ದಿನದ ಸುದ್ದಿ
ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್ : ಆನ್ಲೈನ್ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.
ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.
ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.
ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.
ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್ಗಳನ್ನು ನೀಡಲಾಗುವುದು.
ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್,ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.ಅಪ್ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಯಲಕ್ಷ್ಮಿ ಕಾರಂತ್ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ಅಲರ್ಟ್..!

- ಸುನೀತ ಕುಶಾಲನಗರ
ನದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.
ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .
ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.
ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.
ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು
ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!
ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.
ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ
-
ದಿನದ ಸುದ್ದಿ7 days ago
ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
-
ದಿನದ ಸುದ್ದಿ7 days ago
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ
-
ದಿನದ ಸುದ್ದಿ6 days ago
ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ
-
ದಿನದ ಸುದ್ದಿ7 days ago
ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ
-
ದಿನದ ಸುದ್ದಿ6 days ago
ಅಮಾನವೀಯ ಕೃತ್ಯ | ಹೆಣ್ಣು ಮಗು ಮಾರಾಟ ಮಾಡಿದ ಪೋಷಕರು
-
ಅಂಕಣ6 days ago
ಸಿದ್ಧಾಂತ ಮತ್ತು ಪತ್ರಿಕೋದ್ಯಮ