Connect with us

ದಿನದ ಸುದ್ದಿ

ಅನುಚ್ಛೇದ 370 ರದ್ದು | ಒಂದು ವಿಶ್ಲೇಷಣೆ : ಮಿಸ್ ಮಾಡ್ದೆ ಈ ಲೇಖನ ಓದಿ..!

Published

on

ನುಚ್ಛೇದ 370 ರದ್ದು ಪಡಿಸಿರುವುದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಕೊನೆಯಿಲ್ಲದ್ದು. ನನಗೆ ತಿಳಿದಿರುವಷ್ಟು ಮಟ್ಟಿಗೆ ಅನುಚ್ಛೇದ 370 ಹಾಗೂ 35A ರದ್ದಾದ ಕೂಡಲೇ ಜಮ್ಮು-ಕಾಶ್ಮೀರಕ್ಕೆ ಭಾರತದೊಂದಿಗಿರುವ ಸಂವಿಧಾನಾತ್ಮಕ ಸಂಬಂಧ ಕಡಿದು ಹೋಗುವುದಿಲ್ಲ. ಯಾಕೆಂದರೆ ಅನುಚ್ಛೇದ 370 ಬರುವ ಮೊದಲೇ ಜಮ್ಮು-ಕಾಶ್ಮೀರ ಸ್ವತಂತ್ರ ಭಾರತದ ಭಾಗವೆಂದು ಗುರುತಿಸಲ್ಪಟ್ಟಿತ್ತು. ನೆನಪಿರಲಿ ಸ್ವಾತಂತ್ರ್ಯ ನಂತರ ದೇಶದಲ್ಲಿದ್ದ ರಾಜ-ಮಹಾರಾಜರುಗಳ ಸಂಸ್ಥಾನ, ರಾಜ್ಯಗಳೆಲ್ಲಾ ಭಾರತದಲ್ಲಿ ವಿಲೀನವಾದ ಮಾದರಿಯಲ್ಲೇ ಜಮ್ಮು-ಕಾಶ್ಮೀರ ಕೂಡಾ ವಿಲೀನವಾಗಿತ್ತು. ಮೈಸೂರು ಸಂಸ್ಥಾನ, ಮಣಿಪುರ, ತೆಹ್ರಿ ಘರ್ವಾಲ್, ಉದಯಪುರ ಮುಂತಾದ 140 ಸಂಸ್ಥಾನಗಳು ಕೂಡಾ ಭಾರತ ಸ್ವಾತಂತ್ರ್ಯ ಸಿಕ್ಕ ತಕ್ಷಣ ಭಾರತದ ರಾಜ್ಯಗಳಾಗಲಿಲ್ಲ. ಅದಕ್ಕಾಗಿ ಸ್ವತಂತ್ರ ಭಾರತದೊಂದಿಗೆ ಈ ಸಂಸ್ಥಾನಗಳು Instrument of Accession (ವಿಲೀನ ಪತ್ರ)ಗಳಿಗೆ ಸಹಿ ಮಾಡಿ, ಸ್ವತಂತ್ರ ಭಾರತವನ್ನು ಅಧಿಕೃತವಾಗಿ ಸೇರಿದ್ದವು. ಈ ಎಲ್ಲಾ ವಿಲೀನ ಪತ್ರಗಳು ಬಹುಷ ಇವತ್ತೂ ಗೃಹ ಇಲಾಖೆಯ ಕಡತಗಳಲ್ಲಿವೆ.

ದೆಹಲಿಯಲ್ಲಿ ನೆಲೆಸಿರುವ RTI ಕಾರ್ಯಕರ್ತ ಹಾಗೂ ಇತಿಹಾಸ ಸಂಶೋಧಕ ವೆಂಕಟೇಶ ನಾಯಕರು ಇದರ ಬಗ್ಗ್ಗೆ ಕೆಲ ವರುಷಗಳ ಹಿಂದೆ ದೀರ್ಘ ಸಂಶೋಧನೆಯೊಂದನ್ನು ಮಾಡಿ, RTI ಮೂಲಕ ಸ್ವಾತಂತ್ಯ ಸಮಯದಲ್ಲಿ ಸಹಿ ಮಾಡಲಾಗಿದ್ದ ಕೆಲ ವಿಲೀನ ಪತ್ರಗಳ ಪ್ರತಿ ಪಡೆದುಕೊಂಡಿದ್ದರು. ಅವರ ಪ್ರಕಾರ ಜಮ್ಮು-ಕಾಶ್ಮೀರ ಹಾಗೂ ಇತರ 140 ಸಂಸ್ಥಾನಗಳು ಸಹಿ ಮಾಡಿರುವ ವಿಲೀನ ಪತ್ರಗಳಲ್ಲಿ ಹೆಚ್ಚೇನು ವ್ಯತ್ಯಾಸವಿಲ್ಲ. ಈ ಎಲ್ಲಾ ಸಂಸ್ಥಾನಗಳು ಮೊದಲು ಕೇವಲ ರಕ್ಷಣೆ, ವಿದೇಶಾಂಗ ನೀತಿ ಹಾಗೂ ಆರ್ಥಿಕ ನಿರ್ಧಾರಗಳನ್ನು ದೇಶಕ್ಕೆ ಬಿಟ್ಟುಕೊಟ್ಟು, ಉಳಿದೆಲ್ಲಾ ಅಧಿಕಾರಗಳನ್ನು ತಮ್ಮಲ್ಲೇ ಇಟ್ಟುಕೊಂಡಿದ್ದವು. ವಿಲೀನ ಪತ್ರದೊಟ್ಟಿಗೆ ಹೆಚ್ಚಿನ ಸಂಸ್ಥಾನಗಳು ಭಾರತದೊಂದಿಗೆ ತಾಟಸ್ಥ್ಯ ಒಪ್ಪಂದಗಳನ್ನೂ ಮಾಡಿಕೊಂಡಿದ್ದವು. ಅಂದರೆ ರಕ್ಷಣೆ, ವಿದೇಶಾಂಗ ನೀತಿ ಹಾಗೂ ಆರ್ಥಿಕ ಅಧಿಕಾರಗಳ ಹೊರತು ಬೇರೆ ಯಾವುದೇ ವಿಷಯದಲ್ಲಿ ಭಾರತ ಸರ್ಕಾರ ಈ ಸಂಸ್ಥಾನಗಳ ಮೇಲೆ ತನ್ನ ಹಕ್ಕು ಚಲಾಯಿಸುವುದಿಲ್ಲವೆನ್ನೋದು ಈ ತಾಟಸ್ಥ್ಯ ಒಪ್ಪಂದದ ಹೂರಣವಾಗಿತ್ತು. ಹಾಗಾಗಿ ರಕ್ಷಣೆ, ವಿದೇಶಾಂಗ ನೀತಿ ಹಾಗೂ ಹಣಕಾಸಿನ ವಿಷಯಗಳನ್ನು ಬಿಟ್ಟು ಉಳಿದೆಲ್ಲಾ ವಿಷಯಗಳಲ್ಲಿ ಈ ಸಂಸ್ಥಾನಗಳಿಗೆ ಪೂರ್ಣ ಸ್ವಾಯತ್ತತೆ ಇತ್ತು, ಬರೀ ಜಮ್ಮು-ಕಾಶ್ಮೀರಕ್ಕೆ ಮಾತ್ರವಲ್ಲ. ಆದರೆ ಮುಂದೆ ಹೆಚ್ಚಿನ ಸಂಸ್ಥಾನಗಳು ತಮ್ಮ ಸ್ವ-ಇಚ್ಛೆಯಿಂದಲೇ ಭಾರತದೊಂದಿಗೆ ಪೂರ್ಣ ಪ್ರಮಾಣದಲ್ಲಿ ವಿಲೀನವಾಗಲು ಒಪ್ಪಂದಕ್ಕೆ ಸಹಿ ಹಾಕಿ ಸ್ವತಂತ್ರ ಭಾರತದ ಪರಿಪೂರ್ಣ ಭಾಗವಾದರು.

ಆದರೆ ಜಮ್ಮು-ಕಾಶ್ಮೀರದ ಅಂದಿನ ಯುವರಾಜ, ರಾಜ್ಯದ ಮಹಾರಾಜ ಹರಿಸಿಂಗ್ ತನಗೆ ಕೊಟ್ಟ ಅಧಿಕಾರವನ್ನು ಉಪಯೋಗಿಸಿ, ನವೆಂಬರ್ 25, 1949ರಂದು ಒಂದು ಪ್ರಕಟನೆ ಮಾಡಿ, ಶೀಘ್ರದಲ್ಲೇ ಜಾರಿಯಾಗಲಿದ್ದ ಸಂವಿಧಾನ ಎಷ್ಟು ಹಾಗೂ ಯಾವ ಮಟ್ಟಿಗೆ ಜಮ್ಮು-ಕಾಶ್ಮೀರದಲ್ಲಿ ಯುಕ್ತವಾಗಬಹುದೆಂದು ಘೋಷಿಸಿದರು. ಹೀಗಾಗಯೇ ಅನುಚ್ಛೇದ 370 (ಅಂದು ಅನುಚ್ಛೇದ 309) ಜಾರಿಗೆ ಬಂತು. ಇದೆಲ್ಲಾ ಭಾಷಾವಾರು ರಾಜ್ಯಗಳು ಆಗುವ ಮೊದಲು. ಈ ವಿಲೀನ ಪ್ರಕ್ರಿಯೆಯಿಂದಲೇ ಮುಂದೆ ವಿಂಧ್ಯಾ ಪ್ರದೇಶ, ಮತ್ಸ್ಯ ಒಕ್ಕೂಟ, ಪಟಿಯಾಲಾ ಹಾಗೂ ಪೂರ್ವ ಪಂಜಾಬ್ ರಾಜ್ಯಗಳ ಒಕ್ಕೂಟ, ತಿರು-ಕೊಚ್ಚಿ (United State of Travancore and Cochin) ಮುಂತಾದ ದೊಡ್ಡ ಒಕ್ಕೂಟಗಳ ಉದಯವಾಗಿತ್ತು. ಭಾಷಾವಾರು ಪ್ರಾಂತ್ಯಗಳ ರಚನೆಯ ಸಂಧರ್ಭದಲ್ಲಿ ಈ ರಾಜ್ಯಗಳ ಒಕ್ಕೂಟಗಳು ರದ್ದಾದವು.

ಹಾಗಾಗಿ ಅನುಚ್ಛೇದ 370 ರದ್ದಾದ ಮಾತ್ರಕ್ಕೆ ಜಮ್ಮು-ಕಾಶ್ಮೀರ ಭಾರತದ ಕೈತಪ್ಪಿ ಹೋಗುವುದಿಲ್ಲ. ಅದು ಇನ್ನೂ ಭಾರತ ಒಕ್ಕೂಟದ ಅವಿಭಾಜ್ಯ ಅಂಗ ಯಾಕೆಂದರೆ ಜಮ್ಮು-ಕಾಶ್ಮೀರಕ್ಕೆ ಭಾರತ ಒಕ್ಕೂಟದೊಂದಿಗೆ ಅಧಿಕೃತ ಸಂಬಂಧ ಬೆಸೆದಿದ್ದು ಅನುಚ್ಛೇದ 370ದಿಂದಾಗಿ ಅಲ್ಲ ಬದಲಾಗಿ 1947ರಲ್ಲಿ ಸಹಿ ಮಾಡಿದ Instrument of Accessionನಿಂದಾಗಿ. ಆದರೆ ಅನುಚ್ಛೇದ 370 ರದ್ದಾಗಿರುವುದರಿಂದ ಬಿಜೆಪಿಯವರು, ಸಂಘ ಪರಿವಾರ ಹೇಳುವಂತೆ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿರುವ ವಿಶೇಷ ಸ್ಥಾನಮಾನ, ಸ್ವಾಯತ್ತತೆ ಸಂಪೂರ್ಣವಾಗಿ ರದ್ದಾಗಿ, ಅದು ಕೂಡಾ ಇತರ ರಾಜ್ಯಗಳಂತೆಯೇ ಆಗುತ್ತದೆಯೆನ್ನುವುದು ಸತ್ಯವಲ್ಲ. ಯಾಕೆಂದರೆ ಅನುಚ್ಛೇದ 370 ರದ್ದಾದರೆ ಜಮ್ಮು-ಕಾಶ್ಮೀರವನ್ನು ಭಾರತದೊಂದಿಗೆ ಬೆಸೆಯಲು ಉಳಿಯುವ ಏಕೈಕ ಕೊಂಡಿಯೆಂದರೆ 1947ರಲ್ಲಿ ಸಹಿ ಮಾಡಿದ Instrument of Accession. ಈ Instrument of Accession ಪ್ರಕಾರ ಭಾರತ ಸರಕಾರಕ್ಕೆ ಜಮ್ಮು-ಕಾಶ್ಮೀರದಲ್ಲಿ ರಕ್ಷಣೆ, ವಿದೇಶಾಂಗ ನೀತಿ ಹಾಗೂ ಹಣಕಾಸಿನ ವಿಷಯಗಳನ್ನು ಹೊರತುಪಡಿಸಿ ಇತರೆ ವಿಷಯಗಳಲ್ಲಿ ಯಾವುದೇ ಹಕ್ಕಿಲ್ಲ.

ಇತರ ಎಲ್ಲಾ ವಿಷಯಗಳನ್ನೂ ಜಮ್ಮು-ಕಾಶ್ಮೀರಕ್ಕೆ ಸಂಪೂರ್ಣ ಸ್ವಾಯತ್ತತೆ ಇದೆ. ಅಂದರೆ ಕೇವಲ ಅನುಚ್ಛೇದ 370ವನ್ನು ರದ್ದು ಮಾಡಿದರೆ ಜಮ್ಮು-ಕಾಶ್ಮೀರಕ್ಕೆ ಸದ್ಯಕ್ಕಿರುವುದಕ್ಕಿಂತಲೂ ಹೆಚ್ಚಿನ ಸ್ವಾಯತ್ತತೆ ಸಿಗುತ್ತದೆ. ಇದರ ಪರಿಣಾಮಗಳನ್ನು ಊಹಿಸಲೂ ಅಸಾಧ್ಯ. ಅದರಿಂದಾಗಿಯೇ ಕೇಂದ್ರ ಸರಕಾರ ಕೇವಲ ಅನುಚ್ಛೇದ 370ವನ್ನು ರದ್ದು ಮಾಡುವ ದುಸ್ಸಾಹಸಕ್ಕೆ ಕೈಹಾಕಿಲ್ಲ ಬದಲಾಗಿ ಅನುಚ್ಛೇದ 370ನ್ನು ರದ್ದು ಮಾಡಿ, ಜಮ್ಮು-ಕಾಶ್ಮೀರವನ್ನು ವಿಭಜಿಸಿ ಲಡಾಖ್ ಕೇಂದ್ರಾಡಾಳಿತ ಪ್ರದೇಶ ಹಾಗೂ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಿಂದು ಘೋಷಿಸಿದೆ. ಇದು ರಾಜ್ಯಸಭೆ, ಲೋಕಸಭೆಯಲ್ಲಿ ಪಾಸಾದರೂ ನ್ಯಾಯಾಂಗ ಹಾಗೂ ಸಂವಿಧಾನದ ಪರೀಕ್ಷೆಗೆ ಒಳಪಡುವುದಂತೂ ಗ್ಯಾರಂಟಿ. ಅನುಚ್ಛೇದ 370 ಎಂದರೆ ಬರೀ ಸ್ವಾಯತ್ತತೆ ಮಾತ್ರವಲ್ಲ. ಅದರಲ್ಲಿ ಅನೇಕ ವಿಸ್ತ್ರತವಾದ ವಿಷಯಗಳು ಅಡಕವಾಗಿವೆ ಹಾಗೂ ಈ ಎಲ್ಲಾ ವಿಷಯಗಳ ವಿಸ್ತ್ರತ ಪರೀಕ್ಷೆ ಸಂವಿಧಾನದ ಪೂರ್ಣ ಪೀಠದ ನೆರಳಿನಲ್ಲಿಯೇ ನಡೆಯಬೇಕು.

ಇದು ಇಷ್ಟಾದರೆ, ನಕಲಿ ರಾಷ್ಟ್ರೀಯವಾದಿಗಳಿಗೆ ಆರ್ಟಿಕಲ್ 370 ಎಂದರೆ ಬರೀ ಜಮ್ಮು-ಕಾಶ್ಮೀರಿಗಳನ್ನು ಹೊರತುಪಡಿಸಿ ದೇಶದ ಬೇರೆ ರಾಜ್ಯದ ಯಾರೂ ಅಲ್ಲಿ ಜಮೀನನ್ನು ಕೊಳ್ಳುವಂತಿಲ್ಲ ಎಂಬುವುದಕ್ಕೆ ಸೀಮಿತ. ಹೋಗ್ಲಿ ಬಿಡಿ. ನಮ್ಮಿಂದ ಮೂರು ಸಾವಿರಕ್ಕಿಂತಲೂ ಹೆಚ್ಚು ಕಿಲೋಮೀಟರ್ ದೂರವಿರುವ ರಾಜ್ಯದಲ್ಲಿ ಜಮೀನು ಖರೀದಿಸುವ ತುರ್ತು ಹಾಗೂ ಜರೂರತ್ತು ಯಾರಿಗೆ, ಯಾಕಿದೆ ಅಂತಾ ಇನ್ನೊಂದು ಚರ್ಚೆ. ಅಲ್ಲಿ ಆರ್ಟಿಕಲ್ 370 ಇದ್ದಾಗಲೂ ನಮ್ಮಂಥ ಸಾಮಾನ್ಯ ನಾಗರಿಕರಿಗೆ ಏನೂ ತೊಂದರೆಯಾಗಿದ್ದಿಲ್ಲ, ಈವಾಗ ಅದು ರದ್ದಾದರೂ ದೇಶದ ಸಾಮಾನ್ಯ ನಾಗರಿಕರಿಗೆ ಯಾವುದೇ ಲಾಭನೂ ಇಲ್ಲ. ಹಾಗಾಗಿ ಆರ್ಟಿಕಲ್ 370 ರದ್ದಾದ ಕೂಡಲೇ ಅಲ್ಲಿ ಹೊರ ರಾಜ್ಯದ ಎಷ್ಟು ಮಂದಿ ಹೋಗಿ ಜಮೀನನ್ನು ಕೊಂಡುಕೊಳ್ಳುತ್ತಾರೋ ನೋಡೋಣ.

ಆದರೆ ಇಂಥದೊಂದು ನಿಯಮ ಬರೀ ಜಮ್ಮು-ಕಾಶ್ಮೀರದಲ್ಲಿ ಮಾತ್ರ ಇದೆ ಎಂದು ಭಕ್ತರು ಮಾತ್ರವಲ್ಲ, ತೊಂಬತ್ತು ಪರ್ಸೆಂಟ್ ಭಾರತನೇ ಎಂದುಕೊಂಡಿದೆ. ಯಾಕೆಂದರೆ ಅವರಿಗೆ ಸಂವಿಧಾನದ ಆರ್ಟಿಕಲ್ 371G, 371A ಹಾಗೂ ಇತರ ಅನುಚ್ಛೇದಗಳ ಬಗ್ಗೆ ಬಗ್ಗೆ ಎಳ್ಳಷ್ಟೂ ಪರಿಜ್ಞಾನವಿಲ್ಲವೆನ್ನೋದು ಸಾರ್ವಕಾಲಿಕ ಸತ್ಯ. ಸದ್ಯಕ್ಕೆ ಬಿಜೆಪಿ ಆಡಳಿತವಿರುವ ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಸಿಕ್ಕಿಂ ಮುಂತಾದ ರಾಜ್ಯಗಳಲ್ಲೂ ಹೊರಗಿನವರು ಜಮೀನನ್ನು ಖರೀದಿಸುವಂತಿಲ್ಲ ಅಥವಾ ಅಲ್ಲಿನವರು ಹೊರಗಿನವರಿಗೆ ಜಮೀನನ್ನು ಮಾರುವಂತಿಲ್ಲ. ಮೇಘಾಲಯ, ಮಣಿಪುರಗಳ ಹೆಚ್ಚಿನ ಭೂಪ್ರದೇಶದಲ್ಲೂ ಇಂಥದೊಂದು ಕಾನೂನು ಅನ್ವಯವಾಗುತ್ತೆ. ಆದರೆ ಈ ರಾಜ್ಯಗಳ ಬಗ್ಗೆ ಮಾತಾನಾಡಿದರೆ ಮತಗಳು ಸಿಗೋಲ್ಲ. ಸಿಗಬೇಕಾದರೆ ಜಮ್ಮು-ಕಾಶ್ಮೀರದ ಬಗ್ಗೆ ಮಾತಾನಾಡಬೇಕು ಯಾಕೆಂದರೆ ಅದು ಮುಸ್ಲೀಮರ ರಾಜ್ಯ (ವಾಟ್ಸಾಪ್ ಯೂನಿವರ್ಸಿಟಿಯ ಪ್ರಕಾರ). ದೇಶದಲ್ಲಿ ಹಿಂದೂಗಳ ಪರವಾಗಿ ಮಾತಾನಾಡುವುದಕ್ಕಿಂತ, ಮುಸ್ಲೀಮರ ವಿರುದ್ದ ಮಾತಾನಾಡಿದರೆ ಹೆಚ್ಚು ಮತಗಳು ಸಿಗಬಲ್ಲವೆನ್ನೋದು ಕಳೆದ ಮೂರು ದಶಕಗಳಲ್ಲಿ ಈ ದೇಶ ಕಂಡುಕೊಂಡಿರುವ ಸತ್ಯ.

ಹಾಗಾಗಿ ನಾವಿವತ್ತು ಅನುಚ್ಛೇದ 370 ಹಾಗೂ 35A ರದ್ದು ಮಾಡಿರುವ ಬಗ್ಗೆ ಹಾಗೂ ಅದರ ಉದ್ದೇಶಗಳ ಬಗ್ಗೆ ಮಾತಾನಾಡುವುದಕ್ಕಿಂತ ಹೆಚ್ಚಾಗಿ ಮಾತಾನಾಡಬೇಕಾಗಿರುವುದು ಇದನ್ನು ರದ್ದು ಮಾಡಿರುವ ರೀತಿ. ಇದೊಂದು Majoritarian Tyranny (ಬಹುಸಂಖ್ಯಾತ ನಿರಂಕುಶ ಪ್ರಭುತ್ವ) ತನ್ನ ಸುಪರ್ಧಿಯಲ್ಲಿರುವ ಅಗಾಧ Brutal Force ಉಪಯೋಗಿಸಿ ತನಗೆ ಬೇಕಾದುದನ್ನು ಮಾಡಬಲ್ಲದೆನ್ನುವುದಕ್ಕೆ ಕ್ಲಾಸಿಕ್ ಉದಾರಹರಣೆ. ಅನುಚ್ಛೇದ 370 ಹಾಗೂ 35A ರದ್ದು ಮಾಡಬೇಕಿತ್ತೇ? ಅದನ್ನು ಸಾಂವಿಧಾನಿಕ ರೀತಿಯಲ್ಲಿ ಮಾಡಬಹುದಿತ್ತು. ಆದರೆ ಈ ಸರಕಾರಕ್ಕೆ ಅನುಚ್ಛೇದ 370 ಹಾಗೂ 35A ರದ್ದು ಮಾಡುವುದಕ್ಕಿಂತ ಹೆಚ್ಚಾಗಿ ದೇಶದ ಅಲ್ಪಸಂಖ್ಯಾತ ಸಮುದಾಯಕ್ಕೊಂದು ಎಚ್ಚರಿಕೆ ಕೊಡಬೇಕೆನ್ನುವ ಆಸೆಯಿದ್ದಂತೆ ತೋರುತ್ತಿದೆ. ಅಂದರೆ ಈ ದೇಶದಲ್ಲಿ ನಾವು ಬಹುಸಂಖ್ಯಾತರು, ನಮ್ಮ ಸಂಖ್ಯಾಬಲ ಶಾಸನಸಭೆಗಳಲ್ಲಿ ಇದ್ದರೆ, ಈ ಸಂಖ್ಯಾಬಲವನ್ನು ಉಪಯೋಗಿಸಿ, ನಾವು ಅಲ್ಪಸಂಖ್ಯಾತರಾದ ನಿಮ್ಮ ಸಲಹೆ, ಅನುಮತಿಯಿಲ್ಲದೆ ನಮಗೆ ಬೇಕಾದ ಕಾನೂನುಗಳನ್ನು ತರಬಲ್ಲೆವು ಎಂದು ತೋರಿಸಲೇಬೇಕೆಂದು ಪಣತೊಟ್ಟಂತಿದೆ ಈ ಸರಕಾರ. ಉಗ್ರವಾದ, ಪಾಕೀಸ್ಥಾನ ಮುಂತಾದವುಗಳೆಲ್ಲಾ ಸಬೂಬು ಮಾತ್ರ.

ಈ ಕಾರಣದಿಂದಾಗಿಯೇ ಇವತ್ತು ಅನುಚ್ಛೇದ 370 ಹಾಗೂ 35Aನ್ನು ರದ್ದು ಮಾಡಿದ ರೀತಿ ಪ್ರಶ್ನಾರ್ಹ. ರಾಜ್ಯದ ಮೂವರು ಮುಖ್ಯಮಂತ್ರಿಗಳು ಹಾಗೂ ಇತರ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿರಿಸಿ, ಮನೆಗೊಬ್ಬ್ರರಂತೆ ಸೈನಿಕರನ್ನು ನೇಮಿಸಿ, ಕರ್ಫ್ಯೂ ಹಾಕಿ, ಮಾಧ್ಯಮ, ಅಂತರ್ಜಾಲ, ಮೊಬೈಲ್ಗಳನ್ನು ನಿಷೇಧಿಸಿ, ತುರ್ತು ಪರಿಸ್ಥಿತಿಯನ್ನು ನಿರ್ಮಿಸಿ, ಲೋಕಸಭೆ, ರಾಜ್ಯಸಭೆಯಲ್ಲಿ ಚರ್ಚೆ ಕೂಡಾ ಮಾಡದೇ, ವಿರೋಧ ಪಕ್ಷಗಳನ್ನು ಗಣನೆಗೆ ತೆಗೆದುಕೊಳ್ಳದೆ ಇಂಥದೊಂದು ನಿರ್ಧಾರ ಕೈಗೊಂಡಿದ್ದಾರೆಂದರೆ ಅದರ ಹಿಂದಿನ ಉದ್ದೇಶಗಳೂ ಅನುಮಾನಸ್ಪದ ಹಾಗೂ ಪ್ರಶ್ನಾರ್ಹವೇ. ಇದನ್ನು ರದ್ದು ಮಾಡಲು ಜಮ್ಮು-ಕಾಶ್ಮೀರದ ವಿಧಾನಸಭೆಯ ಅನುಮತಿ ಕೂಡಾ ಅಗತ್ಯವೆಂದು ಸಂವಿಧಾನವೇ ಹೇಳಿದೆ. ಆದರೆ ರಾಜ್ಯ ಸರ್ಕಾರವನ್ನು ಮೊದಲೇ ಬರ್ಖಾಸ್ತುಗೊಳಿಸಿ, ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತಂದು, ಇವತ್ತು ರಾಜ್ಯಪಾಲರ ಪತ್ರವೇ ವಿಧಾನಸಭೆಯ ಅನುಮತಿಯೆಂದು ಹೇಳಿ, ಅನುಚ್ಛೇದ 370 ಹಾಗೂ 35Aನ್ನು ರದ್ದು ಮಾಡಿರುವ ನಿರ್ಧಾರ ಎಷ್ಟು ಸರಿ ಹಾಗೂ ಎಷ್ಟು ತಪ್ಪೆಂದು ಮುಂದಿನ ದಿನಗಳಲ್ಲಿ ಈ ದೇಶದ ಸಂವಿಧಾನವೇ ನಿರ್ಧರಿಸಲಿದೆ. ಅನುಚ್ಛೇದ 370 ಹಾಗೂ 35A ಇದ್ದರೆ ಅಥವಾ ರದ್ದಾದರೆ ಅದರ ಹೆಚ್ಚಿನ ಪರಿಣಾಮಗಳನ್ನು ಅನುಭವಿಸುವವರು, ಲಾಭವನ್ನು ಪಡೆಯುವವರು ಇಲ್ಲ ನಷ್ಟ ಅನುಭವಿಸುವವರು ಆ ರಾಜ್ಯದ ಜನರು. ಹಾಗಾಗಿ ಅನುಚ್ಛೇದ 370 ಹಾಗೂ 35A ರದ್ದು ಮಾಡುವ ಮೊದಲು ಅವರ ಜನಮತ ಸಂಗ್ರಹವಾಗಬೇಕಿತ್ತು. ಅದಾಗಲಿಲ್ಲ ಯಾಕೆಂದರೆ ಈ ನಿರ್ಧಾರ ಅಲ್ಲಿನ ಪ್ರಜೆಗಳ ಒಳಿತಿಗಲ್ಲ ಬದಲಾಗಿ ದೆಹಲಿಯಲ್ಲಿ ಸರ್ಕಾರ ನಡೆಸುವವರ ಹಾಗೂ ಅವರ ರಿಮೋಟ್ ಕಂಟ್ರೋಲ್ ಇಟ್ಟುಕೊಂಡಿರುವವರ ಒಳಿತಿಗಾಗಿ. ಇಂಥದೊಂದು Majoritarian Tyranny ಹಾಗೂ Brutal Force ಇಟ್ಟುಕೊಂಡು, ಅಲ್ಲಿನ ಜನರನ್ನು, ನಾಯಕರನ್ನು ಗನ್ಪಾಯಿಂಟ್ನಲ್ಲಿಟ್ಟುಕೊಂಡು ಅನುಚ್ಛೇದ 370 ಹಾಗೂ 35Aನ್ನು ಹಿಂದಿನ ಯಾವುದೇ ಸರ್ಕಾರನೂ ಮಾಡಬಹುದಿತ್ತು. ಅವರು ಮಾಡಲಿಲ್ಲ ಯಾಕೆಂದರೆ ಅದು ಅಸಾಂವಿಧಾನಿ ಅಷ್ಟೇ ಅಲ್ಲ ಪ್ರಜಾಪ್ರಭುತ್ವ ವಿರೋಧಿ ಕೂಡಾ. ಇವತ್ತು ನಾವು ಪ್ರಶ್ನಿಸಬೇಕಾಗಿರುವುದು ಅನುಚ್ಛೇದ 370 ಹಾಗೂ 35Aನ್ನು ರದ್ದು ಮಾಡಿರುವುದಲ್ಲ ಬದಲಾಗಿ ಅದನ್ನು ರದ್ದು ಮಾಡಿದ ಅಸಾಂವಿಧಾನಿಕ, ನಿರಂಕುಶ, ಸರ್ವಾಧಿಕಾರಿ ರೀತಿ.

ಯಾಕೆಂದರೆ ಇವತ್ತು ಜಮ್ಮು-ಕಾಶ್ಮೀರದಲ್ಲಾಗಿರುವುದು ನಾಳೆ ಕರ್ನಾಟಕದಲ್ಲೂ ಆಗಬಹುದು. ಕೇಂದ್ರ ಸರಕಾರ ತನಗೆ ಬೇಕಾದ ಯಾವುದೋ ಒಂದು ನಿರ್ಧಾರವನ್ನು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ರಾಜ್ಯ ಸರಕಾರವನ್ನು ಬರ್ಖಾಸ್ತುಗೊಳಿಸಿ, ತಮ್ಮದೇ ಕೈಗೊಂಬೆಯಾಗಿರುವ ರಾಜ್ಯಪಾಲರ ಅನುಮತಿ ಪಡೆದು, ರಾಷ್ಟ್ರಪತಿಯವರ ಅದೇಶದ ಮೂಲಕ ನಮ್ಮ ಮೇಲೆ ಹೇರಬಹುದು. ಇದೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ. ಆದರೆ ಇಂಥ ಪ್ರಶ್ನೆಗಳನ್ನು ಕೇಳುವವರೆಲ್ಲಾ ದೇಶದ್ರೋಹಿಗಳು, ಪಾಕೀಸ್ಥಾನಿಗಳು, ಜಿಹಾದಿಗಳೆಂದು ಮೊದಲೇ ಫರ್ಮಾನು ಹೊರಡಿಸಲಾಗಿರುವುದರಿಂದ, ಪ್ರಶ್ನೆ ಕೇಳುವವರೂ ತಡವರಿಸುವುದಂತೂ ಗ್ಯಾರಂಟಿ.

Almeida Gladson
(Facebook post)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.

ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.

ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.

ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

Published

on

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.

ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.

ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ

ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.

ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?

ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.

ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್‍ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.

ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ನಿಮ್ಮದು ದರೋಡೆಕೋರ ಸರಕಾರವಲ್ಲವೇ?

ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..

ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ3 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ4 days ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

ದಿನದ ಸುದ್ದಿ4 days ago

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

~ಗೋವರ್ಧನ ನವಿಲೇಹಾಳು ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ...

ದಿನದ ಸುದ್ದಿ5 days ago

ಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ‌ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ದಿನದ ಸುದ್ದಿ5 days ago

ಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ: ಜನರು ಹೆಚ್ಚಿನ ನಿರೀಕ್ಷೆಯೊಂದಿಗೆ ಮತದಾನಕ್ಕೆ ಸಜ್ಜಾಗಿದ್ದಾರೆ. ಅಪ್ಪಾಜಿ ಅವರು ಜಾತಿ, ಮತ, ಪಕ್ಷ ಮತ್ತು ಧರ್ಮ ಬೇಧವಿಲ್ಲದೆ ಎಲ್ಲರನ್ನು ಸಮಾನವಾಗಿ ನೋಡುತ್ತಿದ್ದ ಅಜಾತ ಶತ್ರುಗಳಾಗಿದ್ದರು. ಅದೇ...

ದಿನದ ಸುದ್ದಿ5 days ago

ಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು

–ಗೋವರ್ಧನ ನವಿಲೇಹಾಳು ಕರ್ನಾಟಕದ ರಾಜಕೀಯ ಆಖಾಡದಲ್ಲಿ ಏಪ್ರಿಲ್ 9, 2026ರಂದು ನಡೆಯುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗಳು ಕೇವಲ ಎರಡು ಸೀಟುಗಳ ಚುನಾವಣೆಯಲ್ಲ. ಇದು...

ದಿನದ ಸುದ್ದಿ2 weeks ago

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ...

ದಿನದ ಸುದ್ದಿ2 weeks ago

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...

ದಿನದ ಸುದ್ದಿ3 weeks ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

Trending