ದಿನದ ಸುದ್ದಿ
ಕಲಬುರಗಿ | ಕಾಳಜಿ ಕೇಂದ್ರದಲ್ಲಿ ಊಟದೊಂದಿಗೆ ಹಣ್ಣು-ಹಾಲು ಪೂರೈಕೆ
ಸುದ್ದಿದಿನ,ಕಲಬುರಗಿ : ಭೀಮಾ ನದಿ ಪ್ರವಾಹದಿಂದ ತ್ತತರಿಸುವ ಸಂತ್ರಸ್ತರಿಗೆ ಆಶ್ರಯ ನೀಡಲು ತೆರೆದಿರುವ ಕಾಳಜಿ ಕೇಂದ್ರದಲ್ಲಿ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನ ಮತ್ತು ರಾತ್ರಿ ಊಟದ ಜೊತೆಗೆ ಹಣ್ಣು, ಹಾಲು ನೀಡುವ ಮೂಲಕ ಜಿಲ್ಲಾಡಳಿತ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ.
ರವಿವಾರ ಪತ್ರಕರ್ತರ ತಂಡ ಭೀಮಾ ನದಿಗೆ ಹೆಚ್ಚಿನ ನೀರು ಹರಿಸಿದ ಪರಿಣಾಮ ಪ್ರವಾಹ ಪೀಡಿತ ಪ್ರದೇಶವಾಗಿ ಮಾರ್ಪಟ್ಟಿರುವ ಅಫಜಲಪೂರ ತಾಲೂಕಿನ ಸೊನ್ನ, ಶಿರವಾಳ ಗ್ರಾಮಕ್ಕೆ ಭೇಟಿ ನೀಡಿದಾಗ ಈ ದೃಶ್ಯ ಕಂಡುಬಂತು.
ಭೀಮಾ ನದಿಯ ಹಿನ್ನೀರಿನಿಂದ ಅಫಜಲಪೂರ ತಾಲೂಕಿನ ಶಿರವಾಳ-ಭಂಕಲಗಾ ಮಧ್ಯೆ ರಸ್ತೆ ಮೇಲೆ ಮೂರಡಿ ನೀರು ಬಂದ ಪರಿಣಾಮ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸ್ಥಳೀಯರು ಗ್ರಾಮಗಳ ನಡುವಿನ ಪ್ರಯಾಣಕ್ಕೆ ಟ್ರ್ಯಾಕ್ಟರ್ ಮೊರೆ ಹೋಗಿದ್ದಾರೆ.
ಶಿರವಾಳ ಗ್ರಾಮದಲ್ಲಿ ಸುಮಾರು 15ಕ್ಕೂ ಹೆಚ್ಚಿನ ಮನೆಗಳು ಹಿನ್ನೀರಿನಿಂದ ಬಾಧಿತವಾಗಿದ್ದು, ಸುಮಾರು 70 ಜನರನ್ನು ಗ್ರಾಮದ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರದಲ್ಲಿ ಊಟೋಪಚಾರ ಮಾಡಲಾಗುತ್ತಿದೆ. ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟ ನೀಡಲಾಗುತ್ತಿದೆ. ಮೂರು ಹೊತ್ತು ಬಾಳೆ ಹಣ್ಣು, ಮಕ್ಕಳಿಗೆ ಬಿಸ್ಕಿಟ್ ನೀಡಲಾಗುತ್ತಿದೆ ಎಂದು ಗೌರ(ಬಿ) ಗ್ರಾಮ ಪಂಚಾಯತಿಯ ಪಿ.ಡಿ.ಓ ಶಂಕರ ಧಾಮಣ್ಣ ತಿಳಿಸಿದರು.
ಅಫಜಲಪೂರ್ ಕಾಳಜಿ ಕೇಂದ್ರದಲ್ಲಿ ನೂರಾರು ಸಂಖ್ಯೆಯಲ್ಲಿ ನಿರಾಶ್ರಿತರು: ಸೊನ್ನ, ಅಳ್ಳಗಿ(ಬಿ), ಇಂಚಗೇರಾ, ಕೆಲ್ಲೂರ, ಬನ್ನಟ್ಟಿ ಹಾಗೂ ಶಿರೂರ ಗ್ರಾಮಗಳಿಂದ ರಕ್ಷಣೆ ಮಾಡಿ ಕರೆತರಲಾಗಿರುವ ಸಂತ್ರಸ್ತರಿಗೆ ಅಫಜಲಪೂರ ಪಟ್ಟಣದ ಹೊರವಲಯದ ಪದವಿ ಕಾಲೇಜಿನಲ್ಲಿ ಇರಿಸಲಾಗಿದ್ದು, ಅಳ್ಳಗಿ (ಬಿ) ಮತ್ತು ಸೊನ್ನ ಗ್ರಾಮದ 261 ಜನರಿದ್ದರೆ, ಇಂಚಗೇರಾ, ಕೆಲ್ಲೂರ, ಬನ್ನಟ್ಟಿ ಹಾಗೂ ಶಿರೂರ ಗ್ರಾಮಗಳ 500ಕ್ಕೂ ಹೆಚ್ಚು ಸಚಿತ್ರಸ್ತರಿಗೆ ಇಲ್ಲಿ ಆಶ್ರಯ ನೀಡಲಾಗಿದೆ.
ಅಫಜಲಪೂರ ಕಾಳಜಿ ಕೇಂದ್ರಕ್ಕೆ ರವಿವಾರ ಭೇಟಿ ನೀಡಿದ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಕಾರಿ ಅಬ್ದುಲ್ ನಬಿ ಮಾತನಾಡಿ ಭೀಮಾ ಪ್ರವಾಹದಿಂದ ನಿರಾಶ್ರಿತಗೊಂಡ 8603 ಜನರಿಗೆ ರಕ್ಷಣೆ ಮಾಡಿದ್ದು, ತಾಲೂಕಿನ ವಿವಿಧೆಡೆ ಸ್ಥಾಪಿಸಲಾದ 11 ಕಾಳಜಿ ಕೇಂದ್ರಗಳಲ್ಲಿ ಇವರಿಗೆ ಆಶ್ರಯ ನೀಡಿ ಬೆಳಿಗ್ಗೆ ಉಪಹಾರ, ಹಣ್ಣು, ಚಹಾ ಮಧ್ಯಾಹ್ನ ಮತ್ತು ರಾತ್ರಿ ಚಪಾಟಿ, ಪಲ್ಯಾ, ಅನ್ನ, ಸಾರು ಊಟದ ಜೊತೆಗೆ ಹಣ್ಣು, ಹಾಲು ನೀಡಲಾಗುತ್ತಿದೆ. ಇದಲ್ಲದೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಹ ಪೂರೈಸಲಾಗುತ್ತಿದೆ ಎಂದರು.
ಅಫಜಲಪೂರ್-ಸಿಂದಗಿ ರಸ್ತೆ ಕಟ್: ಸೊನ್ನ ಬ್ಯಾರೇಜಿನಿಂದ 8 ಲಕ್ಷಕ್ಕೂ ಹೆಚ್ಚಿನ ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಕೆಳ ಹಚಿತದಲ್ಲಿ ಬರುವ ದೇವಣಗಾಂವ ಬ್ರಿಡ್ಜ್ ತುಂಬಿ ಹರಿಯುತ್ತಿದ್ದು, ಮುಂಜಾಗ್ರತವಾಗಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ರವಿವಾರ 600 ಜನರ ರಕ್ಷಣೆ: ಭೀಮಾ ನದಿ ಪ್ರವಾಹದ ಹಿನ್ನೀರಿನಿಂದ ಸುತ್ತುವರಿದಿರುವ ಅಫಜಲಪೂರ ತಾಲೂಕಿನ ಉಡಚಣದಲ್ಲಿ ಗ್ರಾಮಸ್ಥರ ರಕ್ಷಣೆಗೆ ರವಿವಾರ ಧುಮುಕಿರುವ ಸೇನಾ ಪಡೆ 44 ಸದಸ್ಯರ ಎಸ್.ಡಿ.ಆರ್.ಎಫ್. ತಂಡ ಹಾಗೂ ಅಗ್ನಿಶಾಮಲ ದಳದ ತಂಡದೊಂದಿಗೆ ಕಾರ್ಯಾಚರಣೆಗೆ ಇಳಿದು ಸುಮಾರು 600 ಜನರನ್ನು ರಕ್ಷಿಸಿ ಕಾಳಜಿ ಕಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.
ಗ್ರಾಮದಲ್ಲಿ 9 ರಿಂದ 10 ಸಾವಿರ ಜನಸಂಖ್ಯೆ ಇದ್ದು, ರವಿವಾರದ ವರೆಗೆ 6 ರಿಂದ 7 ಸಾವಿರ ಜನರನ್ನು ರಕ್ಷಿಸಲಾಗಿದೆ. ಸಾಯಂಕಾಲದ ಹೊತ್ತಿಗೆ ನೀರು ಇಳಿಕೆ ಕಂಡಿದ್ದರಿಂದ ಗ್ರಾಮದ ಎತ್ತರ ಪ್ರದೇಶದಲ್ಲಿದ್ದ ಜನರು ಅಲ್ಲಿಯೆ ಉಳಿದುಕೊಂಡಿದ್ದಾರೆ. ಅವರನ್ನು ಮನವೊಲಿಸಿ ಸ್ಥಳಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಗ್ರಾಮದಲ್ಲಿ ಮೊಕ್ಕಾಂ ಹೂಡಿರುವ ಸಹಾಯಕ ಆಯುಕ್ತ ರಾಮಚಂದ್ರ ಗಡಾದೆ ತಿಳಿಸಿದ್ದಾರೆ.
ಪೇಟ್ ಫಿರೋಜಾಬಾದಿನಲ್ಲಿ ಸೇನಾ ಪಡೆ: ಸೇನಾ ತುಕಡಿಯ ಒಂದು ತಂಡ ರವಿವಾರ ಸಾಯಂಕಾಲ ಕಲಬುರಗಿ ತಾಲೂಕಿನ ಪೇಟ್ ಫಿರೋಜಾಬಾದ ಗ್ರಾಮದಲ್ಲಿ ಸಂತ್ರಸ್ತರ ಕಾರ್ಯಾಚರಣೆಗೆ ಇಳಿದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
-
ಅಂಕಣ3 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ6 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ2 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ18 hours agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ22 hours agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ22 hours agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

