Connect with us

ದಿನದ ಸುದ್ದಿ

ಚನ್ನಗಿರಿ | ಮಾವಿನಕಟ್ಟೆ ಗ್ರಾಮದಲ್ಲಿ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ; ರೈತರಿಗೆ ಹಕ್ಕು ಪತ್ರ ಕೊಡಿಸಿಯೇ ಸಿದ್ದ : ಮಾಡಾಳ್ ವಿರೂಪಾಕ್ಷಪ್ಪ

Published

on

ಸುದ್ದಿದಿನ,ದಾವಣಗೆರೆ : ಅರಣ್ಯ ಇಲಾಖೆ ಒಡೆತನದ ಜಮೀನುಗಳಲ್ಲಿ ಸಾಗುವಳಿ ಮಾಡಿಕೊಂಡಿರುವ ಯಾವುದೇ ರೈತರು ಸಾಗುವಳಿ ಪತ್ರ ಇಲ್ಲ ಎಂದು ಧೈರ್ಯಗುಂದದಿರಿ, ಈಗಾಗಲೇ ನೀವು ಉಳುಮೆ ಮಾಡಿಕೊಂಡಿರುವ ಜಮೀನಿಗೆ ಹಕ್ಕು ಪತ್ರ ಕೊಡಿಸುತ್ತೇನೆ ಎಂದು ಚನ್ನಗಿರಿ ಶಾಸಕರು ಹಾಗೂ ಕೆಎಸ್‍ಡಿಎಲ್ ಅಧ್ಯಕ್ಷರಾದ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ಚನ್ನಗಿರಿ ತಾಲ್ಲೂಕು ಮಾವಿನಕಟ್ಟೆ ಗ್ರಾಮದಲ್ಲಿ ಏರ್ಪಡಿಸಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಹಿಂದೆ ಕೇಂದ್ರ ಸರ್ಕಾರ ಅರಣ್ಯ ಪ್ರದೇಶಗಳಲ್ಲಿ ಮೂರು ತಲೆಮಾರುಗಳಿಂದ ಉಳುಮೆ ಮಾಡಿಕೊಂಡಿರುವ ಜಮೀನುಗಳ ಹಕ್ಕನ್ನು ಉಳುಮೆ ಮಾಡಿಕೊಂಡಿರುವವರಿಗೆ ನೀಡುತಿತ್ತು, ಈಗ ಆ ಕಾಯ್ದೆಗೆ ತಿದ್ದುಪಡಿ ಮಾಡಿ ಒಂದು ತಲೆಮಾರಿಗೆ ಸೀಮಿತಗೊಳಿಸಿ ಹಕ್ಕುಪತ್ರ ನೀಡುವ ಚಿಂತನೆಯಲ್ಲಿದ್ದು ಕಾಯ್ದೆ ಜಾರಿಯಾದರೆ ಎಲ್ಲರಿಗೂ ಅನುಕೂಲವಾಗಲಿದೆ ಎಂದರು.

ಪಿ.ಎಂ. ಕಿಸಾನ್ ಯೋಜನೆಯಲ್ಲಿ ದಾವಣಗೆರೆ ಜಿಲ್ಲೆಗೆ 397 ಕೋಟಿ ಹಣ ಬಂದಿದ್ದು, ಚನ್ನಗಿರಿ ತಾಲ್ಲೂಕಿನ 39 ಸಾವಿರ ರೈತರಿಗೆ 101 ಕೋಟಿ 67 ಲಕ್ಷ ರೈತರ ಖಾತೆಗೆ ಜಮೆಯಾಗುವುದರಂದಿಗೆ ಚನ್ನಗಿರಿ ತಾಲ್ಲೂಕಿಗೆ ಅಗ್ರಪಾಲು ದೊರೆತಿದೆ, ಅದರೊಂದಿಗೆ ಮಾವಿನಕಟ್ಟೆ ಗ್ರಾಮ ಪಂಚಾಯಿತಿಗೆ 8.87 ಕೋಟಿ ವೆಚ್ಚದ ವಿವಿಧ ಅಭಿವದ್ದಿ ಕಾಮಗಾರಿಗಳಾಗಿವೆ. ಮನೆ ಮನೆಗೆ ಗಂಗೆ ಯೋಜನೆಯಡಿ ಪ್ರತಿ ಮನೆಗೂ ನಲ್ಲಿ ಸಂಪರ್ಕ ಒದಗಿಸಿದ್ದು ಕುಡಿಯುವ ನೀರಿನ ಬವಣೆ ತಪ್ಪಿದೆ, ಹಿಂದಿನ ವರ್ಷಗಳಲ್ಲಿ ತಾಲ್ಲೂಕಿನಾದ್ಯಂತ ನೂರಾರು ಕೊಳವೆ ಬಾವಿಗಳನ್ನು ತೋಡಿಸಲಾಗುತಿತ್ತು, ಈ ಬಾರಿ ಹತ್ತರಿಂದ ಹದಿನೈದು ಬೋರ್‍ಗಳಷ್ಟನ್ನೇ ಕೊರೆಯಿಸಲಾಗಿದೆ ಎಂದರು.

ಮಹಿಳೆಯರು ಸಬಲರಾಗಬೇಕೆಂಬ ಉದ್ದೇಶದಿಂದ ಸರ್ಕಾರ ಸ್ತ್ರೀ ಶಕ್ತಿ ಸಂಘಗಳಿಗೆ ಅನುದಾನ ನೀಡುತಿದ್ದು, ತಾಲೋಕಿನ 40 ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 1.25 ಲಕ್ಷಗಳ ಆರ್ಥಿಕ ನೆರವು ನೀಡಿದೆ. ಕುಟುಂಬದಲ್ಲಿ ಒಂದು ಹೆಣ್ಣು ಮಗಳು ಮನಸು ಮಾಡಿದರೆ ಏನೆಲ್ಲಾ ಸಾಧಿಸಬಹುದೆಂಬ ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿವೆ, ಜೀವನೋಪಾಯಕ್ಕಾಗಿ ರೊಟ್ಟಿ ಮಾಡುತಿದ್ದ ಹೆಣ್ಣುಮಗಳೊಬ್ಬಳು ಇಂದು ವಿದೇಶಗಳಿಗೆ ರೊಟ್ಟಿ ರಪ್ತು ಮಾಡುತ್ತಿರುವಂತಹ ಉದಾಹರಣೆಗಳಿವೆ ಎಂದರು. ಸರ್ಕಾರ ಇಂತಹ ನೂರಾರು ಯೋಜನೆಗಳನ್ನು ನೀಡಿದ್ದು, ಸರ್ಕಾರ ನೀಡುವ ಹಣಕಾಸಿನ ನೆರವಿನಿಂದ ಮಹಿಳೆಯರು ಸಬಲರಾಗಲು ಸಾಧ್ಯ ಎಂದರು.

ಆಶ್ರಯ ಯೋಜನೆಯಡಿ ಈಗಾಗಲೇ ಮನೆ ಮಂಜೂರಾಗಿರುವ ಮನೆಗಳನ್ನು ಕಟ್ಟಿಸಿಕೊಳ್ಳಿ, ಹೆಚ್ಚಿನ ಅನುದಾನದ ಮನೆ ಬೇಕೆಂದು ಕಾಯ್ದು ಕುಳಿತರೆ ಮಂಜೂರಾಗಿರುವ ಮನೆಯು ಕೈತಪ್ಪುತ್ತದೆ. ಹಾಗೂ ತಾಲ್ಲೂಕಿನಲ್ಲಿ ಸಾಕಷ್ಟು ಯೋಜನೆಗಳಿಂದ ಹಲವರು ಫಲಾನುಭವಿಗಳಾಗಿದ್ದೀರಿ, ತಾಲ್ಲೂಕಿನಲ್ಲಿ 912 ಮಹಿಳೆಯರಿಗೆ ವಿಧವಾ ವೇತನ ಮಂಜೂರು ಮಾಡಲಾಗಿದೆ. ಒಟ್ಟಾರೆಯಾಗಿ ಮಾವಿನಕಟ್ಟೆ ವ್ಯಾಪ್ತಿಯಲ್ಲಿ 4.50 ಕೋಟಿ ವೆಚ್ಚದಲ್ಲಿ ಚತುಷ್ಪತ ರಸ್ತೆ ನಿರ್ಮಿಸುವ ಮೂಲಕ ಈ ಗ್ರಾಮವನ್ನು ಒಂದು ಸುಂದರ ಗ್ರಾಮವನ್ನಾಗಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಸರ್ಕಾರವನ್ನೇ ನಿಮ್ಮ ಮನೆ ಬಾಗಿಲಿಗೆ ತಂದು ನಿಲ್ಲಿಸುವಂತಹ ಕಾರ್ಯಕ್ರಮ ಇದಾಗಿದ್ದು ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ನಿಮ್ಮ ಗ್ರಾಮದಲ್ಲಿದ್ದು ನಿಮ್ಮ ಯಾವುದೇ ಕುಂದು ಕೊರತೆ, ಇದುವರರೆಗೂ ಆಗದೇ ಇರುವ ಕೆಲಸವನ್ನು ಮಾಡಿಸಿಕೊಳ್ಳಬಹುದಾಗಿದೆ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಹೋಗದೆ ನಿಮ್ಮೂರಿನಲ್ಲಿಯೇ ಇರುವ ಗ್ರಾಮ ಒನ್ ಕೇಂದ್ರದಲ್ಲಿ ಯಾವುದೇ ಖರ್ಚು ಇಲ್ಲದೆ ಕೆಲಸ ಮಾಡಿಕೊಳ್ಳಬಹುದಾಗಿದೆ, ಅತಿ ಹೆಚ್ಚು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನರಿರುವ ಈ ಭಾಗದ ಜನರ ಬಳಿಗೆ ಶಾಸಕರು ಜಿಲ್ಲಾಧಿಕಾರಿಗಳು ತಲುಪಬೇಕೆಂಬ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಮಾವಿನಕಟ್ಟೆಯಲ್ಲಿ ಆಯೋಜಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಇತರೆ ತಾಲ್ಲೂಕುಗಳಿಗೆ ಮಾದರಿಯಾಗಿದೆ, ಸುಮಾರು 999 ಎಕರೆ ಬಗರ್ ಹುಕುಂ ಜಮೀನನ್ನು 485 ಫಲಾನುಭವಿಗಳು ಪಡೆದುಕೊಂಡಿದ್ದಾರೆ. ಗ್ರಾಮ ಒನ್ ಕೇಂದ್ರಗಳಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್ ಕೇವಲ 30 ರೂ. ಗಳಲ್ಲಿ ಮಾಡಿಕೊಳ್ಳಲಾಗುತ್ತದೆ ಇದರ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ ಮಾತನಾಡಿ, ಜನರು ಜಾಗೃತಿ ಹೊಂದಿ ಸರ್ಕಾರ ರೂಪಿಸಿರುವ ಎಲ್ಲಾ ಯೋಜನೆಗಳನ್ನು ಪಡೆದುಕೊಳ್ಳಬೇಕು, ಹಾಗೆಯೇ ಈ ಹಿಂದೆ ಜಾತಿ ಪ್ರಮಾಣ ಪತ್ರ ಪಡೆಯಲು ತಾಲ್ಲೂಕು ಕಚೇರಿಗಳಿಗೆ ತಿಂಗಳುಗಟ್ಟಲೆ ಅಲೆಯುವಂತಹ ಪರಿಸ್ಥಿತಿ ಇತ್ತು ಈಗ ಗ್ರಾಮ ಒನ್ ಕೇಂದ್ರದ ಮೂಲಕ ಗ್ರಾಮದಲ್ಲಿಯೇ ಪಡೆದುಕೊಳ್ಳಬಹುದಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ, ತೋಟಗಾರಿಕೆಗಳಲ್ಲಿ ಕೆಲಸ ಮಾಡಿ ಪ್ರತಿದಿನ 310 ರೂ. ಗಳನ್ನು ಪಡೆಯಬಹುದು ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗರಾಜ್ ಮಾತನಾಡಿ, ಗ್ರಾಮಪಂಚಾಯಿತಿ ಹಾಗೂ ಗ್ರಾಮ ಒನ್ ಕೇದ್ರಗಳಲ್ಲಿ ಆಯುಷ್ಮಾನ ಭಾರತ್ ಕರ್ನಾಟಕ ಆರೋಗ್ಯ ಕಾರ್ಡ್ ಪಡೆದು. ಬಿ.ಪಿ.ಎಲ್ ಕುಟುಂಬದವರಿಗೆ 5 ಲಕ್ಷದವರೆಗೆ ಉಚಿತ ಆರೋಗ್ಯ ತಪಾಸಣೆ ಇರುತ್ತದೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಉಚಿತವಾಗಿ ಡಯಾಲಿಸಿಸ್ ಮಾಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಮಾಹಿತಿ ನೀಡಿದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಮೇಶ್ ಮಾತನಾಡಿ, ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಒಂದುವರೆ ಎಕರೆಯಿಂದ ಐದು ಎಕರೆ ಜಮೀನು ಹೊಂದಿದವರಿಗೆ ಕೊಳವೆಬಾವಿ ಕೊರೆದು ವಿದ್ಯುದೀಕರಣ ಮಾಡಿ ಕೊಡಲಾಗುತ್ತದೆ. ಹಾಗೂ ಭೂ ಒಡೆತನ ಯೋಜನೆಯು ಸರ್ಕಾರದ ನೂತನ ಯೋಜನೆಯಾಗಿದ್ದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ 2 ಎಕರೆ ಜಮೀನನ್ನು ಕೊಡಿಸುವಂತಹ ಯೋಜನೆಯಾಗಿದೆ ಎಂದರು.
ತಹಶೀಲ್ದಾರ್ ಪಟ್ಟರಾಜು ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಜಿಲ್ಲಾಧಿಕಾರಿಗಳು ಮಾವಿನಕಟ್ಟೆ ಗ್ರಾಮದಲ್ಲಿನ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತೆ ಕೆಲಸ ನಿರ್ವಹಿಸಿ ಹಾಗೂ ಆಯುಷ್ಮಾನ್ ಆರೋಗ್ಯ ಕಾರ್ಡ್ ಮಾಡಿಕೊಡಿ ಎಂದು ಆಪರೇಟರ್ ಸಂಜೀವನಾಗ್ ಅವರಿಗೆ ಸೂಚಿಸಿದರು.

ವೇದಿಕೆಯಲ್ಲಿ ಸಮಾಜ ಕಲ್ಯಾಣಾಧಿಕಾರಿ ರೇಷ್ಮಾ ಕೌಸರ್, ಭೂಸ್ವಾಧಿನಾಧಿಕಾರಿ ರೇಷ್ಮ ಹಾನಗಲ್, ತಾ.ಪಂ. ಇಓ ಪ್ರಕಾಶ್, ಡಿವೈಎಸ್ಪಿ ಸಂತೋಷ್ ನಿರ್ಮಿತಿ ಕೇಂದ್ರದ ರವಿಕುಮಾರ್, ಹಾಗೂ ಗ್ರಾ.ಪಂ ಅಧ್ಯಕ್ಷರು ಸದಸ್ಯರು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮದ ಜನರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ

ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್‌ ಶೇ. 97 ದ್ವಿತೀಯ ಹಾಗೂ ಸಮರ್ಥ್‌ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.

ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.

ಯಶಸ್ಸಿನ ಹಿಂದಿನ ಶಕ್ತಿ:

ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್‌, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ

Published

on

ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.

ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.

ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.

ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

Published

on

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending