Connect with us

ದಿನದ ಸುದ್ದಿ

ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ

Published

on

  • ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ

ಮಗೆಲ್ಲರಿಗೂ ಒಂದು ಉತ್ತಮ ಜೀವನವನ್ನ ನಿರ್ಮಿಸಲು ಉದ್ಯೋಗ ಅತ್ಯಗತ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವ ಯುವಜನತೆ ನಿರುದ್ಯೋಗ ಎಂಬ ದೊಡ್ಡ ಸವಾಲನ್ನು ಎದುರಿಸುತ್ತಿದ್ದಾರೆ. ಅದನ್ನು ನಿವಾರಿಸುವ ಒಂದು ಮಹತ್ವದ ಹೆಜ್ಜೆಯಾಗಿ, ದಾವಣಗೆರೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು. ದಿನಾಂಕ 15.03.2025 ರಂದು ಐ.ಟಿ.ಐ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳವು 50ಕ್ಕೂ ಹೆಚ್ಚು ಖ್ಯಾತ ಕಂಪನಿಗಳನ್ನು ಒಳಗೊಂಡಿದ್ದು, ಯುವಕರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಿ ಉದ್ಯೋಗ ಗಳಿಸಿಕೊಳ್ಳಲು ಸುವರ್ಣಾವಕಾಶ ಒದಗಿಸುತ್ತದೆ. ಜಿಲ್ಲಾಡಳಿತವು ಈ ಮೇಳವನ್ನು ಯಶಸ್ವಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುತ್ತದೆ.

ನಿರುದ್ಯೋಗ – ಯುವಕರ ಮುಂದಿರುವ ದೊಡ್ಡ ಸವಾಲು

ಇಂದಿನ ಯುಗದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದರೂ ಉದ್ಯೋಗ ದೊರಕುವುದು ಸುಲಭವಲ್ಲ. ಆರ್ಥಿಕ ಪರಿಸ್ಥಿತಿಗಳು, ಉದ್ಯೋಗ ಕ್ಷೇತ್ರದ ಸ್ಪರ್ಧಾತ್ಮಕತೆಯು ಯುವಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೆಲವೊಮ್ಮೆ ಸರಿಯಾದ ಮಾರ್ಗದರ್ಶನದ ಕೊರತೆ, ಉದ್ಯೋಗಾವಕಾಶಗಳ ಬಗ್ಗೆ ಸರಿಯಾದ ಮಾಹಿತಿ ಲಭ್ಯವಿಲ್ಲದಿರುವುದು, ಇವುಗಳು ನಿರುದ್ಯೋಗದ ಪ್ರಮಾಣವನ್ನು ಹೆಚ್ಚಿಸುತ್ತವೆ.

ಈ ಹಿನ್ನೆಲೆಯಲ್ಲಿ, ಉದ್ಯೋಗ ಮೇಳಗಳು ಕಂಪನಿಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲು, ಉದ್ಯೋಗ ಅವಕಾಶಗಳ ಬಗ್ಗೆ ಸ್ಪಷ್ಟ ಮಾಹಿತಿ ಪಡೆಯಲು ಮತ್ತು ತಕ್ಷಣವೇ ಉದ್ಯೋಗ ಆಫರ್ ಪಡೆಯಲು ಅವಕಾಶ ನೀಡುವ ವಿಶಿಷ್ಟ ವೇದಿಕೆಗಳಾಗಿವೆ.

ಉದ್ಯೋಗ ಮೇಳ – ನಿರುದ್ಯೋಗಕ್ಕೆ ಪರಿಹಾರ

ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ

ಉದ್ಯೋಗ ಮೇಳಗಳು ವಿದ್ಯಾರ್ಥಿಗಳು ಮತ್ತು ಉದ್ಯೋಗದಾತರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸುತ್ತವೆ. ಈ ಮೇಳದಲ್ಲಿ ಭಾಗವಹಿಸುವುದು ನಿಮ್ಮ ಭವಿಷ್ಯಕ್ಕಾಗಿ ಬಹುಮುಖ್ಯವಾದ ಒಂದು ಹೆಜ್ಜೆ ಆಗಿರಬಹುದು. ಇದು ನಿಮಗೆ ಪ್ರತ್ಯಕ್ಷ ಸಂದರ್ಶನ, ಕಂಪನಿಗಳಿಂದ ಉದ್ಯೋಗ ಮಾಹಿತಿಗಳು, ಉದ್ಯೋಗ ತಂತ್ರಗಳು ಮತ್ತು ಮಾರ್ಗದರ್ಶನ ಪಡೆಯಲು ಅದ್ಭುತ ಅವಕಾಶ ಒದಗಿಸುತ್ತದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕಾರಣಗಳು

  • 50+ ಕಂಪನಿಗಳು ಭಾಗವಹಿಸುತ್ತಿವೆ – ಖಾಸಗಿ ಮತ್ತು ಬಹುರಾಷ್ಟ್ರೀಯ ಕಂಪನಿಗಳಿಂದ ಉದ್ಯೋಗ ಅವಕಾಶಗಳು.
  • ತಕ್ಷಣದ ಅವಕಾಶ – ಒಂದು ದಿನದಲ್ಲಿ ಉದ್ಯೋಗ ದೊರಕಿಸಿಕೊಳ್ಳುವ ಅವಕಾಶ.
  • ನೇರ ಸಂದರ್ಶನ – ಕಂಪನಿಗಳ ಪ್ರತಿನಿಧಿಗಳೊಂದಿಗೆ ನೇರವಾಗಿ ಸಂವಾದ ನಡೆಸುವ ಅವಕಾಶ.
  • ಉಚಿತ ಪ್ರವೇಶ – ಯಾವುದೇ ಶುಲ್ಕವಿಲ್ಲದೆ ಭಾಗವಹಿಸಲು ಅವಕಾಶ.
  • ಮಾರುಕಟ್ಟೆ ಪ್ರವೃತ್ತಿ ತಿಳಿಯಲು ಅವಕಾಶ – ಉದ್ಯೋಗ ಕ್ಷೇತ್ರದ ಹೊಸ ಹಾದಿಗಳನ್ನು ಅರಿಯಲು ಉತ್ತಮ ವೇದಿಕೆ.

ನೀವು ಮಾಡಬೇಕಾದ ಸಿದ್ಧತೆಗಳು

ಪ್ರಮುಖ ದಾಖಲೆಗಳು: ನಿಮ್ಮ ಸ್ವವಿವರ (Resume), ಅಂಕಪತ್ರಗಳು, ಗುರುತು ಪತ್ರ (Aadhar/PAN), ಪಾಸ್‌ಪೋರ್ಟ್ ಸೈಜ್ ಫೋಟೋಗಳು ಇತ್ಯಾದಿಗಳನ್ನು ಸಿದ್ಧಪಡಿಸಿಕೊಳ್ಳಿ.

ಸಮಯ ಪಾಲನೆ: ಮೇಳದ ಪ್ರಾರಂಭದ ಸಮಯಕ್ಕೆ ಮುಂಚೆ ಆಗಮಿಸಿ, ಇದರಿಂದ ನೀವು ಹೆಚ್ಚಿನ ಕಂಪನಿಗಳ ಸಂದರ್ಶನಗಳಿಗೆ ಹಾಜರಾಗಬಹುದು.

ಆತ್ಮವಿಶ್ವಾಸ: ಸಂದರ್ಶನಕ್ಕೆ ತಯಾರಿ ಮಾಡಿಕೊಂಡು ಆತ್ಮವಿಶ್ವಾಸದೊಂದಿಗೆ ನಿಮ್ಮನ್ನು ತೋರಿಸಿಕೊಳ್ಳಿ.

ಸಂಶೋಧನೆ: ಭಾಗವಹಿಸುವ ಕಂಪನಿಗಳ ಬಗ್ಗೆ ಮೊದಲೇ ಮಾಹಿತಿ ಪಡೆದುಕೊಳ್ಳಿ, ಇದರಿಂದ ಉತ್ತಮ ಪ್ರಭಾವ ಬೀರುವ ಅವಕಾಶ ಲಭ್ಯವಿರುತ್ತದೆ.

ಯಾರೆಲ್ಲ ಭಾಗವಹಿಸಬಹುದು

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು 18ರಿಂದ 35 ವರ್ಷದ ಒಳಗಿನವರಾಗಿರಬೇಕು ಎಂಟನೇ ತರಗತಿ ಎಸ್ ಎಸ್ ಎಲ್ ಸಿ ಪಿಯುಸಿ ಬಿಎ ಬಿಕಾಂ ಬಿ ಎಸ್ ಸಿ ಐ ಟಿ ಐ ಡಿಪ್ಲೋಮಾ ಬಿ.ಟೆಕ್ ಎಂ ಬಿ ಎ ಎಂಕಾಂ ಎಂ ಸಿ ಎ ಹಾಗೂ ಇತರ ಸ್ನಾತಕೋತ್ತರ ಪದವಿ ಹಾಗೂ ಇತರೆ ವಿದ್ಯಾರ್ಹತೆ ಹೊಂದಿರುವವರು ಮೇಳದಲ್ಲಿ ಭಾಗವಹಿಸಲು ಅರ್ಹರು.

ಯಾವೆಲ್ಲ ಕ್ಷೇತ್ರಗಳು ಭಾಗವಹಿಸುತ್ತವೆ

ಉದ್ಯೋಗ ಮರದಲ್ಲಿ ಐಟಿ ವಲಯ ಹಣಕಾಸು ಬ್ಯಾಂಕಿಂಗ್ ಉತ್ಪಾದನಾ ವಲಯ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ ಫಾರ್ಮಸಿಟಿಕಲ್ ಬಿಪಿಓ ವಾಯ್ಸ್ ಬೇಸ್ಡ್ ರಿಟೇಲ್ ಸೇಲ್ಸ್ ಅಂಡ್ ಮಾರ್ಕೆಟಿಂಗ್ ಆಟೋ ಮೊಬೈಲ್ ಡೇಟಾ ಎಂಟ್ರಿ ಆಪರೇಟರ್ ಸರ್ವಿಸ್ ಸೆಕ್ಟರ್ ಇತರೆ ಕ್ಷೇತ್ರಗಳಲ್ಲಿ ಉದ್ಯೋಗ ನೀಡುವ ಕಂಪನಿಗಳು ಭಾಗವಹಿಸುತ್ತಿವೆ

ಭಾಗವಹಿಸಿ, ಭವಿಷ್ಯ ಕಟ್ಟಿಕೊಳ್ಳಿ..!

ನೀವು ಉದ್ಯೋಗ ಹುಡುಕುತ್ತಿರುವ ವಿದ್ಯಾರ್ಥಿ ಅಥವಾ ಬೇರೊಂದು ಉದ್ಯೋಗದ ಅವಕಾಶಕ್ಕಾಗಿ ಹುಡುಕಾಟದಲ್ಲಿರುವವರೆ, ಈ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಿಮ್ಮ ಭವಿಷ್ಯ ರೂಪಿಸುವ ಒಂದು ಸುವರ್ಣ ಅವಕಾಶ. ಇದು ನಿಮ್ಮ ಪ್ರಾರಂಭಿಕ ಹಂತದ ಉದ್ಯೋಗವನ್ನು ಪಡೆಯಲು ಸಹಾಯ ಮಾಡುವಷ್ಟೇ ಅಲ್ಲ, ಉದ್ಯೋಗ ಕ್ಷೇತ್ರದ ಬೆಳವಣಿಗೆಗಳ ಬಗ್ಗೆ ಅರಿವು ಮೂಡಿಸುತ್ತದೆ.

ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಇದನ್ನು ಸುಲಭವಾಗಿಸುವ ಒಂದು ಅವಕಾಶ ನಿಮ್ಮ ಮುಂದೆ ಬಂದಿರುವಾಗ, ಅದನ್ನು ಉಪಯೋಗಿಸಿಕೊಳ್ಳುವುದು ಬುದ್ಧಿಮತ್ತೆಯಾಗಿದೆ. ಆದ್ದರಿಂದ, ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ನಿಮ್ಮ ಕನಸುಗಳತ್ತ ಹೆಜ್ಜೆ ಹಾಕಿ!

“ಯಶಸ್ಸು ನಿಮ್ಮ ಕೈತುಂಬ ಬೇಕಾದರೆ, ಅವಕಾಶಗಳನ್ನು ಪತ್ತೆ ಹಚ್ಚಿ, ಭಾಗವಹಿಸಿ ಮತ್ತು ನಿಮ್ಮ ಸಾಂದರ್ಭಿಕತೆಯನ್ನು ಸದುಪಯೋಗಪಡಿಸಿಕೊಳ್ಳಿ!”

ಮತ್ತು, ಜತೆಯಾಗಿ ಬನ್ನಿ… ಭಾಗವಹಿಸಿ… ಉದ್ಯೋಗ ಪಡೆಯಿರಿ!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending