ರಾಜಕೀಯ
ತೆಲಂಗಾಣದಲ್ಲಿ ಚಂದ್ರೋದಯ..!
ಸುದ್ದಿದಿನ ಡೆಸ್ಕ್ : ಹೈದರಾಬಾದ್ ತೆಲಂಗಾಣದಲ್ಲಿ ನಿರೀಕ್ಷೆಯಂತೆ ಕಲ್ವಕುಂಟ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಹೊಸ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ಬಳಿಕ ಎರಡನೇ ಭಾರಿ ವಿಧಾನಸಭೆಗೆ ನಡೆದ ಚುನಾ ವಣೆಯಲ್ಲಿ ಭಾರಿ ಯಶಸ್ಸು ಗಳಿಸಿದೆ. ವಿಧಾನಸಭೆಗೆ ನಡೆದ ಚುನಾವನೆಯಲ್ಲಿ ಕೆಸಿಆರ್ ನೇತೃತ್ವದ ಟಿಆರ್ಎಸ್ 87 ಕಾಂಗ್ರೆಸ್ 22 ಬಿಜೆಪಿ 1 ಇತರರು 7 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ ಅದರಲ್ಲಿ ಯಶಸ್ಸು ಕಂಡಿದ್ದಾರೆ. ಟಿಆರ್ಎಸ್ ನಾಯಕ ಚಂದ್ರಶೇಖರ್ ರಾವ್. ಹೊಸ ರಾಜ್ಯ ಅಸ್ತಿತ್ವಕ್ಕೆ ಬಂದ ಬಳಿಕ ತಮ್ಮ ಮೇಲಿದ್ದ ಜವಾ ಬ್ದಾರಿಯನ್ನು ಕೆಸಿಆರ್ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎನ್ನುವುದು ಈ ಫಲಿತಾಂಶದಿಂದ ಸ್ಪಷ್ಟವಾಗಿದೆ.
ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿ ಚಂದ್ರಶೇಖರ್ ಅವರು ಹಮ್ಮಿಕೊಂಡ ಜನಪರ ಯೋಜನೆಗಳು ಅವರನ್ನು ಯಶಸ್ಸಿನತ್ತ ಕೊಂಡೊಯ್ದಿವೆ ಎನ್ನುವುದ ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಇದೂ ಅಲ್ಲದೇ ಚಂದ್ರಶೇಖರ್ ರಾವ್ ಅವರು ತೆಲಂಗಾಣದ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಸಾಲ ಮನ್ನಾ: ರೈತರ ಒಂದು ಲಕ್ಷದ ವರೆಗಿನ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಕೆಸಿಆರ್ ಪ್ರಣಾಳಿ ಕೆಯಲ್ಲಿ ಸೂಚಿಸಿದ್ದರು. ರೈತಬಂಧು ಯೋಜನೆಯ ಮೂಲಕ ರೈತ ಸಮುದಾಯದ ಮನ ಗೆದ್ದಿದ್ದ ಕೆಸಿಆರ್ ಅವರು ಸಾಲ ಮನ್ನಾ ಘೋಷಣೆಯ ಮೂಲಕವೂ ರೈತರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಉಚಿತ ವಿದ್ಯುತ್; ಕಾಕತೀಯ ವೈಭವ
2015ರ ಮಾರ್ಚ್ನಲ್ಲಿ ಪ್ರಾರಂಭವಾದ ಈ ಯೋಜನೆಯಡಿ ತೆಲಂಗಾಣದಾದ್ಯಂತ 46 ಸಾವಿರ ಕೆರೆಗಳು, ಕಾಲುವೆಗಳು ನಿರ್ಮಾಣ ಮಾಡಿ ಸುಮಾರು 270 ಟಿಎಂಸಿ ನೀರನ್ನು ಸಂಗ್ರಹಿಸುವುದು ಸರ್ಕಾರದ ಪ್ರಮುಖ ಗುರಿಯಗಿತ್ತು. ಸುಮಾರು 2ಲಕ್ಷ ಕೋಟಿ ವೆಚ್ಚದಲ್ಲಿ ಈ ಯೋಜನೆ ಜಾರಿಗೊಳಿಸಲಾಗಿತ್ತುದ್ದ ಈಗಾಗಲೇ ಸಾಕಷ್ಟು ಗ್ರಾಮಗಳು ಇದರ ಪ್ರಯೋಜನ ಪಡೆದಿವೆ. ರಾಜ್ಯಕ್ಕೆ 24 ಗಂಟೆಗಳ ಕಾಲ ವಿದ್ಯುತ್ ನೀಡುವ ಮೂಲಕ ರಾಜ್ಯದ ಜನರ ಕೀರ್ತಿಯನ್ನು ಟಿಆರ್ಎಸ್ ಗಳಿಸಿತ್ತು. ರಾಜ್ಯಕ್ಕೆ ವಿದ್ಯುತ್ ಸಮಸ್ಯೆ ಬರದಂತೆ ನೋಡಿಕೊಂಡ ಕೆಸಿಆರ್ ಅವರು ಸಮಸ್ಯೆ ಎದುರಾದಾಗ ನೆರೆಯ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ನಾಡಿನ ಜನತೆಗೆ ಪೂರೈಸಿದರು. ಇದು ಜನರ ಮನಸ್ಸಿನಲ್ಲಿ ಅಚ್ಚಳಿಯದರೆ ಉಳಿಯಿತು.
ರೈತುಬಂಧು ಯೋಜನೆ
ರೈತ ಬಂಧು ಯೋಜನೆ ಟಿಆರ್ಎಸ್ ಪಕ್ಷದ ಪ್ರಮುಖ ಯೋಜನೆಯಾಗಿತ್ತು. ಚುನಾವಣೆಗೆ ಹೊಗಬೇಕು ಎನ್ನುವ ಹೊಸ್ತಿಲಲ್ಲೇ ಕೆಸಿಆರ್ ಈ ಯೋಜನೆಗೆ ಚಾಲನೆ ನೀಡಿದ್ದರು. ಸುಮಾರು ಒಂದು ಕೋಟಿ ರೈತರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಯೋಜನೆ ಪ್ರಾರಂಭಿಸಲಾಗಿತ್ತು. ಈ ಯೋಜನೆಯಲ್ಲಿ ಹಣ ನೇರವಾಗಿ ರೈತರ ಖಾತೆಗೆ ವರ್ಗಾವಣೆ ಆಗುತ್ತದೆ. ಇದು ರೈತವರ್ಗವನ್ನು ಆಕರ್ಷಿಸಿತು. ಯೋಜನೆಯಡಿ ಮುಖ್ಯಮಂತ್ರಿಯವರು ಚುನಾವಣೆಗೂ ಮುನ್ನ ಎರಡು ಭಾರಿ ಚೆಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದು ಟಿಆರ್ಎಸ್ಗೆ ಲಾಭವಾಗಿ ಪರಿಣಮಿಸಿತು.
ಶಾದಿ ಮುಬಾರಕ್
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಧಿ. ವಿವಿಧ ಸಮುದಾಯದವರಿಗೆ ಪ್ರತ್ಯೇಖ ಭವನಗಳ ನಿರ್ಮಾಣ, ಅಲ್ಪಸಂಖ್ಯಾತ ಸಮುದಾಯದವರಿಗೆ `ಶಾದಿ ಮುಬಾರಕ್’ ನಂತಹ ಯೋಜನೆಗಳನ್ನು ಕೆಸಿಆರ್ ಜಾರಿಗೊಳಿಸಿದ್ದೂ ಅವರಿಗೆ ವರದಾನವಾಗಿ ಪರಿಣಮಿಸಿತು. ಬ್ರಾಹ್ಮಣ, ರೆಡ್ಡಿ ಸೇರಿದಂತೆ ರಾಜ್ಯದ ಸುಮಾರು 30ಕ್ಕೂ ಹೆಚ್ಚು ಸಮುದಾಯಗಳಿಗೆ ಸಮುದಾಯ ಭವನಗಳ ನಿರ್ಮಾಣ ಮಾಡಿಕೊಡುವ ಭರವಸೆಯನ್ನು ಕೆಸಿಆರ್ ನೀಡಿದ್ದರು. ಇದು ಎಲ್ಲ ವರ್ಗದ ಮತದಾರರನ್ನು ಸೆಳೆಯಿತು. ಹೀಗೆ ಚಂದ್ರಶೇಖರ್ ಅವರು ರಾಜಕೀಯ ನೆಲೆಯನ್ನು ಭದ್ರಪಡಿಸಿಕೊಳ್ಳಲು ರಾಜ್ಯದ ಜನರಿಗೆ ಯಾವ ರೀತಿಯ ಯೋಜನೆಗಳು ಅಗತ್ಯವಿದೆಯೋ ಅದನ್ನೆಲ್ಲವನ್ನು ಕೈಗೆತ್ತಿಕೊಳ್ಳಲು ಸಂಕಲ್ಪದೊಂದಿಗೆ ಜನತೆಯ ಬಳಿ ಹೋಗಿದ್ದರು. ಆ ಸಂಕಲ್ಪಗಳು ಅವರಿಗೆ ಯಶಸ್ಸು ತಂದುಕೊಟ್ಟಿದೆ. ಕಾರು ಮತ್ತೊಮ್ಮೆ ತೆಲಂಗಾಣ ಸುತ್ತಲು ಪ್ರಾರಂಭಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್ ಹಾಗೂ ಗರಿಷ್ಠ 50 ಕ್ವಿಂಟಾಲ್ನಂತೆ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್ಗೆ ರೂ.2400.00 ರಂತೆ ಖರೀದಿಸಲಾಗುವುದು. ಮೆಕ್ಕೆಜೋಳ ಖರೀದಿದಾರರು ಡಿಸ್ಟಿಲರಿ ಮಾಲೀಕರಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಗೆ ಎನ್ಇಎಂಎಲ್ (NEML) ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರ್ಕಾರದ ಪ್ರೂಟ್ಸ್ ಪೊರ್ಟಲ್(FRUITS Portal) ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ರೈತರ ನೊಂದಣಿ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ 730 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿಯನ್ನು ಹೊಂದಲಾಗಿದೆ. ರೈತರು ಮೆಕ್ಕೆಜೋಳ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ತಿಳಿಸಿದರು. ಸಹಕಾರ ಇಲಾಖೆ ಮತ್ತು ಎಪಿಎಂಸಿ ಅಧಿಕಾರಿಗಳು ಮೆಕ್ಕೆಜೋಳ ಖರೀದಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ರೈತರಿಗೆ ನೀಡಬೇಕು. ಮೆಕ್ಕೆಜೋಳ ಖರೀದಿಯಲ್ಲಿ ಯಾವುದೇ ಗೊಂದಲ ಆಗದಂತೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತ ಜುನೈದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ3 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ2 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ2 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

