ರಾಜಕೀಯ
ಆಯುಷ್ ವಿವಿ ವಿಧೇಯಕ ಸೇರಿ 08 ವಿಧೇಯಕಗಳಿಗೆ ವಿಧಾನ ಪರಿಷತ್ನಲ್ಲಿ ಅಂಗೀಕಾರ
ಸುದ್ದಿದಿನ,ಬೆಳಗಾವಿ ಸುವರ್ಣಸೌಧ :ವಿಧಾನಪರಿಷತ್ನಲ್ಲಿ ಬುಧವಾರ ಎಂಟು ವಿಧೇಯಕಗಳಿಗೆ ಅಂಗೀಕಾರ ದೊರೆತಿದೆ. ವಿಧಾನಸಭೆಯಿಂದ ಅಂಗೀಕೃತವಾದ ರೂಪದಲ್ಲಿರುವ ವಿಧೇಯಕಗಳನ್ನು ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಅವರು ಸಭೆಯ ಮುಂದಿಟ್ಟರು.
- ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು(ಎರಡನೇ ತಿದ್ದುಪಡಿ) ವಿಧೇಯಕ
- ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ವಿಧೇಯಕ
- ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ
- ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ(ತಿದ್ದುಪಡಿ) ವಿಧೇಯಕ
- ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ
- ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ವಿಧೇಯಕ
- ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ)(ಎರಡನೇ ತಿದ್ದುಪಡಿ)ವಿಧೇಯಕ
- ವಿಶ್ವೇಶ್ವರಯ್ಯ ಇಂಜನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ವಿಧೇಯಕಗಳ ಕುರಿತು ಸದನದಲ್ಲಿ ಸುಧೀರ್ಘ ಚರ್ಚೆ ನಡೆಯಿತು.
ಸದಸ್ಯರು ಹಾಗೂ ಸಚಿವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ಮಂಡಿಸಲಾದ ಎಂಟು ವಿಧೇಯಕಗಳಿಗೆ ಸದನವು ಅಂಗೀಕರಿಸಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243