ರಾಜಕೀಯ
ಜಾರ್ಖಂಡ್ ವಿಧಾನಸಭೆ ಚುನಾವಣೆ | ಸರಳ ಬಹುಮತದತ್ತ ಕಾಂಗ್ರೆಸ್
ಸುದ್ದಿದಿನ,ರಾಂಚಿ: ಸಾಕಷ್ಟು ಕುತೂಹಲ ಮೂಡಿಸುತ್ತಿರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಚುನಾವಣೆಯಲ್ಲಿ ಮೈತ್ರಿಕೂಟದೊಂದಿಗೆ ಸ್ಪರ್ಧೆ ನಡೆಸಿದ್ದ ಕಾಂಗ್ರೆಸ್ ಸರಳ ಬಹುಮತದತ್ತ ಸಾಗಿದೆ.
ಬಿಜೆಪಿ ವಿರುದ್ಧ ಮೈತ್ರಿಕೂಟ ನಡೆಸಿದ್ದ ಜೆಎಂಎಂ (ಜಾರ್ಖಂಡ್ ಮುಕ್ತಿ ಮೋರ್ಚಾ),ಕಾಂಗ್ರೆಸ್, ಆರ್ಜೆಡಿ ಮೈತ್ರಿಕೂಟ ಮತ ಎಣಿಕೆ ಕಾರ್ಯದಲ್ಲಿ ಆರಂಭಿಕ ಮುನ್ನಡೆಯನ್ನು ಪಡೆದಿದೆ. ಸದ್ಯದ ಮಾಹಿತಿಯ ಅನ್ವಯ ಜೆಎಂಎಂ-ಕಾಂಗ್ರೆಸ್, ಆರ್ಜೆಡಿ ಮೈತ್ರಿಯ 39 ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ 32 ಅಭ್ಯರ್ಥಿಗಳು ಮುನ್ನಡೆ ಪಡೆದಿದ್ದಾರೆ.
ಉಳಿದಂತೆ ಎಜೆಎಸ್ಯು (ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್) ಪಕ್ಷ 3, ಜೆವಿಎಂ (ಜಾರ್ಖಂಡ್ ವಿಕಾಸ್ ಮೋರ್ಚಾ) 3, ಇತರರು 4 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ. ಒಟ್ಟು 81 ಸ್ಥಾನಗಳಿರುವ ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ಕಾರಕ್ಕೆ ಬಹುಮತ ಸಾಧಿಸಲು 42 ಸದಸ್ಯರ ಬೆಂಬಲ ಬೇಕಿದೆ.
ಪ್ರಮುಖವಾಗಿ ಜಾರ್ಖಂಡ್ ಹಾಲಿ ಸಿಎಂ ರಘುವರ್ ದಾಸ್ ಸ್ಪರ್ಧಿಸಿರುವ ಜಮ್ಶೇಡ್ಪುರ ಪೂರ್ವ ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಮತ ಎಣಿಕೆ ಆರಂಭಿಕ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡಿರುವ ರಘುಬರ್ ದಾಸ್, ಆರಂಭಿಕ ಮುನ್ನಡೆಗಳು ಅಂತಿಮವಲ್ಲ. ಇನ್ನು ಹೆಚ್ಚು ಸುತ್ತುಗಳ ಮತ ಎಣಿಕೆ ಕಾರ್ಯ ಬಾಕಿ ಇದ್ದು, ನಾನು ಗೆಲ್ಲುವುದು ಮಾತ್ರವಲ್ಲ ರಾಜ್ಯದಲ್ಲಿ ಬಿಜೆಪಿ ನಾಯಕತ್ವದಲ್ಲಿ ಸರ್ಕಾರವನ್ನು ಮತ್ತೆ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
JMM's Hemant Soren is leading from Dumka seat by 2463 votes and Barhait by 8616 votes. #JharkhandAssemblyPolls https://t.co/g2XHDUvRv2
— ANI (@ANI) December 23, 2019
2014ರ ಚುನಾವಣೆಯ ಫಲಿತಾಂಶವನ್ನು ಗಮನಿಸುವುದಾದರೆ, ಕಾಂಗ್ರೆಸ್-ಜೆಎಂಎಂ ಮೈತ್ರಿಕೂಟ 25, ಬಿಜೆಪಿ 37, ಜೆವಿಎಂ 8, ಎಜೆಸ್ಯು 5 ಮತ್ತು ಇತರೇ 6 ಸ್ಥಾನಗಳು ಲಭಿಸಿತ್ತು.
Congress's Jharkhand in-charge, RPN Singh: We were confident that Jharkhand will give clear majority to our alliance. Trends are good but I won't make comment until final result.We've clearly said that Hemant Soren will be CM candidate of our alliance. #JharkhandElectionResults pic.twitter.com/snJVbK9996
— ANI (@ANI) December 23, 2019
Jharkhand CM and BJP candidate from Jamshedpur East: These trends are not the final word. There are more rounds of counting to be held. It will not be correct to comment on these trends. I will hold a press conference later in Ranchi. #JharkhandAssemblyPolls pic.twitter.com/zQHGxRjAxw
— ANI (@ANI) December 23, 2019
Shivraj Singh Chouhan, BJP in Jaipur on being asked if BJP trails in #JhakhandAssemblyPolls, will it be a litmus test for #CAA: No such question arises. State elections are fought on issues concerning the state. pic.twitter.com/7narC5Y8Jp
— ANI (@ANI) December 23, 2019
Former Jharkhand CM and JVM(P) chief Babulal Marandi leading from Dhanwar seat by 5980 votes. (file pic) #JharkhandAssemblyPolls pic.twitter.com/ssrBk6eym9
— ANI (@ANI) December 23, 2019
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇ-ಸ್ವತ್ತು ಸಮಸ್ಯೆ ಪರಿಹಾರಕ್ಕಾಗಿ ಕಾರ್ಯನಿರ್ವಹಣಾ ಸಮಿತಿ ರಚನೆ

ಸುದ್ದಿದಿನಡೆಸ್ಕ್:ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ, 12 ಜನ ಅಧಿಕಾರಿಗಳನ್ನು ಒಳಗೊಂಡ, ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚಿಸಲಾಗಿದೆ ಎಂದು, ಪಂಚಾಯತ್ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ :
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿ ನಿಯಮ, 1993ರ ಪ್ರಕರಣ 199ಕ್ಕೆ ತರಲು ಉದ್ದೇಶಿಸಿರುವ, ತಿದ್ದುಪಡಿಗಳಿಗೆ ಅನುಗುಣವಾಗಿ, ಇ-ಸ್ವತ್ತಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆ ಹಾಗೂ ಇ-ಸ್ವತ್ತು ಸುಧಾರಣೆ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸುವ ಹೊಣೆ ಈ ಸಮಿತಿಗೆ ವಹಿಸಲಾಗಿದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ವಿದ್ಯಾಸಿರಿ’ ಯೋಜನೆಯಡಿ ವಿದ್ಯಾರ್ಥಿ ವೇತನ ಪರಿಷ್ಕರಣೆಗೆ ಒತ್ತು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಬೆಂಗಳೂರಿನ ಕೆಂಗೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಕಲಿದೇವ ಸಮುದಾಯ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾರ್ಪಣೆಗೊಳಿಸಿದರು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಸಮುದಾಯಗಳ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ವಿದ್ಯಾಸಿರಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೆ ನೀಡುವ ಮೊತ್ತವನ್ನು ಒಂದೂವರೆಯಿಂದ ಎರಡು ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಮಡಿವಾಳ ಸಮುದಾಯದ ಪ್ರಗತಿ ಸರ್ಕಾರ ಬದ್ಧವಾಗಿದ್ದು, ಈ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಎಲ್ಲ ಪ್ರಯತ್ನ ಮಾಡಲಾಗುವುದು. 12ನೇ ಶತಮಾನದಲ್ಲಿ ಮಡಿವಾಳ ಮಾಚಿದೇವರು, ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಟ ಮಾಡಿದ್ದರು ಎಂದು ಹೇಳಿದರು.
ಈ ವೇಳೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ಎಸ್.ಟಿ. ಸೋಮಶೇಖರ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ದಾವಣಗೆರೆ ಜಿಲ್ಲೆ ವ್ಯಾಪ್ತಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ.3 ರೊಳಗಾಗಿ ವೆಬ್ಸೈಟ್ https://swd.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಹಾಗೂ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರನ್ನು ಸಂಪರ್ಕಿಸಲು ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ನಾಗರಾಜ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ
-
ದಿನದ ಸುದ್ದಿ6 days ago
ವಕ್ಫ್ ತಿದ್ದುಪಡಿ ಕಾಯ್ದೆ- 2025 | ಇಂದು ಸುಪ್ರೀಂ ವಿಚಾರಣೆ
-
ರಾಜಕೀಯ4 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ
-
ದಿನದ ಸುದ್ದಿ5 days ago
ಅಂಬೇಡ್ಕರ್ ಸ್ಮರಣೆಯಿಂದ ದೇಶ ಪ್ರಗತಿಪರವಾಗಲು ಸಾಧ್ಯ : ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್
-
ದಿನದ ಸುದ್ದಿ6 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಆರು ಮಂದಿ ಬಂಧನ
-
ದಿನದ ಸುದ್ದಿ4 days ago
ದಾವಣಗೆರೆ | ಮೊಬೈಲ್ ಕ್ಯಾಟೀನ್ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ದಾವಣಗೆರೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ