ದಿನದ ಸುದ್ದಿ
ನ್ಯಾಯಮೂರ್ತಿ ಅರಳಿ ನಾಗರಾಜ್ ಸರ್ ರವರ ಚಿತ್ತ ಜಾಗೃತ ಭಾರತದತ್ತ..!
- ಕೆ.ಶ್ರೀಧರ್ (ಕೆ.ಸಿರಿ)
“ಸಮಾಜದ ಋಣ ತೀರಿಸಲು ಆದರ್ಶ ನಾಗರೀಕರಾಗೋಣ;” ಎಂಬ ಅದ್ಭುತ ಸಂದೇಶ ಸಾರುವ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಸರ್ ರವರು ಕಂಡ ಭವ್ಯ ಭಾರತದ ಕನಸು.
ನಿಜಕ್ಕೂ ನಮ್ಮಂತಹ ಯುವಕರನ್ನು ಕೂಡಾ ನಾಚಿಸುವಂತದ್ದು “ದೇಶದ ಚಿತ್ತ ಯುವಜನರತ್ತ” ಎಂಬ ಪುಸ್ತಕವನ್ನು ಶ್ರೀಯುತ ಅರಳಿ ನಾಗರಾಜ ಸರ್ ರವರು ದಿನಾಂಕ 21/08/20201 ರಂದು ನಮ್ಮ ಮನೆಗೆ ಬಂದಾಗ ಶುಭಾಶಯಗಳೊಂದಿಗೆ ನೀಡಿದ್ದರು ಪುಸ್ತಕದ ಶೀರ್ಷಿಕೆಯೇ ಹೇಳುವಂತೆ ದೇಶದ ಯುವ ಸಮುದಾಯಕ್ಕೆ ಸ್ಪಷ್ಟವಾದ ಸಂದೇಶ ನೀಡಿವ ಪುಸ್ತಕವಿದು.
ಯಶಸ್ಸಿನೆಡೆಗೆ ನಮ್ಮ ನಡಿಗೆ ಇಂದ ಆರಂಭವಾಗುವ ಈ ಪುಸ್ತಕ ನಮಗೆ ಆದರ್ಶ ಯಾರು? ಎಂಬ ಉಪ ಶೀರ್ಷಿಕೆಯೊಂದಿಗೆ ಮುಕ್ತಾಯವಾಗುತ್ತದೆ. ಬದುಕು ಎಂದರೆ ಬರಿ ಬದುಕುವುದಲ್ಲ ಸ್ಪಷ್ಟ ಗುರಿ, ಸಾಧಿಸುವ ಛಲ,ಕಠಿಣ ಪರಿಶ್ರಮ, ನಿರಂತರ ಅಭ್ಯಾಸ, ಅಚಲವಾದ ಆತ್ಮವಿಶ್ವಾಸ,ಸಮಯದ ಸಾರ್ಥಕ ಬಳಕೆ ಈ ಸಪ್ತ ಸೂತ್ರಗಳು ಮಾತ್ರ ಗೆಲುವು ತಂದುಕೊಡಲು ಸಾಧ್ಯ.
ಡಾ.ಎ.ಪಿ.ಜೆ ಅಬ್ದುಲ್ ಕಲಾಂ ರವರು ಹೇಳುವಂತೆ ಸೆಳೆತಗಳನ್ನು ಮೀರಿ ನಿಲ್ಲುವ ವ್ಯಕ್ತಿ ಮಾತ್ರ ಗುರಿಯನ್ನು ಸಾಧಿಸಬಲ್ಲ, ದೌರ್ಬಲ್ಯಗಳನ್ನು ಮೀರುವವರೆಗೂ ವ್ಯಕ್ತಿ ಪ್ರಬಲನಾಗುವುದಿಲ್ಲ. ಈ ಮಾತು ಅಕ್ಷರಶಃ ಸತ್ಯ ಯಾವುದೋ ಒಂದು ಸೆಳೆತಕ್ಕೆ ನಾವು ಒಳಗಾದರೆ ಬಂಧನಕ್ಕೊಳಗಾದಂತೆ.
ಪರಿಶ್ರಮ ಮೆಟ್ಟಿಲಿಂತೆ ಅದೃಷ್ಟ ಲಿಪ್ಟಿನಂತೆ ಲಿಫ್ಟ್ (ಅದೃಷ್ಟ) ಕೈಕೊಡಬಹುದು ಆದರೆ ಪರಿಶ್ರಮ (ಮೆಟ್ಟಿಲು) ಎಂದಿಗೂ ಕೈ ಕೊಡದು ತಾವು ಬದುಕಿದ ಆಧಾರದ ಮೇಲೆ ಶ್ರೀಯುತರು ಹೇಳಿದ್ದಾರೆ. ಬಸವಣ್ಣನವರ ವಚನಗಳ ಮೂಲಕ ಶರಣರ ತತ್ವಗಳನ್ನು ಪ್ರತಿಪಾದಿಸುವ ಮೂಲಕ ನಮ್ಮಲ್ಲಿರುವ ಸೋಮಾರಿತನವನ್ನು ಬಡಿದೆಬ್ಬಿಸುವಂತಿವೆ ಒಂದೊಂದು ಸಾಲುಗಳು.
ಯಶಸ್ಸಿನೆಡೆಗೆ ನಮ್ಮ ನಡಿಗೆ ಹಾಗೂ ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕೌಶಲ್ಯದಲ್ಲಿ ಸಕಾರಾತ್ಮಕ ಗುಣವಿಶೇಷಗಳು ಹಾಗೂ ನಕಾರಾತ್ಮಕ ಗುಣವಿಶೇಷಗಳು ಎರಡನ್ನೂ ತಮ್ಮದೇ ಆದ ದೃಷ್ಟಿಕೋನದಲ್ಲಿ ಚಿಂತಿಸಿದ ವಿವಿಧ ಮಜಲುಗಳನ್ನು ಓದುತ್ತಾ ಕುಳಿತರೆ ಶ್ರೀಯುತರ ಶಿಕ್ಷಣ ತಜ್ಞರಂತೆ ಕಾಣುತ್ತಾರೆ ನಿಜಕ್ಕೂ ಈ ಎಲ್ಲಾ ಅಂಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಮಕ್ಕಳ ಮನಸ್ಸಿನಲ್ಲಿಇಂತಹ ಗುಣಗಳನ್ನು ಬಿತ್ತಬೇಕು.
ಮುಂದುವರೆದು ಹೇಳುತ್ತಾ ಬರಿ ಅಂಶಗಳಿದ್ದರೆ ಸಾಲದು ಸಂವಹನ ಕೌಶಲ್ಯವೂ ಮುಖ್ಯ. ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ 62 ವರ್ಷ ಪೂರ್ಣಗೊಂಡ ನಂತರ ನಿವೃತ್ತನಾಗಬೇಕಿತ್ತು ಆದರೆ 61 ವರ್ಷ ಮುಗಿಯಲು ಒಂದೆರಡು ತಿಂಗಳು ಇರುವಾಗಲೆ ಸ್ವಯಂ ನಿವೃತ್ತಿ ಪಡೆದು ಅಂದಿನಿಂದಲೇ ರಾಜ್ಯಾದ್ಯಂತ ಸ್ವಂತ ಖರ್ಚಿನಲ್ಲಿ (ನನ್ನ ನಿವೃತ್ತಿ ವೇತನದಲ್ಲಿ) ಸಂಚರಿಸುತ್ತಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಯುವಜನರೊಂದಿಗೆ ಸಂವಾದಿಸುತ್ತಾ “ಯುವ ಜನರ ಚಿತ್ತವನ್ನು ದೇಶದತ್ತ ಹೊರಳಿಸುವ ಪ್ರಯತ್ನದಲ್ಲಿದ್ದೇನೆಂದು” ಮೃತ್ಯು ನಮ್ಮನ್ನಪ್ಪುವ ಮೊದಲೆ ಸಮಾಜದ ಋಣ ತೀರಿಸಬೇಕು ಎಂದು ಬರೆದಿರುವ ಶ್ರೀಯುತರ ಸಾಲುಗಳೇ ಹೇಳುತ್ತವೆ.
ಇವರ ಮನದಲ್ಲಿ ಜಾಗೃತ ಭಾರತವನ್ನು ಕಟ್ಟುವ ಇಂಗಿತವನ್ನು ಇದು ಕೇವಲ ಬರಹಕ್ಕೆ ಸೀಮಿತವಾಗದೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ನಾಡಿನಾದ್ಯಂತ ಸಂಚರಿಸಿ ತಮ್ಮ 70 ರ ಹರೆಯದಲ್ಲೂ ಸಮಾಜಮುಖಿ ಕಾರ್ಯ ನಿರ್ವಹಿಸುತ್ತಿರುವ ನಿಮಗೆ ಸಾವಿರದ ಶರಣು ಸರ್ ನಿವೃತ್ತಿಯಾಗುವವರೆಗೂ ಸಂಬಳ ಪಡೆದು ನಿವೃತ್ತಿ ವೇತನ ಪಡೆದು ಮೊಮ್ಮಕ್ಕಳ ಜೊತೆ ಕಾಲ ಕಳೆದು ಇಹಲೋಕ ತ್ಯಜಿಸುವವರ ಮಧ್ಯೆ ದೇಶದ ಯುವ ಸಮುದಾಯವನ್ನು ದೇಶಕಟ್ಟಬೇಕೆಂದು ಹುರಿದುಂಬಿಸುವ ಈ ಧೈರ್ಯ ಎಲ್ಲರಲ್ಲಿಯೂ ಬರುವುದಿಲ್ಲ.
ಇತ್ತೀಚಿನ ದಿನಗಳಲ್ಲಿ ರಾಜಕಾರಣ ಮತ್ತು ಧರ್ಮ ರಾಜಕಾರಣ ಬಲು ಮುನ್ನಲೆಯಲ್ಲಿರುವ ವಿಷಯಗಳಾಗಿದ್ದು ಶ್ರೀಯುತರು ನಮ್ಮನ್ನ ಸ್ವಾತಂತ್ರ್ಯ ಪೂರ್ವ ಭಾರತದ ಸ್ಥಿತಿ ಗತಿಗಳು ಸ್ವಾತಂತ್ರ್ಯಾನಂತರದ ಭಾರತದ ಪರಿಸ್ಥಿತಿಯ ಬಗ್ಗೆ ಕನ್ನಡಿ ಹಿಡಿದಂತಿದೆ.
ಹಿಂದೆ ರಾಜಪ್ರಭುತ್ವದಲ್ಲಿ “ಯಥಾ ತಥಾ ಪ್ರಜಾ” ಎಂಬ ವಾಡಿಕೆಯಿತ್ತು ಆದರೆ ಅರಳಿ ನಾಗರಾಜ ಸರ್ ರವರ ಕನಸ್ಸಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ “ಯಥಾ ಮತದಾರ ತಥಾ ಜನ ಪ್ರತಿನಿಧಿ” ಅಂದರೆ “ಮತದಾರರಂತೆ ಜನಪ್ರತಿನಿಧಿಗಳು” ನಮಗೆ ಆದರ್ಶಪ್ರಾಯರಾದ ಜನಪ್ರತಿನಿಧಿಗಳು ನಾಯಕರು ಬೇಕೆಂದಾದಲ್ಲಿ ಮೊದಲು ನಾವು ಆದರ್ಶಪ್ರಾಯ ನಾಗರೀಕರಾಗಬೇಕು.
ಅದರಲ್ಲೂ ಗ್ರಾಮ, ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಆಡಳಿತ ನಡೆಸುವ ನಮ್ಮ ಜನಪ್ರತಿನಿಧಿಗಳು ‘ಎಂಥವರಾಗಬೇಕು?’ ಎಂಬುದನ್ನು ನಿರ್ಧರಿಸುವ ಅಂಶ ನಿಂತಿರುವುದು _”ಮತದಾನದ ಮಾರಾಟದಿಂದಲ್ಲ ನಮ್ಮ ಮತವನ್ನು ಮೌಲ್ಯಯುತ ದೇಶಾಭಿಮಾನದ ರಾಜಕಾರಣಿಗೆ ದಾನ ಮಾಡುವುರ”_ ನಿಂತಿದೆ.
ಸ್ವಾತಂತ್ರ್ಯ ಬಂದು 75 ದಶಕಗಳೆ ಕಳೆದರೂ ಭ್ರಷ್ಟಾಚಾರ, ಜಾತೀಯತೆ, ಅಪರಾಧ, ಅನೈತಿಕತೆ ಮುಂತಾದ ಅಪಮೌಲ್ಯಗಳೇ ಮೌಲ್ಯಗಳಾಗಿ ವಿಜೃಂಭಿಸುತ್ತಿವೆ ಎಂದು ತುಂಬಾ ನೋವಿನಿಂದ ಹೇಳಿದ್ದಾರೆ. ಎಲ್ಲಾ ಹಂತದ ಚುನಾವಣೆಗಳಲ್ಲೂ ಹಣಬಲ,ತೋಳ್ಬಲ,ಜಾತಿ ಬಲ,ಅಧಿಕವಾಗುತ್ತಾ ಬಂದು ಜನಪ್ರತಿನಿಧಿಗಳಾಗಲು ಯಾವುದೇ ಅರ್ಹತೆಗಳು ಇಲ್ಲದವರು ಕಾಳಧನ ಸಂಪತ್ತು ಹೊಂದಿರುವವರು ಜಾತಿವಾದಿಗಳು ಅಪರಾಧದ ಹಿನ್ನೆಲೆ ಇರುವವರು ಚುನಾಯಿತರಾಗುತ್ತಿರುವುದಕ್ಕೆ ದೇಶದಲ್ಲಿ ನೈತಿಕತೆ ಅಧಃಪತನಕ್ಕೆ ಹೋಗಿದೆ ಎಂಬ ನೋವಿನ ಸಂಗತಿಯನ್ನು ನೊಂದುಕೊಂಡು ಪುಸ್ತಕದಲ್ಲಿ ಬರೆದಿದ್ದಾರೆ.
ದೇಶಪ್ರೇಮಿ ಮತ್ತು ದೇಶದ್ರೋಹಿ ಇವರಿಬ್ಬರ ನಡುವಿನ ವ್ಯತ್ಯಾಸವನ್ನು ವಿಜಯ ಮಲ್ಯ ರವರ ಪ್ರಕರಣದ ಮೂಲಕ ವಾಸ್ತವತೆಯ ಕದ ತಟ್ಟಿದ್ದಾರೆ ಶ್ರೀಯುತ ಅರಳಿ ನಾಗರಾಜ್ ಸರ್ ನಮ್ಮ ದೇಶದ ಬ್ಯಾಂಕುಗಳಿಂದ ಹತ್ತು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಸಾಲ ಪಡೆದು ಮರುಪಾವತಿ ಮಾಡುಲಾಗದೆ ವಂಚಿಸಿ ವಿದೇಶಕ್ಕೆ ಹಾರಿಹೋಗಿ ಆ ವಿದೇಶಿ ನ್ಯಾಯಾಲಯದಲ್ಲಿ ಆತ “ನನ್ನನ್ನು ಭಾರತಕ್ಕೆ ಒಪ್ಪಿಸಬೇಡಿ ಅಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವ ಜೈಲು ಇಲ್ಲ” ಎಂಬುದಾಗಿ ಹೇಳಿಕೆ ಕೊಟ್ಟಂತಹ ಆ ವಿಜಯ ಮಲ್ಯ ಶ್ರೀಮತ ಉದ್ಯಮಿಯನ್ನು ನಮ್ಮ ಕರ್ನಾಟಕದ ಶಾಸಕರು ನಮ್ಮ ರಾಷ್ಟ್ರದ ಸಂಸತ್ತಿನ “ಹಿರಿಯರ ಮನೆ” ಆಗಿರುವ ರಾಜ್ಯಸಭೆಯ ಸದಸ್ಯನನ್ನಾಗಿ ಆರಿಸಿ ಕಳಿಸಿದ್ದರು.
ಆತನಲ್ಲಿ ವಾಮಮಾರ್ಗದಿಂದ ಸಂಪಾದಿಸಿದ ಸಂಪತ್ತು ಬಿಟ್ಟರೆ ಹೇಳಿಕೊಳ್ಳುವಂತಹ ಯಾವ ನೈತಿಕತೆ ಅವರಲ್ಲಿರಲಿಲ್ಲ. ಜವಾಬ್ದಾರಿ ಸ್ಥಾನಕ್ಕೆ ಜವಾಬ್ದಾರಿಕೆ ಹೊಂದಿದ್ದ ಶಾಸಕರಿಂದ ಆಯ್ಕೆಯಾದ ವ್ಯಕ್ತಿ ‘ದೇಶದ್ರೋಹಿ’ ಆಗುತ್ತಾನೆಂದರೆ ಇದು ನಮ್ಮ ದೇಶದ ದುರ್ದೈವ ಮತ್ತು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅಪಹಾಸ್ಯ,ಅಣಕ ಎಂದು ಬಹು ನೋವಿನಿಂದ ನಮ್ಮ ನಿವೃತ್ತ ನ್ಯಾಯಮೂರ್ತಿಗಳು ಬರೆದಿದ್ದಾರೆ.
ತಮಗೆ ಹಕ್ಕಿಲ್ಲದಿದ್ದರೂ ಪಾಂಡವರ ಸಮಸ್ತ ರಾಜ್ಯಕ್ಕೂ ತಾನೇ ಒಡೆಯನಾಗಬೇಕೆಂಬ ದುರ್ವ್ಯಸನ ದುರ್ಯೋಧನಿಗೆ ಇದ್ದರೆ ದ್ಯೂತ (ಜೂಜು) ಆಡುವ ದುರ್ವ್ಯಸನ ಧರ್ಮರಾಯನಿಗೆ ಇದ್ದುದ್ದರಿಂದ ‘ಕುರುಕ್ಷೇತ್ರ’ ನಡೆಯಿತು.
ತಮ್ಮದೇಯಾದ ಕಾರಣಗಳಿಗಾಗಿ ದುರ್ಯೋಧನನಿಗೆ ಋಣಿಯಾದ್ದರಿಂದ ಭೀಷ್ಮ,ದ್ರೋಣರು,ಕೃಪಚಾರ್ಯರು, ಅಶ್ವತ್ಥಾಮ,ಕರ್ಣ ಅಧರ್ಮದ ಪರವಾಗಿ ಧರ್ಮದ ವಿರುದ್ಧವಾಗಿ ಕುರುಕ್ಷೇತ್ರ ಯುದ್ದದಲ್ಲಿ ಪಾಲ್ಗೊಂಡಿದ್ದರು ನಮ್ಮ ದೇಶದಲ್ಲಿ ಪ್ರಸ್ತುತ ರಾಜಕಾರಣದಲ್ಲೂ ನಡೆಯುತ್ತಿರುವುದು ಇದೇ ಎಂದು ಇಂಥವರೂ ಯುವಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂಬ ಆತಂಕವನ್ನು ಕುರುಕ್ಷೇತ್ರದ ಮೂಲಕ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ರಾಜಕಾರಣದಲ್ಲಿ ರಾಜಕಾರಣಿಗಳಲ್ಲಿರುವ ಆಂಗ್ಲ ಭಾಷೆಯ ಮೂರು C ಗಳು ಅಂದರೆ 1-corruption
2-casteism
3crime
ಇವುಗಳನ್ನು ಬಿಟ್ಟು ಐದು C ಸೂತ್ರ ನೀಡಿದ್ದಾರೆ ನಮ್ಮ ನಿವೃತ್ತ ನ್ಯಾಯಮೂರ್ತಿಗಳು.
1-competency
2-charactesr
3-commitment
4-courage
5-compassion
ಈ ಐದು ಅಂಶಗಳು ಪ್ರಸ್ತುತ ರಾಜಕಾರಣದಲ್ಲಿ ಈ ಪುಸ್ತಕದ ಲೇಖಕರು ಹೇಳುವ ಹಾಗೆ ಹಗಲು ಹೊತ್ತಿನಲ್ಲಿ ಹೆಗಲ ಮೇಲೆ ದೀಪವಿಡಿದು ನೋಡಿದರೆ ಒಬ್ಬರೂ ಸಿಗುವುದಿಲ್ಲ.
ಒಬ್ಬ ಪೊಲೀಸ್ ಪೇದೆಯಾಗಲು ಕನಿಷ್ಠ ವಿದ್ಯಾರ್ಹತೆ ಬೇಕು, ದೈಹಿಕ ಸಾಮರ್ಥ್ಯ ಬೇಕು ಆದರೆ ಇಂಥ ಪೇದೇಯಾಗಲು ಅರ್ಹತೆ ಇಲ್ಲವೆಂದು ತಿರಸ್ಕೃತಗೊಂಡ ವ್ಯಕ್ತಿ ಚುನಾವಣೆಯಲ್ಲಿ ಆಯ್ಕೆಯಾಗಿ ಪೊಲೀಸ್ ಇಲಾಖೆಯನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಳ್ಳುವ ‘ಗೃಹಮಂತ್ರಿ’ ಆಗಬಹುದು ಬರೆಯುತ್ತಾ ಹೋದರೆ ಇಂಥವರ ಪಟ್ಟಿ ಜಾಸ್ತಿಯಾಗುತ್ತದೆ ‘ಆಗಬಹುದು’ ಅಂದರೆ ಇಲ್ಲಿಯವರೆಗೆ ಆಗಿಲ್ಲ’ ಎಂದರ್ಥವಲ್ಲ ವ್ಯಕ್ತಿಗಳ ವಿವರಣೆ ಅಗತ್ಯವಿಲ್ಲ ಎಂದು ಹೇಳುವಲ್ಲಿ ಎಂತಹಾ ಕರಾಳ ಸತ್ಯ ಅಪಮೌಲ್ಯದ ವಿಜೃಂಭಣೆ ಇದೆ ಎಂದು ಓದುಗರು + ಭ್ರಷ್ಟ ಮತದಾರ ಪ್ರಭುಗಳಾದ ನಾವುಗಳು ಅರಿತುಕೊಳ್ಳಬೇಕು.
68 ವರ್ಷಗಳನ್ನು ಪೂರೈಸಿರುವ ನ್ಯಾಯಮೂರ್ತಿಗಳು ವಯಸ್ಕರಾಗಲು ಬೇಕಿದ್ದ 18 ವರ್ಷಗಳನ್ನು ಅದರಲ್ಲೇ ಕಳೆದರೆ “ನನ್ನ ದೇಶದ ದೇಶದ ಆಗು ಹೋಗುಗಳ ಸಂಬಂಧದ ನನ್ನ ಅನುಭವಕ್ಕೆ 50 ವರ್ಷಗಳ ವಯಸ್ಸಾಗಿದೆ” ಅಭಿವೃದ್ಧಿಯ ಮೌಲ್ಯಗಳಿಗಿಂತ ಅಪಮೌಲ್ಯಗಳೇ ಹೆಚ್ಚಿನ ವೇಗದಿಂದ ವೃದ್ದಿಯಾಗುತ್ತಾ ಬಂದಿದೆ ಎಂದು ಹೇಳುವಲ್ಲಿ ರಾಜಕೀಯ ಭ್ರಷ್ಟಾಚಾರ ಅನೈತಿಕತೆಯ ಕ್ರೂರತೆಯನ್ನು ತಮ್ಮ ಮನದ ನೋವನ್ನು ಈ ಪುಸ್ತಕದಲ್ಲಿ ಶ್ರೀಯುತ ನಿವೃತ್ತ ನ್ಯಾಯಮೂರ್ತಿಗಳು ವ್ಯಕ್ತಪಡಿಸಿದ್ದಾರೆ.
ಇಂತಹ ನೋವುಗಳನ್ನು ಹೇಳುತ್ತಲೆ ಲಾಲಾ ಲಜಪತ್ ರಾಯ್, ಬಾಲಗಂಗಾಧರ ತಿಲಕ್,ಬಿಪಿನ್ ಚಂದ್ರಪಾಲ್,ದಾದಾಬಾಯಿ ನವರೋಜಿ,ಮದನಮೋಹನ ಮಾಲವೀಯ, ಗೋಪಾಲಕೃಷ್ಣ ಗೋಖಲೆ, ಶ್ರಿ ಅರವಿಂದರು, ಮಹಾತ್ಮ ಗಾಂಧೀಜಿ,ಸರೋಜಿನಿ ನಾಯ್ಡು, ಗೋವಿಂದ ವಲ್ಲಭ ಪಂತ್, ಲಾಲ್ ಬಹದ್ದೂರ್ ಶಾಸ್ತ್ರಿ ವೀರ ಸಾವಕರ, ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ ಅಜಾದ್, ಹುತಾತ್ಮ ಭಗತ್ ಸಿಂಗ್, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರಂತವರು ಯುವ ಜನತೆಗೆ ಆದರ್ಶರಾಗಬೇಕೆಂದು “ದೇಶದ ಚಿತ್ತ ಯುವಜನರತ್ತ ಎಂಬ ಪುಸ್ತಕದ ಮೂಲಕ ಜಾಗೃತ ಭಾರತಕ್ಕೆ ಕರೆ ನೀಡಿ ಅವಿರತವಾಗಿ ಶ್ರಮಿಸುತ್ತಿರುವ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ ಸರ್ ರವರ ಈ ಕಾರ್ಯವನ್ನು ಸರ್ಕಾರವು ಪರಿಗಣಿಸಿ ಒಂದು ಜಾಗೃತ ಭಾರತಕ್ಕೆ ಶ್ರೀಯುತ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ್ ಸರ್ ರವರ ಕನಸ್ಸನ್ನು ಸಾಕಾರಗೊಳಿಸಲು ಗಮನಹರಿಸಬೇಕು ನಮ್ಮಂತಹ ಯುವ ಸಮುದಾಯ ಈ ಪುಸ್ತಕವನ್ನು ಓದಿದರೆ ದೇಶದ ಆಡಳಿತ ವ್ಯವಸ್ಥೆಯಲ್ಲಿ ಗಣನೀಯ ಬದಲಾವಣೆಯಾಗಿ ಯುವ ಜನತೆಯ ಚಿತ್ತ ಸದಾ ದೇಶತ್ತ ಸೆಳೆಯಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


