Connect with us

ದಿನದ ಸುದ್ದಿ

ನ್ಯಾಯಮೂರ್ತಿ ಅರಳಿ ನಾಗರಾಜ್ ಸರ್ ರವರ ಚಿತ್ತ ಜಾಗೃತ ಭಾರತದತ್ತ..!

Published

on

  • ಕೆ.ಶ್ರೀಧರ್ (ಕೆ.ಸಿರಿ)

“ಸಮಾಜದ ಋಣ ತೀರಿಸಲು ಆದರ್ಶ ನಾಗರೀಕರಾಗೋಣ;” ಎಂಬ ಅದ್ಭುತ ಸಂದೇಶ ಸಾರುವ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಸರ್ ರವರು ಕಂಡ ಭವ್ಯ ಭಾರತದ ಕನಸು.

ನಿಜಕ್ಕೂ ನಮ್ಮಂತಹ ಯುವಕರನ್ನು ಕೂಡಾ ನಾಚಿಸುವಂತದ್ದು “ದೇಶದ ಚಿತ್ತ ಯುವಜನರತ್ತ” ಎಂಬ ಪುಸ್ತಕವನ್ನು ಶ್ರೀಯುತ ಅರಳಿ ನಾಗರಾಜ ಸರ್ ರವರು ದಿನಾಂಕ 21/08/20201 ರಂದು ನಮ್ಮ ಮನೆಗೆ ಬಂದಾಗ ಶುಭಾಶಯಗಳೊಂದಿಗೆ ನೀಡಿದ್ದರು ಪುಸ್ತಕದ ಶೀರ್ಷಿಕೆಯೇ ಹೇಳುವಂತೆ ದೇಶದ ಯುವ ಸಮುದಾಯಕ್ಕೆ ಸ್ಪಷ್ಟವಾದ ಸಂದೇಶ ನೀಡಿವ ಪುಸ್ತಕವಿದು.

ಯಶಸ್ಸಿನೆಡೆಗೆ ನಮ್ಮ ನಡಿಗೆ ಇಂದ ಆರಂಭವಾಗುವ ಈ ಪುಸ್ತಕ ನಮಗೆ ಆದರ್ಶ ಯಾರು? ಎಂಬ ಉಪ ಶೀರ್ಷಿಕೆಯೊಂದಿಗೆ ಮುಕ್ತಾಯವಾಗುತ್ತದೆ. ಬದುಕು ಎಂದರೆ ಬರಿ ಬದುಕುವುದಲ್ಲ ಸ್ಪಷ್ಟ ಗುರಿ, ಸಾಧಿಸುವ ಛಲ,ಕಠಿಣ ಪರಿಶ್ರಮ, ನಿರಂತರ ಅಭ್ಯಾಸ, ಅಚಲವಾದ ಆತ್ಮವಿಶ್ವಾಸ,ಸಮಯದ ಸಾರ್ಥಕ ಬಳಕೆ ಈ ಸಪ್ತ ಸೂತ್ರಗಳು ಮಾತ್ರ ಗೆಲುವು ತಂದುಕೊಡಲು ಸಾಧ್ಯ.

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ರವರು ಹೇಳುವಂತೆ ಸೆಳೆತಗಳನ್ನು ಮೀರಿ ನಿಲ್ಲುವ ವ್ಯಕ್ತಿ ಮಾತ್ರ ಗುರಿಯನ್ನು ಸಾಧಿಸಬಲ್ಲ, ದೌರ್ಬಲ್ಯಗಳನ್ನು ಮೀರುವವರೆಗೂ ವ್ಯಕ್ತಿ ಪ್ರಬಲನಾಗುವುದಿಲ್ಲ. ಈ ಮಾತು ಅಕ್ಷರಶಃ ಸತ್ಯ ಯಾವುದೋ ಒಂದು ಸೆಳೆತಕ್ಕೆ ನಾವು ಒಳಗಾದರೆ ಬಂಧನಕ್ಕೊಳಗಾದಂತೆ.

ಪರಿಶ್ರಮ ಮೆಟ್ಟಿಲಿಂತೆ ಅದೃಷ್ಟ ಲಿಪ್ಟಿನಂತೆ ಲಿಫ್ಟ್ (ಅದೃಷ್ಟ) ಕೈಕೊಡಬಹುದು ಆದರೆ ಪರಿಶ್ರಮ (ಮೆಟ್ಟಿಲು) ಎಂದಿಗೂ ಕೈ ಕೊಡದು ತಾವು ಬದುಕಿದ ಆಧಾರದ ಮೇಲೆ ಶ್ರೀಯುತರು ಹೇಳಿದ್ದಾರೆ. ಬಸವಣ್ಣನವರ ವಚನಗಳ ಮೂಲಕ ಶರಣರ ತತ್ವಗಳನ್ನು ಪ್ರತಿಪಾದಿಸುವ ಮೂಲಕ ನಮ್ಮಲ್ಲಿರುವ ಸೋಮಾರಿತನವನ್ನು ಬಡಿದೆಬ್ಬಿಸುವಂತಿವೆ ಒಂದೊಂದು ಸಾಲುಗಳು.

ಯಶಸ್ಸಿನೆಡೆಗೆ ನಮ್ಮ ನಡಿಗೆ ಹಾಗೂ ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕೌಶಲ್ಯದಲ್ಲಿ ಸಕಾರಾತ್ಮಕ ಗುಣವಿಶೇಷಗಳು ಹಾಗೂ ನಕಾರಾತ್ಮಕ ಗುಣವಿಶೇಷಗಳು ಎರಡನ್ನೂ ತಮ್ಮದೇ ಆದ ದೃಷ್ಟಿಕೋನದಲ್ಲಿ ಚಿಂತಿಸಿದ ವಿವಿಧ ಮಜಲುಗಳನ್ನು ಓದುತ್ತಾ ಕುಳಿತರೆ ಶ್ರೀಯುತರ ಶಿಕ್ಷಣ ತಜ್ಞರಂತೆ ಕಾಣುತ್ತಾರೆ ನಿಜಕ್ಕೂ ಈ ಎಲ್ಲಾ ಅಂಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಮಕ್ಕಳ ಮನಸ್ಸಿನಲ್ಲಿಇಂತಹ ಗುಣಗಳನ್ನು ಬಿತ್ತಬೇಕು.

ಮುಂದುವರೆದು ಹೇಳುತ್ತಾ ಬರಿ ಅಂಶಗಳಿದ್ದರೆ ಸಾಲದು ಸಂವಹನ ಕೌಶಲ್ಯವೂ ಮುಖ್ಯ. ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ 62 ವರ್ಷ ಪೂರ್ಣಗೊಂಡ ನಂತರ ನಿವೃತ್ತನಾಗಬೇಕಿತ್ತು ಆದರೆ 61 ವರ್ಷ ಮುಗಿಯಲು ಒಂದೆರಡು ತಿಂಗಳು ಇರುವಾಗಲೆ ಸ್ವಯಂ ನಿವೃತ್ತಿ ಪಡೆದು ಅಂದಿನಿಂದಲೇ ರಾಜ್ಯಾದ್ಯಂತ ಸ್ವಂತ ಖರ್ಚಿನಲ್ಲಿ (ನನ್ನ ನಿವೃತ್ತಿ ವೇತನದಲ್ಲಿ) ಸಂಚರಿಸುತ್ತಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಯುವಜನರೊಂದಿಗೆ ಸಂವಾದಿಸುತ್ತಾ “ಯುವ ಜನರ ಚಿತ್ತವನ್ನು ದೇಶದತ್ತ ಹೊರಳಿಸುವ ಪ್ರಯತ್ನದಲ್ಲಿದ್ದೇನೆಂದು” ಮೃತ್ಯು ನಮ್ಮನ್ನಪ್ಪುವ ಮೊದಲೆ ಸಮಾಜದ ಋಣ ತೀರಿಸಬೇಕು ಎಂದು ಬರೆದಿರುವ ಶ್ರೀಯುತರ ಸಾಲುಗಳೇ ಹೇಳುತ್ತವೆ.

ಇವರ ಮನದಲ್ಲಿ ಜಾಗೃತ ಭಾರತವನ್ನು ಕಟ್ಟುವ ಇಂಗಿತವನ್ನು ಇದು ಕೇವಲ ಬರಹಕ್ಕೆ ಸೀಮಿತವಾಗದೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ನಾಡಿನಾದ್ಯಂತ ಸಂಚರಿಸಿ ತಮ್ಮ 70 ರ ಹರೆಯದಲ್ಲೂ ಸಮಾಜಮುಖಿ ಕಾರ್ಯ ನಿರ್ವಹಿಸುತ್ತಿರುವ ನಿಮಗೆ ಸಾವಿರದ ಶರಣು ಸರ್ ನಿವೃತ್ತಿಯಾಗುವವರೆಗೂ ಸಂಬಳ ಪಡೆದು ನಿವೃತ್ತಿ ವೇತನ ಪಡೆದು ಮೊಮ್ಮಕ್ಕಳ ಜೊತೆ ಕಾಲ ಕಳೆದು ಇಹಲೋಕ ತ್ಯಜಿಸುವವರ ಮಧ್ಯೆ ದೇಶದ ಯುವ ಸಮುದಾಯವನ್ನು ದೇಶಕಟ್ಟಬೇಕೆಂದು ಹುರಿದುಂಬಿಸುವ ಈ ಧೈರ್ಯ ಎಲ್ಲರಲ್ಲಿಯೂ ಬರುವುದಿಲ್ಲ.

ಇತ್ತೀಚಿನ ದಿನಗಳಲ್ಲಿ ರಾಜಕಾರಣ ಮತ್ತು ಧರ್ಮ ರಾಜಕಾರಣ ಬಲು ಮುನ್ನಲೆಯಲ್ಲಿರುವ ವಿಷಯಗಳಾಗಿದ್ದು ಶ್ರೀಯುತರು ನಮ್ಮನ್ನ ಸ್ವಾತಂತ್ರ್ಯ ಪೂರ್ವ ಭಾರತದ ಸ್ಥಿತಿ ಗತಿಗಳು ಸ್ವಾತಂತ್ರ್ಯಾನಂತರದ ಭಾರತದ ಪರಿಸ್ಥಿತಿಯ ಬಗ್ಗೆ ಕನ್ನಡಿ ಹಿಡಿದಂತಿದೆ.

ಹಿಂದೆ ರಾಜಪ್ರಭುತ್ವದಲ್ಲಿ “ಯಥಾ ತಥಾ ಪ್ರಜಾ” ಎಂಬ ವಾಡಿಕೆಯಿತ್ತು ಆದರೆ ಅರಳಿ ನಾಗರಾಜ ಸರ್ ರವರ ಕನಸ್ಸಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ “ಯಥಾ ಮತದಾರ ತಥಾ ಜನ ಪ್ರತಿನಿಧಿ” ಅಂದರೆ “ಮತದಾರರಂತೆ ಜನಪ್ರತಿನಿಧಿಗಳು” ನಮಗೆ ಆದರ್ಶಪ್ರಾಯರಾದ ಜನಪ್ರತಿನಿಧಿಗಳು ನಾಯಕರು ಬೇಕೆಂದಾದಲ್ಲಿ ಮೊದಲು ನಾವು ಆದರ್ಶಪ್ರಾಯ ನಾಗರೀಕರಾಗಬೇಕು.

ಅದರಲ್ಲೂ ಗ್ರಾಮ, ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಆಡಳಿತ ನಡೆಸುವ ನಮ್ಮ ಜನಪ್ರತಿನಿಧಿಗಳು ‘ಎಂಥವರಾಗಬೇಕು?’ ಎಂಬುದನ್ನು ನಿರ್ಧರಿಸುವ ಅಂಶ ನಿಂತಿರುವುದು _”ಮತದಾನದ ಮಾರಾಟದಿಂದಲ್ಲ ನಮ್ಮ ಮತವನ್ನು ಮೌಲ್ಯಯುತ ದೇಶಾಭಿಮಾನದ ರಾಜಕಾರಣಿಗೆ ದಾನ ಮಾಡುವುರ”_ ನಿಂತಿದೆ.

ಸ್ವಾತಂತ್ರ್ಯ ಬಂದು 75 ದಶಕಗಳೆ ಕಳೆದರೂ ಭ್ರಷ್ಟಾಚಾರ, ಜಾತೀಯತೆ, ಅಪರಾಧ, ಅನೈತಿಕತೆ ಮುಂತಾದ ಅಪಮೌಲ್ಯಗಳೇ ಮೌಲ್ಯಗಳಾಗಿ ವಿಜೃಂಭಿಸುತ್ತಿವೆ ಎಂದು ತುಂಬಾ ನೋವಿನಿಂದ ಹೇಳಿದ್ದಾರೆ. ಎಲ್ಲಾ ಹಂತದ ಚುನಾವಣೆಗಳಲ್ಲೂ ಹಣಬಲ,ತೋಳ್ಬಲ,ಜಾತಿ ಬಲ,ಅಧಿಕವಾಗುತ್ತಾ ಬಂದು ಜನಪ್ರತಿನಿಧಿಗಳಾಗಲು ಯಾವುದೇ ಅರ್ಹತೆಗಳು ಇಲ್ಲದವರು ಕಾಳಧನ ಸಂಪತ್ತು ಹೊಂದಿರುವವರು ಜಾತಿವಾದಿಗಳು ಅಪರಾಧದ ಹಿನ್ನೆಲೆ ಇರುವವರು ಚುನಾಯಿತರಾಗುತ್ತಿರುವುದಕ್ಕೆ ದೇಶದಲ್ಲಿ ನೈತಿಕತೆ ಅಧಃಪತನಕ್ಕೆ ಹೋಗಿದೆ ಎಂಬ ನೋವಿನ ಸಂಗತಿಯನ್ನು ನೊಂದುಕೊಂಡು ಪುಸ್ತಕದಲ್ಲಿ ಬರೆದಿದ್ದಾರೆ.

ದೇಶಪ್ರೇಮಿ ಮತ್ತು ದೇಶದ್ರೋಹಿ ಇವರಿಬ್ಬರ ನಡುವಿನ ವ್ಯತ್ಯಾಸವನ್ನು ವಿಜಯ ಮಲ್ಯ ರವರ ಪ್ರಕರಣದ ಮೂಲಕ ವಾಸ್ತವತೆಯ ಕದ ತಟ್ಟಿದ್ದಾರೆ ಶ್ರೀಯುತ ಅರಳಿ ನಾಗರಾಜ್ ಸರ್ ನಮ್ಮ ದೇಶದ ಬ್ಯಾಂಕುಗಳಿಂದ ಹತ್ತು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಸಾಲ ಪಡೆದು ಮರುಪಾವತಿ ಮಾಡುಲಾಗದೆ ವಂಚಿಸಿ ವಿದೇಶಕ್ಕೆ ಹಾರಿಹೋಗಿ ಆ ವಿದೇಶಿ ನ್ಯಾಯಾಲಯದಲ್ಲಿ ಆತ “ನನ್ನನ್ನು ಭಾರತಕ್ಕೆ ಒಪ್ಪಿಸಬೇಡಿ ಅಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವ ಜೈಲು ಇಲ್ಲ” ಎಂಬುದಾಗಿ ಹೇಳಿಕೆ ಕೊಟ್ಟಂತಹ ಆ ವಿಜಯ ಮಲ್ಯ ಶ್ರೀಮತ ಉದ್ಯಮಿಯನ್ನು ನಮ್ಮ ಕರ್ನಾಟಕದ ಶಾಸಕರು ನಮ್ಮ ರಾಷ್ಟ್ರದ ಸಂಸತ್ತಿನ “ಹಿರಿಯರ ಮನೆ” ಆಗಿರುವ ರಾಜ್ಯಸಭೆಯ ಸದಸ್ಯನನ್ನಾಗಿ ಆರಿಸಿ ಕಳಿಸಿದ್ದರು.

ಆತನಲ್ಲಿ ವಾಮಮಾರ್ಗದಿಂದ ಸಂಪಾದಿಸಿದ ಸಂಪತ್ತು ಬಿಟ್ಟರೆ ಹೇಳಿಕೊಳ್ಳುವಂತಹ ಯಾವ ನೈತಿಕತೆ ಅವರಲ್ಲಿರಲಿಲ್ಲ. ಜವಾಬ್ದಾರಿ ಸ್ಥಾನಕ್ಕೆ ಜವಾಬ್ದಾರಿಕೆ ಹೊಂದಿದ್ದ ಶಾಸಕರಿಂದ ಆಯ್ಕೆಯಾದ ವ್ಯಕ್ತಿ ‘ದೇಶದ್ರೋಹಿ’ ಆಗುತ್ತಾನೆಂದರೆ ಇದು ನಮ್ಮ ದೇಶದ ದುರ್ದೈವ ಮತ್ತು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅಪಹಾಸ್ಯ,ಅಣಕ ಎಂದು ಬಹು ನೋವಿನಿಂದ ನಮ್ಮ ನಿವೃತ್ತ ನ್ಯಾಯಮೂರ್ತಿಗಳು ಬರೆದಿದ್ದಾರೆ.

ತಮಗೆ ಹಕ್ಕಿಲ್ಲದಿದ್ದರೂ ಪಾಂಡವರ ಸಮಸ್ತ ರಾಜ್ಯಕ್ಕೂ ತಾನೇ ಒಡೆಯನಾಗಬೇಕೆಂಬ ದುರ್ವ್ಯಸನ ದುರ್ಯೋಧನಿಗೆ ಇದ್ದರೆ ದ್ಯೂತ (ಜೂಜು) ಆಡುವ ದುರ್ವ್ಯಸನ ಧರ್ಮರಾಯನಿಗೆ ಇದ್ದುದ್ದರಿಂದ ‘ಕುರುಕ್ಷೇತ್ರ’ ನಡೆಯಿತು‌.

ತಮ್ಮದೇಯಾದ ಕಾರಣಗಳಿಗಾಗಿ ದುರ್ಯೋಧನನಿಗೆ ಋಣಿಯಾದ್ದರಿಂದ ಭೀಷ್ಮ,ದ್ರೋಣರು,ಕೃಪಚಾರ್ಯರು, ಅಶ್ವತ್ಥಾಮ,ಕರ್ಣ ಅಧರ್ಮದ ಪರವಾಗಿ ಧರ್ಮದ ವಿರುದ್ಧವಾಗಿ ಕುರುಕ್ಷೇತ್ರ ಯುದ್ದದಲ್ಲಿ ಪಾಲ್ಗೊಂಡಿದ್ದರು ನಮ್ಮ ದೇಶದಲ್ಲಿ ಪ್ರಸ್ತುತ ರಾಜಕಾರಣದಲ್ಲೂ ನಡೆಯುತ್ತಿರುವುದು ಇದೇ ಎಂದು ಇಂಥವರೂ ಯುವಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂಬ ಆತಂಕವನ್ನು ಕುರುಕ್ಷೇತ್ರದ ಮೂಲಕ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ರಾಜಕಾರಣದಲ್ಲಿ ರಾಜಕಾರಣಿಗಳಲ್ಲಿರುವ ಆಂಗ್ಲ ಭಾಷೆಯ ಮೂರು C ಗಳು ಅಂದರೆ 1-corruption
2-casteism
3crime

ಇವುಗಳನ್ನು ಬಿಟ್ಟು ಐದು C ಸೂತ್ರ ನೀಡಿದ್ದಾರೆ ನಮ್ಮ ನಿವೃತ್ತ ನ್ಯಾಯಮೂರ್ತಿಗಳು.
1-competency
2-charactesr
3-commitment
4-courage
5-compassion

ಈ ಐದು ಅಂಶಗಳು ಪ್ರಸ್ತುತ ರಾಜಕಾರಣದಲ್ಲಿ ಈ ಪುಸ್ತಕದ ಲೇಖಕರು ಹೇಳುವ ಹಾಗೆ ಹಗಲು ಹೊತ್ತಿನಲ್ಲಿ ಹೆಗಲ ಮೇಲೆ ದೀಪವಿಡಿದು ನೋಡಿದರೆ ಒಬ್ಬರೂ ಸಿಗುವುದಿಲ್ಲ.

ಒಬ್ಬ ಪೊಲೀಸ್ ಪೇದೆಯಾಗಲು ಕನಿಷ್ಠ ವಿದ್ಯಾರ್ಹತೆ ಬೇಕು, ದೈಹಿಕ ಸಾಮರ್ಥ್ಯ ಬೇಕು ಆದರೆ ಇಂಥ ಪೇದೇಯಾಗಲು ಅರ್ಹತೆ ಇಲ್ಲವೆಂದು ತಿರಸ್ಕೃತಗೊಂಡ ವ್ಯಕ್ತಿ ಚುನಾವಣೆಯಲ್ಲಿ ಆಯ್ಕೆಯಾಗಿ ಪೊಲೀಸ್ ಇಲಾಖೆಯನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಳ್ಳುವ ‘ಗೃಹಮಂತ್ರಿ’ ಆಗಬಹುದು ಬರೆಯುತ್ತಾ ಹೋದರೆ ಇಂಥವರ ಪಟ್ಟಿ ಜಾಸ್ತಿಯಾಗುತ್ತದೆ ‘ಆಗಬಹುದು’ ಅಂದರೆ ಇಲ್ಲಿಯವರೆಗೆ ಆಗಿಲ್ಲ’ ಎಂದರ್ಥವಲ್ಲ ವ್ಯಕ್ತಿಗಳ ವಿವರಣೆ ಅಗತ್ಯವಿಲ್ಲ ಎಂದು ಹೇಳುವಲ್ಲಿ ಎಂತಹಾ ಕರಾಳ ಸತ್ಯ ಅಪಮೌಲ್ಯದ ವಿಜೃಂಭಣೆ ಇದೆ ಎಂದು ಓದುಗರು + ಭ್ರಷ್ಟ ಮತದಾರ ಪ್ರಭುಗಳಾದ ನಾವುಗಳು ಅರಿತುಕೊಳ್ಳಬೇಕು.

68 ವರ್ಷಗಳನ್ನು ಪೂರೈಸಿರುವ ನ್ಯಾಯಮೂರ್ತಿಗಳು ವಯಸ್ಕರಾಗಲು ಬೇಕಿದ್ದ 18 ವರ್ಷಗಳನ್ನು ಅದರಲ್ಲೇ ಕಳೆದರೆ “ನನ್ನ ದೇಶದ ದೇಶದ ಆಗು ಹೋಗುಗಳ ಸಂಬಂಧದ ನನ್ನ ಅನುಭವಕ್ಕೆ 50 ವರ್ಷಗಳ ವಯಸ್ಸಾಗಿದೆ” ಅಭಿವೃದ್ಧಿಯ ಮೌಲ್ಯಗಳಿಗಿಂತ ಅಪಮೌಲ್ಯಗಳೇ ಹೆಚ್ಚಿನ ವೇಗದಿಂದ ವೃದ್ದಿಯಾಗುತ್ತಾ ಬಂದಿದೆ ಎಂದು ಹೇಳುವಲ್ಲಿ ರಾಜಕೀಯ ಭ್ರಷ್ಟಾಚಾರ ಅನೈತಿಕತೆಯ ಕ್ರೂರತೆಯನ್ನು ತಮ್ಮ ಮನದ ನೋವನ್ನು ಈ ಪುಸ್ತಕದಲ್ಲಿ ಶ್ರೀಯುತ ನಿವೃತ್ತ ನ್ಯಾಯಮೂರ್ತಿಗಳು ವ್ಯಕ್ತಪಡಿಸಿದ್ದಾರೆ.

ಇಂತಹ ನೋವುಗಳನ್ನು ಹೇಳುತ್ತಲೆ ಲಾಲಾ ಲಜಪತ್ ರಾಯ್, ಬಾಲಗಂಗಾಧರ ತಿಲಕ್,ಬಿಪಿನ್ ಚಂದ್ರಪಾಲ್,ದಾದಾಬಾಯಿ ನವರೋಜಿ,ಮದನಮೋಹನ ಮಾಲವೀಯ, ಗೋಪಾಲಕೃಷ್ಣ ಗೋಖಲೆ, ಶ್ರಿ ಅರವಿಂದರು, ಮಹಾತ್ಮ ಗಾಂಧೀಜಿ,ಸರೋಜಿನಿ ನಾಯ್ಡು, ಗೋವಿಂದ ವಲ್ಲಭ ಪಂತ್, ಲಾಲ್ ಬಹದ್ದೂರ್ ಶಾಸ್ತ್ರಿ ವೀರ ಸಾವಕರ, ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ ಅಜಾದ್, ಹುತಾತ್ಮ ಭಗತ್ ಸಿಂಗ್, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರಂತವರು ಯುವ ಜನತೆಗೆ ಆದರ್ಶರಾಗಬೇಕೆಂದು “ದೇಶದ ಚಿತ್ತ ಯುವಜನರತ್ತ ಎಂಬ ಪುಸ್ತಕದ ಮೂಲಕ ಜಾಗೃತ ಭಾರತಕ್ಕೆ ಕರೆ ನೀಡಿ ಅವಿರತವಾಗಿ ಶ್ರಮಿಸುತ್ತಿರುವ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ ಸರ್ ರವರ ಈ ಕಾರ್ಯವನ್ನು ಸರ್ಕಾರವು ಪರಿಗಣಿಸಿ ಒಂದು ಜಾಗೃತ ಭಾರತಕ್ಕೆ ಶ್ರೀಯುತ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ್ ಸರ್ ರವರ ಕನಸ್ಸನ್ನು ಸಾಕಾರಗೊಳಿಸಲು ಗಮನಹರಿಸಬೇಕು ನಮ್ಮಂತಹ ಯುವ ಸಮುದಾಯ ಈ ಪುಸ್ತಕವನ್ನು ಓದಿದರೆ ದೇಶದ ಆಡಳಿತ ವ್ಯವಸ್ಥೆಯಲ್ಲಿ ಗಣನೀಯ ಬದಲಾವಣೆಯಾಗಿ ಯುವ ಜನತೆಯ ಚಿತ್ತ ಸದಾ ದೇಶತ್ತ ಸೆಳೆಯಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ

Published

on

ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆ ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗದು ರಹಿತ ಚಿಕಿತ್ಸೆ ಯೋಜನೆಯ ತ್ವರಿತ ಜಾರಿಗೆ ಒತ್ತಾಯಿಸುವುದು, 2026ಕ್ಕೆ ಕೇಂದ್ರ ಸರ್ಕಾರದ ಮಾದರಿ ವೇತನಕ್ಕಾಗಿ ಹೋರಾಟ ರೂಪಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಿ ಆಂಡ್ ಆರ್ ನಿಯಮಕ್ಕೆ ತಿದ್ದುಪಡಿ ತರುವಂತೆ ಆಗ್ರಹಿಸಿ, ನಡೆಸಲಾಗುವ ಹೋರಾಟವನ್ನು ಬೆಂಬಲಿಸುವುದು, ವೈದ್ಯಕೀಯ ವೆಚ್ಚ ಮರುಪಾವತಿ ಬಿಲ್‌ಗಳಿಗೆ ಶೀಘ್ರವೇ ಹಣ ಬಿಡುಗಡೆ ಮಾಡಿಸುವ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಿ.ಎಸ್.ಷಡಕ್ಷರಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ

Published

on

ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿದೆ. ಸಂಗೊಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪ್ರಾತಃಕಾಲದ ಪೂಜೆ ಸಲ್ಲಿಸಲಾಯಿತು.

ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಜ್ಯೋತಿಯನ್ನು ಸ್ವಾಗತಿಸಿದರು. ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ, ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನದ ಆವರಣದಲ್ಲಿ ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು.

ಪೂರ್ಣ ಕುಂಭ ಹೊತ್ತ ಮಹಿಳೆಯರು, ಪೂಜಾ ಕುಣಿತ, ನಂದಿಕೋಲು, ವೀರಗಾಸೆ, ಡೊಳ್ಳು, ಬೊಂಬೆ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಉತ್ಸವಕ್ಕೆ ಮೆರುಗು ತಂದಿತು. ಸಂಗೊಳ್ಳಿ ರಾಯಣ್ಣ ಸ್ಮಾರಕದ ಬಳಿಯಿಂದ ಆರಂಭಗೊಂಡ ಕಲಾವಾಹಿನಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಇಂದು ಸಂಜೆ 8 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉತ್ಸವದ ಅಧಿಕೃತ ಉದ್ಘಾಟನೆ ನೆರವೇರಿಸಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ನಾಳೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವೀರರ ಸ್ಮರಣಾರ್ಥ ದೀಪೋತ್ಸವ, ರಾಯಣ್ಣನ ಕುರಿತಾದ ವಿಚಾರ ಸಂಕಿರಣ, ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಸೇರಿದಂತೆ ಇತರೆ ಸ್ಪರ್ಧೆಗಳು ನಡೆಯಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ

Published

on

ಸುದ್ದಿದಿನ,ದಾವಣಗೆರೆ:ಜಗಳೂರು ಪಟ್ಟಣದಲ್ಲಿ ಜನವರಿ 11 ಮತ್ತು 12 ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

ಜನವರಿ 11 ರಂದು ಬೆಳಿಗ್ಗೆ 8 ಗಂಟೆಗೆ ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್ ರಾಷ್ಟ್ರ ಧ್ವಜಾರೋಹಣ ನೆರೆವೇರಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ. ವಾಮದೇವಪ್ಪ ಪರಿಷತ್ತಿನ ಧ್ವಜಾರೋಹಣ ನೆರೆವೇರಿಸುವರು.ಜಗಳೂರು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ನಾಡ ಧ್ವಜಾರೋಹಣ ನೆರೆವೇರಿಸುವರು. ನವಚೇತನ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ, ನಾಡಗೀತೆ ಹಾಡುವರು.

ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ತಾಯಿ ಭುವನೇಶ್ವರಿ ಮತ್ತು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡುವರು.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷರಾದ ಲೋಕಮ್ಮ ಜೆ ಸಿ ಓಬಣ್ಣ, ಡಿ.ಡಿ.ಪಿ.ಯು ಕರಿಸಿದ್ದಪ್ಪ ಎಸ್.ಜಿ, ಡಿ.ಡಿ.ಪಿ.ಐ ಕೋಟ್ರೇಶ್.ಜಿ, ಜಗಳೂರು ವೃತ್ತ ನಿರೀಕ್ಷಕರು ಶ್ರೀನಿವಾಸರಾವ್, ತಾಲ್ಲೂಕು ಪಂಚಾಯಿತಿ, ಸಿ.ಇ.ಓ ಕೆಂಚಪ್ಪ, ಜಗಳೂರು ಬಿ.ಇ.ಓ ಹಾಲಮೂರ್ತಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಬೀರೇಂದ್ರ ಕುಮಾರ್ ಭಾಗವಹಿಸುವರು. ಮೆರವಣಿಗೆ ತಾಲೂಕು ಕಚೇರಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಬಯಲು ರಂಗಮಂದಿರವರೆಗೆ ತಾಯಿ ಭುವನೇಶ್ವರಿ ಮೆರವಣಿಗೆ ನಡೆಯುತ್ತದೆ.

ಡೊಳ್ಳು ಕುಣಿತ,ಹಗಲುವೇಷ, ಬೊಂಬೆ ಮೇಳ, ಉರುಮೆ, ತಪ್ಪಡಿ, ಕಹಳೆ, ವೀರಗಾಸೆ, ಕರಡಿ ಮಜಲು, ನಂದಿಧ್ವಜ, ಭಜನೆ, ಕೋಲಾಟ, ಎತ್ತಿನಗಾಡಿಗಳ ಮೆರವಣಿಗೆ, ಮಹಿಳೆಯರಿಂದ ಪೂರ್ಣಕುಂಭ, ಇಲಾಖೆಗಳ ಸ್ತಬ್ಧ ಚಿತ್ರಗಳು ಇತ್ಯಾದಿ.

ಬೆಳಿಗ್ಗೆ 11 ಗಂಟೆಗೆ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸುವರು. ಜಗಳೂರು ಶಾಸಕರಾದ ಬಿ.ದೇವೆಂದ್ರಪ್ಪ ಅಧ್ಯಕ್ಷತೆ ವಹಿಸುವರು.

ಸಂಸ್ಕøತಿ ಚಿಂತಕರು ಸಾಹಿತಿಗಳಾದ ಡಾ.ಎ.ಬಿ.ರಾಮಚಂದ್ರಪ್ಪ ಸಮ್ಮೇಳನಾಧ್ಯಕ್ಷರಾಗಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ವಾಮದೇವಪ್ಪ ಆಶಯ ನುಡಿಗಳಾನ್ನಾಡುವರು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಮಹಲಿಂಗರಂಗ ವೇದಿಕೆಯನ್ನು ಉದ್ಘಾಟಿಸುವರು. ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಚಿನ್ನಹಗರಿಯ ನುಡಿ ತೇರು ಸ್ಮರಣ ಸಂಚಿಕೆಯ ಲೋಕಾರ್ಪಣೆ ಮಾಡುವರು. ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಜೆ.ಎಂ ಇಮಾಮ್ ಮಹಾದ್ವಾರವನ್ನು ಉದ್ಘಾಟಿಸುವರು.

ಕ.ಸಾ.ಪ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ವಿದ್ಯಾರತ್ನ ಡಾ.ಟಿ.ತಿಪ್ಪೇಸ್ವಾಮಿ ಸಭಾಂಗಣವನ್ನು ಉದ್ಘಾಟಿಸುವರು. ನಿಕಟ ಪೂರ್ವ ಸಮ್ಮೇಳಧ್ಯಕ್ಷರಾದ ಪ್ರೊ.ಸಿ.ವಿ ಪಾಟೀಲ್ ಕನ್ನಡ ಧ್ವಜ ಹಸ್ತಾಂತರ ಮಾಡುವರು. ಜಗಳೂರು ಕ್ಷೇತ್ರದ ಮಾಜಿ ಶಾಸಕರಾದ ಟಿ.ಗುರುಸಿದ್ದನಗೌಡ, ಎಸ್.ವಿ ರಾಮಚಂದ್ರಪ್ಫ, ಹೆಚ್.ಪಿ.ರಾಜೇಶ್ ಕೃತಿಗಳ ಲೋಕಾರ್ಪಣೆ ಮಾಡುವರು.

ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಪ್ರೊ.ಎಸ್.ಬಿ ರಂಗನಾಥ್ ಪುಸ್ತಕ ಮಳಿಗೆ ಉದ್ಘಾಟಿಸುವರು. ಜಗಳೂರು ಪಟ್ಟಣದ ಅಧ್ಯಕ್ಷರಾದ ಕೆ.ಎಸ್ ನವೀನ್ ಕುಮಾರ್ ಡಾ.ಎಂ.ಜಿ.ಈಶ್ವರಪ್ಪ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಹೊನ್ನಾಳಿ ಶಾಸಕರಾದ ಡಿ.ಜಿ.ಶಾಂತನಗೌಡ, ಹರಿಹರ ಶಾಸಕರಾಧ ಬಿ.ಪಿ ಹರೀಶ್, ಚನ್ನಗಿರಿ ಶಾಸಕರಾದ ಬಸವರಾಜ ವಿ. ಶಿವಗಂಗ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಅಸಗೋಡು ಜಯಸಿಂಹ, ತಾಂಡ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎನ್ ಜಯದೇವ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್ ನವೀನ್, ನಾ.ರವಿಕುಮಾರ, ಡಿ.ಟಿ.ಶ್ರೀನಿವಾಸ್, ಡಾ.ಚಿದಾನಂದ ಎಂ.ಗೌಡ, ಜಿ.ಸ.ನೌ ಸಂಘದ ಅಧ್ಯಕ್ಷರಾದ ವೀರೇಶ್ ಎಸ್ ಒಡೇನಪುರ, ಜಿಲ್ಲಾ ವರದಿಗಾರರ ಕೂಟ ನಾಗರಾಜ್.ಎಸ್ ಬಡದಾಳ್, ಯುವ ಮುಖಂಡರಾದ ಕೆ.ಪಿ ಪಾಲಯ್ಯ, ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ ಕುರ್ಕಿ, ತಾ.ಸ.ನೌ ಸಂಘದ ಎ.ಎಲ್ ತಿಪ್ಪೇಸ್ವಾಮಿ, ಕಾರ್ಯಕಾರಿ ಸಮಿಯಿಯ ಅಧ್ಯಕ್ಷರಾದ ಜಿ.ರುದ್ರಯ್ಯ, ಪ್ರಗತಿಪರ ಕೃಷಿಕರು ಕಲ್ಲೇರುದ್ರೇಶ್ ಪಾಲ್ಗೋಳ್ಳುವರು.

ಮಧ್ಯಾಹ್ನ 2 ಗಂಟೆಗೆ ಗೋಷ್ಠಿ-1ರಲ್ಲಿ. ಸಾಹಿತ್ಯ ಮತ್ತು ಸಾಮಾಜಿಕ ನೆಲೆಗಳು, ಮಧ್ಯಾಹ್ನ 3:45 ಕ್ಕೆ ಗೋಷ್ಠಿ -2ರಲ್ಲಿ ಸೌಹಾರ್ದತೆ- ಸಮಾನತೆ-ಸಾಮಾಜಿಕ ನ್ಯಾಯ, ಗೋಷ್ಠಿ-3ರಲ್ಲಿ ಸಂಜೆ 5.30ಕ್ಕೆ ದಾವಣಗೆರೆ ಜಿಲ್ಲೆಯ ಐತಿಹಾಸಿಕ ನೆಲೆಗಳು, ಗೋಷ್ಠಿಗಳು ನಡೆಸಲಾಗುವುದು.

ಸಂಜೆ 6:15 ಗಂಟೆಗೆ ಜಗಳೂರು ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮ ಇರುತ್ತದೆ. ನಂತರ ಡಾ. ಶುಭಾ ಮರವಂತೆ, ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಹಾಸ್ಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending