ರಾಜಕೀಯ

ಜನಾರ್ದನ ರೆಡ್ಡಿ ವಿಚಾರದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿಲ್ಲ : ಎಚ್.ಡಿ.ಕೆ

Published

on

ಸುದ್ದಿದಿನ ಡೆಸ್ಕ್ : ಜನಾರ್ದನ ರೆಡ್ಡಿ ವಿಚಾರದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನಾವು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿಲ್ಲ,
ರೆಡ್ಡಿ ಆಪ್ತರೊಬ್ಬರು 18 ಕೋಟಿ ಹಣವನ್ನು ತಿರುಪತಿ ಹುಂಡಿಗೆ ಹಾಕಿದ್ದೇವೆ ಎನ್ನುತ್ತಾರೆ.ಇದು ಹಾಸ್ಯವೋ ಅಥವಾ ಗಂಭೀರವೋ ನನಗೆ ಅರ್ಥ ಆಗುತ್ತಿಲ್ಲ. ಇದರ ಅರ್ಥವೇನು ಅಂತ ಮಾಧ್ಯಮದವರು ತಿಳಿದುಕೊಳ್ಳಬೇಕು ಎಂದರು.

ರೆಡ್ಡಿ ಕೇಸ್ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇನೆ. ಹಾಗಂತ ಅಧಿಕಾರಿಗಳು ಅಧಿಕಾರ ದುರುಪಯೋಗ ಮಾಡಿಕೊಳ್ಳಬಾರದು.ಮಾಧ್ಯಮಗಳಲ್ಲಿ ಬಂದಿರುವುದನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದರು.

Trending

Exit mobile version