ದಿನದ ಸುದ್ದಿ

‘ರೈತರು ಭಯೋತ್ಪಾದಕ’ರೆಂದು ಟ್ವೀಟ್ ಮಾಡಿದ ನಟಿ ಕಂಗನಾ ವಿರುದ್ಧ ನೆಟ್ಟಿಗರ ಆಕ್ರೋಶ

Published

on

ಸುದ್ದಿದಿನ,ಪಂಜಾಬ್: ಸೆಪ್ಟೆಂಬರ್ 20 ನೇ ತಾರೀಖು ಭಾನುವಾರದಂದು ರಾಜ್ಯಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕೃಷಿ -ಮಾರುಕಟ್ಟೆ ಮಸೂದೆಗಳ ವಿರುದ್ಧ ಪಂಜಾಬಿನಾದ್ಯಂತ ಪ್ರತಿಭಟನೆ ಶುರುವಾಗಿದೆ. ಈ ಪ್ರತಿಭಟನಾ ನಿರತರನ್ನು ಬಾಲಿವುಡ್ ನಟಿ ಕಂಗನಾ ರಾನಾವತ್ ಸಿಎಎ ವಿರುದ್ಧ ಪ್ರತಿಭಟನೆಯನ್ನು ನಡೆಸಿದ್ದ, ಆಗ ಗಲಭೆಗೆ ಕಾರಣರಾದ ಇವರು ಭಯೋತ್ಪಾದಕರು ಎಂದು ಟ್ವೀಟ್‌ ಮಾಡುವುದರ ಮೂಲಕ ದೇಶದ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ರಾಜ್ಯಸಭೆಯಲ್ಲಿ ಮಸೂದೆಗಳು ಅಂಗೀಕರಿಸಲ್ಪಟ್ಟ ನಂತರ, ರೈತರನ್ನುದ್ದೇಶಿಸಿ ಪ್ರಧಾನಿ ಮೋದಿ ಇಂಗ್ಲಿಷ್, ಹಿಂದಿ ಮತ್ತು ಪಂಜಾಬಿ ಭಾಷೆಗಳಲ್ಲಿ ನಾಲ್ಕು ಟ್ವೀಟ್‌ಗಳನ್ನು ಪೋಸ್ಟ್ ಮಾಡಿದ್ದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಟ್ವೀಟ್ ರೀಟ್ವೀಟ್ ಮಾಡುತ್ತಾ ಕಂಗಾನಾ‌ ರಾನಾವತ್, ಈ ಹಿಂದಡ ಸಿಎಎಯ ಬಗ್ಗೆ ತಪ್ಪುತಪ್ಪಾಗಿ ಮಾಹಿತಿ ಹರಡಿ ವದಂತಿಗಳನ್ನು ಹಬ್ಬಿಸಿದ್ದ ಜನರು ಈಗ ರೈತರ ಮಸೂದೆಯ ಬಗ್ಗೆ ತಪ್ಪು ಮಾಹಿತಿಯನ್ನು ಪ್ರತಿಭಟನೆಯ ಮೂಲಕ ಹರಡುತ್ತಿದ್ದು, ದೇಶದಲ್ಲಿ ಭಯೋತ್ಪಾದನೆಗೆ ಕಾರಣರಾಗುತ್ತಿದ್ದಾರೆ. ಇವರು ಭಯೋತ್ಪಾದಕರು ಎಂದು ಕಂಗನಾ ಟ್ವೀಟ್‌ ಮಾಡಿದ್ದರು.

ರಾಜ್ಯಸಭೆಯ ಭಾನುವಾರದ ಅಧಿವೇಶನದಲ್ಲಿ ಕೃಷಿ ಮಸೂದೆಯ ವಿರುದ್ಧ ವಿಪಕ್ಷಗಳು ಭಾರಿ ಪತ್ರಿಭಟನೆ ನಡೆಸಿದವು, ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿಪಕ್ಷಗಳ ಎಂಟು ರಾಜ್ಯಸಭಾ ಸದಸ್ಯರನ್ನು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯನಾಯ್ಡು ಅಮಾನತುಗೊಳಿಸಿದ್ದಾರೆ.

ಪಂಜಾಬ್‌ ಒಳಗೊಂಡಂತೆ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆಗಳು ಜೋರಾಗಿ ನಡೆಯುತ್ತಿವೆ. ಪಂಜಾಬ್‌ನಲ್ಲಿ ಕೃಷಿ ಮಸೂದೆಯನ್ನು ವಿರೋಧಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರತಿಭಟನೆಯ ಕಾವು ಹೆಚ್ಚಿಸಿದೆ.

ಟ್ವೀಟ್ ವಿರೋಧಿಸಿ ನೆಟ್ಟಿಗರ ಆಕ್ರೋಶ

ನಟಿ ಕಂಗನಾರ ರೈತ ವಿರೋಧಿ ಟ್ವೀಟ್ ವಿರೋಧಿಸಿ ಸಾಮಾಜಿಕ‌ ಜಾಲತಾಣದಲ್ಲಿ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಗನಾರ ಟ್ವೀಟ್ ಅನ್ನು ಬೆಂಬಲಿಸಿ ರೀ ಟ್ವೀಟ್ ಮಾಡಿರುವವರಿಗೂ ನೆಟ್ಟಿಗರು ಕೃಷಿ ಮಸೂದೆ ಕೆಡಕುಗಳ ಬಗ್ಗೆ ತಿಳಿ ಹೇಳಿದ್ದಾರೆ.

ಲಿಂಕ್ ಗಳು

https://m.facebook.com/story.php?story_fbid=3179835338793062&id=100002998803316

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version