ದಿನದ ಸುದ್ದಿ
ಹಿ.ಚಿ ಸಂಭ್ರಮದಲ್ಲಿ ನೆಲಮೂಲ ಸಂಸ್ಕೃತಿಯ ಪ್ರತಿಬಿಂಬದ ಪ್ರತಿನಿಧಿಗಳಿಗೆ ಜನಪದ ರಾಜ್ಯೋತ್ಸವ ಪ್ರಶಸ್ತಿ : ಜನಪದ ಸಿರಿಯ ಜರಗನಹಳ್ಳಿ ಕಾಂತರಾಜು
ಸುದ್ದಿದಿನ,ಬೆಂಗಳೂರು: ಕರ್ನಾಟಕದ ಬುಡಕಟ್ಟು ಜಾನಪದ ಅಧ್ಯಯನ, ಸಂಶೋಧನೆ, ಉಳಿವುಗಾಗಿ ಬದುಕನ್ನೇ ಮುಡಿಪಿಟ್ಟ ನಾಡಿನ ಖ್ಯಾತ ವಿದ್ವಾಂಸ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭ ಮತ್ತು ಬುಡಕಟ್ಟು ಕಲೆಗಳನ್ನು ಆ ವೇದಿಕೆಗೆ ಕರೆತಂದು ಪ್ರಚಾರ ಮತ್ತು ನಾಡಿನ ಮುಖ್ಯವಾಹಿನಿಗೆ ಅವರೆಲ್ಲರನ್ನೂ ಪರಿಚಯ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡು ವಿಶೇಷವಾದ ಹಿ.ಚಿ ಹಬ್ಬ ಅಥವಾ ಹಿ.ಚಿ ಸಂಭ್ರಮ ಬುಡಕಟ್ಟು ಜಾನಪದ ಸಂಪತ್ತಿಗೆ 70 ವರ್ಷ ಎಂಬ ಧ್ಯೇಯವಿಟ್ಟುಕೊಂಡು ಮಡಿಕೇರಿ ತಾಲೂಕು ಕುಶಾಲನಗರದ ವೀರಭೂಮಿ ಜಾನಪದ ಗ್ರಾಮದಲ್ಲಿ ನವೆಂಬರ್ 09 ರಂದು ಕನ್ನಡದ ಪ್ರಖ್ಯಾತ ದೇಸಿ ವಾಹಿನಿ ಜನಪದ ಸಿರಿ ಕಾರ್ಯಕ್ರಮವನ್ನು ಆಯೋಜಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡತಕ್ಕಂತಹ ರಾಜ್ಯೋತ್ಸವ ಪ್ರಶಸ್ತಿ ಅದರ ಅಂಗಸಂಸ್ಥೆಯಾದಂತಹ ಕರ್ನಾಟಕ ಜಾನಪದ ಅಕಾಡೆಮಿಗೆ ಸಂಬಂಧಪಟ್ಟಂತಹ ನೈಜ ಕಲಾವಿದರಿಗೆ ಹೆಚ್ಚು ಸೇರದೇ ಇರುತ್ತಿರುವುದು ದುರಾದೃಷ್ಟಕರ ಸಂಗತಿ. ರಾಜ್ಯದಲ್ಲಿ ಇದುವರೆಗೂ ಯಾರು ಕೂಡ ಜಾನಪದ ಕಲಾವಿದರಿಗೆ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಕೊಡತಕ್ಕಂತಹ ಮನಸ್ಥಿತಿ, ಧೈರ್ಯ, ಸಾಹಸ ಮಾಡಿರಲಿಲ್ಲ.
ಜನಪದ ಸಿರಿ ಕಾಂತರಾಜು ಜನಪದ ಕಲಾವಿದರು ಅನ್ಯಾಯ, ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದನ್ನು ಮನಗಂಡು ಈ ರೀತಿ ಮುಂಚೂಣಿಯಾಗಿ ಕಲಾವಿದರನ್ನು ಮುನ್ನೆಲೆಗೆ ತರಬೇಕೆಂದು ಸಿಕ್ಕ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಕಲಾವಿದರಿಗೆ ಅನುಕೂಲವಾಗುವ ಕೆಲಸವನ್ನು ಮಾಡುತ್ತಿದ್ದಾರೆ. ಅದರಲ್ಲೂ ಮೂಲ ಜನಪದ ಕಲಾವಿದರಿಗೆ ಗೌರವ ಸಲ್ಲಬೇಕೆಂಬ ಆಶಯವನ್ನಿಟ್ಟುಕೊಂಡು ಈ ವರ್ಷದಿಂದ ಕೊಡಮಾಡಲ್ಪಡುತ್ತಿರುವ ಜಾನಪದ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಡಲು ಮುಂದಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಹತ್ತು ಬುಡಕಟ್ಟು ಜನಾಂಗದ ಜನಪದ ಕಲಾತಂಡಗಳಿಗೆ ಕೊಡುತ್ತಿರುವುದು ಶ್ಲಾಘನೀಯ ಕಾರ್ಯ ಹಾಗೂ ಇನ್ನೂ ಹತ್ತು ಆಯ್ದ ಕಲಾವಿದರಿಗೆ ಪ್ರಶಸ್ತಿ ಕೊಡುತ್ತಿರುವುದು ಮಾದರಿಯ ಕೆಲಸ ಎನ್ನಬಹುದು.
“ಮೂಲ ಜಾನಪದವನ್ನು ಉಳಿಸುತ್ತಾ, ಬೆಳೆಸುತ್ತಾ ಬರುತ್ತಿರುವಂತಹ ಬುಡಕಟ್ಟು, ಅಲೆಮಾರಿ ಸಮುದಾಯಗಳ ಜಾನಪದ ಕಲಾವಿದರಿಗೆ, ತಂಡಗಳಿಗೆ ಅತಿ ಹೆಚ್ಚಿನ ಪ್ರಶಸ್ತಿಗಳು ಈ ಬಾರಿ ಲಭಿಸುತ್ತಿರುವುದು ಖುಷಿಯ ಸಂಗತಿ. “ಒಬ್ಬ ಜನಪದ ಕಲಾವಿದ, ಬರೀ ಜಾನಪದ ಕಲಾವಿದ ಅಲ್ಲ; ನಮ್ಮ ಸಂಸ್ಕೃತಿಯ ಮೂಲ ಆಶಯಗಳ ಪ್ರತಿಬಿಂಬ” ಹಾಗಾಗಿ ಈ ತರಹದ ವಿಷಯಗಳನ್ನು ಜನರಿಗೆ ಮುಟ್ಟಿಸುವ ಅವಶ್ಯಕತೆ ಹೆಚ್ಚು ಇದೆ ಎಂದು ಜನಪದರ ಗಟ್ಟಿಧ್ವನಿ ಜರಗನಹಳ್ಳಿ ಕಾಂತರಾಜು ತಿಳಿಸಿದರು.
ಜನಪದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು-2024
1. ಶ್ರೀ ಪುರುಷೋತ್ತಮ ಗೌಡ (ಹಾಲಕ್ಕಿ ಒಕ್ಕಲಿಗ ಸಮುದಾಯ)
2. ಶ್ರೀ ದೊಂಡು ಪಾಟೀಲ್ ಧನಗರ್ ಗೌಳಿ (ಗೌಳಿ ಸಮುದಾಯ)
3. ಶ್ರೀ ನಾಗರಾಜ ದುರ್ಗಯ್ಯ ಗೊಂಡ (ಗೊಂಡ ಸಮುದಾಯ
4. ಶ್ರೀಮತಿ ಶಾರದ ಕುಡಿಯ (ಕುಡಿಯ ಸಮುದಾಯ)
5. ಶ್ರೀಮತಿ ಲಿಲ್ಲಿ ಜಾಕಿ ಸಿದ್ಧಿ (ಸಿದ್ಧಿ ಸಮುದಾಯ)
6. ಶ್ರೀ ಬಸವರಾಜ್ ಸೋಲಿಗ (ಸೋಲಿಗ ಸಮುದಾಯ)
7. ಶ್ರೀ ಜೆ. ಕೆ ರಾಮು (ಜೇನು ಕುರುಬ ಸಮುದಾಯ)
8. ಶ್ರೀ ಚಂದ್ರ ನಾಯಕ್ ಕುಡುಬಿ (ಕುಡುಬಿ ಸಮುದಾಯ)
9. ಶ್ರೀ ಮಂಜುನಾಥ್ ಸಿ. ಕೆಂಗಲ್ ಹಟ್ಟಿ (ಕಾಡುಗೊಲ್ಲ ಸಮುದಾಯ)
10. ಶ್ರೀಮತಿ ಜ್ಯೋತಿ. ಎನ್ (ಬಂಜಾರ ಸಮುದಾಯ)
11. ಶ್ರೀ ಆರ್. ಮಹೇಂದ್ರ (ಜಾನಪದ ಗಾಯಕರು)
12. ಶ್ರೀ ಆರ್. ರವಿಕುಮಾರ್ (ಜಾನಪದ ಶೈಲಿಯ ಗೀತ ರಚನೆಕಾರರು)
13. ಡಾ. ಪ್ರದೀಪ್ ಕುಮಾರ್ ಎಂ (ಜಾನಪದ ಸಾಹಿತ್ಯ:ಮಹಾಕಾವ್ಯಗಳ ಅಧ್ಯಯನ)
14. ಶ್ರೀ ಏಕದಾರಿ ಕೆ.ಎಂ ರಾಮಯ್ಯ (ಕಂಚಿನ ಕಂಠದ ಜಾನಪದ ಗಾಯಕರು)
15. ಶ್ರೀ ರಾಚಯ್ಯ (ತತ್ವಪದ ಗಾಯಕರು)
16. ಶ್ರೀ ಶಂಕರ್ ದಾಸ್ ಚಂಡ್ಕಳ (ಜಾನಪದ ಕಲಾವಿದರು)
17. ಶ್ರೀ ಕೃಷ್ಣೇಗೌಡ (ಸೋಬಾನೆ ಕಲಾವಿದರು)
18. ಶ್ರೀಮತಿ ಶಾಂತಾ ಹೆಗ್ಗೋಡು (ಡೊಳ್ಳು ಕಲಾವಿದರು)
19. ಶ್ರೀಮತಿ ಬುರ್ರಕಥಾ ಕಮಲಮ್ಮ (ಬುರ್ರಕಥೆ ಕಲಾವಿದರು)
20. ಶ್ರೀ ಮಹೇಶ್ (ಕಂಸಾಳೆ ಕಲಾವಿದರು)
21. ಶ್ರೀ ಪಿ. ಸೋಮು (ಖ್ಯಾತ ಜಾನಪದ ಸಮರ ಕಲೆ ಕಲಾವಿದರು, ಮೈಸೂರು)
22. ಡಾ. ಕೆ.ಪಿ ದೇವರಾಜ್ (ಪೂಜಾ ಕುಣಿತ ಕಲಾವಿದರು)
23. ಶ್ರೀ ಕೆ. ಬಿ ಸ್ವಾಮಿ (ಪೂಜಾ ಕುಣಿತ ಕಲಾವಿದರು)
24. ಚೇತನ್ ರಾಜ್ ಓ (ರಂಗಭೂಮಿ ಮತ್ತು ಜಾನಪದ ಕಲಾವಿದ)
25. ಶ್ರೀ ಅಖಿಲೇಶ್ ಎಚ್.ಕೆ (ಪಟ ಕುಣಿತ ಕಲಾವಿದರು)
26. ಶ್ರೀ ರುದ್ರೇಶ್ವರಯ್ಯ ಎಚ್. ಬಿ (ವೀರಭದ್ರ ಕುಣಿತ ಕಲಾವಿದರು)
27. ಶ್ರೀ ಕಿರಣ್ ಗಿರ್ಗಿ (ಖ್ಯಾತ ರಂಗನಿರ್ದೇಶಕರು, ರಂಗ ನಟರು)
28. ಶ್ರೀ ಹೆಚ್. ಆರ್ ನಾಗೇಂದ್ರ (ಜಾನಪದ ಕಲೆಗಳ ಪರಿಚಾರಕರು)
29. ಶ್ರೀಮತಿ ನಾಗರತ್ನ ಎಸ್. ಹಿರೇಮಠ (ಯೋಗ ಸಾಧಕಿ, ಬೆಂಗಳೂರು)
ಮುಖ್ಯ ಅತಿಥಿಗಳಾಗಿ ಡಾ. ಎಸ್.ವಿ ಸುರೇಶ್ ಕುಲಪತಿಗಳು ಕೃಷಿ ವಿಶ್ವವಿದ್ಯಾಲಯ ಬೆಂಗಳೂರು, ಪ್ರೊ. ಟಿ.ಎಂ ಭಾಸ್ಕರ ಕುಲಪತಿಗಳು ಜಾನಪದ ವಿಶ್ವವಿದ್ಯಾಲಯ ಹಾವೇರಿ, ಪ್ರೊ. ನಾಗೇಶ್ ವಿ ಬೆಟ್ಟಕೋಟೆ ಕುಲಪತಿಗಳು ಡಾ. ಗಂಗುಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ಮೈಸೂರು, ಶ್ರೀ ಗೊಲ್ಲಹಳ್ಳಿ ಪ್ರಸಾದ್ ಅಧ್ಯಕ್ಷರು ಜಾನಪದ ಅಕಾಡೆಮಿ, ಡಾ. ಎ.ಆರ್ ಗೋವಿಂದಸ್ವಾಮಿ ಅಧ್ಯಕ್ಷರು ಬಂಜಾರ ಅಕಾಡೆಮಿ, ಡಾ. ಕಾಳೇಗೌಡ ನಾಗವಾರ, ಜನಾರ್ಧನ ಜನ್ನಿ, ಡಾ. ಕುರುವ ಬಸವರಾಜ್, ಪದ್ಮಶ್ರೀ ಡಾ. ರಾಣಿ ಮಾಚಯ್ಯ, ಶ್ರೀ ಎಂ. ಪ್ರಕಾಶಮೂರ್ತಿ ಕಸಾಪ ಅಧ್ಯಕ್ಷರು ಬೆಂಗಳೂರು ನಗರ, ಶ್ರೀ ಜಗದೀಶ್ ಮಲ್ನಾಡ್ ಸೇರಿದಂತೆ ಮತ್ತೀತರ ಗಣ್ಯರು ಉಪಸ್ಥಿತರು ಇರಲಿದ್ದಾರೆ ಎಂದು ಜರಗನಹಳ್ಳಿ ಕಾಂತರಾಜು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ3 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ3 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ


