ರಾಜಕೀಯ
ದೇವೇಗೌಡರಿಂದ ವಾಲ್ಮೀಕಿ ಸಮುದಾಯಕ್ಕೆ ಅವಮಾನ; ಶಾಸಕ ಜನಾರ್ದನ ರೆಡ್ಡಿ ಆರೋಪ
ಸುದ್ದಿದಿನ, ಚಿತ್ರದುರ್ಗ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ರು ಮಕ್ಕಳು ವಾಲ್ಮೀಕಿ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. ದೇವೇಗೌಡರು ವಾಲ್ಮೀಕಿ ಸಮುದಾಯಕ್ಕೆ ತಕ್ಕಮಟ್ಟಿಗೆ ಕೊಡುಗೆ ನೀಡಿದ್ದಾರೆ. ಇದನ್ನು ಪರಿಗರಿಣಿಸಿ ಅವರಿಗೆ ವಾಲ್ಮೀಕಿ ಪ್ರಶಸ್ತಿ ಘೋಷಿಸಲಾಗಿತ್ತು. ಆದರೆ,ವಪ್ರಶಸ್ತಿ ಸ್ವೀಕರಿಸಲು ಮಾಜಿ ಪ್ರಧಾನಿಗಳು ಬರಲಿಲ್ಲ. ಮುಖ್ಯಮಂತ್ರಿಗಳು ಸಮಾರಂಭಕ್ಕೆ ಬರಲಿಲ್ಲ. ಇದು ವಾಲ್ಮೀಕಿ ಮಹರ್ಷಿಗಳು ಮತ್ತು ಸಮುದಾಯದ ಜನರಿಗೆ ಮಾಡಿದ ಅಪಮಾನ ಎಂದು ಹೇಳಿದರು .
ಕುರುಬ ಮತ್ತು ವಾಲ್ಮೀಕಿ ಸಮುದಾಯ ಬಳ್ಳಾರಿಯಲ್ಲಿ ಅಣ್ಣ ತಮ್ಮಂದಿರಂತೆ ಇದ್ದೇವೆ. ಇಲ್ಲಿ ಶಾಂತ ಅವರನ್ನು ಜನರು ಹೆಚ್ಚಿನ ಮತಗಳಿಂದ ಗೆಲ್ಲಿಸುತ್ತಾರೆ. ಇಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ. ಕಾಂಗ್ರೆಸ್ ಗಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟ ಖರ್ಗೆ ಅವರನ್ನು ಮುಖ್ಯಮಂತ್ರಿ ಆಗಲು ಅವಕಾಶ ಕೊಡಲಿಲ್ಲ. ಹೀಗಾಗಿ ಬಳ್ಳಾರಿ ಜನ ನಿಮ್ಮನ್ನು ಒಪ್ಪುವುದಿಲ್ಲ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401