Connect with us

ರಾಜಕೀಯ

ಜೆ.ಎನ್.ಯು ಚುನಾಚಣೆ : ಯುನೈಟೆಡ್ ಲೆಫ್ಟ್ ಅಲೈಯನ್ಸ್ ಗೆ ಗೆಲುವು

Published

on

ಸುದ್ದಿದಿನ ಡೆಸ್ಕ್: ದೇಶದ ಗಮನ ಸೆಳೆದಿರುವ ದೆಹಲಿಯ ಜವಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್.ಯು) ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಡಪಂಥೀಯರು ಮೇಲುಗೈ ಸಾಧಿಸಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಯುನೈಟೆಡ್ ಲೆಫ್ಟ್ ಅಲೈಯನ್ಸ್ ಗೆಲುವು ಸಾಧಿಸಿದೆ.

ಅಧ್ಯಕ್ಷರಾಗಿ ಎನ್. ಸಾಯಿ ಬಾಲಾಜಿ 1,000 ಮತಗಳ ಅಂತರದಲ್ಲಿ ವಿಜಯಭೇರಿ ಬಾರಿಸಿದ್ದಾರೆ. ಉಪಾಧ್ಯಕ್ಷರಾಗಿ ಸಾರಿಕಾ ಚೌಧರಿ ಮತಗಳ ಅಂತರ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಏಜಾಜ್ ಅಹ್ಮದ್ ರಾಥರ್, ಜಂಟಿ ಕಾರ್ಯದರ್ಶಿಯಾಗಿ ಅಮುತ ಜಯದೀಪ್ ಆಯ್ಕೆಯಾಗಿದ್ದಾರೆ.

ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್ಎ), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಷನ್ (ಡಿಎಸ್ಎಫ್) ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಫೆಡರೇಶನ್ (ಎಐಎಸ್ಎಫ್) ಮೈತ್ರಿಯೊಂದಿಗೆ ಎಡಪಂಥೀಯ ಬೆಂಬಲ ಹೊಂದಿದೆ.

ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾದ ಎಐಎಸ್ಎ ಸಂಘಟನೆಯ ಎನ್. ಸಾಯಿ ಬಾಲಾಜಿ 2,161 ಮತ ಪಡೆಯುವ ಮೂಲಕ ಎಬಿವಿಪಿಯ ಲಲಿತ್ ಪಾಂಡೆಯನ್ನು 1,179 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾದ ಡಿಎಸ್ಎಫ್.ನ ಸಾರಿಕಾ ಚೌಧರಿ 2,692 ಮತ ಪಡೆದು ಎಬಿವಿಪಿಯ ಗೀತಾಸ್ರಿ ಬೊರುವಾ ಅವರನ್ನು 1,680 ಮತಗಳ ಅಂತರದಲ್ಲಿ ಹಿಂದಿಕ್ಕಿದ್ದಾರೆ. ಎಸ್ಎಫ್ಐನ ಏಜಾಜ್ ಅಹಮದ್ ರಾಥರ್ 2,423 ಪಡೆದು ಪ್ರತಿಸ್ಪರ್ಧಿ ಎಬಿವಿಪಿಯ ಗಣೇಶ್ ಗುರ್ಜರನ್ನು 1,300 ಮತಗಳ ಸೋಲಿಸಿದ್ದಾರೆ. ಎಐಎಸ್ಎಫ್.ನ ಅಮುತ 2,047 ಮತಗಳನ್ನು ಪಡೆದು ಎಬಿವಿಪಿಯ ವೆಂಕಟ್ ಚೌಬೆಯನ್ನು 800 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್

Published

on

ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ಸೋಲಾರ್ ಘಟಕದ ಕಾಮಗಾರಿ ಪರಿಶೀಲಿಸಿದ ಅವರು, ಜಿಲ್ಲೆಯ ಆರೂ ತಾಲೂಕುಗಳಲ್ಲಿ ಒಂಬತ್ತು ಸೋಲಾರ್ ಘಟಕಗಳು ಸ್ಥಾಪನೆಯಾಗಲಿದ್ದು ಇದರಿಂದ ಅರವತ್ತೆರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.

ಇಂಧನ ಇಲಾಖೆಯು ರಾಜ್ಯಾದ್ಯಂತ 154 ಸೋಲಾರ್ ಘಟಕಗಳನ್ನು ಸ್ಥಾಪಿಸಿ 1 ಸಾವಿರದ 81 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಸ್ವಾವಲಂಬನೆ ಸಾಧಿಸಲು ನಿರ್ಧರಿಸಿದೆ ಎಂದು ತಿಳಿಸಿದರು.

ಇನ್ನೊಂದೆಡೆ ತುಮಕೂರಿನ ಸಿರಾ ತಾಲ್ಲೂಕಿನ ಚೆಂಗಾವರದಲ್ಲಿ ಪಿ.ಎಂ.ಕುಸುಮ್ ಯೋಜನೆಯಡಿ ನಿರ್ಮಿಸಿರುವ ಸೋಲಾರ್ ಪಾರ್ಕ್ ವೀಕ್ಷಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸೋಲಾರ್ ಘಟಕಗಳನ್ನು ನಿರ್ಮಿಸಿ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ

Published

on

ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾ‌ರ್ ಆದೇಶಿಸಿದ್ದಾರೆ.

ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.

ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.

ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending