Connect with us

ನೆಲದನಿ

ಕಂದಗಲ್ಲು ಓಬಕ್ಕನ ಸೋಬಾನೆ ಪದಗಳಲ್ಲಿ ಬಸವದರ್ಶನ

Published

on

ಭಾರತದ ಚರಿತ್ರೆಯನ್ನು ತಿಳಿಯುವುದಕ್ಕೆ ಶಿಷ್ಟ ಸಾಹಿತ್ಯದಷ್ಟೆ ಮೌಖಿಕ ಸಾಹಿತ್ಯವೂ ಮಹತ್ವದ ದಾಖಲೆಯನ್ನು ಒದಗಿಸುತ್ತದೆ. ಈ ಮೌಖಿಕ ಚರಿತ್ರೆಯು ನೆಲಮೂಲ ಬದುಕಿನ ಪ್ರತಿದನಿಯಾಗಿದೆ. ಇಂತಹ ಮೌಖಿಕ ಚರಿತ್ರೆಯು ನೆಲದನಿಯಾಗಿ ತನ್ನ ಸಂವೇದನೆಗಳನ್ನು ಅನಾವರಣಗೊಳಿಸುತ್ತ ಬಂದಿದೆ. ಆದರೆ ನಾವು ನಮ್ಮ ಚರಿತ್ರೆಯನ್ನು ಅಧ್ಯಯನ ಮಾಡುವ ಸಂದರ್ಭದಲ್ಲಿ ನಮ್ಮ ಮನೆಯಲ್ಲಿಯೇ ಇರುವ ಚರಿತ್ರೆಯನ್ನು ಅರಿಯದೆ ಯಾರೋ ತಮ್ಮಿಚ್ಚೆಯಂತೆ ಬರೆದು ಸಿದ್ಧಪಡಿಸಿದ ದಾಖಲೆಯೆ ನಿಜವಾದ ಚರಿತ್ರೆಯೆಂದು ಭಾವಿಸಿ, ನಮ್ಮ ನಡುವೆ ಇರಬಹುದಾದ ವಾಸ್ತವ ಚರಿತ್ರೆಯನ್ನು ಲೆಕ್ಕಿಸದೆ ತಿರಸ್ಕಾರಕ್ಕೆ ಗುರಿಪಡಿಸಿದ್ದೇವೆ.

‘ಹಿತ್ತಲಗಿಡ ಮದ್ದಲ್ಲ’ ಎಂಬ ಮನಸ್ಥಿತಿಯು ಒಂದು ಕಾಲದಲ್ಲಿ ಮನೆ ಮಾಡಿಕೊಂಡಿತ್ತು. ಇದಕ್ಕೆ ಕಾರಣವೆಂದರೆ, ಈ ಪ್ರಕಾರದ ಸಾಹಿತ್ಯಕ್ಕೆ ಯಾವುದೇ ಮನ್ನಣೆ ಇಲ್ಲ ಎಂಬುದು ಬಹುತೇಕರ ನಂಬಿಕೆಯಾಗಿತ್ತು. ಆದರೆ ಇಂದು ಪಾಶ್ಚಿಮಾತ್ಯ ವಿಚಾರಧಾರೆಗಳ ಪ್ರಭಾವ ಹಾಗೂ ಕೆಲವು ವಿಶ್ವವಿದ್ಯಾಲಯಗಳು ಕೈಗೊಂಡಿರುವ ಅಲಕ್ಷಿತ ಸಮುದಾಯ ಕೇಂದ್ರಿತ (ಸಬಾಲ್ಟ್ರನ್) ಅಧ್ಯಯನದ ಫಲವಾಗಿ ಇಂದು ಗ್ರಾಮೀಣ ಬದುಕಿನಲ್ಲಿರುವ ಮೌಖಿಕ ಸಾಹಿತ್ಯದ ಬಗ್ಗೆ ಹೆಚ್ಚು ಒಲವುಗಳು ಬೆಳೆಯಲಾರಂಭಿಸಿವೆ. ಇದರಿಂದಾಗಿ ಮೌಖಿಕ ಚರಿತ್ರೆಯನ್ನು ಪ್ರಮುಖ ನೆಲೆಗೆ ತರುವ ಪ್ರಯತ್ನಗಳು ನಡೆಯುತ್ತಿವೆ.

ಗ್ರಾಮೀಣ ಜನತೆಯು ತಮ್ಮದೆ ಆದ ಬದುಕನ್ನು ಕಟ್ಟಿಕೊಂಡು, ತಮ್ಮ ಬದುಕಿನ ಬವಣೆಗಳನ್ನು ಮೌಖಿಕ ಸಾಹಿತ್ಯದಲ್ಲಿ ಮುಂದುವರೆಸಿಕೊಂಡು ಬಂದಿದ್ದಾರೆ. ಇಂತಹ ಗ್ರಾಮೀಣ ಬದುಕಿನಲ್ಲಿ ಅಂತರ್ಗತವಾಗಿರುವ ಚರಿತ್ರೆಯೊಂದನ್ನು ತಮ್ಮ ಸಾಹಿತ್ಯದಲ್ಲಿ ವ್ಯಕ್ತಪಡಿಸುವ ಜಾನಪದ ಹಾಡುಗಾರ್ತಿಯರಲ್ಲಿ ಕಂದಗಲ್ಲು ಓಬಕ್ಕನವರು ಒಬ್ಬರಾಗಿದ್ದಾರೆ.

ದಾವಣಗೆರೆ ತಾಲ್ಲೂಕು ಕಂದಗಲ್ಲು ಗ್ರಾಮದಲ್ಲಿ ನೆಲೆಸಿರುವ ಓಬಕ್ಕ ಸುಮಾರು ನೂರು ವರ್ಷಗಳ ಗಡಿಯಲ್ಲಿದ್ದಾರೆ. ತಮ್ಮ ಬದುಕಿನ ಒಂದು ಭಾಗವಾಗಿ ಸೋಬಾನೆ ಪದಗಳನ್ನು ಮೌಖಿಕವಾಗಿ ಹಾಡಿಕೊಂಡು ಬಂದ ಇವರು, ಜನಪದ ಸಾಹಿತ್ಯದ ಗಣ ಯನ್ನು ತಮಗರಿವಿಲ್ಲದಂತೆ ಕಾಪಾಡಿಕೊಂಡು ಬಂದಿದ್ದಾರೆ. ಪೀಳಿಗೆಯಿಂದ ಪೀಳಿಗೆಗೆ ಮೌಖಿಕವಾಗಿ ಮುಂದುವರೆದುಕೊಂಡು ಬಂದಿರುವ ಈ ಪ್ರಕಾರವು ಇಂದಿನ ಜಾಗತಿಕ ಭರಾಟೆಯಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಳುವ ಹಂತಕ್ಕೆ ಬಂದು ನಿಂತಿದೆ.

ಓಬಕ್ಕನಿಗೆ ತಾನು ಕಾಪಾಡಿಕೊಂಡು ಬಂದಿರುವ ಈ ಸಾಹಿತ್ಯದ ಸೊಬಗನ್ನು ತನ್ನ ಮುಂದಿನ ಪೀಳಿಗೆಗೂ ಕಲಿಸಬೇಕೆಂಬ ಹಂಬಲವಿದೆ. ಆದರೆ ಇಂದಿನ ಜಾಯಮಾನದ ಮನಸುಗಳಿಗೆ ಇದು ವಲ್ಲದ ತುತ್ತಾಗಿದ್ದು, ನಮ್ಮ ಹೆಣ್ಣು ಮಕ್ಕಳು ಸಿನಿಮಾ ಧಾರಾವಾಹಿಗೆ ಜೋತುಬಿದ್ದಿರುವುದರ ಫಲವಾಗಿ ಸತ್ವಯುತವಾದ ತಮ್ಮ ಮನೆಯ ಸಾಹಿತ್ಯದ ಸೊಬಗನ್ನು ಹೊರಹಾಕಿ, ಅನ್ಯ ಸಂಸ್ಕಕೃತಿಯ ಅನುಕರಣೆ ಮತ್ತು ಸ್ವೀಕಾರದ ಕಾಲಘಟ್ಟದಲ್ಲಿದ್ದೇವೆ. ಇದಕ್ಕೆ ಪ್ರಮುಖವಾದ ಕಾರಣ ನಮ್ಮ ಸಂಸ್ಕಕೃತಿ, ಆಚಾರ, ವಿಚಾರಗಳಲ್ಲಿರುವ ಮೌಲ್ಯಗಳ ತಿಳುವಳಿಕೆಯ ಕೊರತೆಯು ಒಂದಾಗಿದೆ.

ಓಬಕ್ಕನಲ್ಲಿ ನೆಲೆಯೂರಿರುವ ಮೌಖಿಕ ಸಾಹಿತ್ಯದ ಸಾಮಥ್ರ್ಯವನ್ನು ಕುರಿತು ವಿಚಾರಿಸಿದಾಗ ನನಗೆ ದನಿಗೆ ಜೊತೆಗೂಡಿಸುವವರು ಸಿಕ್ಕರೆ ರಾತ್ರಿಯಿಡಿ ನಿರಂತರವಾಗಿ ತಾನು ಕಲಿತಿರುವ ಪದಗಳನ್ನು ಹಾಡುವುದಾಗಿ ಧೈರ್ಯದಿಂದ ಸವಾಲು ಹಾಕುತ್ತಿದ್ದರು. ಓಬಕ್ಕ ನೂರು ವರ್ಷದ ಆಜುಭಾಜಿನಲ್ಲಿದ್ದರೂ ತುಂಬು ಕ್ರಿಯಾಶೀಲತೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸುವುದರ ಜೊತೆಗೆ, ಇಂದಿನ ಮಹಿಳೆಯರು ತಮ್ಮ ಮನೆಯಲ್ಲಿ ಮಾಡುವಂತಹ ಸಣ್ಣಪುಟ್ಟ ಕಸೂತಿಯಂತಹ ಕೆಲಸಗಳನ್ನು ಅನುಕರಣೆಯಿಂದ ಕಲಿತು ವಿವಿಧ ಬಗೆಯ ಕಸೂತಿಯ ವಸ್ತುಗಳನ್ನು ತಯಾರಿಸುವ ಸಾಮಥ್ರ್ಯವನ್ನು ಹೊಂದಿದ್ದಾರೆ.

ಸುಮಾರು ಮೂವತ್ತನೇ ವಯಸ್ಸಿನಲ್ಲಿ ತನ್ನ ಗಂಡನನ್ನು ಕಳೆದುಕೊಂಡ ಓಬಕ್ಕ ಬದುಕನ್ನು ಧೈರ್ಯವಾಗಿ ಎದುರಿಸುವ ಎದೆಗಾರಿಕೆಯನ್ನು ಬೆಳೆಸಿಕೊಂಡು ಬಂದಿದ್ದಾರೆ. ಓಬಕ್ಕನಿಗೆ ತಾನು ಕಲಿತಿರುವ ಪದಗಳನ್ನು ಇಂದು ಪ್ರದರ್ಶಿಸುವುದಕ್ಕೆ ಹಲವಾರು ಅಡೆತಡೆಗಳಿವೆ. ಅವುಗಳಲ್ಲಿ ಒಂದು, ತಾನು ವಂಶಪಾರಂಪರ್ಯವಾಗಿ ಉಳಿಸಿಕೊಂಡು ಬಂದಿರುವ ಪದಗಳನ್ನು ಹಾಡುವುದಕ್ಕೆ ದನಿಗೂಡಿಸುವಂತಹ ಸಮಾನ ಮನಸ್ಕರ ಕೊರತೆಯು ಒಂದಾಗಿದೆ. ಎರಡು, ನೂರರ ಗಡಿಯಲ್ಲಿರುವ ಇವರು ದನಿ ಎತ್ತಿ ಹಾಡುವಷ್ಟು ಸಾಮಥ್ರ್ಯವನ್ನು ಕಳೆದುಕೊಂಡಿದ್ದು, ಹೆಚ್ಚು ಸಮಯ ಹಾಡುವುದಕ್ಕೆ ಇವರ ದನಿಯಲ್ಲಿ ಸಾಮಥ್ರ್ಯವಿಲ್ಲ. ಹೀಗಾಗಿ ಇವರ ದನಿಯಲ್ಲಿ ನಡುಕವಿದೆ.

ಇದರಿಂದ ಇಂದು ಈ ಪದಗಳನ್ನು ಹಾಡುವುದಕ್ಕೆ ಅಡಚಣೆ ಉಂಟಾಗುತ್ತದೆ. ಮೂರು, ಇವರಿಗೆ ಪ್ರೊತ್ಸಾಹ ನೀಡಿ ಇವರ ಪದಗಳ ಮಹತ್ವವನ್ನು ಗುರುತಿಸುವವರ ಕೊರತೆಯಿದೆ. ನಾಲ್ಕು, ಇವರಲ್ಲಿನ ಈ ಸಾಹಿತ್ಯವನ್ನು ಆಸಕ್ತಿಯಿಂದ ತಿಳಿಯಬೇಕೆಂಬ ಹಂಬಲವುಳ್ಳವರ ಎದುರು ಹಾಡುವುದಕ್ಕೆ ಇವರಿಗೆ ಮುಜುಗರವಿದೆ. ಇದಕ್ಕೆ ಕಾರಣ ಇಂದಿನ ಕಾಲದಲ್ಲಿ ನಾವು ಹಾಡಿಕೊಂಡು ಬಂದಿರುವ ಹಾಡು (ಪದ)ಗಳಿಗೆ ಬೆಲೆಯಿಲ್ಲ ಎಂಬ ಕೀಳರಿಮೆಯ ಭಾವವನ್ನು ತಮ್ಮಲ್ಲಿ ಬೆಳೆಸಿಕೊಂಡಿದ್ದಾರೆ. ಹಾಗಾಗಿ ಈ ಪದಗಳನ್ನು ಸಂಗ್ರಹಿಸುವುದು ಹಾಗೂ ಇವರಿಗೆ ಸಂಗ್ರಹದ ಅಗತ್ಯತೆಯ ಅರಿವು ಮೂಡಿಸುವುದು ಕೂಡ ತ್ರಾಸದಾಯಕವಾದ ಕೆಲಸವಾಗಿದೆ.

ಇದು ಇಂದು ಈ ಮೌಖಿಕ ಸಾಹಿತ್ಯವನ್ನು ಕಡೆಗಣಿಸಿ ಆಧುನಿಕ ಸಂಗೀತ ಪ್ರಕಾರಕ್ಕೆ ಹೆಚ್ಚು ಜೋತುಬಿದ್ದಿರುವ ಪರಿಣಾಮದಿಂದಾಗಿ ಇಂತಹ ಸಾಹಿತ್ಯ ಪ್ರಕಾರವು ಇಂದು ಅವನತಿಯ ಅಂಚಿನಲ್ಲಿದೆ. ಓಬಕ್ಕನಂತಹ ಎಷ್ಟೋ ಜನಪದರಲ್ಲಿ ಕರಗತವಾಗಿರುವ ಸಾಹಿತ್ಯದ ಸೊಬಗು ಅಳಿವಿನಂಚಿನಲ್ಲಿದೆ.

ನಾನು ನನ್ನ ಬಾಲ್ಯದ ದಿನಗಳಿಂದಲೂ ಓಬಕ್ಕನನ್ನು ಹತ್ತಿರದಿಂದ ನೋಡಿದವನು. ಆದರೆ ನನಗೆ ಓಬಕ್ಕನ ಸಾಹಿತ್ಯದ ಮಹತ್ವ ದರ್ಶನವಾಗಿದ್ದು ನಾನು ಸಂಶೋಧನೆಗೆ ತೊಡಗಿಕೊಂಡ ಬಹುದಿನಗಳ ನಂತರ. ನನಗೆ ಓಬಕ್ಕ ಸಂಬಂಧದಲ್ಲಿ ಅಜ್ಜಿಯಾಗಬೇಕು ಎಂದುಕೊಂಡಿದ್ದೆ. ಆದರೆ ಓಬಕ್ಕನ ಪ್ರಕಾರ ನಾನು ಓಬಕ್ಕನಿಗೆ ತಮ್ಮನಾಗಿದ್ದೆ.

ನೂರು ವರ್ಷದ ಗಡಿಯಲ್ಲಿರು ಓಬಕ್ಕನಿಗೂ ಮೂವತ್ತರ ಗಡಿಯಲ್ಲಿರುವ ನನಗೂ ಅಕ್ಕ-ತಮ್ಮನ ಸಂಬಂಧ ಹೇಗೆ ಸಾಧ್ಯ ಎಂಬುದು ನನಲ್ಲಿ ಗೊಂದಲವನ್ನು ಮೂಡಿಸಿತ್ತು. ಆದರೆ ಓಬಕ್ಕ ಕಟ್ಟಿಕೊಡುವ ವಂಶವೃಕ್ಷದ ಪ್ರಕಾರ ಆಕೆಗೆ ನಾನು ತಮ್ಮನೆ ಆಗಿದ್ದೆ. ಈ ಕಾರಣದಿಂದಾಗಿ ನೂರರ ಪ್ರಾಯದ ಓಬಜ್ಜಿಯನ್ನು ಇಲ್ಲಿ ಓಬಕ್ಕ ಎಂಬುದಾಗಿಯೇ ಸಂಬೋಧಿಸುತ್ತಿದ್ದೇನೆ. ಓಬಕ್ಕನಲ್ಲಿ ಕರಗತವಾಗಿರುವ ಪದಗಳನ್ನು ಸಂಗ್ರಹ ಮಾಡುವಾಗ ನಾನು ಸಂಶೋಧನೆ ಮಾಡುತ್ತಿದ್ದೇನೆ. ನೀನು ಕಲಿತಿರುವ ಪದಗಳನ್ನು ಹಾಡು ಎಂದರೆ ಓಬಕ್ಕ ಹೇಳುವಂತಿರಲಿಲ್ಲ. ಇದಕ್ಕೆ ಕಾರಣ ತನ್ನ ಕಾಲದ ಪದಗಳು (ಸಾಹಿತ್ಯ) ಮಹತ್ವ ಕಳೆದುಕೊಂಡಿದೆ ಎಂಬ ಆತಂಕದಿಂದಲೊ ಅಥವಾ ಬದಲಾದ ಕಾಲಕ್ಕೆ ತಕ್ಕಂತೆ ಹೊಂದಿಕೊಳ್ಳುವ ಮಾನವ ಸಹಜ ಗುಣದಿಂದಲೊ ಓಬಕ್ಕ ಆಧುನಿಕ ಬದುಕಿನಲ್ಲಿ ಬೆರೆತುಕೊಂಡಿರುವ ಸಿನಿಮಾ ಮತ್ತು ಧಾರವಾಹಿ ಪ್ರಪಂಚಕ್ಕೆ ತನ್ನನ್ನು ತೆರೆದುಕೊಂಡಿದ್ದಳು.

ಇಂತಹ ಸಂದರ್ಭದಲ್ಲಿ ಓಬಕ್ಕನನ್ನು ಆಕೆಯ ಸಾಹಿತ್ಯ ಜಗತ್ತಿಗೆ ಕೊಂಡೊಯ್ಯಲು ವಿವಿಧ ತೆರನಾದ ಕಸರತ್ತುಗಳನ್ನು ಪ್ರದರ್ಶಿಸಬೇಕಾಯಿತು. ಕೊನೆಗೆ ನಿನಗೆ ವಯಸ್ಸಾಗಿದೆ, ನಿನ್ನ ಕಾಲದಲ್ಲಿ ಹಾಡುತ್ತಿದ್ದ ಪದಗಳನ್ನೆಲ್ಲ ಮರೆತಿರುವೆ. ನಿನಗೆ ‘ಅರವುಮರುವು’ ಎಂದಾಗ ತನ್ನ ಸಾಮಥ್ರ್ಯವನ್ನು ಪ್ರದರ್ಶಿಸುವ ನೆಲೆಯಲ್ಲಿ ಒಂದೊಂದಾಗಿಯೇ ತನ್ನ ಮನದ ಮೂಲೆಯಲ್ಲಿ ಕೇಂದ್ರಿಕರಿಸಿಕೊಂಡಿದ್ದ ಪದಗಳನ್ನು ಹಾಡುವ ಪ್ರಯತ್ನ ಮಾಡಿದರು.

ಓಬಕ್ಕನ ದನಿಯ ಸಮಸ್ಯೆಯನ್ನರಿತ ನಾನು ಅವರ ಬಳಿ ಒಂದೊಂದೆ ಸಾಲುಗಳನ್ನು ಸ್ಪಷ್ಟವಾಗಿ ತಿಳಿದುಕೊಂಡು ಬರೆಯಲು ಪ್ರಾರಂಭಿಸಿದೆ. ಒಂದು ಪದವನ್ನು ಸಂಪೂರ್ಣವಾಗಿ ಸಂಗ್ರಹಿಸಿದ ತರುವಾಯ ಅದರ ರಾಗ ಮತ್ತು ಲಯವನ್ನು ತಿಳಿಯುವ ಕಾತುರದಿಂದ ನಿಧಾನವಾಗಿ ಅವರಿಂದಲೇ ಪದಗಳನ್ನು ಹಾಡಿಸಿ, ಅವರ ಹಾಡಿನ ರಾಗವನ್ನು ಆಧುನಿಕ ವಿದ್ಯುನ್ಮಾನಗಳಲ್ಲಿ ಸಂಗ್ರಹಿಸಲು ಪ್ರಾರಂಭಿಸಿದೆ.

ಹೀಗೆ ಸಂಗ್ರಹಿಸಿದ ಪದಗಳಲ್ಲಿ ಬಸವಣ್ಣನ ಬದುಕಿಗೆ ಸಂಬಂಧಿಸಿದ ಕೆಲವು ಪದಗಳನ್ನು ಓಬಕ್ಕ ಹಾಡಿದ್ದರು. ನಾವು ಈಗಾಗಲೇ ಚರಿತ್ರೆಯ ಪಠ್ಯಗಳಲ್ಲಿ ಓದಿರುವುದಕ್ಕಿಂತ ಭಿನ್ನವಾದ ದರ್ಶನವೊಂದು ಓಬಕ್ಕನ ಪದಗಳಲ್ಲಿ ಕಂಡುಬಂದಿತು. ಆದ್ದರಿಂದ ಈ ನೆಲೆಯ ಜಾಡುಹಿಡಿದು ಜನಪದರ ಬದುಕಲ್ಲಿ ಕಂಡುಬರುವ ಸಮಾಜ ಸುಧಾರಕನಾದ ಬಸವಣ್ಣನ ಬದುಕನ್ನು ಅನಾವರಣಗೊಳಿಸುವ ನೆಲೆಯಲ್ಲಿ ‘ಓಬಕ್ಕನ ಬಸವದರ್ಶನ’ ಎಂಬ ಈ ಲೇಖನವನ್ನು ರಚಿಸುವ ಪ್ರಯತ್ನವನ್ನು ಇಲ್ಲಿ ಕೈಗೊಳ್ಳಲಾಗಿದೆ.

–2–

ಪ್ರಸ್ತುತ ಲೇಖನದಲ್ಲಿ ಓಬಕ್ಕ ಹಾಡಿದ ಸೋಬಾನೆ ಪದಗಳ (ಹಾಡು) ಮೂಲಕ ಜನಪದರು ಅಥವಾ ಸಾಮಾನ್ಯ ಜನತೆಯು ಸಮಾಜ ಸುಧಾರಕನಾದ ಬಸವಣ್ಣನನ್ನು ಕಾಣುವ ಬಗೆಯನ್ನು ಇಲ್ಲಿ ಚರ್ಚೆಗೆ ಒಳಪಡಿಸಲಾಗುವುದು. ನಮ್ಮ ಜನಪದ ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ತಳವರ್ಗದ ಜನತೆಯ ಪರವಾಗಿ ಹೋರಾಡಿದ ಬಸವಣ್ಣನನ್ನು ಶಿವನ ಪ್ರತಿರೂಪವಾಗಿ ಸ್ವೀಕರಿಸಲಾಗಿದೆ.

ಇಲ್ಲಿ ಶಿವ ಬೇರೆಯಲ್ಲ, ಬಸವಣ್ಣ ಬೇರೆಯಲ್ಲ. ಇದಕ್ಕೆ ಕಾರಣ ಈ ನಾಡಿನ ಮೂಲ ಸಂಸ್ಕೃತಿಯು ಶೈವ ನೆಲೆಯದಾಗಿರುವುದು. ಹೀಗಾಗಿ ನಮ್ಮ ಜನಪದರು ಶಿವನ ಆರಾಧಕರಾಗಿ ಕಂಡುಬರುತ್ತಾರೆ. ತಮ್ಮ ಸಮುದಾಯದ ಜನತೆಯ ಪರವಾಗಿ ಹೋರಾಟ ನಡೆಸಿದ ಕ್ರಾಂತಿಕಾರರನ್ನು ಶಿವನ ಪ್ರತಿರೂಪವಾಗಿ ಕಾಣುತ್ತಾರೆ. ಆದ್ದರಿಂದ ಇಲ್ಲಿ ಶಿವ ಮತ್ತು ಬಸವಣ್ಣ ಒಂದೆಯಾಗಿ ಕಂಡುಬರುತ್ತಾರೆ. ತಳಸಮುದಾಯದ ಪ್ರಗತಿಗಾಗಿ ಬಸವಣ್ಣ ತನ್ನ ಹೋರಾಟವನ್ನು ನಡೆಸಿದ್ದು ಕ್ರಿ.ಶ 12ನೇ ಶತಮಾನದಲ್ಲಿ. ಆದರೆ ಬಸವಣ್ಣನ ಮೂಲ ಆಶಯಗಳನ್ನು ಸ್ಥಾಪಿತ ಹಿತಾಸಕ್ತಿಗಳು ಅವರ ಇಚ್ಚಾನುಸಾರವಾಗಿ ಬಳಸಿಕೊಂಡು, ಆತನ ವಿಚಾರಗಳ ಅಡಿಯಲ್ಲಿ ಮೂಲಭೂತವಾದ ಧರ್ಮವೊಂದನ್ನು ಸ್ಥಾಪಿಸಿಕೊಂಡು ಬಂದಿವೆ.

ಈ ಸ್ಥಾಪಿತ ಮೌಲ್ಯಗಳಿಂದಾಗಿ ಬಸವಣ್ಣನ ಉದಾರವಾದಿ ನಿಲುವುಗಳನ್ನು ಇಂದು ಹುಡುಕುವುದು ಕೂಡ ಸಾಧ್ಯವಾಗದಷ್ಟು ದೂರ ಸರಿದಿವೆ. ಆದರೆ ತನ್ನ ಹಿತಕ್ಕಾಗಿ ಹೊರಾಡಿದ ಗುರುವನ್ನು ನಿಜದ ನೆಲೆಯಲ್ಲಿ ಆರಾಧಿಸಿಕೊಂಡು ಬಂದಿರುವುದನ್ನು ಜನಪದ ಪರಂಪರೆಯಲ್ಲಿ ಇಂದಿಗೂ ಗುರುತಿಸಬಹುದಾಗಿದೆ.
ಜನಪದರು ಬಸವಣ್ಣನನ್ನು ತಮ್ಮ ವಿಮೋಚನೆಗಾಗಿ ಹೋರಾಡಿದ ದೇವರೆಂದು ಆರಾಧಿಸುವುದು ಮಾತ್ರವಲ್ಲ, ಬಸವಣ್ಣನ ಸಂಕಷ್ಟಗಳನ್ನು ತಮ್ಮ ನೋವುಗಳೆಂಬಂತೆ ಆತನ ನೋವುಗಳಿಗೆ ಮಿಡಿಯುತ್ತಾ ಬಂದಿದ್ದಾರೆ. ಈ ಮನೋಭಾವವು ಜನಪದರಲ್ಲಿನ ಹೃದಯ ವೈಶಾಲ್ಯವನ್ನು ಕಟ್ಟಿಕೊಡುತ್ತದೆ. ಇವರ ಈ ತುಡಿತ ಯಾವುದೇ ಸ್ವಾರ್ಥದಿಂದ ಕೂಡಿದ್ದಲ್ಲ, ಬದಲಾಗಿ ಇಲ್ಲಿ ಸಾಮಾಜಿಕ ಕಳಕಳಿ ಕಂಡುಬರುತ್ತದೆ.

ಶಿಷ್ಟ ಪರಂಪರೆಯು ಬಸವಣ್ಣನ ಮಹಿಮೆಯನ್ನು ತಮ್ಮ ಇಚ್ಚಾನುಸಾರ ವರ್ಣನಾತ್ಮಕ ನೆಲೆಯಲ್ಲಿ ಚಿತ್ರಿಸಿಕೊಂಡು, ಹಲವಾರು ಕಡೆಗಳಲ್ಲಿ ಪ್ರಕ್ಷಿಪ್ತಗಳನ್ನು ಉಂಟುಮಾಡಿದೆ. ಇದಕ್ಕೆ ಕಾರಣ ಸ್ಥಾಪಿತ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ಕಾಪಾಡುವ ಮೂಲಕ ಅಸಮಾನತೆಯ ಸಾಮಾಜಿಕ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಬಂದಿರುವುದಾಗಿದೆ.

ಇಂತಹ ಪ್ರಕ್ಷಿಪ್ತ ಮಾದರಿಗಳನ್ನು ಹಲವಾರು ಶಿಷ್ಟ ಸಾಹಿತ್ಯ ಕೃತಿಗಳಲ್ಲಿ ಗುರುತಿಸಬಹುದಾಗಿದೆ. ಆದರೆ ಇದಕ್ಕೆ ಪರ್ಯಾಯ ನೆಲೆಯಲ್ಲಿ ಸಾಮಾನ್ಯ ಜನರ ಬದುಕಿಗಾಗಿ ಹೋರಾಡಿದ ಬಸವಣ್ಣನ ನೋವಿಗೆ ಜನಪದರು ತುಡಿಯುತ್ತ ಬಂದಿರುವ ಕೆಲವು ಸೋಬಾನೆ ಪದಗಳು ಈ ಮುಂದಿನಂತಿವೆ.

ಯಾರೇನೆಂದರು ನಿನಗೆ ಸದ್ಗುರು ದೇವ ||
ಬಾರ ದ್ರೋಹಿರಿ ಮನಗೆ
ಸದ್ಗರು ದೇವ | ನಿನಗ್ಯಾರೇನೆಂದರು ||
ಸಣ್ಣನಾಗಲಿ ಬಾಲ | ಲೋಲನಾಗಲಿ ಗುಣ
ಶೀಲನಾಗಲಿ ಮುಕ್ತಿ | ಕೀಲು ತೋರಿದೆ ಗುರುವೆ
ಸದ್ಗುರು ದೇವ | ನಿನಗ್ಯಾರೇನೆಂದರು ||
ಚಾರನೆಂಬುವರೇನು | ಸೂರನೆಂಬುವರೇನು
ಪರಮಾತ್ಮಕ ಸುವ್ವಿ
ಸದ್ಗುರು ದೇವ | ಯಾರೇನೆಂದರು ನಿನಗೆ ||
ಧರೆಯೊಳು ಕೂಡಲಿ | ಪುರದೊಳು ನೆಲೆಸಿರುವ
ವರಶ್ರೀಸಂಗಮ ಬಸವೇಸ್ಪುರಗೆ | ಯಾರೇನೆಂದರು
ಸದ್ಗುರು ದೇವ | ಯಾರೇನೆಂದರು ನಿನಗೆ ||

ಈ ಜನಪದ ಸಾಹಿತ್ಯವು ಬಸವಣ್ಣನ ಅಂತಿಮ ದಿನದ ಬದುಕಿನ ಸಂಕಷ್ಟಗಳನ್ನು ಅನಾವರಣಗೊಳಿಸುತ್ತದೆ. ಇಲ್ಲಿ ಬಸವಣ್ಣ ಮೌನ ತಾಳಿರುವುದಕ್ಕೆ ಹಲವಾರು ಕಾರಣಗಳಿವೆ. ತನ್ನ ಹೋರಾಟದ ಭಕ್ತಿಯ ಮಾರ್ಗವನ್ನು ಕುರಿತು ಬಸವಣ್ಣ ಹೇಳುವ ‘ಭಕ್ತಿಯೆಂಬುದು ಮಾಡಬಾರದು ಕಾಣ| ಗರಗಸವಿದ್ದಂತೆ’ ಎಂಬ ಮಾತು ಆತನ ಬದುಕಿನ ಸಂಕಷ್ಟಗಳನ್ನು ಕಟ್ಟಿಕೊಡುತ್ತದೆ.

ಇಲ್ಲಿ ತನ್ನ ಹೋರಾಟದ ಹಾದಿಯಲ್ಲಿ ಈತನು ಹಲವಾರು ಬಗೆಯ ನೋವನ್ನು ಅನುಭವಿಸಿರುತ್ತಾನೆ. ಒಂದೆಡೆ ಬ್ರಾಹ್ಮಣ್ಯವನ್ನು ಧಿಕ್ಕರಿಸುವ ಮೂಲಕ ಶೂದ್ರ ಸಮುದಾಯದ ಸಮಾನತೆಗಾಗಿ ಹೋರಾಟ ನಡೆಸುತ್ತಾನೆ. ಮತ್ತೊಂದೆಡೆ ಸಮಾಜದ ಪ್ರಬಲ ವರ್ಗವಾದ ಪುರೋಹಿತಶಾಹಿಯನ್ನು ಎದುರು ಹಾಕಿಕೊಳ್ಳುತ್ತಾನೆ.

ಈ ಸಂದರ್ಭದಲ್ಲಿ ರಾಜಾಶ್ರಯದಲ್ಲಿದ್ದ ಬಸವಣ್ಣನಿಗೆ ತಳಸಮುದಾಯದ ಪರವಾದ ಹೋರಾಟ ಮಾಡುವುದಕ್ಕೆ ಸ್ವತಂತ್ರ ಅಸ್ತಿತ್ವ ಇರಲಿಲ್ಲ. ಇಲ್ಲಿ ರಾಜನ ಆಜ್ಞೆಯನ್ನು ತಿರಸ್ಕರಿಸಿದರೆ ತನ್ನ ಪದವಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಕಠಿಣ ಶಿಕ್ಷೆಗೂ ಗುರಿಯಾಗಬೇಕಾದ ಸಂಕಷ್ಟದ ದಿನಗಳು ಬಸವಣ್ಣನ ಮುಂದಿದ್ದವು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ತಾನು ಕಟ್ಟಿದ ಸಮಾನತೆಯ ಆಶಯಹೊತ್ತ ಅನುಭವ ಮಂಟಪವನ್ನು ಸಮಾನ ನೆಲೆಯಲ್ಲಿ ಮುನ್ನಡೆಸಬೇಕಾಗಿತ್ತು. ಇಂತಹ ಚಾರಿತ್ರಿಕ ಒತ್ತಡದ ಪರಿಸ್ಥಿತಿಯಲ್ಲಿನ ಬಸವಣ್ಣನ ಬದುಕನ್ನು ಕುರಿತು ಜನಪದರು ಆತನ ನೋವಿಗೆ ಮಿಡಿಯುತ್ತ ಬಂದಿದ್ದಾರೆ.

ಜಾನಪದವು ಶಿಷ್ಟ ಸಾಹಿತ್ಯ ಪರಂಪರೆಯಂತೆ ಬಸವಣ್ಣನ ಬದುಕನ್ನು ಹಾಗೂ ಆತನ ಹೋರಾಟದ ನೆಲೆಗಳನ್ನು ದೈವಾಂಶ ಸಂಭೂತ ನೆಲೆಯಲ್ಲಿ ವೈಭವಿಕರಿಸುವುದಿಲ್ಲ. ಜನಪದ ಪರಂಪರೆಯಲ್ಲಿ ಯಾವುದೇ ವೈಭವವಿಲ್ಲದೆ ಆತನ ವಾಸ್ತವ ಬದುಕನ್ನು ತಮ್ಮ ಮೌಖಿಕ ಸಾಹಿತ್ಯದಲ್ಲಿ ಅನಾವರಣಗೊಳಿಸುತ್ತಾರೆ. ಜನಪದರು ಬಸವಣ್ಣನನ್ನು ಶಿಷ್ಟ ಸಾಹಿತ್ಯದಿಂದ ರಚನೆಯಾದ ಚರಿತ್ರೆಯ ಮೂಲಕ ಅಧ್ಯಯನ ಮಾಡಿ ಕಂಡುಕೊಂಡವರಲ್ಲ. ಬದಲಾಗಿ ಕಾಲದಿಂದ ಕಾಲಕ್ಕೆ ಹರಿದುಬಂದ ಮೌಖಿಕ ಪರಂಪರೆಯಿಂದ ಆತನನ್ನು ಕಂಡುಕೊಂಡವರು.

ಹೀಗಾಗಿ ಇಲ್ಲಿ ಆತನ ನೋವು ನಲಿವುಗಳನ್ನು ಯಥಾ ಪ್ರಕಾರವಾಗಿ ಮುಂದುವರೆಸಿಕೊಂಡು ಬಂದಿದ್ದಾರೆ. ‘ಯಾರೇನೆಂದರು ನಿನಗೆ ಸದ್ಗುರು ದೇವ’ ಮತ್ತು ‘ಬಾರ ದ್ರೋಹಿರಿ ಮನಗೆ’ ಎಂಬ ನುಡಿಗಳು ಜನಪದರು ಕಂಡುಕೊಂಡಿರುವ ಬಸವ ದರ್ಶನವನ್ನು ಪ್ರತಿನಿಧಿಸುತ್ತವೆ. ಹೀಗಾಗಿ ಶಿಷ್ಟ ಸಾಹಿತ್ಯವು ಕಟ್ಟಿಕೊಡುವ ಚರಿತ್ರೆಗಿಂತ ಭಿನ್ನವಾದ ಚರಿತ್ರೆಯೊಂದು ನಮ್ಮ ಜಾನಪದರ ಬದುಕಿನೊಳಗೆ ಅಂತರ್ಗತವಾಗಿದೆ.

ಜನಪದರು ಬಸವಣ್ಣನ ನೋವು ನಲಿವುಗಳನ್ನು ಸಮಾನ ನೆಲೆಯಲ್ಲಿ ಚಿತ್ರಿಸಿಕೊಂಡು ಬಂದಿದ್ದಾರೆ. ಇಲ್ಲಿ ಆತನ ಕಲ್ಯಾಣ ಹಾಗೂ ಸರಸ ಸಲ್ಲಾಪಗಳು ಮಾನವ ಸಹಜ ನೆಲೆಯಲ್ಲಿ ವ್ಯಕ್ತವಾಗುತ್ತವೆ. ಬಸವಣ್ಣ ಮತ್ತು ಗಂಗಾಭಿಕೆಯ ಕಲ್ಯಾಣದ ಸಂದರ್ಭವನ್ನು ಹಾಗೂ ಅಲ್ಲಿನ ಸಲ್ಲಾಪದ ಕ್ಷಣಗಳನ್ನು ತಮ್ಮ ಬದುಕಿನೊಂದಿಗೆ ಸಮೀಕರಿಸಿಕೊಂಡು ಬಂದಿರುವುದನ್ನು ನಾವು ಜಾನಪದ ಪರಂಪರೆಯಲ್ಲಿ ಮಾತ್ರ ಗುರುತಿಸಬಹುದಾಗಿದೆ.

ಜನಪದರು ನಿರಂತರವಾಗಿ ಕಾಲದಿಂದ ಕಾಲಕ್ಕೆ ತಾವು ಆಚರಿಸಿಕೊಂಡು ಬಂದಿರುವ ಸಂಪ್ರದಾಯ, ಆಚರಣೆ, ಹಾಸ್ಯ, ವಿನೋದವನ್ನು ಬಸವಣ್ಣನ ಕಲ್ಯಾಣದೊಂದಿಗೆ ಸಮೀಕರಿಸಿಕೊಂಡು ಪದ ಕಟ್ಟಿ ಹಾಡುತ್ತಾ ಬಂದಿದ್ದಾರೆ. ಅದು ಓಬಕ್ಕನ ಸೋಬಾನೆ ಪದಗಳಲ್ಲಿ ಹೀಗೆ ವ್ಯಕ್ತವಾಗಿದೆ.

ಗುರುವಿನ ಮನೆಯಾಗೆ
ಅರುವಿನ ಲಯದಾಗೆ
ಅರುವಿನ ಮಂಟಪದ ಮನೆಯಾಗೆ
ಕರುಣ ಕನೆಂದುಕರೆವರು ಸೋಬಾನೆ||
ಬಸವಯ್ಯ ಶ್ರೀಗಂಗೆ
ಕುಶಲದಿಂ ಕರವಿಡಿದು | ಬಸವಣ್ಣ
ಬಂದು ಹಸೆಯಲ್ಲಿ ಕುಳಿತರು ಸೋಬಾನೆ||
ಪದ್ಮಲೋಚನೆ ಗಂಗೆ
ಎದ್ದು ಸೆರಗ ಬಿಗಿದು | ಮುದ್ದು ಬಸವಯ್ಯಗೆ
ಅರಿಶಿಣವ ಧರಿಸ್ಯಾಳೆ ಸೋಬಾನೆ ||
ಗಂಧ ಹಾಕುಸ್ತಿ ಹಿಡುಲಾಗ ಸೋಬಾನೆ
ಗಂಧ ಮೇಲಕ್ಕೆ ಎಳವುತ ಸೋಬಾನೆ
ಅಂದು ಆರುತಿಯಾ ಬೆಳಗುತ ಸೋಬಾನೆ
ಗಂಧ ಮೇಲಕ್ಕೆ ಎಳವುತ ಶ್ರೀಗಂಗೆ
ಬಂದು ಹಸೆಯಲ್ಲಿ ಕುಳಿತಳು ಸೋಬಾನೆ ||
ಬಸವಯ್ಯ ನೀನೊಮ್ಮೆ
ಎಣ್ಣೆ ಅರಿಶಿಣವ ಧರಿಸಪ್ಪ ಸೋಬಾನೆ
ಬಸವಯ್ಯ ಗಂಧ ಹಾಕುಸ್ತಿ ಹಿಡುಲಾಗ
ಅಂದು ಆರುತಿಯಾ ಬೆಳಗುತ
ಬಂದು ಹಸೆಯಲ್ಲಿ ಕುಳಿತರು ಸೋಬಾನೆ ||
ಬಂದು ಹಸೆಯಲ್ಲಿ ಕುಳಿತರು ಬಸವಣ್ಣ
ಸಸಿಮುಖಿಯರೆಲ್ಲ ನಗುತಾರೆ ಸೋಬಾನೆ ||
ಶರ್ತೆಶ ಕೋಟಿಗೆ ವರ್ಕಾಳ ಸಲಹುತ
ನಿತ್ಯಗೆ ಪರಮ ವಿರಕ್ತನಿಗೆ | ಭೂಗಳಿಯ ಕರ್ತನಿಗೆ
ಜೀವ ಕಮ್ಯಾರ್ತನಿಗೆ ಸೋಬಾನೆ
ಇವ ಸದ್ಗುರು ಬಸವದೇವನಿಗೆ ಸೋಬಾನೆ ||
ಅಂತರಂಗನ ಪೇಟೆ ಸಂತೆಗೊಗನ ತಂಗಿ
ಸಿಂತಿಸುತ ಕೊಂಡೆ ರತುನಾವ ಸೋಬಾನೆ ||
ಸಿಂತುಸುತ ಕೊಂಡೆ ರತುನಾದ ಬೆಳಕಿಲಿ
ಕಾಂತೆ ಕೇಳಮ್ಮ ಕೌತುಕವ ಸೋಬಾನೆ ||
ರತುನಾದ ಬೆಳಕಲಿ ಕಾಂತೆ ಕೇಳಮ್ಮ
ಕೌತುಕವ ಶ್ರೀಗುರು ಬಸವಂಗೆ | ಶಿವನ ಕುಮಾರಂಗೆ
ನಾಗಭೂಷಣ ನಮಿತನಿಗೆ ಸೋಬಾನೆ ||
ಸದ್ಗುರು ಬಸವಯ್ಯ ದೇವನಿಗೆ
ಸತ್ಯ ಸದ್ಗುರುವಂಗೆ | ನಿತ್ಯಸುಳ್ಳಾಡಿ ದಿನಗಳಿದೆ
ಮತ್ತುಟ್ಟೊ ಬಾದೆ ಬಿಡದಮ್ಮ ಸೋಬಾನೆ ||

ಪ್ರಸ್ತುತ ದಿನಗಳಲ್ಲಿ ಸ್ಥಾಪಿತ ನೆಲೆಗೆ ತಳ್ಳಿರುವ ಬಸವಣ್ಣನನ್ನು ಒಂದು ಜಾತಿಯ ನಾಯಕನೆಂದು ಬಿಂಬಿಸುವ ಮೂಲಕ ಉಳಿದಂತ ಸಮುದಾಯಗಳು ‘ಇವ ನಮ್ಮವನಲ್ಲ’ ಎನ್ನುವಂತಹ ಸನ್ನಿವೇಶ ನಿರ್ಮಾಣವಾಗಿದೆ. ಇದಕ್ಕೆ ಬಸವಣ್ಣನ ಸುತ್ತ ಸುತ್ತುವರೆದಿರುವ ಮೂಲಭೂತವಾದ ಧೋರಣೆಯು ಪ್ರಮುಖ ಕಾರಣವಾಗಿದೆ. ಈ ಮೂಲಭೂತವಾದಿ ನೆಲೆಗಳು ಜೀವ ತಳೆಯುವುದು ಶಿಷ್ಟ ಸಮುದಾಯದಲ್ಲಿ ಮತ್ತು ಆಧುನಿಕ ಸಂದರ್ಭದ ಶಿಕ್ಷಿತ ಸಮುದಾಯದಲ್ಲಿ. ಆದರೆ ಈ ಅಸಮಾನತೆಯ ಧೋರಣೆಗಳು ಜನಪದರಲ್ಲಿ ವ್ಯಕ್ತವಾಗಿರುವುದು ಕಂಡುಬರುವುದಿಲ್ಲ. ಇದು ಜನಪದರಲ್ಲಿರುವ ವಿಶ್ವಮಾನವ ಪ್ರಜ್ಞೆಯನ್ನು ಅನಾವರಣಗೊಳಿಸುತ್ತದೆ. ಸಮಾಜದ ಒಳಿತಿಗಾಗಿ ನಿಸ್ವಾರ್ಥದಿಂದ ಹೋರಾಡಿದವರು ಯಾರೇ ಆಗಿರಲಿ, ಅವನು ಯಾವುದೇ ಜಾತಿ, ಸಮುದಾಯಕ್ಕೆ ಸೇರಿದ್ದರು ಸಹ ಅವನನ್ನು ತಮ್ಮ ನಾಯಕನೆಂದು, ದೈವವೆಂದು ಆರಾಧಿಸುತ್ತಾರೆ. ಈ ಕಾರಣದಿಂದ ಮೂಲತಃ ಬ್ರಾಹ್ಮಣನಾದ ಶಿವಶರಣ ಬಸವಣ್ಣನನ್ನು ಕೂಡ ಶಿವ ಸ್ವರೂಪಿಯಾಗಿ ಕಂಡುಕೊಡಿದ್ದಾರೆ. ಆತನ ನೋವು ನಲಿವುಗಳನ್ನು ತಮ್ಮ ನೋವು ನಲಿವುಗಳೊಂದಿಗೆ ಸಮೀಕರಿಸಿಕೊಂಡು ಪದಕಟ್ಟಿ ಹಾಡುತ್ತ ಬಂದಿದ್ದಾರೆ.
ಜಾನಪದರು ಸೃಷ್ಟಿಸಿಕೊಂಡು ಬಂದಿರುವ ಈ ಮೇಲಿನ ಹಾಡಿನಲ್ಲಿ ಬಸವಣ್ಣ ಎಲ್ಲಿಯೂ ರಾಜಪ್ರಭುತ್ವದ ಪ್ರತಿನಿಧಿಯಾಗಿ ಕಂಡುಬರುವುದಿಲ್ಲ.

ಜಾನಪದರ ಬದುಕಿನೊಳಗಿನ ಸಾಮಾನ್ಯ ವ್ಯಕ್ತಿಯಾಗಿ ಪ್ರತಿನಿಧಿಸುತ್ತಾನೆ. ಇಲ್ಲಿ ಬಸವಣ್ಣ ಮತ್ತು ಗಂಗಾಬಿಕೆಯರ ಕಲ್ಯಾಣವನ್ನು ಶಿವ ಮತ್ತು ಗಂಗೆಯರೊಂದಿಗೆ ಸಮೀಕರಿಸಿಕೊಂಡು ಬಂದಿದ್ದಾರೆ. ಇದು ಜನಪದ ಪರಂಪರೆಯಲ್ಲಿನ ವಿಶಿಷ್ಟ ದರ್ಶನವಾಗಿ ಕಂಡುಬರುತ್ತದೆ. ಶಿಷ್ಟ ಪರಂಪರೆಯು ಎಲ್ಲವನ್ನು ಹೊಡೆದು ನೋಡುವಂತಹ ಮೂಲಭೂತವಾದಿ ಗುಣಗಳನ್ನು ಸೃಷ್ಟಿಸುತ್ತ ಬಂದಿರುವ ಸಂದರ್ಭದಲ್ಲಿ, ಇದಕ್ಕೆ ಪರ್ಯಾಯವೆಂಬಂತೆ ಜನಪದ ಪರಂಪರೆಯು ಎಲ್ಲವನ್ನು ಸಮೀಕರಿಸಿಕೊಂಡು ಬಂದಿರುವುದನ್ನು ಈ ಪದಗಳಲ್ಲಿ ಗುರುತಿಸಬಹುದಾಗಿದೆ. ಇದು ಶಿಷ್ಟ ಪರಂಪರೆಗೆ ಜನಪದ ಪರಂಪರೆಯು ಒಡ್ಡುತ್ತ ಬಂದಿರುವ ಪ್ರತಿರೋಧದ ನೆಲೆಯೂ ಹೌದು. ಶಿಷ್ಟರು ಅಸಮಾನತೆಯ ವಿರುದ್ಧ ಹೋರಾಡಿದ ಬಸವಣ್ಣನ್ನು ಒಂದು ಜಾತಿ, ಸಮುದಾಯಕ್ಕೆ ಕೇಂದ್ರಿಕರಿಸುವ ಮೂಲಕ ಅನಾರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡುತ್ತ ಬಂದಿದ್ದಾರೆ. ಆದರೆ ಜನಪದರು ಸಮಾಜ ಸುಧಾರಕ ಬಸವಣ್ಣನನ್ನು ಶಿವನೊಂದಿಗೆ ಸಮೀಕರಿಸುವ ಮೂಲಕ ಗುಪ್ತಗಾಮಿನಿಯಂತೆ ಆರೋಗ್ಯಕರವಾದ ಸಮಾಜವನ್ನು ಕಟ್ಟುತ್ತ ಬಂದಿದ್ದಾರೆ. ಹೀಗಾಗಿಯೆ ಇಂದಿಗೂ ಬಸವಣ್ಣ ತಳಸಮುದಾಯದ ಜನತೆಯ ಅಂತರಾಳದಲ್ಲಿ ನೆಲೆಯೂರಿದ್ದಾನೆ.

ಇದೇ ಪದ (ಹಾಡು) ದಲ್ಲಿ ಕೊನೆಯದಾಗಿ ಕಂಡುಬರುವ ಸಾಲು ಜನಪದರ ಸ್ವಾಮಿ ನಿಷ್ಠೆಯನ್ನು ಎತ್ತಿಹಿಡಿಯುತ್ತದೆ. ‘ಸತ್ಯ ಸದ್ಗುರುವಂಗೆ ನಿತ್ಯಸುಳ್ಳಾಡಿ ದಿನಗಳಿದೆ ಮತ್ತುಟ್ಟೊ ಬಾದೆ ಬಿಡದಮ್ಮ ಸೋಬಾನೆ’ ಎಂಬುದು ಇವರ ಸ್ವಾಮಿನಿಷ್ಠೆಯ ಪ್ರತೀಕವಾಗಿದೆ. ಈ ನಿಷ್ಠೆಯಿಂದಾಗಿಯೇ ತಳಸಮುದಾಯವು ಮೂಲಭೂತವಾದಿಗಳು ತಮ್ಮ ಅನುಕೂಲಕ್ಕಾಗಿ ಸೃಷ್ಠಿಸಿರುವ ಕಪಟ ತಂತ್ರಗಳನ್ನು ತಮ್ಮ ಬದುಕಿನ ಭಾಗವೆಂಬಂತೆ ಅನಿವಾರ್ಯವಾಗಿ ಮುಂದುವರೆಸಿಕೊಂಡು ಬಂದಿದ್ದಾರೆ.

ಬಸವಣ್ಣನ ವಿಚಾರಗಳನ್ನು ಮೀರಿದರೆ, ಆತನ ತತ್ವ ಚಿಂತನೆಗಳಿಗೆ ವಿರುದ್ಧವಾಗಿ ನಡೆದುಕೊಂಡರೆ ಮುಂದಿನ ಜನ್ಮದಲ್ಲೂ ಇದೇ ನರಕವನ್ನು ಅನುಭವಿಸಬೇಕಾಗುತ್ತದೆ ಎಂಬುದು ಇವರ ನಂಬಿಕೆಯಾಗಿದೆ. ಹೀಗಾಗಿಯೇ ಬಸವಣ್ಣನ ಮೂಲ ತತ್ವ ಸಿದ್ಧಾಂತಗಳು ಇಂದಿಗೂ ಜೀವಂತಿಕೆಯನ್ನು ಪಡೆದುಕೊಂಡಿದ್ದು, ಇವನ್ನು ತಮ್ಮ ಬದುಕಿನ ಒಂದು ಭಾಗವೆಂಬಂತೆ ಮುಂದುವರೆಸಿಕೊಂಡು ಬಂದಿದ್ದಾರೆ.

ಆದರೆ ಮೂಲಭೂತವಾದಿ ಮನಸ್ಥಿತಿಗಳು ಬಸವಣ್ಣನ ವಿಚಾರಧಾರೆಗಳನ್ನು ತೊಡೆದುಹಾಕಿ, ಆತನ ಪ್ರತಿಮೆಯ ಮೂಲಕವೇ ಮೂಲಭೂತವಾದ ಧರ್ಮವೊಂದನ್ನು ಪ್ರತಿಷ್ಠಾಪಿಸಿಕೊಂಡು ರಾಜರೋಷವಾಗಿ ವೈಚಾರಿಕತೆಯ ಹರಿಕಾರನಾದ ಬಸವಣ್ಣನಿಗೆ ಅಪಮಾನವೆಸಗುತ್ತಿದ್ದಾರೆ. ಇಲ್ಲಿ ಜನಪದರು ಬಸವನಿಗೆ ಸುಳ್ಳಾಡಿದರೆ, ತಪ್ಪಾಗಿ ನಡೆದುಕೊಂಡರೆ ನಮಗೆ ಶಿಕ್ಷೆ ತಪ್ಪಿದ್ದಲ್ಲ ಎಂಬುದಾಗಿ ತಮ್ಮೆಲ್ಲ ಕಾರ್ಯಗಳನ್ನು ಆತ್ಮವಿಮರ್ಶೆ ಮಾಡಿಕೊಂಡರೆ, ಶಿಷ್ಟ ಸಮುದಾಯವು ತಾವು ಮಾಡುತ್ತಿರುವ ಕಾರ್ಯ ಬಸವನಿಗೆ ಸಂಪೂರ್ಣ ವಿರುದ್ಧವಾದುದೆಂದು ತಿಳಿದಿದ್ದರೂ ಇವರೆಲ್ಲಿಯೂ ಇಂತಹ ಆತ್ಮವಿಮರ್ಶೆಗೆ ಮುಂದಾಗಿರುವ ನಿದರ್ಶನಗಳು ಚರಿತ್ರೆಯಲ್ಲಾಗಲಿ, ಇವರ ಧರ್ಮಗ್ರಂಥ, ಪುರಾಣಗಳಲ್ಲಾಗಲಿ ಕಂಡುಬರುವುದಿಲ್ಲ. ಇದು ಜನಪದರು ಕಂಡುಕೊಂಡಿರುವ ಬಸವದರ್ಶನ, ಹಾಗೆಯೇ ಅವರ ಜೀವನ ದರ್ಶನವಾಗಿದೆ.

ಜನಪದರು ಅಕ್ಷರ ವಂಚಿರಾದರೂ ಲೋಕಜ್ಞಾನವನ್ನು ದಾರ್ಶನಿಕ ನೆಲೆಯಲ್ಲಿ ಅರಿತುಕೊಂಡವರು. ಇಲ್ಲಿನ ಹಾಡಿನಲ್ಲಿ ಕಂಡುಬರುವಂತೆ ಬಸವಣ್ಣನು ಬಿಜ್ಜಳನ ಆಸ್ಥಾನದಲ್ಲಿ ಆರ್ಥಿಕ ಮಂತ್ರಿಯಾಗಿದ್ದ ವಾಸ್ತವವನ್ನು ಅರಿತುಕೊಂಡಿದ್ದಾರೆ. ಆದರೆ ಈ ಸತ್ಯ ಜನಪದರಿಗೆ ತಿಳಿದಿದ್ದಾದರೂ ಹೇಗೆ ಎಂಬ ಅನುಮಾನ ಕಾಡುತ್ತದೆ. ಅಷ್ಟೇ ಅಲ್ಲದೆ ಇವರು ಬಸವಣ್ಣನನ್ನು ಕೇವಲ ಮಂತ್ರಿಯಾಗಿ ನೋಡುವುದಿಲ್ಲ. ಬಸವಣ್ಣನನ್ನು ಅಧಿಕಾರದ ನೆಲೆಯಲ್ಲಿ ನೋಡದೆ ಸಮಾನತೆಯನ್ನು ಸಾರಿದ ಕ್ರಾಂತಿ ಪುರುಷನಾಗಿ ನೋಡುತ್ತಾರೆ. ಹೀಗಾಗಿಯೇ ಇಲ್ಲಿ ಬಸವಣ್ಣನನ್ನು ಕುರಿತು ವಣ ್ಸುವಾಗ ‘ಗುರುವಿನ ಮನೆಯಾಗೆ ಅರುವಿನ ಲಯದಾಗೆ, ಅರುವಿ ಮಂಟಪದ ಮನೆಯಾಗೆ ಕರುಣ ಕನೆಂದು ಕರೆವರು’ ಎಂಬುದಾಗಿ ಆತನ ಬದುಕಿನ ಚಿತ್ರಣವನ್ನು ಕಟ್ಟಿಕೊಡುತ್ತಾರೆ. ಈ ಮಂತ್ರಿಯಾದ ಬಸವಣ್ಣನನ್ನು ತಮ್ಮ ಬದುಕಿಗೆ ಹತ್ತಿರವಾದ ನೆಲೆಯಲ್ಲಿ ಜನಪದರು ಸೃಷ್ಟಿಸಿಕೊಂಡಿದ್ದಾರೆ. ಗುರುವಿನ ಮನೆ ಮತ್ತು ಅರುವಿನ ಲಯ ಎಂಬ ಜನಪದರ ಪರಿಕಲ್ಪನೆಯು ಅನುಭವ ಮಂಟಪದ ಕುರಿತಾಗಿದೆ. ಜನಪದರಿಗೆ ಅನುಭವ ಮಂಟಪವು ಗುರುವಿನ ಮನೆಯಷ್ಟೆ ಅಲ್ಲದೆ ಅರಿವಿನ ತಾಣವು ಹೌದು. ಈ ಸೃಷ್ಟಿಯು ನಾವು ಲಿಖಿತ ಚಾರಿತ್ರಿಕ ದಾಖಲೆಗಳಾದ ವಚನಗಳು ಹಾಗೂ ಶಾಸನಗಳಲ್ಲಿ ಬಸವಣ್ಣನನ್ನು ನೋಡಿರುವುದಕ್ಕಿಂತ ಭಿನ್ನವಾದ ಬಸವ ದರ್ಶನವು ಜನಪದರಲ್ಲಿ ಕಂಡುಬರುತ್ತದೆ.

ಚಿನ್ನದ ಸಿಂಬೆಯ ಸುತ್ತಿ ರನ್ನದ ಕೊಡವ ತಗುದೆ
ಜಲದಿ ಲಗ್ಣಿಯ ಮಗುವಳೆ ಸೋಬಾನೆ ||
ಜಲದಿ ಲಗ್ಣಿಯ ಮಗುವ ಶರಣ ಯ ಕಂಡೆ
ಶಿವಶರಣರು ಜಪವ ಮರೆತಾರೆ ಸೋಬಾನೆ ||
ಶಿವಶರಣರು ಜಪವಿನ್ನು ಮರೆತು ಕೇಳ್ಯಾರೆ
ಯಾವ ಜಂಗಮರ ಮಗಳಮ್ಮ ಸೋಬಾನೆ ||
ಜಂಗಮರ ಸೊಸಿಯಯ್ಯ ಲಿಂಗ ಉಳ್ಳರು ಮಗಳು
ಬಿಂಗಿಬ್ರಹ್ಮನ ಕಿರಿ ತಂಗಿ ಸೋಬಾನೆ ||
ಬಿಂಗಿನೇ ಬ್ರಹ್ಮರ ಕಿರಿ ತಂಗಿ ಗುರುಗಳೇ
ನೀವ್ ಬನ್ನಿರಿ ನಮ್ಮ ಅರಮನೀಗೆ ಸೋಬಾನೆ ||
ಲಿಂಗೇನ ಉಳ್ಳರೇ ನಿಜವುಳ್ಳ ಭಕ್ತರೇ
ಸಂಗಮನಯ್ಯ ಬಸವಣ್ಣ ಸೋಬಾನೆ ||
ಸಂಗುಮನಯ್ಯ ಬಸವಣ್ಣ ಮೂವರೇ
ಬಂದಾರು ಗಿರಿರಾಜರ ಅರಮನೆಗೆ ಸೋಬಾನೆ ||
ಎಂದು ಬರದ ಬಸವಣ್ಣ ಈಗ್ಯಾಕೆ ಬಂದ್ಯಪ್ಪ
ಕುಂದಾರಗೊಳ್ಳ ಮಣ ಗೊಳ್ಳ ಸೋಬಾನೆ ||
ಕುಂದ್ರಾಕೆ ಬಂದಿಲ್ಲ ನಿದ್ರಾಕೆ ಬಂದಿಲ್ಲ
ಸಣ್ಣಳು ಗಿರಿಜಮ್ಮನ ಕೇಳಾ ಬಂದೆ ಸೋಬಾನೆ ||
ತುಪ್ಪನ್ನ ಉಣ್ಣವಳೆ ಪಟ್ಟೆಸೀರೆ ಉಡುವೋಳೆ
ಪಟ್ಟೆ ಮಂಚುದುಲೆ ಮಲಗೋಳೆ ಸೋಬಾನೆ ||
ಪಟ್ಟೇನೆ ಮಂಚುದುಲೇ ಮಲಗುವಳೆ ಗಿರಿಜಮ್ಮ
ಚಿಕ್ಕೊಳು ಗಿರಿಜಮುನ ಕೊಡುಲಾರೆ ಸೋಬಾನೆ ||
ಹಾಲನ್ನ ಉಣ್ಣವಳೇ ಸಾಗಿಸೀರುಡುವೋಳೆ
ಸಾಮ ಮಂಚುದುಲೆ ಮಲಗೋಳೆ ಸೋಬಾನೆ ||
ಸಾಮೇನೆ ಮಂಚುದುಲೆ ಮಲಗೋಳೆ ಗಿರಿಜಮ್ಮ
ಸಣ್ಣಳು ಗಿರಿಜಮುನ ಕೊಡುಲಾರೆ ಸೋಬಾನೆ ||
ಹಟ್ಯಾಗೆ ಗಿರಿಜಮ್ಮ ಕುಟ್ಟುತೇನ್ ಪಾಡ್ಯಾಳೆ
ಅಪ್ಪೋಜಿ ನನ್ನ ಕೊಡುತಾರೆ ಸೋಬಾನೆ ||
ಅಪ್ಪೋಜಿ ನನ್ನ ಕೊಡುತಾರೆ ಕೈಲಾಸದ
ಎಪ್ಪತ್ತೊಂದ್ ಜಡಿಯ ತ್ರಬಸಿಗೆ ಸೋಬಾನೆ ||
ಒಣ್ಯಾಗೆ ಗಿರಿಜಮ್ಮ ಹಾಡುತೇನ್ ಪಾಡ್ಯಾಳೆ
ಅಣ್ಣೋಜಿ ನನ್ನ ಕೊಡುತಾರೆ ಸೋಬಾನೆ ||
ಅಣ್ಣೋಜಿ ನನ್ನ ಕೊಡುತಾರೆ ಕೈಲಾಸದ
ಹನ್ನೊಂದೇ ಜಡೆಯ ತ್ರಬಸಿಗೆ ಸೋಬಾನೆ ||
ಊರಾಗೆ ಮನೆಯಿಲ್ಲ ಅಡುವ್ಯಾಗೆ ಹೊಲವಿಲ್ಲ
ಎತ್ತ ಕಟ್ಟುವರ ಅರಮನೆ ಸೋಬಾನೆ ||
ಎತ್ತೇನೆ ಕಟ್ಟುವ್ರ ಅರಮನೆ ಗಿರಿಜಮ್ಮ
ಅವ್ರನ ನೀನು ಭ್ರಮಿಸಿದ ಸೋಬಾನೆ ||
ಹೋಳಿಗೆ ಕರ್ಜಿಕಾಯಿ ಜೋಳಿ ತುಂಬೈದಾವೆ
ಹೋಳಿಗೆ ಮೂರುಲೋಕ ಸಲುವೈದಾವೆ ಸೋಬಾನೆ ||
ಹೋಳಿಗೆ ಮೂರುಲೋಕ ಸಲುವ್ಯಾವೆ ಕೈಲಾಸದ
ಮುಕ್ಕಣ್ಣ ನೀನು ಜರುದಿಯೋ ಸೋಬಾನೆ ||
ಚಕ್ಕುಲಿ ಕರ್ಜಿಕಾಯಿ ಕಕ್ಕುಸುತುಂಬೈದಾವೆ
ಕಕ್ಕುಸು ಮೂರುಲೋಕ ಸಲಿವ್ಯಾವೆ ಸೋಬಾನೆ ||
ಕಕ್ಕಸ ಮೂರುಲೋಕ ಸಲುವ್ಯಾವೆ ಕೈಲಾಸದ
ಮಾದೇವ್ರು ನೀನು ಜರುದಿಯೋ ಸೋಬಾನೆ ||
ಚಿನ್ನದ ಸರ ಹರಿದಿರಿ ಕೆನ್ನೆಮೇಲ್ ಹೊಡದೀರಿ
ಬಿಟ್ಟು ಬನ್ನಿ ಗಿರಿಜೆ ಗಿರಿದೂರ ಸೋಬಾನೆ ||
ಮುತ್ತಿನ ಸರ ಹರಿದಿರಿ ನೆತ್ತಿಮ್ಯಾಲ್ ಹೊಡದೀರಿ
ಬಿಟ್ಟು ಬನ್ನಿ ಗಿರಿಜೆ ಗಿರಿದೂರ ಸೋಬಾನೆ ||

ಈ ಹಿಂದೆ ತಿಳಿಸಿದಂತೆ ಜಾನಪದರು ಶಿವ ಮತ್ತು ಬಸವಣ್ಣನನ್ನು ಬೇರೆ ಬೇರೆಯಾಗಿ ನೋಡುವುದಿಲ್ಲ. ಇವರಿಬ್ಬರನ್ನು ಒಂದೆಯಾಗಿ ಸ್ವೀಕರಿಸಿದ್ದಾರೆ. ಶಿವ, ಬಸವಣ್ಣ ಹಾಗೂ ಗಿರಿಜೆಯ ಪ್ರಸ್ತಾಪವಿರುವ ಈ ಹಾಡಿನಲ್ಲಿ ಶಿವಶರಣನಾದ ಬಸವಣ್ಣನನ್ನು ಶಿವ ಸ್ವರೂಪಿಯಾಗಿಸಿರುವುದನ್ನು ಕಾಣಬಹುದಾಗಿದೆ. ಮಾನವನ ಸಹಜ ಬದುಕಿನ ನೆಲೆಯಲ್ಲಿ ಚಿತ್ರಿತವಾಗಿರುವ ಬಸವನನ್ನು ಜಾನಪದ ಪರಂಪರೆಯಲ್ಲಿ ಗುರುತಿಸಬಹುದಾಗಿದೆ. ಶಿವ ಮತ್ತು ದಕ್ಷಬ್ರಹ್ಮರ ಕಥೆಯನ್ನು ಹೋಲುವ ಈ ಜಾನಪದ ಹಾಡಿನಲ್ಲಿ ಬಸವನನ್ನು ಸಮೀಕರಿಸಿಕೊಂಡು ಬಂದಿದ್ದಾರೆ. ಇಲ್ಲಿ ಶಿವ ಪಾರ್ವತಿಯರ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಚಿತ್ರಣಗಳನ್ನು ಅನಾವರಣಗೊಳಿಸುವ ಸಂದರ್ಭದಲ್ಲಿ ಬಸವಣ್ಣನ್ನು ಸಮೀಕರಿಸಿಕೊಂಡಿರುವ ಬಗೆಯು ವಿಶೇಷವಾಗಿ ಕಂಡುಬರುತ್ತದೆ. ಇದು ಜಾನಪದ ಬದುಕಿನ ದಾರ್ಶನಿಕ ಆಯಾಮವಾಗಿ ಕಂಡುಬರುತ್ತದೆ.
ಜಾನಪದ ಬದುಕಿನಲ್ಲಿ ದರ್ಶನಗೊಳ್ಳುವ ಬಸವಣ್ಣ ಯಾವುದೇ ಜಾತಿ, ಮತ, ಪಂಥಕ್ಕೆ ಸೀಮಿತವಾಗುವುದಿಲ್ಲ. ಇಲ್ಲಿ ಇವನೊಬ್ಬ ವಿಶ್ವಮಾನವನಾಗಿ ಮುಖಾಮುಖಿಯಾಗುತ್ತಾನೆ. ನಾವು ಹೀಗಾಗಲೇ ಓದಿ ತಿಳಿದಿರುವ ಬಸವಣ್ಣನಿಗಿಂತ ಭಿನ್ನವಾದ ಬಸವಣ್ಣ ನಮ್ಮ ಮೌಖಿಕ ಪರಂಪರೆಯಲ್ಲಿ ಕಂಡುಬರುತ್ತಾನೆ. ನಮ್ಮ ಲಿಖಿತ ಪಠ್ಯ, ಶಾಸನ ಹಾಗೂ ಚರಿತ್ರೆಯ ಗ್ರಂಥಗಳು ಬಸವಣ್ಣನನ್ನು ಒಬ್ಬ ಮಂತ್ರಿಯಾಗಿ, ಯುದ್ದ, ಹೋರಾಟದ ಭಾಗವಾಗಿ ಮಾತ್ರ ಪರಿಚಯಿಸುತ್ತವೆ. ಆದರೆ ಅದರಾಚೆಗಿನ ಮಾನವ ಸಹಜವಾದ ಬಸವಣ್ಣನನ್ನು ನಾವು ಈ ಪ್ರಕಾರಗಳಲ್ಲಿ ನೋಡಲು ಸಾಧ್ಯವೇ ಇಲ್ಲ. ಆದರೆ ಮೌಖಿಕ ಪ್ರಕಾರದಲ್ಲಿ ಬಸವಣ್ಣ ರಾಜಪ್ರಭುತ್ವದಿಂದ ಹೊರಬಂದು ಮಾನವ ಸಹಜ ನೆಲೆಯಲ್ಲಿ ಕಂಡುಬರುತ್ತಾನೆ. ಜನಪದ ಪರಂಪರೆಯಲ್ಲಿ ಕಂಡುಬರುವ ಈ ಮಾನವ ಸಹಜ ಬಸವ ದರ್ಶನಕ್ಕೆ ಕಾರಣವೂ ಇದೆ. ಜನಪದ ಬದುಕು ಪ್ರಕೃತಿ ಸಹಜವಾಗಿರುವಂತದ್ದು. ಇಲ್ಲಿ ಯಾರು ರಾಜನಾದರೇನು ಸಾಮಾನ್ಯ ಜನತೆಗೆ ಇದರಿಂದ ಯಾವುದೇ ಪ್ರಯೋಜನವಾಗಿರುವುದು ಕಂಡುಬರುವುದಿಲ್ಲ. ಗ್ರಾಮೀಣ ಭಾಗದಲ್ಲಿ ಒಂದು ಗಾದೆ ಮಾತಿದೆ; ‘ಯಾರು ಮಂತ್ರಿಯಾದರೇನು ರಾಗಿ ಬೀಸುವುದು ತಪ್ಪುವುದಿಲ್ಲ’, ಹಾಗೆಯೇ ‘ರಾಮರಾಜ್ಯದಲ್ಲೂ ರಾಗಿ ಬೀಸುವುದು ತಪ್ಪಿದ್ದಲ್ಲ’ ಎಂಬ ಗಾದೆಮಾತುಗಳು ಸಾಮಾನ್ಯ ಜನತೆಯ ಬದುಕಿನ ಸ್ಥಿತಿಯನ್ನು ಪ್ರತಿನಿಧಿಸುತ್ತದೆ. ಅದರಂತೆ ಜಾನಪದರಿಗೆ ರಾಜಪ್ರಭುತ್ವ ಮುಖ್ಯವಾಗುವುದಿಲ್ಲ. ಸಾಮಾನ್ಯ ಜನತೆಯ ಪರವಾಗಿ ಹೋರಾಡಿದ ಸಾಂಸ್ಕøತಿಕ ನಾಯಕ ಮುಖ್ಯವಾಗುತ್ತಾನೆ. ಈ ಕಾರಣದಿಂದಾಗಿಯೇ ನಮ್ಮ ಜನಪದರು ಮಲೆಮಾದೇಶ್ವರ, ಮಂಟೇಸ್ವಾಮಿ, ಜುಂಜಪ್ಪ, ಗಾದ್ರಿಪಾಲನಾಯಕ, ಕುಮಾರ ರಾಮರಂತಹ ಸಾಂಸ್ಕøತಿಕ ನಾಯಕರನ್ನು ಸ್ಮರಿಸುತ್ತ ಬಂದಿದ್ದಾರೆಯೇ ಹೊರತು ರಾಜ್ಯಭಾರ ಮಾಡಿದ ಬಿಜ್ಜಳ, ಕೃಷ್ಣದೇವರಾಯರಂತಹ ರಾಜರನ್ನು ಮುಖ್ಯವೆಂದು ಪರಿಗಣ ಸಿರುವುದು ಕಂಡುಬರುವುದಿಲ್ಲ. ಈ ಕಾರಣದಿಂದಾಗಿಯೇ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣನಿಗಿಂತ ಮುಖ್ಯವಾಗಿ ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ಮಾನವ ಸಹಜ ವ್ಯಕ್ತಿಯಾದ ಬಸವಣ್ಣನನ್ನು ಆರಾಧಿಸುತ್ತ ಬಂದಿದ್ದಾರೆ.
ಶಿಷ್ಟ ಪರಂಪರೆಯು ಬಸವಣ್ಣನನ್ನು ರಾಜಪ್ರಭುತ್ವದ ಒಂದು ಭಾಗವಾಗಿಯೇ ಚಿತ್ರಿಸಿಕೊಂಡು ಬಂದಿದೆ. ಇವರಿಗೆ ಮಾನವ ಸಹಜವಾದ ಬಸವ ಮುಖ್ಯವಾಗುವುದಿಲ್ಲ.

ಅಷ್ಟೇ ಅಲ್ಲದೇ ಈ ಶಿಷ್ಟ ಪ್ರಕಾರವು ಬಸವನನ್ನು ಜಾತಿ, ಮತ, ಪಂಥಗಳಾಚೆ ಹೋಗಲು ಬಿಡುವುದಿಲ್ಲ. ಜಾತಿ, ಮತ, ಪಂಥಗಳನ್ನು ಮೀರಿ ಸಮಾಜದ ಸುಧಾರಣೆಗಾಗಿ ಶ್ರಮಿಸಿದ ಬಸವನನ್ನು ಬಲವಂತವಾಗಿ ಸ್ಥಾಪಿತ ವ್ಯವಸ್ಥೆಯ ಅಡಿಯಲ್ಲಿ ಬಂಧಿಸುವ ತಂತ್ರಗಾರಿಕೆ ಶಿಷ್ಟ ಸಾಹಿತ್ಯದ ಒಂದು ಭಾಗವಾಗಿ ಕಂಡುಬರುತ್ತದೆ. ಆದರೆ ಬಸವಣ್ಣನ ಮೂಲ ಆಶಯಗಳು ಮಾತ್ರ ಜಾನಪದ ಬದುಕಿನೊಳಗೆ ಯಥಾ ಪ್ರಕಾರವಾಗಿ ಮುಂದುವರೆದಿವೆ. ಬಸವ ಇನ್ನು ಜೀವಂತವಾಗಿರುವುದಾದರೆ ಅದು ಜಾನಪದರ ಬದುಕಿನಲ್ಲಿ ಮಾತ್ರ ಎಂಬುದನ್ನು ಈ ಮೇಲೆ ಉಲ್ಲೇಖಿಸಿರುವ ಸೋಬಾನೆ ಹಾಡುಗಳಲ್ಲಿ ಗುರುತಿಸಬಹುದಾಗಿದೆ.

( ಲೇಖಕರು: ಕೆ.ಎ.ಓಬಳೆಶ್, ಸಂಶೋಧನ ವಿದ್ಯಾರ್ಥಿ, ಕನ್ನಡ ಸಾಹಿತ್ಯ ಅಧ್ಯಯನ ವಿಭಾಗ ಕನ್ನಡ ವಿಶ್ವವಿದ್ಯಾಲಯ, ಹಂಪಿ)

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 days ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ6 days ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

ದಿನದ ಸುದ್ದಿ6 days ago

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು...

ದಿನದ ಸುದ್ದಿ6 days ago

ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ...

ದಿನದ ಸುದ್ದಿ2 weeks ago

ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ....

ದಿನದ ಸುದ್ದಿ2 weeks ago

ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ

ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು...

ದಿನದ ಸುದ್ದಿ2 weeks ago

ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ...

ದಿನದ ಸುದ್ದಿ3 weeks ago

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ‍್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ...

ದಿನದ ಸುದ್ದಿ3 weeks ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ...

ದಿನದ ಸುದ್ದಿ3 weeks ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ...

Trending