಜನರ ಕಲ್ಯಾಣದ ಕನಸು ಕಂಡಿದ್ದರು.
–ವರದಿ : ರಿಥೇಶ ನಾಯ್ಕ್
ಅಪ್ರೆಂಟಿಸ್, ವಾರ್ತಾ ಇಲಾಖೆ, ಶಿವಮೊಗ್ಗ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ16 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ2 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

