Connect with us

ದಿನದ ಸುದ್ದಿ

ಜೆಸ್ಕಾಂ | 3 ತಿಂಗಳ ಅವಧಿಯೊಳಗೆ ವಿದ್ಯುತ್ ಬಿಲ್ ಪಾವತಿಸಿ

Published

on

ಸುದ್ದಿದಿನ,ಬಳ್ಳಾರಿ : ಬಳ್ಳಾರಿ ನಗರದ ಜೆಸ್ಕಾಂ ಉಪ ವಿಭಾಗ-2 ರ ಕಾರ್ಯ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರು ಸತತವಾಗಿ ಮೂರು ತಿಂಗಳಿಗಿಂತ ಹೆಚ್ಚಿನ ದಿನಗಳಿಂದ ಬಿಲ್ ಪಾವತಿಸದ ಬಾಕಿ ಉಳಿಸಿಕೊಂಡಿರುವ ಸ್ಥಾವರಗಳನ್ನು ಶಾಶ್ವತವಾಗಿ ನಿಲುಗಡೆಗೊಳಿಸಿ, ವಿದ್ಯುತ್ ಮಾಪಕಗಳನ್ನು ಕಡಿತಗೊಳಿಸಲಾಗುವುದು ಎಂದು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರದ ಜೆಸ್ಕಾಂ ಉಪ ವಿಭಾಗ-2 ಕಾರ್ಯ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರು ತಮ್ಮ ವಿದ್ಯುತ್ ಸ್ಥಾವರಗಳ ಬಿಲ್‍ನ್ನು ಮೂರು ತಿಂಗಳಗಿಂತ ಹೆಚ್ಚಿನ ದಿನಗಳಿಂದ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ವಿದ್ಯುತ್ ಸ್ಥಾವರಗಳನ್ನು ಕಡಿತಗೊಳಿಸಲಾಗುವುದು.

ಕೆಇಆರ್‍ಸಿ ನಿಯಮಾವಳಿ 32.07 ಪ್ರಕಾರ ಸತತವಾಗಿ ಮೂರು ತಿಂಗಳಿನಿಂದ ವಿದ್ಯುತ್ ಬಾಕಿಯನ್ನು ಪಾವತಿಸದೆ ಇರುವ ವಿದ್ಯುತ್ ಸ್ಥಾವರಗಳ ಗಣಕೀಕೃತ ಯಂತ್ರದಲ್ಲಿ ಸ್ವಯಂ ಚಾಲಿತವಾಗಿ ಶಾಶ್ವತವಾಗಿ ನಿಲುಗಡೆಯಾಗಲಿವೆ ಮತ್ತು ವಿದ್ಯುತ್ ಮಾಪಕಗಳನ್ನು ಕಡಿತಗೊಳಿಸಲಾಗುವುದು.

ಶಾಶ್ವತವಾಗಿ ನಿಲುಗಡೆಗೊಳಿಸಿದ ಸ್ಥಾವರಗಳ ಠೇವಣಿಯ ಹಣವನ್ನು ಬಾಕಿಗೆ ಹೊಂದಾಣಿಕೆ ಮಾಡಲಾಗುವುದು ಇನ್ನು ಹೆಚ್ಚಿನ ಬಾಕಿ ಇದ್ದಲ್ಲಿ ಕೆಇಆರ್‍ಸಿ ನಿಯಮಾವಳಿ 41.00 ಪ್ರಕಾರ ಭೂಮಿ ಮತ್ತು ಕಂದಾಯ ಕಾಯ್ದೆ ಅಡಿಯಲ್ಲಿ ಬಾಕಿಯನ್ನು ವಸೂಲಿ ಮಾಡಲಾಗುವುದು.

ಮುಂದುವರೆದು ಒಂದು ಬಾರಿ ವಿದ್ಯುತ್ ಸ್ಥಾವರಗಳನ್ನು ಶಾಶ್ವತವಾಗಿ ನಿಲುಗಡೆಯಾದ ನಂತರ ಮರು ಸಂಪರ್ಕಕ್ಕೆ ಗಣಕೀಕೃತದಲ್ಲಿ ಆಸ್ಪದ ಇರುವುದಿಲ್ಲ. ಮತ್ತೊಮ್ಮೆ ವಿದ್ಯುತ್ ಸಂಪರ್ಕ ಪಡೆಯಲು ಗ್ರಾಹಕರು ಹೊಸದಾಗಿ ಅರ್ಜಿಯನ್ನು ಸಲ್ಲಿಸಿ ಹೊಸ ಠೇವಣಿಗಳನ್ನು ಪಾವತಿಸಬೇಕಾಗುತ್ತದೆ.

ಸದರಿ ವಿದ್ಯುತ್ ಗ್ರಾಹಕರು ಈಗಲೇ ಜಾಗರೂಕರಾಗಿ ತಮ್ಮ ಸ್ಥಾವರಗಳ ಬಾಕಿಯನ್ನು ಪಾವತಿಸಲು ಮತ್ತು ಜೆಸ್ಕಾಂ ಇಲಾಖೆಗೆ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending