ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243