ಸಿನಿ ಸುದ್ದಿ
ಬಾಲಿವುಡ್ ಸಕ್ಸಸ್ ಪರೇಡ್ ನಲ್ಲಿ ಆಧುನಿಕ ದೇವದಾಸ್ ಉರುಫ್ ‘ಕಬೀರ್ ಸಿಂಗ್’..!
![](https://suddidina.com/wp-content/uploads/2019/06/Kabir-Singh-suddidina-64.jpg)
ಬಿಡುಗಡೆಯಾದ ಮೊದಲನೇ ದಿನವೇ 20ಕೋಟಿ ರೂ. ಗಳಿಕೆ ಯೊಂದಿಗೆ ಬಾಕ್ಸಾಫೀಸಿನಲ್ಲಿ ದಾಖಲೆ ನಿರ್ಮಿಸಿದ್ದಾನೆ ಕಬೀರ್ ಸಿಂಗ್! ವೀಕೆಂಡ್” ವಿತ್ ಕಬೀರ್ ಸಿಂಗ್ “ಎಂಬ ಪ್ರಮೋಷನ್ , ಕೂಡಾ ಕ್ಲಿಕ್ ಆಗಿದ್ದು, ಕಬೀರ್ ಸಿಂಗ್ ನಾ ಅಬ್ಬರಕ್ಕೆ ಬಾಲಿವುಡ್ ಬಾಕ್ಸಾಫೀಸ್ ಥರಥರ!
ತೆಲುಗಿನ ವಿಜಯ್ ದೇವರುಕೊಂಡ ಅಭಿನಯದ ಸೂಪರ್ ಹಿಟ್ ಅರ್ಜುನ್ ರೆಡ್ಡಿ ಚಿತ್ರದ ರಿಮೇಕ್ ಆಗಿದ್ದರೂ, ಬಾಲಿವುಡ್ ಗಲ್ಲಾಪೆಟ್ಟಿಗೆಯಲ್ಲಿ ಭಾರೀ ಸದ್ದು ಮಾಡುತ್ತಿದ್ದಾನೆ ಕಬೀರ್ ಸಿಂಗ್. ಬಹಳ ವರ್ಷಗಳ ನಂತರ, ಆಧುನಿಕ ದೇವದಾಸ್ ಆಗಿ ಶಾಹೀದ್ ಕಪೂರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರೀತಿ ಕಳೆದುಕೊಂಡ ಆಧುನಿಕ ದೇವದಾಸ್ ಆಗಿ ಕಬೀರ್ ಸಿಂಗ್ ಯುವಪೀಳಿಗೆಯ ಹಾಟ್ ಫೇವರಿಟ್ ಆಗಿದ್ದಾರೆ.ರೀಮೇಕ್ ಸಿನಿಮಾ ಆದರೂ, ಅಧ್ಬುತ ನಟನೆಯಿಂದ ಚಿತ್ರದ ಯಶಸ್ಸಿಗೆ ಕಾರಣರಾಗಿದ್ದಾರೆ. ಕಿಯಾರ ಅದ್ವಾನಿ ಸಹಜ ಮತ್ತು ಸರಳ ಅಭಿನಯದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಸಂದೀಪ್ ಶೇಂಗಾ ರೈ ಸಾರಥ್ಯದಲ್ಲಿ ಮೂಡಿಬಂದಿದ್ದು, ಹಾಡುಗಳೂ ಸೂಪರ್ ಹಿಟ್ ಆಗಿವೆ.
ದಿಲ್ಲಿಯ ಮೆಡಿಕಲ್ ಕಾಲೇಜು ಒಂದರ ರೆಬೆಲ್ ವಿದ್ಯಾರ್ಥಿಯ ಪ್ರೇಮ ಕಥೆ-ವ್ಯಥೆಯನ್ನ ಹೇಳುತ್ತದೆ ಕಬೀರ್ ಸಿಂಗ್. ಪುರುಷ ಪ್ರಧಾನ ಚಿತ್ರ ವೆನಿಸಿದರೂ, ಪ್ರೀತಿ-ಪ್ರೇಮದ ಕಥಾಹಂದರ ಹೊಂದಿರುವ ಕಬೀರ್ ಸಿಂಗ್ ಪ್ರೇಕ್ಷಕಪ್ರಭುವಿನ ಮನಗೆದ್ದಿರುವುದಂತೂ ಸುಳ್ಳಲ್ಲ. ಕೆಲವು ದೃಶ್ಯಗಳು ಪುರುಷ ಪ್ರಾಧಾನ್ಯತೆ ಸಾರಿದರೆ, ಇನ್ನು A ಸರ್ಟಿಫಿಕೇಟ್ ಹೊಂದಿರುವ ಹಲವು ತುಣುಕುಗಳು , ಕುಟುಂಬ ಸಮೇತರಾಗಿ ಕುಳಿತು ನೋಡಲು ಮುಜುಗರ ಉಂಟು ಮಾಡುತ್ತದೆ.
ಬಾಲಿವುಡ್ ನಲ್ಲಿ ಈ ರೀತಿಯ ಹಸಿ-ಬಿಸಿ ದೃಶ್ಯ ಗಳು ಹೊಸತೇನೂ ಅಲ್ಲವಾದ್ದರಿಂದ , ವರ್ಲ್ಡ್ ಕಪ್ ಹವಾ ನಡುವೆಯೂ ಕಬೀರ್ ಸಿಂಗ್ ಗಟ್ಟಿಯಾಗಿ ನಿಂತಿದ್ದಾನೆ. ಬಾಲಿವುಡ್ ನಲ್ಲಿ ಇತ್ತೀಚೆಗೆ ಸಕ್ಸಸ್ ಪರೇಡ್ ಶುರುವಾಗಿದ್ದು, ಭಾರತ್ ನಂತರ ಗಲ್ಲಾಪೆಟ್ಟಿಗೆಯಲ್ಲಿ ಕಬೀರ್ ಸಿಂಗ್ ನಾ ಘರ್ಜನೆ ಶುರುವಾಗಿದೆ.
–ಚಿತ್ರಶ್ರೀ ಹರ್ಷ
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಸಾಗರ | ಇಂದು ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಪುಸ್ತಕಗಳ ಬಿಡುಗಡೆ
![](https://suddidina.com/wp-content/uploads/2024/06/guccha_suddidina.jpg)
ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ.
ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಎಂ.ವಿ ಮಾಡಲಿದ್ದು, ಅಧ್ಯಕ್ಷತೆಯನ್ನುನಿವೃತ್ತ ಪ್ರಾಂಶುಪಾಲರಾದ ಅ.ರಾ.ಲಂಬೋದರ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ‘ಆರು ಲಘು ನಾಟಕಗಳು’ ಕುರಿತು ನಿವೃತ್ತ ಪ್ರಾಂಶುಪಾಲರು ಡಾ. ಜಯಪ್ರಕಾಶ್ ಮಾವಿನಕುಳಿ ಹಾಗೂ ‘ಗುಚ್ಛ’ ಕುರಿತು ಸಹಕಾರ ಸಂಘಗಳ ನಿವೃತ್ತ ಉಪ ನಿಬಂಧಕರು ಜಯಪ್ರಕಾಶ್ ತಲವಾಟ ಅವರು ಮಾತನಾಡಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
![](https://suddidina.com/wp-content/uploads/2024/06/Sarod_Maestro_Rajeev_Taranath_suddidina.jpg)
ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೇಷ್ಠ ಭಾರತೀಯ ಶಾಸ್ತ್ರೀಯ ಸಂಗೀತಗಾರ ಆಗಿರುವ ಅವರು ಸರೋದ್ ವಾದಕರೂ ಆಗಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
![](https://suddidina.com/wp-content/uploads/2024/06/Darshan_suddidina_Kannada_actor.jpg)
ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಡಿಸಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.
ಮೈಸೂರಿನ ದರ್ಶನ್ ಒಡೆತನದ ಫಾರ್ಮ್ ಹೌಸ್ನಲ್ಲಿ ೧೦ ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ತಿಳಿಸಿವೆ. ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರಿನ ಸುಮನಹಳ್ಳಿ ಬಳಿಯ ವೃಷಭಾವತಿ ನಾಲೆಯಲ್ಲಿ ಅಪಾರ್ಟ್ಮೆಂಟ್ ಕಟ್ಟಡದ ಮುಂಭಾಗದಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿತ್ತು. ದರ್ಶನ್ ಚಿತ್ರದುರ್ಗ ಅಭಿಮಾನಿಗಳ ಸಂಘದ ಅಧ್ಯಕ್ಷರಿಗೆ ಕರೆ ಮಾಡಿ ರೇಣುಕಾಸ್ವಾಮಿ ಎಲ್ಲಿದ್ದಾರೆ ಎಂಬುದನ್ನು ಪತ್ತೆಮಾಡಿ ಬೆಂಗಳೂರಿಗೆ ಕರೆತರುವಂತೆ ಹೇಳಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ7 days ago
JOB NEWS | ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
-
ಅಂತರಂಗ7 days ago
ನಾಳೆ ಡಾ.ಅಂಬೇಡ್ಕರ್ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿ ಕಾರ್ಯಕ್ರಮ
-
ದಿನದ ಸುದ್ದಿ6 days ago
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
-
ದಿನದ ಸುದ್ದಿ7 days ago
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಮಸ್ಕಿ | ಬಿಜೆಪಿ ಕಚೇರಿಯಲ್ಲಿ ಆತ್ಮಾವಲೋಕನ ಸಭೆ
-
ದಿನದ ಸುದ್ದಿ6 days ago
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
-
ದಿನದ ಸುದ್ದಿ6 days ago
ಭಾರೀ ಮಳೆ ; ಡ್ಯಾಂಗಳಿಗೆ ಹರಿದು ಬಂದ ನೀರೆಷ್ಟು..? ಇಲ್ಲಿದೆ ಸಂಪೂರ್ಣ ಮಾಹಿತಿ
-
ಅಂತರಂಗ5 days ago
ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ