Connect with us

ದಿನದ ಸುದ್ದಿ

JOB NEWS | HCL ಟೆಕ್ನಾಲಜೀಸ್‌ನಲ್ಲಿ ಶಿಕ್ಷಣ ಜೊತೆಗೆ ಉದ್ಯೋಗ ಅವಕಾಶ

Published

on

ಸುದ್ದಿದಿನಡೆಸ್ಕ್: 2023 ಮತ್ತು 2024 ರಲ್ಲಿ 2ನೇ PUC (ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ) ಪಾಸ್ ಆಗಿರುವ ವಿದ್ಯಾರ್ಥಿಗಳು ಐಟಿ ಸೇವೆಗಳು ಮತ್ತು ಅಸೋಸಿಯೇಟ್ ಉದ್ಯೋಗದ ಪಾತ್ರಗಳಿಗಾಗಿ 12 ತಿಂಗಳ ತರಬೇತಿ ಜೊತೆಗೆ ಇಂಟರ್ನಶಿಪ್ ಪಡೆಯುತ್ತಾರೆ.

ಇದು ಒಟ್ಟಾರೆ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಿದ್ಧಗೊಳಿಸಲು ಅವರ ವ್ಯಕ್ತಿತ್ವವನ್ನು ವಿಕಾಸಗೊಳಿಸುವುದರ ಮೇಲೆ ಕೇಂದ್ರೀಕರಿಸುವ ಕಾರ್ಯಕ್ರಮವಾಗಿದೆ.

ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಅಭ್ಯರ್ಥಿಗಳು HCLTech ನಲ್ಲಿ ಉದ್ಯೋಗ ಪಡೆಯುತ್ತಾರೆ.
ಕೆಲಸ ಮಾಡುವಾಗ ಅಭ್ಯರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು (Degree) IIIT, BITS Pilani, AMITY, KL ವಿಶ್ವವಿದ್ಯಾಲಯ ಅಥವಾ SASTRA ವಿಶ್ವವಿದ್ಯಾನಿಲಯದಲ್ಲಿ ಮುಂದುವರಿಸಲು ಆಯ್ಕೆಯನ್ನು ಹೊಂದಿರುತ್ತಾರೆ.

TechBee ಅಭ್ಯರ್ಥಿಗಳು ಇಂಟರ್ನ್‌ಶಿಪ್ ಸಮಯದಲ್ಲಿ ಪ್ರತಿ ತಿಂಗಳು ₹.10,000 ಸ್ಟೈಫಂಡ್ ಗಳಿಸುತ್ತಾರೆ ಮತ್ತು HCLTech ನಿಂದ ಒಮ್ಮೆ ನೇಮಕಗೊಂಡ ನಂತರ ವಾರ್ಷಿಕ ₹1.70 – ₹2.20 ಲಕ್ಷಗಳ ನಡುವೆ ಸಂಬಳವನ್ನು ಗಳಿಸಲು ಪ್ರಾರಂಭಿಸುತ್ತಾರೆ.

ಕರ್ನಾಟಕದಲ್ಲಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ದೊಂದಿಗೆ ಒಪ್ಪಂದ ಪ್ರಯುಕ್ತ ಕರ್ನಾಟಕದಲ್ಲಿ HCL TechBee ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ.

2023 & 2024 ರಲ್ಲಿ PUC 2ನೇ ವರ್ಷ ಪಾಸಾಗಿರುವವರು ಈಗಲೇ ಕೆಳಗಿನ ಲಿಂಕ್‌ ಮೂಲಕ ನೋಂದಾಯಿಸಿಕೊಳ್ಳಿ ಮತ್ತು HCL TechBee ನೊಂದಿಗೆ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಿ.

ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ- https://bit.ly/TechBeeKSDC ಕಾರ್ಯಗಾರ ನಡೆಯುವ ಸ್ಥಳ : DVS Independent PU College ಶಿವಮೊಗ್ಗ. ದಿನಾಂಕ : 15-06-2024,ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:8217478207 / 8722790340 / 9845454471

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು : ನೀಲಾನಹಳ್ಳಿಯಲ್ಲಿ ಎನ್.ಎಸ್.ಎಸ್ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ನಗರದ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ಮತ್ತು ನೀಲಾನಹಳ್ಳಿ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಎರಡನೇ ದಿನದ ಎನ್.ಎಸ್.ಎಸ್.ಶಿಬಿರದ ಕಾರ್ಯಕ್ರಮ ಗುರುವಾರ (ಏ.10)ರಂದು ಜರುಗಿತು.

2024-25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಪ್ರೊ. ಮಂಜುನಾಥ ಜಿ. ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳು, ಬಾಬಾಸಾಹೇಬ್ ಅಂಬೇಡ್ಕರ್ ಶತಮಾನೋತ್ಸವ ಪದವಿ ಕಾಲೇಜ್ ಹರಿಹರ, ಇವರು
“ಸಂವಹನ ಕೌಶಲ್ಯ ಹಾಗೂ ಎನ್. ಎಸ್. ಎಸ್. ಮತ್ತು ಯುವಜನತೆ” ಕುರಿತು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಧುಶ್ರೀನಿವಾಸ ಟಿ., ಕೆ.ಸಿ.ಎಸ್. ಸಹಕಾರ ಸಂಘಗಳ ಉಪ ನಿಬಂಧಕರು, ದಾವಣಗೆರೆ ಜಿಲ್ಲೆ, ಸಹಕಾರ ಸಂಘಗಳ ಮಹತ್ವ ಬಗ್ಗೆ ತಿಳಿಸಿದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳ ತಿಳಿಸಿದರು.

ಪ್ರೊ. ಮಾರುತಿ ಶಾಲೆಮನೆ, ಕಿರುಚಿತ್ರ ನಿರ್ದೇಶಕರು ಮತ್ತು ಕನ್ನಡ ಉಪನ್ಯಾಸಕರ ವಿಷಯ : ‘ಮಾನವೀಯತೆಯ ಮಹಾವೀರ’ ಕುರಿತು ಮಾತನಾಡಿದರು.

ನಂತರ ಉಪನ್ಯಾಸದ ಕಾರ್ಯಕ್ರಮವನ್ನು ಪ್ರೊ. ಸೌಮ್ಯ ಬಿ., ಎನ್.ಎಸ್.ಎಸ್ ಅಧಿಕಾರಿಗಳು, ಉಪನ್ಯಾಸಕರು, ಎಸ್.ಬಿ.ಸಿ. ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ದಾವಣಗೆರೆ. ಇವರು
ವಿಷಯ : ‘ಮಹಿಳೆ ಮತ್ತು ಸ್ವಾವಲಂಬನೆ’ ಕುರಿತು ಮಾತನಾಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರೇಖಾ ಹೆಚ್.ಜಿ., ವಿಭಾಗದ ಮುಖ್ಯಸ್ಥರು ವಾಣಿಜ್ಯ ಮತ್ತು ನಿರ್ವಹಣ ಶಾಸ್ತ್ರ ವಿಭಾಗ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಡಿ.ಆರ್.ವಿಶ್ವನಾಥ ಉಪನ್ಯಾಸಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಹೊನ್ನಾಳಿ.
ನೀಲಾನಹಳ್ಳಿ ಗ್ರಾಮದ ಮುಖಂಡರಾದ ಸುಭಾಷ್ ಜೆ, ವಿರುಪಾಕ್ಷಪ್ಪ. ಕೆ. ಎನ್. ಡಿ.ರಾಜಪ್ಪ ಉಪಸ್ಥಿತರಿದ್ದರು.

ಈ ಕಾರ್ಯಕ್ರಮ ವನ್ನು ಶಿಬಿರಾರ್ಥಿಗಳಾದ ಶ್ರೇಯಾ ಪ್ರಾರ್ಥಿಸಿದರು, ನಿರೂಪಣೆಯನ್ನು ನೇಹ, ಸ್ವಾಗತವನ್ನು ಸುಚಿತ್ರ ಹಾಗೂ ವಂದನಾರ್ಪಣೆಯನ್ನು ಆಕಾಶ್ ಮಾಡಿದರು.

ಎನ್.ಎಸ್ ಎಸ್. ಕಾರ್ಯಕ್ರಮದ ಅಧಿಕಾರಿಗಳಾದ ಪ್ರೊಫೆಸರ್ ಅಣ್ಣೇಶ್. ಪಿ ಮತ್ತು ಶ್ರೀಮತಿ ಅನುಷಾ. ಎಸ್. ಹೆಚ್. ಕಾರ್ಯಕ್ರಮವನ್ನು ನಿರ್ವಹಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಾನಪದ ಆಚರಣೆಗಳಲ್ಲಿ ವೈಜ್ಞಾನಿಕತೆ ಅಡಗಿದೆ : ಪ್ರೊ. ಮೋನಿಕಾ ರಂಜನ್

Published

on

ಸುದ್ದಿದಿನ,ಬಳ್ಳಾರಿ:ಜಾನಪದ ಆಚರಣೆಯಲ್ಲಿ ವೈಜ್ಞಾನಿಕ ಅಂಶಗಳು ಅಡಗಿದ್ದು, ಜನಪದ ಕಲೆಗಳು ಮನಸಿಗೆ ಮುದ ನೀಡುತ್ತವೆ ಎಂದು ಪ್ರಾಂಶುಪಾಲರಾದ ಪ್ರೊ.‌ಮೋನಿಕಾ ರಂಜನ್ ತಿಳಿಸಿದರು.

ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ’ ಜಾನಪದ ಉತ್ಸವ – 2025 ‘ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮಲ್ಲಿ ವೈವಿಧ್ಯಮಯವಾದ ಜನಪದ ಕಲೆಗಳಿವೆ. ಅವುಗಳನ್ನು ಉಳಿಸಿ ಬೆಳೆಸುವ ಕೆಲಸ ಎಲ್ಲರದಾಗಬೇಕೆಂದರು.ಜಾನಪದ ಸಾಹಿತ್ಯವು ಜನಸಾಮಾನ್ಯರ ನಿತ್ಯ ಬದುಕಿನ ದರ್ಶನವಾಗಿದೆ. ಅವರ ನೋವು, ನಲಿವು,ಜೀವನ ವಿಧಾನ,ಸಂಸ್ಕೃತಿ ಎಲ್ಲವೂ ಅದರಲ್ಲಿ ಮಿಳಿತವಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಸಾಹಿತಿ ಡಾ.ದಸ್ತಗೀರಸಾಬ್ ದಿನ್ನಿ ಆಧುನಿಕ ಜಗತ್ತಿನ ಭರಾಟೆಯಲ್ಲಿ ಜಾನಪದ ಸಾಹಿತ್ಯ, ಕಲೆಗಳು ಇಂದು ನಶಿಸುತ್ತಿವೆ.ಯುವ ಮನಸ್ಸುಗಳಲ್ಲಿ ಜಾನಪದ ಸಾಹಿತ್ಯದ ಬಗೆಗೆ ಅರಿವನ್ನು, ಕಲೆಗಳ ಬಗೆಗೆ ಪ್ರೀತಿಯನ್ನು ಹುಟ್ಟಿಸುವುದು. ಮುಂದಿನ ತಲೆಮಾರಿಗಾಗಿ ಇದನ್ನು ದಾಟಿಸುವುದ ಈ ಕಾರ್ಯಕ್ರಮದ ಮೂಲ ಉದ್ದೇವಾಗಿದೆ ಎಂದರು.

ವಿಶೇಷ ಉಪನ್ಯಾಸ ನೀಡಿದ ಸಹಾಯಕ ಪ್ರಾಧ್ಯಾಪಕ ರಾಮಸ್ವಾಮಿ, ಜಾನಪದ ಸಾಹಿತ್ಯವು ಮಾನವೀಯ ಮೌಲ್ಯ, ನೀತಿ, ಆದರ್ಶ ಮುಂತಾದ ಗುಣಗಳನ್ನು ಕಟ್ಟಿಕೊಡುತ್ತದೆ. ಬಹಳ ಮುಖ್ಯವಾಗಿ ಜಾನಪದ ಆಟಗಳಿಂದ ಜನರಿಗೆ ಸಂತೋಷವಾಗುವುದರೊಂದಿಗೆ ದೈಹಿಕ ಶ್ರಮ ಕೂಡ ಆಗುತ್ತಿತ್ತು ಎಂದರು.

ವೇದಿಕೆ ಮೇಲೆ ಹಿರಿಯ ಸಹ ಪ್ರಾಧ್ಯಾಪಕ, ಜಾನಪದ ಉತ್ಸವ ಸಮಿತಿಯ ಸಂಚಾಲಕರಾದ ಡಾ. ಸಿ. ಎಚ್. ಸೋಮನಾಥ್, ಅಧ್ಯಾಪಕರಾದ ಡಾ. ಮಂಜುನಾಥ್, ಜಯಶ್ರೀ,
ಡಾ.ಪಂಚಾಕ್ಷರಿ, ಪಂಪನಗೌಡ, ಡಾ. ಗುರುಬಸಪ್ಪ, ಗ್ರಂಥಪಾಲಕ ಪ್ರಶಾಂತ, ಡಾ. ಟಿ. ದುರುಗಪ್ಪ, ಡಾ. ಕನ್ಯಾಕುಮಾರಿ, ಡಾ. ಪಲ್ಲವಿ, ಅಧೀಕ್ಷಕ ಯುವರಾಜ ನಾಯ್ಕ ಇದ್ದರು.

ಮೆರವಣಿಗೆ

ಜಾನಪದ ಮೆರವಣಿಗೆ ಕಾಲೇಜಿನಿಂದ ಆರಂಭವಾಗಿ ಸಂಗಮ್ ಚೌಕಿನವರೆಗೆ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳ ವೀರಗಾಸೆ, ಲಂಬಾಣಿ ನೃತ್ಯ,ಡೊಳ್ಳು ಕುಣಿತ,ಕಂಸಾಳೆ, ಕೋಲಾಟ, ಬಯಲಾಟ, ಮಣಿಪುರಿ ನೃತ್ಯ, ಯಕ್ಷಗಾನ ಕಲಾತಂಡದವರು ಮೆರವಣಿಗೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು. ನಂತರ ವೇದಿಕೆಯಲ್ಲಿ ವೈವಿಧ್ಯಮಯವಾದ ಕಲಾ ಪ್ರದರ್ಶನಗಳು ಗಮನ ಸೆಳೆದವು.

ದೇಸಿ ಅಡುಗೆ

ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಸಪ್ಪ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ದೇಸಿ ಅಡುಗೆ ಅಧ್ಯಾಪಕರು, ಅತಿಥಿಗಳು, ವಿದ್ಯಾರ್ಥಿಗಳ ಪಾಲಕರು, ಭೋದಕರೇತ ಸಿಬ್ಬಂದಿಗಳ ಒಡಲು ತಣಿಸಿತು.
ವಿದ್ಯಾರ್ಥಿಗಳೊಂದಿಗೆ ಅಧ್ಯಾಪಕರು ಹೆಜ್ಜೆ ಹಾಕಿ ಸಂಭ್ರಮಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚಿಸಿದ ಅಬಕಾರಿ ಸುಂಕವನ್ನು ರದ್ದುಗೊಳಿಸಿ : ಯುವ ಕಾಂಗ್ರೆಸ್ ಅಗ್ರಹ

Published

on

ಸುದ್ದಿದಿನ,ಬಳ್ಳಾರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೇಕಾಬಿಟ್ಟಿಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುತ್ತಾ ಬರುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯವಾಗಿ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರು ತುಂಬಾ ಹೈರಾಣ ಆಗುತ್ತಿದ್ದಾರೆ.

ಕೂಡಲೇ ಕೇಂದ್ರ ಸರ್ಕಾರ ಹೆಚ್ಚುವರಿ ಅಬಕಾರಿ ಸುಂಕವನ್ನು ರದ್ದುಪಡಿಸಬೇಕೆಂದು ಬಳ್ಳಾರಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ರಾಜ್ಯ ಅಧ್ಯಕ್ಷರಾದ ಎಸ್.ಹೆಚ್.ಮಂಜುನಾಥ್ ಗೌಡ ಇವರ ಆದೇಶದ ಮೇರೆಗೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರ ಮಾರ್ಗದಲ್ಲಿ ಬಳ್ಳಾರಿ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಕೆ.ಶ್ರೀಕಾಂತ್ ಇವರ ನೇತತ್ವದಲ್ಲಿ ಮೋಕಾ ರೂಪನಗುಡಿ ಬ್ಲಾಕ್ ಅಧ್ಯಕ್ಷರಾದ ಎಸ್.ಜೆ.ಕೋಟೆ ಉಮೇಶ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ, ಗ್ರಾಮಾಂತರ ಅಸೆಂಬ್ಲಿ ಅಧ್ಯಕ್ಷರಾದ ಫಾರೋಜ್ ಖಾನ್ ಹಾಗೂ ಬ್ಲಾಕ್ ಅಧ್ಯಕ್ಷರಾದ ಫಜೀಲ್, ಅಬ್ದುಲ್ ಬಾರಿ ಮತ್ತು ಪಧಾದಿಕಾರಿಗಳ ಸಮ್ಮುಖದಲ್ಲಿ ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ಆಗಮಿಸಿ ಮನವಿ ಪತ್ರವನ್ನು ಸಲ್ಲಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಪೆಟ್ರೋಲ್ ರೂ.2 ಹೆಚ್ಚಿಸುವ ಮತ್ತು ಎಲ್.ಜಿ.ಪಿ.ಸಿಲಿಂಡರ್ ಬೆಲೆಯನ್ನು ರೂ.50 ಹೆಚ್ಚಿಸುವ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವನ್ನು ಭಾರತೀಯ ಯುವ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ. ಈ ಬೆಲೆ ಏರಿಕೆಗಳು ಈಗಾಗಳೇ ಹಣದುಬ್ಬರ ಮತ್ತು ನಿರೋದ್ಯಗದಿಂದ ಬಳಲುತ್ತಿರುವ ಸಾಮಾನ್ಯ ರೈತರು ದಿನಗೂಲಿ ಕಾರ್ಮಿಕರು ಮತ್ತು ಮಧ್ಯಮ ವರ್ಗದ ಕುಟಂಬಗಳ ಮೇಲೆ ಭಾರಿ ಹೊರೆಯಾಗಿದೆ, ಆದ್ದರಿಂದ ಈ ಕೂಡಲೇ ಕೇಂದ್ರ ಬಿ.ಜೆ.ಪಿ ಸರ್ಕಾರವು ಏರಿಕೆ ಮಾಡಿರುವ ಎಲ್.ಪಿ.ಜಿ. ಮತ್ತು ಅನಿಲ ದರವನ್ನು ಪರಿಷ್ಕರಿಸಿ ತಕ್ಷಣದಿಂದ ಯಥಾಸ್ಥಿತಿಯನ್ನು ಕಾಪಾಡಬೇಕೆಂದು ಬಳ್ಳಾರಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ವತಿಯಿಂದ ಆಗ್ರಹಿಸುತ್ತಿದ್ದೇವೆ ಎಂದರು.

ಈ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ನಾಯಕರಾದ ಸಿದ್ದುಹಳ್ಳೆಗೌಡ, ಬಳ್ಳಾರಿ ಜಿಲ್ಲಾ ನಗರ ಯುವ ಅಧ್ಯಕ್ಷರಾದ ಶ್ರೀಕಾಂತ್, ಬಳ್ಳಾರಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷರಾದ ಎನ್.ಕೆ.ಎಸ್.ಮಂಜುನಾಥ್, ಮೋಕಾ ರೂಪನಗುಡಿ ಬ್ಲಾಕ್ ಅಧ್ಯಕ್ಷರಾದ ಎಸ್.ಜೆ.ಕೋಟೆ ಉಮೇಶ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ, ಗ್ರಾಮಾಂತರ ಅಸೆಂಬ್ಲಿ ಅಧ್ಯಕ್ಷರಾದ ಫಾರೋಜ್ ಖಾನ್ ಹಾಗೂ ಬ್ಲಾಕ್ ಅಧ್ಯಕ್ಷರಾದ ಫಜೀಲ್, ಅಬ್ದುಲ್ ಬಾರಿ, ಡಿಸಿಸಿ ಕಾರ್ಯದರ್ಶಿ ವಿ.ಸುನೀತ, ನಾಮ ನಿರ್ದೇಶಕ ಪಾಲಿಕೆಯ ಸದಸ್ಯರಾದ ಸಮೀರ್, ಯುವ ಅಧ್ಯಕ್ಷರಾದ ಕವಿತ, ಸಂಡೂರು ಅಸೆಂಬ್ಲಿ ಅಧ್ಯಕ್ಷರಾದ ಬಸವರಾಜ್, ಸಿರುಗುಪ್ಪ ಅಸೆಂಬ್ಲಿ ಅಧ್ಯಕ್ಷರಾದ ಟಿ.ಗೋವಿಂದ, ಪ್ರಧಾನ ಕಾರ್ಯದರ್ಶಿ ಅಜಾರುದ್ದೀನ್, ಮಂಜುನಾಥ್ ಸಿ.ಎನ್. ಕುರುಗೋಡು ಬ್ಲಾಕ್ ಯುವ ಅಧ್ಯಕ್ಷರಾದ ರಾಘವೇಂದ್ರ, ಕಾಂಗ್ರೆಸ್ ಯುವ ಮುಖಂಡರಾದ ಅಸುಂಡಿ ಹನುಮೇಶ್, ಸಿಂಧವಾಳ ಅರುಣ್ ಕುಮಾರ್, ಲಕ್ಷ್ಮಿ ರೆಡ್ಡಿ, ಚಳ್ಳಗುರ್ಕಿ ತಿಪ್ಪೇಶ್, ಅಂಜೀನೆಯ, ರೇಡಿಯೋ ಪಾರ್ಕ್ ಮಮತ, ನಾಗಲಕೆರೆ ಗೀತಾ, ದಿವಾಕರ್ ಸೇರಿದಂತೆ ಕಾಂಗ್ರೆಸ್ ಯುವ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending