ದಿನದ ಸುದ್ದಿ
ಚನ್ನಗಿರಿ | ಮಾವಿನಕಟ್ಟೆ ಗ್ರಾಮದಲ್ಲಿ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ; ರೈತರಿಗೆ ಹಕ್ಕು ಪತ್ರ ಕೊಡಿಸಿಯೇ ಸಿದ್ದ : ಮಾಡಾಳ್ ವಿರೂಪಾಕ್ಷಪ್ಪ
![](https://suddidina.com/wp-content/uploads/2022/06/dc_mavinakatte_suddidina.jpg)
ಸುದ್ದಿದಿನ,ದಾವಣಗೆರೆ : ಅರಣ್ಯ ಇಲಾಖೆ ಒಡೆತನದ ಜಮೀನುಗಳಲ್ಲಿ ಸಾಗುವಳಿ ಮಾಡಿಕೊಂಡಿರುವ ಯಾವುದೇ ರೈತರು ಸಾಗುವಳಿ ಪತ್ರ ಇಲ್ಲ ಎಂದು ಧೈರ್ಯಗುಂದದಿರಿ, ಈಗಾಗಲೇ ನೀವು ಉಳುಮೆ ಮಾಡಿಕೊಂಡಿರುವ ಜಮೀನಿಗೆ ಹಕ್ಕು ಪತ್ರ ಕೊಡಿಸುತ್ತೇನೆ ಎಂದು ಚನ್ನಗಿರಿ ಶಾಸಕರು ಹಾಗೂ ಕೆಎಸ್ಡಿಎಲ್ ಅಧ್ಯಕ್ಷರಾದ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.
ಚನ್ನಗಿರಿ ತಾಲ್ಲೂಕು ಮಾವಿನಕಟ್ಟೆ ಗ್ರಾಮದಲ್ಲಿ ಏರ್ಪಡಿಸಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಹಿಂದೆ ಕೇಂದ್ರ ಸರ್ಕಾರ ಅರಣ್ಯ ಪ್ರದೇಶಗಳಲ್ಲಿ ಮೂರು ತಲೆಮಾರುಗಳಿಂದ ಉಳುಮೆ ಮಾಡಿಕೊಂಡಿರುವ ಜಮೀನುಗಳ ಹಕ್ಕನ್ನು ಉಳುಮೆ ಮಾಡಿಕೊಂಡಿರುವವರಿಗೆ ನೀಡುತಿತ್ತು, ಈಗ ಆ ಕಾಯ್ದೆಗೆ ತಿದ್ದುಪಡಿ ಮಾಡಿ ಒಂದು ತಲೆಮಾರಿಗೆ ಸೀಮಿತಗೊಳಿಸಿ ಹಕ್ಕುಪತ್ರ ನೀಡುವ ಚಿಂತನೆಯಲ್ಲಿದ್ದು ಕಾಯ್ದೆ ಜಾರಿಯಾದರೆ ಎಲ್ಲರಿಗೂ ಅನುಕೂಲವಾಗಲಿದೆ ಎಂದರು.
ಪಿ.ಎಂ. ಕಿಸಾನ್ ಯೋಜನೆಯಲ್ಲಿ ದಾವಣಗೆರೆ ಜಿಲ್ಲೆಗೆ 397 ಕೋಟಿ ಹಣ ಬಂದಿದ್ದು, ಚನ್ನಗಿರಿ ತಾಲ್ಲೂಕಿನ 39 ಸಾವಿರ ರೈತರಿಗೆ 101 ಕೋಟಿ 67 ಲಕ್ಷ ರೈತರ ಖಾತೆಗೆ ಜಮೆಯಾಗುವುದರಂದಿಗೆ ಚನ್ನಗಿರಿ ತಾಲ್ಲೂಕಿಗೆ ಅಗ್ರಪಾಲು ದೊರೆತಿದೆ, ಅದರೊಂದಿಗೆ ಮಾವಿನಕಟ್ಟೆ ಗ್ರಾಮ ಪಂಚಾಯಿತಿಗೆ 8.87 ಕೋಟಿ ವೆಚ್ಚದ ವಿವಿಧ ಅಭಿವದ್ದಿ ಕಾಮಗಾರಿಗಳಾಗಿವೆ. ಮನೆ ಮನೆಗೆ ಗಂಗೆ ಯೋಜನೆಯಡಿ ಪ್ರತಿ ಮನೆಗೂ ನಲ್ಲಿ ಸಂಪರ್ಕ ಒದಗಿಸಿದ್ದು ಕುಡಿಯುವ ನೀರಿನ ಬವಣೆ ತಪ್ಪಿದೆ, ಹಿಂದಿನ ವರ್ಷಗಳಲ್ಲಿ ತಾಲ್ಲೂಕಿನಾದ್ಯಂತ ನೂರಾರು ಕೊಳವೆ ಬಾವಿಗಳನ್ನು ತೋಡಿಸಲಾಗುತಿತ್ತು, ಈ ಬಾರಿ ಹತ್ತರಿಂದ ಹದಿನೈದು ಬೋರ್ಗಳಷ್ಟನ್ನೇ ಕೊರೆಯಿಸಲಾಗಿದೆ ಎಂದರು.
ಮಹಿಳೆಯರು ಸಬಲರಾಗಬೇಕೆಂಬ ಉದ್ದೇಶದಿಂದ ಸರ್ಕಾರ ಸ್ತ್ರೀ ಶಕ್ತಿ ಸಂಘಗಳಿಗೆ ಅನುದಾನ ನೀಡುತಿದ್ದು, ತಾಲೋಕಿನ 40 ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 1.25 ಲಕ್ಷಗಳ ಆರ್ಥಿಕ ನೆರವು ನೀಡಿದೆ. ಕುಟುಂಬದಲ್ಲಿ ಒಂದು ಹೆಣ್ಣು ಮಗಳು ಮನಸು ಮಾಡಿದರೆ ಏನೆಲ್ಲಾ ಸಾಧಿಸಬಹುದೆಂಬ ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿವೆ, ಜೀವನೋಪಾಯಕ್ಕಾಗಿ ರೊಟ್ಟಿ ಮಾಡುತಿದ್ದ ಹೆಣ್ಣುಮಗಳೊಬ್ಬಳು ಇಂದು ವಿದೇಶಗಳಿಗೆ ರೊಟ್ಟಿ ರಪ್ತು ಮಾಡುತ್ತಿರುವಂತಹ ಉದಾಹರಣೆಗಳಿವೆ ಎಂದರು. ಸರ್ಕಾರ ಇಂತಹ ನೂರಾರು ಯೋಜನೆಗಳನ್ನು ನೀಡಿದ್ದು, ಸರ್ಕಾರ ನೀಡುವ ಹಣಕಾಸಿನ ನೆರವಿನಿಂದ ಮಹಿಳೆಯರು ಸಬಲರಾಗಲು ಸಾಧ್ಯ ಎಂದರು.
ಆಶ್ರಯ ಯೋಜನೆಯಡಿ ಈಗಾಗಲೇ ಮನೆ ಮಂಜೂರಾಗಿರುವ ಮನೆಗಳನ್ನು ಕಟ್ಟಿಸಿಕೊಳ್ಳಿ, ಹೆಚ್ಚಿನ ಅನುದಾನದ ಮನೆ ಬೇಕೆಂದು ಕಾಯ್ದು ಕುಳಿತರೆ ಮಂಜೂರಾಗಿರುವ ಮನೆಯು ಕೈತಪ್ಪುತ್ತದೆ. ಹಾಗೂ ತಾಲ್ಲೂಕಿನಲ್ಲಿ ಸಾಕಷ್ಟು ಯೋಜನೆಗಳಿಂದ ಹಲವರು ಫಲಾನುಭವಿಗಳಾಗಿದ್ದೀರಿ, ತಾಲ್ಲೂಕಿನಲ್ಲಿ 912 ಮಹಿಳೆಯರಿಗೆ ವಿಧವಾ ವೇತನ ಮಂಜೂರು ಮಾಡಲಾಗಿದೆ. ಒಟ್ಟಾರೆಯಾಗಿ ಮಾವಿನಕಟ್ಟೆ ವ್ಯಾಪ್ತಿಯಲ್ಲಿ 4.50 ಕೋಟಿ ವೆಚ್ಚದಲ್ಲಿ ಚತುಷ್ಪತ ರಸ್ತೆ ನಿರ್ಮಿಸುವ ಮೂಲಕ ಈ ಗ್ರಾಮವನ್ನು ಒಂದು ಸುಂದರ ಗ್ರಾಮವನ್ನಾಗಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಸರ್ಕಾರವನ್ನೇ ನಿಮ್ಮ ಮನೆ ಬಾಗಿಲಿಗೆ ತಂದು ನಿಲ್ಲಿಸುವಂತಹ ಕಾರ್ಯಕ್ರಮ ಇದಾಗಿದ್ದು ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ನಿಮ್ಮ ಗ್ರಾಮದಲ್ಲಿದ್ದು ನಿಮ್ಮ ಯಾವುದೇ ಕುಂದು ಕೊರತೆ, ಇದುವರರೆಗೂ ಆಗದೇ ಇರುವ ಕೆಲಸವನ್ನು ಮಾಡಿಸಿಕೊಳ್ಳಬಹುದಾಗಿದೆ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಹೋಗದೆ ನಿಮ್ಮೂರಿನಲ್ಲಿಯೇ ಇರುವ ಗ್ರಾಮ ಒನ್ ಕೇಂದ್ರದಲ್ಲಿ ಯಾವುದೇ ಖರ್ಚು ಇಲ್ಲದೆ ಕೆಲಸ ಮಾಡಿಕೊಳ್ಳಬಹುದಾಗಿದೆ, ಅತಿ ಹೆಚ್ಚು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನರಿರುವ ಈ ಭಾಗದ ಜನರ ಬಳಿಗೆ ಶಾಸಕರು ಜಿಲ್ಲಾಧಿಕಾರಿಗಳು ತಲುಪಬೇಕೆಂಬ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಮಾವಿನಕಟ್ಟೆಯಲ್ಲಿ ಆಯೋಜಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಇತರೆ ತಾಲ್ಲೂಕುಗಳಿಗೆ ಮಾದರಿಯಾಗಿದೆ, ಸುಮಾರು 999 ಎಕರೆ ಬಗರ್ ಹುಕುಂ ಜಮೀನನ್ನು 485 ಫಲಾನುಭವಿಗಳು ಪಡೆದುಕೊಂಡಿದ್ದಾರೆ. ಗ್ರಾಮ ಒನ್ ಕೇಂದ್ರಗಳಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್ ಕೇವಲ 30 ರೂ. ಗಳಲ್ಲಿ ಮಾಡಿಕೊಳ್ಳಲಾಗುತ್ತದೆ ಇದರ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ ಮಾತನಾಡಿ, ಜನರು ಜಾಗೃತಿ ಹೊಂದಿ ಸರ್ಕಾರ ರೂಪಿಸಿರುವ ಎಲ್ಲಾ ಯೋಜನೆಗಳನ್ನು ಪಡೆದುಕೊಳ್ಳಬೇಕು, ಹಾಗೆಯೇ ಈ ಹಿಂದೆ ಜಾತಿ ಪ್ರಮಾಣ ಪತ್ರ ಪಡೆಯಲು ತಾಲ್ಲೂಕು ಕಚೇರಿಗಳಿಗೆ ತಿಂಗಳುಗಟ್ಟಲೆ ಅಲೆಯುವಂತಹ ಪರಿಸ್ಥಿತಿ ಇತ್ತು ಈಗ ಗ್ರಾಮ ಒನ್ ಕೇಂದ್ರದ ಮೂಲಕ ಗ್ರಾಮದಲ್ಲಿಯೇ ಪಡೆದುಕೊಳ್ಳಬಹುದಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ, ತೋಟಗಾರಿಕೆಗಳಲ್ಲಿ ಕೆಲಸ ಮಾಡಿ ಪ್ರತಿದಿನ 310 ರೂ. ಗಳನ್ನು ಪಡೆಯಬಹುದು ಎಂದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗರಾಜ್ ಮಾತನಾಡಿ, ಗ್ರಾಮಪಂಚಾಯಿತಿ ಹಾಗೂ ಗ್ರಾಮ ಒನ್ ಕೇದ್ರಗಳಲ್ಲಿ ಆಯುಷ್ಮಾನ ಭಾರತ್ ಕರ್ನಾಟಕ ಆರೋಗ್ಯ ಕಾರ್ಡ್ ಪಡೆದು. ಬಿ.ಪಿ.ಎಲ್ ಕುಟುಂಬದವರಿಗೆ 5 ಲಕ್ಷದವರೆಗೆ ಉಚಿತ ಆರೋಗ್ಯ ತಪಾಸಣೆ ಇರುತ್ತದೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಉಚಿತವಾಗಿ ಡಯಾಲಿಸಿಸ್ ಮಾಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಮಾಹಿತಿ ನೀಡಿದರು.
ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಮೇಶ್ ಮಾತನಾಡಿ, ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಒಂದುವರೆ ಎಕರೆಯಿಂದ ಐದು ಎಕರೆ ಜಮೀನು ಹೊಂದಿದವರಿಗೆ ಕೊಳವೆಬಾವಿ ಕೊರೆದು ವಿದ್ಯುದೀಕರಣ ಮಾಡಿ ಕೊಡಲಾಗುತ್ತದೆ. ಹಾಗೂ ಭೂ ಒಡೆತನ ಯೋಜನೆಯು ಸರ್ಕಾರದ ನೂತನ ಯೋಜನೆಯಾಗಿದ್ದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ 2 ಎಕರೆ ಜಮೀನನ್ನು ಕೊಡಿಸುವಂತಹ ಯೋಜನೆಯಾಗಿದೆ ಎಂದರು.
ತಹಶೀಲ್ದಾರ್ ಪಟ್ಟರಾಜು ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಜಿಲ್ಲಾಧಿಕಾರಿಗಳು ಮಾವಿನಕಟ್ಟೆ ಗ್ರಾಮದಲ್ಲಿನ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತೆ ಕೆಲಸ ನಿರ್ವಹಿಸಿ ಹಾಗೂ ಆಯುಷ್ಮಾನ್ ಆರೋಗ್ಯ ಕಾರ್ಡ್ ಮಾಡಿಕೊಡಿ ಎಂದು ಆಪರೇಟರ್ ಸಂಜೀವನಾಗ್ ಅವರಿಗೆ ಸೂಚಿಸಿದರು.
ವೇದಿಕೆಯಲ್ಲಿ ಸಮಾಜ ಕಲ್ಯಾಣಾಧಿಕಾರಿ ರೇಷ್ಮಾ ಕೌಸರ್, ಭೂಸ್ವಾಧಿನಾಧಿಕಾರಿ ರೇಷ್ಮ ಹಾನಗಲ್, ತಾ.ಪಂ. ಇಓ ಪ್ರಕಾಶ್, ಡಿವೈಎಸ್ಪಿ ಸಂತೋಷ್ ನಿರ್ಮಿತಿ ಕೇಂದ್ರದ ರವಿಕುಮಾರ್, ಹಾಗೂ ಗ್ರಾ.ಪಂ ಅಧ್ಯಕ್ಷರು ಸದಸ್ಯರು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮದ ಜನರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!