Connect with us

ದಿನದ ಸುದ್ದಿ

ನ್ಯಾಯಮೂರ್ತಿ ಅರಳಿ ನಾಗರಾಜ್ ಸರ್ ರವರ ಚಿತ್ತ ಜಾಗೃತ ಭಾರತದತ್ತ..!

Published

on

  • ಕೆ.ಶ್ರೀಧರ್ (ಕೆ.ಸಿರಿ)

“ಸಮಾಜದ ಋಣ ತೀರಿಸಲು ಆದರ್ಶ ನಾಗರೀಕರಾಗೋಣ;” ಎಂಬ ಅದ್ಭುತ ಸಂದೇಶ ಸಾರುವ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಸರ್ ರವರು ಕಂಡ ಭವ್ಯ ಭಾರತದ ಕನಸು.

ನಿಜಕ್ಕೂ ನಮ್ಮಂತಹ ಯುವಕರನ್ನು ಕೂಡಾ ನಾಚಿಸುವಂತದ್ದು “ದೇಶದ ಚಿತ್ತ ಯುವಜನರತ್ತ” ಎಂಬ ಪುಸ್ತಕವನ್ನು ಶ್ರೀಯುತ ಅರಳಿ ನಾಗರಾಜ ಸರ್ ರವರು ದಿನಾಂಕ 21/08/20201 ರಂದು ನಮ್ಮ ಮನೆಗೆ ಬಂದಾಗ ಶುಭಾಶಯಗಳೊಂದಿಗೆ ನೀಡಿದ್ದರು ಪುಸ್ತಕದ ಶೀರ್ಷಿಕೆಯೇ ಹೇಳುವಂತೆ ದೇಶದ ಯುವ ಸಮುದಾಯಕ್ಕೆ ಸ್ಪಷ್ಟವಾದ ಸಂದೇಶ ನೀಡಿವ ಪುಸ್ತಕವಿದು.

ಯಶಸ್ಸಿನೆಡೆಗೆ ನಮ್ಮ ನಡಿಗೆ ಇಂದ ಆರಂಭವಾಗುವ ಈ ಪುಸ್ತಕ ನಮಗೆ ಆದರ್ಶ ಯಾರು? ಎಂಬ ಉಪ ಶೀರ್ಷಿಕೆಯೊಂದಿಗೆ ಮುಕ್ತಾಯವಾಗುತ್ತದೆ. ಬದುಕು ಎಂದರೆ ಬರಿ ಬದುಕುವುದಲ್ಲ ಸ್ಪಷ್ಟ ಗುರಿ, ಸಾಧಿಸುವ ಛಲ,ಕಠಿಣ ಪರಿಶ್ರಮ, ನಿರಂತರ ಅಭ್ಯಾಸ, ಅಚಲವಾದ ಆತ್ಮವಿಶ್ವಾಸ,ಸಮಯದ ಸಾರ್ಥಕ ಬಳಕೆ ಈ ಸಪ್ತ ಸೂತ್ರಗಳು ಮಾತ್ರ ಗೆಲುವು ತಂದುಕೊಡಲು ಸಾಧ್ಯ.

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ರವರು ಹೇಳುವಂತೆ ಸೆಳೆತಗಳನ್ನು ಮೀರಿ ನಿಲ್ಲುವ ವ್ಯಕ್ತಿ ಮಾತ್ರ ಗುರಿಯನ್ನು ಸಾಧಿಸಬಲ್ಲ, ದೌರ್ಬಲ್ಯಗಳನ್ನು ಮೀರುವವರೆಗೂ ವ್ಯಕ್ತಿ ಪ್ರಬಲನಾಗುವುದಿಲ್ಲ. ಈ ಮಾತು ಅಕ್ಷರಶಃ ಸತ್ಯ ಯಾವುದೋ ಒಂದು ಸೆಳೆತಕ್ಕೆ ನಾವು ಒಳಗಾದರೆ ಬಂಧನಕ್ಕೊಳಗಾದಂತೆ.

ಪರಿಶ್ರಮ ಮೆಟ್ಟಿಲಿಂತೆ ಅದೃಷ್ಟ ಲಿಪ್ಟಿನಂತೆ ಲಿಫ್ಟ್ (ಅದೃಷ್ಟ) ಕೈಕೊಡಬಹುದು ಆದರೆ ಪರಿಶ್ರಮ (ಮೆಟ್ಟಿಲು) ಎಂದಿಗೂ ಕೈ ಕೊಡದು ತಾವು ಬದುಕಿದ ಆಧಾರದ ಮೇಲೆ ಶ್ರೀಯುತರು ಹೇಳಿದ್ದಾರೆ. ಬಸವಣ್ಣನವರ ವಚನಗಳ ಮೂಲಕ ಶರಣರ ತತ್ವಗಳನ್ನು ಪ್ರತಿಪಾದಿಸುವ ಮೂಲಕ ನಮ್ಮಲ್ಲಿರುವ ಸೋಮಾರಿತನವನ್ನು ಬಡಿದೆಬ್ಬಿಸುವಂತಿವೆ ಒಂದೊಂದು ಸಾಲುಗಳು.

ಯಶಸ್ಸಿನೆಡೆಗೆ ನಮ್ಮ ನಡಿಗೆ ಹಾಗೂ ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕೌಶಲ್ಯದಲ್ಲಿ ಸಕಾರಾತ್ಮಕ ಗುಣವಿಶೇಷಗಳು ಹಾಗೂ ನಕಾರಾತ್ಮಕ ಗುಣವಿಶೇಷಗಳು ಎರಡನ್ನೂ ತಮ್ಮದೇ ಆದ ದೃಷ್ಟಿಕೋನದಲ್ಲಿ ಚಿಂತಿಸಿದ ವಿವಿಧ ಮಜಲುಗಳನ್ನು ಓದುತ್ತಾ ಕುಳಿತರೆ ಶ್ರೀಯುತರ ಶಿಕ್ಷಣ ತಜ್ಞರಂತೆ ಕಾಣುತ್ತಾರೆ ನಿಜಕ್ಕೂ ಈ ಎಲ್ಲಾ ಅಂಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಮಕ್ಕಳ ಮನಸ್ಸಿನಲ್ಲಿಇಂತಹ ಗುಣಗಳನ್ನು ಬಿತ್ತಬೇಕು.

ಮುಂದುವರೆದು ಹೇಳುತ್ತಾ ಬರಿ ಅಂಶಗಳಿದ್ದರೆ ಸಾಲದು ಸಂವಹನ ಕೌಶಲ್ಯವೂ ಮುಖ್ಯ. ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ 62 ವರ್ಷ ಪೂರ್ಣಗೊಂಡ ನಂತರ ನಿವೃತ್ತನಾಗಬೇಕಿತ್ತು ಆದರೆ 61 ವರ್ಷ ಮುಗಿಯಲು ಒಂದೆರಡು ತಿಂಗಳು ಇರುವಾಗಲೆ ಸ್ವಯಂ ನಿವೃತ್ತಿ ಪಡೆದು ಅಂದಿನಿಂದಲೇ ರಾಜ್ಯಾದ್ಯಂತ ಸ್ವಂತ ಖರ್ಚಿನಲ್ಲಿ (ನನ್ನ ನಿವೃತ್ತಿ ವೇತನದಲ್ಲಿ) ಸಂಚರಿಸುತ್ತಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಯುವಜನರೊಂದಿಗೆ ಸಂವಾದಿಸುತ್ತಾ “ಯುವ ಜನರ ಚಿತ್ತವನ್ನು ದೇಶದತ್ತ ಹೊರಳಿಸುವ ಪ್ರಯತ್ನದಲ್ಲಿದ್ದೇನೆಂದು” ಮೃತ್ಯು ನಮ್ಮನ್ನಪ್ಪುವ ಮೊದಲೆ ಸಮಾಜದ ಋಣ ತೀರಿಸಬೇಕು ಎಂದು ಬರೆದಿರುವ ಶ್ರೀಯುತರ ಸಾಲುಗಳೇ ಹೇಳುತ್ತವೆ.

ಇವರ ಮನದಲ್ಲಿ ಜಾಗೃತ ಭಾರತವನ್ನು ಕಟ್ಟುವ ಇಂಗಿತವನ್ನು ಇದು ಕೇವಲ ಬರಹಕ್ಕೆ ಸೀಮಿತವಾಗದೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ನಾಡಿನಾದ್ಯಂತ ಸಂಚರಿಸಿ ತಮ್ಮ 70 ರ ಹರೆಯದಲ್ಲೂ ಸಮಾಜಮುಖಿ ಕಾರ್ಯ ನಿರ್ವಹಿಸುತ್ತಿರುವ ನಿಮಗೆ ಸಾವಿರದ ಶರಣು ಸರ್ ನಿವೃತ್ತಿಯಾಗುವವರೆಗೂ ಸಂಬಳ ಪಡೆದು ನಿವೃತ್ತಿ ವೇತನ ಪಡೆದು ಮೊಮ್ಮಕ್ಕಳ ಜೊತೆ ಕಾಲ ಕಳೆದು ಇಹಲೋಕ ತ್ಯಜಿಸುವವರ ಮಧ್ಯೆ ದೇಶದ ಯುವ ಸಮುದಾಯವನ್ನು ದೇಶಕಟ್ಟಬೇಕೆಂದು ಹುರಿದುಂಬಿಸುವ ಈ ಧೈರ್ಯ ಎಲ್ಲರಲ್ಲಿಯೂ ಬರುವುದಿಲ್ಲ.

ಇತ್ತೀಚಿನ ದಿನಗಳಲ್ಲಿ ರಾಜಕಾರಣ ಮತ್ತು ಧರ್ಮ ರಾಜಕಾರಣ ಬಲು ಮುನ್ನಲೆಯಲ್ಲಿರುವ ವಿಷಯಗಳಾಗಿದ್ದು ಶ್ರೀಯುತರು ನಮ್ಮನ್ನ ಸ್ವಾತಂತ್ರ್ಯ ಪೂರ್ವ ಭಾರತದ ಸ್ಥಿತಿ ಗತಿಗಳು ಸ್ವಾತಂತ್ರ್ಯಾನಂತರದ ಭಾರತದ ಪರಿಸ್ಥಿತಿಯ ಬಗ್ಗೆ ಕನ್ನಡಿ ಹಿಡಿದಂತಿದೆ.

ಹಿಂದೆ ರಾಜಪ್ರಭುತ್ವದಲ್ಲಿ “ಯಥಾ ತಥಾ ಪ್ರಜಾ” ಎಂಬ ವಾಡಿಕೆಯಿತ್ತು ಆದರೆ ಅರಳಿ ನಾಗರಾಜ ಸರ್ ರವರ ಕನಸ್ಸಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ “ಯಥಾ ಮತದಾರ ತಥಾ ಜನ ಪ್ರತಿನಿಧಿ” ಅಂದರೆ “ಮತದಾರರಂತೆ ಜನಪ್ರತಿನಿಧಿಗಳು” ನಮಗೆ ಆದರ್ಶಪ್ರಾಯರಾದ ಜನಪ್ರತಿನಿಧಿಗಳು ನಾಯಕರು ಬೇಕೆಂದಾದಲ್ಲಿ ಮೊದಲು ನಾವು ಆದರ್ಶಪ್ರಾಯ ನಾಗರೀಕರಾಗಬೇಕು.

ಅದರಲ್ಲೂ ಗ್ರಾಮ, ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಆಡಳಿತ ನಡೆಸುವ ನಮ್ಮ ಜನಪ್ರತಿನಿಧಿಗಳು ‘ಎಂಥವರಾಗಬೇಕು?’ ಎಂಬುದನ್ನು ನಿರ್ಧರಿಸುವ ಅಂಶ ನಿಂತಿರುವುದು _”ಮತದಾನದ ಮಾರಾಟದಿಂದಲ್ಲ ನಮ್ಮ ಮತವನ್ನು ಮೌಲ್ಯಯುತ ದೇಶಾಭಿಮಾನದ ರಾಜಕಾರಣಿಗೆ ದಾನ ಮಾಡುವುರ”_ ನಿಂತಿದೆ.

ಸ್ವಾತಂತ್ರ್ಯ ಬಂದು 75 ದಶಕಗಳೆ ಕಳೆದರೂ ಭ್ರಷ್ಟಾಚಾರ, ಜಾತೀಯತೆ, ಅಪರಾಧ, ಅನೈತಿಕತೆ ಮುಂತಾದ ಅಪಮೌಲ್ಯಗಳೇ ಮೌಲ್ಯಗಳಾಗಿ ವಿಜೃಂಭಿಸುತ್ತಿವೆ ಎಂದು ತುಂಬಾ ನೋವಿನಿಂದ ಹೇಳಿದ್ದಾರೆ. ಎಲ್ಲಾ ಹಂತದ ಚುನಾವಣೆಗಳಲ್ಲೂ ಹಣಬಲ,ತೋಳ್ಬಲ,ಜಾತಿ ಬಲ,ಅಧಿಕವಾಗುತ್ತಾ ಬಂದು ಜನಪ್ರತಿನಿಧಿಗಳಾಗಲು ಯಾವುದೇ ಅರ್ಹತೆಗಳು ಇಲ್ಲದವರು ಕಾಳಧನ ಸಂಪತ್ತು ಹೊಂದಿರುವವರು ಜಾತಿವಾದಿಗಳು ಅಪರಾಧದ ಹಿನ್ನೆಲೆ ಇರುವವರು ಚುನಾಯಿತರಾಗುತ್ತಿರುವುದಕ್ಕೆ ದೇಶದಲ್ಲಿ ನೈತಿಕತೆ ಅಧಃಪತನಕ್ಕೆ ಹೋಗಿದೆ ಎಂಬ ನೋವಿನ ಸಂಗತಿಯನ್ನು ನೊಂದುಕೊಂಡು ಪುಸ್ತಕದಲ್ಲಿ ಬರೆದಿದ್ದಾರೆ.

ದೇಶಪ್ರೇಮಿ ಮತ್ತು ದೇಶದ್ರೋಹಿ ಇವರಿಬ್ಬರ ನಡುವಿನ ವ್ಯತ್ಯಾಸವನ್ನು ವಿಜಯ ಮಲ್ಯ ರವರ ಪ್ರಕರಣದ ಮೂಲಕ ವಾಸ್ತವತೆಯ ಕದ ತಟ್ಟಿದ್ದಾರೆ ಶ್ರೀಯುತ ಅರಳಿ ನಾಗರಾಜ್ ಸರ್ ನಮ್ಮ ದೇಶದ ಬ್ಯಾಂಕುಗಳಿಂದ ಹತ್ತು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಸಾಲ ಪಡೆದು ಮರುಪಾವತಿ ಮಾಡುಲಾಗದೆ ವಂಚಿಸಿ ವಿದೇಶಕ್ಕೆ ಹಾರಿಹೋಗಿ ಆ ವಿದೇಶಿ ನ್ಯಾಯಾಲಯದಲ್ಲಿ ಆತ “ನನ್ನನ್ನು ಭಾರತಕ್ಕೆ ಒಪ್ಪಿಸಬೇಡಿ ಅಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವ ಜೈಲು ಇಲ್ಲ” ಎಂಬುದಾಗಿ ಹೇಳಿಕೆ ಕೊಟ್ಟಂತಹ ಆ ವಿಜಯ ಮಲ್ಯ ಶ್ರೀಮತ ಉದ್ಯಮಿಯನ್ನು ನಮ್ಮ ಕರ್ನಾಟಕದ ಶಾಸಕರು ನಮ್ಮ ರಾಷ್ಟ್ರದ ಸಂಸತ್ತಿನ “ಹಿರಿಯರ ಮನೆ” ಆಗಿರುವ ರಾಜ್ಯಸಭೆಯ ಸದಸ್ಯನನ್ನಾಗಿ ಆರಿಸಿ ಕಳಿಸಿದ್ದರು.

ಆತನಲ್ಲಿ ವಾಮಮಾರ್ಗದಿಂದ ಸಂಪಾದಿಸಿದ ಸಂಪತ್ತು ಬಿಟ್ಟರೆ ಹೇಳಿಕೊಳ್ಳುವಂತಹ ಯಾವ ನೈತಿಕತೆ ಅವರಲ್ಲಿರಲಿಲ್ಲ. ಜವಾಬ್ದಾರಿ ಸ್ಥಾನಕ್ಕೆ ಜವಾಬ್ದಾರಿಕೆ ಹೊಂದಿದ್ದ ಶಾಸಕರಿಂದ ಆಯ್ಕೆಯಾದ ವ್ಯಕ್ತಿ ‘ದೇಶದ್ರೋಹಿ’ ಆಗುತ್ತಾನೆಂದರೆ ಇದು ನಮ್ಮ ದೇಶದ ದುರ್ದೈವ ಮತ್ತು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅಪಹಾಸ್ಯ,ಅಣಕ ಎಂದು ಬಹು ನೋವಿನಿಂದ ನಮ್ಮ ನಿವೃತ್ತ ನ್ಯಾಯಮೂರ್ತಿಗಳು ಬರೆದಿದ್ದಾರೆ.

ತಮಗೆ ಹಕ್ಕಿಲ್ಲದಿದ್ದರೂ ಪಾಂಡವರ ಸಮಸ್ತ ರಾಜ್ಯಕ್ಕೂ ತಾನೇ ಒಡೆಯನಾಗಬೇಕೆಂಬ ದುರ್ವ್ಯಸನ ದುರ್ಯೋಧನಿಗೆ ಇದ್ದರೆ ದ್ಯೂತ (ಜೂಜು) ಆಡುವ ದುರ್ವ್ಯಸನ ಧರ್ಮರಾಯನಿಗೆ ಇದ್ದುದ್ದರಿಂದ ‘ಕುರುಕ್ಷೇತ್ರ’ ನಡೆಯಿತು‌.

ತಮ್ಮದೇಯಾದ ಕಾರಣಗಳಿಗಾಗಿ ದುರ್ಯೋಧನನಿಗೆ ಋಣಿಯಾದ್ದರಿಂದ ಭೀಷ್ಮ,ದ್ರೋಣರು,ಕೃಪಚಾರ್ಯರು, ಅಶ್ವತ್ಥಾಮ,ಕರ್ಣ ಅಧರ್ಮದ ಪರವಾಗಿ ಧರ್ಮದ ವಿರುದ್ಧವಾಗಿ ಕುರುಕ್ಷೇತ್ರ ಯುದ್ದದಲ್ಲಿ ಪಾಲ್ಗೊಂಡಿದ್ದರು ನಮ್ಮ ದೇಶದಲ್ಲಿ ಪ್ರಸ್ತುತ ರಾಜಕಾರಣದಲ್ಲೂ ನಡೆಯುತ್ತಿರುವುದು ಇದೇ ಎಂದು ಇಂಥವರೂ ಯುವಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂಬ ಆತಂಕವನ್ನು ಕುರುಕ್ಷೇತ್ರದ ಮೂಲಕ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ರಾಜಕಾರಣದಲ್ಲಿ ರಾಜಕಾರಣಿಗಳಲ್ಲಿರುವ ಆಂಗ್ಲ ಭಾಷೆಯ ಮೂರು C ಗಳು ಅಂದರೆ 1-corruption
2-casteism
3crime

ಇವುಗಳನ್ನು ಬಿಟ್ಟು ಐದು C ಸೂತ್ರ ನೀಡಿದ್ದಾರೆ ನಮ್ಮ ನಿವೃತ್ತ ನ್ಯಾಯಮೂರ್ತಿಗಳು.
1-competency
2-charactesr
3-commitment
4-courage
5-compassion

ಈ ಐದು ಅಂಶಗಳು ಪ್ರಸ್ತುತ ರಾಜಕಾರಣದಲ್ಲಿ ಈ ಪುಸ್ತಕದ ಲೇಖಕರು ಹೇಳುವ ಹಾಗೆ ಹಗಲು ಹೊತ್ತಿನಲ್ಲಿ ಹೆಗಲ ಮೇಲೆ ದೀಪವಿಡಿದು ನೋಡಿದರೆ ಒಬ್ಬರೂ ಸಿಗುವುದಿಲ್ಲ.

ಒಬ್ಬ ಪೊಲೀಸ್ ಪೇದೆಯಾಗಲು ಕನಿಷ್ಠ ವಿದ್ಯಾರ್ಹತೆ ಬೇಕು, ದೈಹಿಕ ಸಾಮರ್ಥ್ಯ ಬೇಕು ಆದರೆ ಇಂಥ ಪೇದೇಯಾಗಲು ಅರ್ಹತೆ ಇಲ್ಲವೆಂದು ತಿರಸ್ಕೃತಗೊಂಡ ವ್ಯಕ್ತಿ ಚುನಾವಣೆಯಲ್ಲಿ ಆಯ್ಕೆಯಾಗಿ ಪೊಲೀಸ್ ಇಲಾಖೆಯನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಳ್ಳುವ ‘ಗೃಹಮಂತ್ರಿ’ ಆಗಬಹುದು ಬರೆಯುತ್ತಾ ಹೋದರೆ ಇಂಥವರ ಪಟ್ಟಿ ಜಾಸ್ತಿಯಾಗುತ್ತದೆ ‘ಆಗಬಹುದು’ ಅಂದರೆ ಇಲ್ಲಿಯವರೆಗೆ ಆಗಿಲ್ಲ’ ಎಂದರ್ಥವಲ್ಲ ವ್ಯಕ್ತಿಗಳ ವಿವರಣೆ ಅಗತ್ಯವಿಲ್ಲ ಎಂದು ಹೇಳುವಲ್ಲಿ ಎಂತಹಾ ಕರಾಳ ಸತ್ಯ ಅಪಮೌಲ್ಯದ ವಿಜೃಂಭಣೆ ಇದೆ ಎಂದು ಓದುಗರು + ಭ್ರಷ್ಟ ಮತದಾರ ಪ್ರಭುಗಳಾದ ನಾವುಗಳು ಅರಿತುಕೊಳ್ಳಬೇಕು.

68 ವರ್ಷಗಳನ್ನು ಪೂರೈಸಿರುವ ನ್ಯಾಯಮೂರ್ತಿಗಳು ವಯಸ್ಕರಾಗಲು ಬೇಕಿದ್ದ 18 ವರ್ಷಗಳನ್ನು ಅದರಲ್ಲೇ ಕಳೆದರೆ “ನನ್ನ ದೇಶದ ದೇಶದ ಆಗು ಹೋಗುಗಳ ಸಂಬಂಧದ ನನ್ನ ಅನುಭವಕ್ಕೆ 50 ವರ್ಷಗಳ ವಯಸ್ಸಾಗಿದೆ” ಅಭಿವೃದ್ಧಿಯ ಮೌಲ್ಯಗಳಿಗಿಂತ ಅಪಮೌಲ್ಯಗಳೇ ಹೆಚ್ಚಿನ ವೇಗದಿಂದ ವೃದ್ದಿಯಾಗುತ್ತಾ ಬಂದಿದೆ ಎಂದು ಹೇಳುವಲ್ಲಿ ರಾಜಕೀಯ ಭ್ರಷ್ಟಾಚಾರ ಅನೈತಿಕತೆಯ ಕ್ರೂರತೆಯನ್ನು ತಮ್ಮ ಮನದ ನೋವನ್ನು ಈ ಪುಸ್ತಕದಲ್ಲಿ ಶ್ರೀಯುತ ನಿವೃತ್ತ ನ್ಯಾಯಮೂರ್ತಿಗಳು ವ್ಯಕ್ತಪಡಿಸಿದ್ದಾರೆ.

ಇಂತಹ ನೋವುಗಳನ್ನು ಹೇಳುತ್ತಲೆ ಲಾಲಾ ಲಜಪತ್ ರಾಯ್, ಬಾಲಗಂಗಾಧರ ತಿಲಕ್,ಬಿಪಿನ್ ಚಂದ್ರಪಾಲ್,ದಾದಾಬಾಯಿ ನವರೋಜಿ,ಮದನಮೋಹನ ಮಾಲವೀಯ, ಗೋಪಾಲಕೃಷ್ಣ ಗೋಖಲೆ, ಶ್ರಿ ಅರವಿಂದರು, ಮಹಾತ್ಮ ಗಾಂಧೀಜಿ,ಸರೋಜಿನಿ ನಾಯ್ಡು, ಗೋವಿಂದ ವಲ್ಲಭ ಪಂತ್, ಲಾಲ್ ಬಹದ್ದೂರ್ ಶಾಸ್ತ್ರಿ ವೀರ ಸಾವಕರ, ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ ಅಜಾದ್, ಹುತಾತ್ಮ ಭಗತ್ ಸಿಂಗ್, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರಂತವರು ಯುವ ಜನತೆಗೆ ಆದರ್ಶರಾಗಬೇಕೆಂದು “ದೇಶದ ಚಿತ್ತ ಯುವಜನರತ್ತ ಎಂಬ ಪುಸ್ತಕದ ಮೂಲಕ ಜಾಗೃತ ಭಾರತಕ್ಕೆ ಕರೆ ನೀಡಿ ಅವಿರತವಾಗಿ ಶ್ರಮಿಸುತ್ತಿರುವ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ ಸರ್ ರವರ ಈ ಕಾರ್ಯವನ್ನು ಸರ್ಕಾರವು ಪರಿಗಣಿಸಿ ಒಂದು ಜಾಗೃತ ಭಾರತಕ್ಕೆ ಶ್ರೀಯುತ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ್ ಸರ್ ರವರ ಕನಸ್ಸನ್ನು ಸಾಕಾರಗೊಳಿಸಲು ಗಮನಹರಿಸಬೇಕು ನಮ್ಮಂತಹ ಯುವ ಸಮುದಾಯ ಈ ಪುಸ್ತಕವನ್ನು ಓದಿದರೆ ದೇಶದ ಆಡಳಿತ ವ್ಯವಸ್ಥೆಯಲ್ಲಿ ಗಣನೀಯ ಬದಲಾವಣೆಯಾಗಿ ಯುವ ಜನತೆಯ ಚಿತ್ತ ಸದಾ ದೇಶತ್ತ ಸೆಳೆಯಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending