Connect with us

ರಾಜಕೀಯ

ಜೈ ಹಿಂದ್, ಜೈ ಕರ್ನಾಟಕ

Published

on

ಪ್ರಾಥಮಿಕ ಶಾಲಾ ದಿನಗಳು ನೆನಪಾಗುತ್ತಿವೆ. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಮತ್ತು ರಾಜ್ಯೋತ್ಸವ ದಿನಗಳಂದು ನಮ್ಮೊಳಗೆ ಎಲ್ಲಿಲ್ಲದ ಹುಮ್ಮಸ್ಸು ರೂಪುಗೊಳ್ಳುತ್ತಿತ್ತು. ಭಾಷಣ, ಗಾಯನ ಹೀಗೆ ವಿವಿಧ ಸ್ಪರ್ಧೆಗಳು ನಡೆಯುತ್ತಿದ್ದವು. ಮುಖ್ಯವಾಗಿ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಬಹುಮಾನ ಗೆಲ್ಲುವ ತವಕವಿರುತ್ತಿತ್ತು. ಆ ದಿನಗಳಲ್ಲಿ ಅಪ್ಪ ಬರೆದುಕೊಡುತ್ತಿದ್ದ ಎರಡು ಪುಟಗಳ ಭಾಷಣವನ್ನು ಓದಿಕೊಳ್ಳಬೇಕಾಗುತ್ತಿತ್ತು. ಅವರು ಅದರೊಳಗಿನ ತಿರುಳನ್ನು ಹೇಳಿಕೊಡುತ್ತಿದ್ದರು. ಅದನ್ನಷ್ಟೇ ತಿಳಿದುಕೊಂಡು ಭಾಷಣದ ವೇಳೆ ಆ ಕ್ಷಣಕ್ಕೆ ವ್ಯಕ್ತಪಡಿಸಬೇಕು ಎಂದು ಸಲಹೆ ನೀಡುತ್ತಿದ್ದರು. ಆದರೆ, ನಾವು ಆ ಪ್ರತಿಯೊಳಗಿನ ಪ್ರತಿ ವಾಕ್ಯ, ಪದಗಳನ್ನು ಉರುಹೊಡೆದು ನೆನಪಿನಲ್ಲಿರಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದೆವೇ ಹೊರತು ಅವರು ಹೇಳಿದ ಹಾಗೆ ಇಡೀ ಪ್ರತಿಯಲ್ಲಿನ ಮಹತ್ವದ ಅಂಶಗಳನ್ನು ಮನನ ಮಾಡಿಕೊಳ್ಳುತ್ತಿರಲಿಲ್ಲ. ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸುವ ಉತ್ಸಾಹ, ನಾನೇ ಮೊದಲ ಬಹುಮಾನ ಗೆಲ್ಲಬೇಕು ಎಂಬ ಆಸೆಯೇನೋ ಇರುತ್ತಿತ್ತು. ಆ ಕ್ಷಣಕ್ಕೆ ಉರುಹೊಡೆದ ಪದ, ವಾಕ್ಯಗಳು ನೆನಪಾಗದಿದ್ದರೆ ಎಂಬ ಭಯವೂ ಇತ್ತು. ಇದರ ಮಧ್ಯೆಯೂ ಖುಷಿ ನೀಡುತ್ತಿದ್ದ ಸಂಗತಿ ಎಂದರೆ ಭಾಷಣವು ಕೊನೆಗೊಳ್ಳುವ ಸಂದರ್ಭದಲ್ಲಿ ನಾವು ದೊಡ್ಡ ಧ್ವನಿಯಲ್ಲಿ ಹೇಳುತ್ತಿದ್ದ ‘ಜೈ ಹಿಂದ್, ಜೈ ಕರ್ನಾಟಕ’ ಉದ್ಘೋಷ. ಕೊನೆಗೂ ಭಾಷಣ ಮುಗಿಯಿತು ಎಂಬ ನಿರಾಳ ಭಾವವೂ ಸೇರಿ ಆ ಧ್ವನಿಗೆ ಶಕ್ತಿ ಬರುತ್ತಿತ್ತು.

ಮೊದಲ ಪುಟದಲ್ಲಿ ಉಲ್ಲೇಖಿಸಲ್ಪಟ್ಟ ವಾಕ್ಯ, ಪದಗಳು ಸುಲಭವಾಗಿ ನೆನಪಾಗುತ್ತಿದ್ದವು. ಆದರ್ಶ ವ್ಯಕ್ತಿತ್ವಗಳ ಹೆಸರುಗಳನ್ನು ಕ್ರಮಾನುಗತವಾಗಿ ಪ್ರಸ್ತುತಪಡಿಸುತ್ತಿದ್ದೆವು. ಆದರೆ, ತದನಂತರದ ಪುಟದ ವಾಕ್ಯಗಳನ್ನು ಹೇಳುವಾಗ ದ್ವಂದ್ವವಾಗುತ್ತಿತ್ತು. ಭಾಷಣ ಪ್ರತಿಯ ವಿಚಾರಗಳನ್ನು ಸಂಪೂರ್ಣವಾಗಿ ಗೊತ್ತುಮಾಡಿಕೊಳ್ಳದೇ ಕೇವಲ ಉರುಹೊಡೆದ ಕಾರಣಕ್ಕೇ ಈ ಸಮಸ್ಯೆ ಎಂಬುದು ಆಮೇಲೆ ಮನದಟ್ಟಾಯಿತು. ಹಾಗೆ ಮನದಟ್ಟಾದರೂ ಉರುಹೊಡೆದು ಓದಿಕೊಳ್ಳುವ ರೂಢಿಗತ ಅಭ್ಯಾಸ ಬಹುದಿನಗಳ ಕಾಲ ಮುಂದುವರೆದಿತ್ತು. ತೊದಲು ಮಾತು ಪರಿಪೂರ್ಣತೆಯ ಹಂತ ತಲುಪುವವರೆಗಿನ ಅವಧಿ, ನಮ್ಮೊಳಗೆ ಭಾಷೆಯ ಆಕೃತಿಗಳು ಆವರಿಸಿಕೊಳ್ಳುವ ರೀತಿ, ಆ ಮೂಲಕ ನಮಗೆ ಹರಿದುಬರುವ ಮಾಹಿತಿ, ಜ್ಞಾನ – ಇವೆಲ್ಲವೂ ಪ್ರಾಥಮಿಕ ಶಾಲಾ ದಿನಗಳಲ್ಲಿ ಕ್ರಮೇಣ ಅರಿವಿಗೆಟುಕಿದ್ದವು. ನಮ್ಮ ಗಮನವೆಲ್ಲವೂ ಶಾಲೆ, ತರಗತಿ, ಟೀಚರ್ಸ್, ಸ್ನೇಹಿತರು, ಆಟ, ರಜೆಗಳು ಆರಂಭವಾಗುವ ತಿಂಗಳು, ಓದುವ ಅವಧಿಯ ನಂತರ ಆಟಕ್ಕೆ ಹೋಗುವ ಕುತೂಹಲದ ಕಡೆಗೇ ಕೇಂದ್ರೀಕೃತವಾಗಿರುತ್ತಿತ್ತು. ರಾಜಕೀಯವು ಬಾಲ್ಯದ ಪ್ರಜ್ಞೆಯ ಆವರಣದ ಆಚೆಗೇ ಇರುತ್ತಿತ್ತು.

ಈಗ ಹಾಗಲ್ಲ. ಪ್ರಾಥಮಿಕ ಹಂತದಿಂದಲೇ ಶಿಕ್ಷಣದ ಭಾಷೆ ಯಾವುದಾಗಿರಬೇಕು ಎನ್ನುವುದನ್ನು ವಿವೇಚನಾರಹಿತವಾಗಿ ನಿರ್ಧರಿಸಿಬಿಡುವ ವಿಚಿತ್ರ ರಾಜಕಾರಣವು ಮಕ್ಕಳ ಕಲಿಕೆಯ ಸ್ವಾತಂತ್ರ್ಯದ ಮೇಲೆ ದಾಳಿಗೈಯ್ಯುತ್ತಿದೆ. ತರಗತಿಯೊಳಗೆ ಪಠ್ಯವಾಗಿ ಕಲಿಯಲ್ಪಡುವ ಸಂಗತಿಗಳು ರಾಜಕೀಯ ಬಣ್ಣ ಪಡೆಯುತ್ತಿವೆ. ಮೇಷ್ಟ್ರು ಹಾಜರಾತಿ ದೃಢೀಕರಿಸಿಕೊಳ್ಳಲು ನಮ್ಮ ಹೆಸರು ಕೂಗಿದ ತಕ್ಷಣ ಎಸ್ ಸರ್, ಪ್ರೆಸೆಂಟ್ ಸರ್, ಇದೀನಿ ಸಾರ್ ಎಂದು ಪ್ರತಿಕ್ರಿಯಿಸುವ ಸ್ವಾತಂತ್ರ್ಯವನ್ನು ಅಧಿಕಾರ ರಾಜಕಾರಣ ಕಿತ್ತುಕೊಳ್ಳುವುದರ ಕಡೆಗೆ ಆಸಕ್ತಿ ತೋರುತ್ತಿದೆ. ಯಾರು ಹೇಳಲಿ ಬಿಡಲಿ, ಮೇರಾ ಭಾರತ್ ಮಹಾನ್ ಎಂಬ ಹೆಮ್ಮೆಯ ಭಾವವು ರಾಷ್ಟ್ರೀಯ ಉತ್ಸವಗಳ ಮೂಲಕ ಮಕ್ಕಳಲ್ಲಿ ಮೇಳೈಸಿರುತ್ತದೆ. ನಮ್ಮ ನೆಲ, ಜಲದ ಕುರಿತಾದ ಅಭಿಮಾನವನ್ನು ಅಷ್ಟು ಸುಲಭವಾಗಿ ನಮ್ಮಿಂದ ದೂರಮಾಡಲಾಗದು. ಎಸ್ ಸರ್, ಪ್ರೆಸೆಂಟ್ ಸರ್ ಎನ್ನುವ ಬದಲು ಜೈ ಹಿಂದ್ ಹೇಳಬೇಕು ಎನ್ನುವ ಆಡಳಿತಾತ್ಮಕ ನಿಯಮಾವಳಿ ರೂಪಿಸಿ ಅನುಷ್ಠಾನಕ್ಕೆ ತರುವ ಪ್ರಯತ್ನ ರಾಷ್ಟ್ರದ ಕುರಿತಾದ ಅಭಿಮಾನ ಮತ್ತು ಹೆಮ್ಮೆಯ ಭಾವದ ಸಹಜತೆಯನ್ನು ಒಡೆಯುತ್ತದೆ.

ಶಿಕ್ಷಣವು ವಿದ್ಯಾರ್ಥಿಕೇಂದ್ರಿತವಾಗಿರಬೇಕೇ ಹೊರತು ಅಧಿಕಾರಕೇಂದ್ರಿತ ಅತಾರ್ಕಿಕ ನಿರ್ಧಾರಗಳ ತಿವಿತಕ್ಕೀಡಾಗಬಾರದು. ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ – ಹೀಗೆ ಒಂದೊಂದು ಹಂತದಲ್ಲೂ ವಿದ್ಯಾರ್ಥಿಗಳ ಕಲಿಕೆಯು ಹೊಸ ಆಯಾಮ ಪಡೆದುಕೊಳ್ಳುತ್ತಿರುತ್ತದೆ. ವಿದ್ಯಾರ್ಥಿಗಳಿಗೆ ಒಳಿತು-ಕೆಡಕುಗಳ ವಿವೇಚನೆಯು ಹಂತಹಂತವಾಗಿಯೇ ಜೊತೆಯಾಗುತ್ತಾ ಹೋಗುತ್ತದೆ. ಶಿಕ್ಷಕರು, ಪಠ್ಯ ಮತ್ತು ಹಿರಿಯರ ಸಾಂದರ್ಭಿಕ ಮಾತುಗಳ ನೆರವಿನೊಂದಿಗೆ ಅವರು ವಿವೇಚನೆಯನ್ನು ತಮ್ಮದಾಗಿಸಿಕೊಳ್ಳುತ್ತಿರುತ್ತಾರೆ. ಇಂಥ ವಿವೇಚನೆಯನ್ನು ಗಟ್ಟಿಗೊಳಿಸುವ ಹಾಗೆಯೇ ಶಿಕ್ಷಣವು ಪುನರ್‍ಸ್ವರೂಪವನ್ನು ಪಡೆದುಕೊಳ್ಳುತ್ತಿರಬೇಕು. ಈ ಸಾಧ್ಯತೆಯು ಎಷ್ಟು ಬೇಗ ಅನುಷ್ಠಾನಗೊಳ್ಳುತ್ತದೋ ಅಷ್ಟೇ ತೀವ್ರಗತಿಯಲ್ಲಿ ಶಿಕ್ಷಣ ವಲಯದಲ್ಲಿನ ಸುಧಾರಣೆಯ ಪ್ರಕ್ರಿಯೆ ಚಾಲ್ತಿಗೆ ಬರುತ್ತದೆ. ಈ ವಿಷಯದಲ್ಲಿ ಅಧ್ಯಾಪಕವರ್ಗವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅವರ ಪ್ರತಿಕ್ರಿಯೆಗಳನ್ನು ಆಧರಿಸಿಯೇ ಶಾಸಕಾಂಗ ನಿರ್ಣಯಗಳನ್ನು ತೆಗೆದುಕೊಳ್ಳಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಶಿಕ್ಷಣ ಇಲಾಖೆಯನ್ನು ಪ್ರತಿನಿಧಿಸುವ ಉನ್ನತ ಹಂತದ ಅಧಿಕಾರಿಗಳು ಈ ವಿಷಯದಲ್ಲಿ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು.

ಇಂಥ ಇಚ್ಛಾಶಕ್ತಿಯು ಬೆರಳೆಣಿಕೆಯ ಅಧಿಕಾರಿಗಳಲ್ಲಿ ಮಾತ್ರ ಇದೆ. ಇದಕ್ಕೆ ಸಂಬಂಧಿಸಿದಂತೆ ಅನೇಕ ಅಧಿಕಾರಿಗಳ ನಿರ್ಲಿಪ್ತ ದೃಷ್ಟಿಕೋನವು ಶಾಸಕಾಂಗವನ್ನು ಪ್ರತಿನಿಧಿಸುವ ರಾಜಕಾರಣಿಗಳ ಅತಾರ್ಕಿಕ ನಿರ್ಧಾರ ಮತ್ತು ಲಾಬಿಗಳಿಗೆ ಶಿಕ್ಷಣ ವಲಯವು ಮಣಿಯಬೇಕಾದ ಅನಿವಾರ್ಯತೆ ಸೃಷ್ಟಿಸಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ದೂರಗಾಮಿ ಪರಿಣಾಮಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಅಮೂಲ್ಯ ವಾರ್ಷಿಕ ಯೋಜನೆಗಳನ್ನು ರೂಪಿಸುವ ಬದಲು ಅವರು ಯಥಾಸ್ಥಿತಿಯನ್ನಷ್ಟೇ ಮುಂದುವರೆಸುತ್ತಿದ್ದಾರೆ. ಈ ಬಗೆಯ ತಮ್ಮ ಮಿತಿಯು ಚರ್ಚೆಗೊಳಗಾಗುತ್ತಿದೆ ಎಂಬ ಸುಳಿವು ಸಿಕ್ಕಾಕ್ಷಣವೇ ಜನಪ್ರಿಯ ಧಾಟಿಯ ವಿವಾದಗಳಿಗೆ ಸರಕು ಒದಗಿಸಬಲ್ಲ ವಿವೇಚನಾರಹಿತ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ಲಾಭದ ಹಸಿವಿನಿಂದ ಬಳಲುವ ಸುದ್ದಿಮಾಧ್ಯಮಗಳಿಗೆ ಬಂಡವಾಳ ದುಡಿಯುವ ವಿವಾದದ ಸರಕನ್ನು ಒದಗಿಸುತ್ತಾರೆ. ಪರ ಮತ್ತು ವಿರೋಧಗಳ ಭಾವಾವೇಶದ ಗದ್ದಲದಲ್ಲಿ ಶಿಕ್ಷಣ ವಲಯದಲ್ಲಿ ಕಾಣಲೇಬೇಕಾದ ಸುಧಾರಣೆಯ ಹೆಜ್ಜೆಗಳ ವಿಸ್ತøತ ಚರ್ಚೆಯೇ ನಡೆಯುವುದಿಲ್ಲ. ಆ ಚರ್ಚೆಯಿಲ್ಲದೇ ಇಡೀ ವೃತ್ತಾಂತ ಕೊನೆಗೊಳ್ಳುತ್ತದೆ. ಜನರೂ ಆ ಕ್ಷಣದ ವಿವಾದಾತ್ಮಕ ಸಂಗತಿಯನ್ನು ಮರೆತುಬಿಡುತ್ತಾರೆ. ಚುನಾವಣೆ ಹತ್ತಿರವಾದಾಗ ಇಂಥದ್ದೇ ವಿವಾದೋದ್ಯಮದ ಲಾಭದ ಹವಣಿಗೆಯ ಭಾವೋನ್ಮಾದದ ವಿಷಯಗಳು ಮುನ್ನೆಲೆಗೆ ಬರುತ್ತವೆ.

ತರಗತಿಯಲ್ಲಿರುವ ಮಕ್ಕಳು ಮೇಷ್ಟ್ರು ಹೆಸರು ಹೇಳಿದಾಗ ಎಸ್ ಸರ್ ಎನ್ನುವ ಬದಲು ಜೈಹಿಂದ್ ಎಂದು ಹೇಳಬಹುದು. ಅದು ಕ್ರಿಯೆಯೊಂದಕ್ಕೆ ದಕ್ಕುವ ನಿರ್ದಿಷ್ಟ ಪ್ರತಿಕ್ರಿಯೆಯಾಗುತ್ತದಷ್ಟೇ. ನನ್ನ ಹೆಸರು ಹೇಳಿದ ತಕ್ಷಣ ನಾನು ಕ್ಲಾಸ್‍ನಲ್ಲಿದ್ದೇನೆ ಎಂಬುದನ್ನು ಸ್ಪಷ್ಟಪಡಿಸುವುದಕ್ಕೆ ಎಸ್ ಸರ್ ಅಥವಾ ಪ್ರೆಸೆಂಟ್ ಸರ್ ಎನ್ನುವ ಪ್ರತಿಕ್ರಿಯೆ ಬಳಕೆಯಾಗುತ್ತದೆ. ಗುರುಗಳು ಹೆಸರು ಕೂಗುವುದು, ವಿದ್ಯಾರ್ಥಿಗಳು ಓಗೊಡುವುದು – ಇವೆರಡೂ ತರಗತಿಯಲ್ಲಿ ನಡೆಯುವ ಅತ್ಯಂತ ಸಹಜ ಆಡಳಿತಾತ್ಮಕ ಕ್ರಿಯೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಭಾವುಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಕ್ರಿಯೆಯನ್ನಾಗಿಯೂ ಇದನ್ನು ನೋಡಬಹುದು. ರೆಗ್ಯುಲರ್ ಆಗಿ ತರಗತಿಗೆ ಹಾಜರಾಗುವ ವಿದ್ಯಾರ್ಥಿ ಎಸ್ ಸರ್ ಎಂದು ಹೇಳದಿದ್ದರೆ ಶಿಕ್ಷಕರಿಗೆ ಕಸಿವಿಸಿಯಾಗುತ್ತದೆ. ಯಾಕೆ ಬಂದಿಲ್ಲ ಎಂಬ ಪ್ರಶ್ನೆ ಮೂಡುತ್ತದೆ. ತರಗತಿಗೆ ಚಕ್ಕರ್ ಹೊಡೆಯುವುದನ್ನೇ ಪ್ರವೃತ್ತಿಯಾಗಿಸಿಕೊಂಡವರ ಕುರಿತೂ ಕಾಳಜಿ ಇರುತ್ತದೆ. ಅವರು ಎಷ್ಟೋ ದಿನಗಳ ನಂತರ ಹಾಜರಾಗಿ ಎಸ್ ಸರ್ ಎಂದಾಗ ಪ್ರೀತಿಯಿಂದ ಗದರಿ ಇನ್ಮೇಲಿಂದ ರೆಗ್ಯುಲರ್ ಆಗಿ ಕ್ಲಾಸ್ ಅಟೆಂಡ್ ಆಗಬೇಕು ಎಂದು ಹೇಳುತ್ತಾರೆ. ಇಂಥದ್ದೊಂದು ಶೈಕ್ಷಣಿಕ ಬಾಂಧವ್ಯದ ಆಯಾಮವಿರುವ ಈ ಕ್ರಿಯೆಯನ್ನು ಆಡಳಿತಾತ್ಮಕ ನಿಯಮ ಮತ್ತು ದೇಶಪ್ರೇಮದ ಪರಿಧಿಯ ಕಡ್ಡಾಯ ಆವರಣದೊಳಗೆ ತರುವುದು ಮಕ್ಕಳ ವಿವೇಚನೆಯ ಯಾನದ ಸಕಾರಾತ್ಮಕತೆಯ ದೃಷ್ಟಿಯಿಂದ ಅಪಾಯಕಾರಿ ಎಂದೆನ್ನಿಸುತ್ತದೆ.

ಹಿಂದೆಲ್ಲಾ ಪೆನ್ನು, ನೋಟ್ ಬುಕ್‍ಗಳ ಮೇಲೆ ಕಾಣಿಸಿಕೊಳ್ಳುತ್ತಿದ್ದ ‘ಮೇರಾ ಭಾರತ್ ಮಹಾನ್’ ಎಂಬ ಒಕ್ಕಣೆಯು ನಮ್ಮೊಳಗೆ ಹೆಮ್ಮೆ ಮೂಡಿಸುತ್ತಿತ್ತು. ನಾವು ಕ್ಲಾಸ್‍ನಲ್ಲಿ ಕೇಳಿಸಿಕೊಳ್ಳುತ್ತಿದ್ದ ಉದಾತ್ತ ಯೋಚನೆಗಳು, ಆದರ್ಶ ವ್ಯಕ್ತಿತ್ವಗಳ ಕೊಡುಗೆಗಳ ಬಗ್ಗೆ ತಿಳಿದುಕೊಂಡ ಸಂದರ್ಭದಲ್ಲಿ ಈ ಒಕ್ಕಣೆ ಕಾಣಿಸಿಕೊಂಡಾಗ ನಮ್ಮೊಳಗಿನ ಹೆಮ್ಮೆಯ ಭಾವ ಇಮ್ಮಡಿಗೊಳ್ಳುತ್ತಿತ್ತು. ಇದನ್ನು ನೋಡಲೇಬೇಕೆಂಬ, ಹೆಮ್ಮೆಯ ಭಾವ ಮೂಡಿಸಿಕೊಳ್ಳಲೇಬೇಕು ಎನ್ನುವ ಕಡ್ಡಾಯ ನಿಯಮವಿರಲಿಲ್ಲ. ಆದಾಗ್ಯೂ ಇದು ನಮ್ಮೊಳಗೆ ಆಪ್ತವಾಗಿ ಬೆರೆತುಹೋಗಿತ್ತು. ಉಳಿದೆಲ್ಲ ದೇಶಗಳಿಗಿಂತ ನಮ್ಮ ದೇಶ ಮಹಾನ್ ಎನ್ನುವ ಭಾವ ಅತ್ಯಂತ ಸಂಯಮಪೂರ್ಣವಾಗಿ ನಮ್ಮ ಪ್ರಜ್ಞೆಯೊಳಗೆ ಮೇಳೈಸಿತ್ತು. ಹೆಮ್ಮೆ ಪಟ್ಟುಕೊಳ್ಳುವಂಥ ದೇಶದಲ್ಲಿ ಸಮಸ್ಯೆಗಳೂ ಇವೆ, ಅವುಗಳ ನಿವಾರಣೆಯ ಕಡೆಗೆ ಕಾಳಜಿಪೂರ್ವಕ ಹೆಜ್ಜೆಗಳನ್ನಿಡುತ್ತಲೇ ಇಡೀ ದೇಶವನ್ನು ಮಹಾನ್ ಅಗಿಸುವ ಉದಾತ್ತ ಪ್ರಯತ್ನಗಳ ಕಡೆಗೆ ಗಮನವಿರಬೇಕು ಎಂಬ ಎಚ್ಚರವನ್ನೂ ರೂಢಿಸಿತ್ತು. ಅಧಿಕಾರ ರಾಜಕಾರಣದ ಮೊಗಸಾಲೆಯಿಂದ ಹೊರಟ ನಿರ್ದಿಷ್ಟ ನಿಲುವು ಆಡಳಿತಾತ್ಮಕ ತೀರ್ಮಾನವಾಗಿ ತರಗತಿಗಳ ಒಳಗೆ ಪ್ರವೇಶಿಸಿ ಮಕ್ಕಳಿಂದ ದೇಶದ ಬಗ್ಗೆ ಜೈಕಾರ ಮೊಳಗಬೇಕು ಎಂಬ ಕಾರ್ಯಸೂಚಿ ಅನುಷ್ಠಾನಗೊಂಡರೆ ಅದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕುಚಿತ ಗೋಡೆಗಳನ್ನು ಸೃಷ್ಟಿಸಬಹುದು. ಅಂಥ ಗೋಡೆಗಳು ಸೃಷ್ಟಿಯಾದರೆ ತರಗತಿಯ ವಿವೇಚನಾತ್ಮಕ ಸೌಂದರ್ಯಕ್ಕೆ ಧಕ್ಕೆಯಾಗುತ್ತದೆ.

ಜೈಹಿಂದ್ ಎಂಬ ಪ್ರತಿಕ್ರಿಯೆ ಕಡ್ಡಾಯವಾಗಿ ಅನುಷ್ಠಾನಗೊಂಡರೆ ಅದರಲ್ಲಿ ತಪ್ಪು ಹುಡುಕುವುದೇಕೆ? ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂಬ ನಾಡಗೀತೆ ಕಡ್ಡಾಯವಾಗಿ ಶಾಲಾ-ಕಾಲೇಜುಗಳ ಆರಂಭಕ್ಕಿಂತ ಮುನ್ನ ಮೊಳಗುತ್ತಿರುವಾಗ ಇದಕ್ಕೆ ಆಕ್ಷೇಪವೇಕೆ? ಎಂಬ ಪ್ರಶ್ನೆಗಳು ಎದುರಾಗಬಹುದು. ಕುವೆಂಪು ವಿರಚಿತ ಈ ನಾಡಗೀತೆಯು ಕಡ್ಡಾಯ ಪಾಲನೆಯ ನಿಯಮದೊಂದಿಗೆ ಮೊಳಗುವುದಕ್ಕೂ ಜೈಹಿಂದ್ ಎಂಬ ಪ್ರತಿಕ್ರಿಯೆಯು ತರಗತಿಯ ಒಳಗೆ ವ್ಯಕ್ತವಾಗುವುದಕ್ಕೂ ವ್ಯತ್ಯಾಸವಿದೆ. ನಾಡಗೀತೆಯ ಧ್ವನಿಸುರುಳಿ ಶಾಲಾ-ಕಾಲೇಜುಗಳ ಆವರಣದಲ್ಲಿ ಮೊಳಗುವಾಗ ಅದರೊಳಗಿನ ವೈವಿಧ್ಯಮಯ ಸದಾಶಯಗಳ ಸಾಲುಗಳು ವಿದ್ಯಾರ್ಥಿಗಳ ವಿವೇಚನೆಯನ್ನು ವಿಸ್ತರಿಸುತ್ತಿರುತ್ತವೆ. ವಿವಿಧತೆಯಲ್ಲಿ ಏಕತೆ ಸಾಧಿಸಿರುವ ಈ ದೇಶದ ವೈಶಿಷ್ಟ್ಯತೆಯನ್ನು ಮನದಟ್ಟು ಮಾಡಿಕೊಡುತ್ತವೆ. ಅಷ್ಟೇ ಅಲ್ಲ, ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಈ ನೆಲವನ್ನು ನೋಡುವ ಸೌಜನ್ಯವನ್ನು ನಮ್ಮದಾಗಿಸಿಕೊಳ್ಳುವ ಒತ್ತಾಸೆ ಮೂಡಿಸುತ್ತವೆ. ಜೈ ಹಿಂದ್ ಎನ್ನುವ ಪ್ರತಿಕ್ರಿಯೆಯು ಕ್ಷಣಾರ್ಧದಲ್ಲಿ ಭಾರತದ ಪರವಾದ ಜಯಕಾರ ಹೇಳುವ ಮಹತ್ವದ ಸಂದರ್ಭವನ್ನು ಸೃಷ್ಟಿಸಬಹುದು. ಆದರೆ, ಈ ಜಯಕಾರದ ಸಾಂದಭಿರ್ಕತೆಯು ನಕಾರಾತ್ಮಕ ದೃಷ್ಟಿಕೋನಗಳಿಗೆ ಪ್ರಚೋದನೆಯನ್ನು ನೀಡಿ ಭಾರತವೇ ಗ್ರೇಟ್ ಎಂಬ ಶ್ರೇಷ್ಠತೆಯ ವ್ಯಸನದ ಸಂಕುಚಿತತೆಯನ್ನು ಬಿತ್ತಿಬಿಡಬಹುದು. ಉಳಿದೆಲ್ಲ ದೇಶಗಳ ವಿಶೇಷತೆಯನ್ನು ಅಲ್ಲಗಳೆಯುವ ವಿತಂಡವಾದಿ ಸ್ವಭಾವವನ್ನು ನೆಲೆಗೊಳಿಸಿಬಿಡಬಹುದು. ತರಗತಿ ಇಂಥ ಸಂಕುಚಿತತೆಯ ಮೂಲನೆಲೆಯಾಗಬಾರದು ಎಂಬ ವಿವೇಕ ರಾಜಕೀಯ ಪಕ್ಷಗಳು ಮತ್ತು ಅಧಿಕಾರ ಕೇಂದ್ರಗಳನ್ನು ಪ್ರತಿನಿಧಿಸುವವರೊಳಗಿರಬೇಕು. ಈ ವಿವೇಕ ಇಲ್ಲದಿರುವುದರಿಂದಲೇ ಅಧಿಕಾರರೂಢ ಪಕ್ಷಗಳು ಶಿಕ್ಷಣ ವಲಯವನ್ನು ತಮ್ಮ ರಾಜಕೀಯ ಲಾಭದ ಕಾರ್ಯತಂತ್ರದ ಭಾಗವಾಗಿ ನೋಡುತ್ತವೆ. ವಿರೋಧ ಪಕ್ಷಗಳೂ ಅದನ್ನು ರಾಜಕೀಯ ವಿವಾದ ಉಂಟುಮಾಡುವುದಕ್ಕಷ್ಟೇ ಬಳಸಿಕೊಂಡುಬಿಡುತ್ತವೆ. ತಾತ್ವಿಕ ಚರ್ಚೆ ಹುಟ್ಟುಹಾಕಿ ಗಮನಾರ್ಹ ಶೈಕ್ಷಣಿಕ ಬದಲಾವಣೆಯ ಚಿಂತನೆಯನ್ನು ಕೊಡುಗೆಯನ್ನಾಗಿ ನೀಡುವುದಿಲ್ಲ.

ಚುನಾವಣೆ ಸನ್ನಿಹಿತವಾಗುತ್ತಿರುವಾಗ ಜನಪ್ರಿಯವೆನ್ನಿಸುವ ಭಾವುಕ ಸಂಗತಿಗಳನ್ನು ಶಿಕ್ಷಣ ಕ್ಷೇತ್ರಕ್ಕೆ ತಳುಕುಹಾಕಿ ತೀರ್ಮಾನಗಳನ್ನು ಘೋಷಿಸುವ ಅವಸರದ ಪ್ರವೃತ್ತಿಯ ಬದಲು ಪ್ರಾಥಮಿಕ ಹಂತದಿಂದ ಹಿಡಿದು ಸ್ನಾತಕೋತ್ತರ ಹಂತದವರೆಗಿನ ಶೈಕ್ಷಣಿಕ ಕಲಿಕೆ ಮತ್ತು ತರಗತಿಗಳ ಸ್ವರೂಪವನ್ನು ಬದಲಾಯಿಸುವುದರ ಬಗ್ಗೆ ರಚನಾತ್ಮಕ ಚಿಂತನೆ ಹೊಳೆಸಿಕೊಳ್ಳಬೇಕಿದೆ. ಶಾಸಕಾಂಗ ಮತ್ತು ಕಾರ್ಯಾಂಗ ದೂರದರ್ಶಿತ್ವದ ಶ್ರದ್ಧೆಯೊಂದಿಗೆ ಇಂಥ ಕಾರ್ಯವನ್ನು ನಿರ್ವಹಿಸಬೇಕಿದೆ. ಹಳ್ಳಿಗಳಲ್ಲಿ ಶಾಲೆಗಳಿಲ್ಲ. ಶಾಲೆಗಳಿದ್ದರೂ ಶಿಕ್ಷಕರಿಲ್ಲ. ಶಿಕ್ಷಕರಿದ್ದರೂ ಅವರಿಗೆ ಉನ್ನತಾಧಿಕಾರಿ ವಲಯದಿಂದ ಹರಿದುಬರುವ ಆದೇಶಗಳ ಒತ್ತಡದ ಉಸಿರುಗಟ್ಟುವ ಪರಿಸ್ಥಿತಿ. ಮೂಲಭೂತ ಸೌಕರ್ಯಗಳಿಲ್ಲದ ಸ್ಥಿತಿಯಲ್ಲಿ ತರಗತಿಯನ್ನು ನಿರ್ವಹಿಸುವ ಅನಿವಾರ್ಯತೆ. ಹಳ್ಳಿ ರಾಜಕಾರಣದ ವಿಚಿತ್ರ ಸಿಕ್ಕುಗಳಲ್ಲಿ ಬಂಧಿಯಾಗುತ್ತಲೇ, ಮಾನಸಿಕವಾಗಿ ನರಳುತ್ತಲೇ ಪಾಠ ಮಾಡಬೇಕಾದ ಸಂದಿಗ್ಧತೆ. ಹೆಚ್ಚು ಸಂಖ್ಯೆಯಲ್ಲಿ ಮಕ್ಕಳಿರುವ ತರಗತಿಯನ್ನು ನಿಭಾಯಿಸುವ ಸವಾಲು. ಆಡಳಿತಾತ್ಮಕ ಕಿರಿಕಿರಿಗಳ ಭಾರದಲ್ಲಿ ಶಿಕ್ಷಕರ ಬೌದ್ಧಿಕ ಶಕ್ತಿ ನಲುಗುತ್ತಿದೆ. ಖಾಸಗಿ ಶಾಲೆ-ಕಾಲೇಜುಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸರ್ಕಾರಿ ಶಾಲೆಗಳಲ್ಲಿ ಕಲಿಯಲು ಬರುವ ಮಕ್ಕಳ ಶಿಕ್ಷಣದ ಸಾಧ್ಯತೆಗಳಿಗೆ ವ್ಯಾಪಕ ಆದ್ಯತೆ ಸಿಗುತ್ತಲೇ ಇಲ್ಲ. ಮೌಲಿಕ ಕಲಿಕೆ, ವೃತ್ತಿಪರ ಅವಕಾಶಗಳು ಮತ್ತು ಅಭಿವೃದ್ಧಿ – ಈ ಮೂರೂ ಅಂಶಗಳನ್ನು ಆಧರಿಸಿದ ಸಮಗ್ರ ನೀತಿಯನ್ನು ರೂಪಿಸಿ ವ್ಯವಸ್ಥಿತ ಅನುಷ್ಠಾನ ಸಾಧ್ಯವಾಗಿಸಬೇಕು. ಹಾಗಾದಾಗ ಮಾತ್ರ ಶಿಕ್ಷಣ, ಶಿಕ್ಷಕರು, ತರಗತಿ ಮತ್ತು ವಿದ್ಯಾರ್ಥಿಗಳು ಚುನಾವಣಾ ಅಖಾಡದ ಕಾರ್ಯತಂತ್ರಗಳಿಗೆ ಬಲಿಯಾಗುವುದಿಲ್ಲ. ಪ್ರತಿ ಚುನಾವಣೆಯೂ ಶಿಕ್ಷಣ ರಂಗದ ಸಬಲೀಕರಣದ ಚಿಂತನೆಗಳಿಗೆ ವೇದಿಕೆಯನ್ನು ಒದಗಿಸಬೇಕು. ಚಿಂತನೆಯ ಮಾದರಿ ಲಭ್ಯವಾಗುತ್ತಿರಬೇಕು. ಅದಕ್ಕನುಗುಣವಾಗಿ ತರಗತಿಗಳು ಪ್ರಬುದ್ಧ ನೆಲೆಗಳಾಗಿ ಪರಿವರ್ತಿತವಾಗಬೇಕು. ಇಡೀ ಶಿಕ್ಷಣ ವಲಯವು ದೇಶದ ಉಜ್ವಲ ಭವಿಷ್ಯಕ್ಕೆ ನೆರವಾಗುವ ಅಮೂಲ್ಯ ಸಂಪನ್ಮೂಲವಾಗಬೇಕು.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

Published

on

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.

ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.

ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.

ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.

ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್‌ನ ಜಾಮ್‌ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 days ago

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ...

ದಿನದ ಸುದ್ದಿ1 week ago

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ...

ದಿನದ ಸುದ್ದಿ1 week ago

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್...

ದಿನದ ಸುದ್ದಿ1 week ago

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ...

ದಿನದ ಸುದ್ದಿ2 weeks ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 weeks ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ3 weeks ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ3 weeks ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ3 weeks ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ3 weeks ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

Trending