Connect with us

ದಿನದ ಸುದ್ದಿ

ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ

Published

on

  • ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ

ಮಗೆಲ್ಲರಿಗೂ ಒಂದು ಉತ್ತಮ ಜೀವನವನ್ನ ನಿರ್ಮಿಸಲು ಉದ್ಯೋಗ ಅತ್ಯಗತ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವ ಯುವಜನತೆ ನಿರುದ್ಯೋಗ ಎಂಬ ದೊಡ್ಡ ಸವಾಲನ್ನು ಎದುರಿಸುತ್ತಿದ್ದಾರೆ. ಅದನ್ನು ನಿವಾರಿಸುವ ಒಂದು ಮಹತ್ವದ ಹೆಜ್ಜೆಯಾಗಿ, ದಾವಣಗೆರೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು. ದಿನಾಂಕ 15.03.2025 ರಂದು ಐ.ಟಿ.ಐ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳವು 50ಕ್ಕೂ ಹೆಚ್ಚು ಖ್ಯಾತ ಕಂಪನಿಗಳನ್ನು ಒಳಗೊಂಡಿದ್ದು, ಯುವಕರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಿ ಉದ್ಯೋಗ ಗಳಿಸಿಕೊಳ್ಳಲು ಸುವರ್ಣಾವಕಾಶ ಒದಗಿಸುತ್ತದೆ. ಜಿಲ್ಲಾಡಳಿತವು ಈ ಮೇಳವನ್ನು ಯಶಸ್ವಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುತ್ತದೆ.

ನಿರುದ್ಯೋಗ – ಯುವಕರ ಮುಂದಿರುವ ದೊಡ್ಡ ಸವಾಲು

ಇಂದಿನ ಯುಗದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದರೂ ಉದ್ಯೋಗ ದೊರಕುವುದು ಸುಲಭವಲ್ಲ. ಆರ್ಥಿಕ ಪರಿಸ್ಥಿತಿಗಳು, ಉದ್ಯೋಗ ಕ್ಷೇತ್ರದ ಸ್ಪರ್ಧಾತ್ಮಕತೆಯು ಯುವಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೆಲವೊಮ್ಮೆ ಸರಿಯಾದ ಮಾರ್ಗದರ್ಶನದ ಕೊರತೆ, ಉದ್ಯೋಗಾವಕಾಶಗಳ ಬಗ್ಗೆ ಸರಿಯಾದ ಮಾಹಿತಿ ಲಭ್ಯವಿಲ್ಲದಿರುವುದು, ಇವುಗಳು ನಿರುದ್ಯೋಗದ ಪ್ರಮಾಣವನ್ನು ಹೆಚ್ಚಿಸುತ್ತವೆ.

ಈ ಹಿನ್ನೆಲೆಯಲ್ಲಿ, ಉದ್ಯೋಗ ಮೇಳಗಳು ಕಂಪನಿಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲು, ಉದ್ಯೋಗ ಅವಕಾಶಗಳ ಬಗ್ಗೆ ಸ್ಪಷ್ಟ ಮಾಹಿತಿ ಪಡೆಯಲು ಮತ್ತು ತಕ್ಷಣವೇ ಉದ್ಯೋಗ ಆಫರ್ ಪಡೆಯಲು ಅವಕಾಶ ನೀಡುವ ವಿಶಿಷ್ಟ ವೇದಿಕೆಗಳಾಗಿವೆ.

ಉದ್ಯೋಗ ಮೇಳ – ನಿರುದ್ಯೋಗಕ್ಕೆ ಪರಿಹಾರ

ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ

ಉದ್ಯೋಗ ಮೇಳಗಳು ವಿದ್ಯಾರ್ಥಿಗಳು ಮತ್ತು ಉದ್ಯೋಗದಾತರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸುತ್ತವೆ. ಈ ಮೇಳದಲ್ಲಿ ಭಾಗವಹಿಸುವುದು ನಿಮ್ಮ ಭವಿಷ್ಯಕ್ಕಾಗಿ ಬಹುಮುಖ್ಯವಾದ ಒಂದು ಹೆಜ್ಜೆ ಆಗಿರಬಹುದು. ಇದು ನಿಮಗೆ ಪ್ರತ್ಯಕ್ಷ ಸಂದರ್ಶನ, ಕಂಪನಿಗಳಿಂದ ಉದ್ಯೋಗ ಮಾಹಿತಿಗಳು, ಉದ್ಯೋಗ ತಂತ್ರಗಳು ಮತ್ತು ಮಾರ್ಗದರ್ಶನ ಪಡೆಯಲು ಅದ್ಭುತ ಅವಕಾಶ ಒದಗಿಸುತ್ತದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕಾರಣಗಳು

  • 50+ ಕಂಪನಿಗಳು ಭಾಗವಹಿಸುತ್ತಿವೆ – ಖಾಸಗಿ ಮತ್ತು ಬಹುರಾಷ್ಟ್ರೀಯ ಕಂಪನಿಗಳಿಂದ ಉದ್ಯೋಗ ಅವಕಾಶಗಳು.
  • ತಕ್ಷಣದ ಅವಕಾಶ – ಒಂದು ದಿನದಲ್ಲಿ ಉದ್ಯೋಗ ದೊರಕಿಸಿಕೊಳ್ಳುವ ಅವಕಾಶ.
  • ನೇರ ಸಂದರ್ಶನ – ಕಂಪನಿಗಳ ಪ್ರತಿನಿಧಿಗಳೊಂದಿಗೆ ನೇರವಾಗಿ ಸಂವಾದ ನಡೆಸುವ ಅವಕಾಶ.
  • ಉಚಿತ ಪ್ರವೇಶ – ಯಾವುದೇ ಶುಲ್ಕವಿಲ್ಲದೆ ಭಾಗವಹಿಸಲು ಅವಕಾಶ.
  • ಮಾರುಕಟ್ಟೆ ಪ್ರವೃತ್ತಿ ತಿಳಿಯಲು ಅವಕಾಶ – ಉದ್ಯೋಗ ಕ್ಷೇತ್ರದ ಹೊಸ ಹಾದಿಗಳನ್ನು ಅರಿಯಲು ಉತ್ತಮ ವೇದಿಕೆ.

ನೀವು ಮಾಡಬೇಕಾದ ಸಿದ್ಧತೆಗಳು

ಪ್ರಮುಖ ದಾಖಲೆಗಳು: ನಿಮ್ಮ ಸ್ವವಿವರ (Resume), ಅಂಕಪತ್ರಗಳು, ಗುರುತು ಪತ್ರ (Aadhar/PAN), ಪಾಸ್‌ಪೋರ್ಟ್ ಸೈಜ್ ಫೋಟೋಗಳು ಇತ್ಯಾದಿಗಳನ್ನು ಸಿದ್ಧಪಡಿಸಿಕೊಳ್ಳಿ.

ಸಮಯ ಪಾಲನೆ: ಮೇಳದ ಪ್ರಾರಂಭದ ಸಮಯಕ್ಕೆ ಮುಂಚೆ ಆಗಮಿಸಿ, ಇದರಿಂದ ನೀವು ಹೆಚ್ಚಿನ ಕಂಪನಿಗಳ ಸಂದರ್ಶನಗಳಿಗೆ ಹಾಜರಾಗಬಹುದು.

ಆತ್ಮವಿಶ್ವಾಸ: ಸಂದರ್ಶನಕ್ಕೆ ತಯಾರಿ ಮಾಡಿಕೊಂಡು ಆತ್ಮವಿಶ್ವಾಸದೊಂದಿಗೆ ನಿಮ್ಮನ್ನು ತೋರಿಸಿಕೊಳ್ಳಿ.

ಸಂಶೋಧನೆ: ಭಾಗವಹಿಸುವ ಕಂಪನಿಗಳ ಬಗ್ಗೆ ಮೊದಲೇ ಮಾಹಿತಿ ಪಡೆದುಕೊಳ್ಳಿ, ಇದರಿಂದ ಉತ್ತಮ ಪ್ರಭಾವ ಬೀರುವ ಅವಕಾಶ ಲಭ್ಯವಿರುತ್ತದೆ.

ಯಾರೆಲ್ಲ ಭಾಗವಹಿಸಬಹುದು

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು 18ರಿಂದ 35 ವರ್ಷದ ಒಳಗಿನವರಾಗಿರಬೇಕು ಎಂಟನೇ ತರಗತಿ ಎಸ್ ಎಸ್ ಎಲ್ ಸಿ ಪಿಯುಸಿ ಬಿಎ ಬಿಕಾಂ ಬಿ ಎಸ್ ಸಿ ಐ ಟಿ ಐ ಡಿಪ್ಲೋಮಾ ಬಿ.ಟೆಕ್ ಎಂ ಬಿ ಎ ಎಂಕಾಂ ಎಂ ಸಿ ಎ ಹಾಗೂ ಇತರ ಸ್ನಾತಕೋತ್ತರ ಪದವಿ ಹಾಗೂ ಇತರೆ ವಿದ್ಯಾರ್ಹತೆ ಹೊಂದಿರುವವರು ಮೇಳದಲ್ಲಿ ಭಾಗವಹಿಸಲು ಅರ್ಹರು.

ಯಾವೆಲ್ಲ ಕ್ಷೇತ್ರಗಳು ಭಾಗವಹಿಸುತ್ತವೆ

ಉದ್ಯೋಗ ಮರದಲ್ಲಿ ಐಟಿ ವಲಯ ಹಣಕಾಸು ಬ್ಯಾಂಕಿಂಗ್ ಉತ್ಪಾದನಾ ವಲಯ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ ಫಾರ್ಮಸಿಟಿಕಲ್ ಬಿಪಿಓ ವಾಯ್ಸ್ ಬೇಸ್ಡ್ ರಿಟೇಲ್ ಸೇಲ್ಸ್ ಅಂಡ್ ಮಾರ್ಕೆಟಿಂಗ್ ಆಟೋ ಮೊಬೈಲ್ ಡೇಟಾ ಎಂಟ್ರಿ ಆಪರೇಟರ್ ಸರ್ವಿಸ್ ಸೆಕ್ಟರ್ ಇತರೆ ಕ್ಷೇತ್ರಗಳಲ್ಲಿ ಉದ್ಯೋಗ ನೀಡುವ ಕಂಪನಿಗಳು ಭಾಗವಹಿಸುತ್ತಿವೆ

ಭಾಗವಹಿಸಿ, ಭವಿಷ್ಯ ಕಟ್ಟಿಕೊಳ್ಳಿ..!

ನೀವು ಉದ್ಯೋಗ ಹುಡುಕುತ್ತಿರುವ ವಿದ್ಯಾರ್ಥಿ ಅಥವಾ ಬೇರೊಂದು ಉದ್ಯೋಗದ ಅವಕಾಶಕ್ಕಾಗಿ ಹುಡುಕಾಟದಲ್ಲಿರುವವರೆ, ಈ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಿಮ್ಮ ಭವಿಷ್ಯ ರೂಪಿಸುವ ಒಂದು ಸುವರ್ಣ ಅವಕಾಶ. ಇದು ನಿಮ್ಮ ಪ್ರಾರಂಭಿಕ ಹಂತದ ಉದ್ಯೋಗವನ್ನು ಪಡೆಯಲು ಸಹಾಯ ಮಾಡುವಷ್ಟೇ ಅಲ್ಲ, ಉದ್ಯೋಗ ಕ್ಷೇತ್ರದ ಬೆಳವಣಿಗೆಗಳ ಬಗ್ಗೆ ಅರಿವು ಮೂಡಿಸುತ್ತದೆ.

ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಇದನ್ನು ಸುಲಭವಾಗಿಸುವ ಒಂದು ಅವಕಾಶ ನಿಮ್ಮ ಮುಂದೆ ಬಂದಿರುವಾಗ, ಅದನ್ನು ಉಪಯೋಗಿಸಿಕೊಳ್ಳುವುದು ಬುದ್ಧಿಮತ್ತೆಯಾಗಿದೆ. ಆದ್ದರಿಂದ, ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ನಿಮ್ಮ ಕನಸುಗಳತ್ತ ಹೆಜ್ಜೆ ಹಾಕಿ!

“ಯಶಸ್ಸು ನಿಮ್ಮ ಕೈತುಂಬ ಬೇಕಾದರೆ, ಅವಕಾಶಗಳನ್ನು ಪತ್ತೆ ಹಚ್ಚಿ, ಭಾಗವಹಿಸಿ ಮತ್ತು ನಿಮ್ಮ ಸಾಂದರ್ಭಿಕತೆಯನ್ನು ಸದುಪಯೋಗಪಡಿಸಿಕೊಳ್ಳಿ!”

ಮತ್ತು, ಜತೆಯಾಗಿ ಬನ್ನಿ… ಭಾಗವಹಿಸಿ… ಉದ್ಯೋಗ ಪಡೆಯಿರಿ!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

Published

on

ಸುದ್ದಿದಿನ,ದಾವಣಗೆರೆ: ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ 25 ರಿಂದ 50ಕ್ಕೂ ಹೆಚ್ಚು ಟ್ಯಾಂಕರ್ ನೀರನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿದ್ದು, ಈ ಬಗ್ಗೆ ಜಿಲ್ಲಾ ಅಂರ್ತಜಲ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರಸ್ವತಿ ನಗರ ‘ಸಿ’ ಬ್ಲಾಕ್ನ ಎಲ್ಲಾ ನಿವಾಸಿಗಳು ಒತ್ತಾಯಿಸಿದ್ದಾರೆ.

ಸರಸ್ವತಿ ನಗರ ಬ್ಲಾಕ್ನ ನಿವಾಸಿ ತಮ್ಮ ಮನೆಯ ಬೋರ್ ವೆಲ್ ನಿಂದ ಒಂದೇ ಸಮನೆ ಸತತವಾಗಿ 4-5 ವರ್ಷಗಳಿಂದ ಸರತಿ ಸಾಲಿನಲ್ಲಿ ಟ್ಯಾಂಕರ್ಗಳ ಮೂಲಕ ದಿನಕ್ಕೆ 25 ರಿಂದ 50ಕ್ಕೂ ಹೆಚ್ಚು ಬಾರಿ ವಾಣಿಜ್ಯ ಉದ್ದೇಶಕ್ಕಾಗಿ ತಮ್ಮ ಪ್ರಾಧಿಕಾರದ ಅನುಮತಿ ಪಡೆಯದೆ ನೀರಿನ ಮಾರಾಟ ಮಾಡುತ್ತಿರುತ್ತಾರೆ. ಈ ವಿಷಯವಾಗಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಬೋರ್ ವೆಲ್ ಗಳಲ್ಲಿ ಕಛೇರಿಯ ಹಿರಿಯ ಭೂ ವಿಜ್ಞಾನಿಗಳು ಹಲವು ಬಾರಿ ನೋಟಿಸ್ ನೀಡಿದ್ದರೂ, ಅದನ್ನು ಲೆಕ್ಕಿಸದೆ ದಿನೇದಿನೇ ಹೆಚ್ಚುಹೆಚ್ಚು, ಟ್ಯಾಂಕರ್ ನೀರನ್ನು ಮಾರಾಟ ಮಾಡುತ್ತಿದ್ದಾರೆ.

ಈ ಕುರಿತು ಕಾಲೋನಿಯ ನಿವಾಸಿಗಳು ಪಾಲಿಕೆ ಸದಸ್ಯ ಕೆ.ಎಂ.ವೀರೇಶ್ ಜತೆಗೂಡಿ ಚಂದ್ರಶೇಖರಪ್ಪ ಅವರಲ್ಲಿ ಹಲವು ಬಾರಿ ವಿನಂತಿಸಿದರೂ, ಲೆಕ್ಕಿಸದೆ ತಮ್ಮ ನೀರಿನ ಮಾರಾಟದ ಅರ್ಭಟವನ್ನು ಮುಂದುವರಿಸಿದ್ದಾರೆ. ಇದರಿಂದಾಗಿ ಕಾಲೋನಿಯ ವಸತಿ ಪ್ರದೇಶದಿಂದ ಕೈಗಾರಿಕಾ ಪ್ರದೇಶವಾಗಿ ಮಾರ್ಪಟ್ಟಿದ್ದು, ಇಲ್ಲಿನ ಮಕ್ಕಳು ವೃದ್ಧರು ರಸ್ತೆಗಳಲ್ಲಿ ಓಡಾಡುವುದು ತುಂಬಾ ಕಷ್ಟವಾಗಿರುತ್ತದೆ, ಇದಲ್ಲದೇ ನಮ್ಮ ಕಾಲೋನಿಯ ಬೋರ್ ವೆಲ್ ಗಳಲ್ಲಿ ನೀರಿನ ಮಟ್ಟ ದಿನೇ-ದಿನೇ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಲಿದೆ ಎಂದು ಸ್ಥಳೀಯ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ ದಾವಣಗೆರೆಯ ಬಹಳ ಕಾಲೋನಿಗಳಲ್ಲಿ ಮನೆ ಬೋರ್ ವೆಲ್ ಗಳಿಂದ ನೀರಿನ ಮಾರಾಟ ಹಲವು ವರ್ಷಗಳಿಂದ ನಡೆಯುತ್ತಿದೆ. ಆಯಾ ಕಾಲೋನಿಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಾಧಿಕಾರದ ಅನುಮತಿ ಪಡೆಯದೆ ವಾಣಿಜ್ಯ ಉದ್ದೇಶಕ್ಕಾಗಿ ನೀರು ಮಾರಾಟ ಮಾಡುತ್ತಿರುವ ಚಂದ್ರಶೇಖರಪ್ಪರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಬೇಕೆಂದು ಸರಸ್ವತಿ ನಗರ ‘ಸಿ’ ಬ್ಲಾಕಿನ ಎಲ್ಲಾ ನಿವಾಸಿಗಳು ಮನವಿ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ :‌ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆಯಾಗುತ್ತಿದ್ದಂತೆ, ಸಭೆ ಕರೆದು ತಕರಾರು ಪರಿಹರಿಸುವುದಾಗಿ, ತಿಳಿಸಿದರು.

ರಾಜ್ಯ ಸರ್ಕಾರ, ಪಂಚ ಖಾತ್ರಿ ಯೋಜನೆಗಳ ಅನುಷ್ಠಾನಕ್ಕಾಗಿ, ಸಮಿತಿ ರಚಿಸಿ, ರಾಜ್ಯದ ತೆರಿಗೆದಾರರ ಹಣವನ್ನು, ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ, ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಶಾಸಕರು, ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ, ಪ್ರತಿಭಟನೆ ನಡೆಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಮೇಲ್ವಿಚಾರಣಾ ಸಮಿತಿ ರದ್ದು ಪಡಿಸುವಂತೆ, ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ದೂರು ನೀಡಿದರು.

ಖಾತ್ರಿ ಯೋಜನೆಗಳ ಅನುಷ್ಟಾನಕ್ಕೆ ರಚಿಸಲಾಗಿರುವ, ಕಾಂಗ್ರೆಸ್ ಕಾರ್ಯಕರ್ತರ ಸಮಿತಿಗಳನ್ನು ರದ್ದು ಪಡಿಸಿ, ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವಂತೆ, ಪ್ರತಿಪಕ್ಷ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಸದಸ್ಯರು ವಿಧಾನಸಭೆಯಲ್ಲಿ ಧರಣಿ ಮುಂದುವರೆಸಿದ್ದರಿAದ, ಸದನ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿತ್ತು.

ಇಂಧನ ಬೆಲೆ ಏರಿಕೆ, ಸಿಬ್ಬಂದಿ ವೇತನ ಹಾಗೂ ವಾಹನ ಬಿಡಿ ಭಾಗಗಳ ಬೆಲೆ ಹೆಚ್ಚಳದಿಂದ ಉಂಟಾದ, ಆರ್ಥಿಕ ಹೊರೆ ತಗ್ಗಿಸಲು, ಕಳೆದ ಜನವರಿಯಲ್ಲಿ ಬಸ್ ಪ್ರಯಾಣ ದರವನ್ನು, ಶೇಕಡ 15ರಷ್ಟು ಹೆಚ್ಚಿಸಲಾಗಿದೆ ಎಂದು, ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ, ಬಿಜೆಪಿ ಶಾಸಕ ಕೇಶವಪ್ರಸಾದ್ ಅವರ ಪ್ರಶ್ನೆಗೆ ಸಚಿವರು, ಉತ್ತರಿಸಿದರು.

ರಾಜ್ಯ ಸಾರಿಗೆ ಸಂಸ್ಥೆ ಅಧೀನದ, ನಾಲ್ಕು ಸಾರಿಗೆ ನಿಗಮಗಳು, 5ಸಾವಿರದ 200 ಕೋಟಿ ರೂಪಾಯಿ ನಷ್ಟದಲ್ಲಿವೆ. ನಿಗಮಗಳ ಪುನಃಶ್ವೇತನಕ್ಕೆ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದು, ಸಮರ್ಥಿಸಿಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ, ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ.

ತರಬೇತಿ ಏಪ್ರಿಲ್ 17 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ತರಬೇತಿ ವಸತಿಯುತವಾಗಿದ್ದು, ಉಚಿತ ಊಟ, ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ಗೆ ಸಂಪರ್ಕಿಸಬಹುದು ಎಂದು ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending