ದಿನದ ಸುದ್ದಿ
ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ : ಡಿಸಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಸರ್ಕಾರಿ ಯೋಜನೆಗಳ ಸವಲತ್ತುಗಳನ್ನು ಜನರ ಬಳಿಗೇ ತೆರಳಿ ವಿತರಣೆ ಮಾಡುವ ಮೂಲಕ, ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ಜಗಳೂರು ತಾಲ್ಲೂಕಿನ ಬಿದರಕೆರೆ ಗ್ರಾಮದ ಗುರುಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಹಣಿ, ಪಿಂಚಣಿ, ಮಾಸಾಶನ, ವಿಕಲಚೇತನರ ಮಾಸಾಶನ ಸೇರಿದಂತೆ ಸರ್ಕಾರದ ವಿವಿಧ ಸವಲತ್ತುಗಳನ್ನು ವಿತರಿಸಲು ಜಿಲ್ಲಾಡಳಿತವೇ ಫಲಾನುಭವಿಗಳನ್ನು ಹುಡುಕಿ, ಅವರ ಮನೆಗೇ ತಲುಪಿಸುವಂತಹ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಪೂರಕವಾಗಿದೆ.
ಹಸಿವು ಎಂದರೆ ಏನು ಎಂದು ಅರಿಯದವರು,
ಶ್ರೀಮಂತಿಕೆಯಲ್ಲಿಯೇ ಹುಟ್ಟಿ ಬೆಳೆದವರು ಬಡತನ, ಹಸಿವು ಕುರಿತು ಉದ್ದುದ್ದ ಭಾಷಣ ಮಾಡುತ್ತಾರೆ, ಅಂತಹವರು ಹಸಿವು ನಿವಾರಣೆ ಕುರಿತಂತೆ ಪಿಹೆಚ್ಡಿ ಯನ್ನೂ ಕೂಡ ಪಡೆಯುತ್ತಾರೆ. ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತುಕೊಂಡು ಆಡಳಿತ ನಡೆಸುವ ಕಾಲ ಈಗಿಲ್ಲ. ದೇಶದ ಆತ್ಮ ಹಳ್ಳಿಗಳಲ್ಲಿದೆ.
ಇದನ್ನು ಅರಿತೇ ಸರ್ಕಾರ ಗ್ರಾಮ ವಾಸ್ತವ್ಯದಂತಹ ಮಹತ್ವದ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದು, ಕೇವಲ ಹಳ್ಳಿಗೆ ಬಂದು ಭಾಷಣ ಮಾಡಿ ಹೋಗುವುದು ಗ್ರಾಮವಾಸ್ತವ್ಯದ ಉದ್ದೇಶವಲ್ಲ. ಗ್ರಾಮ ವಾಸ್ತವ್ಯ ಮಾಡುವ ಗ್ರಾಮ ಸುತ್ತಮುತ್ತಲ ಸುಮಾರು ಐದಾರು ಹಳ್ಳಿಗಳಲ್ಲಿ, ಪ್ರತಿ ಮನೆ ಮನೆಗೆ ಅಧಿಕಾರಿ, ಸಿಬ್ಬಂದಿ ಭೇಟಿ ನೀಡಿ, ಪಿಂಚಣಿ, ಮಾಸಾಶನ, ವಿಕಲಚೇತನರ ಮಾಸಾಶನಕ್ಕೆ ಯಾರು ಅರ್ಹರಿದ್ದಾರೆ, ಅವರಿಗೆ ಸವಲತ್ತು ದೊರೆತಿದೆಯೇ ಇಲ್ಲವೆ, ಯೋಜನೆಗಾಗಿ ಯಾರು ಅರ್ಹ ಫಲಾನುಭವಿಗಳಿದ್ದಾರೆ ಎಂಬುದನ್ನು ಗುರುತಿಸಲು ಸರ್ವೆ ಮಾಡಿಸಲಾಗುತ್ತಿದೆ.
ಅರ್ಹರಿದ್ದೂ, ಸವಲತ್ತಿನಿಂದ ವಂಚಿತರಾಗಿದ್ದಲ್ಲಿ, ಅಂತಹವರಿಗೆ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಸೌಲಭ್ಯ ಮಂಜೂರು ಮಾಡಲಾಗುತ್ತಿದೆ. ಇವೆಲ್ಲವೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಅರ್ಹರಿಗೆ ಯೋಜನೆಯನ್ನು ತಲುಪಿಸುವ ಮೂಲಕ, ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವ ಯತ್ನ ಮಾಡುತ್ತಿದ್ದೇವೆ.
ಬಿದರಕೆರೆ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಸುಮಾರು 12 ವಿಕಲಚೇತನ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಮಾಸಾಶನ ಮಂಜೂರು ಮಾಡಿಸುವ ಕಾರ್ಯ ಮಾಡಿದ್ದೇವೆ. ಮನೆ ಮನೆ ಸಮೀಕ್ಷೆ ಸಂದರ್ಭದಲ್ಲಿ ವ್ಯಾಪ್ತಿಯಿಂದ ಹೊರಗುಳಿದವರೂ ಕೂಡ, ಗ್ರಾಮವಾಸ್ತವ್ಯ ಕಾರ್ಯಕ್ರಮ ಸಂದರ್ಭದಲ್ಲಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಕೂಡ ಮಾಡಿದ್ದೇವೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿದಾಗ ಮಾತ್ರ ಇಂತಹ ಕಾರ್ಯಕ್ರಮಗಳ ಉದ್ದೇಶ ಈಡೇರಲು ಸಾಧ್ಯ.
ಕೋವಿಡ್ ಸೋಂಕು ನಿಯಂತ್ರಣ ಸಂದರ್ಭದಲ್ಲಿ ಜಿಲ್ಲೆಯ ಜನರು ಒಳ್ಳೆಯ ರೀತಿಯಲ್ಲಿ ಸಹಕರಿಸಿದ್ದಾರೆ. ಮುಂಬರುವ ತಿಂಗಳುಗಳಲ್ಲಿ ನಾಲ್ಕನೆ ಅಲೆ ಬರುತ್ತದೆ ಎಂಬ ಮಾತು ಕೇಳಿಬರುತ್ತಿದೆ. ಈಗಾಗಲೆ ಅರ್ಹರೆಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ನೀಡಲಾಗಿದೆ. ಎಷ್ಟೇ ಅಲೆ ಬಂದರೂ, ಜನರ ಸಹಕಾರವಿದ್ದಲ್ಲಿ, ಉತ್ತಮವಾಗಿ ನಿಭಾಯಿಸಲು ಜಿಲ್ಲಾಡಳಿತ ಸಿದ್ಧವಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಅವರು ಮಾತನಾಡಿ, ಸರ್ಕಾರದಲ್ಲಿ ನಾನೂ ಒಬ್ಬ ಕೆಲಸಗಾರ, ಹೀಗಾಗಿ ಕ್ಷೇತ್ರದ ಜನರ ಒಳಿತಿಗಾಗಿ ನಿರಂತರವಾಗಿ ದುಡಿಯುತ್ತಿದ್ದೇನೆ. ಅಧಿಕಾರ ಶಾಶ್ವತವಲ್ಲ, ನಾವು ನೀಡುವ ಕಾರ್ಯಕ್ರಮಗಳು ಶಾಶ್ವತ. ಮುಖ್ಯಮಂತ್ರಿಗಳು ಏ. 29 ರಂದು ಜಗಳೂರು ಕ್ಷೇತ್ರಕ್ಕೆ ಆಗಮಿಸಲಿದ್ದು, ಅಂದು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.
57 ಕೆರೆಗಳನ್ನು ತುಂಬಿಸುವ ಯೋಜನೆ ಜೊತೆಗೆ 1236 ಕೋಟಿ ರೂ. ವೆಚ್ಚದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗೂ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಇದರಲ್ಲಿ ಬಿದರಕೆರೆ ಗ್ರಾಮಕ್ಕೂ ನೀರು ಹರಿದುಬರುವಂತೆ ಯೋಜನೆ ರೂಪಿಸಲಾಗಿದೆ. ಮೂರು ಬಾರಿ ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದು, ಕ್ಷೇತ್ರದ ಜನರ ಋಣ ತೀರಿಸುವುದು ನನ್ನ ಕರ್ತವ್ಯವಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ಮಾತನಾಡಿ, ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸಂದರ್ಭದಲ್ಲಿ ನಿವೇಶನ, ಮನೆ ಸೌಲಭ್ಯ ನೀಡುವಂತೆ 100 ಕ್ಕೂ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದಾರೆ. ನಿವೇಶನ ರಹಿತರ ಸಮೀಕ್ಷೆ ಕಾರ್ಯ ಕೈಗೊಂಡಿದ್ದು, ಗ್ರಾಮದಲ್ಲಿ 300 ಕ್ಕೂ ಹೆಚ್ಚು ನಿವೇಶನ ರಹಿತರನ್ನು ಗುರುತಿಸಲಾಗಿದೆ. ಇವರೆಲ್ಲರಿಗೂ ನಿವೇಶನ ನೀಡಲು ಸುಮಾರು 8 ಎಕರೆ ಭೂಮಿ ಅಗತ್ಯವಿದೆ. ಗ್ರಾಮ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ, ಗಾಂವಠಾಣವಾಗಲೀ ಇಲ್ಲ. ಯಾರಾದರೂ ಜಮೀನು ಮಾಲೀಕರು ಭೂಮಿ ನೀಡಲು ಮುಂದೆ ಬಂದರೆ, ಸರ್ಕಾರದ ದರಕ್ಕಿಂತ ದುಪ್ಪಟ್ಟು ಬೆಲೆ ನೀಡಿ, ಭೂಮಿ ಖರೀದಿಸಲು ನಿಗಮ ಸಿದ್ಧವಿದೆ ಎಂದರು.
ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಮಾತನಾಡಿ, ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಕಾನೂನಿನ ವ್ಯಾಪ್ತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವೃದ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನಗಳನ್ನು ಅರ್ಹರಿಗೆ ತಲುಪಿಸಲಾಗುತ್ತಿದೆ. ಗ್ರಾಮಕ್ಕೆ ಸ್ಮಶಾನ ಸೌಲಭ್ಯ ವ್ಯವಸ್ಥೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
ಸರ್ಕಾರದ ಯೋಜನೆಗಳು ಯಾವ ರೀತಿ ಅನುಷ್ಠಾನವಾಗುತ್ತಿದೆ ಎಂಬುದನ್ನು ಪರಿಶೀಲಿಸಲು ಗ್ರಾಮ ವಾಸ್ತವ್ಯ ಸಹಕಾರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳ ಮಂಜೂರಾತಿ ಪತ್ರ, ಹಕ್ಕುಪತ್ರಗಳನ್ನು ವಿತರಿಸಲಾಯಿತು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಫಲಾನುಭವಿಗಳಿಗೆ ಉಚಿತ ಪಡಿತರ ವಿತರಿಸಲಾಯಿತು., 16 ಜನ ಈರುಳ್ಳಿ ಬೆಳೆಗಾರರಿಗೆ ಈರುಳ್ಳಿ ಶೇಖರಣಾ ಘಟಕ ಮಂಜೂರಾತಿ ಪತ್ರ ನೀಡಲಾಯಿತು.ಅಲ್ಲದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗರ್ಭಿಣಿಯರಿಗೆ ವೇದಿಕೆಯಲ್ಲಿಯೇ ಸೀಮಂತ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಲೀಲಾ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ತಹಸಿಲ್ದಾರ್ ಸಂತೋಷ್ಕುಮಾರ್, ತಾ.ಪಂ ಇ.ಒ ನರಸಿಂಹಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಉದ್ಘಾಟನೆಗೂ ಮುನ್ನ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನೇತೃತ್ವದ ಅಧಿಕಾರಿಗಳ ತಂಡಕ್ಕೆ ಗ್ರಾಮದಲ್ಲಿ 101 ಪೂರ್ಣಕುಂಭ ಹೊತ್ತ ಮಹಿಳೆಯರು, ಕಹಳೆ ವಾದನ, ಡೊಳ್ಳುವಾದನದ ಸಹಿತ ವೈಭವದ ಸ್ವಾಗತ ಕೋರಿದರು, ಅಲ್ಲದೆ ಎತ್ತಿನಗಾಡಿಯಲ್ಲಿ ಅಧಿಕಾರಿಗಳ ಮೆರವಣಿಗೆ ಸಾಗಿಬಂದಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಬಳಿಕ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಗ್ರಾಮದ ವಿವಿಧೆಡೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಿದರು.
ಗ್ರಾಮದ ಸುನಂದಮ್ಮ, ಲಲಿತಮ್ಮ, ಮಾರಕ್ಕ ಎಂಬುವವರ ಮನೆಗೆ ಭೇಟಿ ನೀಡಿ, ಸರ್ಕಾರದ ಸೌಲಭ್ಯಗಳಾದ ಪಡಿತರ, ವೃದ್ಧಾಪ್ಯ ವೇತನ, ಕುಡಿಯುವ ನೀರು, ವಿಧವಾ ವೇತನ ಕುರಿತು ಮಾಹಿತಿ ಪಡೆದರು, ಸ್ಥಳದಲ್ಲೆಯಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಇದುವರೆಗೂ ಸೌಲಭ್ಯ ಪಡೆಯದ ಅರ್ಹರನ್ನು ಗುರುತಿಸಿ ಕಂದಾಯ ಇಲಾಖೆಯ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಗ್ರಾಮದ ಮತ್ತೋರ್ವ ನಿವಾಸಿ ಅನಸೂಯಮ್ಮ ಅವರ ಮನೆಗೆ ಭೇಟಿ ನೀಡಿ, ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಸೇರಿ ಪ್ರತಿದಿನ ರೂ. 309 ಕೂಲಿ ಪಡೆದು ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ಜಿಲ್ಲಾ ಪಂಚಾಯಿತ್ ಸಿಇಒ ಸಲಹೆ ನೀಡಿದರು.
ಗ್ರಾಮದ ಪರಿಶಿಷ್ಟರ ಕಾಲೋನಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಲೋನಿಯಲ್ಲಿರುವ ಅಂಬೇಡ್ಕರ್ ಸಮುದಾಯ ಭವನ ಶಿಥಲಗೊಂಡಿದ್ದು ನೂತನ ಸಮುದಾಯ ಭವನ ನಿರ್ಮಿಸಿ ಕೊಡುವಂತೆ ಕಾಲೋನಿಯ ಮುಖಂಡರು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಹಳೆಯ ಸಮುದಾಯ ಭವನವನ್ನು ದುರಸ್ತಿಗೊಳಿಸಲಾಗುವುದು. ಅಗತ್ಯವಿದ್ದರೆ ಶಾಸಕರೊಂದಿಗೆ ಚರ್ಚಿಸಿ ನೂತನ ಸಮುದಾಯ ಭವನ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ4 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ2 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ2 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ2 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

