ನಿತ್ಯ ಭವಿಷ್ಯ

ಜನ್ಮ ಕುಂಡಲಿಯಲ್ಲಿ ( ಜಾತಕ ) ಯಾವ ಮನೆಯಲ್ಲಿ ಶನಿ ಸ್ವಾಮಿಇದ್ದರೆ ವಿವಾಹ ವಿಳಂಬಕ್ಕೆ ಕಾರಣ ವಾಗುತ್ತದೆ..?

Published

on

 

ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕವಿಶ್ಲೇಷಣೆಗಾರರು ರಾಶಿಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಜನ್ಮ ಜಾತಕ ಅಥವಾ ಕುಂಡಲಿ ಲಗ್ನದಿಂದ ಅಂದರೆ ಕೇಂದ್ರದಿಂದ ಸಪ್ತಮ ಸ್ಥಾನ
ಶನಿ ಸ್ವಾಮಿ ಇದ್ದರೆ ಮದುವೆ ವಿಳಂಬಕ್ಕೆ ಶನಿಸ್ವಾಮಿಯೇ ಕಾರಣವಾಗುತ್ತಾನೆ.

ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ತಮ್ಮ ಮದುವೆ ತಡವಾಗಿ ಅಂದರೆ ಮೂವತ್ತರ ಪ್ರಾಯದ ಮೇಲೆ ಕಂಕಣಬಲ ಕೂಡಿ ಬರುವ ಸಾಧ್ಯತೆ ಇದೆ.

ಶನಿ ಸ್ವಾಮಿಯು ನಿಮಗೇನಾದರೂ ಒಲಿದರೆ
ಚಿನ್ನದ ತಟ್ಟೆಯಲ್ಲಿ ಊಟ ಮಾಡಿಸುತ್ತಾನೆ, ಆದರೆ ಒಲಿಯದೆ ಹೋದರೆ ತಮಗೆ ದುಃಖ ನೀಡುತ್ತಾನೆ, ಕರ್ಮ ಕಾರನ್ನು ಆಗಿರುತ್ತಾನೆ , ಅಲ್ಪ ಆಯಸ್ಸು ಮತ್ತು ಕಂಟಕನಾಗಿರುತ್ತಾನೆ.

ಶನಿ ಸ್ವಾಮಿಗೆ ತುಲಾ ರಾಶಿಯ ಉಚ್ಚ ಸ್ಥಾನವಾಗಿದ್ದು. ಮೇಷರಾಶಿ ನೀಚಸ್ಥಾನ ವಾಗಿರುತ್ತದೆ .ಇಲ್ಲಿ ಮೇಷ ರಾಶಿಗೆ ಅಧಿಪತಿ ಕುಜ.

ಕುಜ ಮತ್ತು ಶನಿ ಶತ್ರು ಗ್ರಹಗಳು. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಲಗ್ನದಿಂದ ಸಪ್ತಮ ಸ್ಥಾನ ಕಂಕಣಬಲ ಸೂಚಿಸುತ್ತದೆ. ಒಂದು ವೇಳೆ ಶನಿ ಸ್ವಾಮಿ ಸಪ್ತಮ ಸ್ಥಾನದಲ್ಲಿದ್ದರೆ ಮದುವೆ ವಿಳಂಬವಾಗುತ್ತದೆ. ಅಷ್ಟೇ ಅಲ್ಲ ಉದ್ಯೋಗದಲ್ಲಿ ಏರಿಳಿತ ಅನುಭವಿಸುವಿರಿ.

ಶನಿ ಸ್ವಾಮಿಯು ನಮ್ಮ ದೇಹಕ್ಕೆ ಹೋಲಿಕೆ ಮಾಡಿದಾಗ ಕಾಲು ಮತ್ತು ಪಾದಗಳಿಗೆ ಸಂಬಂಧಪಟ್ಟ ಗ್ರಹವಾಗಿದೆ. ಆದ್ದರಿಂದ ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ಕಾಲು ನೋವು ,ಮಂಡಿ ನೋವು, ಪಾದಗಳಲ್ಲಿ ಉರಿ, ವಾಯು, ಆಕಸ್ಮಿಕವಾಗಿ ಕಾಲುಗಳಿಗೆ ಪೆಟ್ಟು ,ನೋವು ಉಂಟಾಗುವ ಸಾಧ್ಯತೆ ಹೆಚ್ಚು. ವ್ಯಾಪಾರದಲ್ಲಿ ತೀವ್ರ ಸಂಕಟ ಅನುಭವಿಸಬೇಕಾಗುತ್ತದೆ.

ಪರಿಹಾರಗಳು
1) ನಿಮ್ಮ ಲಗ್ನ ಕುಂಡಲಿಯಲ್ಲಿ ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ “ವಿಷ್ಣುಸಹಸ್ರನಾಮ ಪಾರಾಯಣ “ಮಾಡುವುದು ಉತ್ತಮ.

2) ಪ್ರತಿ ಶನಿವಾರ ಎಳ್ಳೆಣ್ಣೆ ದೀಪ ಶನೇಶ್ವರ ಸ್ವಾಮಿಗೆ ಹಚ್ಚಿರಿ.

3) ಸ್ತೋತ್ರ ದಿನಾಲು ಪಠಾಣ ಮಾಡಿರಿ.
ನೀಲಾಂಜನಂ ಸಮಾಭಾಸಂ। ರವಿಪುತ್ರಂ ಯಮಾಗ್ರಜಂ। ಛಾಯಾ ಮಾರ್ತಂಡ। ಸಂಭೂತಂ ತಂ ನಮಾಮಿ ಶನೇಶ್ವರ ನಮಃ।।

Trending

Exit mobile version