Connect with us

ದಿನದ ಸುದ್ದಿ

ನ್ಯಾಯಮೂರ್ತಿ ಅರಳಿ ನಾಗರಾಜ್ ಸರ್ ರವರ ಚಿತ್ತ ಜಾಗೃತ ಭಾರತದತ್ತ..!

Published

on

  • ಕೆ.ಶ್ರೀಧರ್ (ಕೆ.ಸಿರಿ)

“ಸಮಾಜದ ಋಣ ತೀರಿಸಲು ಆದರ್ಶ ನಾಗರೀಕರಾಗೋಣ;” ಎಂಬ ಅದ್ಭುತ ಸಂದೇಶ ಸಾರುವ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಸರ್ ರವರು ಕಂಡ ಭವ್ಯ ಭಾರತದ ಕನಸು.

ನಿಜಕ್ಕೂ ನಮ್ಮಂತಹ ಯುವಕರನ್ನು ಕೂಡಾ ನಾಚಿಸುವಂತದ್ದು “ದೇಶದ ಚಿತ್ತ ಯುವಜನರತ್ತ” ಎಂಬ ಪುಸ್ತಕವನ್ನು ಶ್ರೀಯುತ ಅರಳಿ ನಾಗರಾಜ ಸರ್ ರವರು ದಿನಾಂಕ 21/08/20201 ರಂದು ನಮ್ಮ ಮನೆಗೆ ಬಂದಾಗ ಶುಭಾಶಯಗಳೊಂದಿಗೆ ನೀಡಿದ್ದರು ಪುಸ್ತಕದ ಶೀರ್ಷಿಕೆಯೇ ಹೇಳುವಂತೆ ದೇಶದ ಯುವ ಸಮುದಾಯಕ್ಕೆ ಸ್ಪಷ್ಟವಾದ ಸಂದೇಶ ನೀಡಿವ ಪುಸ್ತಕವಿದು.

ಯಶಸ್ಸಿನೆಡೆಗೆ ನಮ್ಮ ನಡಿಗೆ ಇಂದ ಆರಂಭವಾಗುವ ಈ ಪುಸ್ತಕ ನಮಗೆ ಆದರ್ಶ ಯಾರು? ಎಂಬ ಉಪ ಶೀರ್ಷಿಕೆಯೊಂದಿಗೆ ಮುಕ್ತಾಯವಾಗುತ್ತದೆ. ಬದುಕು ಎಂದರೆ ಬರಿ ಬದುಕುವುದಲ್ಲ ಸ್ಪಷ್ಟ ಗುರಿ, ಸಾಧಿಸುವ ಛಲ,ಕಠಿಣ ಪರಿಶ್ರಮ, ನಿರಂತರ ಅಭ್ಯಾಸ, ಅಚಲವಾದ ಆತ್ಮವಿಶ್ವಾಸ,ಸಮಯದ ಸಾರ್ಥಕ ಬಳಕೆ ಈ ಸಪ್ತ ಸೂತ್ರಗಳು ಮಾತ್ರ ಗೆಲುವು ತಂದುಕೊಡಲು ಸಾಧ್ಯ.

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ರವರು ಹೇಳುವಂತೆ ಸೆಳೆತಗಳನ್ನು ಮೀರಿ ನಿಲ್ಲುವ ವ್ಯಕ್ತಿ ಮಾತ್ರ ಗುರಿಯನ್ನು ಸಾಧಿಸಬಲ್ಲ, ದೌರ್ಬಲ್ಯಗಳನ್ನು ಮೀರುವವರೆಗೂ ವ್ಯಕ್ತಿ ಪ್ರಬಲನಾಗುವುದಿಲ್ಲ. ಈ ಮಾತು ಅಕ್ಷರಶಃ ಸತ್ಯ ಯಾವುದೋ ಒಂದು ಸೆಳೆತಕ್ಕೆ ನಾವು ಒಳಗಾದರೆ ಬಂಧನಕ್ಕೊಳಗಾದಂತೆ.

ಪರಿಶ್ರಮ ಮೆಟ್ಟಿಲಿಂತೆ ಅದೃಷ್ಟ ಲಿಪ್ಟಿನಂತೆ ಲಿಫ್ಟ್ (ಅದೃಷ್ಟ) ಕೈಕೊಡಬಹುದು ಆದರೆ ಪರಿಶ್ರಮ (ಮೆಟ್ಟಿಲು) ಎಂದಿಗೂ ಕೈ ಕೊಡದು ತಾವು ಬದುಕಿದ ಆಧಾರದ ಮೇಲೆ ಶ್ರೀಯುತರು ಹೇಳಿದ್ದಾರೆ. ಬಸವಣ್ಣನವರ ವಚನಗಳ ಮೂಲಕ ಶರಣರ ತತ್ವಗಳನ್ನು ಪ್ರತಿಪಾದಿಸುವ ಮೂಲಕ ನಮ್ಮಲ್ಲಿರುವ ಸೋಮಾರಿತನವನ್ನು ಬಡಿದೆಬ್ಬಿಸುವಂತಿವೆ ಒಂದೊಂದು ಸಾಲುಗಳು.

ಯಶಸ್ಸಿನೆಡೆಗೆ ನಮ್ಮ ನಡಿಗೆ ಹಾಗೂ ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕೌಶಲ್ಯದಲ್ಲಿ ಸಕಾರಾತ್ಮಕ ಗುಣವಿಶೇಷಗಳು ಹಾಗೂ ನಕಾರಾತ್ಮಕ ಗುಣವಿಶೇಷಗಳು ಎರಡನ್ನೂ ತಮ್ಮದೇ ಆದ ದೃಷ್ಟಿಕೋನದಲ್ಲಿ ಚಿಂತಿಸಿದ ವಿವಿಧ ಮಜಲುಗಳನ್ನು ಓದುತ್ತಾ ಕುಳಿತರೆ ಶ್ರೀಯುತರ ಶಿಕ್ಷಣ ತಜ್ಞರಂತೆ ಕಾಣುತ್ತಾರೆ ನಿಜಕ್ಕೂ ಈ ಎಲ್ಲಾ ಅಂಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಮಕ್ಕಳ ಮನಸ್ಸಿನಲ್ಲಿಇಂತಹ ಗುಣಗಳನ್ನು ಬಿತ್ತಬೇಕು.

ಮುಂದುವರೆದು ಹೇಳುತ್ತಾ ಬರಿ ಅಂಶಗಳಿದ್ದರೆ ಸಾಲದು ಸಂವಹನ ಕೌಶಲ್ಯವೂ ಮುಖ್ಯ. ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ 62 ವರ್ಷ ಪೂರ್ಣಗೊಂಡ ನಂತರ ನಿವೃತ್ತನಾಗಬೇಕಿತ್ತು ಆದರೆ 61 ವರ್ಷ ಮುಗಿಯಲು ಒಂದೆರಡು ತಿಂಗಳು ಇರುವಾಗಲೆ ಸ್ವಯಂ ನಿವೃತ್ತಿ ಪಡೆದು ಅಂದಿನಿಂದಲೇ ರಾಜ್ಯಾದ್ಯಂತ ಸ್ವಂತ ಖರ್ಚಿನಲ್ಲಿ (ನನ್ನ ನಿವೃತ್ತಿ ವೇತನದಲ್ಲಿ) ಸಂಚರಿಸುತ್ತಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಯುವಜನರೊಂದಿಗೆ ಸಂವಾದಿಸುತ್ತಾ “ಯುವ ಜನರ ಚಿತ್ತವನ್ನು ದೇಶದತ್ತ ಹೊರಳಿಸುವ ಪ್ರಯತ್ನದಲ್ಲಿದ್ದೇನೆಂದು” ಮೃತ್ಯು ನಮ್ಮನ್ನಪ್ಪುವ ಮೊದಲೆ ಸಮಾಜದ ಋಣ ತೀರಿಸಬೇಕು ಎಂದು ಬರೆದಿರುವ ಶ್ರೀಯುತರ ಸಾಲುಗಳೇ ಹೇಳುತ್ತವೆ.

ಇವರ ಮನದಲ್ಲಿ ಜಾಗೃತ ಭಾರತವನ್ನು ಕಟ್ಟುವ ಇಂಗಿತವನ್ನು ಇದು ಕೇವಲ ಬರಹಕ್ಕೆ ಸೀಮಿತವಾಗದೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ನಾಡಿನಾದ್ಯಂತ ಸಂಚರಿಸಿ ತಮ್ಮ 70 ರ ಹರೆಯದಲ್ಲೂ ಸಮಾಜಮುಖಿ ಕಾರ್ಯ ನಿರ್ವಹಿಸುತ್ತಿರುವ ನಿಮಗೆ ಸಾವಿರದ ಶರಣು ಸರ್ ನಿವೃತ್ತಿಯಾಗುವವರೆಗೂ ಸಂಬಳ ಪಡೆದು ನಿವೃತ್ತಿ ವೇತನ ಪಡೆದು ಮೊಮ್ಮಕ್ಕಳ ಜೊತೆ ಕಾಲ ಕಳೆದು ಇಹಲೋಕ ತ್ಯಜಿಸುವವರ ಮಧ್ಯೆ ದೇಶದ ಯುವ ಸಮುದಾಯವನ್ನು ದೇಶಕಟ್ಟಬೇಕೆಂದು ಹುರಿದುಂಬಿಸುವ ಈ ಧೈರ್ಯ ಎಲ್ಲರಲ್ಲಿಯೂ ಬರುವುದಿಲ್ಲ.

ಇತ್ತೀಚಿನ ದಿನಗಳಲ್ಲಿ ರಾಜಕಾರಣ ಮತ್ತು ಧರ್ಮ ರಾಜಕಾರಣ ಬಲು ಮುನ್ನಲೆಯಲ್ಲಿರುವ ವಿಷಯಗಳಾಗಿದ್ದು ಶ್ರೀಯುತರು ನಮ್ಮನ್ನ ಸ್ವಾತಂತ್ರ್ಯ ಪೂರ್ವ ಭಾರತದ ಸ್ಥಿತಿ ಗತಿಗಳು ಸ್ವಾತಂತ್ರ್ಯಾನಂತರದ ಭಾರತದ ಪರಿಸ್ಥಿತಿಯ ಬಗ್ಗೆ ಕನ್ನಡಿ ಹಿಡಿದಂತಿದೆ.

ಹಿಂದೆ ರಾಜಪ್ರಭುತ್ವದಲ್ಲಿ “ಯಥಾ ತಥಾ ಪ್ರಜಾ” ಎಂಬ ವಾಡಿಕೆಯಿತ್ತು ಆದರೆ ಅರಳಿ ನಾಗರಾಜ ಸರ್ ರವರ ಕನಸ್ಸಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ “ಯಥಾ ಮತದಾರ ತಥಾ ಜನ ಪ್ರತಿನಿಧಿ” ಅಂದರೆ “ಮತದಾರರಂತೆ ಜನಪ್ರತಿನಿಧಿಗಳು” ನಮಗೆ ಆದರ್ಶಪ್ರಾಯರಾದ ಜನಪ್ರತಿನಿಧಿಗಳು ನಾಯಕರು ಬೇಕೆಂದಾದಲ್ಲಿ ಮೊದಲು ನಾವು ಆದರ್ಶಪ್ರಾಯ ನಾಗರೀಕರಾಗಬೇಕು.

ಅದರಲ್ಲೂ ಗ್ರಾಮ, ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಆಡಳಿತ ನಡೆಸುವ ನಮ್ಮ ಜನಪ್ರತಿನಿಧಿಗಳು ‘ಎಂಥವರಾಗಬೇಕು?’ ಎಂಬುದನ್ನು ನಿರ್ಧರಿಸುವ ಅಂಶ ನಿಂತಿರುವುದು _”ಮತದಾನದ ಮಾರಾಟದಿಂದಲ್ಲ ನಮ್ಮ ಮತವನ್ನು ಮೌಲ್ಯಯುತ ದೇಶಾಭಿಮಾನದ ರಾಜಕಾರಣಿಗೆ ದಾನ ಮಾಡುವುರ”_ ನಿಂತಿದೆ.

ಸ್ವಾತಂತ್ರ್ಯ ಬಂದು 75 ದಶಕಗಳೆ ಕಳೆದರೂ ಭ್ರಷ್ಟಾಚಾರ, ಜಾತೀಯತೆ, ಅಪರಾಧ, ಅನೈತಿಕತೆ ಮುಂತಾದ ಅಪಮೌಲ್ಯಗಳೇ ಮೌಲ್ಯಗಳಾಗಿ ವಿಜೃಂಭಿಸುತ್ತಿವೆ ಎಂದು ತುಂಬಾ ನೋವಿನಿಂದ ಹೇಳಿದ್ದಾರೆ. ಎಲ್ಲಾ ಹಂತದ ಚುನಾವಣೆಗಳಲ್ಲೂ ಹಣಬಲ,ತೋಳ್ಬಲ,ಜಾತಿ ಬಲ,ಅಧಿಕವಾಗುತ್ತಾ ಬಂದು ಜನಪ್ರತಿನಿಧಿಗಳಾಗಲು ಯಾವುದೇ ಅರ್ಹತೆಗಳು ಇಲ್ಲದವರು ಕಾಳಧನ ಸಂಪತ್ತು ಹೊಂದಿರುವವರು ಜಾತಿವಾದಿಗಳು ಅಪರಾಧದ ಹಿನ್ನೆಲೆ ಇರುವವರು ಚುನಾಯಿತರಾಗುತ್ತಿರುವುದಕ್ಕೆ ದೇಶದಲ್ಲಿ ನೈತಿಕತೆ ಅಧಃಪತನಕ್ಕೆ ಹೋಗಿದೆ ಎಂಬ ನೋವಿನ ಸಂಗತಿಯನ್ನು ನೊಂದುಕೊಂಡು ಪುಸ್ತಕದಲ್ಲಿ ಬರೆದಿದ್ದಾರೆ.

ದೇಶಪ್ರೇಮಿ ಮತ್ತು ದೇಶದ್ರೋಹಿ ಇವರಿಬ್ಬರ ನಡುವಿನ ವ್ಯತ್ಯಾಸವನ್ನು ವಿಜಯ ಮಲ್ಯ ರವರ ಪ್ರಕರಣದ ಮೂಲಕ ವಾಸ್ತವತೆಯ ಕದ ತಟ್ಟಿದ್ದಾರೆ ಶ್ರೀಯುತ ಅರಳಿ ನಾಗರಾಜ್ ಸರ್ ನಮ್ಮ ದೇಶದ ಬ್ಯಾಂಕುಗಳಿಂದ ಹತ್ತು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಸಾಲ ಪಡೆದು ಮರುಪಾವತಿ ಮಾಡುಲಾಗದೆ ವಂಚಿಸಿ ವಿದೇಶಕ್ಕೆ ಹಾರಿಹೋಗಿ ಆ ವಿದೇಶಿ ನ್ಯಾಯಾಲಯದಲ್ಲಿ ಆತ “ನನ್ನನ್ನು ಭಾರತಕ್ಕೆ ಒಪ್ಪಿಸಬೇಡಿ ಅಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವ ಜೈಲು ಇಲ್ಲ” ಎಂಬುದಾಗಿ ಹೇಳಿಕೆ ಕೊಟ್ಟಂತಹ ಆ ವಿಜಯ ಮಲ್ಯ ಶ್ರೀಮತ ಉದ್ಯಮಿಯನ್ನು ನಮ್ಮ ಕರ್ನಾಟಕದ ಶಾಸಕರು ನಮ್ಮ ರಾಷ್ಟ್ರದ ಸಂಸತ್ತಿನ “ಹಿರಿಯರ ಮನೆ” ಆಗಿರುವ ರಾಜ್ಯಸಭೆಯ ಸದಸ್ಯನನ್ನಾಗಿ ಆರಿಸಿ ಕಳಿಸಿದ್ದರು.

ಆತನಲ್ಲಿ ವಾಮಮಾರ್ಗದಿಂದ ಸಂಪಾದಿಸಿದ ಸಂಪತ್ತು ಬಿಟ್ಟರೆ ಹೇಳಿಕೊಳ್ಳುವಂತಹ ಯಾವ ನೈತಿಕತೆ ಅವರಲ್ಲಿರಲಿಲ್ಲ. ಜವಾಬ್ದಾರಿ ಸ್ಥಾನಕ್ಕೆ ಜವಾಬ್ದಾರಿಕೆ ಹೊಂದಿದ್ದ ಶಾಸಕರಿಂದ ಆಯ್ಕೆಯಾದ ವ್ಯಕ್ತಿ ‘ದೇಶದ್ರೋಹಿ’ ಆಗುತ್ತಾನೆಂದರೆ ಇದು ನಮ್ಮ ದೇಶದ ದುರ್ದೈವ ಮತ್ತು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅಪಹಾಸ್ಯ,ಅಣಕ ಎಂದು ಬಹು ನೋವಿನಿಂದ ನಮ್ಮ ನಿವೃತ್ತ ನ್ಯಾಯಮೂರ್ತಿಗಳು ಬರೆದಿದ್ದಾರೆ.

ತಮಗೆ ಹಕ್ಕಿಲ್ಲದಿದ್ದರೂ ಪಾಂಡವರ ಸಮಸ್ತ ರಾಜ್ಯಕ್ಕೂ ತಾನೇ ಒಡೆಯನಾಗಬೇಕೆಂಬ ದುರ್ವ್ಯಸನ ದುರ್ಯೋಧನಿಗೆ ಇದ್ದರೆ ದ್ಯೂತ (ಜೂಜು) ಆಡುವ ದುರ್ವ್ಯಸನ ಧರ್ಮರಾಯನಿಗೆ ಇದ್ದುದ್ದರಿಂದ ‘ಕುರುಕ್ಷೇತ್ರ’ ನಡೆಯಿತು‌.

ತಮ್ಮದೇಯಾದ ಕಾರಣಗಳಿಗಾಗಿ ದುರ್ಯೋಧನನಿಗೆ ಋಣಿಯಾದ್ದರಿಂದ ಭೀಷ್ಮ,ದ್ರೋಣರು,ಕೃಪಚಾರ್ಯರು, ಅಶ್ವತ್ಥಾಮ,ಕರ್ಣ ಅಧರ್ಮದ ಪರವಾಗಿ ಧರ್ಮದ ವಿರುದ್ಧವಾಗಿ ಕುರುಕ್ಷೇತ್ರ ಯುದ್ದದಲ್ಲಿ ಪಾಲ್ಗೊಂಡಿದ್ದರು ನಮ್ಮ ದೇಶದಲ್ಲಿ ಪ್ರಸ್ತುತ ರಾಜಕಾರಣದಲ್ಲೂ ನಡೆಯುತ್ತಿರುವುದು ಇದೇ ಎಂದು ಇಂಥವರೂ ಯುವಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂಬ ಆತಂಕವನ್ನು ಕುರುಕ್ಷೇತ್ರದ ಮೂಲಕ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ರಾಜಕಾರಣದಲ್ಲಿ ರಾಜಕಾರಣಿಗಳಲ್ಲಿರುವ ಆಂಗ್ಲ ಭಾಷೆಯ ಮೂರು C ಗಳು ಅಂದರೆ 1-corruption
2-casteism
3crime

ಇವುಗಳನ್ನು ಬಿಟ್ಟು ಐದು C ಸೂತ್ರ ನೀಡಿದ್ದಾರೆ ನಮ್ಮ ನಿವೃತ್ತ ನ್ಯಾಯಮೂರ್ತಿಗಳು.
1-competency
2-charactesr
3-commitment
4-courage
5-compassion

ಈ ಐದು ಅಂಶಗಳು ಪ್ರಸ್ತುತ ರಾಜಕಾರಣದಲ್ಲಿ ಈ ಪುಸ್ತಕದ ಲೇಖಕರು ಹೇಳುವ ಹಾಗೆ ಹಗಲು ಹೊತ್ತಿನಲ್ಲಿ ಹೆಗಲ ಮೇಲೆ ದೀಪವಿಡಿದು ನೋಡಿದರೆ ಒಬ್ಬರೂ ಸಿಗುವುದಿಲ್ಲ.

ಒಬ್ಬ ಪೊಲೀಸ್ ಪೇದೆಯಾಗಲು ಕನಿಷ್ಠ ವಿದ್ಯಾರ್ಹತೆ ಬೇಕು, ದೈಹಿಕ ಸಾಮರ್ಥ್ಯ ಬೇಕು ಆದರೆ ಇಂಥ ಪೇದೇಯಾಗಲು ಅರ್ಹತೆ ಇಲ್ಲವೆಂದು ತಿರಸ್ಕೃತಗೊಂಡ ವ್ಯಕ್ತಿ ಚುನಾವಣೆಯಲ್ಲಿ ಆಯ್ಕೆಯಾಗಿ ಪೊಲೀಸ್ ಇಲಾಖೆಯನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಳ್ಳುವ ‘ಗೃಹಮಂತ್ರಿ’ ಆಗಬಹುದು ಬರೆಯುತ್ತಾ ಹೋದರೆ ಇಂಥವರ ಪಟ್ಟಿ ಜಾಸ್ತಿಯಾಗುತ್ತದೆ ‘ಆಗಬಹುದು’ ಅಂದರೆ ಇಲ್ಲಿಯವರೆಗೆ ಆಗಿಲ್ಲ’ ಎಂದರ್ಥವಲ್ಲ ವ್ಯಕ್ತಿಗಳ ವಿವರಣೆ ಅಗತ್ಯವಿಲ್ಲ ಎಂದು ಹೇಳುವಲ್ಲಿ ಎಂತಹಾ ಕರಾಳ ಸತ್ಯ ಅಪಮೌಲ್ಯದ ವಿಜೃಂಭಣೆ ಇದೆ ಎಂದು ಓದುಗರು + ಭ್ರಷ್ಟ ಮತದಾರ ಪ್ರಭುಗಳಾದ ನಾವುಗಳು ಅರಿತುಕೊಳ್ಳಬೇಕು.

68 ವರ್ಷಗಳನ್ನು ಪೂರೈಸಿರುವ ನ್ಯಾಯಮೂರ್ತಿಗಳು ವಯಸ್ಕರಾಗಲು ಬೇಕಿದ್ದ 18 ವರ್ಷಗಳನ್ನು ಅದರಲ್ಲೇ ಕಳೆದರೆ “ನನ್ನ ದೇಶದ ದೇಶದ ಆಗು ಹೋಗುಗಳ ಸಂಬಂಧದ ನನ್ನ ಅನುಭವಕ್ಕೆ 50 ವರ್ಷಗಳ ವಯಸ್ಸಾಗಿದೆ” ಅಭಿವೃದ್ಧಿಯ ಮೌಲ್ಯಗಳಿಗಿಂತ ಅಪಮೌಲ್ಯಗಳೇ ಹೆಚ್ಚಿನ ವೇಗದಿಂದ ವೃದ್ದಿಯಾಗುತ್ತಾ ಬಂದಿದೆ ಎಂದು ಹೇಳುವಲ್ಲಿ ರಾಜಕೀಯ ಭ್ರಷ್ಟಾಚಾರ ಅನೈತಿಕತೆಯ ಕ್ರೂರತೆಯನ್ನು ತಮ್ಮ ಮನದ ನೋವನ್ನು ಈ ಪುಸ್ತಕದಲ್ಲಿ ಶ್ರೀಯುತ ನಿವೃತ್ತ ನ್ಯಾಯಮೂರ್ತಿಗಳು ವ್ಯಕ್ತಪಡಿಸಿದ್ದಾರೆ.

ಇಂತಹ ನೋವುಗಳನ್ನು ಹೇಳುತ್ತಲೆ ಲಾಲಾ ಲಜಪತ್ ರಾಯ್, ಬಾಲಗಂಗಾಧರ ತಿಲಕ್,ಬಿಪಿನ್ ಚಂದ್ರಪಾಲ್,ದಾದಾಬಾಯಿ ನವರೋಜಿ,ಮದನಮೋಹನ ಮಾಲವೀಯ, ಗೋಪಾಲಕೃಷ್ಣ ಗೋಖಲೆ, ಶ್ರಿ ಅರವಿಂದರು, ಮಹಾತ್ಮ ಗಾಂಧೀಜಿ,ಸರೋಜಿನಿ ನಾಯ್ಡು, ಗೋವಿಂದ ವಲ್ಲಭ ಪಂತ್, ಲಾಲ್ ಬಹದ್ದೂರ್ ಶಾಸ್ತ್ರಿ ವೀರ ಸಾವಕರ, ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ ಅಜಾದ್, ಹುತಾತ್ಮ ಭಗತ್ ಸಿಂಗ್, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರಂತವರು ಯುವ ಜನತೆಗೆ ಆದರ್ಶರಾಗಬೇಕೆಂದು “ದೇಶದ ಚಿತ್ತ ಯುವಜನರತ್ತ ಎಂಬ ಪುಸ್ತಕದ ಮೂಲಕ ಜಾಗೃತ ಭಾರತಕ್ಕೆ ಕರೆ ನೀಡಿ ಅವಿರತವಾಗಿ ಶ್ರಮಿಸುತ್ತಿರುವ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ ಸರ್ ರವರ ಈ ಕಾರ್ಯವನ್ನು ಸರ್ಕಾರವು ಪರಿಗಣಿಸಿ ಒಂದು ಜಾಗೃತ ಭಾರತಕ್ಕೆ ಶ್ರೀಯುತ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ್ ಸರ್ ರವರ ಕನಸ್ಸನ್ನು ಸಾಕಾರಗೊಳಿಸಲು ಗಮನಹರಿಸಬೇಕು ನಮ್ಮಂತಹ ಯುವ ಸಮುದಾಯ ಈ ಪುಸ್ತಕವನ್ನು ಓದಿದರೆ ದೇಶದ ಆಡಳಿತ ವ್ಯವಸ್ಥೆಯಲ್ಲಿ ಗಣನೀಯ ಬದಲಾವಣೆಯಾಗಿ ಯುವ ಜನತೆಯ ಚಿತ್ತ ಸದಾ ದೇಶತ್ತ ಸೆಳೆಯಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending