ರಾಜಕೀಯ
ತೆಲಂಗಾಣದಲ್ಲಿ ಚಂದ್ರೋದಯ..!
ಸುದ್ದಿದಿನ ಡೆಸ್ಕ್ : ಹೈದರಾಬಾದ್ ತೆಲಂಗಾಣದಲ್ಲಿ ನಿರೀಕ್ಷೆಯಂತೆ ಕಲ್ವಕುಂಟ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಹೊಸ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ಬಳಿಕ ಎರಡನೇ ಭಾರಿ ವಿಧಾನಸಭೆಗೆ ನಡೆದ ಚುನಾ ವಣೆಯಲ್ಲಿ ಭಾರಿ ಯಶಸ್ಸು ಗಳಿಸಿದೆ. ವಿಧಾನಸಭೆಗೆ ನಡೆದ ಚುನಾವನೆಯಲ್ಲಿ ಕೆಸಿಆರ್ ನೇತೃತ್ವದ ಟಿಆರ್ಎಸ್ 87 ಕಾಂಗ್ರೆಸ್ 22 ಬಿಜೆಪಿ 1 ಇತರರು 7 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ ಅದರಲ್ಲಿ ಯಶಸ್ಸು ಕಂಡಿದ್ದಾರೆ. ಟಿಆರ್ಎಸ್ ನಾಯಕ ಚಂದ್ರಶೇಖರ್ ರಾವ್. ಹೊಸ ರಾಜ್ಯ ಅಸ್ತಿತ್ವಕ್ಕೆ ಬಂದ ಬಳಿಕ ತಮ್ಮ ಮೇಲಿದ್ದ ಜವಾ ಬ್ದಾರಿಯನ್ನು ಕೆಸಿಆರ್ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎನ್ನುವುದು ಈ ಫಲಿತಾಂಶದಿಂದ ಸ್ಪಷ್ಟವಾಗಿದೆ.
ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿ ಚಂದ್ರಶೇಖರ್ ಅವರು ಹಮ್ಮಿಕೊಂಡ ಜನಪರ ಯೋಜನೆಗಳು ಅವರನ್ನು ಯಶಸ್ಸಿನತ್ತ ಕೊಂಡೊಯ್ದಿವೆ ಎನ್ನುವುದ ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಇದೂ ಅಲ್ಲದೇ ಚಂದ್ರಶೇಖರ್ ರಾವ್ ಅವರು ತೆಲಂಗಾಣದ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಸಾಲ ಮನ್ನಾ: ರೈತರ ಒಂದು ಲಕ್ಷದ ವರೆಗಿನ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಕೆಸಿಆರ್ ಪ್ರಣಾಳಿ ಕೆಯಲ್ಲಿ ಸೂಚಿಸಿದ್ದರು. ರೈತಬಂಧು ಯೋಜನೆಯ ಮೂಲಕ ರೈತ ಸಮುದಾಯದ ಮನ ಗೆದ್ದಿದ್ದ ಕೆಸಿಆರ್ ಅವರು ಸಾಲ ಮನ್ನಾ ಘೋಷಣೆಯ ಮೂಲಕವೂ ರೈತರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಉಚಿತ ವಿದ್ಯುತ್; ಕಾಕತೀಯ ವೈಭವ
2015ರ ಮಾರ್ಚ್ನಲ್ಲಿ ಪ್ರಾರಂಭವಾದ ಈ ಯೋಜನೆಯಡಿ ತೆಲಂಗಾಣದಾದ್ಯಂತ 46 ಸಾವಿರ ಕೆರೆಗಳು, ಕಾಲುವೆಗಳು ನಿರ್ಮಾಣ ಮಾಡಿ ಸುಮಾರು 270 ಟಿಎಂಸಿ ನೀರನ್ನು ಸಂಗ್ರಹಿಸುವುದು ಸರ್ಕಾರದ ಪ್ರಮುಖ ಗುರಿಯಗಿತ್ತು. ಸುಮಾರು 2ಲಕ್ಷ ಕೋಟಿ ವೆಚ್ಚದಲ್ಲಿ ಈ ಯೋಜನೆ ಜಾರಿಗೊಳಿಸಲಾಗಿತ್ತುದ್ದ ಈಗಾಗಲೇ ಸಾಕಷ್ಟು ಗ್ರಾಮಗಳು ಇದರ ಪ್ರಯೋಜನ ಪಡೆದಿವೆ. ರಾಜ್ಯಕ್ಕೆ 24 ಗಂಟೆಗಳ ಕಾಲ ವಿದ್ಯುತ್ ನೀಡುವ ಮೂಲಕ ರಾಜ್ಯದ ಜನರ ಕೀರ್ತಿಯನ್ನು ಟಿಆರ್ಎಸ್ ಗಳಿಸಿತ್ತು. ರಾಜ್ಯಕ್ಕೆ ವಿದ್ಯುತ್ ಸಮಸ್ಯೆ ಬರದಂತೆ ನೋಡಿಕೊಂಡ ಕೆಸಿಆರ್ ಅವರು ಸಮಸ್ಯೆ ಎದುರಾದಾಗ ನೆರೆಯ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ನಾಡಿನ ಜನತೆಗೆ ಪೂರೈಸಿದರು. ಇದು ಜನರ ಮನಸ್ಸಿನಲ್ಲಿ ಅಚ್ಚಳಿಯದರೆ ಉಳಿಯಿತು.
ರೈತುಬಂಧು ಯೋಜನೆ
ರೈತ ಬಂಧು ಯೋಜನೆ ಟಿಆರ್ಎಸ್ ಪಕ್ಷದ ಪ್ರಮುಖ ಯೋಜನೆಯಾಗಿತ್ತು. ಚುನಾವಣೆಗೆ ಹೊಗಬೇಕು ಎನ್ನುವ ಹೊಸ್ತಿಲಲ್ಲೇ ಕೆಸಿಆರ್ ಈ ಯೋಜನೆಗೆ ಚಾಲನೆ ನೀಡಿದ್ದರು. ಸುಮಾರು ಒಂದು ಕೋಟಿ ರೈತರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಯೋಜನೆ ಪ್ರಾರಂಭಿಸಲಾಗಿತ್ತು. ಈ ಯೋಜನೆಯಲ್ಲಿ ಹಣ ನೇರವಾಗಿ ರೈತರ ಖಾತೆಗೆ ವರ್ಗಾವಣೆ ಆಗುತ್ತದೆ. ಇದು ರೈತವರ್ಗವನ್ನು ಆಕರ್ಷಿಸಿತು. ಯೋಜನೆಯಡಿ ಮುಖ್ಯಮಂತ್ರಿಯವರು ಚುನಾವಣೆಗೂ ಮುನ್ನ ಎರಡು ಭಾರಿ ಚೆಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದು ಟಿಆರ್ಎಸ್ಗೆ ಲಾಭವಾಗಿ ಪರಿಣಮಿಸಿತು.
ಶಾದಿ ಮುಬಾರಕ್
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಧಿ. ವಿವಿಧ ಸಮುದಾಯದವರಿಗೆ ಪ್ರತ್ಯೇಖ ಭವನಗಳ ನಿರ್ಮಾಣ, ಅಲ್ಪಸಂಖ್ಯಾತ ಸಮುದಾಯದವರಿಗೆ `ಶಾದಿ ಮುಬಾರಕ್’ ನಂತಹ ಯೋಜನೆಗಳನ್ನು ಕೆಸಿಆರ್ ಜಾರಿಗೊಳಿಸಿದ್ದೂ ಅವರಿಗೆ ವರದಾನವಾಗಿ ಪರಿಣಮಿಸಿತು. ಬ್ರಾಹ್ಮಣ, ರೆಡ್ಡಿ ಸೇರಿದಂತೆ ರಾಜ್ಯದ ಸುಮಾರು 30ಕ್ಕೂ ಹೆಚ್ಚು ಸಮುದಾಯಗಳಿಗೆ ಸಮುದಾಯ ಭವನಗಳ ನಿರ್ಮಾಣ ಮಾಡಿಕೊಡುವ ಭರವಸೆಯನ್ನು ಕೆಸಿಆರ್ ನೀಡಿದ್ದರು. ಇದು ಎಲ್ಲ ವರ್ಗದ ಮತದಾರರನ್ನು ಸೆಳೆಯಿತು. ಹೀಗೆ ಚಂದ್ರಶೇಖರ್ ಅವರು ರಾಜಕೀಯ ನೆಲೆಯನ್ನು ಭದ್ರಪಡಿಸಿಕೊಳ್ಳಲು ರಾಜ್ಯದ ಜನರಿಗೆ ಯಾವ ರೀತಿಯ ಯೋಜನೆಗಳು ಅಗತ್ಯವಿದೆಯೋ ಅದನ್ನೆಲ್ಲವನ್ನು ಕೈಗೆತ್ತಿಕೊಳ್ಳಲು ಸಂಕಲ್ಪದೊಂದಿಗೆ ಜನತೆಯ ಬಳಿ ಹೋಗಿದ್ದರು. ಆ ಸಂಕಲ್ಪಗಳು ಅವರಿಗೆ ಯಶಸ್ಸು ತಂದುಕೊಟ್ಟಿದೆ. ಕಾರು ಮತ್ತೊಮ್ಮೆ ತೆಲಂಗಾಣ ಸುತ್ತಲು ಪ್ರಾರಂಭಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ರಾಜಕೀಯ
ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲ? : ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು : ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ಈಗ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಖಚಿತ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಏಕೆ ಬಂಧಿಸಿಲ್ಲ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರೂ ರೈತ ವಿರೋಧಿ ಕಾನೂನುಗಳನ್ನು ವಾಪಸು ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ. ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲ? ಎಂದು ಬಿಜೆಪಿ ಸರ್ಕಾರಕ್ಕೆ ಪ್ರಶ್ನಿಸಿದರು.
ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಂಡವಾಳಶಾಹಿಗಳ ಗುಲಾಮಗಿರಿ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತೇವೆ ಅಂತ ಅದಾನಿ, ಅಂಬಾನಿಗೆ ಮಾತು ಕೊಟ್ಟಿದ್ದಾರೆ, ಹೀಗಾಗಿ ರೈತರು ಎಷ್ಟೇ ಪ್ರತಿಭಟನೆ ನಡೆಸಿದರೂ ಅವುಗಳನ್ನು ವಾಪಾಸು ಪಡೆಯುತ್ತಿಲ್ಲ ಎಂದರು.
ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲವೇ? 3/4
— Siddaramaiah (@siddaramaiah) January 27, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಜಯನಗರ ಜಿಲ್ಲೆ ರಚನೆ; ಆಕ್ಷೇಪಣೆ ಪರಿಶೀಲಿಸಿ ಶೀಘ್ರ ನಿರ್ಣಯ: ಸಚಿವ ಆನಂದಸಿಂಗ್

ಸುದ್ದಿದಿನ,ಬಳ್ಳಾರಿ: ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ 30ಸಾವಿರ ಆಕ್ಷೇಪಣೆಗಳು ಬಂದಿದ್ದು;ಅವುಗಳನ್ನು ಪರಿಶೀಲಿಸಿ ಜಿಲ್ಲೆ ರಚನೆ ಕುರಿತು ಶೀಘ್ರ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಗಳು ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ಕೊಡುವುದು ಬೇಡ ಅಂದಿದ್ದಾರೆ;ಪ್ರತಿಕ್ರಿಯೆ ನೀಡಲ್ಲ. ಜ.28ರಿಂದ ಅಧಿವೇಶನ ಆರಂಭವಾಗಲಿದ್ದು,ಸಹಜವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುವುದು ಎಂದು ಹೇಳಿದ ಸಚಿವ ಆನಂದಸಿಂಗ್ ಅವರು ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಮಾಧ್ಯಮದವರು ಪದೇಪದೆ ಕೇಳಿದ ಪ್ರಶ್ನೆಗೆ ನೋ ರಿಯಾಕ್ಷನ್ ಒನ್ಲಿ ಆ್ಯಕ್ಷನ್ ಎಂದರು.
ಕೋವಿಡ್ ಸಂದರ್ಭದಲ್ಲಿ ಜಿಲ್ಲಾಡಳಿತ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿದೆ.ಸಂಕಷ್ಟದ ಸಂದರ್ಭದಲ್ಲಿ ಡಿಎಂಎಫ್ ಅನುದಾನ ನೆರವಾಗಿದೆ ಎಂದು ಹೇಳಿದ ಸಚಿವ ಆನಂದಸಿಂಗ್ ಅವರು ಡಿಎಂಎಫ್ ಅನುದಾನ ಬಳಸಿಕೊಂಡು ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಕಚೇರಿ ಬಳ್ಳಾರಿಯಲ್ಲಿ ಅರಂಭಿಸುವುದಕ್ಕೆ ಕ್ರಮವಹಿಸಲಾಗುವುದು ಎಂದು ಅವರು ವಿವರಿಸಿದರು.
ಮೊದಲ ಹಂತದಲ್ಲಿ ಆರೋಗ್ಯ ಸೇವಾ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆದವರಿಗೆ ಯಾವುದೇ ರೀತಿಯ ಅಡ್ಡ ಪರಿಣಾಮಗಳಾಗಿಲ್ಲ. ಜಿಲ್ಲೆಯಲ್ಲಿ ನೋಂದಣಿಯಾದ 20ಸಾವಿರ ಆರೋಗ್ಯ ಸಿಬ್ಬಂದಿಯಲ್ಲಿ ಅಂದಾಜು 7ಸಾವಿರ ಜನರು ಇದುವರೆಗೆ ಲಸಿಕೆ ಪಡೆದುಕೊಂಡಿದ್ದಾರೆ. ಇನ್ನೂಳಿದವರು ಇನ್ನೂ ಕೆಲದಿನಗಳಲ್ಲಿ ಪಡೆದುಕೊಳ್ಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಸದ ದೇವಿಂದ್ರಪ್ಪ, ಶಾಸಕ ನಾಗೇಂದ್ರ, ಡಿಸಿ ಪವನಕುಮಾರ್ ಮಾಲಪಾಟಿ,ಜಿಪಂ ಸಿಇಒ ಕೆ.ಆರ್.ನಂದಿನಿ,ಎಸ್ಪಿ ಸೈದುಲು ಅಡಾವತ್,ಸಫಾಯಿ ಕರ್ಮಚಾರಿ ನಿಗಮದ ಅಧ್ಯಕ್ಷ ಹನುಮಂತಪ್ಪ ಮತ್ತಿತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕುರುಬ ಎಸ್ ಟಿ ಹೋರಾಟ | ಪಾದಯಾತ್ರೆಯಲ್ಲಿ ಕಾಗಿನೆಲೆ ಶ್ರೀ ಸರ್ಕಾರಕ್ಕೆ ಕೊಟ್ರು ಡೆಡ್ ಲೈನ್..!

ಸುದ್ದಿದಿನ, ದಾವಣಗೆರೆ : ರಾಜ್ಯ ಸರ್ಕಾರಕ್ಕೆ ಒಂದರ ಮೇಲೊಂದು ತಲೆ ನೋವು ಶುರುವಾಗ್ತಿದೆ. ಒಂದು ಕಡೆ ಪಂಚಮಸಾಲಿ ಹೋರಾಟ, ಮತ್ತೊಂದೆಡೆ ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ಆಗ್ರಹ. ಕಾಗಿನೆಲೆ ಶ್ರೀ ಗಳ ನೇತೃತ್ವದಲ್ಲಿ ಹೊರಟಿರುವ ಪಾದಯಾತ್ರೆ ಬೆಣ್ಣೆನಗರಿಗೆ ಬಂದು ತಲುಪಿದ್ದು, ಮೊದಲ ಭಾರೀಗೆ ಸರ್ಕಾರಕ್ಕೆ ಕಾಗಿನೆಲೆ ಶ್ರೀಗಳು ಖಡಕ್ ವಾರ್ನಿಂಗ್ ನೀಡುವ ಡೆಡ್ ಲೈನ್ ನೀಡಿದ್ದಾರೆ.
ಆ ಒಂದು ಪಾದಯಾತ್ರೆಯಲ್ಲಿ ಕೇಳಿದ್ದು ಒಂದೇ ಘೋಷಣೆ ವಾಕ್ಯ ಬೇಕೆ ಬೇಕು ಎಸ್ ಟಿ ಬೇಕು, ಬೇಕೆ ಬೇಕು ಎಸ್ ಟಿ ಬೇಕು. ಹೌದು., ಸಾಗರೋಪಾದಿಯಲ್ಲಿ ಜನ ಆ ಒಬ್ಬ ಸ್ವಾಮಿಜಿ ಜೊತೆ ಕೈಗೊಡಿಸಿದ್ದರು, ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಸದ್ಯ ತೀವ್ರ ಸ್ವರೂಪ ಪಡೆದುಕೊಂಡಿದೆ.
ಮಕರ ಸಂಕ್ರಾಂತಿಗೆ ಸೂರ್ಯ ತನ್ನ ದಿಕ್ಕು ಬದಲಿಸುವಂತೆ ನಿರಂಜನಾನಂದಪುರಿ ಸ್ವಾಮೀಜಿ ಕುರುಬ ದಿಕ್ಕು ಬದಲಿಸುವ ಪಣ ತೊಟ್ಟಿದ್ದಾರೆ. ಅದಕ್ಕೆ ಜನವರಿ ೧೫ ರಂದೆ ಹಾವೇರಿಯ ಕಾಗಿನೆಲೆ ಪೀಠದಿಂದ ಪಾದಯಾತ್ರೆ ಆರಂಭಿಸಿದ್ದು ಸದ್ಯ ಪಾದಯಾತ್ರೆ ದಾವಣಗೆರೆಗೆ ಬಂದು ತಲುಪಿದೆ, ಡೊಳ್ಳು ಕುಣಿತ, ಕುಂಬಮೇಳದ ಸ್ವಾಗತದೊಂದಿಗೆ ಜನರು ಸಾಗರೋಪಾದಿಯಲ್ಲಿ ಬಂದು ಜೈ ಎಂದಿದ್ದು, ಇದು ಎಸ್ ಟಿ ಹೋರಾಟಕ್ಕೆ ಮತ್ತುಷ್ಟು ಬಲ ನೀಡಿದೆ.
ಈ ವೇಳೆ ಹೋರಾಟವನ್ನುದ್ದೇಶಿಸಿ ಮಾತನಾಡಿದ ಕಾಗಿನೆಲೆ ಶ್ರೀ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಮ್ಮ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಶಾಂತಿಯುತವಾಗಿ ನಡೆಯುತ್ತಿದೆ. ಒಂದು ವೇಳೆ ನಮ್ಮ ಹೋರಾಟಕ್ಕೆ ಸರಿಯಾದ ಬೆಲೆ ಸಿಗದೆ ಹೋದಲ್ಲಿ ನಮ್ಮ ಹೋರಾಟ ತೀವ್ರಗೊಳ್ಳಲಿದೆ, ಟಗರು ಗುದ್ದಿದರೆ ಸಂಸತ್ ಭವನ ನಡುಗಲಿದೆ ಅಂತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನದ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಹದಿನೈದು ಸಾವಿರಕ್ಕೂ ಹೆಚ್ಚು ಸೇರಿದ್ದು ಪಾದಯಾತ್ರೆಗೆ ಮತ್ತಷ್ಟು ಶಕ್ತಿ ತುಂಬಿತು.. ಇನ್ನೂ ಸಮಾವೇಶಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಆಗಮಿಸಿ, ಸಿದ್ದರಾಮಯ್ಯ ವಿರುದ್ದ ಗುಡುಗಿದ್ರು, ಸಿದ್ದರಾಮಯ್ಯ ಕೇವಲ ನಾಲ್ಕು ಜಿಲ್ಲೆಗೆ ಶಿಫಾರಸ್ಸು ಮಾಡಿದ್ರು, ಈಗ ನಾವು ಇಡೀ ಕರ್ನಾಟಕಕ್ಕೆ ST ಕೇಳುತ್ತಿದ್ದೇವೆ, ಕೈಮುಗಿದು ಕೇಳುತ್ತೇನೆ ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ನವರಿಗೆ ಟಾಂಗ್ ಕೊಟ್ರು.
|ನಿರಂಜನಾನಂದಪುರಿ ಸ್ವಾಮೀಜಿ, ಕನಕಗುರು ಪೀಠ
ಒಟ್ಟಾರೆ ಈಗಾಗಲೇ ಸಂಪುಟ ವಿಸ್ತರಣೆಯಿಂದ ಇಕ್ಕಟ್ಟಿನಲ್ಲಿ ಸಿಲುಕಿರುವ ಸರ್ಕಾರಕ್ಕೆ ಇದೀಗ ST ಹೋರಾಟ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಅದರಲ್ಲೂ ಆಡಳಿತ ಪಕ್ಷದವರೆ ಆದ ಕೆಎಸ್ ಈಶ್ವರಪ್ಪ, ಎಂ ಟಿಬಿ ನಾಗರಾಜ್, ಆರ್ ಶಂಕರ್, ಎಚ್ ವಿಶ್ವನಾಥ್ ಹೋರಾಟಕ್ಕೆ ದುಮುಕಿದ್ದು, ಸರ್ಕಾಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.
| ಕೆ.ಎಸ್. ಈಶ್ವರಪ್ಪ, ಸಚಿವರು
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ
-
ದಿನದ ಸುದ್ದಿ1 day ago
ದಾವಣಗೆರೆ | ಅತ್ಯಾಚಾರ ಅಪರಾಧಿಗೆ 15 ವರ್ಷ ಸಜೆ, 26 ಸಾವಿರ ದಂಡ
-
ಬಹಿರಂಗ1 day ago
ಸಂವಿಧಾನ ದಿನಾಚರಣೆ ಹೇಗೆ ಗಣರಾಜ್ಯೋತ್ಸವವಾಯಿತು..?
-
ದಿನದ ಸುದ್ದಿ2 days ago
ದಾವಣಗೆರೆ | ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ : ಅಂತಿಮ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ
-
ದಿನದ ಸುದ್ದಿ1 day ago
ಹೊಲಿಗೆ ಯಂತ್ರ ಸೌಲಭ್ಯ ನೀಡುವ ಅರ್ಜಿ ಅವಧಿ ವಿಸ್ತರಣೆ
-
ಅಂತರಂಗ1 day ago
ಭಾರತದ ಸಂವಿಧಾನ : ಪ್ರಜೆಗಳ ಓದು
-
ಬಹಿರಂಗ3 days ago
ನುಡಿದ ಸತ್ಯವನ್ನು ಬಂಧಿಸಲಾಗದು
-
ದಿನದ ಸುದ್ದಿ1 day ago
ರೈತ ಹೋರಾಟವೆಂಬ ಸಾಗರ ; ಇದು ಬರೀ ಪಂಜಾಬಿನದ್ದಲ್ಲ, ಇಡೀ ದೇಶದ ಹೋರಾಟ