Connect with us

ರಾಜಕೀಯ

ತೆಲಂಗಾಣದಲ್ಲಿ ಚಂದ್ರೋದಯ..!

Published

on

ಸುದ್ದಿದಿನ ಡೆಸ್ಕ್ : ಹೈದರಾಬಾದ್ ತೆಲಂಗಾಣದಲ್ಲಿ ನಿರೀಕ್ಷೆಯಂತೆ ಕಲ್ವಕುಂಟ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‍ಎಸ್) ಹೊಸ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ಬಳಿಕ ಎರಡನೇ ಭಾರಿ ವಿಧಾನಸಭೆಗೆ ನಡೆದ ಚುನಾ ವಣೆಯಲ್ಲಿ ಭಾರಿ ಯಶಸ್ಸು ಗಳಿಸಿದೆ. ವಿಧಾನಸಭೆಗೆ ನಡೆದ ಚುನಾವನೆಯಲ್ಲಿ ಕೆಸಿಆರ್ ನೇತೃತ್ವದ ಟಿಆರ್‍ಎಸ್ 87 ಕಾಂಗ್ರೆಸ್ 22 ಬಿಜೆಪಿ 1 ಇತರರು 7 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ ಅದರಲ್ಲಿ ಯಶಸ್ಸು ಕಂಡಿದ್ದಾರೆ. ಟಿಆರ್‍ಎಸ್ ನಾಯಕ ಚಂದ್ರಶೇಖರ್ ರಾವ್. ಹೊಸ ರಾಜ್ಯ ಅಸ್ತಿತ್ವಕ್ಕೆ ಬಂದ ಬಳಿಕ ತಮ್ಮ ಮೇಲಿದ್ದ ಜವಾ ಬ್ದಾರಿಯನ್ನು ಕೆಸಿಆರ್ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎನ್ನುವುದು ಈ ಫಲಿತಾಂಶದಿಂದ ಸ್ಪಷ್ಟವಾಗಿದೆ.

ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿ ಚಂದ್ರಶೇಖರ್ ಅವರು ಹಮ್ಮಿಕೊಂಡ ಜನಪರ ಯೋಜನೆಗಳು ಅವರನ್ನು ಯಶಸ್ಸಿನತ್ತ ಕೊಂಡೊಯ್ದಿವೆ ಎನ್ನುವುದ ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಇದೂ ಅಲ್ಲದೇ ಚಂದ್ರಶೇಖರ್ ರಾವ್ ಅವರು ತೆಲಂಗಾಣದ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಸಾಲ ಮನ್ನಾ: ರೈತರ ಒಂದು ಲಕ್ಷದ ವರೆಗಿನ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಕೆಸಿಆರ್ ಪ್ರಣಾಳಿ ಕೆಯಲ್ಲಿ ಸೂಚಿಸಿದ್ದರು. ರೈತಬಂಧು ಯೋಜನೆಯ ಮೂಲಕ ರೈತ ಸಮುದಾಯದ ಮನ ಗೆದ್ದಿದ್ದ ಕೆಸಿಆರ್ ಅವರು ಸಾಲ ಮನ್ನಾ ಘೋಷಣೆಯ ಮೂಲಕವೂ ರೈತರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಉಚಿತ ವಿದ್ಯುತ್; ಕಾಕತೀಯ ವೈಭವ

2015ರ ಮಾರ್ಚ್‍ನಲ್ಲಿ ಪ್ರಾರಂಭವಾದ ಈ ಯೋಜನೆಯಡಿ ತೆಲಂಗಾಣದಾದ್ಯಂತ 46 ಸಾವಿರ ಕೆರೆಗಳು, ಕಾಲುವೆಗಳು ನಿರ್ಮಾಣ ಮಾಡಿ ಸುಮಾರು 270 ಟಿಎಂಸಿ ನೀರನ್ನು ಸಂಗ್ರಹಿಸುವುದು ಸರ್ಕಾರದ ಪ್ರಮುಖ ಗುರಿಯಗಿತ್ತು. ಸುಮಾರು 2ಲಕ್ಷ ಕೋಟಿ ವೆಚ್ಚದಲ್ಲಿ ಈ ಯೋಜನೆ ಜಾರಿಗೊಳಿಸಲಾಗಿತ್ತುದ್ದ ಈಗಾಗಲೇ ಸಾಕಷ್ಟು ಗ್ರಾಮಗಳು ಇದರ ಪ್ರಯೋಜನ ಪಡೆದಿವೆ. ರಾಜ್ಯಕ್ಕೆ 24 ಗಂಟೆಗಳ ಕಾಲ ವಿದ್ಯುತ್ ನೀಡುವ ಮೂಲಕ ರಾಜ್ಯದ ಜನರ ಕೀರ್ತಿಯನ್ನು ಟಿಆರ್‍ಎಸ್ ಗಳಿಸಿತ್ತು. ರಾಜ್ಯಕ್ಕೆ ವಿದ್ಯುತ್ ಸಮಸ್ಯೆ ಬರದಂತೆ ನೋಡಿಕೊಂಡ ಕೆಸಿಆರ್ ಅವರು ಸಮಸ್ಯೆ ಎದುರಾದಾಗ ನೆರೆಯ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ನಾಡಿನ ಜನತೆಗೆ ಪೂರೈಸಿದರು. ಇದು ಜನರ ಮನಸ್ಸಿನಲ್ಲಿ ಅಚ್ಚಳಿಯದರೆ ಉಳಿಯಿತು.

ರೈತುಬಂಧು ಯೋಜನೆ

ರೈತ ಬಂಧು ಯೋಜನೆ ಟಿಆರ್‍ಎಸ್ ಪಕ್ಷದ ಪ್ರಮುಖ ಯೋಜನೆಯಾಗಿತ್ತು. ಚುನಾವಣೆಗೆ ಹೊಗಬೇಕು ಎನ್ನುವ ಹೊಸ್ತಿಲಲ್ಲೇ ಕೆಸಿಆರ್ ಈ ಯೋಜನೆಗೆ ಚಾಲನೆ ನೀಡಿದ್ದರು. ಸುಮಾರು ಒಂದು ಕೋಟಿ ರೈತರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಯೋಜನೆ ಪ್ರಾರಂಭಿಸಲಾಗಿತ್ತು. ಈ ಯೋಜನೆಯಲ್ಲಿ ಹಣ ನೇರವಾಗಿ ರೈತರ ಖಾತೆಗೆ ವರ್ಗಾವಣೆ ಆಗುತ್ತದೆ. ಇದು ರೈತವರ್ಗವನ್ನು ಆಕರ್ಷಿಸಿತು. ಯೋಜನೆಯಡಿ ಮುಖ್ಯಮಂತ್ರಿಯವರು ಚುನಾವಣೆಗೂ ಮುನ್ನ ಎರಡು ಭಾರಿ ಚೆಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದು ಟಿಆರ್‍ಎಸ್‍ಗೆ ಲಾಭವಾಗಿ ಪರಿಣಮಿಸಿತು.

ಶಾದಿ ಮುಬಾರಕ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಧಿ. ವಿವಿಧ ಸಮುದಾಯದವರಿಗೆ ಪ್ರತ್ಯೇಖ ಭವನಗಳ ನಿರ್ಮಾಣ, ಅಲ್ಪಸಂಖ್ಯಾತ ಸಮುದಾಯದವರಿಗೆ `ಶಾದಿ ಮುಬಾರಕ್’ ನಂತಹ ಯೋಜನೆಗಳನ್ನು ಕೆಸಿಆರ್ ಜಾರಿಗೊಳಿಸಿದ್ದೂ ಅವರಿಗೆ ವರದಾನವಾಗಿ ಪರಿಣಮಿಸಿತು. ಬ್ರಾಹ್ಮಣ, ರೆಡ್ಡಿ ಸೇರಿದಂತೆ ರಾಜ್ಯದ ಸುಮಾರು 30ಕ್ಕೂ ಹೆಚ್ಚು ಸಮುದಾಯಗಳಿಗೆ ಸಮುದಾಯ ಭವನಗಳ ನಿರ್ಮಾಣ ಮಾಡಿಕೊಡುವ ಭರವಸೆಯನ್ನು ಕೆಸಿಆರ್ ನೀಡಿದ್ದರು. ಇದು ಎಲ್ಲ ವರ್ಗದ ಮತದಾರರನ್ನು ಸೆಳೆಯಿತು. ಹೀಗೆ ಚಂದ್ರಶೇಖರ್ ಅವರು ರಾಜಕೀಯ ನೆಲೆಯನ್ನು ಭದ್ರಪಡಿಸಿಕೊಳ್ಳಲು ರಾಜ್ಯದ ಜನರಿಗೆ ಯಾವ ರೀತಿಯ ಯೋಜನೆಗಳು ಅಗತ್ಯವಿದೆಯೋ ಅದನ್ನೆಲ್ಲವನ್ನು ಕೈಗೆತ್ತಿಕೊಳ್ಳಲು ಸಂಕಲ್ಪದೊಂದಿಗೆ ಜನತೆಯ ಬಳಿ ಹೋಗಿದ್ದರು. ಆ ಸಂಕಲ್ಪಗಳು ಅವರಿಗೆ ಯಶಸ್ಸು ತಂದುಕೊಟ್ಟಿದೆ. ಕಾರು ಮತ್ತೊಮ್ಮೆ ತೆಲಂಗಾಣ ಸುತ್ತಲು ಪ್ರಾರಂಭಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

Published

on

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.

ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.

ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.

ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ಅಂತರಂಗ2 days ago

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ...

ದಿನದ ಸುದ್ದಿ2 days ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ದಿನದ ಸುದ್ದಿ3 days ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ5 days ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ1 week ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ1 week ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ2 weeks ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ2 weeks ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ2 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ3 weeks ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

Trending