Connect with us

ರಾಜಕೀಯ

ಜೈ ಹಿಂದ್, ಜೈ ಕರ್ನಾಟಕ

Published

on

ಪ್ರಾಥಮಿಕ ಶಾಲಾ ದಿನಗಳು ನೆನಪಾಗುತ್ತಿವೆ. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಮತ್ತು ರಾಜ್ಯೋತ್ಸವ ದಿನಗಳಂದು ನಮ್ಮೊಳಗೆ ಎಲ್ಲಿಲ್ಲದ ಹುಮ್ಮಸ್ಸು ರೂಪುಗೊಳ್ಳುತ್ತಿತ್ತು. ಭಾಷಣ, ಗಾಯನ ಹೀಗೆ ವಿವಿಧ ಸ್ಪರ್ಧೆಗಳು ನಡೆಯುತ್ತಿದ್ದವು. ಮುಖ್ಯವಾಗಿ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಬಹುಮಾನ ಗೆಲ್ಲುವ ತವಕವಿರುತ್ತಿತ್ತು. ಆ ದಿನಗಳಲ್ಲಿ ಅಪ್ಪ ಬರೆದುಕೊಡುತ್ತಿದ್ದ ಎರಡು ಪುಟಗಳ ಭಾಷಣವನ್ನು ಓದಿಕೊಳ್ಳಬೇಕಾಗುತ್ತಿತ್ತು. ಅವರು ಅದರೊಳಗಿನ ತಿರುಳನ್ನು ಹೇಳಿಕೊಡುತ್ತಿದ್ದರು. ಅದನ್ನಷ್ಟೇ ತಿಳಿದುಕೊಂಡು ಭಾಷಣದ ವೇಳೆ ಆ ಕ್ಷಣಕ್ಕೆ ವ್ಯಕ್ತಪಡಿಸಬೇಕು ಎಂದು ಸಲಹೆ ನೀಡುತ್ತಿದ್ದರು. ಆದರೆ, ನಾವು ಆ ಪ್ರತಿಯೊಳಗಿನ ಪ್ರತಿ ವಾಕ್ಯ, ಪದಗಳನ್ನು ಉರುಹೊಡೆದು ನೆನಪಿನಲ್ಲಿರಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದೆವೇ ಹೊರತು ಅವರು ಹೇಳಿದ ಹಾಗೆ ಇಡೀ ಪ್ರತಿಯಲ್ಲಿನ ಮಹತ್ವದ ಅಂಶಗಳನ್ನು ಮನನ ಮಾಡಿಕೊಳ್ಳುತ್ತಿರಲಿಲ್ಲ. ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸುವ ಉತ್ಸಾಹ, ನಾನೇ ಮೊದಲ ಬಹುಮಾನ ಗೆಲ್ಲಬೇಕು ಎಂಬ ಆಸೆಯೇನೋ ಇರುತ್ತಿತ್ತು. ಆ ಕ್ಷಣಕ್ಕೆ ಉರುಹೊಡೆದ ಪದ, ವಾಕ್ಯಗಳು ನೆನಪಾಗದಿದ್ದರೆ ಎಂಬ ಭಯವೂ ಇತ್ತು. ಇದರ ಮಧ್ಯೆಯೂ ಖುಷಿ ನೀಡುತ್ತಿದ್ದ ಸಂಗತಿ ಎಂದರೆ ಭಾಷಣವು ಕೊನೆಗೊಳ್ಳುವ ಸಂದರ್ಭದಲ್ಲಿ ನಾವು ದೊಡ್ಡ ಧ್ವನಿಯಲ್ಲಿ ಹೇಳುತ್ತಿದ್ದ ‘ಜೈ ಹಿಂದ್, ಜೈ ಕರ್ನಾಟಕ’ ಉದ್ಘೋಷ. ಕೊನೆಗೂ ಭಾಷಣ ಮುಗಿಯಿತು ಎಂಬ ನಿರಾಳ ಭಾವವೂ ಸೇರಿ ಆ ಧ್ವನಿಗೆ ಶಕ್ತಿ ಬರುತ್ತಿತ್ತು.

ಮೊದಲ ಪುಟದಲ್ಲಿ ಉಲ್ಲೇಖಿಸಲ್ಪಟ್ಟ ವಾಕ್ಯ, ಪದಗಳು ಸುಲಭವಾಗಿ ನೆನಪಾಗುತ್ತಿದ್ದವು. ಆದರ್ಶ ವ್ಯಕ್ತಿತ್ವಗಳ ಹೆಸರುಗಳನ್ನು ಕ್ರಮಾನುಗತವಾಗಿ ಪ್ರಸ್ತುತಪಡಿಸುತ್ತಿದ್ದೆವು. ಆದರೆ, ತದನಂತರದ ಪುಟದ ವಾಕ್ಯಗಳನ್ನು ಹೇಳುವಾಗ ದ್ವಂದ್ವವಾಗುತ್ತಿತ್ತು. ಭಾಷಣ ಪ್ರತಿಯ ವಿಚಾರಗಳನ್ನು ಸಂಪೂರ್ಣವಾಗಿ ಗೊತ್ತುಮಾಡಿಕೊಳ್ಳದೇ ಕೇವಲ ಉರುಹೊಡೆದ ಕಾರಣಕ್ಕೇ ಈ ಸಮಸ್ಯೆ ಎಂಬುದು ಆಮೇಲೆ ಮನದಟ್ಟಾಯಿತು. ಹಾಗೆ ಮನದಟ್ಟಾದರೂ ಉರುಹೊಡೆದು ಓದಿಕೊಳ್ಳುವ ರೂಢಿಗತ ಅಭ್ಯಾಸ ಬಹುದಿನಗಳ ಕಾಲ ಮುಂದುವರೆದಿತ್ತು. ತೊದಲು ಮಾತು ಪರಿಪೂರ್ಣತೆಯ ಹಂತ ತಲುಪುವವರೆಗಿನ ಅವಧಿ, ನಮ್ಮೊಳಗೆ ಭಾಷೆಯ ಆಕೃತಿಗಳು ಆವರಿಸಿಕೊಳ್ಳುವ ರೀತಿ, ಆ ಮೂಲಕ ನಮಗೆ ಹರಿದುಬರುವ ಮಾಹಿತಿ, ಜ್ಞಾನ – ಇವೆಲ್ಲವೂ ಪ್ರಾಥಮಿಕ ಶಾಲಾ ದಿನಗಳಲ್ಲಿ ಕ್ರಮೇಣ ಅರಿವಿಗೆಟುಕಿದ್ದವು. ನಮ್ಮ ಗಮನವೆಲ್ಲವೂ ಶಾಲೆ, ತರಗತಿ, ಟೀಚರ್ಸ್, ಸ್ನೇಹಿತರು, ಆಟ, ರಜೆಗಳು ಆರಂಭವಾಗುವ ತಿಂಗಳು, ಓದುವ ಅವಧಿಯ ನಂತರ ಆಟಕ್ಕೆ ಹೋಗುವ ಕುತೂಹಲದ ಕಡೆಗೇ ಕೇಂದ್ರೀಕೃತವಾಗಿರುತ್ತಿತ್ತು. ರಾಜಕೀಯವು ಬಾಲ್ಯದ ಪ್ರಜ್ಞೆಯ ಆವರಣದ ಆಚೆಗೇ ಇರುತ್ತಿತ್ತು.

ಈಗ ಹಾಗಲ್ಲ. ಪ್ರಾಥಮಿಕ ಹಂತದಿಂದಲೇ ಶಿಕ್ಷಣದ ಭಾಷೆ ಯಾವುದಾಗಿರಬೇಕು ಎನ್ನುವುದನ್ನು ವಿವೇಚನಾರಹಿತವಾಗಿ ನಿರ್ಧರಿಸಿಬಿಡುವ ವಿಚಿತ್ರ ರಾಜಕಾರಣವು ಮಕ್ಕಳ ಕಲಿಕೆಯ ಸ್ವಾತಂತ್ರ್ಯದ ಮೇಲೆ ದಾಳಿಗೈಯ್ಯುತ್ತಿದೆ. ತರಗತಿಯೊಳಗೆ ಪಠ್ಯವಾಗಿ ಕಲಿಯಲ್ಪಡುವ ಸಂಗತಿಗಳು ರಾಜಕೀಯ ಬಣ್ಣ ಪಡೆಯುತ್ತಿವೆ. ಮೇಷ್ಟ್ರು ಹಾಜರಾತಿ ದೃಢೀಕರಿಸಿಕೊಳ್ಳಲು ನಮ್ಮ ಹೆಸರು ಕೂಗಿದ ತಕ್ಷಣ ಎಸ್ ಸರ್, ಪ್ರೆಸೆಂಟ್ ಸರ್, ಇದೀನಿ ಸಾರ್ ಎಂದು ಪ್ರತಿಕ್ರಿಯಿಸುವ ಸ್ವಾತಂತ್ರ್ಯವನ್ನು ಅಧಿಕಾರ ರಾಜಕಾರಣ ಕಿತ್ತುಕೊಳ್ಳುವುದರ ಕಡೆಗೆ ಆಸಕ್ತಿ ತೋರುತ್ತಿದೆ. ಯಾರು ಹೇಳಲಿ ಬಿಡಲಿ, ಮೇರಾ ಭಾರತ್ ಮಹಾನ್ ಎಂಬ ಹೆಮ್ಮೆಯ ಭಾವವು ರಾಷ್ಟ್ರೀಯ ಉತ್ಸವಗಳ ಮೂಲಕ ಮಕ್ಕಳಲ್ಲಿ ಮೇಳೈಸಿರುತ್ತದೆ. ನಮ್ಮ ನೆಲ, ಜಲದ ಕುರಿತಾದ ಅಭಿಮಾನವನ್ನು ಅಷ್ಟು ಸುಲಭವಾಗಿ ನಮ್ಮಿಂದ ದೂರಮಾಡಲಾಗದು. ಎಸ್ ಸರ್, ಪ್ರೆಸೆಂಟ್ ಸರ್ ಎನ್ನುವ ಬದಲು ಜೈ ಹಿಂದ್ ಹೇಳಬೇಕು ಎನ್ನುವ ಆಡಳಿತಾತ್ಮಕ ನಿಯಮಾವಳಿ ರೂಪಿಸಿ ಅನುಷ್ಠಾನಕ್ಕೆ ತರುವ ಪ್ರಯತ್ನ ರಾಷ್ಟ್ರದ ಕುರಿತಾದ ಅಭಿಮಾನ ಮತ್ತು ಹೆಮ್ಮೆಯ ಭಾವದ ಸಹಜತೆಯನ್ನು ಒಡೆಯುತ್ತದೆ.

ಶಿಕ್ಷಣವು ವಿದ್ಯಾರ್ಥಿಕೇಂದ್ರಿತವಾಗಿರಬೇಕೇ ಹೊರತು ಅಧಿಕಾರಕೇಂದ್ರಿತ ಅತಾರ್ಕಿಕ ನಿರ್ಧಾರಗಳ ತಿವಿತಕ್ಕೀಡಾಗಬಾರದು. ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ – ಹೀಗೆ ಒಂದೊಂದು ಹಂತದಲ್ಲೂ ವಿದ್ಯಾರ್ಥಿಗಳ ಕಲಿಕೆಯು ಹೊಸ ಆಯಾಮ ಪಡೆದುಕೊಳ್ಳುತ್ತಿರುತ್ತದೆ. ವಿದ್ಯಾರ್ಥಿಗಳಿಗೆ ಒಳಿತು-ಕೆಡಕುಗಳ ವಿವೇಚನೆಯು ಹಂತಹಂತವಾಗಿಯೇ ಜೊತೆಯಾಗುತ್ತಾ ಹೋಗುತ್ತದೆ. ಶಿಕ್ಷಕರು, ಪಠ್ಯ ಮತ್ತು ಹಿರಿಯರ ಸಾಂದರ್ಭಿಕ ಮಾತುಗಳ ನೆರವಿನೊಂದಿಗೆ ಅವರು ವಿವೇಚನೆಯನ್ನು ತಮ್ಮದಾಗಿಸಿಕೊಳ್ಳುತ್ತಿರುತ್ತಾರೆ. ಇಂಥ ವಿವೇಚನೆಯನ್ನು ಗಟ್ಟಿಗೊಳಿಸುವ ಹಾಗೆಯೇ ಶಿಕ್ಷಣವು ಪುನರ್‍ಸ್ವರೂಪವನ್ನು ಪಡೆದುಕೊಳ್ಳುತ್ತಿರಬೇಕು. ಈ ಸಾಧ್ಯತೆಯು ಎಷ್ಟು ಬೇಗ ಅನುಷ್ಠಾನಗೊಳ್ಳುತ್ತದೋ ಅಷ್ಟೇ ತೀವ್ರಗತಿಯಲ್ಲಿ ಶಿಕ್ಷಣ ವಲಯದಲ್ಲಿನ ಸುಧಾರಣೆಯ ಪ್ರಕ್ರಿಯೆ ಚಾಲ್ತಿಗೆ ಬರುತ್ತದೆ. ಈ ವಿಷಯದಲ್ಲಿ ಅಧ್ಯಾಪಕವರ್ಗವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅವರ ಪ್ರತಿಕ್ರಿಯೆಗಳನ್ನು ಆಧರಿಸಿಯೇ ಶಾಸಕಾಂಗ ನಿರ್ಣಯಗಳನ್ನು ತೆಗೆದುಕೊಳ್ಳಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಶಿಕ್ಷಣ ಇಲಾಖೆಯನ್ನು ಪ್ರತಿನಿಧಿಸುವ ಉನ್ನತ ಹಂತದ ಅಧಿಕಾರಿಗಳು ಈ ವಿಷಯದಲ್ಲಿ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು.

ಇಂಥ ಇಚ್ಛಾಶಕ್ತಿಯು ಬೆರಳೆಣಿಕೆಯ ಅಧಿಕಾರಿಗಳಲ್ಲಿ ಮಾತ್ರ ಇದೆ. ಇದಕ್ಕೆ ಸಂಬಂಧಿಸಿದಂತೆ ಅನೇಕ ಅಧಿಕಾರಿಗಳ ನಿರ್ಲಿಪ್ತ ದೃಷ್ಟಿಕೋನವು ಶಾಸಕಾಂಗವನ್ನು ಪ್ರತಿನಿಧಿಸುವ ರಾಜಕಾರಣಿಗಳ ಅತಾರ್ಕಿಕ ನಿರ್ಧಾರ ಮತ್ತು ಲಾಬಿಗಳಿಗೆ ಶಿಕ್ಷಣ ವಲಯವು ಮಣಿಯಬೇಕಾದ ಅನಿವಾರ್ಯತೆ ಸೃಷ್ಟಿಸಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ದೂರಗಾಮಿ ಪರಿಣಾಮಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಅಮೂಲ್ಯ ವಾರ್ಷಿಕ ಯೋಜನೆಗಳನ್ನು ರೂಪಿಸುವ ಬದಲು ಅವರು ಯಥಾಸ್ಥಿತಿಯನ್ನಷ್ಟೇ ಮುಂದುವರೆಸುತ್ತಿದ್ದಾರೆ. ಈ ಬಗೆಯ ತಮ್ಮ ಮಿತಿಯು ಚರ್ಚೆಗೊಳಗಾಗುತ್ತಿದೆ ಎಂಬ ಸುಳಿವು ಸಿಕ್ಕಾಕ್ಷಣವೇ ಜನಪ್ರಿಯ ಧಾಟಿಯ ವಿವಾದಗಳಿಗೆ ಸರಕು ಒದಗಿಸಬಲ್ಲ ವಿವೇಚನಾರಹಿತ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ಲಾಭದ ಹಸಿವಿನಿಂದ ಬಳಲುವ ಸುದ್ದಿಮಾಧ್ಯಮಗಳಿಗೆ ಬಂಡವಾಳ ದುಡಿಯುವ ವಿವಾದದ ಸರಕನ್ನು ಒದಗಿಸುತ್ತಾರೆ. ಪರ ಮತ್ತು ವಿರೋಧಗಳ ಭಾವಾವೇಶದ ಗದ್ದಲದಲ್ಲಿ ಶಿಕ್ಷಣ ವಲಯದಲ್ಲಿ ಕಾಣಲೇಬೇಕಾದ ಸುಧಾರಣೆಯ ಹೆಜ್ಜೆಗಳ ವಿಸ್ತøತ ಚರ್ಚೆಯೇ ನಡೆಯುವುದಿಲ್ಲ. ಆ ಚರ್ಚೆಯಿಲ್ಲದೇ ಇಡೀ ವೃತ್ತಾಂತ ಕೊನೆಗೊಳ್ಳುತ್ತದೆ. ಜನರೂ ಆ ಕ್ಷಣದ ವಿವಾದಾತ್ಮಕ ಸಂಗತಿಯನ್ನು ಮರೆತುಬಿಡುತ್ತಾರೆ. ಚುನಾವಣೆ ಹತ್ತಿರವಾದಾಗ ಇಂಥದ್ದೇ ವಿವಾದೋದ್ಯಮದ ಲಾಭದ ಹವಣಿಗೆಯ ಭಾವೋನ್ಮಾದದ ವಿಷಯಗಳು ಮುನ್ನೆಲೆಗೆ ಬರುತ್ತವೆ.

ತರಗತಿಯಲ್ಲಿರುವ ಮಕ್ಕಳು ಮೇಷ್ಟ್ರು ಹೆಸರು ಹೇಳಿದಾಗ ಎಸ್ ಸರ್ ಎನ್ನುವ ಬದಲು ಜೈಹಿಂದ್ ಎಂದು ಹೇಳಬಹುದು. ಅದು ಕ್ರಿಯೆಯೊಂದಕ್ಕೆ ದಕ್ಕುವ ನಿರ್ದಿಷ್ಟ ಪ್ರತಿಕ್ರಿಯೆಯಾಗುತ್ತದಷ್ಟೇ. ನನ್ನ ಹೆಸರು ಹೇಳಿದ ತಕ್ಷಣ ನಾನು ಕ್ಲಾಸ್‍ನಲ್ಲಿದ್ದೇನೆ ಎಂಬುದನ್ನು ಸ್ಪಷ್ಟಪಡಿಸುವುದಕ್ಕೆ ಎಸ್ ಸರ್ ಅಥವಾ ಪ್ರೆಸೆಂಟ್ ಸರ್ ಎನ್ನುವ ಪ್ರತಿಕ್ರಿಯೆ ಬಳಕೆಯಾಗುತ್ತದೆ. ಗುರುಗಳು ಹೆಸರು ಕೂಗುವುದು, ವಿದ್ಯಾರ್ಥಿಗಳು ಓಗೊಡುವುದು – ಇವೆರಡೂ ತರಗತಿಯಲ್ಲಿ ನಡೆಯುವ ಅತ್ಯಂತ ಸಹಜ ಆಡಳಿತಾತ್ಮಕ ಕ್ರಿಯೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಭಾವುಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಕ್ರಿಯೆಯನ್ನಾಗಿಯೂ ಇದನ್ನು ನೋಡಬಹುದು. ರೆಗ್ಯುಲರ್ ಆಗಿ ತರಗತಿಗೆ ಹಾಜರಾಗುವ ವಿದ್ಯಾರ್ಥಿ ಎಸ್ ಸರ್ ಎಂದು ಹೇಳದಿದ್ದರೆ ಶಿಕ್ಷಕರಿಗೆ ಕಸಿವಿಸಿಯಾಗುತ್ತದೆ. ಯಾಕೆ ಬಂದಿಲ್ಲ ಎಂಬ ಪ್ರಶ್ನೆ ಮೂಡುತ್ತದೆ. ತರಗತಿಗೆ ಚಕ್ಕರ್ ಹೊಡೆಯುವುದನ್ನೇ ಪ್ರವೃತ್ತಿಯಾಗಿಸಿಕೊಂಡವರ ಕುರಿತೂ ಕಾಳಜಿ ಇರುತ್ತದೆ. ಅವರು ಎಷ್ಟೋ ದಿನಗಳ ನಂತರ ಹಾಜರಾಗಿ ಎಸ್ ಸರ್ ಎಂದಾಗ ಪ್ರೀತಿಯಿಂದ ಗದರಿ ಇನ್ಮೇಲಿಂದ ರೆಗ್ಯುಲರ್ ಆಗಿ ಕ್ಲಾಸ್ ಅಟೆಂಡ್ ಆಗಬೇಕು ಎಂದು ಹೇಳುತ್ತಾರೆ. ಇಂಥದ್ದೊಂದು ಶೈಕ್ಷಣಿಕ ಬಾಂಧವ್ಯದ ಆಯಾಮವಿರುವ ಈ ಕ್ರಿಯೆಯನ್ನು ಆಡಳಿತಾತ್ಮಕ ನಿಯಮ ಮತ್ತು ದೇಶಪ್ರೇಮದ ಪರಿಧಿಯ ಕಡ್ಡಾಯ ಆವರಣದೊಳಗೆ ತರುವುದು ಮಕ್ಕಳ ವಿವೇಚನೆಯ ಯಾನದ ಸಕಾರಾತ್ಮಕತೆಯ ದೃಷ್ಟಿಯಿಂದ ಅಪಾಯಕಾರಿ ಎಂದೆನ್ನಿಸುತ್ತದೆ.

ಹಿಂದೆಲ್ಲಾ ಪೆನ್ನು, ನೋಟ್ ಬುಕ್‍ಗಳ ಮೇಲೆ ಕಾಣಿಸಿಕೊಳ್ಳುತ್ತಿದ್ದ ‘ಮೇರಾ ಭಾರತ್ ಮಹಾನ್’ ಎಂಬ ಒಕ್ಕಣೆಯು ನಮ್ಮೊಳಗೆ ಹೆಮ್ಮೆ ಮೂಡಿಸುತ್ತಿತ್ತು. ನಾವು ಕ್ಲಾಸ್‍ನಲ್ಲಿ ಕೇಳಿಸಿಕೊಳ್ಳುತ್ತಿದ್ದ ಉದಾತ್ತ ಯೋಚನೆಗಳು, ಆದರ್ಶ ವ್ಯಕ್ತಿತ್ವಗಳ ಕೊಡುಗೆಗಳ ಬಗ್ಗೆ ತಿಳಿದುಕೊಂಡ ಸಂದರ್ಭದಲ್ಲಿ ಈ ಒಕ್ಕಣೆ ಕಾಣಿಸಿಕೊಂಡಾಗ ನಮ್ಮೊಳಗಿನ ಹೆಮ್ಮೆಯ ಭಾವ ಇಮ್ಮಡಿಗೊಳ್ಳುತ್ತಿತ್ತು. ಇದನ್ನು ನೋಡಲೇಬೇಕೆಂಬ, ಹೆಮ್ಮೆಯ ಭಾವ ಮೂಡಿಸಿಕೊಳ್ಳಲೇಬೇಕು ಎನ್ನುವ ಕಡ್ಡಾಯ ನಿಯಮವಿರಲಿಲ್ಲ. ಆದಾಗ್ಯೂ ಇದು ನಮ್ಮೊಳಗೆ ಆಪ್ತವಾಗಿ ಬೆರೆತುಹೋಗಿತ್ತು. ಉಳಿದೆಲ್ಲ ದೇಶಗಳಿಗಿಂತ ನಮ್ಮ ದೇಶ ಮಹಾನ್ ಎನ್ನುವ ಭಾವ ಅತ್ಯಂತ ಸಂಯಮಪೂರ್ಣವಾಗಿ ನಮ್ಮ ಪ್ರಜ್ಞೆಯೊಳಗೆ ಮೇಳೈಸಿತ್ತು. ಹೆಮ್ಮೆ ಪಟ್ಟುಕೊಳ್ಳುವಂಥ ದೇಶದಲ್ಲಿ ಸಮಸ್ಯೆಗಳೂ ಇವೆ, ಅವುಗಳ ನಿವಾರಣೆಯ ಕಡೆಗೆ ಕಾಳಜಿಪೂರ್ವಕ ಹೆಜ್ಜೆಗಳನ್ನಿಡುತ್ತಲೇ ಇಡೀ ದೇಶವನ್ನು ಮಹಾನ್ ಅಗಿಸುವ ಉದಾತ್ತ ಪ್ರಯತ್ನಗಳ ಕಡೆಗೆ ಗಮನವಿರಬೇಕು ಎಂಬ ಎಚ್ಚರವನ್ನೂ ರೂಢಿಸಿತ್ತು. ಅಧಿಕಾರ ರಾಜಕಾರಣದ ಮೊಗಸಾಲೆಯಿಂದ ಹೊರಟ ನಿರ್ದಿಷ್ಟ ನಿಲುವು ಆಡಳಿತಾತ್ಮಕ ತೀರ್ಮಾನವಾಗಿ ತರಗತಿಗಳ ಒಳಗೆ ಪ್ರವೇಶಿಸಿ ಮಕ್ಕಳಿಂದ ದೇಶದ ಬಗ್ಗೆ ಜೈಕಾರ ಮೊಳಗಬೇಕು ಎಂಬ ಕಾರ್ಯಸೂಚಿ ಅನುಷ್ಠಾನಗೊಂಡರೆ ಅದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕುಚಿತ ಗೋಡೆಗಳನ್ನು ಸೃಷ್ಟಿಸಬಹುದು. ಅಂಥ ಗೋಡೆಗಳು ಸೃಷ್ಟಿಯಾದರೆ ತರಗತಿಯ ವಿವೇಚನಾತ್ಮಕ ಸೌಂದರ್ಯಕ್ಕೆ ಧಕ್ಕೆಯಾಗುತ್ತದೆ.

ಜೈಹಿಂದ್ ಎಂಬ ಪ್ರತಿಕ್ರಿಯೆ ಕಡ್ಡಾಯವಾಗಿ ಅನುಷ್ಠಾನಗೊಂಡರೆ ಅದರಲ್ಲಿ ತಪ್ಪು ಹುಡುಕುವುದೇಕೆ? ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂಬ ನಾಡಗೀತೆ ಕಡ್ಡಾಯವಾಗಿ ಶಾಲಾ-ಕಾಲೇಜುಗಳ ಆರಂಭಕ್ಕಿಂತ ಮುನ್ನ ಮೊಳಗುತ್ತಿರುವಾಗ ಇದಕ್ಕೆ ಆಕ್ಷೇಪವೇಕೆ? ಎಂಬ ಪ್ರಶ್ನೆಗಳು ಎದುರಾಗಬಹುದು. ಕುವೆಂಪು ವಿರಚಿತ ಈ ನಾಡಗೀತೆಯು ಕಡ್ಡಾಯ ಪಾಲನೆಯ ನಿಯಮದೊಂದಿಗೆ ಮೊಳಗುವುದಕ್ಕೂ ಜೈಹಿಂದ್ ಎಂಬ ಪ್ರತಿಕ್ರಿಯೆಯು ತರಗತಿಯ ಒಳಗೆ ವ್ಯಕ್ತವಾಗುವುದಕ್ಕೂ ವ್ಯತ್ಯಾಸವಿದೆ. ನಾಡಗೀತೆಯ ಧ್ವನಿಸುರುಳಿ ಶಾಲಾ-ಕಾಲೇಜುಗಳ ಆವರಣದಲ್ಲಿ ಮೊಳಗುವಾಗ ಅದರೊಳಗಿನ ವೈವಿಧ್ಯಮಯ ಸದಾಶಯಗಳ ಸಾಲುಗಳು ವಿದ್ಯಾರ್ಥಿಗಳ ವಿವೇಚನೆಯನ್ನು ವಿಸ್ತರಿಸುತ್ತಿರುತ್ತವೆ. ವಿವಿಧತೆಯಲ್ಲಿ ಏಕತೆ ಸಾಧಿಸಿರುವ ಈ ದೇಶದ ವೈಶಿಷ್ಟ್ಯತೆಯನ್ನು ಮನದಟ್ಟು ಮಾಡಿಕೊಡುತ್ತವೆ. ಅಷ್ಟೇ ಅಲ್ಲ, ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಈ ನೆಲವನ್ನು ನೋಡುವ ಸೌಜನ್ಯವನ್ನು ನಮ್ಮದಾಗಿಸಿಕೊಳ್ಳುವ ಒತ್ತಾಸೆ ಮೂಡಿಸುತ್ತವೆ. ಜೈ ಹಿಂದ್ ಎನ್ನುವ ಪ್ರತಿಕ್ರಿಯೆಯು ಕ್ಷಣಾರ್ಧದಲ್ಲಿ ಭಾರತದ ಪರವಾದ ಜಯಕಾರ ಹೇಳುವ ಮಹತ್ವದ ಸಂದರ್ಭವನ್ನು ಸೃಷ್ಟಿಸಬಹುದು. ಆದರೆ, ಈ ಜಯಕಾರದ ಸಾಂದಭಿರ್ಕತೆಯು ನಕಾರಾತ್ಮಕ ದೃಷ್ಟಿಕೋನಗಳಿಗೆ ಪ್ರಚೋದನೆಯನ್ನು ನೀಡಿ ಭಾರತವೇ ಗ್ರೇಟ್ ಎಂಬ ಶ್ರೇಷ್ಠತೆಯ ವ್ಯಸನದ ಸಂಕುಚಿತತೆಯನ್ನು ಬಿತ್ತಿಬಿಡಬಹುದು. ಉಳಿದೆಲ್ಲ ದೇಶಗಳ ವಿಶೇಷತೆಯನ್ನು ಅಲ್ಲಗಳೆಯುವ ವಿತಂಡವಾದಿ ಸ್ವಭಾವವನ್ನು ನೆಲೆಗೊಳಿಸಿಬಿಡಬಹುದು. ತರಗತಿ ಇಂಥ ಸಂಕುಚಿತತೆಯ ಮೂಲನೆಲೆಯಾಗಬಾರದು ಎಂಬ ವಿವೇಕ ರಾಜಕೀಯ ಪಕ್ಷಗಳು ಮತ್ತು ಅಧಿಕಾರ ಕೇಂದ್ರಗಳನ್ನು ಪ್ರತಿನಿಧಿಸುವವರೊಳಗಿರಬೇಕು. ಈ ವಿವೇಕ ಇಲ್ಲದಿರುವುದರಿಂದಲೇ ಅಧಿಕಾರರೂಢ ಪಕ್ಷಗಳು ಶಿಕ್ಷಣ ವಲಯವನ್ನು ತಮ್ಮ ರಾಜಕೀಯ ಲಾಭದ ಕಾರ್ಯತಂತ್ರದ ಭಾಗವಾಗಿ ನೋಡುತ್ತವೆ. ವಿರೋಧ ಪಕ್ಷಗಳೂ ಅದನ್ನು ರಾಜಕೀಯ ವಿವಾದ ಉಂಟುಮಾಡುವುದಕ್ಕಷ್ಟೇ ಬಳಸಿಕೊಂಡುಬಿಡುತ್ತವೆ. ತಾತ್ವಿಕ ಚರ್ಚೆ ಹುಟ್ಟುಹಾಕಿ ಗಮನಾರ್ಹ ಶೈಕ್ಷಣಿಕ ಬದಲಾವಣೆಯ ಚಿಂತನೆಯನ್ನು ಕೊಡುಗೆಯನ್ನಾಗಿ ನೀಡುವುದಿಲ್ಲ.

ಚುನಾವಣೆ ಸನ್ನಿಹಿತವಾಗುತ್ತಿರುವಾಗ ಜನಪ್ರಿಯವೆನ್ನಿಸುವ ಭಾವುಕ ಸಂಗತಿಗಳನ್ನು ಶಿಕ್ಷಣ ಕ್ಷೇತ್ರಕ್ಕೆ ತಳುಕುಹಾಕಿ ತೀರ್ಮಾನಗಳನ್ನು ಘೋಷಿಸುವ ಅವಸರದ ಪ್ರವೃತ್ತಿಯ ಬದಲು ಪ್ರಾಥಮಿಕ ಹಂತದಿಂದ ಹಿಡಿದು ಸ್ನಾತಕೋತ್ತರ ಹಂತದವರೆಗಿನ ಶೈಕ್ಷಣಿಕ ಕಲಿಕೆ ಮತ್ತು ತರಗತಿಗಳ ಸ್ವರೂಪವನ್ನು ಬದಲಾಯಿಸುವುದರ ಬಗ್ಗೆ ರಚನಾತ್ಮಕ ಚಿಂತನೆ ಹೊಳೆಸಿಕೊಳ್ಳಬೇಕಿದೆ. ಶಾಸಕಾಂಗ ಮತ್ತು ಕಾರ್ಯಾಂಗ ದೂರದರ್ಶಿತ್ವದ ಶ್ರದ್ಧೆಯೊಂದಿಗೆ ಇಂಥ ಕಾರ್ಯವನ್ನು ನಿರ್ವಹಿಸಬೇಕಿದೆ. ಹಳ್ಳಿಗಳಲ್ಲಿ ಶಾಲೆಗಳಿಲ್ಲ. ಶಾಲೆಗಳಿದ್ದರೂ ಶಿಕ್ಷಕರಿಲ್ಲ. ಶಿಕ್ಷಕರಿದ್ದರೂ ಅವರಿಗೆ ಉನ್ನತಾಧಿಕಾರಿ ವಲಯದಿಂದ ಹರಿದುಬರುವ ಆದೇಶಗಳ ಒತ್ತಡದ ಉಸಿರುಗಟ್ಟುವ ಪರಿಸ್ಥಿತಿ. ಮೂಲಭೂತ ಸೌಕರ್ಯಗಳಿಲ್ಲದ ಸ್ಥಿತಿಯಲ್ಲಿ ತರಗತಿಯನ್ನು ನಿರ್ವಹಿಸುವ ಅನಿವಾರ್ಯತೆ. ಹಳ್ಳಿ ರಾಜಕಾರಣದ ವಿಚಿತ್ರ ಸಿಕ್ಕುಗಳಲ್ಲಿ ಬಂಧಿಯಾಗುತ್ತಲೇ, ಮಾನಸಿಕವಾಗಿ ನರಳುತ್ತಲೇ ಪಾಠ ಮಾಡಬೇಕಾದ ಸಂದಿಗ್ಧತೆ. ಹೆಚ್ಚು ಸಂಖ್ಯೆಯಲ್ಲಿ ಮಕ್ಕಳಿರುವ ತರಗತಿಯನ್ನು ನಿಭಾಯಿಸುವ ಸವಾಲು. ಆಡಳಿತಾತ್ಮಕ ಕಿರಿಕಿರಿಗಳ ಭಾರದಲ್ಲಿ ಶಿಕ್ಷಕರ ಬೌದ್ಧಿಕ ಶಕ್ತಿ ನಲುಗುತ್ತಿದೆ. ಖಾಸಗಿ ಶಾಲೆ-ಕಾಲೇಜುಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸರ್ಕಾರಿ ಶಾಲೆಗಳಲ್ಲಿ ಕಲಿಯಲು ಬರುವ ಮಕ್ಕಳ ಶಿಕ್ಷಣದ ಸಾಧ್ಯತೆಗಳಿಗೆ ವ್ಯಾಪಕ ಆದ್ಯತೆ ಸಿಗುತ್ತಲೇ ಇಲ್ಲ. ಮೌಲಿಕ ಕಲಿಕೆ, ವೃತ್ತಿಪರ ಅವಕಾಶಗಳು ಮತ್ತು ಅಭಿವೃದ್ಧಿ – ಈ ಮೂರೂ ಅಂಶಗಳನ್ನು ಆಧರಿಸಿದ ಸಮಗ್ರ ನೀತಿಯನ್ನು ರೂಪಿಸಿ ವ್ಯವಸ್ಥಿತ ಅನುಷ್ಠಾನ ಸಾಧ್ಯವಾಗಿಸಬೇಕು. ಹಾಗಾದಾಗ ಮಾತ್ರ ಶಿಕ್ಷಣ, ಶಿಕ್ಷಕರು, ತರಗತಿ ಮತ್ತು ವಿದ್ಯಾರ್ಥಿಗಳು ಚುನಾವಣಾ ಅಖಾಡದ ಕಾರ್ಯತಂತ್ರಗಳಿಗೆ ಬಲಿಯಾಗುವುದಿಲ್ಲ. ಪ್ರತಿ ಚುನಾವಣೆಯೂ ಶಿಕ್ಷಣ ರಂಗದ ಸಬಲೀಕರಣದ ಚಿಂತನೆಗಳಿಗೆ ವೇದಿಕೆಯನ್ನು ಒದಗಿಸಬೇಕು. ಚಿಂತನೆಯ ಮಾದರಿ ಲಭ್ಯವಾಗುತ್ತಿರಬೇಕು. ಅದಕ್ಕನುಗುಣವಾಗಿ ತರಗತಿಗಳು ಪ್ರಬುದ್ಧ ನೆಲೆಗಳಾಗಿ ಪರಿವರ್ತಿತವಾಗಬೇಕು. ಇಡೀ ಶಿಕ್ಷಣ ವಲಯವು ದೇಶದ ಉಜ್ವಲ ಭವಿಷ್ಯಕ್ಕೆ ನೆರವಾಗುವ ಅಮೂಲ್ಯ ಸಂಪನ್ಮೂಲವಾಗಬೇಕು.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

Published

on

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.

ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.

ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.

ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ...

ಅಂತರಂಗ6 days ago

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ...

ದಿನದ ಸುದ್ದಿ7 days ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ದಿನದ ಸುದ್ದಿ1 week ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ1 week ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ2 weeks ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ2 weeks ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ2 weeks ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ2 weeks ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ3 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

Trending