ದಿನದ ಸುದ್ದಿ
ಇದೂ “ಹಿಟ್ ಅಂಡ್ ರನ್” ಆಗದಿರಲಿ
ಜಮ್ಮು- ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಣಯಗಳು ಮೇಲ್ನೋಟಕ್ಕೆ ಕಾನೂನುಬದ್ಧ ಮತ್ತು ಸಂವೈಧಾನಿಕ ಎಂಬ ಬಗ್ಗೆ ಕಾನೂನುವಹಿ ದೊಡ್ಡ ತಕರಾರುಗಳೇನೂ ಇರಲಾರವು. ಅಷ್ಟು ಚರ್ಚಿಸಿಯೇ ಈ ತೀರ್ಮಾನವನ್ನವರು ತೆಗೆದುಕೊಂಡಿದ್ದಾರೆ. ಸಂಘ ಮತ್ತು ಅವರ ರಾಜಕೀಯ ವಿಂಗ್ ಗಳ ಈ ರಾಜಕೀಯ ನಿಲುವುಗಳು ಬಹಳ ಹಳೆಯವು. ಹಾಗಾಗಿ ಅಚ್ಚರಿಯೇನಿಲ್ಲ.
ಇಲ್ಲಿ ಅಕ್ಷೇಪವೇನಾದರೂ ಇದ್ದರೆ, ಇದ್ದೂ ಇಲ್ಲದಂತಾಗಿರುವ ವಿರೋಧ ಪಕ್ಷಗಳ ಬಗ್ಗೆ ಸಾರ್ವಜನಿಕ ಆಕ್ಷೇಪ ಇರಬೇಕು. ಏಕೆಂದರೆ, ಇಂತಹದೊಂದು ಮಹತ್ವದ ತೀರ್ಮಾನ ಆಗುತ್ತಿರುವಾಗ ಸಮರ್ಥವಾಗಿ ಧ್ವನಿ ಎತ್ತಬಲ್ಲ ಪ್ರತಿಪಕ್ಷ ಈಗ ಉಳಿದಿಲ್ಲ.
ಸಾಮಾನ್ಯವಾಗಿ ಒಂದು ಕಾನೂನು ಜಾರಿಯಾಗುವುದು ಸಂಸತ್ತಿನ ಎರಡೂ ಸದನಗಳು ಒಂದು ಮಸೂದೆಯನ್ನು ಅಂಗೀಕರಿಸಿದ ಬಳಿಕ ಅದನ್ನು ರಾಷ್ಟ್ರಪತಿಗಳು ಒಪ್ಪಿ ಸಹಿ ಮಾಡಿದಾಗ ಅಥವಾ ಸಂಸತ್ತು ಅಧಿವೇಶನದಲ್ಲಿಇಲ್ಲದಿದ್ದಾಗ ರಾಷ್ಟ್ರಪತಿಗಳ ಸುಗ್ರೀವಾಜ್ನೆಯ ಮೂಲಕ. ಅದಾಗಿ ಆರು ತಿಂಗಳೊಳಗೆ ಆ ಸುಗ್ರೀವಾಜ್ನೆಗೆ ಸಂಸತ್ತಿನ ಅಂಗೀಕಾರ ಪಡೆಯಬೇಕಾಗುತ್ತದೆ.
ಈಗ ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370ಹಿಂದೆ ಪಡೆಯುವಾಗ ಅದೆರಡನ್ನೂ ಅನುಸರಿಸಲಾಗಿಲ್ಲ. ಬದಲಾಗಿ, ಆ ಆರ್ಟಿಕಲ್ ನಲ್ಲಿ ಹೇಳಲಾಗಿರುವ “ ಅಧ್ಯಕ್ಷೀಯ ಪ್ರಕಟಣೆಯ ಮೂಲಕ ಈ ಆರ್ಟಿಕಲ್ ಅನ್ನು ಹಿಂದೆಗೆಯಬಹುದು ಅಥವಾ ಭಾಗಶಃ ಜಾರಿಯಲ್ಲಿಡಬಹುದು” ಎಂಬ ಸಂಗತಿಯನ್ನು ಮುಂದಿಟ್ಟುಕೊಂಡು, ಸ್ಥಳೀಯ ನಾಯಕರನ್ನು ಮನೆಬಂಧನದಲ್ಲಿರಿಸಿ, ಸಿಕ್ಕಾಪಟ್ಟೆ ಸೇನೆ ನಿಯೋಜಿಸಿ ಬಹಳ ಪೂರ್ವ ಸಿದ್ಧತೆಗಳೊಂದಿಗೆ ಈ ರಾಷ್ಟ್ರಪತಿಗಳ ಪ್ರಕಟಣೆ ಹೊರಡಿಸಲಾಗಿದೆ., ಸಂಸತ್ತು ಅಧಿವೇಶನದಲ್ಲಿರುವಾಗಲೇ, ಈ ವಿಚಾದ ಬಗ್ಗೆ ಯಾವುದೇ ಸಾಂವಿಧಾನಿಕ ಚರ್ಚೆ ಇಲ್ಲದೇ, ಕೇವಲ ಸಂಸತ್ತಿಗೆ ಮಾಹಿತಿ ನೀಡುವ ಕೆಲಸ ಮಾಡಲಾಗಿದೆ.
ರಾಷ್ಟ್ರಪತಿಗಳ ಈ ಪ್ರಕಟಣೆ ಈಗ ಜಾರಿಗೆ ಬಂದಾಗಿದೆ. ಇದರೊಂದಿಗೆ ಜಮ್ಮು-ಕಾಶ್ಮೀರದ ಸಮಸ್ಯೆ ಸಂಪೂರ್ಣವಾಗಿ ಪರಿಹಾರವಾಗಿ, ಅಲ್ಲಿ ಶಾಂತಿ ನೆಲೆಸುವಂತಾಗುವ ಜವಾಬ್ದಾರಿ ಕೂಡ ಸರ್ಕಾರದ ಹೆಗಲೇರಿದೆ. ನಾಳೆ ಅಲ್ಲಿ ಸಂಭವಿಸುವ ಯಾವುದೇ ಸ್ಥಿತಿಗೆ “ನಾವು ಸಾಂವಿಧಾನಿಕ, ಚಾರಿತ್ರಿಕ ಜವಾಬ್ದಾರಿ ಹೊರುತ್ತೇವೆ” ಎಂದು ಹೇಳುವುದು ಈ ಸರ್ಕಾರದ ಜವಾಬ್ದಾರಿ.
ಆದರೆ ಈ ಸರ್ಕಾರಕ್ಕೆ, ಆ ಬದ್ಧತೆ ತೋರಿಸಿದ ಹಿನ್ನೆಲೆ ಇಲ್ಲ. ಅದು “ನೋಟು ರದ್ಧತಿ”ಯಂತಹ ಗಂಭೀರ ತೀರ್ಮಾನದ ವೇಳೆ ಬಯಲಾಗಿದೆ. ಯಾವುದೇ ಸಿದ್ಧತೆ ಇಲ್ಲದೇ ಬರಿಯ ಮಹತ್ವಾಕಾಂಕ್ಷೆ ಮಾತ್ರದಿಂದ ತೆಗೆದುಕೊಂಡ ತೀರ್ಮಾನ ಅದು ಸಂಪೂರ್ಣ ವಿಫಲವಾಗಿರುವುದು ಈಗ ಜಗಜ್ಜಾಹೀರಾಗಿದೆ ಮತ್ತು ಸ್ವತಃ ಸರ್ಕಾರವೇ ಅದನ್ನು ಒಪ್ಪಿಕೊಂಡಿದೆ. ಆ ಬಳಿಕ GST ವಿಚಾರದಲ್ಲೂ ಸರ್ಕಾರ ಇದನ್ನೇ ಪುನರಾವರ್ತಿಸಿದೆ.
2017ರಲ್ಲಿ ಇದೇ ಸರ್ಕಾರ ಆರ್ಟಿಕಲ್ 370ತೆಗೆದುಹಾಕುವ ಪ್ರಸ್ತಾಪ ಸರ್ಕಾರದ ಎದುರು ಇಲ್ಲ ಎಂದು ಸದನದಲ್ಲಿ ಹೇಳಿಕೆಯನ್ನೂ ಕೊಟ್ಟಿದೆ. ಪರಿಸ್ಥಿತಿ ಹೀಗಿರುವಾಗ, ಈ ಸರ್ಕಾರ ಜಮ್ಮು ಕಾಶ್ಮೀರದ ಆರ್ಟಿಕಲ್ #370 ವಿಚಾರದಲ್ಲೂ ರಾತ್ರೋರಾತ್ರಿ “ಹಿಟ್ ಅಂಡ್ ರನ್” ಮಾಡಿ, ತನ್ನ ಕೆಲಸ ಮುಗಿಯಿತು ಇನ್ನು ಅಲ್ಲಿ ಏನಾದರೂ ತನಗೆ ಜವಾಬ್ದಾರಿ ಇಲ್ಲ ಎಂದು ವರ್ತಿಸತೊಡಗದಂತೆ ಬೆನ್ನುಹತ್ತುವುದು ಪ್ರತಿಪಕ್ಷಗಳ ಮತ್ತು ದೇಶದ ನಾಗರಿಕರ ಜವಾಬ್ದಾರಿ ಆಗಿದೆ. ಜಮ್ಮು-ಕಾಶ್ಮೀರದಲ್ಲಿ ಮುಂದಿನ ಎಲ್ಲ ಬೆಳವಣಿಗೆಗಳಿಗೆ ಈ ಸರ್ಕಾರ ಹೊಣೆ ಹೊರುವಂತಾಗಬೇಕು.
–ರಾಜಾರಾಮ್ ತಲ್ಲೂರ್
ಸುದ್ದಿದಿನ.ಕಾಂ|ವಾಟ್ಸಾಪ್|9980346243
#Article370 #JandK #Constitution #Parliament

ದಿನದ ಸುದ್ದಿ
ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ
ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .
ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್ಎಸ್ಎಲ್ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್ಮೆಂಟ್ ಆಫೀಸರ್ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ1 day agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
-
ದಿನದ ಸುದ್ದಿ7 hours agoಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

