Connect with us

ನೆಲದನಿ

ಕಂದಗಲ್ಲು ಓಬಕ್ಕನ ಸೋಬಾನೆ ಪದಗಳಲ್ಲಿ ಬಸವದರ್ಶನ

Published

on

ಭಾರತದ ಚರಿತ್ರೆಯನ್ನು ತಿಳಿಯುವುದಕ್ಕೆ ಶಿಷ್ಟ ಸಾಹಿತ್ಯದಷ್ಟೆ ಮೌಖಿಕ ಸಾಹಿತ್ಯವೂ ಮಹತ್ವದ ದಾಖಲೆಯನ್ನು ಒದಗಿಸುತ್ತದೆ. ಈ ಮೌಖಿಕ ಚರಿತ್ರೆಯು ನೆಲಮೂಲ ಬದುಕಿನ ಪ್ರತಿದನಿಯಾಗಿದೆ. ಇಂತಹ ಮೌಖಿಕ ಚರಿತ್ರೆಯು ನೆಲದನಿಯಾಗಿ ತನ್ನ ಸಂವೇದನೆಗಳನ್ನು ಅನಾವರಣಗೊಳಿಸುತ್ತ ಬಂದಿದೆ. ಆದರೆ ನಾವು ನಮ್ಮ ಚರಿತ್ರೆಯನ್ನು ಅಧ್ಯಯನ ಮಾಡುವ ಸಂದರ್ಭದಲ್ಲಿ ನಮ್ಮ ಮನೆಯಲ್ಲಿಯೇ ಇರುವ ಚರಿತ್ರೆಯನ್ನು ಅರಿಯದೆ ಯಾರೋ ತಮ್ಮಿಚ್ಚೆಯಂತೆ ಬರೆದು ಸಿದ್ಧಪಡಿಸಿದ ದಾಖಲೆಯೆ ನಿಜವಾದ ಚರಿತ್ರೆಯೆಂದು ಭಾವಿಸಿ, ನಮ್ಮ ನಡುವೆ ಇರಬಹುದಾದ ವಾಸ್ತವ ಚರಿತ್ರೆಯನ್ನು ಲೆಕ್ಕಿಸದೆ ತಿರಸ್ಕಾರಕ್ಕೆ ಗುರಿಪಡಿಸಿದ್ದೇವೆ.

‘ಹಿತ್ತಲಗಿಡ ಮದ್ದಲ್ಲ’ ಎಂಬ ಮನಸ್ಥಿತಿಯು ಒಂದು ಕಾಲದಲ್ಲಿ ಮನೆ ಮಾಡಿಕೊಂಡಿತ್ತು. ಇದಕ್ಕೆ ಕಾರಣವೆಂದರೆ, ಈ ಪ್ರಕಾರದ ಸಾಹಿತ್ಯಕ್ಕೆ ಯಾವುದೇ ಮನ್ನಣೆ ಇಲ್ಲ ಎಂಬುದು ಬಹುತೇಕರ ನಂಬಿಕೆಯಾಗಿತ್ತು. ಆದರೆ ಇಂದು ಪಾಶ್ಚಿಮಾತ್ಯ ವಿಚಾರಧಾರೆಗಳ ಪ್ರಭಾವ ಹಾಗೂ ಕೆಲವು ವಿಶ್ವವಿದ್ಯಾಲಯಗಳು ಕೈಗೊಂಡಿರುವ ಅಲಕ್ಷಿತ ಸಮುದಾಯ ಕೇಂದ್ರಿತ (ಸಬಾಲ್ಟ್ರನ್) ಅಧ್ಯಯನದ ಫಲವಾಗಿ ಇಂದು ಗ್ರಾಮೀಣ ಬದುಕಿನಲ್ಲಿರುವ ಮೌಖಿಕ ಸಾಹಿತ್ಯದ ಬಗ್ಗೆ ಹೆಚ್ಚು ಒಲವುಗಳು ಬೆಳೆಯಲಾರಂಭಿಸಿವೆ. ಇದರಿಂದಾಗಿ ಮೌಖಿಕ ಚರಿತ್ರೆಯನ್ನು ಪ್ರಮುಖ ನೆಲೆಗೆ ತರುವ ಪ್ರಯತ್ನಗಳು ನಡೆಯುತ್ತಿವೆ.

ಗ್ರಾಮೀಣ ಜನತೆಯು ತಮ್ಮದೆ ಆದ ಬದುಕನ್ನು ಕಟ್ಟಿಕೊಂಡು, ತಮ್ಮ ಬದುಕಿನ ಬವಣೆಗಳನ್ನು ಮೌಖಿಕ ಸಾಹಿತ್ಯದಲ್ಲಿ ಮುಂದುವರೆಸಿಕೊಂಡು ಬಂದಿದ್ದಾರೆ. ಇಂತಹ ಗ್ರಾಮೀಣ ಬದುಕಿನಲ್ಲಿ ಅಂತರ್ಗತವಾಗಿರುವ ಚರಿತ್ರೆಯೊಂದನ್ನು ತಮ್ಮ ಸಾಹಿತ್ಯದಲ್ಲಿ ವ್ಯಕ್ತಪಡಿಸುವ ಜಾನಪದ ಹಾಡುಗಾರ್ತಿಯರಲ್ಲಿ ಕಂದಗಲ್ಲು ಓಬಕ್ಕನವರು ಒಬ್ಬರಾಗಿದ್ದಾರೆ.

ದಾವಣಗೆರೆ ತಾಲ್ಲೂಕು ಕಂದಗಲ್ಲು ಗ್ರಾಮದಲ್ಲಿ ನೆಲೆಸಿರುವ ಓಬಕ್ಕ ಸುಮಾರು ನೂರು ವರ್ಷಗಳ ಗಡಿಯಲ್ಲಿದ್ದಾರೆ. ತಮ್ಮ ಬದುಕಿನ ಒಂದು ಭಾಗವಾಗಿ ಸೋಬಾನೆ ಪದಗಳನ್ನು ಮೌಖಿಕವಾಗಿ ಹಾಡಿಕೊಂಡು ಬಂದ ಇವರು, ಜನಪದ ಸಾಹಿತ್ಯದ ಗಣ ಯನ್ನು ತಮಗರಿವಿಲ್ಲದಂತೆ ಕಾಪಾಡಿಕೊಂಡು ಬಂದಿದ್ದಾರೆ. ಪೀಳಿಗೆಯಿಂದ ಪೀಳಿಗೆಗೆ ಮೌಖಿಕವಾಗಿ ಮುಂದುವರೆದುಕೊಂಡು ಬಂದಿರುವ ಈ ಪ್ರಕಾರವು ಇಂದಿನ ಜಾಗತಿಕ ಭರಾಟೆಯಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಳುವ ಹಂತಕ್ಕೆ ಬಂದು ನಿಂತಿದೆ.

ಓಬಕ್ಕನಿಗೆ ತಾನು ಕಾಪಾಡಿಕೊಂಡು ಬಂದಿರುವ ಈ ಸಾಹಿತ್ಯದ ಸೊಬಗನ್ನು ತನ್ನ ಮುಂದಿನ ಪೀಳಿಗೆಗೂ ಕಲಿಸಬೇಕೆಂಬ ಹಂಬಲವಿದೆ. ಆದರೆ ಇಂದಿನ ಜಾಯಮಾನದ ಮನಸುಗಳಿಗೆ ಇದು ವಲ್ಲದ ತುತ್ತಾಗಿದ್ದು, ನಮ್ಮ ಹೆಣ್ಣು ಮಕ್ಕಳು ಸಿನಿಮಾ ಧಾರಾವಾಹಿಗೆ ಜೋತುಬಿದ್ದಿರುವುದರ ಫಲವಾಗಿ ಸತ್ವಯುತವಾದ ತಮ್ಮ ಮನೆಯ ಸಾಹಿತ್ಯದ ಸೊಬಗನ್ನು ಹೊರಹಾಕಿ, ಅನ್ಯ ಸಂಸ್ಕಕೃತಿಯ ಅನುಕರಣೆ ಮತ್ತು ಸ್ವೀಕಾರದ ಕಾಲಘಟ್ಟದಲ್ಲಿದ್ದೇವೆ. ಇದಕ್ಕೆ ಪ್ರಮುಖವಾದ ಕಾರಣ ನಮ್ಮ ಸಂಸ್ಕಕೃತಿ, ಆಚಾರ, ವಿಚಾರಗಳಲ್ಲಿರುವ ಮೌಲ್ಯಗಳ ತಿಳುವಳಿಕೆಯ ಕೊರತೆಯು ಒಂದಾಗಿದೆ.

ಓಬಕ್ಕನಲ್ಲಿ ನೆಲೆಯೂರಿರುವ ಮೌಖಿಕ ಸಾಹಿತ್ಯದ ಸಾಮಥ್ರ್ಯವನ್ನು ಕುರಿತು ವಿಚಾರಿಸಿದಾಗ ನನಗೆ ದನಿಗೆ ಜೊತೆಗೂಡಿಸುವವರು ಸಿಕ್ಕರೆ ರಾತ್ರಿಯಿಡಿ ನಿರಂತರವಾಗಿ ತಾನು ಕಲಿತಿರುವ ಪದಗಳನ್ನು ಹಾಡುವುದಾಗಿ ಧೈರ್ಯದಿಂದ ಸವಾಲು ಹಾಕುತ್ತಿದ್ದರು. ಓಬಕ್ಕ ನೂರು ವರ್ಷದ ಆಜುಭಾಜಿನಲ್ಲಿದ್ದರೂ ತುಂಬು ಕ್ರಿಯಾಶೀಲತೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸುವುದರ ಜೊತೆಗೆ, ಇಂದಿನ ಮಹಿಳೆಯರು ತಮ್ಮ ಮನೆಯಲ್ಲಿ ಮಾಡುವಂತಹ ಸಣ್ಣಪುಟ್ಟ ಕಸೂತಿಯಂತಹ ಕೆಲಸಗಳನ್ನು ಅನುಕರಣೆಯಿಂದ ಕಲಿತು ವಿವಿಧ ಬಗೆಯ ಕಸೂತಿಯ ವಸ್ತುಗಳನ್ನು ತಯಾರಿಸುವ ಸಾಮಥ್ರ್ಯವನ್ನು ಹೊಂದಿದ್ದಾರೆ.

ಸುಮಾರು ಮೂವತ್ತನೇ ವಯಸ್ಸಿನಲ್ಲಿ ತನ್ನ ಗಂಡನನ್ನು ಕಳೆದುಕೊಂಡ ಓಬಕ್ಕ ಬದುಕನ್ನು ಧೈರ್ಯವಾಗಿ ಎದುರಿಸುವ ಎದೆಗಾರಿಕೆಯನ್ನು ಬೆಳೆಸಿಕೊಂಡು ಬಂದಿದ್ದಾರೆ. ಓಬಕ್ಕನಿಗೆ ತಾನು ಕಲಿತಿರುವ ಪದಗಳನ್ನು ಇಂದು ಪ್ರದರ್ಶಿಸುವುದಕ್ಕೆ ಹಲವಾರು ಅಡೆತಡೆಗಳಿವೆ. ಅವುಗಳಲ್ಲಿ ಒಂದು, ತಾನು ವಂಶಪಾರಂಪರ್ಯವಾಗಿ ಉಳಿಸಿಕೊಂಡು ಬಂದಿರುವ ಪದಗಳನ್ನು ಹಾಡುವುದಕ್ಕೆ ದನಿಗೂಡಿಸುವಂತಹ ಸಮಾನ ಮನಸ್ಕರ ಕೊರತೆಯು ಒಂದಾಗಿದೆ. ಎರಡು, ನೂರರ ಗಡಿಯಲ್ಲಿರುವ ಇವರು ದನಿ ಎತ್ತಿ ಹಾಡುವಷ್ಟು ಸಾಮಥ್ರ್ಯವನ್ನು ಕಳೆದುಕೊಂಡಿದ್ದು, ಹೆಚ್ಚು ಸಮಯ ಹಾಡುವುದಕ್ಕೆ ಇವರ ದನಿಯಲ್ಲಿ ಸಾಮಥ್ರ್ಯವಿಲ್ಲ. ಹೀಗಾಗಿ ಇವರ ದನಿಯಲ್ಲಿ ನಡುಕವಿದೆ.

ಇದರಿಂದ ಇಂದು ಈ ಪದಗಳನ್ನು ಹಾಡುವುದಕ್ಕೆ ಅಡಚಣೆ ಉಂಟಾಗುತ್ತದೆ. ಮೂರು, ಇವರಿಗೆ ಪ್ರೊತ್ಸಾಹ ನೀಡಿ ಇವರ ಪದಗಳ ಮಹತ್ವವನ್ನು ಗುರುತಿಸುವವರ ಕೊರತೆಯಿದೆ. ನಾಲ್ಕು, ಇವರಲ್ಲಿನ ಈ ಸಾಹಿತ್ಯವನ್ನು ಆಸಕ್ತಿಯಿಂದ ತಿಳಿಯಬೇಕೆಂಬ ಹಂಬಲವುಳ್ಳವರ ಎದುರು ಹಾಡುವುದಕ್ಕೆ ಇವರಿಗೆ ಮುಜುಗರವಿದೆ. ಇದಕ್ಕೆ ಕಾರಣ ಇಂದಿನ ಕಾಲದಲ್ಲಿ ನಾವು ಹಾಡಿಕೊಂಡು ಬಂದಿರುವ ಹಾಡು (ಪದ)ಗಳಿಗೆ ಬೆಲೆಯಿಲ್ಲ ಎಂಬ ಕೀಳರಿಮೆಯ ಭಾವವನ್ನು ತಮ್ಮಲ್ಲಿ ಬೆಳೆಸಿಕೊಂಡಿದ್ದಾರೆ. ಹಾಗಾಗಿ ಈ ಪದಗಳನ್ನು ಸಂಗ್ರಹಿಸುವುದು ಹಾಗೂ ಇವರಿಗೆ ಸಂಗ್ರಹದ ಅಗತ್ಯತೆಯ ಅರಿವು ಮೂಡಿಸುವುದು ಕೂಡ ತ್ರಾಸದಾಯಕವಾದ ಕೆಲಸವಾಗಿದೆ.

ಇದು ಇಂದು ಈ ಮೌಖಿಕ ಸಾಹಿತ್ಯವನ್ನು ಕಡೆಗಣಿಸಿ ಆಧುನಿಕ ಸಂಗೀತ ಪ್ರಕಾರಕ್ಕೆ ಹೆಚ್ಚು ಜೋತುಬಿದ್ದಿರುವ ಪರಿಣಾಮದಿಂದಾಗಿ ಇಂತಹ ಸಾಹಿತ್ಯ ಪ್ರಕಾರವು ಇಂದು ಅವನತಿಯ ಅಂಚಿನಲ್ಲಿದೆ. ಓಬಕ್ಕನಂತಹ ಎಷ್ಟೋ ಜನಪದರಲ್ಲಿ ಕರಗತವಾಗಿರುವ ಸಾಹಿತ್ಯದ ಸೊಬಗು ಅಳಿವಿನಂಚಿನಲ್ಲಿದೆ.

ನಾನು ನನ್ನ ಬಾಲ್ಯದ ದಿನಗಳಿಂದಲೂ ಓಬಕ್ಕನನ್ನು ಹತ್ತಿರದಿಂದ ನೋಡಿದವನು. ಆದರೆ ನನಗೆ ಓಬಕ್ಕನ ಸಾಹಿತ್ಯದ ಮಹತ್ವ ದರ್ಶನವಾಗಿದ್ದು ನಾನು ಸಂಶೋಧನೆಗೆ ತೊಡಗಿಕೊಂಡ ಬಹುದಿನಗಳ ನಂತರ. ನನಗೆ ಓಬಕ್ಕ ಸಂಬಂಧದಲ್ಲಿ ಅಜ್ಜಿಯಾಗಬೇಕು ಎಂದುಕೊಂಡಿದ್ದೆ. ಆದರೆ ಓಬಕ್ಕನ ಪ್ರಕಾರ ನಾನು ಓಬಕ್ಕನಿಗೆ ತಮ್ಮನಾಗಿದ್ದೆ.

ನೂರು ವರ್ಷದ ಗಡಿಯಲ್ಲಿರು ಓಬಕ್ಕನಿಗೂ ಮೂವತ್ತರ ಗಡಿಯಲ್ಲಿರುವ ನನಗೂ ಅಕ್ಕ-ತಮ್ಮನ ಸಂಬಂಧ ಹೇಗೆ ಸಾಧ್ಯ ಎಂಬುದು ನನಲ್ಲಿ ಗೊಂದಲವನ್ನು ಮೂಡಿಸಿತ್ತು. ಆದರೆ ಓಬಕ್ಕ ಕಟ್ಟಿಕೊಡುವ ವಂಶವೃಕ್ಷದ ಪ್ರಕಾರ ಆಕೆಗೆ ನಾನು ತಮ್ಮನೆ ಆಗಿದ್ದೆ. ಈ ಕಾರಣದಿಂದಾಗಿ ನೂರರ ಪ್ರಾಯದ ಓಬಜ್ಜಿಯನ್ನು ಇಲ್ಲಿ ಓಬಕ್ಕ ಎಂಬುದಾಗಿಯೇ ಸಂಬೋಧಿಸುತ್ತಿದ್ದೇನೆ. ಓಬಕ್ಕನಲ್ಲಿ ಕರಗತವಾಗಿರುವ ಪದಗಳನ್ನು ಸಂಗ್ರಹ ಮಾಡುವಾಗ ನಾನು ಸಂಶೋಧನೆ ಮಾಡುತ್ತಿದ್ದೇನೆ. ನೀನು ಕಲಿತಿರುವ ಪದಗಳನ್ನು ಹಾಡು ಎಂದರೆ ಓಬಕ್ಕ ಹೇಳುವಂತಿರಲಿಲ್ಲ. ಇದಕ್ಕೆ ಕಾರಣ ತನ್ನ ಕಾಲದ ಪದಗಳು (ಸಾಹಿತ್ಯ) ಮಹತ್ವ ಕಳೆದುಕೊಂಡಿದೆ ಎಂಬ ಆತಂಕದಿಂದಲೊ ಅಥವಾ ಬದಲಾದ ಕಾಲಕ್ಕೆ ತಕ್ಕಂತೆ ಹೊಂದಿಕೊಳ್ಳುವ ಮಾನವ ಸಹಜ ಗುಣದಿಂದಲೊ ಓಬಕ್ಕ ಆಧುನಿಕ ಬದುಕಿನಲ್ಲಿ ಬೆರೆತುಕೊಂಡಿರುವ ಸಿನಿಮಾ ಮತ್ತು ಧಾರವಾಹಿ ಪ್ರಪಂಚಕ್ಕೆ ತನ್ನನ್ನು ತೆರೆದುಕೊಂಡಿದ್ದಳು.

ಇಂತಹ ಸಂದರ್ಭದಲ್ಲಿ ಓಬಕ್ಕನನ್ನು ಆಕೆಯ ಸಾಹಿತ್ಯ ಜಗತ್ತಿಗೆ ಕೊಂಡೊಯ್ಯಲು ವಿವಿಧ ತೆರನಾದ ಕಸರತ್ತುಗಳನ್ನು ಪ್ರದರ್ಶಿಸಬೇಕಾಯಿತು. ಕೊನೆಗೆ ನಿನಗೆ ವಯಸ್ಸಾಗಿದೆ, ನಿನ್ನ ಕಾಲದಲ್ಲಿ ಹಾಡುತ್ತಿದ್ದ ಪದಗಳನ್ನೆಲ್ಲ ಮರೆತಿರುವೆ. ನಿನಗೆ ‘ಅರವುಮರುವು’ ಎಂದಾಗ ತನ್ನ ಸಾಮಥ್ರ್ಯವನ್ನು ಪ್ರದರ್ಶಿಸುವ ನೆಲೆಯಲ್ಲಿ ಒಂದೊಂದಾಗಿಯೇ ತನ್ನ ಮನದ ಮೂಲೆಯಲ್ಲಿ ಕೇಂದ್ರಿಕರಿಸಿಕೊಂಡಿದ್ದ ಪದಗಳನ್ನು ಹಾಡುವ ಪ್ರಯತ್ನ ಮಾಡಿದರು.

ಓಬಕ್ಕನ ದನಿಯ ಸಮಸ್ಯೆಯನ್ನರಿತ ನಾನು ಅವರ ಬಳಿ ಒಂದೊಂದೆ ಸಾಲುಗಳನ್ನು ಸ್ಪಷ್ಟವಾಗಿ ತಿಳಿದುಕೊಂಡು ಬರೆಯಲು ಪ್ರಾರಂಭಿಸಿದೆ. ಒಂದು ಪದವನ್ನು ಸಂಪೂರ್ಣವಾಗಿ ಸಂಗ್ರಹಿಸಿದ ತರುವಾಯ ಅದರ ರಾಗ ಮತ್ತು ಲಯವನ್ನು ತಿಳಿಯುವ ಕಾತುರದಿಂದ ನಿಧಾನವಾಗಿ ಅವರಿಂದಲೇ ಪದಗಳನ್ನು ಹಾಡಿಸಿ, ಅವರ ಹಾಡಿನ ರಾಗವನ್ನು ಆಧುನಿಕ ವಿದ್ಯುನ್ಮಾನಗಳಲ್ಲಿ ಸಂಗ್ರಹಿಸಲು ಪ್ರಾರಂಭಿಸಿದೆ.

ಹೀಗೆ ಸಂಗ್ರಹಿಸಿದ ಪದಗಳಲ್ಲಿ ಬಸವಣ್ಣನ ಬದುಕಿಗೆ ಸಂಬಂಧಿಸಿದ ಕೆಲವು ಪದಗಳನ್ನು ಓಬಕ್ಕ ಹಾಡಿದ್ದರು. ನಾವು ಈಗಾಗಲೇ ಚರಿತ್ರೆಯ ಪಠ್ಯಗಳಲ್ಲಿ ಓದಿರುವುದಕ್ಕಿಂತ ಭಿನ್ನವಾದ ದರ್ಶನವೊಂದು ಓಬಕ್ಕನ ಪದಗಳಲ್ಲಿ ಕಂಡುಬಂದಿತು. ಆದ್ದರಿಂದ ಈ ನೆಲೆಯ ಜಾಡುಹಿಡಿದು ಜನಪದರ ಬದುಕಲ್ಲಿ ಕಂಡುಬರುವ ಸಮಾಜ ಸುಧಾರಕನಾದ ಬಸವಣ್ಣನ ಬದುಕನ್ನು ಅನಾವರಣಗೊಳಿಸುವ ನೆಲೆಯಲ್ಲಿ ‘ಓಬಕ್ಕನ ಬಸವದರ್ಶನ’ ಎಂಬ ಈ ಲೇಖನವನ್ನು ರಚಿಸುವ ಪ್ರಯತ್ನವನ್ನು ಇಲ್ಲಿ ಕೈಗೊಳ್ಳಲಾಗಿದೆ.

–2–

ಪ್ರಸ್ತುತ ಲೇಖನದಲ್ಲಿ ಓಬಕ್ಕ ಹಾಡಿದ ಸೋಬಾನೆ ಪದಗಳ (ಹಾಡು) ಮೂಲಕ ಜನಪದರು ಅಥವಾ ಸಾಮಾನ್ಯ ಜನತೆಯು ಸಮಾಜ ಸುಧಾರಕನಾದ ಬಸವಣ್ಣನನ್ನು ಕಾಣುವ ಬಗೆಯನ್ನು ಇಲ್ಲಿ ಚರ್ಚೆಗೆ ಒಳಪಡಿಸಲಾಗುವುದು. ನಮ್ಮ ಜನಪದ ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ತಳವರ್ಗದ ಜನತೆಯ ಪರವಾಗಿ ಹೋರಾಡಿದ ಬಸವಣ್ಣನನ್ನು ಶಿವನ ಪ್ರತಿರೂಪವಾಗಿ ಸ್ವೀಕರಿಸಲಾಗಿದೆ.

ಇಲ್ಲಿ ಶಿವ ಬೇರೆಯಲ್ಲ, ಬಸವಣ್ಣ ಬೇರೆಯಲ್ಲ. ಇದಕ್ಕೆ ಕಾರಣ ಈ ನಾಡಿನ ಮೂಲ ಸಂಸ್ಕೃತಿಯು ಶೈವ ನೆಲೆಯದಾಗಿರುವುದು. ಹೀಗಾಗಿ ನಮ್ಮ ಜನಪದರು ಶಿವನ ಆರಾಧಕರಾಗಿ ಕಂಡುಬರುತ್ತಾರೆ. ತಮ್ಮ ಸಮುದಾಯದ ಜನತೆಯ ಪರವಾಗಿ ಹೋರಾಟ ನಡೆಸಿದ ಕ್ರಾಂತಿಕಾರರನ್ನು ಶಿವನ ಪ್ರತಿರೂಪವಾಗಿ ಕಾಣುತ್ತಾರೆ. ಆದ್ದರಿಂದ ಇಲ್ಲಿ ಶಿವ ಮತ್ತು ಬಸವಣ್ಣ ಒಂದೆಯಾಗಿ ಕಂಡುಬರುತ್ತಾರೆ. ತಳಸಮುದಾಯದ ಪ್ರಗತಿಗಾಗಿ ಬಸವಣ್ಣ ತನ್ನ ಹೋರಾಟವನ್ನು ನಡೆಸಿದ್ದು ಕ್ರಿ.ಶ 12ನೇ ಶತಮಾನದಲ್ಲಿ. ಆದರೆ ಬಸವಣ್ಣನ ಮೂಲ ಆಶಯಗಳನ್ನು ಸ್ಥಾಪಿತ ಹಿತಾಸಕ್ತಿಗಳು ಅವರ ಇಚ್ಚಾನುಸಾರವಾಗಿ ಬಳಸಿಕೊಂಡು, ಆತನ ವಿಚಾರಗಳ ಅಡಿಯಲ್ಲಿ ಮೂಲಭೂತವಾದ ಧರ್ಮವೊಂದನ್ನು ಸ್ಥಾಪಿಸಿಕೊಂಡು ಬಂದಿವೆ.

ಈ ಸ್ಥಾಪಿತ ಮೌಲ್ಯಗಳಿಂದಾಗಿ ಬಸವಣ್ಣನ ಉದಾರವಾದಿ ನಿಲುವುಗಳನ್ನು ಇಂದು ಹುಡುಕುವುದು ಕೂಡ ಸಾಧ್ಯವಾಗದಷ್ಟು ದೂರ ಸರಿದಿವೆ. ಆದರೆ ತನ್ನ ಹಿತಕ್ಕಾಗಿ ಹೊರಾಡಿದ ಗುರುವನ್ನು ನಿಜದ ನೆಲೆಯಲ್ಲಿ ಆರಾಧಿಸಿಕೊಂಡು ಬಂದಿರುವುದನ್ನು ಜನಪದ ಪರಂಪರೆಯಲ್ಲಿ ಇಂದಿಗೂ ಗುರುತಿಸಬಹುದಾಗಿದೆ.
ಜನಪದರು ಬಸವಣ್ಣನನ್ನು ತಮ್ಮ ವಿಮೋಚನೆಗಾಗಿ ಹೋರಾಡಿದ ದೇವರೆಂದು ಆರಾಧಿಸುವುದು ಮಾತ್ರವಲ್ಲ, ಬಸವಣ್ಣನ ಸಂಕಷ್ಟಗಳನ್ನು ತಮ್ಮ ನೋವುಗಳೆಂಬಂತೆ ಆತನ ನೋವುಗಳಿಗೆ ಮಿಡಿಯುತ್ತಾ ಬಂದಿದ್ದಾರೆ. ಈ ಮನೋಭಾವವು ಜನಪದರಲ್ಲಿನ ಹೃದಯ ವೈಶಾಲ್ಯವನ್ನು ಕಟ್ಟಿಕೊಡುತ್ತದೆ. ಇವರ ಈ ತುಡಿತ ಯಾವುದೇ ಸ್ವಾರ್ಥದಿಂದ ಕೂಡಿದ್ದಲ್ಲ, ಬದಲಾಗಿ ಇಲ್ಲಿ ಸಾಮಾಜಿಕ ಕಳಕಳಿ ಕಂಡುಬರುತ್ತದೆ.

ಶಿಷ್ಟ ಪರಂಪರೆಯು ಬಸವಣ್ಣನ ಮಹಿಮೆಯನ್ನು ತಮ್ಮ ಇಚ್ಚಾನುಸಾರ ವರ್ಣನಾತ್ಮಕ ನೆಲೆಯಲ್ಲಿ ಚಿತ್ರಿಸಿಕೊಂಡು, ಹಲವಾರು ಕಡೆಗಳಲ್ಲಿ ಪ್ರಕ್ಷಿಪ್ತಗಳನ್ನು ಉಂಟುಮಾಡಿದೆ. ಇದಕ್ಕೆ ಕಾರಣ ಸ್ಥಾಪಿತ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ಕಾಪಾಡುವ ಮೂಲಕ ಅಸಮಾನತೆಯ ಸಾಮಾಜಿಕ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಬಂದಿರುವುದಾಗಿದೆ.

ಇಂತಹ ಪ್ರಕ್ಷಿಪ್ತ ಮಾದರಿಗಳನ್ನು ಹಲವಾರು ಶಿಷ್ಟ ಸಾಹಿತ್ಯ ಕೃತಿಗಳಲ್ಲಿ ಗುರುತಿಸಬಹುದಾಗಿದೆ. ಆದರೆ ಇದಕ್ಕೆ ಪರ್ಯಾಯ ನೆಲೆಯಲ್ಲಿ ಸಾಮಾನ್ಯ ಜನರ ಬದುಕಿಗಾಗಿ ಹೋರಾಡಿದ ಬಸವಣ್ಣನ ನೋವಿಗೆ ಜನಪದರು ತುಡಿಯುತ್ತ ಬಂದಿರುವ ಕೆಲವು ಸೋಬಾನೆ ಪದಗಳು ಈ ಮುಂದಿನಂತಿವೆ.

ಯಾರೇನೆಂದರು ನಿನಗೆ ಸದ್ಗುರು ದೇವ ||
ಬಾರ ದ್ರೋಹಿರಿ ಮನಗೆ
ಸದ್ಗರು ದೇವ | ನಿನಗ್ಯಾರೇನೆಂದರು ||
ಸಣ್ಣನಾಗಲಿ ಬಾಲ | ಲೋಲನಾಗಲಿ ಗುಣ
ಶೀಲನಾಗಲಿ ಮುಕ್ತಿ | ಕೀಲು ತೋರಿದೆ ಗುರುವೆ
ಸದ್ಗುರು ದೇವ | ನಿನಗ್ಯಾರೇನೆಂದರು ||
ಚಾರನೆಂಬುವರೇನು | ಸೂರನೆಂಬುವರೇನು
ಪರಮಾತ್ಮಕ ಸುವ್ವಿ
ಸದ್ಗುರು ದೇವ | ಯಾರೇನೆಂದರು ನಿನಗೆ ||
ಧರೆಯೊಳು ಕೂಡಲಿ | ಪುರದೊಳು ನೆಲೆಸಿರುವ
ವರಶ್ರೀಸಂಗಮ ಬಸವೇಸ್ಪುರಗೆ | ಯಾರೇನೆಂದರು
ಸದ್ಗುರು ದೇವ | ಯಾರೇನೆಂದರು ನಿನಗೆ ||

ಈ ಜನಪದ ಸಾಹಿತ್ಯವು ಬಸವಣ್ಣನ ಅಂತಿಮ ದಿನದ ಬದುಕಿನ ಸಂಕಷ್ಟಗಳನ್ನು ಅನಾವರಣಗೊಳಿಸುತ್ತದೆ. ಇಲ್ಲಿ ಬಸವಣ್ಣ ಮೌನ ತಾಳಿರುವುದಕ್ಕೆ ಹಲವಾರು ಕಾರಣಗಳಿವೆ. ತನ್ನ ಹೋರಾಟದ ಭಕ್ತಿಯ ಮಾರ್ಗವನ್ನು ಕುರಿತು ಬಸವಣ್ಣ ಹೇಳುವ ‘ಭಕ್ತಿಯೆಂಬುದು ಮಾಡಬಾರದು ಕಾಣ| ಗರಗಸವಿದ್ದಂತೆ’ ಎಂಬ ಮಾತು ಆತನ ಬದುಕಿನ ಸಂಕಷ್ಟಗಳನ್ನು ಕಟ್ಟಿಕೊಡುತ್ತದೆ.

ಇಲ್ಲಿ ತನ್ನ ಹೋರಾಟದ ಹಾದಿಯಲ್ಲಿ ಈತನು ಹಲವಾರು ಬಗೆಯ ನೋವನ್ನು ಅನುಭವಿಸಿರುತ್ತಾನೆ. ಒಂದೆಡೆ ಬ್ರಾಹ್ಮಣ್ಯವನ್ನು ಧಿಕ್ಕರಿಸುವ ಮೂಲಕ ಶೂದ್ರ ಸಮುದಾಯದ ಸಮಾನತೆಗಾಗಿ ಹೋರಾಟ ನಡೆಸುತ್ತಾನೆ. ಮತ್ತೊಂದೆಡೆ ಸಮಾಜದ ಪ್ರಬಲ ವರ್ಗವಾದ ಪುರೋಹಿತಶಾಹಿಯನ್ನು ಎದುರು ಹಾಕಿಕೊಳ್ಳುತ್ತಾನೆ.

ಈ ಸಂದರ್ಭದಲ್ಲಿ ರಾಜಾಶ್ರಯದಲ್ಲಿದ್ದ ಬಸವಣ್ಣನಿಗೆ ತಳಸಮುದಾಯದ ಪರವಾದ ಹೋರಾಟ ಮಾಡುವುದಕ್ಕೆ ಸ್ವತಂತ್ರ ಅಸ್ತಿತ್ವ ಇರಲಿಲ್ಲ. ಇಲ್ಲಿ ರಾಜನ ಆಜ್ಞೆಯನ್ನು ತಿರಸ್ಕರಿಸಿದರೆ ತನ್ನ ಪದವಿಯನ್ನು ಕಳೆದುಕೊಳ್ಳುವುದು ಮಾತ್ರವಲ್ಲ, ಕಠಿಣ ಶಿಕ್ಷೆಗೂ ಗುರಿಯಾಗಬೇಕಾದ ಸಂಕಷ್ಟದ ದಿನಗಳು ಬಸವಣ್ಣನ ಮುಂದಿದ್ದವು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ತಾನು ಕಟ್ಟಿದ ಸಮಾನತೆಯ ಆಶಯಹೊತ್ತ ಅನುಭವ ಮಂಟಪವನ್ನು ಸಮಾನ ನೆಲೆಯಲ್ಲಿ ಮುನ್ನಡೆಸಬೇಕಾಗಿತ್ತು. ಇಂತಹ ಚಾರಿತ್ರಿಕ ಒತ್ತಡದ ಪರಿಸ್ಥಿತಿಯಲ್ಲಿನ ಬಸವಣ್ಣನ ಬದುಕನ್ನು ಕುರಿತು ಜನಪದರು ಆತನ ನೋವಿಗೆ ಮಿಡಿಯುತ್ತ ಬಂದಿದ್ದಾರೆ.

ಜಾನಪದವು ಶಿಷ್ಟ ಸಾಹಿತ್ಯ ಪರಂಪರೆಯಂತೆ ಬಸವಣ್ಣನ ಬದುಕನ್ನು ಹಾಗೂ ಆತನ ಹೋರಾಟದ ನೆಲೆಗಳನ್ನು ದೈವಾಂಶ ಸಂಭೂತ ನೆಲೆಯಲ್ಲಿ ವೈಭವಿಕರಿಸುವುದಿಲ್ಲ. ಜನಪದ ಪರಂಪರೆಯಲ್ಲಿ ಯಾವುದೇ ವೈಭವವಿಲ್ಲದೆ ಆತನ ವಾಸ್ತವ ಬದುಕನ್ನು ತಮ್ಮ ಮೌಖಿಕ ಸಾಹಿತ್ಯದಲ್ಲಿ ಅನಾವರಣಗೊಳಿಸುತ್ತಾರೆ. ಜನಪದರು ಬಸವಣ್ಣನನ್ನು ಶಿಷ್ಟ ಸಾಹಿತ್ಯದಿಂದ ರಚನೆಯಾದ ಚರಿತ್ರೆಯ ಮೂಲಕ ಅಧ್ಯಯನ ಮಾಡಿ ಕಂಡುಕೊಂಡವರಲ್ಲ. ಬದಲಾಗಿ ಕಾಲದಿಂದ ಕಾಲಕ್ಕೆ ಹರಿದುಬಂದ ಮೌಖಿಕ ಪರಂಪರೆಯಿಂದ ಆತನನ್ನು ಕಂಡುಕೊಂಡವರು.

ಹೀಗಾಗಿ ಇಲ್ಲಿ ಆತನ ನೋವು ನಲಿವುಗಳನ್ನು ಯಥಾ ಪ್ರಕಾರವಾಗಿ ಮುಂದುವರೆಸಿಕೊಂಡು ಬಂದಿದ್ದಾರೆ. ‘ಯಾರೇನೆಂದರು ನಿನಗೆ ಸದ್ಗುರು ದೇವ’ ಮತ್ತು ‘ಬಾರ ದ್ರೋಹಿರಿ ಮನಗೆ’ ಎಂಬ ನುಡಿಗಳು ಜನಪದರು ಕಂಡುಕೊಂಡಿರುವ ಬಸವ ದರ್ಶನವನ್ನು ಪ್ರತಿನಿಧಿಸುತ್ತವೆ. ಹೀಗಾಗಿ ಶಿಷ್ಟ ಸಾಹಿತ್ಯವು ಕಟ್ಟಿಕೊಡುವ ಚರಿತ್ರೆಗಿಂತ ಭಿನ್ನವಾದ ಚರಿತ್ರೆಯೊಂದು ನಮ್ಮ ಜಾನಪದರ ಬದುಕಿನೊಳಗೆ ಅಂತರ್ಗತವಾಗಿದೆ.

ಜನಪದರು ಬಸವಣ್ಣನ ನೋವು ನಲಿವುಗಳನ್ನು ಸಮಾನ ನೆಲೆಯಲ್ಲಿ ಚಿತ್ರಿಸಿಕೊಂಡು ಬಂದಿದ್ದಾರೆ. ಇಲ್ಲಿ ಆತನ ಕಲ್ಯಾಣ ಹಾಗೂ ಸರಸ ಸಲ್ಲಾಪಗಳು ಮಾನವ ಸಹಜ ನೆಲೆಯಲ್ಲಿ ವ್ಯಕ್ತವಾಗುತ್ತವೆ. ಬಸವಣ್ಣ ಮತ್ತು ಗಂಗಾಭಿಕೆಯ ಕಲ್ಯಾಣದ ಸಂದರ್ಭವನ್ನು ಹಾಗೂ ಅಲ್ಲಿನ ಸಲ್ಲಾಪದ ಕ್ಷಣಗಳನ್ನು ತಮ್ಮ ಬದುಕಿನೊಂದಿಗೆ ಸಮೀಕರಿಸಿಕೊಂಡು ಬಂದಿರುವುದನ್ನು ನಾವು ಜಾನಪದ ಪರಂಪರೆಯಲ್ಲಿ ಮಾತ್ರ ಗುರುತಿಸಬಹುದಾಗಿದೆ.

ಜನಪದರು ನಿರಂತರವಾಗಿ ಕಾಲದಿಂದ ಕಾಲಕ್ಕೆ ತಾವು ಆಚರಿಸಿಕೊಂಡು ಬಂದಿರುವ ಸಂಪ್ರದಾಯ, ಆಚರಣೆ, ಹಾಸ್ಯ, ವಿನೋದವನ್ನು ಬಸವಣ್ಣನ ಕಲ್ಯಾಣದೊಂದಿಗೆ ಸಮೀಕರಿಸಿಕೊಂಡು ಪದ ಕಟ್ಟಿ ಹಾಡುತ್ತಾ ಬಂದಿದ್ದಾರೆ. ಅದು ಓಬಕ್ಕನ ಸೋಬಾನೆ ಪದಗಳಲ್ಲಿ ಹೀಗೆ ವ್ಯಕ್ತವಾಗಿದೆ.

ಗುರುವಿನ ಮನೆಯಾಗೆ
ಅರುವಿನ ಲಯದಾಗೆ
ಅರುವಿನ ಮಂಟಪದ ಮನೆಯಾಗೆ
ಕರುಣ ಕನೆಂದುಕರೆವರು ಸೋಬಾನೆ||
ಬಸವಯ್ಯ ಶ್ರೀಗಂಗೆ
ಕುಶಲದಿಂ ಕರವಿಡಿದು | ಬಸವಣ್ಣ
ಬಂದು ಹಸೆಯಲ್ಲಿ ಕುಳಿತರು ಸೋಬಾನೆ||
ಪದ್ಮಲೋಚನೆ ಗಂಗೆ
ಎದ್ದು ಸೆರಗ ಬಿಗಿದು | ಮುದ್ದು ಬಸವಯ್ಯಗೆ
ಅರಿಶಿಣವ ಧರಿಸ್ಯಾಳೆ ಸೋಬಾನೆ ||
ಗಂಧ ಹಾಕುಸ್ತಿ ಹಿಡುಲಾಗ ಸೋಬಾನೆ
ಗಂಧ ಮೇಲಕ್ಕೆ ಎಳವುತ ಸೋಬಾನೆ
ಅಂದು ಆರುತಿಯಾ ಬೆಳಗುತ ಸೋಬಾನೆ
ಗಂಧ ಮೇಲಕ್ಕೆ ಎಳವುತ ಶ್ರೀಗಂಗೆ
ಬಂದು ಹಸೆಯಲ್ಲಿ ಕುಳಿತಳು ಸೋಬಾನೆ ||
ಬಸವಯ್ಯ ನೀನೊಮ್ಮೆ
ಎಣ್ಣೆ ಅರಿಶಿಣವ ಧರಿಸಪ್ಪ ಸೋಬಾನೆ
ಬಸವಯ್ಯ ಗಂಧ ಹಾಕುಸ್ತಿ ಹಿಡುಲಾಗ
ಅಂದು ಆರುತಿಯಾ ಬೆಳಗುತ
ಬಂದು ಹಸೆಯಲ್ಲಿ ಕುಳಿತರು ಸೋಬಾನೆ ||
ಬಂದು ಹಸೆಯಲ್ಲಿ ಕುಳಿತರು ಬಸವಣ್ಣ
ಸಸಿಮುಖಿಯರೆಲ್ಲ ನಗುತಾರೆ ಸೋಬಾನೆ ||
ಶರ್ತೆಶ ಕೋಟಿಗೆ ವರ್ಕಾಳ ಸಲಹುತ
ನಿತ್ಯಗೆ ಪರಮ ವಿರಕ್ತನಿಗೆ | ಭೂಗಳಿಯ ಕರ್ತನಿಗೆ
ಜೀವ ಕಮ್ಯಾರ್ತನಿಗೆ ಸೋಬಾನೆ
ಇವ ಸದ್ಗುರು ಬಸವದೇವನಿಗೆ ಸೋಬಾನೆ ||
ಅಂತರಂಗನ ಪೇಟೆ ಸಂತೆಗೊಗನ ತಂಗಿ
ಸಿಂತಿಸುತ ಕೊಂಡೆ ರತುನಾವ ಸೋಬಾನೆ ||
ಸಿಂತುಸುತ ಕೊಂಡೆ ರತುನಾದ ಬೆಳಕಿಲಿ
ಕಾಂತೆ ಕೇಳಮ್ಮ ಕೌತುಕವ ಸೋಬಾನೆ ||
ರತುನಾದ ಬೆಳಕಲಿ ಕಾಂತೆ ಕೇಳಮ್ಮ
ಕೌತುಕವ ಶ್ರೀಗುರು ಬಸವಂಗೆ | ಶಿವನ ಕುಮಾರಂಗೆ
ನಾಗಭೂಷಣ ನಮಿತನಿಗೆ ಸೋಬಾನೆ ||
ಸದ್ಗುರು ಬಸವಯ್ಯ ದೇವನಿಗೆ
ಸತ್ಯ ಸದ್ಗುರುವಂಗೆ | ನಿತ್ಯಸುಳ್ಳಾಡಿ ದಿನಗಳಿದೆ
ಮತ್ತುಟ್ಟೊ ಬಾದೆ ಬಿಡದಮ್ಮ ಸೋಬಾನೆ ||

ಪ್ರಸ್ತುತ ದಿನಗಳಲ್ಲಿ ಸ್ಥಾಪಿತ ನೆಲೆಗೆ ತಳ್ಳಿರುವ ಬಸವಣ್ಣನನ್ನು ಒಂದು ಜಾತಿಯ ನಾಯಕನೆಂದು ಬಿಂಬಿಸುವ ಮೂಲಕ ಉಳಿದಂತ ಸಮುದಾಯಗಳು ‘ಇವ ನಮ್ಮವನಲ್ಲ’ ಎನ್ನುವಂತಹ ಸನ್ನಿವೇಶ ನಿರ್ಮಾಣವಾಗಿದೆ. ಇದಕ್ಕೆ ಬಸವಣ್ಣನ ಸುತ್ತ ಸುತ್ತುವರೆದಿರುವ ಮೂಲಭೂತವಾದ ಧೋರಣೆಯು ಪ್ರಮುಖ ಕಾರಣವಾಗಿದೆ. ಈ ಮೂಲಭೂತವಾದಿ ನೆಲೆಗಳು ಜೀವ ತಳೆಯುವುದು ಶಿಷ್ಟ ಸಮುದಾಯದಲ್ಲಿ ಮತ್ತು ಆಧುನಿಕ ಸಂದರ್ಭದ ಶಿಕ್ಷಿತ ಸಮುದಾಯದಲ್ಲಿ. ಆದರೆ ಈ ಅಸಮಾನತೆಯ ಧೋರಣೆಗಳು ಜನಪದರಲ್ಲಿ ವ್ಯಕ್ತವಾಗಿರುವುದು ಕಂಡುಬರುವುದಿಲ್ಲ. ಇದು ಜನಪದರಲ್ಲಿರುವ ವಿಶ್ವಮಾನವ ಪ್ರಜ್ಞೆಯನ್ನು ಅನಾವರಣಗೊಳಿಸುತ್ತದೆ. ಸಮಾಜದ ಒಳಿತಿಗಾಗಿ ನಿಸ್ವಾರ್ಥದಿಂದ ಹೋರಾಡಿದವರು ಯಾರೇ ಆಗಿರಲಿ, ಅವನು ಯಾವುದೇ ಜಾತಿ, ಸಮುದಾಯಕ್ಕೆ ಸೇರಿದ್ದರು ಸಹ ಅವನನ್ನು ತಮ್ಮ ನಾಯಕನೆಂದು, ದೈವವೆಂದು ಆರಾಧಿಸುತ್ತಾರೆ. ಈ ಕಾರಣದಿಂದ ಮೂಲತಃ ಬ್ರಾಹ್ಮಣನಾದ ಶಿವಶರಣ ಬಸವಣ್ಣನನ್ನು ಕೂಡ ಶಿವ ಸ್ವರೂಪಿಯಾಗಿ ಕಂಡುಕೊಡಿದ್ದಾರೆ. ಆತನ ನೋವು ನಲಿವುಗಳನ್ನು ತಮ್ಮ ನೋವು ನಲಿವುಗಳೊಂದಿಗೆ ಸಮೀಕರಿಸಿಕೊಂಡು ಪದಕಟ್ಟಿ ಹಾಡುತ್ತ ಬಂದಿದ್ದಾರೆ.
ಜಾನಪದರು ಸೃಷ್ಟಿಸಿಕೊಂಡು ಬಂದಿರುವ ಈ ಮೇಲಿನ ಹಾಡಿನಲ್ಲಿ ಬಸವಣ್ಣ ಎಲ್ಲಿಯೂ ರಾಜಪ್ರಭುತ್ವದ ಪ್ರತಿನಿಧಿಯಾಗಿ ಕಂಡುಬರುವುದಿಲ್ಲ.

ಜಾನಪದರ ಬದುಕಿನೊಳಗಿನ ಸಾಮಾನ್ಯ ವ್ಯಕ್ತಿಯಾಗಿ ಪ್ರತಿನಿಧಿಸುತ್ತಾನೆ. ಇಲ್ಲಿ ಬಸವಣ್ಣ ಮತ್ತು ಗಂಗಾಬಿಕೆಯರ ಕಲ್ಯಾಣವನ್ನು ಶಿವ ಮತ್ತು ಗಂಗೆಯರೊಂದಿಗೆ ಸಮೀಕರಿಸಿಕೊಂಡು ಬಂದಿದ್ದಾರೆ. ಇದು ಜನಪದ ಪರಂಪರೆಯಲ್ಲಿನ ವಿಶಿಷ್ಟ ದರ್ಶನವಾಗಿ ಕಂಡುಬರುತ್ತದೆ. ಶಿಷ್ಟ ಪರಂಪರೆಯು ಎಲ್ಲವನ್ನು ಹೊಡೆದು ನೋಡುವಂತಹ ಮೂಲಭೂತವಾದಿ ಗುಣಗಳನ್ನು ಸೃಷ್ಟಿಸುತ್ತ ಬಂದಿರುವ ಸಂದರ್ಭದಲ್ಲಿ, ಇದಕ್ಕೆ ಪರ್ಯಾಯವೆಂಬಂತೆ ಜನಪದ ಪರಂಪರೆಯು ಎಲ್ಲವನ್ನು ಸಮೀಕರಿಸಿಕೊಂಡು ಬಂದಿರುವುದನ್ನು ಈ ಪದಗಳಲ್ಲಿ ಗುರುತಿಸಬಹುದಾಗಿದೆ. ಇದು ಶಿಷ್ಟ ಪರಂಪರೆಗೆ ಜನಪದ ಪರಂಪರೆಯು ಒಡ್ಡುತ್ತ ಬಂದಿರುವ ಪ್ರತಿರೋಧದ ನೆಲೆಯೂ ಹೌದು. ಶಿಷ್ಟರು ಅಸಮಾನತೆಯ ವಿರುದ್ಧ ಹೋರಾಡಿದ ಬಸವಣ್ಣನ್ನು ಒಂದು ಜಾತಿ, ಸಮುದಾಯಕ್ಕೆ ಕೇಂದ್ರಿಕರಿಸುವ ಮೂಲಕ ಅನಾರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡುತ್ತ ಬಂದಿದ್ದಾರೆ. ಆದರೆ ಜನಪದರು ಸಮಾಜ ಸುಧಾರಕ ಬಸವಣ್ಣನನ್ನು ಶಿವನೊಂದಿಗೆ ಸಮೀಕರಿಸುವ ಮೂಲಕ ಗುಪ್ತಗಾಮಿನಿಯಂತೆ ಆರೋಗ್ಯಕರವಾದ ಸಮಾಜವನ್ನು ಕಟ್ಟುತ್ತ ಬಂದಿದ್ದಾರೆ. ಹೀಗಾಗಿಯೆ ಇಂದಿಗೂ ಬಸವಣ್ಣ ತಳಸಮುದಾಯದ ಜನತೆಯ ಅಂತರಾಳದಲ್ಲಿ ನೆಲೆಯೂರಿದ್ದಾನೆ.

ಇದೇ ಪದ (ಹಾಡು) ದಲ್ಲಿ ಕೊನೆಯದಾಗಿ ಕಂಡುಬರುವ ಸಾಲು ಜನಪದರ ಸ್ವಾಮಿ ನಿಷ್ಠೆಯನ್ನು ಎತ್ತಿಹಿಡಿಯುತ್ತದೆ. ‘ಸತ್ಯ ಸದ್ಗುರುವಂಗೆ ನಿತ್ಯಸುಳ್ಳಾಡಿ ದಿನಗಳಿದೆ ಮತ್ತುಟ್ಟೊ ಬಾದೆ ಬಿಡದಮ್ಮ ಸೋಬಾನೆ’ ಎಂಬುದು ಇವರ ಸ್ವಾಮಿನಿಷ್ಠೆಯ ಪ್ರತೀಕವಾಗಿದೆ. ಈ ನಿಷ್ಠೆಯಿಂದಾಗಿಯೇ ತಳಸಮುದಾಯವು ಮೂಲಭೂತವಾದಿಗಳು ತಮ್ಮ ಅನುಕೂಲಕ್ಕಾಗಿ ಸೃಷ್ಠಿಸಿರುವ ಕಪಟ ತಂತ್ರಗಳನ್ನು ತಮ್ಮ ಬದುಕಿನ ಭಾಗವೆಂಬಂತೆ ಅನಿವಾರ್ಯವಾಗಿ ಮುಂದುವರೆಸಿಕೊಂಡು ಬಂದಿದ್ದಾರೆ.

ಬಸವಣ್ಣನ ವಿಚಾರಗಳನ್ನು ಮೀರಿದರೆ, ಆತನ ತತ್ವ ಚಿಂತನೆಗಳಿಗೆ ವಿರುದ್ಧವಾಗಿ ನಡೆದುಕೊಂಡರೆ ಮುಂದಿನ ಜನ್ಮದಲ್ಲೂ ಇದೇ ನರಕವನ್ನು ಅನುಭವಿಸಬೇಕಾಗುತ್ತದೆ ಎಂಬುದು ಇವರ ನಂಬಿಕೆಯಾಗಿದೆ. ಹೀಗಾಗಿಯೇ ಬಸವಣ್ಣನ ಮೂಲ ತತ್ವ ಸಿದ್ಧಾಂತಗಳು ಇಂದಿಗೂ ಜೀವಂತಿಕೆಯನ್ನು ಪಡೆದುಕೊಂಡಿದ್ದು, ಇವನ್ನು ತಮ್ಮ ಬದುಕಿನ ಒಂದು ಭಾಗವೆಂಬಂತೆ ಮುಂದುವರೆಸಿಕೊಂಡು ಬಂದಿದ್ದಾರೆ.

ಆದರೆ ಮೂಲಭೂತವಾದಿ ಮನಸ್ಥಿತಿಗಳು ಬಸವಣ್ಣನ ವಿಚಾರಧಾರೆಗಳನ್ನು ತೊಡೆದುಹಾಕಿ, ಆತನ ಪ್ರತಿಮೆಯ ಮೂಲಕವೇ ಮೂಲಭೂತವಾದ ಧರ್ಮವೊಂದನ್ನು ಪ್ರತಿಷ್ಠಾಪಿಸಿಕೊಂಡು ರಾಜರೋಷವಾಗಿ ವೈಚಾರಿಕತೆಯ ಹರಿಕಾರನಾದ ಬಸವಣ್ಣನಿಗೆ ಅಪಮಾನವೆಸಗುತ್ತಿದ್ದಾರೆ. ಇಲ್ಲಿ ಜನಪದರು ಬಸವನಿಗೆ ಸುಳ್ಳಾಡಿದರೆ, ತಪ್ಪಾಗಿ ನಡೆದುಕೊಂಡರೆ ನಮಗೆ ಶಿಕ್ಷೆ ತಪ್ಪಿದ್ದಲ್ಲ ಎಂಬುದಾಗಿ ತಮ್ಮೆಲ್ಲ ಕಾರ್ಯಗಳನ್ನು ಆತ್ಮವಿಮರ್ಶೆ ಮಾಡಿಕೊಂಡರೆ, ಶಿಷ್ಟ ಸಮುದಾಯವು ತಾವು ಮಾಡುತ್ತಿರುವ ಕಾರ್ಯ ಬಸವನಿಗೆ ಸಂಪೂರ್ಣ ವಿರುದ್ಧವಾದುದೆಂದು ತಿಳಿದಿದ್ದರೂ ಇವರೆಲ್ಲಿಯೂ ಇಂತಹ ಆತ್ಮವಿಮರ್ಶೆಗೆ ಮುಂದಾಗಿರುವ ನಿದರ್ಶನಗಳು ಚರಿತ್ರೆಯಲ್ಲಾಗಲಿ, ಇವರ ಧರ್ಮಗ್ರಂಥ, ಪುರಾಣಗಳಲ್ಲಾಗಲಿ ಕಂಡುಬರುವುದಿಲ್ಲ. ಇದು ಜನಪದರು ಕಂಡುಕೊಂಡಿರುವ ಬಸವದರ್ಶನ, ಹಾಗೆಯೇ ಅವರ ಜೀವನ ದರ್ಶನವಾಗಿದೆ.

ಜನಪದರು ಅಕ್ಷರ ವಂಚಿರಾದರೂ ಲೋಕಜ್ಞಾನವನ್ನು ದಾರ್ಶನಿಕ ನೆಲೆಯಲ್ಲಿ ಅರಿತುಕೊಂಡವರು. ಇಲ್ಲಿನ ಹಾಡಿನಲ್ಲಿ ಕಂಡುಬರುವಂತೆ ಬಸವಣ್ಣನು ಬಿಜ್ಜಳನ ಆಸ್ಥಾನದಲ್ಲಿ ಆರ್ಥಿಕ ಮಂತ್ರಿಯಾಗಿದ್ದ ವಾಸ್ತವವನ್ನು ಅರಿತುಕೊಂಡಿದ್ದಾರೆ. ಆದರೆ ಈ ಸತ್ಯ ಜನಪದರಿಗೆ ತಿಳಿದಿದ್ದಾದರೂ ಹೇಗೆ ಎಂಬ ಅನುಮಾನ ಕಾಡುತ್ತದೆ. ಅಷ್ಟೇ ಅಲ್ಲದೆ ಇವರು ಬಸವಣ್ಣನನ್ನು ಕೇವಲ ಮಂತ್ರಿಯಾಗಿ ನೋಡುವುದಿಲ್ಲ. ಬಸವಣ್ಣನನ್ನು ಅಧಿಕಾರದ ನೆಲೆಯಲ್ಲಿ ನೋಡದೆ ಸಮಾನತೆಯನ್ನು ಸಾರಿದ ಕ್ರಾಂತಿ ಪುರುಷನಾಗಿ ನೋಡುತ್ತಾರೆ. ಹೀಗಾಗಿಯೇ ಇಲ್ಲಿ ಬಸವಣ್ಣನನ್ನು ಕುರಿತು ವಣ ್ಸುವಾಗ ‘ಗುರುವಿನ ಮನೆಯಾಗೆ ಅರುವಿನ ಲಯದಾಗೆ, ಅರುವಿ ಮಂಟಪದ ಮನೆಯಾಗೆ ಕರುಣ ಕನೆಂದು ಕರೆವರು’ ಎಂಬುದಾಗಿ ಆತನ ಬದುಕಿನ ಚಿತ್ರಣವನ್ನು ಕಟ್ಟಿಕೊಡುತ್ತಾರೆ. ಈ ಮಂತ್ರಿಯಾದ ಬಸವಣ್ಣನನ್ನು ತಮ್ಮ ಬದುಕಿಗೆ ಹತ್ತಿರವಾದ ನೆಲೆಯಲ್ಲಿ ಜನಪದರು ಸೃಷ್ಟಿಸಿಕೊಂಡಿದ್ದಾರೆ. ಗುರುವಿನ ಮನೆ ಮತ್ತು ಅರುವಿನ ಲಯ ಎಂಬ ಜನಪದರ ಪರಿಕಲ್ಪನೆಯು ಅನುಭವ ಮಂಟಪದ ಕುರಿತಾಗಿದೆ. ಜನಪದರಿಗೆ ಅನುಭವ ಮಂಟಪವು ಗುರುವಿನ ಮನೆಯಷ್ಟೆ ಅಲ್ಲದೆ ಅರಿವಿನ ತಾಣವು ಹೌದು. ಈ ಸೃಷ್ಟಿಯು ನಾವು ಲಿಖಿತ ಚಾರಿತ್ರಿಕ ದಾಖಲೆಗಳಾದ ವಚನಗಳು ಹಾಗೂ ಶಾಸನಗಳಲ್ಲಿ ಬಸವಣ್ಣನನ್ನು ನೋಡಿರುವುದಕ್ಕಿಂತ ಭಿನ್ನವಾದ ಬಸವ ದರ್ಶನವು ಜನಪದರಲ್ಲಿ ಕಂಡುಬರುತ್ತದೆ.

ಚಿನ್ನದ ಸಿಂಬೆಯ ಸುತ್ತಿ ರನ್ನದ ಕೊಡವ ತಗುದೆ
ಜಲದಿ ಲಗ್ಣಿಯ ಮಗುವಳೆ ಸೋಬಾನೆ ||
ಜಲದಿ ಲಗ್ಣಿಯ ಮಗುವ ಶರಣ ಯ ಕಂಡೆ
ಶಿವಶರಣರು ಜಪವ ಮರೆತಾರೆ ಸೋಬಾನೆ ||
ಶಿವಶರಣರು ಜಪವಿನ್ನು ಮರೆತು ಕೇಳ್ಯಾರೆ
ಯಾವ ಜಂಗಮರ ಮಗಳಮ್ಮ ಸೋಬಾನೆ ||
ಜಂಗಮರ ಸೊಸಿಯಯ್ಯ ಲಿಂಗ ಉಳ್ಳರು ಮಗಳು
ಬಿಂಗಿಬ್ರಹ್ಮನ ಕಿರಿ ತಂಗಿ ಸೋಬಾನೆ ||
ಬಿಂಗಿನೇ ಬ್ರಹ್ಮರ ಕಿರಿ ತಂಗಿ ಗುರುಗಳೇ
ನೀವ್ ಬನ್ನಿರಿ ನಮ್ಮ ಅರಮನೀಗೆ ಸೋಬಾನೆ ||
ಲಿಂಗೇನ ಉಳ್ಳರೇ ನಿಜವುಳ್ಳ ಭಕ್ತರೇ
ಸಂಗಮನಯ್ಯ ಬಸವಣ್ಣ ಸೋಬಾನೆ ||
ಸಂಗುಮನಯ್ಯ ಬಸವಣ್ಣ ಮೂವರೇ
ಬಂದಾರು ಗಿರಿರಾಜರ ಅರಮನೆಗೆ ಸೋಬಾನೆ ||
ಎಂದು ಬರದ ಬಸವಣ್ಣ ಈಗ್ಯಾಕೆ ಬಂದ್ಯಪ್ಪ
ಕುಂದಾರಗೊಳ್ಳ ಮಣ ಗೊಳ್ಳ ಸೋಬಾನೆ ||
ಕುಂದ್ರಾಕೆ ಬಂದಿಲ್ಲ ನಿದ್ರಾಕೆ ಬಂದಿಲ್ಲ
ಸಣ್ಣಳು ಗಿರಿಜಮ್ಮನ ಕೇಳಾ ಬಂದೆ ಸೋಬಾನೆ ||
ತುಪ್ಪನ್ನ ಉಣ್ಣವಳೆ ಪಟ್ಟೆಸೀರೆ ಉಡುವೋಳೆ
ಪಟ್ಟೆ ಮಂಚುದುಲೆ ಮಲಗೋಳೆ ಸೋಬಾನೆ ||
ಪಟ್ಟೇನೆ ಮಂಚುದುಲೇ ಮಲಗುವಳೆ ಗಿರಿಜಮ್ಮ
ಚಿಕ್ಕೊಳು ಗಿರಿಜಮುನ ಕೊಡುಲಾರೆ ಸೋಬಾನೆ ||
ಹಾಲನ್ನ ಉಣ್ಣವಳೇ ಸಾಗಿಸೀರುಡುವೋಳೆ
ಸಾಮ ಮಂಚುದುಲೆ ಮಲಗೋಳೆ ಸೋಬಾನೆ ||
ಸಾಮೇನೆ ಮಂಚುದುಲೆ ಮಲಗೋಳೆ ಗಿರಿಜಮ್ಮ
ಸಣ್ಣಳು ಗಿರಿಜಮುನ ಕೊಡುಲಾರೆ ಸೋಬಾನೆ ||
ಹಟ್ಯಾಗೆ ಗಿರಿಜಮ್ಮ ಕುಟ್ಟುತೇನ್ ಪಾಡ್ಯಾಳೆ
ಅಪ್ಪೋಜಿ ನನ್ನ ಕೊಡುತಾರೆ ಸೋಬಾನೆ ||
ಅಪ್ಪೋಜಿ ನನ್ನ ಕೊಡುತಾರೆ ಕೈಲಾಸದ
ಎಪ್ಪತ್ತೊಂದ್ ಜಡಿಯ ತ್ರಬಸಿಗೆ ಸೋಬಾನೆ ||
ಒಣ್ಯಾಗೆ ಗಿರಿಜಮ್ಮ ಹಾಡುತೇನ್ ಪಾಡ್ಯಾಳೆ
ಅಣ್ಣೋಜಿ ನನ್ನ ಕೊಡುತಾರೆ ಸೋಬಾನೆ ||
ಅಣ್ಣೋಜಿ ನನ್ನ ಕೊಡುತಾರೆ ಕೈಲಾಸದ
ಹನ್ನೊಂದೇ ಜಡೆಯ ತ್ರಬಸಿಗೆ ಸೋಬಾನೆ ||
ಊರಾಗೆ ಮನೆಯಿಲ್ಲ ಅಡುವ್ಯಾಗೆ ಹೊಲವಿಲ್ಲ
ಎತ್ತ ಕಟ್ಟುವರ ಅರಮನೆ ಸೋಬಾನೆ ||
ಎತ್ತೇನೆ ಕಟ್ಟುವ್ರ ಅರಮನೆ ಗಿರಿಜಮ್ಮ
ಅವ್ರನ ನೀನು ಭ್ರಮಿಸಿದ ಸೋಬಾನೆ ||
ಹೋಳಿಗೆ ಕರ್ಜಿಕಾಯಿ ಜೋಳಿ ತುಂಬೈದಾವೆ
ಹೋಳಿಗೆ ಮೂರುಲೋಕ ಸಲುವೈದಾವೆ ಸೋಬಾನೆ ||
ಹೋಳಿಗೆ ಮೂರುಲೋಕ ಸಲುವ್ಯಾವೆ ಕೈಲಾಸದ
ಮುಕ್ಕಣ್ಣ ನೀನು ಜರುದಿಯೋ ಸೋಬಾನೆ ||
ಚಕ್ಕುಲಿ ಕರ್ಜಿಕಾಯಿ ಕಕ್ಕುಸುತುಂಬೈದಾವೆ
ಕಕ್ಕುಸು ಮೂರುಲೋಕ ಸಲಿವ್ಯಾವೆ ಸೋಬಾನೆ ||
ಕಕ್ಕಸ ಮೂರುಲೋಕ ಸಲುವ್ಯಾವೆ ಕೈಲಾಸದ
ಮಾದೇವ್ರು ನೀನು ಜರುದಿಯೋ ಸೋಬಾನೆ ||
ಚಿನ್ನದ ಸರ ಹರಿದಿರಿ ಕೆನ್ನೆಮೇಲ್ ಹೊಡದೀರಿ
ಬಿಟ್ಟು ಬನ್ನಿ ಗಿರಿಜೆ ಗಿರಿದೂರ ಸೋಬಾನೆ ||
ಮುತ್ತಿನ ಸರ ಹರಿದಿರಿ ನೆತ್ತಿಮ್ಯಾಲ್ ಹೊಡದೀರಿ
ಬಿಟ್ಟು ಬನ್ನಿ ಗಿರಿಜೆ ಗಿರಿದೂರ ಸೋಬಾನೆ ||

ಈ ಹಿಂದೆ ತಿಳಿಸಿದಂತೆ ಜಾನಪದರು ಶಿವ ಮತ್ತು ಬಸವಣ್ಣನನ್ನು ಬೇರೆ ಬೇರೆಯಾಗಿ ನೋಡುವುದಿಲ್ಲ. ಇವರಿಬ್ಬರನ್ನು ಒಂದೆಯಾಗಿ ಸ್ವೀಕರಿಸಿದ್ದಾರೆ. ಶಿವ, ಬಸವಣ್ಣ ಹಾಗೂ ಗಿರಿಜೆಯ ಪ್ರಸ್ತಾಪವಿರುವ ಈ ಹಾಡಿನಲ್ಲಿ ಶಿವಶರಣನಾದ ಬಸವಣ್ಣನನ್ನು ಶಿವ ಸ್ವರೂಪಿಯಾಗಿಸಿರುವುದನ್ನು ಕಾಣಬಹುದಾಗಿದೆ. ಮಾನವನ ಸಹಜ ಬದುಕಿನ ನೆಲೆಯಲ್ಲಿ ಚಿತ್ರಿತವಾಗಿರುವ ಬಸವನನ್ನು ಜಾನಪದ ಪರಂಪರೆಯಲ್ಲಿ ಗುರುತಿಸಬಹುದಾಗಿದೆ. ಶಿವ ಮತ್ತು ದಕ್ಷಬ್ರಹ್ಮರ ಕಥೆಯನ್ನು ಹೋಲುವ ಈ ಜಾನಪದ ಹಾಡಿನಲ್ಲಿ ಬಸವನನ್ನು ಸಮೀಕರಿಸಿಕೊಂಡು ಬಂದಿದ್ದಾರೆ. ಇಲ್ಲಿ ಶಿವ ಪಾರ್ವತಿಯರ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಚಿತ್ರಣಗಳನ್ನು ಅನಾವರಣಗೊಳಿಸುವ ಸಂದರ್ಭದಲ್ಲಿ ಬಸವಣ್ಣನ್ನು ಸಮೀಕರಿಸಿಕೊಂಡಿರುವ ಬಗೆಯು ವಿಶೇಷವಾಗಿ ಕಂಡುಬರುತ್ತದೆ. ಇದು ಜಾನಪದ ಬದುಕಿನ ದಾರ್ಶನಿಕ ಆಯಾಮವಾಗಿ ಕಂಡುಬರುತ್ತದೆ.
ಜಾನಪದ ಬದುಕಿನಲ್ಲಿ ದರ್ಶನಗೊಳ್ಳುವ ಬಸವಣ್ಣ ಯಾವುದೇ ಜಾತಿ, ಮತ, ಪಂಥಕ್ಕೆ ಸೀಮಿತವಾಗುವುದಿಲ್ಲ. ಇಲ್ಲಿ ಇವನೊಬ್ಬ ವಿಶ್ವಮಾನವನಾಗಿ ಮುಖಾಮುಖಿಯಾಗುತ್ತಾನೆ. ನಾವು ಹೀಗಾಗಲೇ ಓದಿ ತಿಳಿದಿರುವ ಬಸವಣ್ಣನಿಗಿಂತ ಭಿನ್ನವಾದ ಬಸವಣ್ಣ ನಮ್ಮ ಮೌಖಿಕ ಪರಂಪರೆಯಲ್ಲಿ ಕಂಡುಬರುತ್ತಾನೆ. ನಮ್ಮ ಲಿಖಿತ ಪಠ್ಯ, ಶಾಸನ ಹಾಗೂ ಚರಿತ್ರೆಯ ಗ್ರಂಥಗಳು ಬಸವಣ್ಣನನ್ನು ಒಬ್ಬ ಮಂತ್ರಿಯಾಗಿ, ಯುದ್ದ, ಹೋರಾಟದ ಭಾಗವಾಗಿ ಮಾತ್ರ ಪರಿಚಯಿಸುತ್ತವೆ. ಆದರೆ ಅದರಾಚೆಗಿನ ಮಾನವ ಸಹಜವಾದ ಬಸವಣ್ಣನನ್ನು ನಾವು ಈ ಪ್ರಕಾರಗಳಲ್ಲಿ ನೋಡಲು ಸಾಧ್ಯವೇ ಇಲ್ಲ. ಆದರೆ ಮೌಖಿಕ ಪ್ರಕಾರದಲ್ಲಿ ಬಸವಣ್ಣ ರಾಜಪ್ರಭುತ್ವದಿಂದ ಹೊರಬಂದು ಮಾನವ ಸಹಜ ನೆಲೆಯಲ್ಲಿ ಕಂಡುಬರುತ್ತಾನೆ. ಜನಪದ ಪರಂಪರೆಯಲ್ಲಿ ಕಂಡುಬರುವ ಈ ಮಾನವ ಸಹಜ ಬಸವ ದರ್ಶನಕ್ಕೆ ಕಾರಣವೂ ಇದೆ. ಜನಪದ ಬದುಕು ಪ್ರಕೃತಿ ಸಹಜವಾಗಿರುವಂತದ್ದು. ಇಲ್ಲಿ ಯಾರು ರಾಜನಾದರೇನು ಸಾಮಾನ್ಯ ಜನತೆಗೆ ಇದರಿಂದ ಯಾವುದೇ ಪ್ರಯೋಜನವಾಗಿರುವುದು ಕಂಡುಬರುವುದಿಲ್ಲ. ಗ್ರಾಮೀಣ ಭಾಗದಲ್ಲಿ ಒಂದು ಗಾದೆ ಮಾತಿದೆ; ‘ಯಾರು ಮಂತ್ರಿಯಾದರೇನು ರಾಗಿ ಬೀಸುವುದು ತಪ್ಪುವುದಿಲ್ಲ’, ಹಾಗೆಯೇ ‘ರಾಮರಾಜ್ಯದಲ್ಲೂ ರಾಗಿ ಬೀಸುವುದು ತಪ್ಪಿದ್ದಲ್ಲ’ ಎಂಬ ಗಾದೆಮಾತುಗಳು ಸಾಮಾನ್ಯ ಜನತೆಯ ಬದುಕಿನ ಸ್ಥಿತಿಯನ್ನು ಪ್ರತಿನಿಧಿಸುತ್ತದೆ. ಅದರಂತೆ ಜಾನಪದರಿಗೆ ರಾಜಪ್ರಭುತ್ವ ಮುಖ್ಯವಾಗುವುದಿಲ್ಲ. ಸಾಮಾನ್ಯ ಜನತೆಯ ಪರವಾಗಿ ಹೋರಾಡಿದ ಸಾಂಸ್ಕøತಿಕ ನಾಯಕ ಮುಖ್ಯವಾಗುತ್ತಾನೆ. ಈ ಕಾರಣದಿಂದಾಗಿಯೇ ನಮ್ಮ ಜನಪದರು ಮಲೆಮಾದೇಶ್ವರ, ಮಂಟೇಸ್ವಾಮಿ, ಜುಂಜಪ್ಪ, ಗಾದ್ರಿಪಾಲನಾಯಕ, ಕುಮಾರ ರಾಮರಂತಹ ಸಾಂಸ್ಕøತಿಕ ನಾಯಕರನ್ನು ಸ್ಮರಿಸುತ್ತ ಬಂದಿದ್ದಾರೆಯೇ ಹೊರತು ರಾಜ್ಯಭಾರ ಮಾಡಿದ ಬಿಜ್ಜಳ, ಕೃಷ್ಣದೇವರಾಯರಂತಹ ರಾಜರನ್ನು ಮುಖ್ಯವೆಂದು ಪರಿಗಣ ಸಿರುವುದು ಕಂಡುಬರುವುದಿಲ್ಲ. ಈ ಕಾರಣದಿಂದಾಗಿಯೇ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣನಿಗಿಂತ ಮುಖ್ಯವಾಗಿ ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ಮಾನವ ಸಹಜ ವ್ಯಕ್ತಿಯಾದ ಬಸವಣ್ಣನನ್ನು ಆರಾಧಿಸುತ್ತ ಬಂದಿದ್ದಾರೆ.
ಶಿಷ್ಟ ಪರಂಪರೆಯು ಬಸವಣ್ಣನನ್ನು ರಾಜಪ್ರಭುತ್ವದ ಒಂದು ಭಾಗವಾಗಿಯೇ ಚಿತ್ರಿಸಿಕೊಂಡು ಬಂದಿದೆ. ಇವರಿಗೆ ಮಾನವ ಸಹಜವಾದ ಬಸವ ಮುಖ್ಯವಾಗುವುದಿಲ್ಲ.

ಅಷ್ಟೇ ಅಲ್ಲದೇ ಈ ಶಿಷ್ಟ ಪ್ರಕಾರವು ಬಸವನನ್ನು ಜಾತಿ, ಮತ, ಪಂಥಗಳಾಚೆ ಹೋಗಲು ಬಿಡುವುದಿಲ್ಲ. ಜಾತಿ, ಮತ, ಪಂಥಗಳನ್ನು ಮೀರಿ ಸಮಾಜದ ಸುಧಾರಣೆಗಾಗಿ ಶ್ರಮಿಸಿದ ಬಸವನನ್ನು ಬಲವಂತವಾಗಿ ಸ್ಥಾಪಿತ ವ್ಯವಸ್ಥೆಯ ಅಡಿಯಲ್ಲಿ ಬಂಧಿಸುವ ತಂತ್ರಗಾರಿಕೆ ಶಿಷ್ಟ ಸಾಹಿತ್ಯದ ಒಂದು ಭಾಗವಾಗಿ ಕಂಡುಬರುತ್ತದೆ. ಆದರೆ ಬಸವಣ್ಣನ ಮೂಲ ಆಶಯಗಳು ಮಾತ್ರ ಜಾನಪದ ಬದುಕಿನೊಳಗೆ ಯಥಾ ಪ್ರಕಾರವಾಗಿ ಮುಂದುವರೆದಿವೆ. ಬಸವ ಇನ್ನು ಜೀವಂತವಾಗಿರುವುದಾದರೆ ಅದು ಜಾನಪದರ ಬದುಕಿನಲ್ಲಿ ಮಾತ್ರ ಎಂಬುದನ್ನು ಈ ಮೇಲೆ ಉಲ್ಲೇಖಿಸಿರುವ ಸೋಬಾನೆ ಹಾಡುಗಳಲ್ಲಿ ಗುರುತಿಸಬಹುದಾಗಿದೆ.

( ಲೇಖಕರು: ಕೆ.ಎ.ಓಬಳೆಶ್, ಸಂಶೋಧನ ವಿದ್ಯಾರ್ಥಿ, ಕನ್ನಡ ಸಾಹಿತ್ಯ ಅಧ್ಯಯನ ವಿಭಾಗ ಕನ್ನಡ ವಿಶ್ವವಿದ್ಯಾಲಯ, ಹಂಪಿ)

ಅಂತರಂಗ

ಮಹಿಳಾ ದಿನಾಚರಣೆ | ಸಾಧನೆಯ ಸುಗಂಧ, ಪ್ರೇರಣೆಯ ಬೆಳಕು

Published

on

  • ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ

ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು

ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ ಪ್ರತಿರೂಪವಾಗಿರುತ್ತಾರೆ. ವಿಶ್ವ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ, ಇದು ಮಹಿಳೆಯರ ಹಕ್ಕುಗಳು, ಸಾಧನೆಗಳು ಮತ್ತು ಅವರ ಜಗತ್ತಿನ ಮೇಲೆ ಬೀರಿದ ಪ್ರಭಾವವನ್ನು ಗೌರವಿಸುವ ಒಂದು ಅದ್ಭುತ ಅವಕಾಶ.

ಮಹಿಳೆಯರ ಬದುಕು ಕೇವಲ ಕುಟುಂಬದ ಕೇಂದ್ರದಲ್ಲಿಯೇ ಸೀಮಿತವಾಗಿಲ್ಲ; ಅವರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲೂ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಅಮ್ಮನಾಗಿ, ಪತ್ನಿಯಾಗಿ, ಮಗುವಾಗಿ, ಸಂಸ್ಥಾಪಕಿಯಾಗಿ, ನಾಯಕಿಯಾಗಿ, ವೈಜ್ಞಾನಿಕರಾಗಿ, ಕ್ರೀಡಾಪಟುವಾಗಿ – ಎಲ್ಲಾ ಪಾತ್ರಗಳಲ್ಲೂ ಮಹಿಳೆಯರು ತಮ್ಮ ಅದ್ಭುತ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ.

ಈಗ ಮಹಿಳೆಯರು ತಮ್ಮ ಇಚ್ಛಾಶಕ್ತಿಯೊಂದಿಗೆ ಮತ್ತು ಶಿಕ್ಷಣದ ಹಾದಿಯ ಮೂಲಕ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಇಂದು ಕಲ್ಪನಾ ಚಾವ್ಲಾ, ಮೇರೀ ಕೋಮ್, ಸುಧಾ ಮುರ್ತಿ, ಕಿರಣ್ ಮಜುಂದಾರ್ ಶಾ, ಫಾಲ್ಗುಣಿ ನಾಯರ್ ಮುಂತಾದ ಅನೇಕ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡುತ್ತಿದ್ದಾರೆ.

ಮಹಿಳಾ ದಿನಾಚರಣೆ – ಇತಿಹಾಸ ಮತ್ತು ಹಿನ್ನೆಲೆ

ಮಹಿಳಾ ದಿನಾಚರಣೆ (International Women’s Day – IWD) ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಇದು ಮಹಿಳೆಯರ ಹಕ್ಕುಗಳು, ಸಶಕ್ತೀಕರಣ, ಸಾಧನೆಗಳು ಮತ್ತು ಲಿಂಗ ಸಮಾನತೆಯ ಪ್ರಗತಿ ಕುರಿತು ಜಾಗೃತಿಯನ್ನು ಮೂಡಿಸುವ ಮಹತ್ವದ ದಿನ.

ಮಹಿಳಾ ದಿನಾಚರಣೆಯ ಇತಿಹಾಸ

ಮಹಿಳಾ ದಿನಾಚರಣೆಯ ಮೂಲವು 1900ರ ದಶಕದ ಪ್ರಾರಂಭದಲ್ಲಿ ಕೈಗೆತ್ತಿಕೊಳ್ಳಲಾದ ಮಹಿಳಾ ಹಕ್ಕುಗಳ ಹೋರಾಟಕ್ಕೆ ಸರಿಹೊಂದಿದೆ. ಈ ದಿನವನ್ನು ಆಚರಿಸಲು ಪ್ರೇರಣೆ ನೀಡಿದ ಪ್ರಮುಖ ಘಟನೆಗಳು ಹೀಗಿವೆ:

1. 1908 – ಮಹಿಳಾ ಹಕ್ಕುಗಳ ಹೋರಾಟ:

ಅಮೇರಿಕಾದ ನ್ಯೂಯಾರ್ಕ್ ನಗರದಲ್ಲಿ ಸಾವಿರಾರು ಮಹಿಳಾ ಕಾರ್ಮಿಕರು ಕಡಿಮೆ ಕೆಲಸದ ಘಂಟೆಗಳು, ಉತ್ತಮ ಸಂಬಳ ಮತ್ತು ಮತದಾನದ ಹಕ್ಕುಕ್ಕಾಗಿ ಪ್ರತಿಭಟನೆ ನಡೆಸಿದರು.

2. 1909 – ಮೊದಲ ಮಹಿಳಾ ದಿನಾಚರಣೆ:

ಫೆಬ್ರವರಿ 28, 1909 ರಂದು ಅಮೆರಿಕಾದ ಸೋಶಲಿಸ್ಟ್ ಪಾರ್ಟಿ ದೇಶದಾದ್ಯಂತ ಮಹಿಳಾ ದಿನವನ್ನು ಆಚರಿಸಿತು.

3. 1910 – ಅಂತಾರಾಷ್ಟ್ರೀಯ ಹೋರಾಟ:

ಡೆನ್ಮಾರ್ಕ್‌ನ ಕೊಪನ್‌ಹೇಗನ್ ನಲ್ಲಿ ನಡೆದ ಸೋಶಲಿಸ್ಟ್ ವುಮೆನ್ಸ್ ಕಾನ್ಫರೆನ್ಸ್ ನಲ್ಲಿ ಜರ್ಮನಿಯ ಕ್ಲಾರಾ ಜೆಟ್ಕಿನ್ ಅವರು ಪ್ರಪಂಚದಾದ್ಯಂತ ಮಹಿಳಾ ದಿನ ಆಚರಿಸುವ ಸಲಹೆ ನೀಡಿದರು.

4. 1911 – ಪ್ರಥಮ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ:

ಮೊದಲ ಬಾರಿ ಆಸ್ಟ್ರಿಯಾ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಟ್ಜರ್ಲೆಂಡ್ ದೇಶಗಳಲ್ಲಿ ಮಹಿಳಾ ದಿನವನ್ನು ಮಾರ್ಚ್ 19ರಂದು ಆಚರಿಸಲಾಯಿತು.

5. 1913 – ಮಾರ್ಚ್ 8ಕ್ಕೆ ದಿನಾಂಕ ಬದಲಾವಣೆ:

1913ರಿಂದ ಮಾರ್ಚ್ 8ನೇ ತಾರೀಖನ್ನು ಅಧಿಕೃತವಾಗಿ ಮಹಿಳಾ ದಿನಾಚರಣೆಗೆ ಮೀಸಲಾಗಿಸಲಾಯಿತು.

6. 1975 – ವಿಶ್ವ ಮಹಿಳಾ ವರ್ಷ:

UNO1975ನೇ ವರ್ಷವನ್ನು “ಅಂತರಾಷ್ಟ್ರೀಯ ಮಹಿಳಾ ವರ್ಷ” ಎಂದು ಘೋಷಿಸಿ, ಮಹಿಳಾ ದಿನವನ್ನು ಅಧಿಕೃತವಾಗಿ ಅಂಗೀಕರಿಸಿತು

7. 2011 – 100ನೇ ವಾರ್ಷಿಕೋತ್ಸವ:

2011ರಲ್ಲಿ ಮಹಿಳಾ ದಿನಾಚರಣೆ ಶತಮಾನೋತ್ಸವವನ್ನು ಪೂರೈಸಿತು.

ಮಹಿಳಾ ದಿನಾಚರಣೆಯ ಉದ್ದೇಶ

ಮಹಿಳಾ ದಿನವನ್ನು ಆಚರಿಸುವ ಪ್ರಮುಖ ಉದ್ದೇಶಗಳು:
✔ ಮಹಿಳಾ ಸಮಾನತೆ ಮತ್ತು ಹಕ್ಕುಗಳನ್ನು ಬಲಪಡಿಸುವುದು.
✔ ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವ ನೀಡುವುದು.
✔ ಅವರ ಸಮಸ್ಯೆಗಳನ್ನು ಅರಿತು, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು.
✔ ಮಹಿಳಾ ಶಕ್ತಿ ಮತ್ತು ಸ್ವಾವಲಂಬನೆಯ ಕುರಿತು ಜಾಗೃತಿಯನ್ನು ಹರಡುವುದು.

ಮಹಿಳಾ ದಿನಾಚರಣೆ – ಇಂದಿನ ಪ್ರಸ್ತುತತೆ

ಇಂದಿನ ಹೊತ್ತಿನಲ್ಲಿ, ಮಹಿಳೆಯರು ಶಿಕ್ಷಣ, ಉದ್ಯಮ, ರಾಜಕೀಯ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಸೇವಾ ಕ್ಷೇತ್ರ ಮತ್ತು ಉದ್ಯಮಶೀಲತೆ ಎಲ್ಲೆಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಮಹಿಳಾ ದಿನವು “Gender Equality – ಲಿಂಗ ಸಮಾನತೆ”, “Break the Bias – ಲಿಂಗತಾತ್ವಿಕ ಭೇದಭಾವವನ್ನು ಕಳಚುವುದು”, “DigitALL: Innovation and technology for gender equality” ಮುಂತಾದ ವಿಶೇಷ ಥೀಮ್‌ಗಳೊಂದಿಗೆ ಪ್ರತಿವರ್ಷ ಜಾಗೃತಿಯನ್ನು ಮೂಡಿಸುತ್ತದೆ.

ಮಹಿಳೆಯರು ಬದುಕಿನ ಉತ್ಸಾಹ

ಮಹಿಳೆಯರು ತಮ್ಮ ಕುಟುಂಬ, ಸಮಾಜ ಮತ್ತು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರಲ್ಲಿರುವ ಹೃದಯಸ್ಪರ್ಶಿ ಭಾವನೆ, ತ್ಯಾಗ, ಶ್ರಮ ಹಾಗೂ ಪ್ರೀತಿ ಅವರ ಬದುಕಿನ ಹಾದಿಯನ್ನು ಮಾದರಿಯಾಗಿ ಮಾಡುತ್ತದೆ. ಶಿಕ್ಷಣ, ಉದ್ಯೋಗ, ರಾಜಕೀಯ, ಕಲೆ, ಕ್ರೀಡೆ, ವಿಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ.

ಅನೇಕ ಮಹಿಳೆಯರು ಸಂಕಷ್ಟಗಳನ್ನು ಎದುರಿಸುತ್ತಾ, ಸಾಧನೆಗೆ ಹೊಸ ಪರಿಮಾಣ ನೀಡಿದ ಉದಾಹರಣೆಗಳಿವೆ. ಐದು ದಶಕಗಳ ಹಿಂದೆಯೂ ಮಹಿಳೆಯರು ಮನೆಯಲ್ಲಿ ಸೀಮಿತವಾಗಿದ್ದರೆ, ಇಂದು ಅವರು ಅಂತರಿಕ್ಷ ಯಾತ್ರೆ, ವ್ಯವಹಾರ ನಿರ್ವಹಣೆ, ಕಾನೂನು, ತಂತ್ರಜ್ಞಾನ, ಆಡಳಿತ ಮತ್ತು ರಾಜಕೀಯದಲ್ಲಿ ಮುಂಚೂಣಿಯಲ್ಲಿದ್ದಾರೆ.

ಸಾಧನೆಗಳ ಬೆಳಕು

1. ಶಿಕ್ಷಣ ಮತ್ತು ಸಶಕ್ತೀಕರಣ:

ಜಗತ್ತಿನ ಅನೇಕ ದೇಶಗಳಲ್ಲಿ ಈಗ ಮಹಿಳಿಯರಿಗೆ ಶಿಕ್ಷಣ ಹಕ್ಕುಗಳನ್ನು ಒದಗಿಸಲಾಗುತ್ತಿದೆ, ಇದರಿಂದ ಮಹಿಳೆಯರು ಸಮಾಜದ ಮುಖ್ಯಧಾರೆಯಲ್ಲಿರಲು ಸಾಧ್ಯವಾಗಿದೆ. ಭಾರತದಲ್ಲಿ ಸವಿತ್ರಿಬಾಯಿ ಫುಲೆ, ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ, ಮೇರೀ ಕೋಮ್ ಮುಂತಾದವರು ಮಹಿಳಾ ಶಿಕ್ಷಣ ಮತ್ತು ಸಶಕ್ತೀಕರಣದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.

2. ಉದ್ಯೋಗ ಹಾಗೂ ಉದ್ಯಮಶೀಲತೆ:

ಈಗ ಮಹಿಳೆಯರು ಉದ್ಯೋಗ ಮಾತ್ರವಲ್ಲದೆ, ಸ್ವಂತ ಉದ್ಯಮಗಳನ್ನು ನಿರ್ಮಿಸಿ ಉದ್ಯಮಶೀಲತೆ ತೋರಿಸುತ್ತಿದ್ದಾರೆ. ಫಾಲ್ಗುಣಿ ನಾಯರ್ (ನೈಕಾ), ಕಿರಣ್ ಮಜುಂದಾರ್ ಶಾ (ಬಯೋಕಾನ್), ವಂದನಾ ಲೂತರ (ಪೇಪರ್ ಶೈರಿ) ಮುಂತಾದವರು ಉದ್ಯಮ ವಲಯದಲ್ಲಿ ತಮ್ಮ ಅಚ್ಚಳಿಯದ ಗುರುತು ಮೂಡಿಸಿದ್ದಾರೆ.

3. ಕ್ರೀಡೆ ಮತ್ತು ಸಾಹಸ:

ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಸೈನಾ ನೆಹ್ವಾಲ್, ಮೇರೀ ಕೋಮ್, ಪಿ.ವಿ. ಸಿಂಧು, ಮಿಥಾಲಿ ರಾಜ್ ಮುಂತಾದವರು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ್ದಾರೆ.

4. ಸಮಾಜಸೇವೆ ಮತ್ತು ಪ್ರಭಾವ:

ಮಹಿಳೆಯರು ಕೇವಲ ತಮ್ಮ ವ್ಯಕ್ತಿಗತ ಜೀವನದಲ್ಲಷ್ಟೇ ಅಲ್ಲದೆ, ಸಮಾಜಸೇವೆಯಲ್ಲಿ ಕೂಡ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಮದರ್ ತೆರೆಸಾ, ಸುಧಾ ಮುರ್ತಿ ಮುಂತಾದವರು ತಮ್ಮ ಸಮಾಜಮುಖಿ ಕಾರ್ಯಗಳಿಂದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದ್ದಾರೆ.

ಸಮಾಜದ ಹೊಣೆಗಾರಿಕೆ – ಮಹಿಳಾ ಸಮಾನತೆ ಮತ್ತು ಗೌರವ

ಮಹಿಳೆಯರನ್ನು ಗೌರವಿಸುವ, ಅವರ ಆತ್ಮವಿಶ್ವಾಸ ಹೆಚ್ಚಿಸುವ, ಅವರಿಗೆ ಸಮಾನ ಅವಕಾಶ ಒದಗಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಹಿಳಾ ಸುರಕ್ಷತೆ, ಸಂವೇದನಾಶೀಲತೆ ಮತ್ತು ಗೌರವ ಹೊಂದಿದ ಸಮಾಜವನ್ನು ನಿರ್ಮಿಸುವುದು ಅನಿವಾರ್ಯ.

ನಮ್ಮ ಕರ್ತವ್ಯ – ಮಹಿಳಾ ಶಕ್ತಿಗೆ ಸಾಥ್

ಈ ಮಹಿಳಾ ದಿನಾಚರಣೆ ದಿನದಂದು ನಾವು ನಮ್ಮ ಜೀವನದಲ್ಲಿ ಶಕ್ತಿ, ಪ್ರೇರಣೆ, ಪ್ರೀತಿಯ ಬೆಳಕು ತುಂಬುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸೋಣ. ಅವರ ಸಾಧನೆಗಳನ್ನು ಗೌರವಿಸೋಣ ಮತ್ತು ಹೊಸ ತಲೆಮಾರಿನ ಮಹಿಳೆಯರಿಗೆ ಇನ್ನಷ್ಟು ಉತ್ಸಾಹ, ಶಿಕ್ಷಣ ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ಅವರನ್ನು ಸಶಕ್ತಗೊಳಿಸೋಣ.

“ಮಹಿಳೆಯರ ಪ್ರಗತಿ – ರಾಷ್ಟ್ರದ ಪ್ರಗತಿ!”(ಲೇಖನ-ಡಾ. ವೆಂಕಟೇಶ ಬಾಬು ಎಸ್,ಸಹ ಪ್ರಾಧ್ಯಾಪಕರು, ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅತ್ಮಕತೆ | ನೀರು ಸಾಬರೂ – ಎಸಿ ಮದನಗೋಪಾಲರೂ..

Published

on

  • ರುದ್ರಪ್ಪ ಹನಗವಾಡಿ

ಮಧ್ಯೆ ನಂಜನಗೂಡು ಪಕ್ಕದ ತಾಲ್ಲೂಕಾದ ಗುಂಡ್ಲುಪೇಟೆಯಿಂದ ರಾಜಕಾರಣಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರು ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಪ್ರಭಾವಿ ಮಂತ್ರಿಗಳಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಬೋರ್‌ವೆಲ್ ತೆಗೆಸಿ ಗ್ರಾಮೀಣ ಜನರಿಗೆ ಸ್ವಚ್ಛ ಕುಡಿಯುವ ನೀರು ಕೊಡುವಲ್ಲಿ ಯಶಸ್ವಿಯಾಗಿದ್ದರು. ಜನಪರ ಮಂತ್ರಿಗಳೂ ಆಗಿದ್ದರು.

ಗುಂಡ್ಲುಪೇಟೆಯಲ್ಲಿ ಭೂಸ್ವಾಧೀನ ಪ್ರಕರಣದಲ್ಲಿ ತಮ್ಮ ಸಂಬಂಧಿಕರೊಬ್ಬರ ಜಮೀನಿಗೆ ತಿರುಗಾಡಲು ದಾರಿಗಾಗಿ ಭೂಸ್ವಾಧೀನಪಡಿಸಲು ಹಿಂದಿನ ಎಸಿ ಅವರ ಅಳಿಯಂದಿರೇ ಆಗಿದ್ದ ಎಸ್.ಎ. ಸಾದಿಕ್ ಅವರು ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಯನ್ನು ರ‍್ಕಾರಕ್ಕೆ ಸಲ್ಲಿಸಿದ್ದರು. ಆದರೆ ಪುನಃ ಅದು ವಿಚಾರಣೆಗೆ ಬಂದಾಗ ಈ ಭೂಸ್ವಾಧೀನವು ಸಾರ‍್ವಜನಿಕರ ಹಿತ ಕಾಯುತ್ತಿಲ್ಲವೆಂದು ಮದನ್ ಗೋಪಾಲ್ ಅವರು ಆ ಪ್ರಸ್ತಾವನೆಯನ್ನು ರದ್ದುಗೊಳಿಸಲು ಸರ‍್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಭೂಸ್ವಾಧೀನ ಪ್ರಕರಣವನ್ನು ಮಂತ್ರಿಗಳ ಸಲಹೆ ಮೇರೆಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದು, ನಂತರ ಅದನ್ನು ಕೈಬಿಟ್ಟ ಬಗ್ಗೆ ನಜೀರ್ ಸಾಬ್ ಅವರು ಎಸಿ ಮದನ್ ಗೋಪಾಲ್ ಮೇಲೆ ಕೆಂಡಾಮಂಡಲವಾಗಿದ್ದರು. ಎಷ್ಟೇ ಅನುಭವೀ, ನಿಸ್ಪೃಹ ರಾಜಕಾರಣಿಯಾಗಿದ್ದರೂ ನಜೀರ್ ಸಾಬ್ ಅವರು ತಾವು ಹೇಳಿದ ಕೆಲಸ ಮಾಡದ ನೌಕರ ಎಸಿ ಮದನ್ ಗೋಪಾಲ್ ಮೇಲೆ ಕಂದಾಯ ಮಂತ್ರಿ ಮತ್ತು ಜಿಲ್ಲಾಧಿಕಾರಿಗಳ ಎದುರು ತಮ್ಮ ಅಸಮಾಧಾನವನ್ನು ಹೊರಹಾಕಿ ಕೂಗಾಡಿದ್ದರು.

ಇದೇ ಕಾರಣಕ್ಕಾಗಿ ಮದನ್ ಗೋಪಾಲ್ ಅವರನ್ನು ಕೆಲವೇ ದಿನಗಳಲ್ಲಿ ನಂಜನಗೂಡು ಉಪ ವಿಭಾಗದಿಂದ ಬೇರೆಡೆಗೆ ರ‍್ಗಾವಣೆ ಕೂಡ ಮಾಡಲಾಗಿತ್ತು. ಅವರ ವರ್ಗಾವಣೆಯನ್ನು ವಿರೋಧಿಸಿ ಸರ‍್ವಜನಿಕರು, ನಂಜಗೂಡು, ಗುಂಡ್ಲುಪೇಟೆಗಳಲ್ಲಿ ಯಶಸ್ವಿ ಬಂದ್ ಮಾಡಿ ಪ್ರತಿಭಟಿಸಿದ್ದರು. ಅವರ ವರ‍್ಗಾವಣೆ ಆಗಿ ನಂತರ ಮೂರು ತಿಂಗಳಲ್ಲಿ ಯೋಗೇಂದ್ರ ತ್ರಿಪಾಠಿ ಬಂದರು. ಈ ನಡುವೆ ನಾನು, ನಂತರ ಮಂಜುನಾಥ್ ನಾಯಕ್ ಹಾಗೂ ಶಿಕ್ಷಣರ‍್ಥಿ ಎಸಿಯಾಗಿದ್ದ ಕೆ. ಶಿವರಾಂ ಅವರು ಸುಮಾರು ಮೂರು ತಿಂಗಳ ಕಾಲ ಚಾರ್ಜ್ನಲ್ಲಿದ್ದೆವು. ಮದನ್ ಗೋಪಾಲ್ ಅವರು ವೈಯಕ್ತಿಕವಾಗಿ ಕಷ್ಟಪಟ್ಟು ದುಡಿಯುವ ವ್ಯಕ್ತಿಯಾಗಿದ್ದರು. ಆದರೆ ಚುನಾಯಿತ ಪ್ರತಿನಿಧಿಗಳ ಜೊತೆ ಅತಿರೇಕದ ನೇರ ನೇರ ಹಣಾಹಣಿ ಮಾಡಿಕೊಂಡು ಅವರು ಮಾಡುತ್ತಿದ್ದ ಒಳ್ಳೆಯ ಕೆಲಸಗಳು ಹಿನ್ನೆಲೆಗೆ ಸರಿಯುತ್ತಿದ್ದವು.

ಯೋಗೇಂದ್ರ ತ್ರಿಪಾಠಿಯವರು ಬರುವ ವೇಳೆಗಾಗಲೇ ನನ್ನ ನಂಜನಗೂಡು ತಾಲ್ಲೂಕ್ ಆಡಳಿತದಲ್ಲಿ ಒಂದು ವರ‍್ಷಕ್ಕೂ ಹೆಚ್ಚು ಸಮಯ ಕಳೆದಿದ್ದೆ. ಹಾಗಾಗಿ ತ್ರಿಪಾಠಿಯವರ ಜೊತೆ ಕೆಲಸ ಕಾರ‍್ಯಗಳು ಸಲೀಸಾಗಿ ಸಾಗುತ್ತಿದ್ದವು. ಈ ಮೊದಲು ಎಸಿ ಶಿಕ್ಷಣರ‍್ಥಿಯಾಗಿದ್ದ ಕೆ. ಶಿವರಾಂ ಅವರು ಅನೇಕ ಮೌಖಿಕ ಆದೇಶಗಳನ್ನು ಹೇಳಿ ಮಾಡುವಂತೆ ನನಗೆ ನಿರ‍್ದೇಶನ ನೀಡುತ್ತಿದ್ದರು. ನಾನು ಖುದ್ದು ಭೇಟಿ ಮಾಡಿ ಅವರು ಹೇಳಿದ ಕೆಲಸಗಳನ್ನು ಮಾಡಲಿಕ್ಕಾಗದ ಕಾರಣದ ವಿವರ ನೀಡಿದರೂ ಸಮಾಧಾನಗೊಳ್ಳದೆ, ಜನರೆದುರಿಗೆ ಎಸಿ ಮಾಡಲು ಹೇಳಿದರೂ ತಹಸೀಲ್ದಾರ್ ಮಾಡದೆ ತಮ್ಮ ವಿರುದ್ಧವಿದ್ದಾರೆಂಬ ಆಭಾವನೆ ಬರುವಂತೆ ನಡೆದುಕೊಳ್ಳುತಿದ್ದರು. ಅವರಿನ್ನೂ ಶಿಕ್ಷಣರ‍್ಥಿಗಳಾಗಿದ್ದರೂ ಆಗಲೇ ತನಗೆಲ್ಲ ಗೊತ್ತು ಎಂಬ ಅಹಂನಿಂದ ವರ‍್ತಿಸುತ್ತಿದ್ದ ಕಾರಣ ಬಹುಬೇಗ ನನ್ನ ಅವರ ನಡುವೆ ವಿಶ್ವಾಸದ ಕೊರತೆಯಾಗಿ, ಏನಾದರೂ ಮಾಡಬೇಕೆಂದರೆ ಲಿಖಿತ ಆದೇಶ ಕಳಿಸಲು ಅವರ ಮ್ಯಾನೇಜರ್ ಅವರಿಗೆ ನಾನು ದೂರವಾಣಿ ಮುಖಾಂತರ ಹೇಳುತ್ತಿದ್ದೆ. ಆ ನಂತರ ಮತ್ತೆ ಕೆಲವು ದಿನಗಳಲ್ಲಿ ಅವರನ್ನು ಬೇರೆ ತಾಲ್ಲೂಕಿಗೆ ತರಬೇತಿಗಾಗಿ ಕಳಿಸಿದ ಕಾರಣ ನನ್ನ ಮನಸ್ತಾಪ ಅಲ್ಲಿಗೆ ಮುಗಿದಿತ್ತು. ಆದರೆ ಮುಂದೆ ಅನೇಕ ಬಾರಿ ಅವರೊಡನೆ ಒಡನಾಡುವ ಸಂರ‍್ಭದಲ್ಲಿ ಇದ್ಯಾವುದನ್ನೂ ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಸರಳವಾಗಿ ನಡೆಸಿಕೊಂಡ ಕಾರಣದಿಂದಾಗಿ ಅವರ ಬಗ್ಗೆ ನನ್ನಲ್ಲಿದ್ದ ಕಹಿ ಕರಗಿ ಸಹಜತೆ ಮೂಡಿದೆ.

ನನ್ನ ಕಛೇರಿ ಕೆಲಸಗಳ ಜೊತೆ ಆಚರಿಸುತ್ತಿದ್ದ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಮುಖ್ಯ ಅತಿಥಿಗಳಾಗಿ ನಮ್ಮ ಮೈಸೂರಿನ ಸಮಾಜವಾದಿ ಗೆಳೆಯರ ಜೊತೆ ಚರ್ಚಿಸಿ ಡಾ. ಎಲ್. ಬಸವರಾಜ್, ಸುಜನಾ, ಕೆ.ಎಸ್. ಭಗವಾನ್, ಕೆ. ರಾಮದಾಸ್ ಅವರನ್ನು ಕರೆಸಿ ನಮ್ಮ ತಾಲ್ಲೂಕಿನಲ್ಲಿ ಭಾಷಣ ಮಾಡಿಸುತ್ತಿದ್ದೆ. ಡಿಎಸ್‌ಎಸ್, ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಅನೇಕ ಮಿತ್ರರು ನನ್ನ ಒಡನಾಟದಲ್ಲಿದ್ದರು.

ಈಗ ಹೆಸರಾಂತ ಸಾಹಿತಿ ಮತ್ತು ನನ್ನ ಮಿತ್ರನಾಗಿದ್ದ ಮಾದೇವನ ಊರಾದ ದೇವನೂರಿಗೂ ಹೋದಾಗ ಅವರ ಮನೆಗೂ ಹೋಗಿ ಬಂದಿದ್ದೆ. ಕೃಷ್ಣಪ್ಪ – ಇಂದಿರಾ ಅವರು ಮಕ್ಕಳಾದ ಶಾಲಿನಿ, ಸೀಮಾ ಅವರುಗಳ ಜೊತೆ ನಂಜನಗೂಡಿಗೆ ಬಂದು ಉಳಿದು ನಂಜುಂಡೇಶ್ವರ ದೇವಸ್ಥಾನದ ಹಬ್ಬದಲ್ಲಿ ಭಾಗವಹಿಸಿದ ನೆನಪು ಈಗಲೂ ಹಸಿರಾಗಿದೆ.

ಡಿಎಸ್‌ಎಸ್‌ನ ರಾಜ್ಯ ಮಟ್ಟದ ಕಲಿಕಾ ಸಮಾವೇಶವನ್ನು (study camp ) ನಂಜನಗೂಡು ತಾಲ್ಲೂಕಿನಲ್ಲಿನ ವಿದ್ಯಾಪೀಠದಲ್ಲಿ ಕೃಷ್ಣಪ್ಪನವರು ಸುಮಾರು ಒಂದು ವಾರದ ಕಾಲ ನಡೆಸಿದ್ದರು. ಆಗ ರಾಜ್ಯದ ಮೂಲೆಮೂಲೆಗಳಿಂದ ಬಂದು ಡಿಎಸ್‌ಎಸ್‌ನ ಹೋರಾಟದ ರೂಪುರೇಷೆಗಳನ್ನು ಚರ್ಚಿಸುತ್ತಿದ್ದುದನ್ನು ನಾನು ಭಾಗವಹಿಸದಿದ್ದರೂ ತಿಳಿದುಕೊಳ್ಳುತ್ತಿದ್ದೆ.

ಡಿಎಸ್‌ಎಸ್‌ನ ಅಂದಿನ ಬಹುತೇಕ ರ‍್ಚೆಗಳು ರ‍್ಕಾರದ ನಿಷ್ಕಿçಯತೆ, ದಲಿತ ಶಾಸಕರುಗಳ ಗುಲಾಮಿತನ, ದಲಿತರ ಮೇಲಿನ ದರ‍್ಜನ್ಯ, ದಲಿತರ ಕರ‍್ಯಕ್ರಮಗಳಲ್ಲಿನ ನಿಧಾನಗತಿ ಅನುಷ್ಠಾನ, ಇಂತಹವೇ ರ‍್ಚೆಯಾಗುತ್ತಿದ್ದವು. ಅಂತಹ ಸಂಘಟನೆಗೆ ತಹಸೀಲ್ದಾರನಾಗಿ ಭಾಗಿಯಾಗುವುದು, ಸಹಕಾರ ನೀಡುವುದು ಸರಿಯಲ್ಲವೆಂದು ನನಗೆ ನಮ್ಮ ಹಿರಿಯ ಸಿಬ್ಬಂದಿ ಹೇಳುತ್ತಿದ್ದರೂ ನಾನು ನನ್ನ ಇತರೆ ಸಾಮಾನ್ಯ ಕೆಲಸಗಳಲ್ಲಿ ಹಿಂದೆ ಬೀಳದೆ ಮತ್ತು ಇತರೆ ಸಾರ‍್ವಜನಿಕರಲ್ಲೂ ಯಾವುದೇ ತಗಾದೆ ಬಾರದಂತೆ ಕೆಲಸ ನಿರ‍್ವಹಿಸಿದ್ದರಿಂದ ಬೇರಾರೂ ಆಕ್ಷೇಪಿಸುತ್ತಿರಲಿಲ್ಲ. ಆದರೆ ಆಗ ನಂಜನಗೂಡಿನವರೇ ಆಗಿದ್ದ ಡಿಎಸ್‌ಎಸ್‌ನಲ್ಲಿ ಇದ್ದವನೊಬ್ಬ ಮಾದೇವ, ಕೃಷ್ಣಪ್ಪನವರನ್ನು ವೈಯಕ್ತಿಕವಾಗಿ ದ್ವೇಷಿಸುವ ಮನಸ್ಸಿನ ವ್ಯಕ್ತಿ. ನಮ್ಮ ಕಛೇರಿಯ ಸರ‍್ವೆಯರ್ ನೌಕರನನ್ನು ಸಹಾಯ ಪಡೆದು, ನಮ್ಮ ಕಛೇರಿಯ ಬಗ್ಗೆ ಕರಪತ್ರ ಹಾಕಿ `ಭ್ರಷ್ಟಾಚಾರದ ಕೂಪ ತಾಲ್ಲೂಕು ಕಛೇರಿ’ ಎಂದೆಲ್ಲ ದೂರಿದ್ದರು. ಆದರೆ ಅದಕ್ಕೆಲ್ಲ ಕುಮ್ಮಕ್ಕು ಕೊಟ್ಟವನು ನನ್ನ ಕಛೇರಿಯ ಸರ‍್ವೆಯರ್ ಸಂಬಂಧಿ ಡಿ.ಎಸ್.ಎಸ್.ನಲ್ಲಿಯೇ ಇದ್ದವನೊಬ್ಬ ಎಂದು ನನಗೆ ತಿಳಿದು ಬಂತು.

ಜೊತೆಗೆ ನಮ್ಮ ಕಚೇರಿಯ ರ‍್ವೇಯರ್ ದೈನಂದಿನ ಕೆಲಸದಲ್ಲಿ ನಿರ‍್ಲಕ್ಷ್ಯ ತೋರುತ್ತಿದ್ದ ಕಾರಣದಿಂದ ನಾನು ಮೊದಲೇ ಅವನನ್ನು ಅಮಾನತ್ತುಗೊಳಿಸಿದ್ದೆ. ಆ ಕಾರಣ ಅವನು ನನ್ನ ಬಗ್ಗೆ ಮೊದಲೇ ಅಸಮಾಧಾನಗೊಂಡಿದ್ದ. ನಂತರದ ದಿನಗಳಲ್ಲಿ ನಾನೇನೂ ಹೇಳದಿದ್ದರೂ ಕರಪತ್ರ ಹಾಕಿದ ಬಗ್ಗೆ ಬಂದು ತನ್ನ ನಡವಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ. ಇದಕ್ಕೆಲ್ಲ ತನ್ನ ಭಾವ ಡಿಎಸ್‌ಎಸ್‌ನಲ್ಲಿರುವವನು ಕಾರಣ ಎಂದು ಹೇಳಿ ನನಗೆ ದಂಗುಬಡಿಸಿದ್ದ. ಇಂತಹ ವಿಷಯಗಳನ್ನೆಲ್ಲ ನಿಭಾಯಿಸುವ ಅನುಭವ ನನಗೆ ಇದ್ದುದರಿಂದ ಮತ್ತೇನು ಅದು ಬೆಳೆಯಲಿಲ್ಲ.

ನಂಜನಗೂಡಿನಲ್ಲಿ ನಾನಿರುವಾಗ ಪೋಲೀಸ್ ಇಲಾಖೆಯಲ್ಲಿ ಡಿ.ವೈ.ಎಸ್.ಪಿಯಾಗಿ ಪಿ.ಹೆಚ್. ರಾಣೆ, ಇಬ್ಬರು ಇನ್ಸ್ಪೆಕ್ಟರ್ ಮತ್ತು ನಾಲ್ಕು-ಐದು ಜನ ಸಬ್ ಇನ್ಸ್ಪೆಕ್ಟರ್‌ಗಳು ಇದ್ದರು. ನಾವೆಲ್ಲ ಊರಿನಲ್ಲಿರುವ ಯಾವುದೇ ಪ್ರತಿಷ್ಠಿತ ಮನರಂಜನೆಯ ಕ್ಲಬ್‌ಗಳಿಗೆ ಹೋಗುತ್ತಿರಲಿಲ್ಲ. ಅದರ ಬದಲು, ಪೋಲೀಸ್ ಸ್ಟೇಷನ್ ಬಳಿ ಇದ್ದ ವಿಶಾಲವಾದ ಮೈದಾನದಲ್ಲಿ ಬೆಳಗಿನ ಜಾವದಲ್ಲಿ ಬ್ಯಾಟ್‌ಮಿಂಟನ್, ಷಟಲ್ ಕಾಕ್ ಆಟ ಪ್ರಾರಂಭಿಸಿದ್ದೆವು. ಅಲ್ಲಿಗೆ ಕಂದಾಯ ಇಲಾಖೆಯಲ್ಲಿನ ವಿಎ, RI & ಸಬ್ ಇನ್ಸ್ಸ್ಪೆಕ್ರ‍್ಸ್ ಮತ್ತು ನನ್ನ ಬಿ.ಎ. ತರಗತಿಯ ಕ್ಲಾಸ್ ಮೇಟ್ ಆಗಿದ್ದ ನರಸಿಂಹಸ್ವಾಮಿ ಸೇರಿ ಒಂದೆರಡು ಘಂಟೆಗಳ ಕಾಲ ಆಟದಲ್ಲಿ ಕಳೆಯುತ್ತಿದ್ದೆವು. ಆಗಲೇ ತಾಲ್ಲೂಕಿನಲ್ಲಿನ ಸಮಸ್ಯೆಗಳನ್ನು ಸಾಂಧರ‍್ಭಿಕವಾಗಿ ಚರ‍್ಚಿಸಿ, ಶಾಂತಿ ಕಾಪಾಡಲು ಬೇಕಾದ ಕ್ರಮವಾಗಿ ಕೆಲವರನ್ನು ಒಂದೆರಡು ವಾರಗಳ ಕಾಲ ಸಬ್ ಜೈಲಿಗೆ ಕಳಿಸಲು ಕೋರುತ್ತಿದ್ದರು. ಇಲ್ಲವೇ ಪ್ರತಿ ವಾರವೂ ಹಾಜರಿರಲು ನೋಟಿಸ್ ನೀಡಿ ಬಾರದಿದ್ದಾಗ ದಸ್ತಗಿರಿ ಮಾಡಿ ತರಲು ನನ್ನಿಂದ ಅದೇಶ ಪಡೆದು ಕರೆತರುತ್ತಿದ್ದರು. ನಂತರ ವಿಚಾರಣೆ ಮಾಡಿ, ಒಳ್ಳೆಯ ನಡೆವಳಿಕೆಯ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡುತ್ತಿದ್ದೆವು. ಇನ್ನು ಕೆಲವು ಭಾರಿ ಈ ಎಲ್ಲ ಅಖPಅ 107 ಪ್ರಕರಣದಲ್ಲಿದ್ದ ಆಪಾದಿತರನ್ನು, ಗ್ರಾಮ ಸಹಾಯಕರನ್ನು ಒಟ್ಟುಗೂಡಿಸಿ ನಮ್ಮ ಕಛೇರಿಯ ಆವರಣದಲ್ಲಿದ್ದ ಜಾಗದಲ್ಲಿ ಗಿಡ ನೆಡಲು ಬೇಕಾದ ಗುಂಡಿ ತೆಗೆಯಲು ತೊಡಗಿಸಿ ದಿನದ ಕೊನೆಯಲ್ಲಿ ಕೇಸು ಕರೆದು ಕೇಸನ್ನು ಮುಂದೂಡುತ್ತಿದ್ದೆನು. ಹೀಗಾಗಿ ತಾಲ್ಲೂಕಿನಲ್ಲಿ, ಜಾತಿ ಜಗಳಗಳಾಗಲೀ, ದೊಂಬಿಗಳಾಗಲೀ ಮಾಡಲು ಪುಂಡ ಪೋಕರಿಗಳಿಗೆ ಅವಕಾಶವಿರುತ್ತಿರಲಿಲ್ಲ.

ತಾಲ್ಲೂಕು ಮಟ್ಟದ ನಾಯಕರು

1986ರ ನಂತರ ಶಾಸಕರುಗಳ ಜೊತೆ ಜಿಲ್ಲಾ ಪರಿಷತ್ ಚುನಾವಣೆಗಳು ಮುಕ್ತಾಯಗೊಂಡು ತಾಲ್ಲೂಕುಮಟ್ಟದಲ್ಲಿ ಹೆಜ್ಜಿಗೆ ರಾಮಯ್ಯ, ದೇವನೂರ ಸಿದ್ದಪ್ಪ, ಬಸವರಾಜ್, ಕಳಲೆ ಸಿದ್ದ ನಾಯಕ್, ಶಶಿಕಲಾ ನಾಗರಾಜ್ ಮತ್ತು ಶಶಿಕಲಾ ಬಾಲರಾಜ್ ಜೊತೆಗೆ ನಂಜನಗೂಡು ಟೌನ್‌ನಲ್ಲಿ ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷರೂ ಇರುತ್ತಿದ್ದರು. ಇವರೆಲ್ಲ ಸಣ್ಣಪುಟ್ಟ ಕೆಲಸಗಳಿಗೆ ಶಿಫಾರಸ್ಸು ಮಾಡಲು ತಾಲ್ಲೂಕು ಕಛೇರಿಗೆ ಬರುತ್ತಿದ್ದರು. ಆಗುವ ಕೆಲಸ ಮಾಡುವುದರಲ್ಲಿ ವಿಳಂಬವಾಗದಂತೆ, ಆಗದಿರುವ ಕೆಲಸಗಳಿಗೂ ನನ್ನ ಮಟ್ಟದಲ್ಲೇ ಅವರಿಗೆ ವಿವರಿಸಿ ಹೇಳುತ್ತಿದ್ದೆ. ಅವರುಗಳು ಒಮ್ಮೊಮ್ಮೆ ಅದೇ ವಿಷಯಗಳನ್ನು ಶಾಸಕರುಗಳ ಹತ್ತಿರವೂ ಪ್ರಸ್ತಾಪಿಸಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು. ನನ್ನ ವಿವರಣೆ ಶಾಸಕರುಗಳಿಗೂ ಅದೇ ಆಗಿರುತ್ತಿತ್ತು. ಹಾಗಾಗಿ ಆಗುವ ಕೆಲಸಗಳಿಗೆ ಯಾವ ಶಿಫಾರಸ್ಸು ತಂದರೂ ಆಗುವುದಿಲ್ಲ ಎಂಬ ನಂಬಿಕೆ ಅವರಿಗೆಲ್ಲ ತಿಳಿದು ಬಂದಿತ್ತು.

ಗೃಹಮಂತ್ರಿಯಾಗಿದ್ದ ರಾಚಯ್ಯನವರು ಕರ‍್ನಾಟಕ ಕಂಡ ಹಿರಿಯ ಸಜ್ಜನ ರಾಜಕಾರಣಿ. ಅವರು ತಾಲ್ಲೂಕಿನಲ್ಲಿ ಪ್ರವಾಸ ಇರುವಾಗ, `ಇತರೆ ಇಬ್ಬರು ಶಾಸಕರುಗಳು ಯುವಕರಾಗಿದ್ದ ಕಾರಣ ಏನಾದರೂ ನಿನ್ನಿಂದ ತಪ್ಪು ಮಾಡಿಸಿ, ಮುಂದೆ ನೀನಿನ್ನು ಎಸಿ, ಡಿಸಿ ಆಗಬೇಕಾದವನು, ಎಚ್ಚರದಿಂದ ಕೆಲಸ ನರ‍್ವಹಿಸಬೇಕೆಂದು’ ಸಲಹೆ ನೀಡುತ್ತಿದ್ದರು. ನನಗಿಂತ ವಯಸ್ಸಿನಲ್ಲಿ, ಅನುಭವದಲ್ಲಿ ಸುಮಾರು 20 ವರ‍್ಷಗಳ ಅಂತರವಿದ್ದ ಅವರ ಮಾತು ನನಗೆ ನಿಜವಾದ ಕಳಕಳಿಯಿಂದ ಕೂಡಿದ ಮಾತಾಗಿತ್ತು. ಅವರಿಗೆ ಜನರಿಗೆ ಒಳ್ಳೆಯ ಆಡಳಿತ ನೀಡಿದರೆ ಸಾಕಾಗಿತ್ತು. ಮತ್ತಾವ ಒಳ ಒಪ್ಪಂದಗಳ ಮಾತು ಅವರ ಆಡಳಿತದಲ್ಲಿ ಸುಳಿಯುತ್ತಿರಲಿಲ್ಲ.

ಕಂದಾಯ ನೌಕರರ ದಿನಾಚರಣೆ

ವಿಧಾನಸಭೆ ಚುನಾವಣೆ ಆಗಿ ಮೂರು ರ‍್ಷವಾಗಿತ್ತು. ಜಿಲ್ಲಾ ಪರಿಷತ್ ಆಗತಾನೆ ಚುನಾವಣೆಗಳಾಗಿ ಹೊಸ ಸದಸ್ಯರುಗಳು ಆಯ್ಕೆಯಾಗಿದ್ದರು. ಮಾಮೂಲಿ ಕಂದಾಯ ಮತ್ತು ತಾಲ್ಲೂಕು ದಂಡಾಧಿಕಾರಿಯ ಕೆಲಸಗಳನ್ನು ಬಿಟ್ಟರೆ ಮತ್ತಾವ ಒತ್ತಡದ ಕೆಲಸಗಳು ಇರಲಿಲ್ಲ. ಹೀಗಿರುವಾಗ ಕಂದಾಯ ಅಧಿಕಾರಿಗಳು ರ‍್ಷಪರ‍್ತಿ ದುಡಿತದಲ್ಲೇ ಇದ್ದು, ಕಲೆ ಸಂಸ್ಕೃತಿ, ಸಂಗೀತದ ಬಗ್ಗೆ ಮುಖ ಮಾಡುವುದೇ ಇಲ್ಲ. ಈ ಬಗ್ಗೆ ನಾವ್ಯಾಕೆ ಇಡೀ ಜಿಲ್ಲೆಯ ನೌಕರರನ್ನು ಒಳಗೊಂಡಂತೆ 1-2ದಿನ ನಮ್ಮ ಕಂದಾಯ ನೌಕರರ ದಿನಾಚರಣೆ ಆಚರಿಸಬಾರದು ಎಂದು ನಮ್ಮ ಎಸಿ ತ್ರಿಪಾಠಿಯವರ ಜೊತೆ ಚರ‍್ಚಿಸಿ, ನಂತರ ಡಿಸಿಗೂ ಹೇಳಿದೆ.

ಎಲ್ಲ ತಹಸೀಲ್ದಾರ್ ಮಿತ್ರರೊಡನೆ ಕೂಡ ಮೌಖಿಕವಾಗಿ ಚರ‍್ಚಿಸಿ ಅವರ ಸಹಕಾರವನ್ನು ಕೋರಿದೆ. ಅದರಂತೆ, ವಿವಿಧ ಆಟಗಳ ಸ್ಪರ್ಧೆ, ಹಾಡುಗಾರಿಕೆ, ಕೊನೆಯ ದಿನದಲ್ಲಿ ಮಹಾಭಾರತದ ಕುರುಕ್ಷೇತ್ರದ ನಾಟಕ ಎಂದೆಲ್ಲ ತಯಾರಿಗಳು ನಡೆದವು. ಹುಣಸೂರು, ಮೈಸೂರು ಮತ್ತು ನಂಜನಗೂಡು ಉಪ ವಿಭಾಗಗಳ ಉಪ ವಿಭಾಗಾಧಿಕಾರಿಗಳು, ಎಲ್ಲಾ ತಾಲ್ಲೂಕು ತಹಸೀಲ್ದಾರರು, ವಿಎ, ಆರ್‌ಐ ಹಾಗೂ ಕಛೇರಿ ಸಿಬ್ಬಂದಿ ಎಲ್ಲರೂ ಎಲ್ಲ ಆಟ ಪಾಠಗಳಲ್ಲಿ ಭಾಗವಹಿಸಿದ್ದರು. ಆಟಗಳಲ್ಲಿ ಕಬಡ್ಡಿ, ಬ್ಯಾಟ್ ಮಿಂಟನ್, ಷಟಲ್ ಕಾಕ್, ವಾಲಿಬಾಲ್, ಚೆಸ್ ಹೀಗೆಲ್ಲ ಸ್ರ‍್ಧೆಗಳನ್ನು ನರ‍್ವಹಿಸಲು ಎಇಓ ಅವರನ್ನು ಸಂರ‍್ಕಿಸಿ ಒಬ್ಬ ಕ್ರೀಡಾ ಅಧಿಕಾರಿಯನ್ನು ಕೋರಿದ್ದೆ. ಅವರು ಎಲ್ಲಾ ಕ್ರೀಡೆಗಳನ್ನು ವ್ಯವಸ್ಥೆಗೊಳಿಸಿ, ಆಡಿಸಿ ಬಹುಮಾನಿತರ ಪಟ್ಟಿ ನೀಡಿದ್ದರು. ನಿಯಮಿತ ಅಭ್ಯಾಸಗಳು ಇಲ್ಲದ ಆಟಗಾರರೊಬ್ಬರು ಕಬ್ಬಡಿ ಆಟದಲ್ಲಿ ಬಿದ್ದು ಅವರ ಕೈ ಮುರಿದಿತ್ತು. ಸದ್ಯ ಅವರನ್ನು ನಂಜನಗೂಡಿನಲ್ಲಿಯೇ ಉಪಚರಿಸಿ ಸುಧಾರಿಸುವಂತಾಯಿತು.

ಈ ಸಮಾರಂಭಕ್ಕೆ ಮೊದಲ ದಿನ ಎಲ್ಲಾ ಸ್ಪರ್ಧೆಗಳನ್ನು ನಡೆಸಿ ಎರಡನೇ ದಿನ ಸಮಾರೋಪ ಸಮಾರಂಭ ಮತ್ತು ನಾಟಕವಿತ್ತು. ಆಗ ಮೈಸೂರು ವಿಭಾಗಕ್ಕೆ ವಿಭಾಗಾಧಿಕಾರಿಗಳಾಗಿದ್ದ ನೀಲಕಂಠರಾಜು, ಡಿಸಿ ವಿ.ಪಿ. ಬಳಿಗಾರ್, ಹುಣಸೂರು ಎಸಿಯಾಗಿದ್ದ ಶಿವಲಿಂಗಮರ‍್ತಿ, ಮೈಸೂರು ಎಸಿ ಈಶ್ವರ್ ನಮ್ಮ ಎಸಿ ಯೋಗೇಂದ್ರ ತ್ರಿಪಾಠಿ ಎಲ್ಲ ಸಂತೋಷದಿಂದ ಭಾಗವಹಿಸಿದ್ದರು. ನಮ್ಮಲ್ಲಿದ್ದ 80 ಜನ ಗ್ರಾಮ ಸಹಾಯಕರಿಗೆ ವಿಶೇಷವಾದ ಸಮವಸ್ತ್ರ ಹೊಲಿಸಿ ಹೊಸ ಬೂಟುಗಳನ್ನು ಕೊಡಿಸಿ, ಅವರಿಗೆ ಪೋಲೀಸ್ ಪೇದೆಗಳಂತೆ ತರಬೇತಿಯನ್ನು ನೀಡಲು ನಮಲ್ಲಿಯೇ ಇದ್ದ ಕಸಬಾ ವಿಎ – ರಾಧಾಕೃಷ್ಣನಿಗೆ ಜವಾಬ್ದಾರಿ ನೀಡಿದ್ದೆ. ರಾಧಾಕೃಷ್ಣ VA ಆಗಿದ್ದರೂ ಒಬ್ಬ DSPಯಂತೆ ಪೊಲೀಸ್ ನಡವಳಿಕೆಗಳನ್ನು ರೂಢಿಸಿಕೊಂಡಿದ್ದ. ಅವನ ಕೆಳಗೆ ತರಬೇತಿಗೊಂಡ ನಮ್ಮ ಗ್ರಾಮ ಸಹಾಯಕರು ಶಿಸ್ತಿನ ಪೊಲೀಸ್ ಪೇದೆಗಳಂತೆ ನಡೆದುಕೊಳ್ಳುತ್ತಿದ್ದರು.

ಸಮಾರಂಭ ಪ್ರಾರಂಭವಾಗುವ ಮುನ್ನ ನಮ್ಮ ಗ್ರಾಮ ಸಹಾಯಕರೆಲ್ಲ ಒಟ್ಟಿಗೆ ಸಮವಸ್ತ್ರದಲ್ಲಿದ್ದು, ಪೋಲೀಸ್ ಇಲಾಖೆ ನೀಡುವ ‘ಗಾರ್ಡ್ ಆಫ್ ಆನರ್’ನಂತೆ ಎಲ್ಲ ಅತಿಥಿಗಳಿಗೂ ಗೌರವ ವಂದನೆ ನೀಡಿದಾಗ ‘you have summoned police personnel also here’ ಎಂದು ಡಿವಿಸಿ ಉದ್ಘಾರ ತೆಗೆದರು. ‘ನೋ ಸರ್, ಇವರೆಲ್ಲ ನಮ್ಮ ತಾಲ್ಲೂಕಿನ ಗ್ರಾಮ ಸಹಾಯಕರು’ ಎಂದಾಗ ಅವರು ಅಚ್ಚರಿ ವ್ಯಕ್ತಪಡಿಸಿ, ಪ್ರಶಂಸೆ ಕೂಡ ಮಾಡಿದ್ದರು. ಇಂತಹ ಕಂದಾಯ ದಿನಾಚರಣೆಯನ್ನು ನಾನು ಆಯೋಜಿಸಲು ಮುಂದಾಗಿದ್ದಕ್ಕೆ, ನರ‍್ವಹಿಸಿದ್ದಕ್ಕೆ ಡಿವಿಸಿ ಮೊದಲ್ಗೊಂಡು ಎಲ್ಲರೂ ಆಗ ನನ್ನನ್ನು ಪ್ರಶಂಸಿದರು.

ಎಲ್ಲರಿಗಿಂತಲೂ ಹೆಚ್ಚಾಗಿ ನಮ್ಮ ಎಸಿ ಯಾಗಿದ್ದ ತ್ರಿಪಾಠಿ ಅವರು ತುಂಬಾ ಖುಷಿಯಲ್ಲಿದ್ದರು. ಜೊತೆಗೆ ನಮ್ಮ ತಾಲ್ಲೂಕಿನ ಎಲ್ಲಾ ಸಿಬ್ಬಂದಿ ನಾವೆಲ್ಲ ಒಂದು ಕುಟುಂಬ ಎಂಬ ಭಾವನೆ ಮತ್ತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಏನು ಬೇಕಾದರೂ ಸಾಧಿಸಬಹುದೆಂಬ ಸದ್ಭಾವನೆ ಮೂಡುವಂತಾಗಿತ್ತು. ಕೊನೆಯಲ್ಲಿ ಕಲಿತು ಪ್ರರ‍್ಶಿಸಿದ ನಾಟಕದ ಪ್ರಥಮ ದೃಶ್ಯದಲ್ಲಿ ನಾನು ಕೃಷ್ಣನ ಪಾತ್ರಧಾರಿಯಾಗಿ ಹಾಡೊಂದನ್ನು ಹಾಡಿ ಪ್ರಾರಂಭವಾಗುವಂತೆ ನಾಟಕದ ನರ‍್ದೇಶನ ಮಾಡಿದ್ದ ಮೇಷ್ಟರು ವ್ಯವಸ್ಥೆ ಮಾಡಿದ್ದರು. ನಾನು ಕೃಷ್ಣನ ಪಾತ್ರದ ಪೋಷಾಕಿನಲ್ಲಿ ಹಾಡಿ ಸಂತೋಷಪಟ್ಟಿದ್ದು ಈಗ 35 ವರ‍್ಷಗಳ ನಂತರವೂ ಹಸಿರಾಗಿದೆ.(ಬರಹ:ರುದ್ರಪ್ಪ ಹನಗವಾಡಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ2 days ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ3 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

ದಿನದ ಸುದ್ದಿ3 days ago

ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ...

ದಿನದ ಸುದ್ದಿ3 days ago

ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ಸುದ್ದಿದಿನ,ದಾವಣಗೆರೆ: ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ...

ದಿನದ ಸುದ್ದಿ4 days ago

ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ :‌ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ...

ದಿನದ ಸುದ್ದಿ4 days ago

ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ...

ದಿನದ ಸುದ್ದಿ4 days ago

ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ

ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನೀಡಲು ಹರಾಜು ಕರೆಯಲಾಗಿದ್ದು, ಕಾರಣಾಂತರಗಳಿಂದ ಹರಾಜು ದಿನಾಂಕವನ್ನು ಮಾ.20 ರ ಬೆಳಿಗ್ಗೆ 11.00 ಗಂಟೆಗೆ...

ದಿನದ ಸುದ್ದಿ4 days ago

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಚನ್ನಗಿರಿ ನ್ಯಾಯಾಯದಲ್ಲಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರಾಗಿರುವ ಕು.ಶಮಾ...

ದಿನದ ಸುದ್ದಿ4 days ago

ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ

ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ ನಮಗೆಲ್ಲರಿಗೂ ಒಂದು ಉತ್ತಮ ಜೀವನವನ್ನ ನಿರ್ಮಿಸಲು ಉದ್ಯೋಗ ಅತ್ಯಗತ್ಯ. ಆದರೆ, ಇತ್ತೀಚಿನ...

Trending