ದಿನದ ಸುದ್ದಿ

ಜಯಲಕ್ಷ್ಮಿ ಕಾರಂತ್‌ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version