Connect with us

ದಿನದ ಸುದ್ದಿ

ಜಾನಪದ ಆಚರಣೆಗಳಲ್ಲಿ ವೈಜ್ಞಾನಿಕತೆ ಅಡಗಿದೆ : ಪ್ರೊ. ಮೋನಿಕಾ ರಂಜನ್

Published

on

ಸುದ್ದಿದಿನ,ಬಳ್ಳಾರಿ:ಜಾನಪದ ಆಚರಣೆಯಲ್ಲಿ ವೈಜ್ಞಾನಿಕ ಅಂಶಗಳು ಅಡಗಿದ್ದು, ಜನಪದ ಕಲೆಗಳು ಮನಸಿಗೆ ಮುದ ನೀಡುತ್ತವೆ ಎಂದು ಪ್ರಾಂಶುಪಾಲರಾದ ಪ್ರೊ.‌ಮೋನಿಕಾ ರಂಜನ್ ತಿಳಿಸಿದರು.

ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ’ ಜಾನಪದ ಉತ್ಸವ – 2025 ‘ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮಲ್ಲಿ ವೈವಿಧ್ಯಮಯವಾದ ಜನಪದ ಕಲೆಗಳಿವೆ. ಅವುಗಳನ್ನು ಉಳಿಸಿ ಬೆಳೆಸುವ ಕೆಲಸ ಎಲ್ಲರದಾಗಬೇಕೆಂದರು.ಜಾನಪದ ಸಾಹಿತ್ಯವು ಜನಸಾಮಾನ್ಯರ ನಿತ್ಯ ಬದುಕಿನ ದರ್ಶನವಾಗಿದೆ. ಅವರ ನೋವು, ನಲಿವು,ಜೀವನ ವಿಧಾನ,ಸಂಸ್ಕೃತಿ ಎಲ್ಲವೂ ಅದರಲ್ಲಿ ಮಿಳಿತವಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಸಾಹಿತಿ ಡಾ.ದಸ್ತಗೀರಸಾಬ್ ದಿನ್ನಿ ಆಧುನಿಕ ಜಗತ್ತಿನ ಭರಾಟೆಯಲ್ಲಿ ಜಾನಪದ ಸಾಹಿತ್ಯ, ಕಲೆಗಳು ಇಂದು ನಶಿಸುತ್ತಿವೆ.ಯುವ ಮನಸ್ಸುಗಳಲ್ಲಿ ಜಾನಪದ ಸಾಹಿತ್ಯದ ಬಗೆಗೆ ಅರಿವನ್ನು, ಕಲೆಗಳ ಬಗೆಗೆ ಪ್ರೀತಿಯನ್ನು ಹುಟ್ಟಿಸುವುದು. ಮುಂದಿನ ತಲೆಮಾರಿಗಾಗಿ ಇದನ್ನು ದಾಟಿಸುವುದ ಈ ಕಾರ್ಯಕ್ರಮದ ಮೂಲ ಉದ್ದೇವಾಗಿದೆ ಎಂದರು.

ವಿಶೇಷ ಉಪನ್ಯಾಸ ನೀಡಿದ ಸಹಾಯಕ ಪ್ರಾಧ್ಯಾಪಕ ರಾಮಸ್ವಾಮಿ, ಜಾನಪದ ಸಾಹಿತ್ಯವು ಮಾನವೀಯ ಮೌಲ್ಯ, ನೀತಿ, ಆದರ್ಶ ಮುಂತಾದ ಗುಣಗಳನ್ನು ಕಟ್ಟಿಕೊಡುತ್ತದೆ. ಬಹಳ ಮುಖ್ಯವಾಗಿ ಜಾನಪದ ಆಟಗಳಿಂದ ಜನರಿಗೆ ಸಂತೋಷವಾಗುವುದರೊಂದಿಗೆ ದೈಹಿಕ ಶ್ರಮ ಕೂಡ ಆಗುತ್ತಿತ್ತು ಎಂದರು.

ವೇದಿಕೆ ಮೇಲೆ ಹಿರಿಯ ಸಹ ಪ್ರಾಧ್ಯಾಪಕ, ಜಾನಪದ ಉತ್ಸವ ಸಮಿತಿಯ ಸಂಚಾಲಕರಾದ ಡಾ. ಸಿ. ಎಚ್. ಸೋಮನಾಥ್, ಅಧ್ಯಾಪಕರಾದ ಡಾ. ಮಂಜುನಾಥ್, ಜಯಶ್ರೀ,
ಡಾ.ಪಂಚಾಕ್ಷರಿ, ಪಂಪನಗೌಡ, ಡಾ. ಗುರುಬಸಪ್ಪ, ಗ್ರಂಥಪಾಲಕ ಪ್ರಶಾಂತ, ಡಾ. ಟಿ. ದುರುಗಪ್ಪ, ಡಾ. ಕನ್ಯಾಕುಮಾರಿ, ಡಾ. ಪಲ್ಲವಿ, ಅಧೀಕ್ಷಕ ಯುವರಾಜ ನಾಯ್ಕ ಇದ್ದರು.

ಮೆರವಣಿಗೆ

ಜಾನಪದ ಮೆರವಣಿಗೆ ಕಾಲೇಜಿನಿಂದ ಆರಂಭವಾಗಿ ಸಂಗಮ್ ಚೌಕಿನವರೆಗೆ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳ ವೀರಗಾಸೆ, ಲಂಬಾಣಿ ನೃತ್ಯ,ಡೊಳ್ಳು ಕುಣಿತ,ಕಂಸಾಳೆ, ಕೋಲಾಟ, ಬಯಲಾಟ, ಮಣಿಪುರಿ ನೃತ್ಯ, ಯಕ್ಷಗಾನ ಕಲಾತಂಡದವರು ಮೆರವಣಿಗೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು. ನಂತರ ವೇದಿಕೆಯಲ್ಲಿ ವೈವಿಧ್ಯಮಯವಾದ ಕಲಾ ಪ್ರದರ್ಶನಗಳು ಗಮನ ಸೆಳೆದವು.

ದೇಸಿ ಅಡುಗೆ

ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಸಪ್ಪ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ದೇಸಿ ಅಡುಗೆ ಅಧ್ಯಾಪಕರು, ಅತಿಥಿಗಳು, ವಿದ್ಯಾರ್ಥಿಗಳ ಪಾಲಕರು, ಭೋದಕರೇತ ಸಿಬ್ಬಂದಿಗಳ ಒಡಲು ತಣಿಸಿತು.
ವಿದ್ಯಾರ್ಥಿಗಳೊಂದಿಗೆ ಅಧ್ಯಾಪಕರು ಹೆಜ್ಜೆ ಹಾಕಿ ಸಂಭ್ರಮಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಆರು ಮಂದಿ ಬಂಧನ

Published

on

ಸುದ್ದಿದಿನ,ದಾವಣಗೆರೆ: ಚನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ವಿವಾಹೇತರ ಸಂಬಂಧದ ಆರೋಪದ ಮೇಲೆ ಜಾಮಿಯಾ ಮಸೀದಿಯ ಹೊರಗೆ ಮುಸ್ಲಿಂ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಬಂಧಿತರನ್ನು ಮೊಹಮ್ಮದ್ ನಯಾಜ್ (32), ಮೊಹಮ್ಮದ್ ಗೌಸ್ ಪೀರ್ (45), ಚಾಂದ್ ಬಾಷಾ (35), ಇನಾಯತ್ ಉಲ್ಲಾ (51), ದಸ್ತಗೀರ್ (24), ಮತ್ತು ರಸೂಲ್ ಟಿಆರ್ (42) ಎಂದು ಗುರುತಿಸಲಾಗಿದೆ. ಅವರು ತಾವರೆಕೆರೆ ಗ್ರಾಮದಲ್ಲಿ ಸಣ್ಣ ಅಂಗಡಿಗಳನ್ನು ನಡೆಸುತ್ತಿದ್ದರು.

ಈ ಜನರು ಜಮೀಲ್ ಅಹ್ಮದ್ ಅವರ ಪತ್ನಿ ಶಬೀನಾ ಬಾನು ಅವರ ಮೇಲೆ ವಿವಾಹೇತರ ಸಂಬಂಧದ ಆರೋಪದ ಮೇಲೆ ಹಲ್ಲೆ ನಡೆಸಿದರು. ಏಪ್ರಿಲ್ 7 ರಂದು ಶಬೀನಾ ಬಾನು (38) ತನ್ನ ಮಕ್ಕಳು ಮತ್ತು ಸ್ನೇಹಿತೆ ನಸ್ರೀನ್ ಜೊತೆ ಒಂದು ಸಣ್ಣ ಬೆಟ್ಟಕ್ಕೆ ಹೋಗಿ ಅದೇ ದಿನ ಮನೆಗೆ ಮರಳಿದ್ದರು ಎಂದು ಹೇಳಲಾಗುತ್ತದೆ. ವೈದ್ಯರ ನಿರ್ದೇಶನದಂತೆ ಮಾತ್ರೆ ತೆಗೆದುಕೊಂಡು ಮಲಗಿದ್ದರು.

ಈ ಮಧ್ಯೆ, ಆಕೆಯ ಸ್ನೇಹಿತೆ ನಸ್ರೀನ್, ತಾನು ಮನೆಗೆ ಹೋಗುವುದಾಗಿ ಹೇಳಿದ್ದರೂ, ಯಾವುದೋ ಕಾರಣಕ್ಕೆ ಅಲ್ಲಿಯೇ ಉಳಿದಳು. ನಂತರ, ನಸ್ರೀನ್ ಸಂಬಂಧಿ ಫ್ಜಯಾಜ್ ಎಂಬ ವ್ಯಕ್ತಿ ಶಬೀನಾ ಬಾನು ನಿವಾಸಕ್ಕೆ ಬಂದ. ಜಮೀಲ್ ತನ್ನ ಮನೆಗೆ ಬಂದು ನಸ್ರೀನ್ ಮತ್ತು ಫಯಾಜ್ ರನ್ನು ನೋಡಿದಾಗ, ತನ್ನ ಹೆಂಡತಿಗೆ ವಿವಾಹೇತರ ಸಂಬಂಧವಿದೆ ಎಂದು ಅನುಮಾನಿಸಿದನು. ನಂತರ, ಅವರು ಮಸೀದಿಯಲ್ಲಿ ಧಾರ್ಮಿಕ ಮುಖಂಡರಿಗೆ ದೂರು ನೀಡಿದರು. ಶಬೀನಾ ಬಾನು ಮತ್ತು ಅವರ ಸ್ನೇಹಿತೆ ನಸ್ರೀನ್ ಮತ್ತು ಅವರ ಸಂಬಂಧಿ ಫಯಾಜ್ ಅವರನ್ನು ಏಪ್ರಿಲ್ 9 ರಂದು ತಾವರೆಕೆರೆ ಮಸೀದಿಯೊಳಗೆ ಕರೆದೊಯ್ಯಲಾಯಿತು. ಅಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಯಿತು. ಎ.11 ರಂದು ಠಾಣೆಗೆ ಬಂದು ಮಹಿಳೆ ದೂರು ನೀಡಿದ್ದರು. ಈ ಸಂಬಂಧ ವಿಡಿಯೋ ಭಾರೀ ವೈರಲ್ ಆಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ

Published

on

  • ಗಿರೀಶ್ ಕುಮಾರ್ ಗೌಡ,ಬಳ್ಳಾರಿ

ಸುದ್ದಿದಿನಡೆಸ್ಕ್:ಗೇಟ್ ಗೆ ಡಿಕ್ಕಿ ಹೊಡೆದು ಟನ್ ಗಟ್ಟಲೇ ಹೆಚ್ಚಿನ ಕಬ್ಬಿಣ ಬಿಸಾಕಿ ಓಡಿ ಹೋಗಿದ್ದಾರೆ ಪ್ರಭಾವಿ ರಾಜಕೀಯ ನಾಯಕನ ಹಿಂಬಾಲಕರು ಎನ್ನುವ ಮಾಹಿತಿ ಲಭ್ಯವಾಗಿದೆ.

ಬಳ್ಳಾರಿ ಜಿಲ್ಲೆಯ ಬಳ್ಳಾರಿ ತಾಲೂಕಿನ ಡಿಸಿ ನಗರದ ಹತ್ತಿರ ತುಂಗಭದ್ರಾ ಬೋರ್ಡ್ ಗೆ ಸಂಭಂದಿಸಿದ ಸೇತುವೆ ನಿರ್ಮಾಣ ಮಾಡಲು ಕಬ್ಬಿಣ ಹಾಕಿದ್ದರೆ ಅದನ್ನು ರಾತ್ರೋರಾತ್ರಿ ಕಳ್ಳತನ ಮಾಡಿದ ದುರ್ಘಟನ ನಡೆದಿತ್ತು. ಆದರೆ ಭಾನುವಾರ ಬೆಳಿಗ್ಗೆಯಿಂದ ಸಂಜೆವರೆಗೆ ಠಾಣೆಯ ಮುಂದೆ ಅಧಿಕಾರಿಗಳು ಕೇಸ್ ಮಾಡಲು ಸಿದ್ದರಾಗಿದ್ದರು, ಆದರೆ ಈ ಕಬ್ಬಿಣವನ್ನು ಪ್ರಭಾವಿ ರಾಜಕೀಯ ಹಿಂಬಾಲಕರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ವಿಚಾರ ಸುದ್ದಿಯಾಗುತ್ತೇ ರಾತ್ರೋರಾತ್ರಿ ಕಳ್ಳತನ ಮಾಡಿದ ವ್ಯಕ್ತಿ ವಾಟರ್ ಹೌಸ್ ನಲ್ಲಿ ಹಾಕಿ ಓಡಿ
ಹೋಗಿದ್ದಾರೆ.

ಮಹಾದೇವತತಾನ ಮಠದ ಎದುರುಗಡೆ ಇರುವ ವಾಟರ್ ಹೌಸ್ ನಲ್ಲಿ ರಾತ್ರಿ 1 ಗಂಟೆ 22 ನಿಮಿಷಕ್ಕೆ ಒಂದು ಲಾರಿ ಮತ್ತು ಕ್ರೇನ್ ಉಪಯೋಗಿ ಕೊಂಡು 10 ರಿಂದ 15 ನಿಮಿಷದ ಒಳಗೆ ಉಳಿಸಿ ಪರಾಯಿಯಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯ ಸಿಬ್ಬಂದಿಗಳು ತಿಳಿಸಿದ್ದಾರೆ.

ಇನ್ನು ಈ ಕಬ್ಬಿಣ ಹಾಕಲು ಬಂದವರಲ್ಲಿ ಈ ವ್ಯಕ್ತಿಗಳು ಮೈಮೇಲೆ ದಪ್ಪ ದಪ್ಪ ಬಂಗಾರದ ಆಭರಣಗಳನ್ನು ಹಾಕಿಕೊಂಡು ಕಾರುಗಳಲ್ಲಿ ಬಂದಿದ್ದಾರೆ. ಅಧಿಕಾರಿಗಳು ಹೇಳಿದ್ದಾರೆ ಯಾವ ಅಧಿಕಾರಿ ? ಎನ್ನುವ ಮಾಹಿತಿಯನ್ನು ಇಲ್ಲಿಯ ಸಿಬ್ಬಂದಿಗೆ ನೀಡದೇ ಕಾಲು ಕಿತ್ತಿದ್ದಾರೆ. ಈ ಲಾರಿ ಹಾಗೂ ಕ್ರೇನ್ ಬಂದಿರುವುದು ಮಹಾದೇವ ತಾತನ ಮಠದ ಹೊರಗಡೆ ಇರುವ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಅದರಲ್ಲಿ ತುಂಗಭದ್ರಾ ಬೋರ್ಡ್ ನಲ್ಲಿ ಕಳ್ಳತನ ಮಾಡಿದ ಕಬ್ಬಿಣವನ್ನು ಭಯದ ವಾತಾವರಣದಲ್ಲಿ ವಾಟರ್ ಬೋಸ್ಟ್ ನಲ್ಲಿ ಹಾಕು ಓಡಿಹೋಗಿದ್ದಾರೆ.

ವಾಟರ್ ಬೂಸ್ಟ್ ನ ಗೇಟ್ ಗೆ ಡಿಕ್ಕಿ ಹೊಡೆದು ಗೇಟ್ ಮುರಿದು ಮೂರು ತಾಸುಗಳಲ್ಲಿ ಇಳಿಸಬೇಕಾದ ಕಬ್ಬಿಣ ಬರಿ 10 ರಿಂದ 15 ನಿಮಿಷದಲ್ಲಿ ಬಿಸಾಕಿ ಓಡಿಹೋಗಿದ್ದಾರೆ. ಇನ್ನು ತುಂಗಭದ್ರಾ ಬೋರ್ಡ್ ಸಿಬ್ಬಂದಿಗೆ ಕೇಳಿದ್ರೇ ಇಲ್ಲ ನನಗೆ ಏನು ? ಗೊತ್ತಿಲ್ಲ ನಮ್ಮ ಅಧಿಕಾರಿ ಕೆಂಚಪ್ಪ ಕಬ್ಬಿಣ ಕಳ್ಳತನ ಅವರಿಗೆ ಗೊತ್ತಿದೆ ಎನ್ನುವ ಮಾಹಿತಿ ನೀಡಿದರು. ಆದರೆ ಕಬ್ಬಿಣಕ್ಕೆ ತುಂಗಭದ್ರಾ ಬೋರ್ಡ್ ಎನ್ನುವ ಬರಹವನ್ನು ಹಳದಿ ಬಣ್ಣದಿಂದ ಬರದ ವ್ಯಕ್ತಿ ನಾನು ಎಂದರು.

ಭರತ್ ರೆಡ್ಡಿ ಆಪ್ತ ಸಿಂಧನೂರಿನ ಶಶಿ

ಕಾಂಗ್ರೇಸ್ ಮುಖಂಡ ಶಶಿ ಎನ್ನುವ ವ್ಯಕ್ತಿ ಕಾಂಗ್ರೆಸ್ ಪಕ್ಷದ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗ ಎನ್ನುವ ಅಂಶ ದೊರೆತಿದೆ. ಇನ್ನು ಈ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸರ್ಕಾರ ನೀಡುವ ಅನ್ನ ಭಾಗ್ಯದ ಸಾರ್ವಜನಿಕರಿಗೆ ಉಚಿತವಾಗಿ ನೀಡಿದರೇ, ಶಶಿ ಎನ್ನುವ ಕಾಂಗ್ರೇಸ್ ಮುಖಂಡ ಶಶಿ ಅಕ್ಕಿ ದಂದೆಯಲ್ಲಿ ನಿಂತು ಶಾಸಕ ಹೆಸರು ಹೇಳಿಕೊಂಡು ಹಗಲು ದರೋಡೆ ಮಾಡುತ್ತಿದ್ದಾನೆ.

ಪೊಲೀಸ್ ಇಲಾಖೆ ಮತ್ತು ಆಹಾರ ಇಲಾಖೆ ಏಕೆ ? ಮೌನರಾಗಿದ್ದಾರೆ ಅವರಿಗೆ ಶಾಸಕರ ಒತ್ತಡ ಇದೆಯೇ ?
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸಹಾಯಕ ‘ಲಕ್ಷ್ಮೀ ನಾರಾಯಣ ಶಾಸ್ತ್ರಿ’ ಸಹ ಈ ಕಬ್ಬಿಣ ಕಳ್ಳತನ ವ್ಯವಹಾರದಲ್ಲಿ ಭಾಗಿಯಾಗಿ ಶಶಿ ಎನ್ನುವ ಮುಖಂಡನಿಗೆ ಸಹಕಾರ ನೀಡುತ್ತಿದ್ದಾನೆ. ರಾತ್ರೋರಾತ್ರಿ ಕಬ್ಬಿಣವನ್ನು ಬಿಸಾಡಲು ಸಹ ಸಹಕಾರ ನೀಡಿದ್ದಾನೆ. ಇನ್ನು ಈ ವಿಚಾರವಾಗಿ ‘ಸುದ್ದಿದಿನ’ ವೆಬ್ ನಲ್ಲಿ ವಿಶೇಷ ವರದಿಗಾರರು ದೂರವಾಣಿ ಮೂಲಕ ಕರೆ ಮಾಡಿದ್ರೇ ಅವರು ಸ್ವೀಕರಿಸಲಿಲ್ಲ.

ಇನ್ನು ಗ್ಯಾಸ್ ವೆಲ್ಡರ್ ಬಶೀರ್ ನನ್ನು ನಾರಾ ಭರತ್ ರೆಡ್ಡಿ ಆಪ್ತ ಕಾಂಗ್ರೇಸ್ ಯುವ ಮುಖಂಡ ಕೊಳಗಲ್ಲು ಧರ್ಮರೆಡ್ಡಿ ಗ್ರಾಮೀಣ ಠಾಣೆಗೆ ಬಂದು ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದ್ದಾರೆ ಅವರನ್ನು ಬಿಟ್ಟು ಕಳಿಸಿ ಎನ್ನುವ ಮಾಹಿತಿಯ ಪೊಲೀಸ್ ಠಾಣೆಯ ಎಸ್.ಬಿ ( spacial Branch) ಅವರ ಮೂಲಕ ಹೋಗಿದ್ದಾರೆ. ಇನ್ನು ಪೋಲೀಸರು ಧರ್ಮರೆಡ್ಡಿ ಮತ್ತು ಬಶೀರ್ ಇಬ್ಬರು ನಿಲ್ಲಿಸಿ ಪೋಟೊ ತೆಗೆಸಿ ಪತ್ರ ಬರೆಸಿಕೊಂಡು,ಸಹಿ ಮಾಡಿಸಿ ಕಳಿಸಿದ್ದಾರೆ.

ಇನ್ನು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರ ಅವರು ತುಂಗಭದ್ರಾ ಬೋರ್ಡ್ ಅಧಿಕಾರಿ ಕೆಂಚಪ್ಪ ಹಾಗೂ ಸರ್ಕಾರಿ ಪಿಎ ಲಕ್ಷ್ಮೀ ನಾರಾಯಣಶಾಸ್ತ್ರಿ ವಿರುದ್ಧ ಯಾವ ? ರೀತಿಯ ಕ್ರಮ ತೆಗದುಕೊಳ್ಳುತ್ತಾರೋ ಕಾದು ನೋಡಬೇಕಿದೆ.

ಒಟ್ಟಾರೆಯಾಗಿ “ಸುದ್ದಿದಿನ” ವೆಬ್ ಪ್ರಕಟಿಸಿ ವರದಿಗೆ ಫಲಶೃತಿ ದೊರೆತಿದೆ. ಇನ್ನು ಈ ರಾಜಕೀಯ ವ್ಯಕ್ತಿಯ ಬೆಂಬಲಿಗರು ಯಾರು ? ಅವರ ವಿರುದ್ಧ ಕೇಸ್ ಮಾಡುತ್ತಾರೋ ಇಲ್ಲವೋ ಎನ್ನುವ ಅಂಶ ಪೊಲೀಸ್ ಇಲಾಖೆ ಉತ್ತರಿಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಕ್ಫ್ ತಿದ್ದುಪಡಿ ಕಾಯ್ದೆ- 2025 | ಇಂದು ಸುಪ್ರೀಂ ವಿಚಾರಣೆ

Published

on

ಸುದ್ದಿದಿನಡೆಸ್ಕ್:ವಕ್ಫ್ ತಿದ್ದುಪಡಿ ಕಾಯ್ದೆ- 2025 ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪಟ್ಟಿಯ ಪ್ರಕಾರ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ.ವಿಶ್ವನಾಥನ್ ಅವರೊನ್ನೊಳಗೊಂಡ ನ್ಯಾಯಪೀಠ, ಇಂದು ಈ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಿದ್ದಾರೆ ಎಂದು ಐಎಎನ್‌ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ. 1995ರ ವಕ್ಫ್ ಕಾಯ್ದೆಯಲ್ಲಿ ಇತ್ತೀಚೆಗೆ ಪರಿಚಯಿಸಲಾದ ತಿದ್ದುಪಡಿಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ಗೆ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ.

ಸಂಸತ್ತು ಜಾರಿಗೆ ತಂದ ವಕ್ಫ್ ತಿದ್ದುಪಡಿ ಕಾಯ್ದೆಯ ಕುರಿತು ಪಾಕಿಸ್ತಾನ ಮಾಡಿದ ಪ್ರೇರಿತ ಮತ್ತು ಆಧಾರರಹಿತ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ವಕ್ಫ್ ಮಸೂದೆಯ ಕುರಿತು ಪಾಕಿಸ್ತಾನ ಹೊರ ಹಾಕಿರುವ ಅಭಿಪ್ರಾಯಗಳ ಕುರಿತು ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಭಾರತದ ಆಂತರಿಕ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಯಾವುದೇ ಅರ್ಹತೆ ಇಲ್ಲ. ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಷಯದಲ್ಲಿ ಪಾಕಿಸ್ತಾನವು ಇತರರಿಗೆ ಉಪದೇಶಿಸುವ ಬದಲು ತನ್ನ ಪ್ರದೇಶದ ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸುವುದು ಉತ್ತಮ ಎಂದು ಅವರು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending