ಸಿನಿ ಸುದ್ದಿ

ಕರ್ನಾಟಕದಲ್ಲಿ ಕಾಳನಿಗಿಲ್ಲ ಬಿಡುಗಡೆ ಭಾಗ್ಯ

Published

on

ಸುದ್ದಿದಿನ ಡೆಸ್ಕ್: ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಕಾಳ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಿರಲು ಕರ್ನಾಟಕ ಚಲನ ಚಿತ್ರ ಮಂಡಳಿ ನಿರ್ಧರಿಸಿದೆ.

ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಕರ್ನಾಟಕದ ವಿರುದ್ಧ ಹೇಳಿಕೆ ನೀಡಿರುವ ರಜನೀಕಾಂತ್ ಅವರ ಕಾಳ ಸಿನಿಮಾ ಬಿಡುಗಡೆ ಮಾಡದಿರಲು ರಾಜ್ಯ ಚಲನಚಿತ್ರ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಚಿತ್ರದ ನಿರ್ಮಾಪಕರಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಸಿನಿಮಾ ಬಿಡುಗಡೆಗೆ ಅವಕಾಶ ಕೋರಿದರೂ ವಿತರಕರ ಮಾತಿಗೆ ಕೆಎಫ್ ಸಿಸಿ ಅಧ್ಯಕ್ಷ ಸಾರಾ ಗೋವಿಂದು ಅವರು ಸೊಪ್ಪು ಹಾಕಲಿಲ್ಲ ಎಂದು ತಿಳಿದುಬಂದಿದೆ.

ಪಾ ರಂಜಿತ್ ನಿರ್ದೇಶನದ ಕಾಳ ಸಿನಿಮಾ   ಜೂನ್ 7 ರಂದು ದೇಶಾದ್ಯಂತ ಬಿಡುಗಡೆಯಾಗಲಿದ್ದು ಈಗಾಗಲೇ ಸಾಕಷ್ಟು ಕ್ರೇಜ್ ಹುಟ್ಟಿಹಾಕಿದೆ.

Leave a Reply

Your email address will not be published. Required fields are marked *

Trending

Exit mobile version