ದಿನದ ಸುದ್ದಿ

ಫೆ.14 ರಂದು ದಾವಣಗೆರೆಯಲ್ಲಿ ‘ಉದ್ಯೋಗ ಮೇಳ’

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕು ಪಂಚಾಯಿತಿ ವತಿಯಿಂದ 2019-20 ನೇ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನಯಡಿ ನಿರುದ್ಯೋಗ ಯುವಕ-ಯುವತಿಯರಿಗಾಗಿ ಫೆ. 14 ರಂದು ನಗರದ ಎ.ಆರ್.ಜಿ ಕಲಾ ಮತ್ತು ವಾಣಿಜ್ಯ ಪದವಿ ಕಾಲೇಜು ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಬೆಳಿಗ್ಗೆ 10.30 ಕ್ಕೆ ಉದ್ಯೋಗ ಮೇಳ ಏರ್ಪಡಿಸಲಾಗಿದೆ.

ಕೇಂದ್ರ ಪುರಸ್ಕøತ ಯೋಜನೆಯಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನಯಡಿ ರಾಜ್ಯದಲ್ಲಿ ಗುರುತಿಸಲಾದ ಯೋಜನಾ ಅನುಷ್ಟಾನ ಸಂಸ್ಥೆಗಳ ಮತ್ತು ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಹಾಗೂ ವಿವಿಧ ಕಂಪನಿಗಳ ಸಹಯೋಗದೊಂದಿಗೆ ಮೂರು, ಆರು ಮತ್ತು ಒಂಭತ್ತು ಹಾಗೂ ಹನ್ನೆರಡು ತಿಂಗಳುಗಳ ಅವಧಿಯಲ್ಲಿ ತರಬೇತಿ ನೀಡಿ 30 ಸಾವಿರ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಉದ್ಯೋಗ ಒದಗಿಸುವ ಉದ್ದೇಶ ಹೊಂದಿದೆ.

ಆಸಕ್ತ ಯುವಕ ಯುವತಿಯರು ಆಧಾರ್ ಕಾರ್ಡ್, ಫೋಟೊ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಹಾಗೂ ಸ್ವ-ವಿವರಗಳನ್ನೊಳಗೊಂಡ ಮೂಲ ಮತ್ತು ಜಾರಾಕ್ಸ್ ಪ್ರತಿಯೊಂದಿಗೆ ಉದ್ಯೋಗಮೇಳದಲ್ಲಿ ಭಾಗವಹಿಸಬಹುದೆಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದಾರುಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version