Connect with us

ರಾಜಕೀಯ

ಜೈ ಹಿಂದ್, ಜೈ ಕರ್ನಾಟಕ

Published

on

ಪ್ರಾಥಮಿಕ ಶಾಲಾ ದಿನಗಳು ನೆನಪಾಗುತ್ತಿವೆ. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಮತ್ತು ರಾಜ್ಯೋತ್ಸವ ದಿನಗಳಂದು ನಮ್ಮೊಳಗೆ ಎಲ್ಲಿಲ್ಲದ ಹುಮ್ಮಸ್ಸು ರೂಪುಗೊಳ್ಳುತ್ತಿತ್ತು. ಭಾಷಣ, ಗಾಯನ ಹೀಗೆ ವಿವಿಧ ಸ್ಪರ್ಧೆಗಳು ನಡೆಯುತ್ತಿದ್ದವು. ಮುಖ್ಯವಾಗಿ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಬಹುಮಾನ ಗೆಲ್ಲುವ ತವಕವಿರುತ್ತಿತ್ತು. ಆ ದಿನಗಳಲ್ಲಿ ಅಪ್ಪ ಬರೆದುಕೊಡುತ್ತಿದ್ದ ಎರಡು ಪುಟಗಳ ಭಾಷಣವನ್ನು ಓದಿಕೊಳ್ಳಬೇಕಾಗುತ್ತಿತ್ತು. ಅವರು ಅದರೊಳಗಿನ ತಿರುಳನ್ನು ಹೇಳಿಕೊಡುತ್ತಿದ್ದರು. ಅದನ್ನಷ್ಟೇ ತಿಳಿದುಕೊಂಡು ಭಾಷಣದ ವೇಳೆ ಆ ಕ್ಷಣಕ್ಕೆ ವ್ಯಕ್ತಪಡಿಸಬೇಕು ಎಂದು ಸಲಹೆ ನೀಡುತ್ತಿದ್ದರು. ಆದರೆ, ನಾವು ಆ ಪ್ರತಿಯೊಳಗಿನ ಪ್ರತಿ ವಾಕ್ಯ, ಪದಗಳನ್ನು ಉರುಹೊಡೆದು ನೆನಪಿನಲ್ಲಿರಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದೆವೇ ಹೊರತು ಅವರು ಹೇಳಿದ ಹಾಗೆ ಇಡೀ ಪ್ರತಿಯಲ್ಲಿನ ಮಹತ್ವದ ಅಂಶಗಳನ್ನು ಮನನ ಮಾಡಿಕೊಳ್ಳುತ್ತಿರಲಿಲ್ಲ. ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸುವ ಉತ್ಸಾಹ, ನಾನೇ ಮೊದಲ ಬಹುಮಾನ ಗೆಲ್ಲಬೇಕು ಎಂಬ ಆಸೆಯೇನೋ ಇರುತ್ತಿತ್ತು. ಆ ಕ್ಷಣಕ್ಕೆ ಉರುಹೊಡೆದ ಪದ, ವಾಕ್ಯಗಳು ನೆನಪಾಗದಿದ್ದರೆ ಎಂಬ ಭಯವೂ ಇತ್ತು. ಇದರ ಮಧ್ಯೆಯೂ ಖುಷಿ ನೀಡುತ್ತಿದ್ದ ಸಂಗತಿ ಎಂದರೆ ಭಾಷಣವು ಕೊನೆಗೊಳ್ಳುವ ಸಂದರ್ಭದಲ್ಲಿ ನಾವು ದೊಡ್ಡ ಧ್ವನಿಯಲ್ಲಿ ಹೇಳುತ್ತಿದ್ದ ‘ಜೈ ಹಿಂದ್, ಜೈ ಕರ್ನಾಟಕ’ ಉದ್ಘೋಷ. ಕೊನೆಗೂ ಭಾಷಣ ಮುಗಿಯಿತು ಎಂಬ ನಿರಾಳ ಭಾವವೂ ಸೇರಿ ಆ ಧ್ವನಿಗೆ ಶಕ್ತಿ ಬರುತ್ತಿತ್ತು.

ಮೊದಲ ಪುಟದಲ್ಲಿ ಉಲ್ಲೇಖಿಸಲ್ಪಟ್ಟ ವಾಕ್ಯ, ಪದಗಳು ಸುಲಭವಾಗಿ ನೆನಪಾಗುತ್ತಿದ್ದವು. ಆದರ್ಶ ವ್ಯಕ್ತಿತ್ವಗಳ ಹೆಸರುಗಳನ್ನು ಕ್ರಮಾನುಗತವಾಗಿ ಪ್ರಸ್ತುತಪಡಿಸುತ್ತಿದ್ದೆವು. ಆದರೆ, ತದನಂತರದ ಪುಟದ ವಾಕ್ಯಗಳನ್ನು ಹೇಳುವಾಗ ದ್ವಂದ್ವವಾಗುತ್ತಿತ್ತು. ಭಾಷಣ ಪ್ರತಿಯ ವಿಚಾರಗಳನ್ನು ಸಂಪೂರ್ಣವಾಗಿ ಗೊತ್ತುಮಾಡಿಕೊಳ್ಳದೇ ಕೇವಲ ಉರುಹೊಡೆದ ಕಾರಣಕ್ಕೇ ಈ ಸಮಸ್ಯೆ ಎಂಬುದು ಆಮೇಲೆ ಮನದಟ್ಟಾಯಿತು. ಹಾಗೆ ಮನದಟ್ಟಾದರೂ ಉರುಹೊಡೆದು ಓದಿಕೊಳ್ಳುವ ರೂಢಿಗತ ಅಭ್ಯಾಸ ಬಹುದಿನಗಳ ಕಾಲ ಮುಂದುವರೆದಿತ್ತು. ತೊದಲು ಮಾತು ಪರಿಪೂರ್ಣತೆಯ ಹಂತ ತಲುಪುವವರೆಗಿನ ಅವಧಿ, ನಮ್ಮೊಳಗೆ ಭಾಷೆಯ ಆಕೃತಿಗಳು ಆವರಿಸಿಕೊಳ್ಳುವ ರೀತಿ, ಆ ಮೂಲಕ ನಮಗೆ ಹರಿದುಬರುವ ಮಾಹಿತಿ, ಜ್ಞಾನ – ಇವೆಲ್ಲವೂ ಪ್ರಾಥಮಿಕ ಶಾಲಾ ದಿನಗಳಲ್ಲಿ ಕ್ರಮೇಣ ಅರಿವಿಗೆಟುಕಿದ್ದವು. ನಮ್ಮ ಗಮನವೆಲ್ಲವೂ ಶಾಲೆ, ತರಗತಿ, ಟೀಚರ್ಸ್, ಸ್ನೇಹಿತರು, ಆಟ, ರಜೆಗಳು ಆರಂಭವಾಗುವ ತಿಂಗಳು, ಓದುವ ಅವಧಿಯ ನಂತರ ಆಟಕ್ಕೆ ಹೋಗುವ ಕುತೂಹಲದ ಕಡೆಗೇ ಕೇಂದ್ರೀಕೃತವಾಗಿರುತ್ತಿತ್ತು. ರಾಜಕೀಯವು ಬಾಲ್ಯದ ಪ್ರಜ್ಞೆಯ ಆವರಣದ ಆಚೆಗೇ ಇರುತ್ತಿತ್ತು.

ಈಗ ಹಾಗಲ್ಲ. ಪ್ರಾಥಮಿಕ ಹಂತದಿಂದಲೇ ಶಿಕ್ಷಣದ ಭಾಷೆ ಯಾವುದಾಗಿರಬೇಕು ಎನ್ನುವುದನ್ನು ವಿವೇಚನಾರಹಿತವಾಗಿ ನಿರ್ಧರಿಸಿಬಿಡುವ ವಿಚಿತ್ರ ರಾಜಕಾರಣವು ಮಕ್ಕಳ ಕಲಿಕೆಯ ಸ್ವಾತಂತ್ರ್ಯದ ಮೇಲೆ ದಾಳಿಗೈಯ್ಯುತ್ತಿದೆ. ತರಗತಿಯೊಳಗೆ ಪಠ್ಯವಾಗಿ ಕಲಿಯಲ್ಪಡುವ ಸಂಗತಿಗಳು ರಾಜಕೀಯ ಬಣ್ಣ ಪಡೆಯುತ್ತಿವೆ. ಮೇಷ್ಟ್ರು ಹಾಜರಾತಿ ದೃಢೀಕರಿಸಿಕೊಳ್ಳಲು ನಮ್ಮ ಹೆಸರು ಕೂಗಿದ ತಕ್ಷಣ ಎಸ್ ಸರ್, ಪ್ರೆಸೆಂಟ್ ಸರ್, ಇದೀನಿ ಸಾರ್ ಎಂದು ಪ್ರತಿಕ್ರಿಯಿಸುವ ಸ್ವಾತಂತ್ರ್ಯವನ್ನು ಅಧಿಕಾರ ರಾಜಕಾರಣ ಕಿತ್ತುಕೊಳ್ಳುವುದರ ಕಡೆಗೆ ಆಸಕ್ತಿ ತೋರುತ್ತಿದೆ. ಯಾರು ಹೇಳಲಿ ಬಿಡಲಿ, ಮೇರಾ ಭಾರತ್ ಮಹಾನ್ ಎಂಬ ಹೆಮ್ಮೆಯ ಭಾವವು ರಾಷ್ಟ್ರೀಯ ಉತ್ಸವಗಳ ಮೂಲಕ ಮಕ್ಕಳಲ್ಲಿ ಮೇಳೈಸಿರುತ್ತದೆ. ನಮ್ಮ ನೆಲ, ಜಲದ ಕುರಿತಾದ ಅಭಿಮಾನವನ್ನು ಅಷ್ಟು ಸುಲಭವಾಗಿ ನಮ್ಮಿಂದ ದೂರಮಾಡಲಾಗದು. ಎಸ್ ಸರ್, ಪ್ರೆಸೆಂಟ್ ಸರ್ ಎನ್ನುವ ಬದಲು ಜೈ ಹಿಂದ್ ಹೇಳಬೇಕು ಎನ್ನುವ ಆಡಳಿತಾತ್ಮಕ ನಿಯಮಾವಳಿ ರೂಪಿಸಿ ಅನುಷ್ಠಾನಕ್ಕೆ ತರುವ ಪ್ರಯತ್ನ ರಾಷ್ಟ್ರದ ಕುರಿತಾದ ಅಭಿಮಾನ ಮತ್ತು ಹೆಮ್ಮೆಯ ಭಾವದ ಸಹಜತೆಯನ್ನು ಒಡೆಯುತ್ತದೆ.

ಶಿಕ್ಷಣವು ವಿದ್ಯಾರ್ಥಿಕೇಂದ್ರಿತವಾಗಿರಬೇಕೇ ಹೊರತು ಅಧಿಕಾರಕೇಂದ್ರಿತ ಅತಾರ್ಕಿಕ ನಿರ್ಧಾರಗಳ ತಿವಿತಕ್ಕೀಡಾಗಬಾರದು. ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ – ಹೀಗೆ ಒಂದೊಂದು ಹಂತದಲ್ಲೂ ವಿದ್ಯಾರ್ಥಿಗಳ ಕಲಿಕೆಯು ಹೊಸ ಆಯಾಮ ಪಡೆದುಕೊಳ್ಳುತ್ತಿರುತ್ತದೆ. ವಿದ್ಯಾರ್ಥಿಗಳಿಗೆ ಒಳಿತು-ಕೆಡಕುಗಳ ವಿವೇಚನೆಯು ಹಂತಹಂತವಾಗಿಯೇ ಜೊತೆಯಾಗುತ್ತಾ ಹೋಗುತ್ತದೆ. ಶಿಕ್ಷಕರು, ಪಠ್ಯ ಮತ್ತು ಹಿರಿಯರ ಸಾಂದರ್ಭಿಕ ಮಾತುಗಳ ನೆರವಿನೊಂದಿಗೆ ಅವರು ವಿವೇಚನೆಯನ್ನು ತಮ್ಮದಾಗಿಸಿಕೊಳ್ಳುತ್ತಿರುತ್ತಾರೆ. ಇಂಥ ವಿವೇಚನೆಯನ್ನು ಗಟ್ಟಿಗೊಳಿಸುವ ಹಾಗೆಯೇ ಶಿಕ್ಷಣವು ಪುನರ್‍ಸ್ವರೂಪವನ್ನು ಪಡೆದುಕೊಳ್ಳುತ್ತಿರಬೇಕು. ಈ ಸಾಧ್ಯತೆಯು ಎಷ್ಟು ಬೇಗ ಅನುಷ್ಠಾನಗೊಳ್ಳುತ್ತದೋ ಅಷ್ಟೇ ತೀವ್ರಗತಿಯಲ್ಲಿ ಶಿಕ್ಷಣ ವಲಯದಲ್ಲಿನ ಸುಧಾರಣೆಯ ಪ್ರಕ್ರಿಯೆ ಚಾಲ್ತಿಗೆ ಬರುತ್ತದೆ. ಈ ವಿಷಯದಲ್ಲಿ ಅಧ್ಯಾಪಕವರ್ಗವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅವರ ಪ್ರತಿಕ್ರಿಯೆಗಳನ್ನು ಆಧರಿಸಿಯೇ ಶಾಸಕಾಂಗ ನಿರ್ಣಯಗಳನ್ನು ತೆಗೆದುಕೊಳ್ಳಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಶಿಕ್ಷಣ ಇಲಾಖೆಯನ್ನು ಪ್ರತಿನಿಧಿಸುವ ಉನ್ನತ ಹಂತದ ಅಧಿಕಾರಿಗಳು ಈ ವಿಷಯದಲ್ಲಿ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು.

ಇಂಥ ಇಚ್ಛಾಶಕ್ತಿಯು ಬೆರಳೆಣಿಕೆಯ ಅಧಿಕಾರಿಗಳಲ್ಲಿ ಮಾತ್ರ ಇದೆ. ಇದಕ್ಕೆ ಸಂಬಂಧಿಸಿದಂತೆ ಅನೇಕ ಅಧಿಕಾರಿಗಳ ನಿರ್ಲಿಪ್ತ ದೃಷ್ಟಿಕೋನವು ಶಾಸಕಾಂಗವನ್ನು ಪ್ರತಿನಿಧಿಸುವ ರಾಜಕಾರಣಿಗಳ ಅತಾರ್ಕಿಕ ನಿರ್ಧಾರ ಮತ್ತು ಲಾಬಿಗಳಿಗೆ ಶಿಕ್ಷಣ ವಲಯವು ಮಣಿಯಬೇಕಾದ ಅನಿವಾರ್ಯತೆ ಸೃಷ್ಟಿಸಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ದೂರಗಾಮಿ ಪರಿಣಾಮಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಅಮೂಲ್ಯ ವಾರ್ಷಿಕ ಯೋಜನೆಗಳನ್ನು ರೂಪಿಸುವ ಬದಲು ಅವರು ಯಥಾಸ್ಥಿತಿಯನ್ನಷ್ಟೇ ಮುಂದುವರೆಸುತ್ತಿದ್ದಾರೆ. ಈ ಬಗೆಯ ತಮ್ಮ ಮಿತಿಯು ಚರ್ಚೆಗೊಳಗಾಗುತ್ತಿದೆ ಎಂಬ ಸುಳಿವು ಸಿಕ್ಕಾಕ್ಷಣವೇ ಜನಪ್ರಿಯ ಧಾಟಿಯ ವಿವಾದಗಳಿಗೆ ಸರಕು ಒದಗಿಸಬಲ್ಲ ವಿವೇಚನಾರಹಿತ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ಲಾಭದ ಹಸಿವಿನಿಂದ ಬಳಲುವ ಸುದ್ದಿಮಾಧ್ಯಮಗಳಿಗೆ ಬಂಡವಾಳ ದುಡಿಯುವ ವಿವಾದದ ಸರಕನ್ನು ಒದಗಿಸುತ್ತಾರೆ. ಪರ ಮತ್ತು ವಿರೋಧಗಳ ಭಾವಾವೇಶದ ಗದ್ದಲದಲ್ಲಿ ಶಿಕ್ಷಣ ವಲಯದಲ್ಲಿ ಕಾಣಲೇಬೇಕಾದ ಸುಧಾರಣೆಯ ಹೆಜ್ಜೆಗಳ ವಿಸ್ತøತ ಚರ್ಚೆಯೇ ನಡೆಯುವುದಿಲ್ಲ. ಆ ಚರ್ಚೆಯಿಲ್ಲದೇ ಇಡೀ ವೃತ್ತಾಂತ ಕೊನೆಗೊಳ್ಳುತ್ತದೆ. ಜನರೂ ಆ ಕ್ಷಣದ ವಿವಾದಾತ್ಮಕ ಸಂಗತಿಯನ್ನು ಮರೆತುಬಿಡುತ್ತಾರೆ. ಚುನಾವಣೆ ಹತ್ತಿರವಾದಾಗ ಇಂಥದ್ದೇ ವಿವಾದೋದ್ಯಮದ ಲಾಭದ ಹವಣಿಗೆಯ ಭಾವೋನ್ಮಾದದ ವಿಷಯಗಳು ಮುನ್ನೆಲೆಗೆ ಬರುತ್ತವೆ.

ತರಗತಿಯಲ್ಲಿರುವ ಮಕ್ಕಳು ಮೇಷ್ಟ್ರು ಹೆಸರು ಹೇಳಿದಾಗ ಎಸ್ ಸರ್ ಎನ್ನುವ ಬದಲು ಜೈಹಿಂದ್ ಎಂದು ಹೇಳಬಹುದು. ಅದು ಕ್ರಿಯೆಯೊಂದಕ್ಕೆ ದಕ್ಕುವ ನಿರ್ದಿಷ್ಟ ಪ್ರತಿಕ್ರಿಯೆಯಾಗುತ್ತದಷ್ಟೇ. ನನ್ನ ಹೆಸರು ಹೇಳಿದ ತಕ್ಷಣ ನಾನು ಕ್ಲಾಸ್‍ನಲ್ಲಿದ್ದೇನೆ ಎಂಬುದನ್ನು ಸ್ಪಷ್ಟಪಡಿಸುವುದಕ್ಕೆ ಎಸ್ ಸರ್ ಅಥವಾ ಪ್ರೆಸೆಂಟ್ ಸರ್ ಎನ್ನುವ ಪ್ರತಿಕ್ರಿಯೆ ಬಳಕೆಯಾಗುತ್ತದೆ. ಗುರುಗಳು ಹೆಸರು ಕೂಗುವುದು, ವಿದ್ಯಾರ್ಥಿಗಳು ಓಗೊಡುವುದು – ಇವೆರಡೂ ತರಗತಿಯಲ್ಲಿ ನಡೆಯುವ ಅತ್ಯಂತ ಸಹಜ ಆಡಳಿತಾತ್ಮಕ ಕ್ರಿಯೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಭಾವುಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಕ್ರಿಯೆಯನ್ನಾಗಿಯೂ ಇದನ್ನು ನೋಡಬಹುದು. ರೆಗ್ಯುಲರ್ ಆಗಿ ತರಗತಿಗೆ ಹಾಜರಾಗುವ ವಿದ್ಯಾರ್ಥಿ ಎಸ್ ಸರ್ ಎಂದು ಹೇಳದಿದ್ದರೆ ಶಿಕ್ಷಕರಿಗೆ ಕಸಿವಿಸಿಯಾಗುತ್ತದೆ. ಯಾಕೆ ಬಂದಿಲ್ಲ ಎಂಬ ಪ್ರಶ್ನೆ ಮೂಡುತ್ತದೆ. ತರಗತಿಗೆ ಚಕ್ಕರ್ ಹೊಡೆಯುವುದನ್ನೇ ಪ್ರವೃತ್ತಿಯಾಗಿಸಿಕೊಂಡವರ ಕುರಿತೂ ಕಾಳಜಿ ಇರುತ್ತದೆ. ಅವರು ಎಷ್ಟೋ ದಿನಗಳ ನಂತರ ಹಾಜರಾಗಿ ಎಸ್ ಸರ್ ಎಂದಾಗ ಪ್ರೀತಿಯಿಂದ ಗದರಿ ಇನ್ಮೇಲಿಂದ ರೆಗ್ಯುಲರ್ ಆಗಿ ಕ್ಲಾಸ್ ಅಟೆಂಡ್ ಆಗಬೇಕು ಎಂದು ಹೇಳುತ್ತಾರೆ. ಇಂಥದ್ದೊಂದು ಶೈಕ್ಷಣಿಕ ಬಾಂಧವ್ಯದ ಆಯಾಮವಿರುವ ಈ ಕ್ರಿಯೆಯನ್ನು ಆಡಳಿತಾತ್ಮಕ ನಿಯಮ ಮತ್ತು ದೇಶಪ್ರೇಮದ ಪರಿಧಿಯ ಕಡ್ಡಾಯ ಆವರಣದೊಳಗೆ ತರುವುದು ಮಕ್ಕಳ ವಿವೇಚನೆಯ ಯಾನದ ಸಕಾರಾತ್ಮಕತೆಯ ದೃಷ್ಟಿಯಿಂದ ಅಪಾಯಕಾರಿ ಎಂದೆನ್ನಿಸುತ್ತದೆ.

ಹಿಂದೆಲ್ಲಾ ಪೆನ್ನು, ನೋಟ್ ಬುಕ್‍ಗಳ ಮೇಲೆ ಕಾಣಿಸಿಕೊಳ್ಳುತ್ತಿದ್ದ ‘ಮೇರಾ ಭಾರತ್ ಮಹಾನ್’ ಎಂಬ ಒಕ್ಕಣೆಯು ನಮ್ಮೊಳಗೆ ಹೆಮ್ಮೆ ಮೂಡಿಸುತ್ತಿತ್ತು. ನಾವು ಕ್ಲಾಸ್‍ನಲ್ಲಿ ಕೇಳಿಸಿಕೊಳ್ಳುತ್ತಿದ್ದ ಉದಾತ್ತ ಯೋಚನೆಗಳು, ಆದರ್ಶ ವ್ಯಕ್ತಿತ್ವಗಳ ಕೊಡುಗೆಗಳ ಬಗ್ಗೆ ತಿಳಿದುಕೊಂಡ ಸಂದರ್ಭದಲ್ಲಿ ಈ ಒಕ್ಕಣೆ ಕಾಣಿಸಿಕೊಂಡಾಗ ನಮ್ಮೊಳಗಿನ ಹೆಮ್ಮೆಯ ಭಾವ ಇಮ್ಮಡಿಗೊಳ್ಳುತ್ತಿತ್ತು. ಇದನ್ನು ನೋಡಲೇಬೇಕೆಂಬ, ಹೆಮ್ಮೆಯ ಭಾವ ಮೂಡಿಸಿಕೊಳ್ಳಲೇಬೇಕು ಎನ್ನುವ ಕಡ್ಡಾಯ ನಿಯಮವಿರಲಿಲ್ಲ. ಆದಾಗ್ಯೂ ಇದು ನಮ್ಮೊಳಗೆ ಆಪ್ತವಾಗಿ ಬೆರೆತುಹೋಗಿತ್ತು. ಉಳಿದೆಲ್ಲ ದೇಶಗಳಿಗಿಂತ ನಮ್ಮ ದೇಶ ಮಹಾನ್ ಎನ್ನುವ ಭಾವ ಅತ್ಯಂತ ಸಂಯಮಪೂರ್ಣವಾಗಿ ನಮ್ಮ ಪ್ರಜ್ಞೆಯೊಳಗೆ ಮೇಳೈಸಿತ್ತು. ಹೆಮ್ಮೆ ಪಟ್ಟುಕೊಳ್ಳುವಂಥ ದೇಶದಲ್ಲಿ ಸಮಸ್ಯೆಗಳೂ ಇವೆ, ಅವುಗಳ ನಿವಾರಣೆಯ ಕಡೆಗೆ ಕಾಳಜಿಪೂರ್ವಕ ಹೆಜ್ಜೆಗಳನ್ನಿಡುತ್ತಲೇ ಇಡೀ ದೇಶವನ್ನು ಮಹಾನ್ ಅಗಿಸುವ ಉದಾತ್ತ ಪ್ರಯತ್ನಗಳ ಕಡೆಗೆ ಗಮನವಿರಬೇಕು ಎಂಬ ಎಚ್ಚರವನ್ನೂ ರೂಢಿಸಿತ್ತು. ಅಧಿಕಾರ ರಾಜಕಾರಣದ ಮೊಗಸಾಲೆಯಿಂದ ಹೊರಟ ನಿರ್ದಿಷ್ಟ ನಿಲುವು ಆಡಳಿತಾತ್ಮಕ ತೀರ್ಮಾನವಾಗಿ ತರಗತಿಗಳ ಒಳಗೆ ಪ್ರವೇಶಿಸಿ ಮಕ್ಕಳಿಂದ ದೇಶದ ಬಗ್ಗೆ ಜೈಕಾರ ಮೊಳಗಬೇಕು ಎಂಬ ಕಾರ್ಯಸೂಚಿ ಅನುಷ್ಠಾನಗೊಂಡರೆ ಅದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕುಚಿತ ಗೋಡೆಗಳನ್ನು ಸೃಷ್ಟಿಸಬಹುದು. ಅಂಥ ಗೋಡೆಗಳು ಸೃಷ್ಟಿಯಾದರೆ ತರಗತಿಯ ವಿವೇಚನಾತ್ಮಕ ಸೌಂದರ್ಯಕ್ಕೆ ಧಕ್ಕೆಯಾಗುತ್ತದೆ.

ಜೈಹಿಂದ್ ಎಂಬ ಪ್ರತಿಕ್ರಿಯೆ ಕಡ್ಡಾಯವಾಗಿ ಅನುಷ್ಠಾನಗೊಂಡರೆ ಅದರಲ್ಲಿ ತಪ್ಪು ಹುಡುಕುವುದೇಕೆ? ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂಬ ನಾಡಗೀತೆ ಕಡ್ಡಾಯವಾಗಿ ಶಾಲಾ-ಕಾಲೇಜುಗಳ ಆರಂಭಕ್ಕಿಂತ ಮುನ್ನ ಮೊಳಗುತ್ತಿರುವಾಗ ಇದಕ್ಕೆ ಆಕ್ಷೇಪವೇಕೆ? ಎಂಬ ಪ್ರಶ್ನೆಗಳು ಎದುರಾಗಬಹುದು. ಕುವೆಂಪು ವಿರಚಿತ ಈ ನಾಡಗೀತೆಯು ಕಡ್ಡಾಯ ಪಾಲನೆಯ ನಿಯಮದೊಂದಿಗೆ ಮೊಳಗುವುದಕ್ಕೂ ಜೈಹಿಂದ್ ಎಂಬ ಪ್ರತಿಕ್ರಿಯೆಯು ತರಗತಿಯ ಒಳಗೆ ವ್ಯಕ್ತವಾಗುವುದಕ್ಕೂ ವ್ಯತ್ಯಾಸವಿದೆ. ನಾಡಗೀತೆಯ ಧ್ವನಿಸುರುಳಿ ಶಾಲಾ-ಕಾಲೇಜುಗಳ ಆವರಣದಲ್ಲಿ ಮೊಳಗುವಾಗ ಅದರೊಳಗಿನ ವೈವಿಧ್ಯಮಯ ಸದಾಶಯಗಳ ಸಾಲುಗಳು ವಿದ್ಯಾರ್ಥಿಗಳ ವಿವೇಚನೆಯನ್ನು ವಿಸ್ತರಿಸುತ್ತಿರುತ್ತವೆ. ವಿವಿಧತೆಯಲ್ಲಿ ಏಕತೆ ಸಾಧಿಸಿರುವ ಈ ದೇಶದ ವೈಶಿಷ್ಟ್ಯತೆಯನ್ನು ಮನದಟ್ಟು ಮಾಡಿಕೊಡುತ್ತವೆ. ಅಷ್ಟೇ ಅಲ್ಲ, ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಈ ನೆಲವನ್ನು ನೋಡುವ ಸೌಜನ್ಯವನ್ನು ನಮ್ಮದಾಗಿಸಿಕೊಳ್ಳುವ ಒತ್ತಾಸೆ ಮೂಡಿಸುತ್ತವೆ. ಜೈ ಹಿಂದ್ ಎನ್ನುವ ಪ್ರತಿಕ್ರಿಯೆಯು ಕ್ಷಣಾರ್ಧದಲ್ಲಿ ಭಾರತದ ಪರವಾದ ಜಯಕಾರ ಹೇಳುವ ಮಹತ್ವದ ಸಂದರ್ಭವನ್ನು ಸೃಷ್ಟಿಸಬಹುದು. ಆದರೆ, ಈ ಜಯಕಾರದ ಸಾಂದಭಿರ್ಕತೆಯು ನಕಾರಾತ್ಮಕ ದೃಷ್ಟಿಕೋನಗಳಿಗೆ ಪ್ರಚೋದನೆಯನ್ನು ನೀಡಿ ಭಾರತವೇ ಗ್ರೇಟ್ ಎಂಬ ಶ್ರೇಷ್ಠತೆಯ ವ್ಯಸನದ ಸಂಕುಚಿತತೆಯನ್ನು ಬಿತ್ತಿಬಿಡಬಹುದು. ಉಳಿದೆಲ್ಲ ದೇಶಗಳ ವಿಶೇಷತೆಯನ್ನು ಅಲ್ಲಗಳೆಯುವ ವಿತಂಡವಾದಿ ಸ್ವಭಾವವನ್ನು ನೆಲೆಗೊಳಿಸಿಬಿಡಬಹುದು. ತರಗತಿ ಇಂಥ ಸಂಕುಚಿತತೆಯ ಮೂಲನೆಲೆಯಾಗಬಾರದು ಎಂಬ ವಿವೇಕ ರಾಜಕೀಯ ಪಕ್ಷಗಳು ಮತ್ತು ಅಧಿಕಾರ ಕೇಂದ್ರಗಳನ್ನು ಪ್ರತಿನಿಧಿಸುವವರೊಳಗಿರಬೇಕು. ಈ ವಿವೇಕ ಇಲ್ಲದಿರುವುದರಿಂದಲೇ ಅಧಿಕಾರರೂಢ ಪಕ್ಷಗಳು ಶಿಕ್ಷಣ ವಲಯವನ್ನು ತಮ್ಮ ರಾಜಕೀಯ ಲಾಭದ ಕಾರ್ಯತಂತ್ರದ ಭಾಗವಾಗಿ ನೋಡುತ್ತವೆ. ವಿರೋಧ ಪಕ್ಷಗಳೂ ಅದನ್ನು ರಾಜಕೀಯ ವಿವಾದ ಉಂಟುಮಾಡುವುದಕ್ಕಷ್ಟೇ ಬಳಸಿಕೊಂಡುಬಿಡುತ್ತವೆ. ತಾತ್ವಿಕ ಚರ್ಚೆ ಹುಟ್ಟುಹಾಕಿ ಗಮನಾರ್ಹ ಶೈಕ್ಷಣಿಕ ಬದಲಾವಣೆಯ ಚಿಂತನೆಯನ್ನು ಕೊಡುಗೆಯನ್ನಾಗಿ ನೀಡುವುದಿಲ್ಲ.

ಚುನಾವಣೆ ಸನ್ನಿಹಿತವಾಗುತ್ತಿರುವಾಗ ಜನಪ್ರಿಯವೆನ್ನಿಸುವ ಭಾವುಕ ಸಂಗತಿಗಳನ್ನು ಶಿಕ್ಷಣ ಕ್ಷೇತ್ರಕ್ಕೆ ತಳುಕುಹಾಕಿ ತೀರ್ಮಾನಗಳನ್ನು ಘೋಷಿಸುವ ಅವಸರದ ಪ್ರವೃತ್ತಿಯ ಬದಲು ಪ್ರಾಥಮಿಕ ಹಂತದಿಂದ ಹಿಡಿದು ಸ್ನಾತಕೋತ್ತರ ಹಂತದವರೆಗಿನ ಶೈಕ್ಷಣಿಕ ಕಲಿಕೆ ಮತ್ತು ತರಗತಿಗಳ ಸ್ವರೂಪವನ್ನು ಬದಲಾಯಿಸುವುದರ ಬಗ್ಗೆ ರಚನಾತ್ಮಕ ಚಿಂತನೆ ಹೊಳೆಸಿಕೊಳ್ಳಬೇಕಿದೆ. ಶಾಸಕಾಂಗ ಮತ್ತು ಕಾರ್ಯಾಂಗ ದೂರದರ್ಶಿತ್ವದ ಶ್ರದ್ಧೆಯೊಂದಿಗೆ ಇಂಥ ಕಾರ್ಯವನ್ನು ನಿರ್ವಹಿಸಬೇಕಿದೆ. ಹಳ್ಳಿಗಳಲ್ಲಿ ಶಾಲೆಗಳಿಲ್ಲ. ಶಾಲೆಗಳಿದ್ದರೂ ಶಿಕ್ಷಕರಿಲ್ಲ. ಶಿಕ್ಷಕರಿದ್ದರೂ ಅವರಿಗೆ ಉನ್ನತಾಧಿಕಾರಿ ವಲಯದಿಂದ ಹರಿದುಬರುವ ಆದೇಶಗಳ ಒತ್ತಡದ ಉಸಿರುಗಟ್ಟುವ ಪರಿಸ್ಥಿತಿ. ಮೂಲಭೂತ ಸೌಕರ್ಯಗಳಿಲ್ಲದ ಸ್ಥಿತಿಯಲ್ಲಿ ತರಗತಿಯನ್ನು ನಿರ್ವಹಿಸುವ ಅನಿವಾರ್ಯತೆ. ಹಳ್ಳಿ ರಾಜಕಾರಣದ ವಿಚಿತ್ರ ಸಿಕ್ಕುಗಳಲ್ಲಿ ಬಂಧಿಯಾಗುತ್ತಲೇ, ಮಾನಸಿಕವಾಗಿ ನರಳುತ್ತಲೇ ಪಾಠ ಮಾಡಬೇಕಾದ ಸಂದಿಗ್ಧತೆ. ಹೆಚ್ಚು ಸಂಖ್ಯೆಯಲ್ಲಿ ಮಕ್ಕಳಿರುವ ತರಗತಿಯನ್ನು ನಿಭಾಯಿಸುವ ಸವಾಲು. ಆಡಳಿತಾತ್ಮಕ ಕಿರಿಕಿರಿಗಳ ಭಾರದಲ್ಲಿ ಶಿಕ್ಷಕರ ಬೌದ್ಧಿಕ ಶಕ್ತಿ ನಲುಗುತ್ತಿದೆ. ಖಾಸಗಿ ಶಾಲೆ-ಕಾಲೇಜುಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸರ್ಕಾರಿ ಶಾಲೆಗಳಲ್ಲಿ ಕಲಿಯಲು ಬರುವ ಮಕ್ಕಳ ಶಿಕ್ಷಣದ ಸಾಧ್ಯತೆಗಳಿಗೆ ವ್ಯಾಪಕ ಆದ್ಯತೆ ಸಿಗುತ್ತಲೇ ಇಲ್ಲ. ಮೌಲಿಕ ಕಲಿಕೆ, ವೃತ್ತಿಪರ ಅವಕಾಶಗಳು ಮತ್ತು ಅಭಿವೃದ್ಧಿ – ಈ ಮೂರೂ ಅಂಶಗಳನ್ನು ಆಧರಿಸಿದ ಸಮಗ್ರ ನೀತಿಯನ್ನು ರೂಪಿಸಿ ವ್ಯವಸ್ಥಿತ ಅನುಷ್ಠಾನ ಸಾಧ್ಯವಾಗಿಸಬೇಕು. ಹಾಗಾದಾಗ ಮಾತ್ರ ಶಿಕ್ಷಣ, ಶಿಕ್ಷಕರು, ತರಗತಿ ಮತ್ತು ವಿದ್ಯಾರ್ಥಿಗಳು ಚುನಾವಣಾ ಅಖಾಡದ ಕಾರ್ಯತಂತ್ರಗಳಿಗೆ ಬಲಿಯಾಗುವುದಿಲ್ಲ. ಪ್ರತಿ ಚುನಾವಣೆಯೂ ಶಿಕ್ಷಣ ರಂಗದ ಸಬಲೀಕರಣದ ಚಿಂತನೆಗಳಿಗೆ ವೇದಿಕೆಯನ್ನು ಒದಗಿಸಬೇಕು. ಚಿಂತನೆಯ ಮಾದರಿ ಲಭ್ಯವಾಗುತ್ತಿರಬೇಕು. ಅದಕ್ಕನುಗುಣವಾಗಿ ತರಗತಿಗಳು ಪ್ರಬುದ್ಧ ನೆಲೆಗಳಾಗಿ ಪರಿವರ್ತಿತವಾಗಬೇಕು. ಇಡೀ ಶಿಕ್ಷಣ ವಲಯವು ದೇಶದ ಉಜ್ವಲ ಭವಿಷ್ಯಕ್ಕೆ ನೆರವಾಗುವ ಅಮೂಲ್ಯ ಸಂಪನ್ಮೂಲವಾಗಬೇಕು.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ ಕೇಶವಮೂರ್ತಿ ಬಡಾವಣೆ ಹಾಗೂ ನಾಗನೂರು ಗ್ರಾಮಗಳ ಕೂಡು ರಸ್ತೆಗಳ ಅಂದಾಜು 500 ಲಕ್ಷ ಮೊತ್ತದ ಕಳಪೆ ಕಾಮಗಾರಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ಕರ್ತವ್ಯ ಲೋಪ ಎಸಗಿದ ಶ್ರೀ ಶಿವಮೂರ್ತಿ, ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ದಾವಣಗೆರೆ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ ಕೇಶವಮೂರ್ತಿ ಬಡಾವಣೆ ಹಾಗೂ ನಾಗನೂರು ಗ್ರಾಮಗಳ ಕೂಡು ರಸ್ತೆಗಳ ಕಾಮಗಾರಿಯನ್ನು ಅಂದಾಜು 500 ಲಕ್ಷ ಮೊತ್ತದಲ್ಲಿ ಕೈಗೊಳ್ಳಲಾಗಿದ್ದು, ಸದರಿ ಕಾಮಗಾರಿ ನಡೆದು ಒಂದು ವರ್ಷದ ಒಳಗಾಗಿ ರಸ್ತೆಯು ಹಾಳಾಗಿರುತ್ತದೆ. ಹೀಗಾಗಿ ಸದರಿ ಕಾಮಗಾರಿಗೆ ಸಂಬAಧಿಸಿದ ದಾಖಲೆಗಳನ್ನು ಮಾಹಿತಿಹಕ್ಕು ಅಡಿಯಲ್ಲಿ ಪಡೆದು ಪರಿಶೀಲನೆ ಮಾಡಿದಾಗ, ಅಂತಿಮ ಬಿಲ್ಲನ್ನು ಮಂಜೂರು ಮಾಡುವ ಪೂರ್ವದಲ್ಲಿಯೇ ಸದರಿ ಕಾಮಗಾರಿಯು ಹದಗೆಟ್ಟಿರುವ ಮಾಹಿತಿ ಪಡೆದು, ಮಾಹಿತಿಹಕ್ಕು ಅಡಿಯಲ್ಲಿ ಸಂಬಂಧಿಸಿದ ಕಡತಗಳನ್ನು ಪಡೆದು ಪರಿಶೀಲನೆ ಮಾಡಿದಾಗ ಕಳಪೆ ಕಾಮಗಾರಿ ನಡೆದಿರುವುದು ಕಂಡು ಬಂದ ಕಾರಣ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ದಾವಣಗೆರೆ ಇವರು ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ದಾವಣಗೆರೆ ಇವರಿಗೆ ನಮ್ಮ ದೂರು ಅರ್ಜಿಯನ್ನು ವರ್ಗಾಹಿಸಿ, ‘ಸದರಿ ವಿಷಯದ ಕುರಿತು ಸ್ಥಳ ಪರಿಶೀಲನೆ ನಡೆಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಮನವಿದಾರರಿಗೆ ಹಿಂಬರಹ ನೀಡುವಂತೆ’ ತಿಳಿಸಿರುತ್ತಾರೆ. ಆದರೆ 3 ತಿಂಗಳು ಕಳೆದರೂ ಕಾರ್ಯಪಾಲಕ ಅಭಿಯಂತರರಾದ ಶ್ರೀ ಶಿವಮೂರ್ತಿ ಇವರು ಯಾವುದೇ ತನಿಖೆ ನಡೆಸದೆ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ‍್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿದ್ದು ನಿಗಧಿತ ಅವಧಿಯಲ್ಲಿ ಹಕ್ಕು, ಆಕ್ಷೇಣೆಗಳಿದ್ದಲ್ಲಿ ಸಲ್ಲಿಸಲು ರ‍್ಕಾರದ ಕರ‍್ಯರ‍್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಡಾ; ಶಮ್ಲಾ ಇಕ್ಬಾಲ್ ತಿಳಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು. ಜನವರಿ 3 ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ, ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಆಕ್ಷೇಪಣೆ ಮತ್ತು ಹಕ್ಕುಗಳನ್ನು ಸಲ್ಲಿಸಲು ಜನವರಿ 24 ರವರೆಗೆ ಅವಕಾಶವಿದೆ. ಜನವರಿ 11 ರಂದು ನಡೆದ ವಿಶೇಷ ಅಭಿಯಾನದಲ್ಲಿ 85 ರ‍್ಜಿಗಳು ಸ್ವೀಕೃತವಾಗಿದ್ದು, ಮುಂದಿನ ಅಭಿಯಾನವು ಜನವರಿ 18 ರಂದು ನಡೆಯಲಿದೆ. ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ಮತಗಟ್ಟೆಗಳ ಪುನರ್ ವಿಂಗಡಣೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಹಿಂದೆ 217 ಮತಗಟ್ಟೆಗಳಿದ್ದವು. ನಿಯಮದಂತೆ 1200 ಕ್ಕಿಂತ ಹೆಚ್ಚು ಮತದಾರರಿರುವ ಕಡೆ ಹೊಸ ಮತಗಟ್ಟೆಗಳನ್ನು ಸೃಜಿಸಿ, ಪ್ರಸ್ತುತ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 24 ಮತಗಟ್ಟೆಗಳ ಸ್ಥಳ ಬದಲಾವಣೆ ಮಾಡಲಾಗಿದ್ದು, ಮೂಲಭೂತ ಸೌರ‍್ಯಗಳಾದ ರ‍್ಯಾಂಪ್ ಮುಂತಾದವುಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದರು.

ರಾಜಕೀಯ ಪಕ್ಷಗಳಿಗೆ ಎರಡು ಪ್ರಮುಖ ಮನವಿಗಳನ್ನು ಮಾಡಿ ಬಿಎಲ್ಎ ಪ್ರತಿಯೊಂದು ಮತಗಟ್ಟೆ ಮಟ್ಟದಲ್ಲಿ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್ಗಳನ್ನು ನೇಮಕ ಮಾಡಿ ಪಟ್ಟಿಯನ್ನು ನೀಡಬೇಕು. ಇದರಿಂದ ಮೃತ ಮತದಾರರ ಹೆಸರು ಕೈಬಿಡುವುದು ಮತ್ತು ವಿಳಾಸ ಬದಲಾವಣೆ ಕರ‍್ಯ ಸುಲಭವಾಗುತ್ತದೆ. ಹೆಸರು ಸರ‍್ಪಡೆಗೆ ಯುವ ಮತದಾರರು ಹಾಗೂ ಕೈಬಿಟ್ಟು ಹೋದ ರ‍್ಹ ಮತದಾರರ ಹೆಸರನ್ನು ಸೇರಿಸಲು ಸಹಕರಿಸಬೇಕು ಎಂದರು.

ಕ್ಷೇತ್ರದ ಮತದಾರರ ವಿವರ

ಕರಡು ಪಟ್ಟಿಯಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2,31,158 ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರು 1,13,555 ಹಾಗೂ ಮಹಿಳಾ ಮತದಾರರು 1,17,603 ಇದ್ದು, ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಲಿಂಗ ಅನುಪಾತ

ಕ್ಷೇತ್ರದ ಮತದಾರರ ಪಟ್ಟಿಯಲ್ಲಿನ ಲಿಂಗ ಅನುಪಾತವು 1036 ಆಗಿದ್ದು, ಇದು ಜಿಲ್ಲೆಯ ಜನಗಣತಿ ಅನುಪಾತಕ್ಕಿಂತ 972 ಮತ್ತು ರಾಜ್ಯದ ಸರಾಸರಿಗಿಂತಲೂ ಹೆಚ್ಚಿದೆ. ಮತದಾರರ ಜನಸಂಖ್ಯೆ ಅನುಪಾತ ಶೇ. 83.62 ರಷ್ಟಿದೆ. ಯುವ ಮತದಾರರಾದ 18-19 ವಯೋಮಾನದವರು ಕ್ಷೇತ್ರದಲ್ಲಿ ಒಟ್ಟು 1,692 ಮತದಾರರಿದ್ದು ಇದರಲ್ಲಿ 905 ಪುರುಷ, 787 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ವಿಕಲಚೇತನ ಮತದಾರರು ಒಟ್ಟು 2,544 ಮತದಾರರಿದ್ದು, ಇದರಲ್ಲಿ 1,397 ಪುರುಷರು ಮತ್ತು 1,147 ಮಹಿಳೆಯರಿದ್ದಾರೆ.

ವಿವಿಧ ವಯೋಮಾನದ ಮತದಾರರ ಅಂಕಿ-ಅಂಶಗಳು

ಯುವ ಮತದಾರರು, 18-19 ರ‍್ಷ ವಯೋಮಾನದ ಒಟ್ಟು 1,692 ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 905 ಪುರುಷರು ಮತ್ತು 787 ಮಹಿಳಾ ಮತದಾರರಿದ್ದಾರೆ.

20-29 ರ‍್ಷ: ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರಿರುವ ವಿಭಾಗಗಳಲ್ಲಿ ಇದೂ ಒಂದು. ಒಟ್ಟು 43,616 ಮತದಾರರಿದ್ದು, ಇದರಲ್ಲಿ 21,601 ಪುರುಷರು, 22,002 ಮಹಿಳೆಯರು ಮತ್ತು 13 ತೃತೀಯ ಲಿಂಗಿ ಮತದಾರರಿದ್ದಾರೆ.
30-39 ರ‍್ಷ: ಈ ವಯೋಮಾನದಲ್ಲಿ ಒಟ್ಟು 55,814 ಮತದಾರರಿದ್ದಾರೆ. ಇದರಲ್ಲಿ 26,450 ಪುರುಷರು, 29,349 ಮಹಿಳೆಯರು ಮತ್ತು 15 ತೃತೀಯ ಲಿಂಗಿ ಮತದಾರರಿದ್ದಾರೆ.
ಮಧ್ಯವಯಸ್ಕರು: 40-49 ರ‍್ಷ: ಒಟ್ಟು 55,400 ಮತದಾರರಿದ್ದು, ಇದರಲ್ಲಿ 27,507 ಪುರುಷರು, 27,885 ಮಹಿಳೆಯರು ಮತ್ತು 8 ತೃತೀಯ ಲಿಂಗಿಗಳು ಸೇರಿದ್ದಾರೆ.
50-59 ರ‍್ಷ: ಈ ವಿಭಾಗದಲ್ಲಿ ಒಟ್ಟು 37,167 ಮತದಾರರಿದ್ದಾರೆ 18,917 ಪುರುಷರು, 18,245 ಮಹಿಳೆಯರು ಮತ್ತು 5 ತೃತೀಯ ಲಿಂಗಿಗಳು.

ಹಿರಿಯ ನಾಗರಿಕರು

60-69 ರ‍್ಷ: ಒಟ್ಟು 21,314 ಮತದಾರರಿದ್ದಾರೆ 10,484 ಪುರುಷರು, 10,826 ಮಹಿಳೆಯರು ಮತ್ತು 4 ತೃತೀಯ ಲಿಂಗಿಗಳು. 70-79 ರ‍್ಷ: ಈ ವಯೋಮಾನದ ಒಟ್ಟು 10,870 ಮತದಾರರಿದ್ದಾರೆ. ಇದರಲ್ಲಿ 5,310 ಪುರುಷರು ಮತ್ತು 5,560 ಮಹಿಳಾ ಮತದಾರರಿದ್ದಾರೆ.

80 ರ‍್ಷ ಮೇಲ್ಪಟ್ಟವರು

ಕ್ಷೇತ್ರದಲ್ಲಿ ಒಟ್ಟು 4,734 ಹಿರಿಯ ಮತದಾರರಿದ್ದಾರೆ 2,149 ಪುರುಷರು ಮತ್ತು 2,585 ಮಹಿಳೆಯರು ಇದ್ದಾರೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನರ‍್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ

Published

on

ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು ಶಾಲೆಗಳ ಅಭಿವೃದ್ಧಿ ಆಗಬೇಕು. ನಮ್ಮ ಹೊಲದ ರಸ್ತೆಗಳು ಅಭಿವೃದ್ಧಿ ಆಗಬೇಕು. ಜಲಮೂಲಗಳ ಶುದ್ದೀಕರಣ, ಹೂಳೆತ್ತಿ ಅಂತರ್ಜಲ ಹೆಚ್ಚಳದ ಮೂಲಕ ಸ್ವಾವಲಂಬಿ ಹಳ್ಳಿಯ ರೂಪುರೇಷ ಹಾಕಿಕೊಂಡು ಪಂಚಾಯತ್‍ನಲ್ಲಿ ತೀರ್ಮಾನ ಮಾಡಿಕೊಂಡರೆ ಜನರು ಉದ್ಯೋಗ ಖಾತರಿಯಲ್ಲಿ ಹಳ್ಳಿಯನ್ನು ಕಟ್ಟುವ ಕೆಲಸ ಮಾಡುತ್ತಾರೆ ಎಂದು ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ (Dr.Prabha Malikarjun) ತಿಳಿಸಿದರು.

ಅವರು ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಹೊನ್ನೂರು ಗ್ರಾಮದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ ಮನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣಾ ಶಿಬಿರ ಮತ್ತು ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ ಕಾರ್ಯಕ್ರಮ ಉದ್ಘಾಟಿಸಿ ಅವರು (Dr.Prabha Malikarjun) ಮಾತನಾಡಿದರು.

ಉದ್ಯೋಗ ಖಾತರಿ ಯೋಜನೆ ಅನುಷ್ಟಾನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಉತ್ತಮ ಕೆಲಸ ಮಾಡಿ ಜನರಿಗೆ ಉದ್ಯೋಗ ನೀಡಿದ್ದಾರೆ. ಈ ನಿಟ್ಟಿನಲ್ಲಿ ಹೊನ್ನೂರು ಗ್ರಾಪಂನಲ್ಲಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದರಿಂದ ಇಲ್ಲಿನ ಗ್ರಾಪಂ ಉದ್ಯೋಗ ಖಾತರಿಯಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ ಎಂದು ಅವರು (Dr.Prabha Malikarjun) ಶ್ಲಾಘಿಸಿದರು.

ಮನರೇಗಾದಿಂದ ದೇಶದಲ್ಲಿ 5 ರಿಂದ 6 ಕೋಟಿ ಜನ ಕೂಲಿಕಾರ್ಮಿಕರು ಆರ್ಥಿಕವಾಗಿ ಸಬಲರಾಗಿದ್ದಾರೆ. 2005 ರಿಂದ 2026 ರವರೆಗೆ ಸುಮಾರು 20 ವರ್ಷಗಳಿಂದ ಗ್ರಾಮಗಳ ಅಭಿವೃದ್ಧಿಗೆ ಮನರೇಗಾ ಯೋಜನೆ ಕಾರಣವಾಗಿತ್ತು. ಈಗ ಇದನ್ನು ಕೇಂದ್ರ ಸರ್ಕಾರ ಬದಲಾಯಿಸಿ ವಿಕಸಿತ ಭಾರತ-ಗ್ಯಾರಂಟೀ ಫಾರ್ ರೋಜಗಾರ್ ಮತ್ತು ಆವೀಜಿಕ ಮಿಷನ್ ವಿಬಿ-ಜಿ.ರಾಮ್ ಜಿ ಕಾಯ್ದೆ-2005 ಎಂದು ಬದಲಿಸಿದ್ದು ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಗೆ ಪೆಟ್ಟು ನೀಡಲು ಮುಂದಾಗಿದೆ. ಮಹಿಳಾ ಮತ್ತು ಪುರುಷರಿಗೆ ಸಮಾನವಾದ ಕೆಲಸ ಕೊಡುವ ಯೋಜನೆವೊಂದಿದ್ದರೆ ಅದು, ‘ಮನರೇಗಾ’ ಯೋಜನೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾಪುರುಷನ ಹೆಸರಿಟ್ಟ ‘ಮನರೇಗಾ’ಯೋಜನೆಯ ಹೆಸರನ್ನೇ ಅಳಿಸುವ ಕೆಲಸ ಮಾಡಿದೆ ಎಂದು ಸಂಸದರು (Dr.Prabha Malikarjun) ಅಸಮಧಾನ ವ್ಯಕ್ತಪಡಿಸಿದರು.


ಶಾಸಕರಾದ ಕೆ.ಎಸ್.ಬಸವಂತಪ್ಪ ಅವರು ಹಳ್ಳಿ ಜನರ ದನಿಯಾಗಿ, ಅವರ ಕಷ್ಟ-ಸುಖಗಳನ್ನು ಅಂಚಿಕೊಂಡಿದ್ದಾರೆ. ಅವರು ಬಡವರ ಕಷ್ಟ-ಸುಖಗಳನ್ನು ಚೆನ್ನಾಗಿ ಅರಿತುಕೊಂಡಿದ್ದಾರೆ. ಅವರ ಜೊತೆಯಲ್ಲಿ ಮಾಯಕೊಂಡ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾದಾಗ ಅವರಿಂದ ಸಾಕಷ್ಟು ಕಲಿಯುವ ಅವಕಾಶ ಸಿಕ್ಕಿದೆ. ಸ್ವಯಂ ಉದ್ಯೋಗದಲ್ಲಿ ನೀವು ಹೇಗೆ ಆರ್ಥಿಕವಾಗಿ ಸಬಲರಾಗಬಹುದು ಎಂಬ ಬಗ್ಗೆ ತಿಳಿಸಿದ್ದಾರೆ ಎಂದು (Dr.Prabha Malikarjun) ಮೆಚ್ಚುಗೆ ವ್ಯಕ್ತಪಡಿಸಿದರು.


ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ, ದೇಶದಲ್ಲಿ ದುಡಿಯುವ ವರ್ಗಕ್ಕೆ ಕೆಲಸ ಕೊಡಬೇಕೆಂಬ ಉದ್ದೇಶದಿಂದ 2005ರಲ್ಲಿ ಯುಪಿಎ ಸರ್ಕಾರ ನೇತೃತ್ವ ವಹಿಸಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ‘ಮನರೇಗಾ’ ಯೋಜನೆ ಜಾರಿಗೊಳಿಸುವ ಮೂಲಕ ದುಡಿಯುವ ವರ್ಗಕ್ಕೆ ಕೆಲಸ ಕೊಟ್ಟು ಆರ್ಥಿಕವಾಗಿ ಸಬಲರನ್ನಾಗಿ ಮಾಡಿತು. ಅಂದಿನಿಂದ ಈವರೆಗೆ ದೇಶದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಮನರೇಗಾ’ ಯೋಜನೆ ಜಾರಿಗೊಳ್ಳುವ ಪೂರ್ವದಲ್ಲಿ ಇಲ್ಲಿನ ಹಳ್ಳಿಯ ಜನರು ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯ ಹಾಗೂ ರಾಜ್ಯದ ಕಾಫಿನಾಡು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದರು. ಯಾವಾಗ ಹಿಂದಿನ ಯುಪಿಎ ಸರ್ಕಾರ ‘ಮನರೇಗಾ’ ಯೋಜನೆ ಜಾರಿಗೊಳಿಸಿತು. ಅಂದಿನಿಂದ ಈವರೆಗೂ ಹಳ್ಳಿಯ ಜನರು ಬದುಕು ಕಂಡುಕೊಂಡು ಆರ್ಥಿಕವಾಗಿ ಸಬಲರಾದರು. ಆದರೆ ಈಗ ಕೇಂದ್ರ ಸರ್ಕಾರ ‘ಮನರೇಗಾ’ ಹೆಸರು ಬದಲಾಯಿಸುತ್ತಿದೆ ಎಂದು (Dr.Prabha Malikarjun) ಅಸಮಧಾನ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲ್ ರಾವ್, ತಾಪಂ ಇಓ ರಾಮಭೋವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading
Advertisement

Title

ದಿನದ ಸುದ್ದಿ4 days ago

ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ...

ದಿನದ ಸುದ್ದಿ6 days ago

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ‍್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ...

ದಿನದ ಸುದ್ದಿ1 week ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ...

ದಿನದ ಸುದ್ದಿ1 week ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ...

ದಿನದ ಸುದ್ದಿ2 weeks ago

ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿಂದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ...

ದಿನದ ಸುದ್ದಿ2 weeks ago

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸುವ ಕೆಎಎಸ್...

ದಿನದ ಸುದ್ದಿ2 weeks ago

ಪ್ರೊ.ಪೂರ್ಣಾನಂದ, ಎ.ನಾರಾಯಣ, ಸತೀಶ್ ಆಚಾರ್ಯ ಸೇರಿದಂತೆ ಹಲವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಸುದ್ದಿದಿನಡೆಸ್ಕ್:ಪ್ರತಿ ವರ್ಷ ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ಪ್ರಶಸ್ತಿಗಳಿಗೆ ಪ್ರಾಧ್ಯಾಪಕ ಪೂರ್ಣಾನಂದ, ವ್ಯಂಗ್ಯಚಿತ್ರಕಾರ ಸತೀಶ್‌ ಆಚಾರ್ಯ, ಪತ್ರಕರ್ತ ಸೋಮಶೇಖರ್ ಪಡುಕೆರೆ ಹಾಗೂ ಚಿಂತಕ, ಬರಹಗಾರ ಎ ನಾರಾಯಣ್...

ದಿನದ ಸುದ್ದಿ2 weeks ago

ಇದೇ 11 ರಂದು ಜಿಎಂ ವಿಶ್ವವಿದ್ಯಾಲಯದಲ್ಲಿ ಪ್ರಥಮ ಘಟಿಕೋತ್ಸವ : ಕುಲಪತಿ ಡಾ. ಎಸ್.ಆರ್. ಶಂಕಪಾಲ್

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾಲಯವು ಪ್ರಥಮ ಘಟಿಕೋತ್ಸವವನ್ನು ಆಯೋಜಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಖಲಿಸಲಿದೆ. ಈ ಘಟಿಕೋತ್ಸವವು ವಿಶ್ವವಿದ್ಯಾಲಯದ ಮೊದಲ ಪದವಿ ಬ್ಯಾಚ್‌ನ ಯಶಸ್ವಿ ಶೈಕ್ಷಣಿಕ ಪಯಣವನ್ನು ಸಂಭ್ರಮದಿಂದ...

ದಿನದ ಸುದ್ದಿ2 weeks ago

ಮೌಲ್ಯ ಕಳೆದು ಕೊಳ್ತಿದ್ಯ ದಾವಣಗೆರೆ ವಿಶ್ವವಿದ್ಯಾಲಯ? ರಿಪೀಟರ್ಸ್ ಗೋಳು ಕೇಳೋರಿಲ್ಲ..

~ಹನುಮಂತ ನಾಯ್ಕ್ .ಡಿ ಎಲ್. ಎಲ್. ಬಿ, ಆರ್. ಎಲ್. ಕಾನೂನು ಕಾಲೇಜು ದಾವಣಗೆರೆ ದಾವಣಗೆರೆ ವಿಶ್ವವಿದ್ಯಾಲಯವು ಈ ಹಿಂದೆ ಮೌಲ್ಯಮಾಪನ ಮುಗಿದು 24 ಗಂಟೆಗಳ ಒಳಗೆ...

ದಿನದ ಸುದ್ದಿ2 weeks ago

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ

ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು...

Trending