ದಿನದ ಸುದ್ದಿ
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
- ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ
ನಮಗೆಲ್ಲರಿಗೂ ಒಂದು ಉತ್ತಮ ಜೀವನವನ್ನ ನಿರ್ಮಿಸಲು ಉದ್ಯೋಗ ಅತ್ಯಗತ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವ ಯುವಜನತೆ ನಿರುದ್ಯೋಗ ಎಂಬ ದೊಡ್ಡ ಸವಾಲನ್ನು ಎದುರಿಸುತ್ತಿದ್ದಾರೆ. ಅದನ್ನು ನಿವಾರಿಸುವ ಒಂದು ಮಹತ್ವದ ಹೆಜ್ಜೆಯಾಗಿ, ದಾವಣಗೆರೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು. ದಿನಾಂಕ 15.03.2025 ರಂದು ಐ.ಟಿ.ಐ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳವು 50ಕ್ಕೂ ಹೆಚ್ಚು ಖ್ಯಾತ ಕಂಪನಿಗಳನ್ನು ಒಳಗೊಂಡಿದ್ದು, ಯುವಕರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಿ ಉದ್ಯೋಗ ಗಳಿಸಿಕೊಳ್ಳಲು ಸುವರ್ಣಾವಕಾಶ ಒದಗಿಸುತ್ತದೆ. ಜಿಲ್ಲಾಡಳಿತವು ಈ ಮೇಳವನ್ನು ಯಶಸ್ವಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುತ್ತದೆ.
ನಿರುದ್ಯೋಗ – ಯುವಕರ ಮುಂದಿರುವ ದೊಡ್ಡ ಸವಾಲು
ಇಂದಿನ ಯುಗದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದರೂ ಉದ್ಯೋಗ ದೊರಕುವುದು ಸುಲಭವಲ್ಲ. ಆರ್ಥಿಕ ಪರಿಸ್ಥಿತಿಗಳು, ಉದ್ಯೋಗ ಕ್ಷೇತ್ರದ ಸ್ಪರ್ಧಾತ್ಮಕತೆಯು ಯುವಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೆಲವೊಮ್ಮೆ ಸರಿಯಾದ ಮಾರ್ಗದರ್ಶನದ ಕೊರತೆ, ಉದ್ಯೋಗಾವಕಾಶಗಳ ಬಗ್ಗೆ ಸರಿಯಾದ ಮಾಹಿತಿ ಲಭ್ಯವಿಲ್ಲದಿರುವುದು, ಇವುಗಳು ನಿರುದ್ಯೋಗದ ಪ್ರಮಾಣವನ್ನು ಹೆಚ್ಚಿಸುತ್ತವೆ.
ಈ ಹಿನ್ನೆಲೆಯಲ್ಲಿ, ಉದ್ಯೋಗ ಮೇಳಗಳು ಕಂಪನಿಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲು, ಉದ್ಯೋಗ ಅವಕಾಶಗಳ ಬಗ್ಗೆ ಸ್ಪಷ್ಟ ಮಾಹಿತಿ ಪಡೆಯಲು ಮತ್ತು ತಕ್ಷಣವೇ ಉದ್ಯೋಗ ಆಫರ್ ಪಡೆಯಲು ಅವಕಾಶ ನೀಡುವ ವಿಶಿಷ್ಟ ವೇದಿಕೆಗಳಾಗಿವೆ.
ಉದ್ಯೋಗ ಮೇಳ – ನಿರುದ್ಯೋಗಕ್ಕೆ ಪರಿಹಾರ
ಉದ್ಯೋಗ ಮೇಳಗಳು ವಿದ್ಯಾರ್ಥಿಗಳು ಮತ್ತು ಉದ್ಯೋಗದಾತರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸುತ್ತವೆ. ಈ ಮೇಳದಲ್ಲಿ ಭಾಗವಹಿಸುವುದು ನಿಮ್ಮ ಭವಿಷ್ಯಕ್ಕಾಗಿ ಬಹುಮುಖ್ಯವಾದ ಒಂದು ಹೆಜ್ಜೆ ಆಗಿರಬಹುದು. ಇದು ನಿಮಗೆ ಪ್ರತ್ಯಕ್ಷ ಸಂದರ್ಶನ, ಕಂಪನಿಗಳಿಂದ ಉದ್ಯೋಗ ಮಾಹಿತಿಗಳು, ಉದ್ಯೋಗ ತಂತ್ರಗಳು ಮತ್ತು ಮಾರ್ಗದರ್ಶನ ಪಡೆಯಲು ಅದ್ಭುತ ಅವಕಾಶ ಒದಗಿಸುತ್ತದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕಾರಣಗಳು
- 50+ ಕಂಪನಿಗಳು ಭಾಗವಹಿಸುತ್ತಿವೆ – ಖಾಸಗಿ ಮತ್ತು ಬಹುರಾಷ್ಟ್ರೀಯ ಕಂಪನಿಗಳಿಂದ ಉದ್ಯೋಗ ಅವಕಾಶಗಳು.
- ತಕ್ಷಣದ ಅವಕಾಶ – ಒಂದು ದಿನದಲ್ಲಿ ಉದ್ಯೋಗ ದೊರಕಿಸಿಕೊಳ್ಳುವ ಅವಕಾಶ.
- ನೇರ ಸಂದರ್ಶನ – ಕಂಪನಿಗಳ ಪ್ರತಿನಿಧಿಗಳೊಂದಿಗೆ ನೇರವಾಗಿ ಸಂವಾದ ನಡೆಸುವ ಅವಕಾಶ.
- ಉಚಿತ ಪ್ರವೇಶ – ಯಾವುದೇ ಶುಲ್ಕವಿಲ್ಲದೆ ಭಾಗವಹಿಸಲು ಅವಕಾಶ.
- ಮಾರುಕಟ್ಟೆ ಪ್ರವೃತ್ತಿ ತಿಳಿಯಲು ಅವಕಾಶ – ಉದ್ಯೋಗ ಕ್ಷೇತ್ರದ ಹೊಸ ಹಾದಿಗಳನ್ನು ಅರಿಯಲು ಉತ್ತಮ ವೇದಿಕೆ.
ನೀವು ಮಾಡಬೇಕಾದ ಸಿದ್ಧತೆಗಳು
ಪ್ರಮುಖ ದಾಖಲೆಗಳು: ನಿಮ್ಮ ಸ್ವವಿವರ (Resume), ಅಂಕಪತ್ರಗಳು, ಗುರುತು ಪತ್ರ (Aadhar/PAN), ಪಾಸ್ಪೋರ್ಟ್ ಸೈಜ್ ಫೋಟೋಗಳು ಇತ್ಯಾದಿಗಳನ್ನು ಸಿದ್ಧಪಡಿಸಿಕೊಳ್ಳಿ.
ಸಮಯ ಪಾಲನೆ: ಮೇಳದ ಪ್ರಾರಂಭದ ಸಮಯಕ್ಕೆ ಮುಂಚೆ ಆಗಮಿಸಿ, ಇದರಿಂದ ನೀವು ಹೆಚ್ಚಿನ ಕಂಪನಿಗಳ ಸಂದರ್ಶನಗಳಿಗೆ ಹಾಜರಾಗಬಹುದು.
ಆತ್ಮವಿಶ್ವಾಸ: ಸಂದರ್ಶನಕ್ಕೆ ತಯಾರಿ ಮಾಡಿಕೊಂಡು ಆತ್ಮವಿಶ್ವಾಸದೊಂದಿಗೆ ನಿಮ್ಮನ್ನು ತೋರಿಸಿಕೊಳ್ಳಿ.
ಸಂಶೋಧನೆ: ಭಾಗವಹಿಸುವ ಕಂಪನಿಗಳ ಬಗ್ಗೆ ಮೊದಲೇ ಮಾಹಿತಿ ಪಡೆದುಕೊಳ್ಳಿ, ಇದರಿಂದ ಉತ್ತಮ ಪ್ರಭಾವ ಬೀರುವ ಅವಕಾಶ ಲಭ್ಯವಿರುತ್ತದೆ.
ಯಾರೆಲ್ಲ ಭಾಗವಹಿಸಬಹುದು
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು 18ರಿಂದ 35 ವರ್ಷದ ಒಳಗಿನವರಾಗಿರಬೇಕು ಎಂಟನೇ ತರಗತಿ ಎಸ್ ಎಸ್ ಎಲ್ ಸಿ ಪಿಯುಸಿ ಬಿಎ ಬಿಕಾಂ ಬಿ ಎಸ್ ಸಿ ಐ ಟಿ ಐ ಡಿಪ್ಲೋಮಾ ಬಿ.ಟೆಕ್ ಎಂ ಬಿ ಎ ಎಂಕಾಂ ಎಂ ಸಿ ಎ ಹಾಗೂ ಇತರ ಸ್ನಾತಕೋತ್ತರ ಪದವಿ ಹಾಗೂ ಇತರೆ ವಿದ್ಯಾರ್ಹತೆ ಹೊಂದಿರುವವರು ಮೇಳದಲ್ಲಿ ಭಾಗವಹಿಸಲು ಅರ್ಹರು.
ಯಾವೆಲ್ಲ ಕ್ಷೇತ್ರಗಳು ಭಾಗವಹಿಸುತ್ತವೆ
ಉದ್ಯೋಗ ಮರದಲ್ಲಿ ಐಟಿ ವಲಯ ಹಣಕಾಸು ಬ್ಯಾಂಕಿಂಗ್ ಉತ್ಪಾದನಾ ವಲಯ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ ಫಾರ್ಮಸಿಟಿಕಲ್ ಬಿಪಿಓ ವಾಯ್ಸ್ ಬೇಸ್ಡ್ ರಿಟೇಲ್ ಸೇಲ್ಸ್ ಅಂಡ್ ಮಾರ್ಕೆಟಿಂಗ್ ಆಟೋ ಮೊಬೈಲ್ ಡೇಟಾ ಎಂಟ್ರಿ ಆಪರೇಟರ್ ಸರ್ವಿಸ್ ಸೆಕ್ಟರ್ ಇತರೆ ಕ್ಷೇತ್ರಗಳಲ್ಲಿ ಉದ್ಯೋಗ ನೀಡುವ ಕಂಪನಿಗಳು ಭಾಗವಹಿಸುತ್ತಿವೆ
ಭಾಗವಹಿಸಿ, ಭವಿಷ್ಯ ಕಟ್ಟಿಕೊಳ್ಳಿ..!
ನೀವು ಉದ್ಯೋಗ ಹುಡುಕುತ್ತಿರುವ ವಿದ್ಯಾರ್ಥಿ ಅಥವಾ ಬೇರೊಂದು ಉದ್ಯೋಗದ ಅವಕಾಶಕ್ಕಾಗಿ ಹುಡುಕಾಟದಲ್ಲಿರುವವರೆ, ಈ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಿಮ್ಮ ಭವಿಷ್ಯ ರೂಪಿಸುವ ಒಂದು ಸುವರ್ಣ ಅವಕಾಶ. ಇದು ನಿಮ್ಮ ಪ್ರಾರಂಭಿಕ ಹಂತದ ಉದ್ಯೋಗವನ್ನು ಪಡೆಯಲು ಸಹಾಯ ಮಾಡುವಷ್ಟೇ ಅಲ್ಲ, ಉದ್ಯೋಗ ಕ್ಷೇತ್ರದ ಬೆಳವಣಿಗೆಗಳ ಬಗ್ಗೆ ಅರಿವು ಮೂಡಿಸುತ್ತದೆ.
ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಇದನ್ನು ಸುಲಭವಾಗಿಸುವ ಒಂದು ಅವಕಾಶ ನಿಮ್ಮ ಮುಂದೆ ಬಂದಿರುವಾಗ, ಅದನ್ನು ಉಪಯೋಗಿಸಿಕೊಳ್ಳುವುದು ಬುದ್ಧಿಮತ್ತೆಯಾಗಿದೆ. ಆದ್ದರಿಂದ, ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ನಿಮ್ಮ ಕನಸುಗಳತ್ತ ಹೆಜ್ಜೆ ಹಾಕಿ!
“ಯಶಸ್ಸು ನಿಮ್ಮ ಕೈತುಂಬ ಬೇಕಾದರೆ, ಅವಕಾಶಗಳನ್ನು ಪತ್ತೆ ಹಚ್ಚಿ, ಭಾಗವಹಿಸಿ ಮತ್ತು ನಿಮ್ಮ ಸಾಂದರ್ಭಿಕತೆಯನ್ನು ಸದುಪಯೋಗಪಡಿಸಿಕೊಳ್ಳಿ!”
ಮತ್ತು, ಜತೆಯಾಗಿ ಬನ್ನಿ… ಭಾಗವಹಿಸಿ… ಉದ್ಯೋಗ ಪಡೆಯಿರಿ!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ4 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ7 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ7 days agoನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
-
ದಿನದ ಸುದ್ದಿ4 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ6 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ4 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ


